Updated News From Kaup

ಪಲಿಮಾರು ಗ್ರಾಮ ಪಂಚಾಯತ್ : ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Posted On: 14-04-2025 10:27PM

ಪಲಿಮಾರು : ಪಲಿಮಾರು ಗ್ರಾಮ ಪಂಚಾಯತ್, ಶ್ರೀ ಮಹದೇಶ್ವರ ಭಜನ ಮಂಡಳಿ ಮತ್ತು ಮುಂಡಾಲ ಯುವ ವೇದಿಕೆ (ರಿ.) ಪಡುಬಿದ್ರಿ ವತಿಯಿಂದ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರರ ಜನ್ಮದಿನಾಚರಣೆಯನ್ನು ಪಲಿಮಾರು ಗ್ರಾಮ ಪಂಚಾಯತ್ ನ ಬ್ರಹ್ಮಶ್ರೀ ನಾರಾಯಣ ಸಭಾಂಗಣದಲ್ಲಿ ಜರಗಿತು.

ಪಡುಬಿದ್ರಿ ಓಂಕಾರ್ ಕಲಾ ಸಂಗಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Posted On: 14-04-2025 09:55PM

ಪಡುಬಿದ್ರಿ : ಪಡುಬಿದ್ರಿಯ ಓಂಕಾರ್ ಕಲಾ ಸಂಗಮದಲ್ಲಿ ನಡೆಯುತ್ತಿರುವ ರಜಾ-ಮಜಾ ಶಿಬಿರದಲ್ಲಿ ವಿಶ್ವರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆಯನ್ನು ಅಚರಿಸಲಾಯಿತು.

ಶೇ. 90 ರಷ್ಟು ಕ್ರಿಮಿನಲ್ ಪ್ರಕರಣಗಳು ಮಾದಕ ವ್ಯಸನಿಗಳಿಂದ ನಡೆಯುತ್ತಿದೆ : ಪ್ರಸನ್ನ ಎಮ್.ಎಸ್

Posted On: 14-04-2025 07:26AM

ಮುಲ್ಕಿ : ವಿವಿಧ ರೀತಿಯ ಮಾದಕ ವಸ್ತುಗಳು ಬಳಕೆಯಾಗುತ್ತಿದ್ದು, ಮಾದಕ ವಸ್ತುಗಳಿಗೆ ಅತೀ ಹೆಚ್ಚಾಗಿ ವಿದ್ಯಾರ್ಥಿಗಳು ಬಲಿಯಾಗುತಿದ್ದಾರೆ. ಅದರಲ್ಲಿಯೂ ಇಂಜಿನಿಯರ್ ಹಾಗೂ ವ್ಯೆದ್ಯಕೀಯ ವಿದ್ಯಾರ್ಥಿಗಳನ್ನು ಮಾದಕ ಮಾರಾಟಗಾರರು ಗುರಿಯಾಗಿಸಿದ್ದಾರೆ. ಶೇ. 90 ರಷ್ಟು ಕ್ರಿಮಿನಲ್ ಪ್ರಕರಣಗಳು ಮಾದಕ ವ್ಯಸನಿಗಳಿಂದ ನಡೆಯುತ್ತಿರುವುದು ಆಘಾತಕಾರಿದೆ. ನಮ್ಮ ರಾಜ್ಯ ಮಾದಕ ಮುಕ್ತ ರಾಜ್ಯವಾಗಲು ಎಲ್ಲರೂ ಸಹಕರಿಸಬೇಕು. ತಲಪಾಡಿಯಿಂದ ಶಿರೂರುವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗುವ ಅಪಘಾತದಿಂದ ಒಂದು ವರ್ಷಕ್ಕೆ ಆರುನೂರು ಮಂದಿ ಸಾವನ್ನಪ್ಪುತ್ತಿದ್ದಾರೆ. ಇದು ಬೇರೆ ಬೇರೆ ಕಾರಣದಿಂದ ಸಾವನ್ನಪ್ಪುವರ ಸಂಖ್ಯೆಗಿಂತ ದುಪ್ಪಟ್ಟು ಆಗಿದೆ. ಆದ್ದರಿಂದ ರಸ್ತೆ ನಿಯಮಗಳನ್ನು ತಮ್ಮ ಜೀವದ ರಕ್ಷಣೆಗಾಗಿ ಪಾಲಿಸಿ ಯಾವುದೇ ಅಧಿಕಾರಿಗಳ ಹೆದರಿಕೆಗೆ ಅಲ್ಲ ಎಂದು ಪಡುಬಿದ್ರಿ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ ಎಮ್ ಎಸ್ ಹೇಳಿದರು. ಅವರು ವಿಜಯ ಕಾಲೇಜು ಮುಲ್ಕಿ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ.,ರೆಡ್ ಕ್ರಾಸ್ , ರೋವಸ್೯ & ರೇಂಜರ್ ಸಂಯುಕ್ತಾಶ್ರಯದಲ್ಲಿ ರಚನ್ ಸಾಲ್ಯಾನ್ ನೇತೃತ್ವದ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ.) ಕರ್ನಾಟಕ ಇದರ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯ ವ್ಯಸನ ತಡೆಗಟ್ಟುವಿಕೆ ಮತ್ತು ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಸುರಕ್ಷಾ ವೇದಿಕೆ ಒಂತಿಬೆಟ್ಟು ಹಿರಿಯಡ್ಕ : ಪ್ರಥಮ ವಾರ್ಷಿಕೋತ್ಸವ

Posted On: 14-04-2025 07:11AM

ಬಂಟಕಲ್ಲು : ಮಹಿಳಾ ಮತ್ತು ಮಕ್ಕಳ ಸುರಕ್ಷಾ ವೇದಿಕೆ (ರಿ.) ಒಂತಿಬೆಟ್ಟು ಹಿರಿಯಡ್ಕ ಇದರ ಪ್ರಥಮ ವಾರ್ಷಿಕೋತ್ಸವ ಜರಗಿತು.

ಉತ್ತಮ ಮಾತುಗಾರನಾಗ ಬೇಕಾದರೆ ಉತ್ತಮ ಕೇಳುಗನಾಗಿರಬೇಕು : ರಾಘವೇಂದ್ರ ಪ್ರಭು ಕವಾ೯ಲು

Posted On: 14-04-2025 07:04AM

ಉಡುಪಿ : ಒಬ್ಬ ಉತ್ತಮ ಮಾತುಗಾರನಾಗ ಬೇಕಾದರೆ ಉತ್ತಮ ಕೇಳುಗನಾಗುವುದು ಅಷ್ಟೇ ಮುಖ್ಯ ಎಂದು ವ್ಯಕ್ತಿತ್ವ ವಿಕಸನ ತರಬೇತಿದಾರ ರಾಘವೇಂದ್ರ ಪ್ರಭು ಕವಾ೯ಲು ಹೇಳಿದರು. ಅವರು ಅಜ್ಜರಕಾಡು ಪ್ರಜಾಪಿತ ಬ್ರಹ್ಮಾಕುಮಾರಿ ವಿಶ್ವವಿದ್ಯಾಲಯದಲ್ಲಿ ನಡೆದ ಮಕ್ಕಳ ಶಿಬಿರದಲ್ಲಿ ಮಾತನಾಡಿದರು.

5 ನೇ ವರ್ಷದ ಕುಂದಾಪ್ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಉಳ್ತೂರು ಅಣ್ಣಯ್ಯ ಕುಲಾಲ್ ಆಯ್ಕೆ

Posted On: 14-04-2025 07:00AM

ಉಡುಪಿ : ಕೋಟಾದ "ಕಾರಂತ ಥೀಮ್ ಪಾರ್ಕ್"ನಲ್ಲಿ ಮೇ 4 ರಂದು ನಡೆಯಲಿರುವ 5 ನೇ ವರ್ಷದ ಕುಂದಾಪ್ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಉಳ್ತೂರು ಅಣ್ಣಯ್ಯ ಕುಲಾಲ್ ರವರು ಆಯ್ಕೆಯಾಗಿದ್ದಾರೆ.

ಪಡುಬಿದ್ರಿ : ರಜಾ-ಮಜಾ -2025 ಶಿಬಿರದ ಉದ್ಘಾಟನೆ

Posted On: 14-04-2025 06:45AM

ಪಡುಬಿದ್ರಿ : ಬಾಲ್ಯದಲ್ಲಿಯೇ ಮಕ್ಕಳ ಪ್ರತಿಭೆಯನ್ನು ಗುರುತಿಸಲು ರಜಾ ಮಜಾ ಶಿಬಿರಗಳು ಪೂರಕವಾಗಿದೆ. ಮಕ್ಕಳನ್ನು ಸಮಾಧಾನಪಡಿಸಲು ಭಯ ಮೂಡಿಸುವ ಕಾರ್ಯವನ್ನು ಮಾಡಿದರೆ ಮಕ್ಕಳ ಮನಸ್ಸಿಗೆ ತೊಂದರೆಯುಂಟಾಗಿ ಕ್ರಮೇಣ ಜೀವನದಲ್ಲಿ ಭಯವನ್ನು ಎದುರಿಸಲು ಅಶಕ್ತರಾಗಿರುತ್ತಾರೆ. ಆದ್ದರಿಂದ ಮಕ್ಕಳನ್ನು ಸದಾ ಕ್ರಿಯಾಶೀಲ ರಾಗುವಂತೆ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡಬೇಕು ಎಂದು ಪಡುಬಿದ್ರಿ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ ಎಮ್ ಎಸ್ ಹೇಳಿದರು. ಅವರು ಓಂಕಾರ ಕಲಾ ಸಂಗಮದ ವತಿಯಿಂದ ಅಯೋಜಿಸಿರುವ 4 ನೇ ವರ್ಷದ "ರಜಾ ಮಜಾ-2025" ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕೌಡರಿನ ಹೊಸ ಬೆಳಕು ಆಶ್ರಮಕ್ಕೆ ಪಡುಬಿದ್ರಿ ನಟರಾಜ್ ಪಿ.ಎಸ್ ನೇತೃತ್ವದಲ್ಲಿ ಭಜನೆ, ದಿನಸಿ ವಸ್ತುಗಳ ಹಸ್ತಾಂತರ

Posted On: 13-04-2025 03:04PM

ಪಡುಬಿದ್ರಿ : ಭಜನೆಯಿಂದ ಸಾಕ್ಷತ್ ಭಗವದ್ ಸಾಕ್ಷಾತ್ಕಾರವಾಗುವುದು.‌ ಮನ: ಶಾಂತಿ ದೊರಕುವುದು. ಇಂದಿನ ಯುವ ಪೀಳಿಗೆ ಭಜನೆಯಿಂದ ದೂರ ಸರಿಯುತ್ತಿರುವುದು ಬೇಸರದ ಸಂಗತಿಯಾಗಿದೆ. ಮನೆ ಮನೆಗಳಲ್ಲಿ ನಡೆಯುತಿದ್ದ ಭಜನೆಗಳು ನಶಿಸಿ ಹೋಗಿದೆ‌‌‌‌. ನಮ್ಮ ಸಂಸ್ಕೃತಿ, ಸಂಸ್ಕಾರಗಳು ಬೆಳೆಯ ಬೇಕಾದರೆ ಯುವ ಜನತೆ ಭಜನೆಯತ್ತ ಒಲವು ತೋರಬೇಕಾಗಿದೆ ಎಂದು ನಿವೃತ್ತ ಭಾರತೀಯ ನೌಕಾದಳ ಸೇನಾಧಿಕಾರಿ ನಟರಾಜ್ ಪಿ.ಎಸ್ ಹೇಳಿದರು.‌ ಅವರು ಕೌಡರಿನ ಹೊಸ ಬೆಳಕು ಆಶ್ರಮದಲ್ಲಿ ರಾಮ ನವಮಿಯ ಅಂಗವಾಗಿ ನಡೆಸಿದ ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜೋಗಿಮನೆ ಟ್ರಸ್ಟ್ ತೆಂಕಬೆಟ್ಟು ಹಳಗೇರಿ, ಜೆ ಸಿ ಐ ಉಪ್ಪುಂದ : ಉಚಿತ ಯೋಗ ಶಿಬಿರ ಸಂಪನ್ನ

Posted On: 13-04-2025 02:55PM

ಉಡುಪಿ : ಜೋಗಿಮನೆ ಟ್ರಸ್ಟ್ ತೆಂಕಬೆಟ್ಟು ಹಳಗೇರಿ ಹಾಗೂ ಜೆ ಸಿ ಐ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಎ.3ರಿಂದ 12ರವರೆಗೆ ಜರಗಿದ ಎರಡನೇ ವರ್ಷದ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭ ಜರಗಿತು.

ಮಣಿಪಾಲದಲ್ಲಿ ವಿಷುಕಣಿ-ಕವಿದನಿ ಬಹು ಭಾಷಾ ಕವಿಗೋಷ್ಠಿ ಸಂಪನ್ನ

Posted On: 13-04-2025 02:42PM

ಉಡುಪಿ : ರೇಡಿಯೊ ಮಣಿಪಾಲ್ 90.4 MHz ಸಮುದಾಯ ಬಾನುಲಿ ಕೇಂದ್ರ, ಮಣಿಪಾಲ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗ ದೊಂದಿಗೆ "ವಿಷುಕಣಿ-ಕವಿದನಿ" ಬಹು ಭಾಷಾ ಕವಿಗೋಷ್ಠಿ ರೇಡಿಯೊ ಮಣಿಪಾಲ್, ಎಂ.ಐ.ಸಿ ಕ್ಯಾಂಪಸ್ ಮಣಿಪಾಲದಲ್ಲಿ ನಡೆಯಿತು. ಸಭಾ ಕ್ರಾಯಕ್ರಮ ಉದ್ಘಾಟನೆಯನ್ನು ಡಾ. ಶುಭ ಹೆಚ್. ಎಸ್‌. ನಿರ್ದೇಶಕರು, ಮಣಿಪಾಲ್ ಇನ್ಸಿಟ್ಯೂಟ್ ಆಫ್ ಕಮ್ಯುನಿಕೇಶನ್ ಮಾಹೆ ಮಣಿಪಾಲ ಇವರು ನೆರವೇರಿಸಿ ಮಾತನಾಡಿ, ಕವನಗಳಿಗೆ ಭಾವನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ಅವಕಾಶವಿದೆ, ಹೀಗಾಗಿ ಕವಿತೆಗಳಿಗೆ ವಿಮಶೆ೯ಯ ಅವಶ್ಯಕತೆ ಎದುರಾಗುವುದಿಲ್ಲ, ಯುಗಾದಿ ಹಬ್ಬದ ಕುರಿತು ನಮ್ಮಲ್ಲಿರುವ ಸಂಸ್ಕೃತಿ ಆಚಾರಗಳನ್ನು ಕವನಗಳ ಮೂಲಕ ಪ್ರಚುರಪಡಿಸುವ ಈ ಅಪೂವ೯ ಅವಕಾಶ ಸಿಕ್ಕಿರುವುದು ಎಲ್ಲರಿಗೂ ಅಭಿನಂದನೀಯ ವಿಚಾರ ಎಂದರು.