Updated News From Kaup

ಬೈಂದೂರು: ಗುಜ್ಜಾಡಿ ಗ್ರಾಮ ಪಂಚಾಯಿತಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಿಡೀರ್ ಭೇಟಿ

Posted On: 30-09-2022 10:37PM

ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮ ಪಂಚಾಯಿತಿಗೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಗ್ರಾಮಸ್ಥರ ಕುಂದುಕೊರತೆಗಳ ಅಹವಾ ಲುಗಳನ್ನು ಸ್ವೀಕರಿಸಲು ಬಂದಿರುವುದಾಗಿ ಹೇಳಿದರು.

ಮುನಿಯಾಲ್ ಆಯುರ್ವೇದ ಮೆಡಿಕಲ್ ಸೈನ್ಸ್ ಮಣಿಪಾಲ : ಪ್ಲಾನೆಟ್ ಮಾರ್ಸ್ ಫೌಂಡೇಶನ್ ಸಂತೆಕಟ್ಟೆ ಸಂಸ್ಥೆಗೆ ಅಗತ್ಯ ವಸ್ತುಗಳ ಹಸ್ತಾಂತರ

Posted On: 30-09-2022 08:57PM

ಉಡುಪಿ : ಮುನಿಯಾಲ್ ಆಯುರ್ವೇದ ಮೆಡಿಕಲ್ ಸೈನ್ಸ್ ಮಣಿಪಾಲ ಇದರ ವತಿಯಿಂದ ನವರಾತ್ರಿ ಹಬ್ಬದ ಅಂಗವಾಗಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವೃಂದದಿಂದ ಆಹಾರ ಸಾಮಗ್ರಿ, ದೈನಂದಿನ ಅಗತ್ಯವಿರುವ ವಸ್ತುಗಳು, ಬಿಸ್ಕೆಟ್ ಹಾಗೂ ತಿಂಡಿ ತಿನಿಸುಗಳನ್ನು ಪ್ಲಾನೆಟ್ ಮಾರ್ಸ್ ಫೌಂಡೇಶನ್ (ರಿ.) ಸಂತೆಕಟ್ಟೆ ಈ ಸಂಸ್ಥೆಗೆ ನೀಡಲಾಯಿತು.

ಕಾಪು : ಬೃಹತ್ ಖಾದಿ ಮೇಳ ಉದ್ಘಾಟಿಸಿದ ಸಂಸದೆ ಶೋಭಾ ಕರಂದ್ಲಾಜೆ

Posted On: 30-09-2022 08:51PM

ಕಾಪು : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ‌ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ, ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ಆಯೋಜಿಸಿದ 'ಬೃಹತ್ ಖಾದಿ ಮೇಳ' ವನ್ನು ಕಾಪು ನಗರದಲ್ಲಿ ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ‌ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ, ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ಆಯೋಜಿಸಿದ 'ಬೃಹತ್ ಖಾದಿ ಮೇಳ' ವನ್ನು ಕಾಪು ನಗರದಲ್ಲಿ ಇಂದು ಉದ್ಘಾಟಿಸಿದರು.

ಕಾಪು : ಕಾಂಗ್ರೆಸ್ ಹೇಳಿಕೆಗೆ ಸೆಡ್ಡು ಹೊಡೆದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯೊಂದಿಗೆ ಸೆಲ್ಫಿಗೆ ಮುಗಿಬಿದ್ದ ಬಿಜೆಪಿ ಕಾರ್ಯಕರ್ತರು

Posted On: 30-09-2022 07:26PM

ಕಾಪು : ಕೇಂದ್ರ ಸಚಿವೆ ಹಾಗೂ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕಾಪುವಿಗೆ ಶುಕ್ರವಾರ ಆಗಮಿಸಿದ ಸಂದರ್ಭ ಬಿಜೆಪಿ ಕಾರ್ಯಕರ್ತರು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

ಉಚ್ಚಿಲ : ಸಂಗೀತ ಪ್ರಿಯರ ಹೃಣ್ಮನ ಸೆಳೆದ ಶತವೀಣಾವಲ್ಲರಿ

Posted On: 30-09-2022 07:14PM

ಉಚ್ಚಿಲ : ನವರಾತ್ರಿಯ ಪುಣ್ಯಕಾಲ, ಲಲತಾ ಪಂಚಮಿಯ ಶುಭಕಾಲದಲ್ಲಿ ಶಾರದಾ ಮಾತ್ರೆಗೆ ಪ್ರಿಯವಾದ ವೀಣಾವಾದನ ಶತವೀಣಾವಲ್ಲರಿ ವಿದ್ವಾನ್ ಪವನ ಬಿ. ಆರ್.ಆಚಾರ್ ಮಣಿಪಾಲ ಇವರ ನಿರ್ದೇಶನ ಮತ್ತು ನಿರ್ವಹಣೆಯಲ್ಲಿ ಶತವೀಣಾವಲ್ಲರಿ ಶುಕ್ರವಾರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಜರಗಿತು.

ಕಾಪು : ಸಮಾಜ ಸೇವಾ ವೇದಿಕೆ ವತಿಯಿಂದ ಕಾಪು ಪೊಲೀಸ್ ಠಾಣಾ ಕಟ್ಟಡದ ನವೀಕರಣಕ್ಕೆ ಸಿಮೆಂಟ್ ನೆರವು

Posted On: 30-09-2022 03:22PM

ಕಾಪು : ಸಮಾಜ ಸೇವಾ ವೇದಿಕೆ ಕಾಪು ವತಿಯಿಂದ ಕಾಪು ಪೊಲೀಸ್ ಠಾಣಾ ಕಟ್ಟಡದ ನವೀಕರಣಕ್ಕೆ ಸಂಬಂಧಿಸಿದಂತೆ ಸ್ಲಾಪ್ ಮಾಡಲು ಸುಮಾರು 70 ಚೀಲ ಸಿಮೆಂಟ್ ಅಗತ್ಯತೆಯನ್ನು ಮನಗಂಡು ತಕ್ಷಣ ಸ್ಪಂದಿಸಿ ಠಾಣೆಗೆ ಸಿಮೆಂಟ್ ಕಳುಹಿಸಿದ ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ನೇತೃತ್ವದಲ್ಲಿ ಕಾಪು ಠಾಣಾಧಿಕಾರಿ ಪಿ.ಎಸ್.ಐ ಶ್ರೀ ಶೈಲ ಡಿ.ಎಂ ರವರಿಗೆ ಹಸ್ತಾಂತರಿಸಲಾಯಿತು

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಹೃದಯ ದಿನಾಚರಣೆ

Posted On: 30-09-2022 02:08PM

ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯಕ್ಕಾಗಿ ವಿಶ್ವ ಹೃದಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಇಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ. ಆರೋಗ್ಯವಂತ ಹೃದಯವಿರಬೇಕಾದರೆ ನಿಯಮಿತವಾದ ವ್ಯಾಯಾಮ, ಸರಿಯಾದ ಆಹಾರ ಕ್ರಮವನ್ನು ಪಾಲಿಸಬೇಕು. ಜಗತ್ತಿನ ಎಲ್ಲರೂ ವಿಶ್ವ ಹೃದಯ ದಿನವನ್ನು ಹೃದ್ರೋಗಿಗಳೇ ಇಲ್ಲವಾಗಿಸುವ ಮೂಲಕ ಆಚರಿಸುವಂತೆ ಆಗಲಿ ಎಂದು ಆಶಿಸಿದರು.

ಅಕ್ಟೋಬರ್ 1 : ಸಹಬಾಳ್ವೆ ಕಾಪು ತಾಲೂಕು ಘಟಕದಿಂದ ಸಾಮರಸ್ಯ ನಡಿಗೆ

Posted On: 30-09-2022 01:57PM

ಕಾಪು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ಅಂಗವಾಗಿ ಸಾಮರಸ್ಯದ ಬದುಕಿನ ಉಳಿವಿಗಾಗಿ ಸಹಬಾಳ್ವೆ ಕರ್ನಾಟಕ ರಾಜ್ಯಾದ್ಯಂತ ಸಾಮರಸ್ಯ ನಡಿಗೆ ಕಾರ್ಯಕ್ರಮ ಆಯೋಜಿಸಿದ್ದು ಆ ಪ್ರಯುಕ್ತ ಸಹಬಾಳ್ವೆ ಕಾಪು ತಾಲೂಕು ಘಟಕ ಸಾಮರಸ್ಯ ನಡಿಗೆಯನ್ನು ಅಕ್ಟೋಬರ್ 1, ಶನಿವಾರ ಸಂಜೆ 4:30 ಕ್ಕೆ ಹಮ್ಮಿಕೊಂಡಿದ್ದು, ಕಾಪು ಜನಾರ್ದನ ದೇವಸ್ಥಾನದಿಂದ ಪ್ರಾರಂಭಗೊಂಡು ಕಾಪು ಪೇಟೆಯಲ್ಲಿ ಸಮಾಪನಗೊಳ್ಳಲಿದೆ. ಸಮಾಪನ ಸಭೆಯಲ್ಲಿ ವಿವಿಧ ಧರ್ಮಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ಸಹಬಾಳ್ವೆ ಕಾಪು ಅಧ್ಯಕ್ಷರಾದ ನಿರ್ಮಲ ಕುಮಾರ್ ಹೇಳಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿದರು.

ಇಂದು ಕುಂಜೂರು ದುರ್ಗಾ ದೇವಸ್ಥಾನದಲ್ಲಿ ಐತಿಹಾಸಿಕ ಪರಂಪರೆ ಉಳಿಸಿ ಕಾರ್ಯಕ್ರಮ

Posted On: 30-09-2022 01:30PM

ಕಾಪು : ಶ್ರೀ ದುರ್ಗಾ ಮಿತ್ರವೃಂದ ಕುಂಜೂರು, ಶ್ರೀ ದುರ್ಗಾ ಸೇವಾ ಸಮಿತಿ,ಕುಂಜೂರು, ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಆಶ್ರಯದಲ್ಲಿ ಕರ್ನಾಟಕ ಇತಿಹಾಸ ಅಕಾಡೆಮಿ (ರಿ.) ಬೆಂಗಳೂರು ಇವರ ಜನಜಾಗೃತಿ‌ ಅಭಿಯಾನ "ಐತಿಹಾಸಿಕ ಪರಂಪರೆ ಉಳಿಸಿ" ಕಾರ್ಯಕ್ರಮ ಸೆಪ್ಟೆಂಬರ್ 30, ಶುಕ್ರವಾರ ಕುಂಜೂರು ದುರ್ಗಾ ದೇವಸ್ಥಾನದಲ್ಲಿ ಸಂಜೆ 6 ಗಂಟೆಗೆ ಜರಗಲಿದೆ.

ಪಿಎಫ್ಐ ಮತ್ತದರ ಸಹ ಸಂಘಟನೆಗಳ ಮೇಲೆ 5 ವರ್ಷಗಳ ನಿಷೇಧ ಹೇರಿರುವುದು ಸ್ವಾಗತಾರ್ಹ ನಿರ್ಧಾರ : ಲಾಲಾಜಿ ಆರ್ ಮೆಂಡನ್

Posted On: 29-09-2022 11:10AM

ಕಾಪು : ದೇಶದ ತುಂಬಾ ಮತೀಯ ಉಗ್ರವಾದ, ಗಲಭೆ ಸೃಷ್ಟಿ, ಕೋಮು ದ್ವೇಷ ಸೃಷ್ಟಿ, ದೇಶ ವಿರೋಧಿ ಕೃತ್ಯಗಳಲ್ಲಿ ಪಿಎಫ್ಐ ಮತ್ತು ಅದರ 8 ಸಹೋದರ ಸಂಸ್ಥೆಗಳು ಭಾಗಿಯಾಗಿದ್ದವು. ಕರ್ನಾಟಕ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ ನಡೆದ ಹಲವು ವಿದ್ವಂಸಕ ಕೃತ್ಯಗಳಲ್ಲಿ ಈ ಸಂಘಟನೆಯ ಹೆಸರು ಕೇಳಿ ಬಂದಿತ್ತು. ಇದರ ಜೊತೆಗೆ ನಮ್ಮ ಹಲವಾರು ಕಾರ್ಯಕರ್ತರ ಕೊಲೆಗಳಲ್ಲಿ ಈ ಸಂಘಟನೆಯ ಪಾಲುದರಿಕೆ ಸ್ಪಷ್ಟವಾಗಿತ್ತು. ಈ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಹಲವಾರು ವರ್ಷಗಳಿಂದ ಕೂಗು ಕೇಳಿಬರುತ್ತಿತ್ತು. ಆದರೆ, ಈ ಹಿಂದೆ ಇದ್ದ ಸರ್ಕಾರಗಳು ತಮ್ಮ ರಾಜಕೀಯ ಲಾಭಕ್ಕಾಗಿ ಈ ಸಂಘಟನೆಗಳನ್ನು ಪೋಷಣೆ ಮಾಡುವ ಕೆಲಸವನ್ನು ನಿರಂತರವಾಗಿ ಮಾಡಿತ್ತು.