Updated News From Kaup

ರೋಟರಿ ಶಂಕರಪುರ : ಶಿಕ್ಷಕರ ದಿನಾಚರಣೆ

Posted On: 13-09-2022 10:18PM

ಕಾಪು : ರೋಟರಿ ಶಂಕರಪುರ ವತಿಯಿಂದ ಸೆಪ್ಟೆಂಬರ್ 12ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರುಗಳಾದ ರಘುರಾಮ್ ಕೋಟ್ಯಾನ್ ಸುಭಾಸ್ ನಗರ, (ಮುಖ್ಯೋಪಾಧ್ಯಾಯರು ಆದಿಉಡುಪಿ ಪ್ರೌಢಶಾಲೆ ಆದಿ ಉಡುಪಿ )ಹಾಗೂ ರಾಚೆಲ್ ಐಡಾ ಮರಿಯಾ ಡಿಮೆಲ್ಲೊ ( ನಿವೃತ್ತ ಶಿಕ್ಷಕಿ ಪ್ರಾಥಮಿಕ ಶಾಲೆ ಮುಳೂರು) ಇವರುಗಳನ್ನು ಸನ್ಮಾನಿಸಲಾಯಿತು.

ರೋಟರಿ ಶಂಕರಪುರದ ಅಧ್ಯಕ್ಷರಾದ ರೊ.ಗ್ಲಾಡ್ಸನ್ ಕುಂದರ್ ರವರು ಸ್ವಾಗತಿಸಿದರು. ರೊ. ನಂದನ್ ಕುಮಾರ್ ರವರು ರೋಟರಿ ಪ್ರಾರ್ಥನೆಯನ್ನು ಮಾಡಿದರು. ವೃತ್ತಿ ಸೇವಾ ನಿರ್ದೇಶಕರಾದ ರೊ. ವೆಲೇರಿಯನ್ ನೊರೂಂಹ್ನ, ಕಾರ್ಯದರ್ಶಿ ರೊ. ಸಿಲ್ವಿಯ ಕಸ್ಟಲೀನೋ, ಜಾರ್ಜ್ ಡಿಸಿಲ್ವ, ಅಂತೋನಿ ಡೇಸಾ, ವಿಕ್ಟರ್ ಮಾರ್ಟಿಸ್,ಪೌಲ್ ಕ್ವಾಡ್ರಸ್ ರೋಟರಿ ಸದಸ್ಯರು ಉಪಸಿತರಿದ್ದರು.

ಬಂಟಕಲ್ಲು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ - ಸಾಮೂಹಿಕ ಗಣ ಹೋಮ ಪೂಜೆ ಸಂಪನ್ನ

Posted On: 13-09-2022 09:55PM

ಬಂಟಕಲ್ಲು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಂಟಕಲ್ಲು ಇವರ ಆಶ್ರಯದಲ್ಲಿ ಸಂಕಷ್ಟ ಹರ ಚತುರ್ಥಿಯ ಪ್ರಯುಕ್ತ ಪ್ರಥಮ ಬಾರಿಗೆ ಬಂಟಕಲ್ಲು ಸಾರ್ವಜನಿಕ ಶ್ರೀ ಗಣೇಶೋತ್ಸವ ವೇದಿಕೆಯಲ್ಲಿ ಸಾಮೂಹಿಕ ಗಣ ಹೋಮ ಪೂಜೆ ಸಂಪನ್ನಗೊಂಡಿತು.

ಹೇರೂರು ಶ್ರೀ ಗುರು ರಾಘವೇಂದ್ರ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮುಲ್ಕಾ ಡಿ ಪಂಜಿಮಾರು ನಾಗರಾಜ್ ಭಟ್ ರವರಿಂದ ಪೂಜಾ ವಿಧಿ ವಿಧಾನಗಳು ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಮಾಧವ ಕಾಮತ್, ಗೌರವಾಧ್ಯಕ್ಷರಾದ ಶಂಕರ ನಾಯಕ್, ಮಾಜಿ ಗೌರವ ಅಧ್ಯಕ್ಷರಾದ ಶೇಖರ ಪೂಜಾರಿ, ಕೃಷ್ಣ ಮೂಲ್ಯ, ಉದಯ ದೇವಾಡಿಗ, ವಿಜ್ಞೆಶ್ ಶೆಟ್ಟಿ, ನಿತಿನ್ ರಾವ್, ರವಿ ಆಚಾರ್ಯ, ಉದಯ ರಾವ್, ಕಾರ್ಯದರ್ಶಿ ದಿನೇಶ್ ದೇವಾಡಿಗ ಹೇರೂರು, ಭಜನಾ ಮಂಡಳಿಯ ಮಾಜಿ ಅಧ್ಯಕ್ಷರಾದ ಶಂಕರ್ ದೇವಾಡಿಗ, ಮಹಿಳಾ ಭಜನಾ ಮಂಡಳಿ ಅಧ್ಯಕ್ಷರಾದ ಶಶಿಕಲಾ, ಕಾರ್ಯದರ್ಶಿ ಪವಿತ್ರ ರಾವ್ ಮುಂತಾದವರು ಉಪಸ್ಥಿತರಿದ್ದರು.

ರೋಟರಿ ಸಮುದಾಯ ದಳ ಇನ್ನಂಜೆ - ಪದಪ್ರದಾನ

Posted On: 12-09-2022 11:16PM

ಇನ್ನಂಜೆ : ರೋಟರಿ ಸಮುದಾಯ ದಳ ಇನ್ನಂಜೆ ಮಾತೃಸಂಸ್ಥೆ ರೋಟರಿ ಕ್ಲಬ್ ಶಂಕರಪುರ (ವಲಯ - 5 ರೋಟರಿ ಜಿಲ್ಲೆ 3182) ಇದರ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಸೆಪ್ಟೆಂಬರ್ 11ರಂದು ಇನ್ನಂಜೆಯ ದಾಸ ಭವನದಲ್ಲಿ ಜರಗಿತು.

ರೋಟರಿ ಕ್ಲಬ್, ಶಂಕರಪುರ ಅಧ್ಯಕ್ಷರಾದ ರೋ.ಗ್ಲ್ಯಾಡ್ಸನ್ ಕುಂದರ್ ಪದಪ್ರದಾನ ಮಾಡಿದರು. ನಿರ್ಗಮನ ಅಧ್ಯಕ್ಷರಾದ ಆರ್ ಸಿ‌ ಸಿ‌ ಪ್ರಶಾಂತ್ ಶೆಟ್ಟಿ ನೂತನ ಅಧ್ಯಕ್ಷರಾದ ಆರ್ ಸಿ‌ ಸಿ‌ ದಿವೇಶ್ ಶೆಟ್ಟಿಯವರಿಗೆ ಮತ್ತು ನಿರ್ಗಮನ ಕಾರ್ಯದರ್ಶಿ ಆರ್ ಸಿ‌ ಸಿ‌. ಮನೋಹರ್ ಕಲ್ಲುಗುಡ್ಡೆ ನೂತನ ಕಾರ್ಯದರ್ಶಿ ಆರ್ ಸಿ‌ ಸಿ‌ ವಿಕ್ಕಿ ಪೂಜಾರಿಯವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಇದೇ ಸಂದರ್ಭ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನಟರಾಜ ಉಪಾಧ್ಯಾಯರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ‌ ಇನ್ನಂಜೆ ಸಿ.ಎ. ಬ್ಯಾಂಕ್‌ ಅಧ್ಯಕ್ಷರಾದ ರಾಜೇಶ್ ರಾವ್‌, ಝೋನಲ್ ಕೋ-ಆರ್ಡಿನೇಟರ್ ರೋನ್ - 5 ರೋ.ಗುರುರಾಜ್ ಭಟ್, ರೋಟರಿ ಶಂಕರಪುರ ಪೂರ್ವಾಧ್ಯಕ್ಷರಾದ ರೋ.ವಿಕ್ಟರ್ ಮಾರ್ಟಿಸ್, ರೋಟರಿ ಶಂಕರಪುರ ಪೂರ್ವ ಕಾರ್ಯದರ್ಶಿ ರೋ.ಜೆರಾಮ್ ರೊಡ್ರಿಗೆಸ್, ರೋಟರಿ ಶಂಕರಪುರ ಕಾರ್ಯದರ್ಶಿ ರೋ.ಸಿಲ್ವಿಯಾ ಕ್ಯಾಸ್ಥಲಿನೋ , ಇನ್ನಂಜೆ ಆರ್ ಸಿ‌ ಸಿ ಸಭಾಪತಿ ರೋ.ಮಾಲಿನಿ ಶೆಟ್ಟಿ, ರೋ. ನವೀನ್ ಅಮೀನ್ ಶಂಕರಪುರ ಉಪಸ್ಥಿತರಿದ್ದರು.

ಆರ್ ಸಿ‌ ಸಿ‌. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ನಿರ್ಗಮನ ಕಾರ್ಯದರ್ಶಿ ಆರ್ ಸಿ‌ ಸಿ‌. ಮನೋಹರ್ ವರದಿ ವಾಚಿಸಿದರು. ರೋ.ಚಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ಆರ್ ಸಿ‌ ಸಿ‌. ವಿಕ್ಕಿ ಪೂಜಾರಿ ವಂದಿಸಿದರು.

ಬಿಲ್ಲವ ಸಮಾಜ ಸೇವಾ ಸಂಘ ಮಲ್ಪೆ - ಬ್ರಹ್ಮಶ್ರೀ ನಾರಾಯಣಗುರು ಜಯಂತಿ ; ಪ್ರತಿಭಾ ಪುರಸ್ಕಾರ ; ಸನ್ಮಾನ

Posted On: 12-09-2022 09:19PM

ಉಡುಪಿ : ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜಯಂತಿಯ ಅಂಗವಾಗಿ ಸೆಪ್ಟೆಂಬರ್ 10ರಂದು ಮಲ್ಪೆ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಬೆಳಗ್ಗೆ ಧಾರ್ಮಿಕ ಪೂಜಾ ವಿಧಿ - ವಿಧಾನಗಳು, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ತಾವೂ ಕೂಡ ಇಂತಹ ವೇದಿಕೆಯಲ್ಲಿ ಸನ್ಮಾನಗೊಂಡು ಹತ್ತಾರು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸಹಾಯ ಮಾಡುವಂತಹ ದಿನಗಳು ತಮಗೆ ಒದಗಿಬರಲಿ ಎಂದು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಜತ್ತನ್ ರವರು ಶುಭ ಹಾರೈಸಿದರು.

ಶಾಲಾ ಅಧ್ಯಕ್ಷರಾದ ರಘುರಾಮ್ ಸುವರ್ಣ ರವರು ದಿಕ್ಸೂಚಿ ಭಾಷಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗುರ್ಮೆ ಫೌ೦ಡೇಷನ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಪುರಸ್ಕರಿಸಿ, ಮಾತನಾಡಿ ವಿದ್ಯೆಯಿಂದ ಸ್ವತಂತ್ರರಾಗಿರಿ ಎಂಬ ಗುರುಗಳ ಸಂದೇಶದನ್ವಯ ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘವು ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ವಿದ್ಯಾ ದಾನ ಮಾಡುವ ಮೂಲಕ ಅವರ ಸಂದೇಶವನ್ನು ಪರಿಪೂರ್ಣಪಡಿಸುವಲ್ಲಿ ಸಫಲವಾಗಿದೆ ಎಂದರು. 2021 - 22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 90% ಕ್ಕಿಂತ ಅಧಿಕ ಅಂಕ ಪಡೆದ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಅಂತಿಮ ಪದವಿ ಪರೀಕ್ಷೆಯಲ್ಲಿ 80% ಕ್ಕಿಂತ ಅಧಿಕ ಅಂಕ ಪಡೆದ ಕೊಡವೂರು ಗ್ರಾಮಕ್ಕೆ ಒಳಪಟ್ಟ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ನಾರಾಯಣಗುರು ಜಯಂತಿ ಪ್ರಯುಕ್ತ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಬಿಲ್ಲವ ಮಹಿಳಾ ಘಟಕದ ಸದಸ್ಯರಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮಲ್ಪೆ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯು 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಾಲೆಯು 100% ಫಲಿತಾಂಶ ಪಡೆದ ಬಗ್ಗೆ ಸಂಘದ ವತಿಯಿಂದ ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕುಮಾರ್ ಮತ್ತು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಡಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬಿಲ್ಲವ ಮಹಿಳಾ ಘಟಕ ಹಾಗೂ ನಾರಾಯಣಗುರು ಸೇವಾದಳದ ಸದಸ್ಯರು ವಿವಿಧ ವಿನೋದವಳಿಗಳನ್ನು ನಡೆಸಿಕೊಟ್ಟರು

ಈ ಸಂದರ್ಭದಲ್ಲಿ ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ದಿವಾಕರ್ ಸನಿಲ್, ಕಾನಗುಡ್ಡೆ ಮಹಾಲಿಂಗೇಶ್ವರ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಗೋಪಾಲ್ ಸಿ. ಬಂಗೇರ, ಜಯದುರ್ಗಾ ಪರಮೇಶ್ವರಿ ದೇವಸ್ಥಾನ ಕನ್ನರ್ಪಾಡಿ ಇದರ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ಕರ್ಕೇರ ಇಂಜಿನಿಯರಿಂಗ್ ವರ್ಕ್ಸ್ ಕೊಪ್ಪಲ್ ತೋಟ ಇದರ ಮಾಲಕರಾದ ಪ್ರಕಾಶ್ ಕರ್ಕೇರ, ಸಂಘದ ಉಪಾಧ್ಯಕ್ಷರಾದ ಲೋಕನಾಥ್ ಕರ್ಕೇರ, ಕೋಶಾಧಿಕಾರಿಯವರಾದ ಹರಿನಾಥ್ ಕೆ. ಸುವರ್ಣ, ಶಾಲಾ ಕಾರ್ಯದರ್ಶಿಯವರಾದ ಲಕ್ಷ್ಮೀಶ್ ಎಂ. ಬಂಗೇರ, ನಾರಾಯಣಗುರು ಸೇವಾದಳದ ಸಂಚಾಲಕರಾದ ನಿತಿನ್ ಅಮೀನ್, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷರಾದ ಆಶಾ ಜೆ. ಬಂಗೇರ, ಭಜನಾ ಸಂಚಾಲಕರಾದ ಬಿ. ಬಿ. ಪೂಜಾರಿ, ವಿದ್ಯಾರ್ಥಿಗಳು, ಪೋಷಕರು ಸಂಘದ ಮತ್ತು ಉಪ ಸಮಿತಿಯ ಸದಸ್ಯರುಗಳು, ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಸುನಿಲ್ ದಾಸ್ ಎಂ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು , ಮಹಿಳಾ ಘಟಕದ ಸದಸ್ಯರಾದ ಚಂದ್ರಿಕಾ ವಿಜಯ್, ಜಯಲಕ್ಷ್ಮಿ ಶೇಖರ್, ನಿವೇದಿತಾ ಯಾದವ್ ಪಾರ್ಥಿಸಿದರು, ಸಂಘದ ಜೊತೆ ಕಾರ್ಯದರ್ಶಿ ಉಮೇಶ್ ಸುವರ್ಣ ವಂದಿಸಿದರು ಬಿಲ್ಲವ ಮಹಿಳಾ ಘಟಕದ ಸದಸ್ಯರಾದ ವಾರಿಜಾ ಮಧುಸೂದನ್ ಮತ್ತು ನಿರ್ಮಾಲ ಟೀಚರ್ ಕಾರ್ಯಕ್ರಮ ನಿರೂಪಿಸಿದರು.

ಸೆ. 13 : ದಿ. ಆಸ್ಕರ್ ಫೆರ್ನಾಂಡಿಸ್ ಪ್ರಥಮ ಪುಣ್ಯತಿಥಿ ಪ್ರಯುಕ್ತ ಹಣ್ಣುಹಂಪಲು ವಿತರಣೆ

Posted On: 12-09-2022 08:41PM

ಉಡುಪಿ : ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ದಿ. ಆಸ್ಕರ್ ಫೆರ್ನಾಂಡಿಸ್ ಅವರ ಪ್ರಥಮ ಪುಣ್ಯ ತಿಥಿಯ ಪ್ರಯುಕ್ತವಾಗಿ ಸೆ. 13ರಂದು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಮತ್ತು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 11 ಗಂಟೆಗೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ನಡೆಯಲಿದೆ ಎಂದು ಗೌರವಾಧ್ಯಕ್ಷ ರೊನಾಲ್ಡ್ ಮನೋಹರ್ ಕರ್ಕಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದಿಂದ ವಿದ್ಯಾರ್ಥಿ ವೇತನ ಹಾಗೂ ಗುರಿಕಾರರಿಗೆ ಗೌರವ ಧನ ವಿತರಣಾ ಕಾರ್ಯಕ್ರಮ

Posted On: 11-09-2022 10:56PM

ಉಚ್ಚಿಲ : ಮಹಾಲಕ್ಷ್ಮಿ ದೇವಸ್ಥಾನ ಜೀರ್ಣೋದ್ಧಾರ ಸಮಯದಲ್ಲಿ ಆಸೆ ಇಟ್ಟುಕೊಂಡು ಪ್ರಾರ್ಥನೆ ಮಾಡಿದ್ದು ಇಂದು ಆ ಮಹಾಲಕ್ಷ್ಮಿ ನಿಜ ಮಾಡಿ ತೋರಿಸುವ ಮೂಲಕ ಪವಾಡ ಮೆರೆದಿದ್ದಾಳೆ ಎಂದು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಗೌರವಾಧ್ಯಕ್ಷ ನಾಡೋಜ ಡಾ.ಜಿ.ಶಂಕರ್‌ ಹೇಳಿದರು. ಅವರು ದ.ಕ.ಮೊಗವೀರ ಮಹಾಜನ ಸಂಘ(ರಿ.)ಇದರ ವತಿಯಿಂದ ದಕ್ಷಿಣದ ಉಪ್ಪಳ ದಿಂದ ಉತ್ತರದ ಶೀರೂರುವರೆಗಿನ ಮೊಗವೀರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಗುರಿಕಾರರಿಗೆ ಗೌರವ ಧನ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ರವಿವಾರ ಮಾತನಾಡಿದರು.

ಜೀರ್ಣೋದ್ಧಾರ ಸಮಯದಲ್ಲಿ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಇದ್ದ ಕನಸ್ಸು ಇಂದು ನನಸಾಯಿತು. ಮಂಗಳೂರು ದಸರಾ ಮಾದರಿಯಲ್ಲಿ ಉಚ್ಚಿಲ ದಸರಾ ಆಚರಿಸೋಣ ಎಂದರು. ಎಸ್.ಎಸ್‌. ಎಲ್.ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 25 ಲಕ್ಷ ರೂ.ಹಾಗೂ ಎಂ.ಬಿ.ಬಿ.ಎಸ್, ಇಂಜಿನಿಯರಿಂಗ್ ಕಲಿಕೆಯ ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ಸೇರಿದಂತೆ ಒಟ್ಟಾರೆಯಾಗಿ 50 ಲಕ್ಷ ರೂಪಾಯಿಯ ಸಹಕಾರ ಮಾಡುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಎಸ್‌. ಎಸ್. ಎಲ್.ಸಿ, ಪಿಯುಸಿ, ಎಂ.ಕಾಂ ಮತ್ತು ಸಿ.ಎ ನಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿದರು. ಮುಖ್ಯ ಅತಿಥಿಗಳಾಗಿ ಆನಂದ ಸಿ.ಕುಂದರ್, ಗುಂಡು,ಬಿ.ಅಮೀನ್, ಸತೀಶ್ ಅಮೀನ್ ಬಾರ್ಕೂರು, ಉದಯ್ ಕುಮಾರ್‌ , ಮೋಹನ್‌ ಕರ್ಕೇರ , ವಾಸುದೇವ ಸಾಲ್ಯಾನ್, ಭರತ್ ಕುಮಾರ್ ಎರ್ಮಾಳ್, ರಾಜೇಂದ್ರ ಹಿರಿಯಡ್ಕ, ಮೊಗವೀರ ಮಹಿಳಾ ಸಭಾಧ್ಯಕ್ಷೆ ಪೂರ್ಣಿಮಾ ಸಿ.ಇದ್ದರು. ದ.ಕ.ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ.ಸಿ.ಕೋಟ್ಯಾನ್ ಸ್ವಾಗತಿಸಿದರು. ಸತೀಶ್ ಅಮೀನ್ ನಿರ್ವಹಿಸಿದರು.

ಕಾಪು : ಮಾನವನ ಜ್ಞಾನವೇ ಯಶಸ್ಸಿನ ಕೀಲಿ ಕೈ - ಮೌಲಾನಾ ಸಲೀಮ್ ಉಮ್ರಿ

Posted On: 11-09-2022 10:42PM

ಕಾಪು : ಶ್ರೀಮಂತರು ಜ್ಞಾನ ಗಳಿಸಲು ಲಕ್ಷಗಟ್ಟಲೆ ಹಣ ವಿನಿಯೋಗಿಸುತ್ತಾನರೆ. ಜ್ಞಾನ ಗಳಿಸುವುದರಲ್ಲಿ ಎರಡು ವಿಧವಿದ್ದು, ಒಂದರಲ್ಲಿ ಸ್ವತಃ ಆತನಿಗೂ ಸಮಾಜಕ್ಕೂ ಯಾವುದೇ ಪ್ರಯೋಜನ ಇರುವುದಿಲ್ಲ. ಆತನು , ತಾನು ಗಳಿಸಿದ ಜ್ಞಾನವನ್ನು ತನ್ನ ಸ್ವಾರ್ಥಕ್ಕಾಗಿ ಬಳಸುತ್ತಾ ಸಮಾಜದಲ್ಲಿ ಕೆಡುಕುಗಳನ್ನು ಹಬ್ಬಿಸಲು ಕಾರಣನಾಗುತ್ತಾನೆ. ಇನ್ನೊಂದು ವಿಧದ ಗುರಿಯನ್ನು ಇಟ್ಟು ಜ್ಞಾನ ಗಳಿಸಿದವನಿಗೆ ಆತನಿಗೂ, ಸಮಾಜಕ್ಕೂ ಉಪಯೋಗವಾಗುತ್ತದೆ. ಈ ಜ್ಞಾನವನ್ನು ಆತ ಬಳಸುತ್ತಾ, ತನ್ನ ಶಕ್ತಿ, ಸಾಮರ್ಥ್ಯಕ್ಕನುಸಾರವಾಗಿ ಒಳಿತಿನ ಕಾರ್ಯಗಳನ್ನು ಮಾಡುತ್ತಾ,ಅಭಿವೃದ್ಧಿಯನ್ನು ಬಯಸಿ, ದೇವನಿಗೆ ಶರಣಾಗಿ ಸಮಾಜದಲ್ಲಿ ಬದುಕುತ್ತಾನೆ. ಸಮಾಜದಲ್ಲಿ ಇರುವ ಪ್ರತಿಯೊಬ್ಬ ವ್ಯಕ್ತಿಗೂ ತಾನು ಈ ಭೂಮಿಗೆ ಬಂದ ಉದ್ದೇಶವೇನು ? ನನಗೆ ಇಲ್ಲಿ ಏನು ಮಾಡಬೇಕಾಗಿದೆ ಎಂಬ ಸಾಮಾನ್ಯ ಜ್ಞಾನ ಇರಬೇಕಾಗಿದೆ. ಈ ಬಗ್ಗೆ ಆತ ಗಾಢವಾಗಿ ಅಧ್ಯಯನ ಮಾಡಬೇಕು. ಯಾವ ರೀತಿ ನಾವು ಲೌಕಿಕ ವಿದ್ಯಾಭ್ಯಾಸ ಗಳಿಸಲು ಬಯಸುತ್ತೇವೆಯೋ ಅದೇ ರೀತಿ ಆದ್ಯಾತ್ಮಿಕ ವಿದ್ಯಾಭ್ಯಾಸ ಗಳಿಸಲು ಮುಂದೆ ಬರಬೇಕು. ಇದರಿಂದ ಅವರ ಇಹ ಮತ್ತು ಪರಲೋಕ ಬೆಳಗುತ್ತದೆ. ಇದೇ ಜ್ಞಾನದ ಯಶಸ್ಸಿನ ಕೀಲಿ ಕೈ ಎಂದು ಶಿವಮೊಗ್ಗ , ಉತ್ತರ ಕನ್ನಡ ವಲಯ ಸಂಚಾಲಕರಾದ ಮೌಲಾನಾ ಮುಹಮ್ಮದ್ ಸಲೀಮ್ ಉಮ್ರಿ ಯವರು ಹೇಳಿದರು. ಅವರು ಆದಿತ್ಯವಾರ ಕಾಪು ಹೋಟೆಲ್ ಮಂದಾರದಲ್ಲಿ ಎಸ್. ಐ. ಓ ಮತ್ತು ಜಮಾಅತೆ ಇಸ್ಲಾಮಿ ಹಿಂದ್ ಕಾಪು ವರ್ತುಲವು ಹಮ್ಮಿಕೊಂಡ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತಾಡಿದರು.

ಇನ್ನೋರ್ವ ಮುಖ್ಯ ಅಥಿತಿ ಎಸ್. ಐ. ಓ ನ ರಾಜ್ಯ ಕಾರ್ಯದರ್ಶಿ ಹಸೀಬ್ ತರಫ್ದಾರ್ ರವರು , ಇಂದು ನಾವು ವಿದ್ಯಾಭ್ಯಾಸ ಪಡೆಯುತ್ತಿರುವಾಗ ಹಲವು ಭಾಷೆ ಕಲಿಯಲು ಪ್ರಯತ್ನಿಸಬೇಕು. ಇದರಿಂದ ನಮ್ಮ ಜ್ಞಾನವು ವೃದ್ಧಿಸುತ್ತದೆ. ಇತಿಹಾಸ ಅಧ್ಯಯನ ಮಾಡುವಾಗ ಭಾಷಾ ಜ್ಞಾನದಿಂದ ಸಮಾಜಕ್ಕೆ ಬಹಳ ಕೊಡುಗೆ ದೊರಕುವಂತಿರಬೇಕು. ಇದು ಇತರರಿಗೆ ಮಾದರಿಯಾಗಿರಬೇಕು ಎಂದರು.

ಹಾಜಿ ಅಬ್ದುಲ್ ಜಲೀಲ್ ಉದ್ಯಾವರ ಸಂದರ್ಭೋಚಿತವಾಗಿ ಮಾತಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾಕ್ಟರ್ ಅಬ್ದುಲ್ ಅಜೀಜ್ ಎಮ್. ಐ. ಟಿ ಯವರು ವಹಿಸಿದ್ದರು. ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ ನ ಡಿಪ್ಲೋಮ ಕೋರ್ಸ್ ನಲ್ಲಿ ರಾಜ್ಯದಲ್ಲಿ ಪ್ರಥಮ ರಾಂಕ್ ಗಳಿಸಿದ ಸಮ್ರಿನ್ ಶಹಾಬುದ್ದಿನ್ ರವರಿಗೆ ಪ್ರಶಸ್ತಿ ಮತ್ತು ಸರ್ಟಿಫಿಕೇಟ್ ಹಾಗೂ ಉಳಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎಸ್. ಐ. ಓ. ವಿದ್ಯಾರ್ಥಿಗಳಿಗೆ ನಡೆಸಿದ ರಸ ಪ್ರಶ್ನೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಜಯ ಗಳಿಸಿದವರಿಗೆ ನಗದು ಮತ್ತು ಬಹುಮಾನ ನೀಡಲಾಯಿತು. ವಿಜೇತರ ಪಟ್ಟಿಯನ್ನು ಅನ್ವರ್ ಅಲಿ ಕಾಪು ಓದಿದರು.

ಕಾರ್ಯಕ್ರಮವು ಮುಹಮ್ಮದ್ ರಾಯಿಫ್ ರವರ ಕುರಾನ್ ಪಠಣದೊಂದಿಗೆ ಪ್ರಾರಂಭ ಆಯಿತು. ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಎಸ್. ಐ. ಓ. ಕಾಪು ಘಟಕದ ಅಧ್ಯಕ್ಷ ಅನೀಸ್ ಅಲಿ ಮಾಡಿದರು. ಬೋರ್ಡ್ ಆಫ್ ಇಸ್ಲಾಮಿಕ್ ನ ನಿಯಮಾವಳಿಯನ್ನು ಜಮಾ ಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ಸಂಚಾಲಕಿ ಶೇಹೆನಾಜ್ ಕಾಪು ರವರು ಸಭೆಯ ಮುಂದಿಟ್ಟರು. ಮುಹಮ್ಮದ್ ಅವೀಜ್ ಕಾರ್ಯಕ್ರಮ ನಿರೂಪಿಸಿದರು. ಮುಹಮ್ಮದ್ ಇಕ್ಬಾಲ್ ಸಾಹೇಬ್ ವಂದಿಸಿದರು.

ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ : ವಾರ್ಷಿಕ ಮಹಾಸಭೆ

Posted On: 11-09-2022 05:17PM

ಉಡುಪಿ : ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ 2021 - 2022 ನೇ ಸಾಲಿನ 20ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಸೆಪ್ಟೆಂಬರ್‌ 11ರಂದು ಬಿಲ್ಲವರ ಸೇವಾ ಸಂಘ (ರಿ.), ಬನ್ನಂಜೆ ಉಡುಪಿ ಇದರ ಶಿವಗಿರಿ ಸಭಾಂಗಣದಲ್ಲಿ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ವಾರ್ಷಿಕ ಸಾಮಾನ್ಯ ಸಭೆಯನ್ನು ಬ್ಯಾಂಕಿನ ಮಾರ್ಗದರ್ಶಕರಾದ ಎಸ್‌ ಕೆ ಸಾಲ್ಯಾನ್ ,ರಾಮಚಂದ್ರ ಕಿದಿಯೂರು ಮತ್ತು ಸೂರ್ಯ ಪ್ರಕಾಶ್ ಜಂಟಿಯಾಗಿ ಉದ್ಘಾಟಿಸಿ ಶುಭ ಹಾರೈಸಿದರು.

ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ ಹರಿಶ್ಚಂದ್ರ ಅಮೀನ್ ಅವರು ಸರ್ವಸದಸ್ಯರುಗಳನ್ನು ಸ್ವಾಗತಿಸಿ ನಮ್ಮ ಬ್ಯಾಂಕ್ ಭಾರತೀಯ ರಿಸರ್ವ್ ಬ್ಯಾಂಕಿನ ಮಾನ್ಯತೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಬ್ಯಾಂಕ್ ಅಧುನಿಕ ಸೌಲಭ್ಯಗಳಾದ ಕೋರ್ ಬ್ಯಾಂಕಿಂಗ್ ,ಆರ್ ಟಿ ಜಿ ಎಸ್ / ನೆಪ್ಟ್ , ಸಿ ಟಿ ಎಸ್ ಚೆಕ್ ಕ್ಲಿಯರಿಂಗ್, ಸೇಫ್ ಲಾಕರ್ ಸೌಲಭ್ಯಗಳನ್ನು ಒಳಗೊಂಡಿದೆ . ಗ್ರಾಹಕರ ಐದು ಲಕ್ಷದವರೆಗಿನ ಠೇವಣಿಗಳಿಗೆ ಡಿ ಐ ಸಿ ಜಿ ಸಿ. ವಿಮಾ ಸೌಲಭ್ಯವನ್ನು ಹೊಂದಿದೆ . ಸ್ವಸಹಾಯ ಗುಂಪಿನ ಸದಸ್ಯರಿಗೆ ಅತ್ಯಂತ ಕಡಿಮೆ ಬಡ್ಡಿಯ ಸಾಲವನ್ನು ನೀಡುತ್ತಿದ್ದು ಚಿನ್ನಾಭರಣ ಈಡಿನ ಸಾಲ, ಗೃಹ ನಿರ್ಮಾಣ ಸಾಲ, ಅಡಮಾನ ಸಾಲ , ಭದ್ರತಾ ಸಾಲ , ವೈಯಕ್ತಿಕ ಸಾಲ , ವಾಹನ ಸಾಲ ವೇತನಾಧಾರಿತ ಸಾಲ ಹಾಗೂ ವ್ಯಾಪಾರ ಅಭಿವೃದ್ಧಿ ಸಾಲಗಳನ್ನು  ವಾಣಿಜ್ಯ ಬ್ಯಾಂಕಿನ ಬಡ್ಡಿ ದರಕ್ಕೆ ಸ್ಪರ್ಧಾತ್ಮಕವಾಗಿ ನೀಡಲಾಗುತ್ತದೆ .ಗ್ರಾಹಕರ ಠೇವಣಿಗೆ ಅತ್ಯಧಿಕ ಬಡ್ಡಿಯನ್ನು ನೀಡುತ್ತಿದ್ದು ಹಿರಿಯ ನಾಗರಿಕರಿಗೆ 0.5% ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಗ್ರಾಹಕರ ಹಾಗೂ ಆಡಳಿತ ಮಂಡಳಿಯ ಸಹಕಾರ ಸಿಬ್ಬಂದಿಗಳ ನಗುಮೊಗದ ಸೇವೆ ಸದಸ್ಯರ ಪ್ರೋತ್ಸಾಹದಿಂದ ನಮ್ಮ ಬ್ಯಾಂಕ್ ಉತ್ತಮ ಲಾಭವನ್ನು ಕಾಣುವಂತಾಗಿದೆ ಎಂದರು.

ಉಪಾಧ್ಯಕ್ಷರಾದ ವಿಜಯಾ ಜಿ ಬಂಗೇರ, ನಿರ್ದೇಶಕರಾದ ಕೆ. ಜಯಕುಮಾರ್‌, ಪ್ರಭಾಕರ ಬಂಗೇರ, ಬಿ.ಬಿ. ಪೂಜಾರಿ, ನವೀನ್ ಅಮೀನ್, ಆನಂದ ಜತ್ತನ್ನ, ಡಿ.ಆರ್ ರಾಜು, ಶೇಕರ ಬಿ ಪೂಜಾರಿ,  ರಮೇಶ್ ಕೆ ಕೋಟ್ಯಾನ್, ಅಶೋಕ್ ಕುಮಾರ್ , ಅರುಣ್ ಜತ್ತನ್ನ,  ವೃತ್ತಿಪರ ನಿರ್ದೇಶಕರಾದ ಭಾಸ್ಕರ ಪೂಜಾರಿ ಹಾಗೂ ಕೃಷ್ಣ ಬಿಲ್ಲವ ಉಪಸ್ಥಿತರಿದ್ದರು.

ಸದಸ್ಯರಾದ ಗುರುದತ್ ಅಮೀನ್ , ಕಟಪಾಡಿ ಶಂಕರ್ ಪೂಜಾರಿ, ರಮೇಶ್  ಬಂಗೇರ ,ಶೇಖರ್ ಕೋಟ್ಯಾನ್ ಮತ್ತು ಸುಲೋಚನಾ ದಾಮೋದರ್ ಇವರು ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿ ಬ್ಯಾಂಕನ್ನು ಲಾಭದತ್ತ ಮುನ್ನಡೆಸಿದ ಆಡಳಿತ ಮಂಡಳಿಯನ್ನು ಅಭಿನಂದಿಸಿದರು. ಬ್ಯಾಂಕಿನ ನಿರ್ದೇಶಕರಾದ ಶಕುಂತಲ ಶ್ರೀನಿವಾಸ್ ಪ್ರಾರ್ಥಿಸಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಶನ್ ಫೌಸ್ಟಿನ್ ಆಲ್ವರವರು ಬ್ಯಾಂಕಿನ 19ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ವರದಿಯನ್ನು ವಾಚಿಸಿದರು. ನಿರ್ದೇಶಕ ಶಿವಾಜಿ ಸುವರ್ಣ ವಂದಿಸಿದರು.

ಕಾಪು : ಲಕ್ಷ್ಮಿಜನಾರ್ಧನ ದೇವಳಕ್ಕೆ ಚಲನಚಿತ್ರ ನಟ ಗಣೇಶ್ ಭೇಟಿ

Posted On: 11-09-2022 05:10PM

ಕಾಪು : ಇಲ್ಲಿನ ಲಕ್ಷ್ಮಿಜನಾರ್ಧನ ದೇವಳಕ್ಕೆ ಕನ್ನಡ ಚಲನಚಿತ್ರ ನಟ ಗೋಲ್ಡನ್ ಸ್ಟಾರ್ ಗಣೇಶ್ ಭೇಟಿ ನಿಡಿದರು.

ದೇವಳದ ಪ್ರಧಾನ ಅರ್ಚಕರಾದ ಜನಾರ್ಧನ ತಂತ್ರಿಯವರು ಗಣೇಶರನ್ನು ಸನ್ಮಾನಿಸಿ ಶ್ರೀ ದೇವರ ಪ್ರಸಾದ ವಿತರಿಸಿದರು.

ಈ ಸಂದರ್ಭ ಪ್ರಕಾಶ್ ಅಮ್ಮಣ್ಣಾಯ, ದೇವಳದ ಸಿಬ್ಬಂದಿ ದಿವಾಕರ್, ಲಕ್ಷ್ಮೀಕಾಂತ್, ರಾಧಾಕೃಷ್ಣ ಕಲ್ಲೂರಾಯ, ಕಾಪು ಪುರಸಭಾ ಸದಸ್ಯ ಅನಿಲ್ ಮತ್ತಿತರರು ಉಪಸ್ಥಿತರಿದ್ದರು.

ಮುದರಂಗಡಿ : ಮಟ್ಕಾ ಜುಗಾರಿ ; ಪೋಲಿಸ್ ದಾಳಿ ; ಓರ್ವನ ದಸ್ತಗಿರಿ

Posted On: 11-09-2022 04:58PM

ಮುದರಂಗಡಿ : ಕಾಪು ತಾಲೂಕು ಸಾಂತೂರು ಗ್ರಾಮದ ಮುದರಂಗಡಿ ಮೀನು ಮಾರ್ಕೆಟ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಆಟದ ಬಗ್ಗೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾನೆಂದು ಬಂದ ಮಾಹಿತಿಯಂತೆ ಪಡುಬಿದ್ರಿ ಪೋಲಿಸರು ದಾಳಿ ನಡೆಸಿದ್ದಾರೆ.

ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಗೆ ಚೀಟಿ ಬರೆದು ಕೊಡುತ್ತಾ ಹಣ ಸಂಗ್ರಹಿಸುತ್ತಿದ್ದ, ದಿನೇಶ್ ಶೆಟ್ಟಿ ಎಂಬಾತನನ್ನು ದಸ್ತಗಿರಿ ಮಾಡಿ, ಅವನ  ವಶದಲ್ಲಿದ್ದ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ ಸಂಗ್ರಹಿಸಿದ ನಗದು ರೂಪಾಯಿ 1,050, ಮಟ್ಕಾ ನಂಬ್ರ ಬರೆದ ಚೀಟಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.