Updated News From Kaup

ಕೊಂಕಣಿ ನಾಟಕ ಸಭಾ : ಕಿರು ನಾಟಕ ಸ್ಫರ್ಧೆಯಲ್ಲಿ ಶಂಕರಪುರ ಕಲಾರಾಧನ್ ಪ್ರಥಮ ಸ್ಥಾನ

Posted On: 25-09-2022 10:20PM

ಕಾಪು : ಇತ್ತೀಚೆಗೆ ಮಂಗಳೂರಿನ ಕೊಂಕಣಿ ನಾಟಕ ಸಭಾ ನಡೆಸಿದ ಕಿರು ನಾಟಕ ಸ್ಫರ್ಧೆಯಲ್ಲಿ ಭಾಗವಹಿಸಿದ ಶಂಕರಪುರದ ಇಗರ್ಜಿಯ ಕಲಾರಾಧನ್ ಸಂಘಟನೆಯ ವೆಚಿಕ್ ಪೂತ್ ಪ್ರಥಮ ಸ್ಥಾನವನ್ನು ಪಡೆದಿದೆ.

ಎರ್ಮಾಳು : ಪುಷ್ಪಾನಂದ ಫೌಂಡೇಶನ್ ವತಿಯಿಂದ 325 ವಿದ್ಯಾರ್ಥಿಗಳಿಗೆ ರೂ. 3.75 ಲಕ್ಷದ ಪ್ರತಿಭಾ ಪುರಸ್ಕಾರ

Posted On: 25-09-2022 03:41PM

ಎರ್ಮಾಳು : ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಪುಷ್ಪಾನಂದ ಫೌಂಡೇಶನ್ ವತಿಯಿಂದ ಯಶ್ ಪಾಲ್ ಸುವರ್ಣ ರವರ ಸಮಾಜ ಮುಖಿ ಕಾರ್ಯ ಶ್ಲಾಘನೀಯವಾಗಿದ್ದು ಫೌಂಡೇಶನ್ ಮೂಲಕ ಸಮಾಜಮುಖಿ ಕಾರ್ಯಕ್ರಮಗಳು ನಿರಂತರ ಸಾಗಿ ಬರಲಿ ಎಂದು ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿಯ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ಹೇಳಿದರು. ಎರ್ಮಾಳ್ ಜನಾರ್ದನ ದೇವಸ್ಥಾನದ ಜನಾರ್ದನ ಜನ ಕಲ್ಯಾಣ ಸಭಾಂಗಣದಲ್ಲಿ ಆಯೋಜಿಸಿದ್ದ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪಡುಬಿದ್ರಿ, ಹೆಜಮಾಡಿ, ಪಲಿಮಾರು, ಎಲ್ಲೂರು, ಬೆಳಪು, ತೆಂಕ ಮತ್ತು ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ 325 ವಿದ್ಯಾರ್ಥಿಗಳಿಗೆ ರೂ. 3.75 ಲಕ್ಷದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಟಪಾಡಿ : ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ - ಪಂಡಿತ್ ದೀನ್ ದಯಾಳ್ ನುಡಿ ನಮನ

Posted On: 25-09-2022 03:13PM

ಕಟಪಾಡಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕ ಸದಸ್ಯರಾಗಿ, ಸಂಘದ ಪ್ರಚಾರ ಕರಾಗಿ,ಜನಸಂಘದ ಸ್ಥಾಪನೆಗೆ ಕಾರಣಿಕರ್ತರಾಗಿ ನಂತರ ಅಖಂಡ ಭಾರತದ ನಿರ್ಮಾಣಕ್ಕಾಗಿ ಶ್ರಮಿಸಿ ಹಿಂದುತ್ವ ಸಿದ್ದಾಂತವನ್ನು ಪ್ರತಿಪಾದಿಸಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರವರ 106 ನೇ ಜನ್ಮದಿನದ ಪ್ರಯುಕ್ತ ನುಡಿ ನಮನ ಕಾರ್ಯಕ್ರಮವು ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಕಟಪಾಡಿ ಇವರ ವತಿಯಿಂದ ಸಂಘದ ಕಚೇರಿಯಲ್ಲಿ ನಡೆಯಿತು.

ಅಕ್ಟೋಬರ್ 3 : ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ, ಶಂಕರಪುರದಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆ ಕಾರ್ಯಕ್ರಮ

Posted On: 25-09-2022 03:03PM

ಕಾಪು : ಶ್ರೀ ಸಾಯಿ ಈಶ್ವರ್ ಗುರೂಜಿ ದಿವ್ಯ ಸಂಕಲ್ಪದಲ್ಲಿ ದುರ್ಗಾಷ್ಟಮಿಯ ಪ್ರಯುಕ್ತ ದ್ವಾರಕಾಮಾಯಿ ಮಠ ಉಡುಪಿ ಜಿಲ್ಲೆಯ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ,ಶಂಕರಪುರ ಇಲ್ಲಿ ಶ್ರೀ ಸೌಭಾಗ್ಯ ಹೆಣ್ಣಿನ ಭಾಗ್ಯೋದಯದ ಬೆಳಕು ಎಂಬ ಕಾರ್ಯಕ್ರಮದ ಅಂಗವಾಗಿ ಅಕ್ಟೋಬರ್ 03, ಸೋಮವಾರ ಬೆಳಿಗ್ಗೆ 9:30 ರಿಂದ 7 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆ ಕಾರ್ಯಕ್ರಮ ಜರಗಲಿದೆ. ಮೊದಲೇ ಹೆಸರು ನೊಂದಾವಣಿ ಮಾಡಿಕೊಂಡವರಿಗೆ ಮಾತ್ರ ಈ ಅವಕಾಶವಿದೆ.

ಶಟಲ್‌ ಬ್ಯಾಡ್ಮಿಂಟನ್‌ ನಲ್ಲಿ ಕ್ರಿಯೇಟಿವ್‌ ಕಾಲೇಜಿನ ಲೇಖನಾ ರಾಜ್ಯಮಟ್ಟಕ್ಕೆ ಆಯ್ಕೆ

Posted On: 24-09-2022 11:18PM

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಡೆಸಲ್ಪಟ್ಟ ಉಡುಪಿ ಜಿಲ್ಲಾ ಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪ ಪೂ ಕಾಲೇಜಿನ ಕುಮಾರಿ ಲೇಖನಾ ಬಾಲಕಿಯರ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಶಟಲ್‌ ಬ್ಯಾಡ್ಮಿಂಟನ್‌ ಪಂದ್ಯಾಟದಲ್ಲಿ 18 ರ ವಯೋಮಿತಿಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಮುಂದಿನ ರಾಜ್ಯಮಟ್ಟದ ತಂಡದಲ್ಲಿ ಆಡುವ ಅವಕಾಶ ಗಳಿಸಿದ್ದಾರೆ.

ಇನ್ನಂಜೆ : ಹಾಲು ಉತ್ಪಾದಕರ ಸಂಘದ ಮಹಾಸಭೆ, ಸನ್ಮಾನ

Posted On: 24-09-2022 11:09PM

ಇನ್ನಂಜೆ : ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಲಕ್ಷ್ಮಣ ಕೆ.ಶೆಟ್ಟಿ ಅಧ್ಯಕ್ಷತೆಯಲ್ಲಿ ಇನ್ನಂಜೆ ದಾಸ ಭವನದಲ್ಲಿ ಜರಗಿತು. ಈ ಸಂದರ್ಭ ಮಾತನಾಡಿದ ಅವರು ಸದಸ್ಯರು ಉತ್ತಮ ಗುಣ ಮಟ್ಟದ ಮತ್ತು ಹೆಚ್ಚು ಹಾಲು ಪೂರೈಸುವ ಮೂಲಕ ಸಂಘದ ಅಭಿವೃದ್ಧಿಗೆ ನಿರಂತರವಾಗಿ ಸಹಕರಿಸಿದ್ದರಿಂದ ನಮ್ಮ ಸಂಘವು ಉಡುಪಿ ತಾಲೂಕಿನಲ್ಲಿಯೇ ಅತ್ಯುತ್ತಮ ಸಂಘವಾಗಿ ಮೂಡಿ ಬಂದಿದೆ. ಮುಂದೆಯೂ ಇದೇ ರೀತಿಯ ಬೆಂಬಲದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದರು.

ಉಚ್ಚಿಲ ದಸರಾ : ವಿದ್ಯುತ್ ದೀಪಾಲಂಕಾರದ ಉದ್ಘಾಟನೆ

Posted On: 24-09-2022 08:48PM

ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಉತ್ಸವದ ಪೂರ್ವ ಭಾವಿಯಾಗಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಸುಮಾರು 17 ಕಿಮೀ ಉದ್ದಕ್ಕೆ ವಿದ್ಯುತ್ ದೀಪ ಅಲಂಕಾರದ ಉದ್ಘಾಟನೆಯನ್ನು ನಾಡೋಜ ಜಿ.ಶಂಕರ್‌ ರವರು ನೆರವೇರಿಸಿದರು.

ಕಾಪು : ಕುಂಜೂರಿನಲ್ಲಿ ಶರನ್ನವರಾತ್ರಿ ರಮೋತ್ಸವ

Posted On: 24-09-2022 08:46PM

ಕಾಪು : ಕುಂಜೂರಿನ ಶ್ರೀದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ರಮೋತ್ಸವವು ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 4 ರ ಪರ್ಯಂತ ವೈಭವದಲ್ಲಿ ನೆರವೇರಲಿದೆ.

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ತರಬೇತಿ ಶಿಬಿರ

Posted On: 24-09-2022 07:51PM

ಶಿರ್ವ: ಇಂದು ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು ತಮ್ಮ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆ, ಯೋಗ ಮತ್ತು ಕ್ರೀಡೆಯಲ್ಲಿ ತೊಡಗಿಸಿಕೊಂಡು ಆರೋಗ್ಯವಂತರಾಗಬೇಕು.ಯೋಗದಿಂದ ದೇಹ ಮತ್ತು ಮನಸ್ಸನ್ನು ನಿಯಂತ್ರಿಸಿಕೊಳ್ಳುವ ಮೂಲಕ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದೆಂದು ಶಿರ್ವ ವಲಯ ಪತಂಜಲಿ ಯೋಗ ಸಮಿತಿಯ ಯೋಗಗುರುಗಳಾದ ಶ್ರೀ ರಾಧಾಕೃಷ್ಣ ಪ್ರಭು ಹೇಳಿದರು. ಅವರು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ಮತ್ತು ಫಿಟ್ನೆಸ್ ಸೆಲ್ ಹಾಗೂ ಎನ್.ಸಿ.ಸಿ ಸಂಯುಕ್ತವಾಗಿ ಏರ್ಪಡಿಸಿದ ಯೋಗ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಘಾಟಿಸಿ ಮಾತನಾಡಿದರು.

ಉಡುಪಿ : ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದಿಂದ ಬೃಹತ್ ರಕ್ತದಾನ ಶಿಬಿರ ; ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

Posted On: 24-09-2022 07:16PM

ಉಡುಪಿ : ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆ ಹಾಗೂ ಬ್ರಹ್ಮಾವರ ಘಟಕ ಜಂಟಿ ಆಶ್ರಯದೊಂದಿಗೆ ಸೆಪ್ಟೆಂಬರ್ 25, ಆದಿತ್ಯವಾರದಂದು ಮಲ್ಪೆಯ ಫಿಶರೀಸ್ ಸಭಾಭವನದಲ್ಲಿ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.