Updated News From Kaup
ರೋಟರಿ ಶಂಕರಪುರ : ಇಂಟರಾಕ್ಟ್ ಕ್ಲಬ್ ಪದ ಪ್ರದಾನ
Posted On: 21-09-2022 11:54PM
ಕಾಪು : ರೋಟರಿ ಶಂಕರಪುರದ ಅಂಗ ಸಂಸ್ಥೆಗಳಾದ ಎಸ್ ವಿ ಎಚ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಹಾಗೂ ಎಸ್ ವಿ ಎಚ್ ಕನ್ನಡ ಮೀಡಿಯಂ ಇಂಟರಾಕ್ಟ್ ಕ್ಲಬ್ ಪದ ಪ್ರದಾನ ಸಮಾರಂಭವನ್ನು ವಲಯ 5 ರ ಇಂಟರಾಕ್ಟ್ ವಲಯ ಸಂಯೋಜಕರಾದ ಜಯಕೃಷ್ಣ ಆಳ್ವಾರವರು ಇಂಟರಾಕ್ಟ್ ಅಧ್ಯಕ್ಷರುಗಳಾದ ಪಾವನ, ಪ್ರಜ್ಞಾ ಹಾಗೂ ಕಾರ್ಯದರ್ಶಿಗಳಾದ ಕಾರ್ತಿಕ್, ಶ್ರೇಯ ರವರಿಗೆ ಪದಪ್ರದಾನವನ್ನು ನೆರವೇರಿಸಿದರು.
ಶಿರ್ವ : ದಶದಿಕ್ಕುಗಳಿಂದ ಸಂಪತ್ತು ಹರಿದು ಬರಲಿ - ಉಮೇಶ್ ಆಚಾರ್ಯ
Posted On: 21-09-2022 03:04PM
ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ ಶಿರ್ವ ಮತ್ತು ಮಹಿಳಾ ಬಳಗದ ವತಿಯಿಂದ ಕುತ್ಯಾರು ಶ್ರೀಮಠದ ಗೋವುಗಳಿಗೆ ಸುಮಾರು ಇನ್ನೂರು ಕಿಲೋ ಗಿಂತಲೂ ಹೆಚ್ಚು ಹಿಂಡಿ ಮತ್ತು ಹಸಿರು ಆಹಾರವನ್ನು ಅಧ್ಯಕ್ಷರಾದ ಉಮೇಶ್ ಆಚಾರ್ಯರು ಗೋಮಾತೆಗೆ ಸಮರ್ಪಿಸಿ ದಶದಿಕ್ಕುಗಳಿಂದ ನಮ್ಮ ಸಂಸ್ಥೆಗೆ ಸಂಪತ್ತು ಹರಿದುಬರಲಿ ಇನ್ನೂ ಮುಂದಕ್ಕೂ ಗೋಸೇವೆ ಸೇವೆ ಮಾಡುವ ಅವಕಾಶ ದೊರೆಯಲಿ ಎಂದು ಮಠಕ್ಕೆ ಗೋವಿಗಾಗಿ ಮೇವು ಸಮರ್ಪಣ ಸಮಾರಂಭದಲ್ಲಿ ನುಡಿದರು ಶ್ರೀಮಠದ ಗುರುಗಳು ಸದಸ್ಯರಿಗೆ ಫಲಮಂತ್ರಾಕ್ಷತೆ ಯನ್ನು ನೀಡಿ ಸಂಸ್ಥೆ ಉತ್ತರೋತ್ತರ ಅಭಿವೃದ್ಧಿಯಾಗಲಿ, ಗುರು ಆಶೀರ್ವಾದದೊಂದಿಗೆ ಗೋಮಾತೆಯ ಆಶೀರ್ವಾದ ಎಲ್ಲರಿಗೂ ಲಭಿಸಲಿ ಎಂದು ಆಶೀರ್ವದಿಸಿದರು.
ಪಡುಬಿದ್ರಿ : ಅನ್ನಭಾಗ್ಯ ಯೋಜನೆಯ ಅಕ್ರಮ ದಾಸ್ತಾನಿನ ಅಕ್ಕಿ ವಶ
Posted On: 21-09-2022 02:59PM
ಪಡುಬಿದ್ರಿ : ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿಯ ಆಧಾರದ ಮೇಲೆ ಕಾಪು ತಾಲೂಕು ಆಹಾರ ನಿರೀಕ್ಷಕ ಟಿ. ಲೀಲಾನಂದ, ಕಾಪು ಪೊಲೀಸ್ ವೃತ್ತ ನಿರೀಕ್ಷಕರಾದ ಕೆ.ಸಿ. ಪೂವಯ್ಯ ಮತ್ತು ಪಡುಬಿದ್ರಿ ಪೋಲೀಸರು ದಾಳಿ ನಡೆಸಿ 2,87,606 ರೂಪಾಯಿ ಮೌಲ್ಯದ ಅಕ್ಕಿ ವಶಪಡಿಸಿಕೊಂಡಿದ್ದಾರೆ.
ಶಿರ್ವ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಕೋಡು ಹರಿಪ್ರಸಾದ್ ಸಾಲಿಯಾನ್ ಆಯ್ಕೆ
Posted On: 20-09-2022 11:20PM
ಶಿರ್ವ : ಇಲ್ಲಿನ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಕೋಡು ಹರಿಪ್ರಸಾದ್ ಸಾಲಿಯಾನ್ ಆಯ್ಕೆಯಾಗಿದ್ದಾರೆ.
ಮಾದಕ ಪದಾರ್ಥ ಬಳಕೆಯ ವಿರುದ್ಧ ಜನಜಾಗೃತಿ ಅಭಿಯಾನ ಕಾರ್ಯಕ್ರಮ
Posted On: 20-09-2022 09:10PM
ಕಾಪು : ಮೂಳೂರ್ ಜುಮಾ ಮಸೀದಿ ಹಾಗು ಸಿರಾಜುಲ್ ಇಸ್ಲಾಂ ಅರಬಿ ಮದ್ರಸ ಮೂಳೂರ್ ಇದರ ಜಂಟಿ ಆಶ್ರಯದಲ್ಲಿ ಇಂಲೈಟ್ ವೆಲ್ನೆಸ್ ಸೆಂಟರ್ ಕುತ್ತಾರ್ ಮಂಗಳೂರು ಇದರ ಸಹಯೋಗದೊಂದಿಗೆ ಮಾದಕ ಪದಾರ್ಥ ಬಳಕೆಯ ವಿರುದ್ಧ ಜನ ಜಾಗೃತಿ ಅಭಿಯಾನ ಕಾರ್ಯಕ್ರಮವು ಜುಮಾ ಮಸೀದಿ ಕ್ಯಾಂಪಸ್ ನಲ್ಲಿ ಜರುಗಿತು.
ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ
Posted On: 20-09-2022 10:36AM
ಉಡುಪಿ : ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಸೆಪ್ಟಂಬರ್ 21 ರಂದು ಬೈಂದೂರು ಪ್ರವಾಸಿ ಮಂದಿರ, ಸೆ. 22 ರಂದು ಕುಂದಾಪುರ ಪ್ರವಾಸಿ ಮಂದಿರ, ಸೆ. 23 ರಂದು ಹೆಬ್ರಿ ಪ್ರವಾಸಿ ಮಂದಿರ, ಸೆ. 26 ರಂದು ಕಾರ್ಕಳ ಪ್ರವಾಸಿ ಮಂದಿರ, ಸೆ. 27 ರಂದು ಬ್ರಹ್ಮಾವರ ತಾಲೂಕು ಕಚೇರಿ ಆವರಣ ಹಾಗೂ ಸೆ. 28 ರಂದು ಕಾಪು ತಾಲೂಕು ಕಚೇರಿ ಆವರಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಸ್ವೀಕರಿಸಲಾಗುವುದು.
ರೋಟರಿ ಶಂಕರಪುರ : ಇಂಜಿನಿಯರ್ಸ್ ದಿನಾಚರಣೆ
Posted On: 20-09-2022 10:29AM
ಕಾಪು : ರೋಟರಿ ಕ್ಲಬ್ ಶಂಕರಪುರದ ವತಿಯಿಂದ ಇಂಜಿನಿಯರ್ಸ್ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಇಂಜಿನೀಯರ್ ಗಳಾದ ಅಬ್ದುಲ್ ಖಾದರ್ ಹಾಗೂ ಕ್ಯಾರಲ್ ಡಿಸಿಲ್ವರನ್ನು ಸನ್ಮಾನಿಸಲಾಯಿತು.
ಪಡುಬಿದ್ರಿ : ತೆಂಗಿನ ಮರ ಹತ್ತುವವರಿಗೆ ಕೇರಾ ಸುರಕ್ಷಾ ವಿಮೆ ಬಗ್ಗೆ ಮಾಹಿತಿ ಹಾಗೂ ನೋಂದಾವಣೆ ಕಾರ್ಯಕ್ರಮ
Posted On: 19-09-2022 07:53PM
ಪಡುಬಿದ್ರಿ : ಸಂಘಟನೆಯ ಕೊರತೆ ಮತ್ತು ವಿಚಾರಗಳ ಕೊರತೆಯಿಂದ ಕಾರ್ಮಿಕರು ಅಸಂಘಟಿತರಾಗುತ್ತಿದ್ದಾರೆ. ತೆಂಗಿನ ಮರ ಹತ್ತುವವರಿಗೆ ಇದೇ ಸಮಸ್ಯೆಯಾಗಿತ್ತು. ಇದನ್ನು ಗುರುತಿಸಿ ಅವರಿಗೆ ಉಪಯೋಗವಾಗುವ ಕಾರ್ಯವನ್ನು ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಾಣೇಶ್ ಹೆಜಮಾಡಿರವರು ಮಾಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕೇರಾ ಸುರಕ್ಷಾ ವಿಮೆ ಪ್ರಚಲಿತದಲ್ಲಿದೆ. ತಿಂಗಳಿಗೆ ಕೆಲವೊಂದು ತೆಂಗಿನ ಮರ ಹತ್ತುವವರ ಸಾವು ನಾವು ಕಾಣುತ್ತಿದ್ದೇವೆ. ಈ ವಿಮೆ ಅವರ ಕುಟುಂಬವರ್ಗಕ್ಕೆ ಸಹಾಯಕವಾಗಿದೆ. ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ. ಕೇವಲ 99ರೂಪಾಯಿ ನೀಡಿ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ಶಾಶ್ವತ ಅಂಗ ಊನ ಅಥವಾ ಮೂಳೆ ಮುರಿತವಾದವರಿಗೆ ಎರಡುವರೆ ಲಕ್ಷ ಸಿಗುತ್ತದೆ. ಓರಿಯಂಟಲ್ ಬ್ಯಾಂಕ್ ವಿಮೆ ಮತ್ತು ಕೇಂದ್ರ ಸರಕಾರದ ಮೂಲಕ ದೊರೆಯಲಿದೆ. ಸಣ್ಣಪುಟ್ಟ ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಕೊಡುವ ಅವಕಾಶವಿದೆ. ಅವರನ್ನು ಆಸ್ಪತ್ರೆಯಲ್ಲಿ ಆರೈಕೆ ಮಾಡುವವರಿಗೆ ದಿನಕ್ಕೆ 3 ಸಾವಿರದಂತೆ ಒಂದು ವಾರದವರೆಗೆ 18 ಸಾವಿರ ಖರ್ಚು ವೆಚ್ಚ ಭರಿಸುವ ಅವಕಾಶವಾಗಿದೆ. ನೋಂದಾವಣೆಗೆ ಅಕ್ಟೋಬರ್ 31 ಕೊನೆಯ ದಿನವಾಗಿದ್ದು ಆದಷ್ಟು ಬೇಗ ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ ಎಂದು ಉಡುಪಿ ಜಿಲ್ಲಾ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಹೇಮಂತ್ ಕುಮಾರ್ ತಿಳಿಸಿದರು. ಅವರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡುಬಿದ್ರಿ ಹಾಗೂ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 19ರಂದು ಪಡುಬಿದ್ರಿ ಮಾರ್ಕೆಟ್ ರಸ್ತೆಯ ಸಾಯಿ ಆರ್ಕೇಡ್ ಬಿಲ್ಡಿಂಗ್ ನಲ್ಲಿ ಜರಗಿದ ಪಡುಬಿದ್ರಿ, ಫಲಿಮಾರು, ಹಾಗೂ ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ತೆಂಗಿನ ಮರ ಹತ್ತುವವರಿಗೆ ಕೇರ ಸುರಕ್ಷಾ ವಿಮೆ ಬಗ್ಗೆ ಮಾಹಿತಿ ಹಾಗೂ ನೋಂದಾವಣೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಕಾಪು : ಕೈಪುಂಜಾಲು ವಹಿಯುಲ್ಲಾ ದರ್ಗಾದ ಉರುಸ್ ; ಶಾಂತಿ ಸಭೆ
Posted On: 19-09-2022 06:13PM
ಕಾಪು : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮುಂಬರುವ ಸೆಪ್ಟೆಂಬರ್ 21 ರಂದು ಉಳಿಯಾರಗೋಳಿ ಗ್ರಾಮದ ಕೈಪುಂಜಾಲು ವಹಿಯುಲ್ಲಾ ದರ್ಗಾದ (ಕಾಪು ಪೋಲಿಪು ಜಾಮಿಯಾ ಮಸೀದಿಯ ಅಧೀನದಲ್ಲಿರುವ) ಉರುಸ್ ಕಾರ್ಯಕ್ರಮದ ಪ್ರಯುಕ್ತ ಶಾಂತಿ ಸಭೆಯನ್ನು ಪೊಲೀಸ್ ವೃತ್ತ ನಿರೀಕ್ಷಕರು ಕಾಪು ಇವರ ನೇತೃತ್ವದಲ್ಲಿ ನಡೆಸಲಾಯಿತು.
ಮಟ್ಟಾರು : ಹಿಂದೂ ಸಮಾಜೋತ್ಸವದ ಮನವಿ ಪತ್ರ ಬಿಡುಗಡೆ
Posted On: 18-09-2022 10:41PM
ಮಟ್ಟಾರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ಇದರ ನೇತೃತ್ವದಲ್ಲಿ ನವೆಂಬರ್ 27 ರಂದು ನಡೆಯಲಿರುವ ಹಿಂದೂ ಸಮಾಜೋತ್ಸವದ ಮನವಿ ಪತ್ರ ಇಂದು ಬಿಡುಗಡೆ ಮಾಡಲಾಯಿತು.
