Updated News From Kaup

ಕಾಪು ಶ್ರೀ ಹೊಸ ಮಾರಿಗುಡಿಗೆ ‌ದ.ಕ ಜಿಲ್ಲಾ ನ್ಯಾಯಾಧೀಶರ ಭೇಟಿ

Posted On: 13-04-2025 02:36PM

ಕಾಪು : ದ.ಕ ಜಿಲ್ಲಾ ನ್ಯಾಯದೀಶರಾದ ಮಲ್ಲಿಕಾರ್ಜುನ ಸ್ವಾಮಿಯವರು ಭಾನುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕುಟುಂಬ ವರ್ಗದೊಂದಿಗೆ ಭೇಟಿ ನೀಡಿದರು.

ಹೊಸ ರಸಗೊಬ್ಬರ, ರಾಸಾಯನಿಕ ಕಾರ್ಖಾನೆಯ ಸ್ಥಾಪನೆಗೆ ಸಾಮಾಜಿಕ ಕಾರ್ಯಕರ್ತ ಕಾಪು ಜಯರಾಮ ಆಚಾರ್ಯ ಒತ್ತಾಯ

Posted On: 13-04-2025 02:30PM

ಉಡುಪಿ : ಉಡುಪಿ ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ರಾಸಾಯನಿಕ ಕಾರ್ಖಾನೆಯ ಸ್ಥಾಪನೆ ಕುರಿತಂತೆ ಸಾಮಾಜಿಕ ‌ಕಾರ್ಯಕರ್ತ ಕಾಪು ಜಯರಾಮ ಆಚಾರ್ಯ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಪತ್ರಮುಖೇನ ಒತ್ತಾಯಿಸಿದ್ದಾರೆ.

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ಹೊಂಗಿರಣ ಯೋಜನೆಗೆ ಅರ್ಜಿ ಆಹ್ವಾನ

Posted On: 12-04-2025 05:57PM

ಉಡುಪಿ : ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ ಯೋಜನೆಯನ್ನು ರೂಪಿಸುತ್ತಿದೆ.

ಶಿರ್ವ : ಚಿಣ್ಣರು-2025 ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ

Posted On: 11-04-2025 01:11PM

ಶಿರ್ವ : ಶಿರ್ವ ಮಹಿಳಾ ಮಂಡಲದ ವತಿಯಿಂದ ಮಹಿಳಾ ಸೌಧದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ ಮೂರು ದಿನಗಳ "ಚಿಣ್ಣರು-2025" ಉಚಿತ ಬೇಸಿಗೆ ಶಿಬಿರವನ್ನು ಗುರುವಾರ ಶಿರ್ವದ ಉದ್ಯಮಿ ಹಾಗೂ ಸಮಾಜಸೇವಕರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಇವರು ದೀಪ ಪ್ರಜ್ವಲನದ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣ ಹಾಗೂ ವ್ಯಕ್ತಿತ್ವದ ವಿಕಸನಕ್ಕೆ ಇಂತಹ ಶಿಬಿರಗಳು ಸ್ಪೂರ್ತಿಯನ್ನು ನೀಡುತ್ತವೆ. ಶಿರ್ವ ಮಹಿಳಾ ಮಂಡಲ ಹಲವು ದಶಕಗಳಿಂದ ಈ ಪರಿಸರದಲ್ಲಿ ಸಂಘಟನೆಯ ಜೊತೆಗೆ ಅತ್ಯುತ್ತಮ ಸಮಾಜಮುಖಿ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.

ಇಂದಿನಿಂದ(ಎ.11) ಕನ್ನಂಗಾರ್ ಉರೂಸ್

Posted On: 11-04-2025 12:47PM

ಕಾಪು : ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ನಂಗಾರ್ ಜುಮ್ಮಾ ಮಸೀದಿಯ ಮುಂಭಾಗದಲ್ಲಿರುವ ಶೈಖುನಾ ಸಿರಾಜುದ್ದೀನ್ ವಲಿಯುಲ್ಲಾಹಿ (ಖ.ಸಿ) ದರ್ಗಾ ಶರೀಫ್ನಲ್ಲಿ ಮೂರು ವರ್ಷಗಳಿಗೊಮ್ಮೆ ನಡೆಯುವ ಕನ್ನಂಗಾರ್ ಉರೂಸ್ ಸಮಾರಂಭವು ಎ. 11ರಿಂದ 19ರವರೆಗೆ ನಡೆಯಲಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಹಾಜಿ ಗುಲಾಂ ಮುಹಮ್ಮದ್ ಹೆಜಮಾಡಿ ತಿಳಿಸಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಉರೂಸ್ ಸಮಾರಂಭಕ್ಕೆ ಜಿಲ್ಲೆ ಮಾತ್ರವಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ಮುಸ್ಲಿಮರು ಮಾತ್ರವಲ್ಲದೆ ಹಿಂದೂ ಹಾಗೂ ಕ್ರಿಶ್ಚಿಯನ್ ಬಾಂಧವರು ಭಾಗವಹಿಸುತ್ತಾರೆ. ಇದೊಂದು ಸೌಹಾರ್ದತೆಯ ಕೇಂದ್ರವೂ ಆಗಿದೆ.

ಸ.ಪ.ಪೂ.ಕಾಲೇಜು ಪಲಿಮಾರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Posted On: 08-04-2025 04:26PM

ಪಲಿಮಾರು : ಮಾ.1 ರಿಂದ 20 ರವರೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಸ.ಪ.ಪೂ.ಕಾಲೇಜು ಪಲಿಮಾರು ಶೇ.100 ಫಲಿತಾಂಶ ದಾಖಲಿಸಿದೆ. ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಹಾಜರಾದ ಒಟ್ಟು 17 ವಿದ್ಯಾರ್ಥಿಗಳಲ್ಲಿ 4 ಮಂದಿ ವಿಶಿಷ್ಟ ಶ್ರೇಣಿ, 10 ಮಂದಿ ಪ್ರಥಮ ಶ್ರೇಣಿ, 03 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೆಶ್ವರೀ ದೇವಳದ 84ನೇ ಪ್ರತಿಷ್ಠಾ ವರ್ಧಂತೋತ್ಸವ ಸಂಪನ್ನ

Posted On: 08-04-2025 11:20AM

ಶಿರ್ವ : ಶ್ರೀ ಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೆಶ್ವರೀ ದೇವಳದ 84ನೇ ಪ್ರತಿಷ್ಠಾ ವರ್ಧಂತ್ಯೋತ್ಸವ ಸೋಮವಾರ ಸಂಪನ್ನಗೊಂಡಿತು. ಕ್ಷೇತ್ರದ ಪ್ರಧಾನ ವೈದಿಕರಾದ ವೇ.ಮೂ.ಸಂದೇಶ್ ಭಟ್ ನೇತೃತ್ವದಲ್ಲಿ ಸಹವೈದಿಕರ ಸಹಭಾಗಿತ್ವದಲ್ಲಿ ಪೂರ್ವಾಹ್ನ ವಿವಿಧ ಧಾರ್ಮಿಕ ಅನುಷ್ಠಾನಗಳು,ಮಹಾಗಣಪತಿ ಹೋಮ, ಪ್ರಧಾನಹೋಮ, ನವಕ ಕಲಶಾಭಿಷೇಕ, ಪರಿವಾರ ಸಾನಿಧ್ಯಗಳ ಆರಾಧನೆ, ಮಹಾಪೂಜೆ, ಶ್ರೀದೇವಿಯ ಪಲ್ಲಕಿ ಉತ್ಸವ, ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ, ಅಪರಾಹ್ನ ಶ್ರೀದುರ್ಗಾ ಯಕ್ಷಬಳಗದ ಸದಸ್ಯರಿಂದ ಯಕ್ಷಗಾನ ಬಯಲಾಟ, ಸಂಜೆ ಭಜನೆ, ರಾತ್ರಿ ರಂಗಪೂಜೆ, ರಥೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗದ ವತಿಯಿಂದ ಸ್ವಚ್ಛತಾ ಕಾರ್ಯ

Posted On: 07-04-2025 01:56PM

ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ ಮತ್ತು ಮಹಿಳಾ ಬಳಗ ಶಿರ್ವ ಇದರ ವತಿಯಿಂದ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ನೇಮೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.

ಹೆಜಮಾಡಿ ತೆನ್ನಯಜಾರು ತೋಟ ಪೂವಪ್ಪ ಕೋಟ್ಯಾನ್ ನಿಧನ

Posted On: 04-04-2025 02:24PM

ಹೆಜಮಾಡಿ : ಹೆಜಮಾಡಿ ತೆನ್ನಯ್ಯ ಜಾರು ತೋಟ ನಿವಾಸಿ, ಪ್ರಗತಿಪರ ಕೃಷಿಕ ಪೂವಪ್ಪ ಕೋಟ್ಯಾನ್ (93) ಅಸೌಖ್ಯದಿಂದ ಏ.3ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಕಾಪು ಶ್ರೀ ಹೊಸ ಮಾರಿಗುಡಿಗೆ ವಾಟಾಳ್ ನಾಗರಾಜ್ ಭೇಟಿ

Posted On: 04-04-2025 10:21AM

ಕಾಪು : ಕರ್ನಾಟಕ ವಿಧಾನಸಭೆಯ ಮಾಜಿ ಸದಸ್ಯ, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಗುರುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ದರುಶನ ಪಡೆದು ಅಮ್ಮನ ಪ್ರಸಾದವನ್ನು ಸ್ವೀಕರಿಸಿದರು.