Updated News From Kaup

ಕಟಪಾಡಿ : ಈ ಬಾರಿ ಕಾಂತಾರ ಇಫೆಕ್ಟ್ ನಲ್ಲಿ ರಿಕ್ಷಾ ಚಾಲಕ ಜಯಕರ್

Thumbnail
Posted On: 26 Oct 2022, 02:02 PM

ಕಟಪಾಡಿ : ಆಟೋ ಚಾಲಕ ಜಯಕರ್ ಆಯುಧ ಪೂಜೆಯ ಪ್ರಯುಕ್ತ ರಿಕ್ಷಾಕ್ಕೆ ಕಾಂತಾರ ಸಿನಿಮಾ ಶೈಲಿಯಲ್ಲಿ ಸಿಂಗರಿಸಿ ತುಳುನಾಡಿನ ಕಂಬಳ ಮತ್ತು ಕಾಡು ಹಾಗು ಜನರ ನಡುವಿನ ಸಂಬಂಧದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಸುಮಾರು 17 ವರ್ಷಗಳಿಂದ ರಿಕ್ಷಾ ಚಾಲಕನಾಗಿ ದುಡಿದು ತನ್ನ ಜೀವನ ಸಾಗಿಸುತ್ತಿರುವ ಜಯಕರ್ ಹತ್ತು ವರ್ಷಗಳಿಂದ ತನ್ನ ಜೀವನ ಬಂಡಿ ಸಾಗಿಸುವ ರಿಕ್ಷಾಕ್ಕೆ ವಿವಿಧ ರೀತಿಯಲ್ಲಿ ಸಿಂಗರಿಸಿ ದೀಪಾವಳಿಯ ಸಂದರ್ಭ ರಿಕ್ಷಾ ಪೂಜೆಯನ್ನು ಮಾಡುತ್ತಾರೆ. ಕೊರೋನಾ ಸಂದರ್ಭದಲ್ಲಿ ರಿಕ್ಷಾ ಬೆಲೂನ್ ಸಿಂಗರಿಸಿ ಕಟಪಾಡಿ ಪರಿಸರದಲ್ಲಿ ಓಡಾಟ ಮಾಡಿ ಮಕ್ಕಳ ಮನ ಗೆದ್ದಿದ್ದರು. ಈ ಬಾರಿ ರಿಕ್ಷಾವನ್ನು ವಿವಿಧ ಹೂ ಮತ್ತು ಬಳ್ಳಿಗಳಿಂದ ಅಲಂಕರಿಸಿ ಪ್ರಕೃತಿ ಉಳಿಸುವ ಮಾಹಿತಿಯನ್ನು ಜನರಲ್ಲಿ ನೀಡುತ್ತಿದ್ದಾರೆ.

ಕಾಪು : ಬಿಜೆಪಿ‌ ಒಬಿಸಿ ಮೋರ್ಚಾ ವತಿಯಿಂದ ವಾಹನ ಪೂಜಾ ಕಾರ್ಯಕ್ರಮ

Thumbnail
Posted On: 26 Oct 2022, 01:18 PM

ಕಾಪು : ಹೊಸ ಮಾರಿಗುಡಿಯಲ್ಲಿ ಕಾಪು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ವಾಹನ ಪೂಜೆ ಕಾರ್ಯಕ್ರಮವನ್ನು ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಬುಧವಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಬಿಜೆಪಿ ಪಕ್ಷದ ವತಿಯಿಂದ ವಿವಿದೆಡೆಯಲ್ಲಿ ವಾಹನ ಪೂಜಾ, ಗೋ ಪೂಜಾ ಕಾರ್ಯಕ್ರಮಗಳು ನಡೆಯುತ್ತಿದೆ. ಸಮಾಜಮುಖಿ ಚಿಂತನೆಯುಳ್ಳ, ಹಿಂದೂ ಧಾರ್ಮಿಕ ಆಚರಣೆಗಳನ್ನು ಸಂಭ್ರಮದಿಂದ ಇನ್ನಷ್ಟು ಜನರಿಗೆ ತಲುಪಿಸುವ ಕಾರ್ಯ ಆಗುತ್ತಿದೆ. ನವೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಾಪುವಿಗೆ ಭೇಟಿ ನೀಡಲಿದ್ದಾರೆ. ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದರು. ಶ್ರೀಧರ ತಂತ್ರಿ ನೇತೃತ್ವದಲ್ಲಿ ವಾಹನಗಳಿಗೆ ಪೂಜಾ ಕೈಂಕರ್ಯ ನೆರವೇರಿತು. ಈ ಸಂದರ್ಭ ಯಶ್ಪಾಲ್ ಸುವರ್ಣ, ಸಂತೋಷ್ ಕುಮಾರ್ ಮೂಡುಬೆಳ್ಳೆ, ಗೀತಾಂಜಲಿ ಸುವರ್ಣ, ಅನಿಲ್ ಕುಮಾರ್, ರತ್ನಾಕರ ಶೆಟ್ಟಿ, ಶಶಿಪ್ರಭ, ರವಿ ಉದ್ಯಾವರ, ಪ್ರವೀಣ್ ಪೂಜಾರಿ ಕಾಪು, ಸುಮ ಶೆಟ್ಟಿ, ಸರಿತಾ ಪೂಜಾರ್ತಿ, ಉಷ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಶ್ರೀ ಲಕ್ಷ್ಮಿ ಜನಾರ್ಧನ ದೇವಳದಲ್ಲಿ ಸಾರ್ವಜನಿಕ ಗೋಪೂಜೆ, ವಾಹನ ಪೂಜೆ

Thumbnail
Posted On: 26 Oct 2022, 12:45 PM

ಕಾಪು : ಇಲ್ಲಿನ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಸಾರ್ವಜನಿಕ ಗೋಪೂಜೆ ಮತ್ತು ವಾಹನ ಪೂಜೆಯು ಬುಧವಾರ ನೆರವೇರಿತು. ದೇವಳದ ಪ್ರಧಾನ ತಂತ್ರಿ ಶ್ರೀಶ ತಂತ್ರಿ ನೇತೃತ್ವದಲ್ಲಿ ಗೋ ಪೂಜೆ ನೆರವೇರಿತು. ಈ ಸಂಧರ್ಭ ಬೀಡು ಮನೆತನದ ಅನಿಲ್ ಬಳ್ಳಾಲ್, ಕಾರ್ಯನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ, ಆಡಳಿತಾಧಿಕಾರಿ ಗಣೇಶ್ ರಾವ್, ಲೀಲಾಧರ ಶೆಟ್ಟಿ ಕಾಪು, ನಡಿಕೆರೆ ರತ್ನಾಕರ್ ಶೆಟ್ಟಿ, ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯ, ಯೋಗೀಶ್ ಪೂಜಾರಿ, ದಿವಾಕರ್, ಲಕ್ಷ್ಮೀಶ್, ಸಿಬಂದಿ ವರ್ಗ ಉಪಸ್ಥಿತರಿದ್ದರು.

ಕಳತ್ತೂರಿನಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

Thumbnail
Posted On: 25 Oct 2022, 09:10 PM

ಕಾಪು : ಕುಶಲ ಶೇಖರ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಕಳತ್ತೂರು ಶೇಖರ ಬಿ. ಶೆಟ್ಟಿ ನೇತ್ರತ್ವದಲ್ಲಿ ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ,ಅಂಧತ್ವ ನಿವಾರಣ ವಿಭಾಗ ಉಡುಪಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಆದಿತ್ಯವಾರ ಕಳತ್ತೂರಿನ ಕುಶಲ ಶೇಖರ ಶೆಟ್ಟಿ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಿತು. ಶಿಬಿರದ ಉದ್ಘಾಟನೆಯನ್ನು ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ಆಡಳಿತ ನಿರ್ದೇಶಕರಾದ ಡಾ. ಕೃಷ್ಣಪ್ರಸಾದ್ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸುಸಜ್ಜಿತವಾದ ಅಂತರಾಷ್ಟ್ರೀಯ ಮಟ್ಟದ ಚಿಕಿತ್ಸೆಯನ್ನು ಕೊಡಿಸುವುದೇ ನಮ್ಮ ಶಿಬಿರದ ಉದ್ದೇಶವಾಗಿದೆ ಎಂದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಶೇಖರ್ ಬಿ.ಶೆಟ್ಟಿ ಇವರ ಸೇವೆಯನ್ನು ಕೊಂಡಾಡಿದರು. ಮುಖ್ಯ ಅತಿಥಿಯಾಗಿ ಉಡುಪಿಯ ನ್ಯಾಯವಾದಿ ಕುತ್ಯಾರು ಗ್ರಾ.ಪಂ. ಮಾಜಿ ಅಧ್ಯಕ್ಷ ಉಮೇಶ ಶೆಟ್ಟಿ ಕಳತ್ತೂರು ಮಾತನಾಡಿ ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಚಿಕಿತ್ಸೆಯು ಸಿಗಬೇಕು. ಸಮಾಜಕ್ಕೆ ತುಂಬಾ ಉಪಕಾರ ಮಾಡುವ ಉದ್ದೇಶದಿಂದ ಈ ಶಿಬಿರ ನಡೆಸಲಾಗುತ್ತಿದೆ. ಶೇಖರ ಬಿ ಶೆಟ್ಟಿಯವರು ಈ ಭವ್ಯವಾದ ಸಭಾಂಗಣವನ್ನು ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ಮಾಡಿ ಹಲವಾರು ಸಮಾಜ ಸೇವೆ ಮಾಡಿ ಪ್ರಖ್ಯಾತರಾಗಿದ್ದಾರೆ ಎಂದರು. ಈ ಸಂದರ್ಭದಲ್ಲಿ ಪ್ರಖ್ಯಾತ ನೇತ್ರ ತಜ್ಞರಾದ ಡಾ. ಕೃಷ್ಣಪ್ರಸಾದ್ ಇವರನ್ನು ಹಿರಿಯರಾದ ವಾಸು ಶೆಟ್ಟಿ ಇವರು ಅಭಿನಂದಿಸಿ ಗೌರವಿಸಿದರು. ಸಭಾಧ್ಯಕ್ಷತೆಯನ್ನು ಶೇಖರ ಬಿ. ಶೆಟ್ಟಿ ವಹಿಸಿದರು. ಮುಖ್ಯ ಅತಿಥಿಯಾಗಿ ಜನ ಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷ ದಿವಾಕರ ಬಿ.ಶೆಟ್ಟಿ ಕಳತೂರು, ಸಮಾಜ ಸೇವಾ ವೇದಿಕೆ ಅಧ್ಯಕ್ಷ ಉದ್ಯಮಿ ಮೊಹಮ್ಮದ್ ಫಾರೂಕ್ ಚಂದ್ರನಗರ, ಕಳತ್ತೂರು ರಾಘವೇಂದ್ರ ಭಟ್, ಜಯಲಕ್ಷ್ಮಿ ಆಳ್ವ ಪಾದೂರು ಗುತ್ತು, ಹಿರಿಯರಾದ ವಾಸು ಶೆಟ್ಟಿ ಕಳತೂರು, ಡಾ. ಅಕ್ಷತಾ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ ಕುಮಾರ್ ಹೆಗ್ಡೆ ನಿರೂಪಿಸಿದರು. ಸಮಾಜ ಸೇವಾ ವೇದಿಕೆ ಸಂಚಾಲಕ ದಿವಾಕರ ಡಿ ಶೆಟ್ಟಿ ವಂದಿಸಿದರು.

ಶಿರ್ವದ ಕಡಂಬುವಿನಲ್ಲಿ ರಾರಾಜಿಸುತ್ತಿದೆ ಕೆ ಕೆ ಫ್ರೆಂಡ್ಸ್ ರಚಿಸಿದ ಬೃಹತ್ ಗೂಡುದೀಪ

Thumbnail
Posted On: 25 Oct 2022, 08:59 PM

ಶಿರ್ವ : ಕೆ ಕೆ ಫ್ರೆಂಡ್ಸ್ ಕಡಂಬು ಇದರ ವತಿಯಿಂದ ದೀಪಾವಳಿಯ ಪ್ರಯುಕ್ತ ಕಡಂಬು ಮೈದಾನದಲ್ಲಿ ಸೋಮವಾರ ಬೃಹತ್ ಗೂಡುದೀಪ ಅಳವಡಿಸಿ ದೀಪಾವಳಿ ಆಚರಿಸಲಾಯಿತು. ಸುಮಾರು 9 ಫೀಟ್ ಎತ್ತರ ಮತ್ತು 5 ಫೀಟ್ ಅಗಲದ ಗೂಡುದೀಪ ಜೊತೆಗೆ ವಿದ್ಯುತ್ ದೀಪದ ಮೆರುಗು ಕಡಂಬು ಮೈದಾನದಲ್ಲಿ ರಾರಾಜಿಸುತ್ತಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಕೆ ಕೆ ಫ್ರೆಂಡ್ಸ್ ನ ಸದಸ್ಯರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪಡುಬಿದ್ರಿ : ಕೊರಗಜ್ಜ ಕ್ಷೇತ್ರದ ಜೀರ್ಣೋದ್ಧಾರದ ನೀಲ ನಕ್ಷೆ, ವಿಜ್ಞಾಪನಾ ಪತ್ರ ಬಿಡುಗಡೆ

Thumbnail
Posted On: 24 Oct 2022, 06:10 PM

ಪಡುಬಿದ್ರಿ : ಪ್ರೇರಣೆಯಿಲ್ಲದೆ ಯಾವುದೇ ಕಾರ್ಯ ನಡೆಯದು. ಅದು ವಿಜ್ಞಾಪನ ಪತ್ರದ ಮೂಲಕ ಈ ಸಮಾಜಕ್ಕೆ ತಲುಪಲಿದೆ. ಸಂಕಲ್ಪವು ಮಹಾ ಸಂಕಲ್ಪವಾಗಿ ಮೂಡಿದಾಗ ಸಂಪತ್ತು ಕ್ರೋಢೀಕರಣ ಸಾಧ್ಯ. ಮನುಷ್ಯ ಪ್ರಯತ್ನ ಜತೆಗೆ ದೈವಾನುಗ್ರಹ ಇದ್ದರೆ ಕಾರ್ಯ ಸಾಧ್ಯ. ಈ ಸಾನಿಧ್ಯದ ಸಂಕಲ್ಪ ಮಹಾ ಸಂಕಲ್ಪವಾಗಿ ಜೀರ್ಣೋದ್ಧಾರವಾಗಲಿ ಎಂದು ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಹೇಳಿದರು. ಅವರು ಕಾಪು ತಾಲೂಕಿನ ಸಾವಿರಾರು ವರ್ಷಗಳ ಇತಿಹಾಸವಿರುವ ಪಡುಬಿದ್ರಿಯ ಶ್ರೀ ಆದಿಶಕ್ತಿ ಆದಿ ಮಾಯೆ ಅಣ್ಣಪ್ಪ ಪಂಜುರ್ಲಿ ಮಂತ್ರ ದೇವತೆ ಹಾಗೂ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಅಕ್ಟೋಬರ್ 22ರಂದು ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಗಣ್ಯರ ಸಮ್ಮುಖ ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಜೀರ್ಣೋದ್ದಾರದ ನೀಲನಕ್ಷೆ ಮತ್ತು ವಿಜ್ಞಾಪನ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ, ಕ್ಷೇತ್ರದ ಧರ್ಮದರ್ಶಿಗಳಾದ ಸುಧಾಕರ ಮಡಿವಾಳ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ ಶೆಟ್ಟಿ, ದೇವಿ ಪ್ರಸಾದ್ ಶೆಟ್ಟಿ ಬೆಳಪು, ಕಿಶೋರ್ ಶೆಟ್ಟಿ, ಕಂಚನ್ ರಮೇಶ್ ಕಾಂಚನ್, ಸದಾನಂದ ಸಾಲಿಯಾನ್, ಶ್ರೀಕರ್ ಶೆಟ್ಟಿ ಕಾಪು, ಪ್ರಕಾಶ್ ಶೆಟ್ಟಿ ಪಡುಹಿತ್ಲು, ವಿನೋದ್ ಶೆಟ್ಟಿ, ಮಮತಾ ಪಿ ಶೆಟ್ಟಿ, ನೀತಾ ಪ್ರಭು, ಶ್ಯಾಮಲ ಕುಂದರ್, ನಿತಿನ್ ಪೂಜಾರಿ, ದಿನೇಶ್ ಶೆಟ್ಟಿ ಕಾಪು ಕಲ್ಯ, ಕರಿಯ ಶೆಟ್ಟಿ ಉಪಸ್ಥಿತರಿದ್ದರು. ಅಮೃತಾ ಹಾಗು ಯಶೋಧ ಪ್ರಾರ್ಥಿಸಿದರು. ಪ್ರಕಾಶ್ ಶೆಟ್ಟಿ ಪಡುಹಿತ್ಲು ಸ್ವಾಗತಿಸಿದರು. ಸದಾನಂದ ಸಾಲ್ಯಾನ್ ಕೆರ್ವಾಶೆ ಪ್ರಸ್ತಾವನೆಗೈದರು. ಪ್ರೀತಿ ಕಲ್ಯಾಣಪುರ ಕಾರ್ಯಕ್ರಮ ಸಂಯೋಜಿಸಿ, ಸ್ವಾತಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ದಿನೇಶ್ ಶೆಟ್ಟಿ ಕಾಪು ಕಲ್ಯ ವಂದಿಸಿದರು.

ಹೆಜಮಾಡಿ : 4 ಕೋಟಿ ರೂ ಅನುದಾನದ ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಗುದ್ದಲಿ ಪೂಜೆ

Thumbnail
Posted On: 24 Oct 2022, 03:59 PM

ಹೆಜಮಾಡಿ : ಇಲ್ಲಿನ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 4 ಕೋಟಿ ರೂ.ಗಳ ವಿವಿಧ ಕಾಮಗಾರಿಗಳಿಗೆ ಶಾಸಕರಾದ ಲಾಲಾಜಿ ಆರ್ ಮೆಂಡನ್ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 9 ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದ್ದು. ಬಿಜೆಪಿ ನೇತೃತ್ವದ ಹೆಜಮಾಡಿ ಗ್ರಾಮ ಪಂಚಾಯತ್ ಉತ್ತಮವಾಗಿ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದು ಪಂಚಾಯತ್ ಸದಸ್ಯರು ಜನರೊಂದಿಗೆ ನಿಕಟಸಂಪರ್ಕ ಹೊಂದಿದ್ದು ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು ರಸ್ತೆ ಹಾಗೂ ಇನ್ನುಳಿದ ಕಾಮಗಾರಿಗಳ ಅಭಿವೃದ್ಧಿಗೆ ಈಗಾಗಲೇ 11 ಕೋಟಿ 61 ಲಕ್ಷ ಅನುದಾನ ಹಾಗೂ ಈ ಭಾಗದಲ್ಲಿ ಕರಾವಳಿ ಮೀನುಗಾರರ ಕನಸಾಗಿದ್ದ ಹೆಜಮಾಡಿ ಬಂದರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳೀಯರ ಸಹಕಾರದೊಂದಿಗೆ ಉತ್ತಮ ರೀತಿಯಲ್ಲಿ ಕೆಲಸ ಕಾರ್ಯ ಮಾಡಲಾಗುವುದು ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಾಂಡುರಂಗ ಕರ್ಕೇರ, ಉಪಾಧ್ಯಕ್ಷೆ ಪವಿತ್ರ ಗಿರೀಶ್, ಗ್ರಾಮ ಪಂಚಾಯತ್ ಸದಸ್ಯರಾದ ಶರಣ್ ಹೆಜಮಾಡಿ, ಪ್ರಾಣೇಶ್ ಹೆಜಮಾಡಿ, ಲಿಲೇಶ್ ಸುವರ್ಣ, ಶಿವಕುಮಾರ್, ರೇಷ್ಮಾ ಮೆಂಡನ್, ಪ್ರಸಾದ್ ಹೆಜಮಾಡಿ, ರೋಷನ್, ವಸಂತಿ ವಿನೋದ್, ಸುಜಾತಾ, ನಳಿನಿ ಸುವರ್ಣ ಹಾಗೂ ಸ್ಥಳೀಯ ಮುಖಂಡರಾದ ಸುಧಾಕರ್ ಕರ್ಕೇರ, ನಿತಿನ್ ಕೋಡಿ, ಅನಿಲ್ ಕುಂದರ್, ಕೀರ್ತನ್, ದೇವಕಿ, ಸಚಿನ್ ನಾಯಕ್, ಚಂದ್ರಹಾಸ ನಡಿಕುದ್ರು, ರಘುವಿರ ಸುವರ್ಣ, ಸತೀಶ್ ಕೋಟ್ಯಾನ್, ರವಿ ಕುಂದರ್, ಸುಕೇಶ್ ಸಾಲ್ಯಾನ್, ಸಂದೀಪ್ ಸುವರ್ಣ, ನೂತನ ಪುತ್ರನ್, ಸದಾನಂದ ಬೂಚಿಹಿತ್ಲು, ವಾಮನ ಕೋಟ್ಯಾನ್, ಹೆಚ್. ವಿ ಕೋಟ್ಯಾನ್, ಉಮೇಶ್ ಕೋಟ್ಯಾನ್, ನಿರಂಜನ್ ಪೂಜಾರಿ, ನವೀನ್ ಸಾಲ್ಯಾನ್ ನಡಿಕುದ್ರು ಹಾಗೂ ಇಲಾಖೆ ಅಧಿಕಾರಿಗಳು, ಗುತ್ತಿಗೆದಾರರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಬಂಟಕಲ್ಲು: ಶಿಕ್ಷಕಿ ಸಂಗೀತ ಪಾಟ್ಕರ್ ರವರಿಗೆ ಅಂತರಾಷ್ಟ್ರೀಯ ರೋಟರಿಯಿಂದ ನೇಷನ್ ಬಿಲ್ಡರ್ ಪ್ರಶಸ್ತಿ

Thumbnail
Posted On: 24 Oct 2022, 03:33 PM

ಬಂಟಕಲ್ಲು : ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ಹಿರಿಯ ಪ್ರಾರ್ಥಮಿಕ ಶಾಲೆಯ ಗೌರವ ಶಿಕ್ಷಕಿ ಸಂಗೀತ ಪಾಟ್ಕರ್ ರವರಿಗೆ ಅಂತರಾಷ್ಟ್ರಿಯ ರೋಟರಿಯು, ಶಿಕ್ಷಕ ವೃತ್ತಿಯಲ್ಲಿರುವ ಆಯ್ದ ಶಿಕ್ಷಕರಿಗೆ ಕೊಡಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿಯನ್ನು ನೀಡಲಾಯಿತು. ಉಡುಪಿ ಕಿದಿಯೂರು ಹೋಟೆಲ್ ನಲ್ಲಿ ರೋಟರಿ ಜಿಲ್ಲೆ ಹಾಗೂ ರೋಟರಿ ಜಿಲ್ಲಾ ಸಾಕ್ಷರತಾ ಸಮಿತಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೊಸ ಶಿಕ್ಷಣ ನೀತಿ ಕಾರ್ಯಗಾರ ಸಮಾರಂಭದಲ್ಲಿ ರೋಟರಿ ಜಿಲ್ಲಾ ಗವರ್ನರ್, ರೊ. ಡಾ. ಜಯಗೌರಿಯವರು ಪ್ರಧಾನ ಮಾಡಿದರು. ಶಿರ್ವ ರೋಟರಿ ಸಂಸ್ಥೆಯ ಶಿಫಾರಸಿನೊಂದಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಸಂಗೀತ ಪಾಟ್ಕರ್ ರವರು 23 ವರುಷಗಳಿಂದ ಬಂಟಕಲ್ಲು ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ಥ ಇವರು ಈ ಶೈಕ್ಷಣಿಕ ವರ್ಷದಿಂದ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಶಿರ್ವ ಗ್ರಾಮ ಪಂಚಾಯತ್ ಸದಸ್ಯ ಕೆ ಆರ್ ಪಾಟ್ಕರ್ ರವರ ಪತ್ನಿ.

ಕಟಪಾಡಿ : ಏಣಗುಡ್ಡೆಯಲ್ಲಿ ಮುಳ್ಳಮುಟ್ಟೆ ಆಚರಣೆ

Thumbnail
Posted On: 24 Oct 2022, 03:27 PM

ಕಟಪಾಡಿ : ಕಾಪು ತಾಲೂಕಿನ ಕಟಪಾಡಿಯ ಏಣಗುಡ್ಡೆಯ ನೀಚ ದೈವಸ್ಥಾನದ ಬಳಿ ದೀಪಾವಳಿಯಂದು ಪ್ರಾತ: ಕಾಲ ಮುಳ್ಳಮುಟ್ಟೆ ಸುಡುವ ಕಾರ್ಯಕ್ರಮ ಜರಗಿತು. ಈ ಸಂದರ್ಭ ಮಾತನಾಡಿದ ಹಿರಿಯರಾದ ಕಟಪಾಡಿ ಶಂಕರ ಪೂಜಾರಿ ನಮ್ಮ ಪೂರ್ವಜರ ಕಾಲದಿಂದಲೂ ದೀಪಾವಳಿಯಂದು ಪ್ರಾತಃಕಾಲದಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರಲಾಗುತ್ತಿದ್ದ ಮುಳ್ಳಮುಟ್ಟೆ ಸುಡುವ ಆಚರಣೆ ಇಂದಿಗೂ ಪ್ರಸ್ತುತ. ತುಳುನಾಡಿನ ಹಬ್ಬಗಳು, ಆಚರಣಾ ಪದ್ಧತಿ, ಕಟ್ಟು ಕಟ್ಟಳೆಗಳು, ಸಂಪ್ರದಾಯಗಳು, ನಂಬಿಕೆ ನಡವಳಿಕೆಗಳ ಗಟ್ಟಿತನ ಇಂದಿಗೂ ಪ್ರಸ್ತುತ ಎಂದು ಹೇಳಿದರು. ಈ ಸಂದರ್ಭ ದೈವಸ್ಥಾನದ ಮುಖ್ಯಸ್ಥರಾದ ಆನಂದ ಮಾಬಿಯಾನ್, ಕೂಡುಕಟ್ಟಿನ ಗುರಿಕಾರರಾದ ದಾಮೋದರ ಪೂಜಾರಿ, ಸೂರಪ್ಪ ಕುಂದರ್, ಜಯ ಪೂಜಾರಿ, ವಿನೋಧ ಪೂಜಾರಿ, ಅರ್ಚಕ ರಮೇಶ್ ಕೋಟ್ಯಾನ್ ಪ್ರಮುಖರಾದ ಮಂಜುನಾಥ, ರಾಜೇಂದ್ರ ಆಚಾರ್ಯ, ಸಿದ್ಧಾಂತ್, ರಜತ್, ವಿಘ್ನೇಶ್, ಕಿಶೋರ್ ಮೊದಲಾದವರು ಉಪಸ್ಥಿತರಿದ್ದರು.

ಕಾಪು : ಕಾಂಗ್ರೆಸ್ ವತಿಯಿಂದ ತುಡರ ಪರ್ಬದ ಗಮ್ಮತ್ ; ಸನ್ಮಾನ ; ಅನಾಥಾಶ್ರಮಗಳಿಗೆ ಉಡುಪು ವಿತರಣೆ

Thumbnail
Posted On: 24 Oct 2022, 03:03 PM

ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್‌ ಸಮಿತಿ (ದಕ್ಷಿಣ) ವಿನಯ ಕುಮಾರ್ ಸೊರಕೆ ಉಪಸ್ಥಿತಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ತುಡರ ಪರ್ಬದ ಗಮ್ಮತ್ 2022 ಇದರ ಅಂಗವಾಗಿ ಸೋಮವಾರ ರಾಜೀವ್ ಭವನ, ಕಾಪು ಇಲ್ಲಿ ವಿವಿಧ ಸಮುದಾಯಗಳ ಅನಾಥರಿಗೆ,ನಿರಾಶ್ರಿತರಿಗೆ ಉಡುಪುಗಳನ್ನು, ಸಿಹಿ ತಿಂಡಿ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಮೋಹನ್ ನಂಬಿಯಾರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಹಿಂದೂ, ಮುಸ್ಲಿಂ, ಕ್ರೈಸ್ತರು ಎಲ್ಲರೂ ಒಂದೇ. ಎಲ್ಲರ ಮನಸ್ಸಿನಲ್ಲಿ ನಾವೆಲ್ಲ ಒಂದೇ ಎಂಬ ಸಂದೇಶ ಹುಟ್ಟಿ ಎಲ್ಲಾ ಕಡೆ ಪಸರಿಸಬೇಕಿದೆ ಎಂದರು. ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಮಾತನಾಡಿ, ದೀಪಾವಳಿ ಬೆಳಕಿನ ಹಬ್ಬ. ಪ್ರತಿ ಹಬ್ಬವು ಉತ್ತಮ ಸಂದೇಶ ನೀಡುತ್ತದೆ. ಕಾಂಗ್ರೆಸ್ ಪಕ್ಷವು ಎಲ್ಲಾ ಧರ್ಮಿಯರನ್ನು ಸಮಾನವಾಗಿ ಕಾಣುವ ಪಕ್ಷವಾಗಿದೆ. ಕಾಂಗ್ರೆಸ್ ಕಚೇರಿಯು ಪವಿತ್ರವಾದ ಸ್ಥಳ. ಇಲ್ಲಿ ಎಲ್ಲರಿಗೂ ಸಮಾನವಾದ ಸ್ಥಾನ ನೀಡುತ್ತಿದೆ. ದೀಪಾವಳಿ ಕತ್ತಲನ್ನು ಕಳೆದು ಬೆಳಕ ನೀಡುವ ಹಬ್ಬ. ದ್ವೇಷ ಕಡಿಮೆಯಾಗಿ ಪ್ರೀತಿ ಹೆಚ್ಚಾಗಲಿ ಎಂದು ಹಾರೈಸಿದರು. ಸನ್ಮಾನ : ಮಲ್ಲಾರು ಆಶ್ರಮದ ಮಹಮ್ಮದ್ ಶಫಿ ಮದನಿ, ಕಟಪಾಡಿ ಕಾರುಣ್ಯ ಆಶ್ರಮದ ಕುಮಾರ್ ಪಾಂಗಾಳ ಆಸರೆ ಹಿರಿಯರ ವಸತಿ ಧಾಮದ ಬೆನ್ವಿನ್ ಪಾಂಗಾಳ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನವೀನ್ ಚಂದ್ರ ಸುವರ್ಣ, ದೀಪಕ್ ಎರ್ಮಾಳ್, ಶಾಂತಲತ ಶೆಟ್ಟಿ, ಶೇಖರ್ ಹೆಜ್ಮಾಡಿ, ನವೀನ್ ಶೆಟ್ಟಿ, ಹರೀಶ್ ನಾಯಕ್, ಗಣೇಶ್ ಕೋಟ್ಯಾನ್,ರಮೀಝ್ ಹುಸೇನ್, ಸಾದಿಕ್, ಸುಚರಿತ, ಜ್ಯೋತಿ ಮೆನನ್, ಶರ್ಫುದ್ದೀನ್, ಅಬ್ದುಲ್ ರೆಹಮಾನ್, ಲಕ್ಷ್ಮೀಶ್ ತಂತ್ರಿ, ಮಧ್ವರಾಜ್, ಆಶಾ ಕಟಪಾಡಿ, ಅಶ್ವಿನಿ ಬಂಗೇರ, ಸುಧೀರ್ ಕರ್ಕೇರ, ಯಶವಂತ್ ಪಲಿಮಾರು, ದೀಪ್ತಿ ಮನೋಜ್, ಉಸ್ಮಾನ್ ಕೊಪ್ಪಲಂಗಡಿ ಮತ್ತಿತರರು ಉಪಸ್ಥಿತರಿದ್ದರು. ದೀಪಕ್ ಎರ್ಮಾಳು ಸ್ವಾಗತಿಸಿದರು. ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು.