Updated News From Kaup
ಅಕ್ಟೋಬರ್ 4 : ರಕ್ಷಣಾಪುರ ಜವನೆರ್ನ ಕೂಟ ಕಾಪು ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ - ಹುಲಿ ವೇಷ ಸ್ಪರ್ಧೆ
Posted On: 24-09-2022 06:56PM
ಕಾಪು : ಎಂದರೆ ರಕ್ಷಣಾಪುರ. ಈ ಹೆಸರು ಬ್ರಾಂಡ್ ಆಗಬೇಕೆನ್ನುವ ಉದ್ದೇಶದಿಂದ ಸಾಕಷ್ಟು ಯುವಕರ ಅಭಿಲಾಷೆಯಾಗಿದೆ. ಇದರೊಂದಿಗೆ ದಸರಾ ಸಂದರ್ಭ ಕಲಾವಿದರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ದಸರಾ ಹಬ್ಬದ ಪ್ರಯುಕ್ತ ರಕ್ಷಣಾಪುರ ಜವನೆರ್ನ ಕೂಟ ಕಾಪು ಸಾರಥ್ಯದಲ್ಲಿ ಅಕ್ಟೋಬರ್ 4ರಂದು ಕಾಪು ಶ್ರೀ ಜನಾರ್ಧನ ದೇವಸ್ಥಾನದ ಬಳಿಯ ಮೈದಾನದಲ್ಲಿ (ಬಂಟರ ಸಂಘದ ಕಚೇರಿಯ ಮುಂಭಾಗ) 2 ಗಂಟೆಯಿಂದ ಹುಲಿ ವೇಷ ಸ್ಪರ್ಧೆಯಾದ ಕಾಪು ಪಿಲಿ ಪರ್ಬ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಅವರು ಕಾಪು ರಾಜೀವ್ ಭವನದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾಹಿತಿ ನೀಡಿದರು.
ಭಜರಂಗ್ ನಾಸಿಕ್ ಬ್ಯಾಂಡ್ ಉಡುಪಿ : ವಿದ್ಯೆ, ಶಸ್ತ್ರಚಿಕಿತ್ಸೆಗಾಗಿ ಸಹಾಯ ನಿಧಿ ಹಸ್ತಾಂತರ ಕಾಯ೯ಕ್ರಮ
Posted On: 23-09-2022 11:07PM
ಉಡುಪಿ : ಇಲ್ಲಿನ ರೋಟರಿ ಸೌಟ್ಕ್ ಭವನ, ಕಮಲ ಬಾಯಿ ಹೈಸ್ಕೂಲ್ ಕಡಿಯಾಳಿ ಉಡುಪಿಯಲ್ಲಿ ಸೆಪ್ಟೆಂಬರ್ 21ರಂದು ಭಜರಂಗ್ ನಾಸಿಕ್ ಬ್ಯಾಂಡ್ ಉಡುಪಿ ತಂಡವು 2 ದಿನ ವೇಷ ಧರಿಸಿದ ಬಂದ ಹಣವನ್ನು ವಿದ್ಯೆಗಾಗಿ ಸಹಾಯ ನಿಧಿ ಹಸ್ತಾಂತರ ಕಾರ್ಯಕ್ರಮದ ಮೂಲಕ ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ಹಾಗೂ ದುರ್ಗಾವಾಹಿನಿ ಮೂಡುಬೆಳ್ಳೆ ಘಟಕ : ಶ್ರೀ ಸತ್ಯನಾರಾಯಣ ಪೂಜೆ-ಶ್ರೀ ಶಾರದಾ ಪೂಜೆ, ಮಹಾ ಚಂಡಿಕಾಯಾಗ
Posted On: 23-09-2022 10:39PM
ಕಾಪು : ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ಹಾಗೂ ದುರ್ಗಾವಾಹಿನಿ ಮೂಡುಬೆಳ್ಳೆ ಘಟಕದ ವತಿಯಿಂದ ಅಕ್ಟೋಬರ್ 04, ಮಂಗಳವಾರ ಬೆಳ್ಳೆ ಗೀತಾ ಮಂದಿರದಲ್ಲಿ ವೇದಮೂರ್ತಿ ಬಿ ಗಣೇಶ್ ಭಟ್ ಇವರ ನೇತೃತ್ವದಲ್ಲಿ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ-ಶ್ರೀ ಶಾರದಾ ಪೂಜೆ, ಮಹಾ ಚಂಡಿಕಾಯಾಗ ನಡೆಯಲಿದೆ.
ಕಾಪು ಪುರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ; ವಿವಿಧ ಸ್ಪರ್ಧೆಗಳ ಆಯೋಜನೆ ; ಸನ್ಮಾನ
Posted On: 23-09-2022 10:33PM
ಕಾಪು : ಇಲ್ಲಿನ ಪುರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಪೌರ ಕಾರ್ಮಿಕರ ಸಹಿತ ೩೫ ಮಂದಿಗೆ ಸನ್ಮಾನ, ವಿವಿಧ ಸ್ಪರ್ಧೆ ಆಯೋಜನೆ, ಬಹುಮಾನ ವಿತರಣೆ ಶುಕ್ರವಾರ ಜರಗಿತು.
ಕಾಪು ಪಶು ಆಸ್ಪತ್ರೆಯಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ವಿತರಣೆ
Posted On: 22-09-2022 05:20PM
ಕಾಪು : ಕರ್ನಾಟಕ ಸರಕಾರ ಕುಕ್ಕುಟ ಮಹಾಮಂಡಳಿ ಬೆಂಗಳೂರು ಇವರ ವತಿಯಿಂದ ಪಶು ಸಂಗೋಪನಾ ಇಲಾಖೆಯ ಸಹಯೋಗದೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ವಿತರಿಸುವ ಕಾರ್ಯಕ್ರಮವು ಕಾಪು ಪಶು ಆಸ್ಪತ್ರೆಯಲ್ಲಿ ಗುರುವಾರ ನಡೆಯಿತು.
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ವಲಯ : ರಸ್ತೆ ದುರಸ್ಥಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ
Posted On: 22-09-2022 05:16PM
ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ವಲಯ ಇವರ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಪರ್ಕಳದಿಂದ- ಗುಡ್ಡೆಯಂಗಡಿ ವರೆಗಿನ ಮುಖ್ಯ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಆಗ್ರಹಿಸಿ ಮತ್ತು ಉಡುಪಿ ಜಿಲ್ಲಾಡಳಿತ ಮತ್ತು ಕೇಂದ್ರ ಸರಕಾರ ಹಾಗೂ ಬಿಜೆಪಿ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಆತ್ರಾಡಿ ಪೇಟೆಯಲ್ಲಿ ಗುರುವಾರದಂದು ಬ್ರಹತ್ ಪ್ರತಿಭಟನೆಯನ್ನು ಹಮ್ಮಿ ಕೊಳ್ಳಲಾಗಿತ್ತು.
ಸೆಪ್ಟಂಬರ್ 26- ಅಕ್ಟೋಬರ್ 5 : ಉಚ್ಚಿಲ ದಸರಾ ಉತ್ಸವ - 2022
Posted On: 22-09-2022 12:10PM
ಉಚ್ಚಿಲ : ಕರ್ನಾಟಕದ ಕೊಲ್ಹಾಪುರ ಖ್ಯಾತಿಯ ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ 26ರಿಂದ ಅ. 5ರ ವರೆಗೆ ನವರಾತ್ರಿಯ ಅಂಗವಾಗಿ ಉಚ್ಚಿಲ ದಸರಾ ಉತ್ಸವ-2022 ಜರಗಲಿದೆ. ನವರಾತ್ರಿ ಸಂದರ್ಭ ವೈಭವದ ದಸರಾ ಕಾರ್ಯಕ್ರಮ ಜರಗಲಿದ್ದು ಈಗಾಗಲೇ ಎಲ್ಲಾ ಸಿದ್ಧತೆ ನಡೆಯುತ್ತಿದ್ದು ದೇವಾಲಯ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ದೀಪ ಅಲಂಕಾರ, ನವದುರ್ಗೆಯರ ಮಂಟಪ, ನವ ದುರ್ಗೆಯರ ಮೂರ್ತಿಯೂ ಶಿವಮೊಗ್ಗದ ಕುಬೇರ ಮತ್ತು ತಂಡದ ನೇತೃತ್ವದಲ್ಲಿ ತಯಾರಾಗುತ್ತಿದೆ.
ಪಡುಬಿದ್ರಿ : ಎಸ್.ಪಿ. ಉಮರ್ ಫಾರೂಕ್ ನಿಧನ
Posted On: 22-09-2022 10:51AM
ಪಡುಬಿದ್ರಿ : ಇಲ್ಲಿಯ ಮಾಜಿ ಗ್ರಾಪಂ ಸದಸ್ಯ, ರಾಜಕೀಯ ಧುರೀಣ, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಎಸ್.ಪಿ. ಉಮರ್ ಫಾರೂಕ್ ಅನಾರೋಗ್ಯದಿಂದ ಗುರುವಾರ ಬೆಳಿಗ್ಗೆ ನಿಧನ ಹೊಂದಿದರು.
ಪಡುಬಿದ್ರಿ : ದೈವಾರಾಧನೆಯಲ್ಲಿ ವೈದಿಕ ಪದ್ಧತಿ ಇಲ್ಲ - ತಮ್ಮಣ್ಣ ಶೆಟ್ಟಿ
Posted On: 22-09-2022 08:42AM
ಪಡುಬಿದ್ರಿ : ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಅತಿಯಾಗಿದ್ದ ಕೇರಳವನ್ನು ಬದಲಾಯಿಸಿದ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳು ಪ್ರಾತ: ಸ್ಮರಣೀಯರು. ಪ್ರಯೋಗ, ಪ್ರತಿಷ್ಟೆ, ಪ್ರವೇಶ ವಿಶೇಷ ತತ್ವವನ್ನು ಪ್ರತಿಪಾದಿಸಿದವರು. ಜಗತ್ತಿನ ಎರಡನೇ ಮತ್ತು ಏಷ್ಯದ ಪ್ರಥಮ ಸರ್ವಧರ್ಮ ಸಮ್ಮೇಳನದ ಆಯೋಜನೆಯ ಖ್ಯಾತಿ ಇವರದ್ದಾಗಿದೆ ಎಂದು ಶಂಭುಗ ಮಾಣಿಕ್ಯ ಬೀಡು, ಕನ್ನಡ ಚಿತ್ರೋದ್ಯಮದ ನಟ ನಿರ್ಮಾಪಕ ತಮ್ಮಣ್ಣ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಪಡುಬಿದ್ರಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕ ಇವರ ಜಂಟಿ ಆಶ್ರಯದಲ್ಲಿ ಪಡುಬಿದ್ರಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 94 ನೇ ಪುಣ್ಯ ತಿಥಿಯಂದು ತುಳುನಾಡಿನ ದೈವಾರಾಧನೆಯಲ್ಲಿ ಬಿಲ್ಲವರು ಎಂಬ ವಿಷಯದ ಉಪನ್ಯಾಸ ನೀಡಿದರು.
ನಿರರ್ಗಳ ವಾಕ್ಚಾತುರ್ಯದ ಮೂಲಕ ಗಮನ ಸೆಳೆಯುವ ಬಾಲ ಪ್ರತಿಭೆ ಜೀವಿಕಾ ವಿಶ್ವನಾಥ್ ಶೆಟ್ಟಿ, ಪೇತ್ರಿ
Posted On: 21-09-2022 11:59PM
ನಾವು ಏನು ಮಾಡಬೇಕೆಂದಿರುತ್ತೇವೆಯೋ ಅದನ್ನು ಕ್ರಮಬದ್ಧವಾಗಿ, ವಿಶಿಷ್ಟವಾಗಿ, ಶಿಸ್ತಿನಿಂದ, ಕ್ರಿಯಾಶೀಲತೆಯಿಂದ ಯಶಸ್ವಿಯಾಗಿ ಮಾಡಿದಾಗಲೇ ಅದು ಸಾಧನೆ ಎನ್ನಿಸಿಕೊಳ್ಳುತ್ತದೆ. ಪ್ರತಿಭೆ ಮತ್ತು ಪ್ರಯತ್ನಗಳು ನಿರಂತರವಾಗಿ ಏಕಮುಖವಾಗಿ ಸಾಗಿದರೆ ಸಾಧನೆ ಸಾಧಿತವಾಗುತ್ತದೆ. ಬದುಕಿಗೆ ಅತ್ಯುಕೃಷ್ಟ ಸಂಸ್ಕಾರ ನೀಡಿ ಸಮಾಜದಲ್ಲಿ ಗೌರವವನ್ನು ತಂದುಕೊಡಬಲ್ಲ ಕಲೆಗಳು ನಮ್ಮ ಬದುಕಿನಲ್ಲಿ ಬೆರೆತಾಗ ಬದುಕಿಗೆ ಮಾನ್ಯತೆ ದೊರಕುತ್ತದೆ. "ಕಲೆಯನ್ನು ಮನುಷ್ಯರ ಆಲೋಚನೆಯ ವಿಶೇಷ ಸಾಮರ್ಥ್ಯವೆಂದು ಪರಿಗಣಿಸಲಾಗುತ್ತದೆ. ಸಾಮಾನ್ಯವಾಗಿ ಕಲೆಯನ್ನು ಯೋಚನೆ ಮತ್ತು ಭಾವನೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಸೃಜಿಸಲಾಗುತ್ತದೆ" ಎಂದು ದಾರ್ಶನಿಕರು ಅಭಿಪ್ರಾಯ ಪಡುತ್ತಾರೆ. ಯಾವುದೇ ಕಲೆಯು ಕುತೂಹಲದಿಂದ ಆರಂಭವಾಗಿ ಪರಿಣತಿ, ಮತ್ತು ಪರಿಪೂರ್ಣತೆಯೆಡೆಗೆ ಸಾಗುತ್ತದೆ. ಸಂಪೂರ್ಣ ಪರಿಪೂರ್ಣತೆ ಎಂಬುದು ಸಾಧ್ಯವಾಗದಿದ್ದರೂ ಪರಿಪೂರ್ಣತೆಯೆಡೆಗೆ ಸಾಗುವ ಪ್ರಕ್ರಿಯೆಯು ಅಭಿವ್ಯಕ್ತಿಸುವ ಕಲಾವಿದರಿಗೂ ಅನುಭವಿಸುವ ಕಲಾಭಿಮಾನಿಗಳಿಗೂ ಭಾವನ್ಮಾತಕ ಅನುಭೂತಿಯನ್ನೂ, ಭಾವಪರವಶತೆಯನ್ನೂ ತಂದೊಡ್ಡುತ್ತದೆ. ಪ್ರತಿಭೆಗಳು ಅನಾವರಣಗೊಳ್ಳಲು ಅವಕಾಶಗಳು ಲಭಿಸಬೇಕು. ಲಭಿಸಿದ ಅವಕಾಶವನ್ನು ಜಾಣ್ಮೆ, ಪ್ರೌಢಿಮೆ, ನೈಪುಣ್ಯತೆ, ಚಾಕಚಕ್ಯತೆ, ಕಲಾತ್ಮಕತೆ, ಪ್ರತ್ಯುತ್ಪನ್ನಮತಿತ್ವ, ವಾಕ್ಚಾತುರ್ಯದಿಂದ ಬಳಸಿಕೊಳ್ಳಬೇಕು. ಮುಂಬಯಿಯ ಬಾಲಕಿ ಜೀವಿಕಾ ವಿಶ್ವನಾಥ್ ಶೆಟ್ಟಿ ಅವರು ಹೀಗೆ ಸಿಕ್ಕಿದ ಅವಕಾಶಗಳನ್ನು ಚೆನ್ನಾಗಿ, ಸೊಗಸಾಗಿ ಬಳಸಿಕೊಂಡವರು . ಜೀವಿಕಾ ಅವರು ಭಾಷಣ, ಏಕಪಾತ್ರಾಭಿನಯ, ಭಗವದ್ಗೀತಾ ಶ್ಲೋಕ ಪಠಣ, ನಾಟಕಾಭಿನಯ, ಭಾಷಾ ಪರೀಕ್ಷೆ, ನಿರೂಪಣೆ ಇತ್ಯಾದಿಗಳಲ್ಲಿ ಪರಿಣತರು.
