Updated News From Kaup
ಪಡುಬಿದ್ರಿ : ಕಂಚಿನಡ್ಕದಲ್ಲಿ ಪ್ರಥಮ ಬಾರಿಗೆ ಸಾಮೂಹಿಕ ಗೋಪೂಜೆ ; ಗೌರವಾರ್ಪಣೆ
Posted On: 26 Oct 2022, 09:28 PM
ಪಡುಬಿದ್ರಿ : ದೀಪಾವಳಿಯ ಪ್ರಯುಕ್ತ ಕಂಚಿನಡ್ಕದ ಹಿಂದೂ ಬಾಂಧವರ ನೇತೃತ್ವದಲ್ಲಿ ಸಾಮೂಹಿಕ ಗೋಪೂಜೆ, ಗೋಸಾಕುವ ಕುಟುಂಬಕ್ಕೆ ಗೌರವಾರ್ಪಣೆ ಕಾರ್ಯಕ್ರಮ ಬುಧವಾರ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಭಾರತಮಾತೆಗೆ ಪೂಜೆ ನಡೆಸಿ ಚಾಲನೆ ನೀಡಿದರು. ಮಾತೆಯರಿಂದ ಗೋಪೂಜೆ ನಡೆಸಿ, ಗೋಸಾಕುವ ಕುಟುಂಬಕ್ಕೆ ಗೌರವಪೂರ್ವಕವಾಗಿ ಸನ್ಮಾನಿಸಿ, ಗೋ ಆಹಾರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ಮಿಥುನ್.ಆರ್.ಹೆಗ್ಡೆ, ಕಾಪು ಮಂಡಲ ವಿಹಿಂಪ ಮುಖಂಡರಾದ ರಾಜೇಂದ್ರ ಶೆಣೈ, ಹಿಂದು ಜಾಗರಣಾ ವೇದಿಕೆ ಮುಖಂಡ ಪ್ರತೀಕ್ ಕೋಟ್ಯಾನ್, ಹಿಂದೂ ಮುಖಂಡರಾದ ಸಂದೇಶ್ ಶೆಟ್ಟಿ, ಸುಹಾಸ್ ಶೆಟ್ಟಿ, ಲೊಕೇಶ್ ಪಲಿಮಾರು, ಮೋಹನ್ ಪಣಿಯೂರು, ಸುಬ್ಬ ಕಂಚಿನಡ್ಕ, ಮೊನಪ್ಪ, ಸುಂದರ್, ಸುಗುಣಾ, ಶಾಂತ, ಚಿಕ್ಕ್ಯಕ್ಕ ಮೊದಲಾದವರು ಉಪಸ್ಥಿತರಿದ್ದರು.
ಪಲಿಮಾರು : ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ನೇತೃತ್ವದಲ್ಲಿ ಸಾಮೂಹಿಕ ಗೋಪೂಜಾ ಕಾರ್ಯಕ್ರಮ
Posted On: 26 Oct 2022, 08:46 PM
ಪಲಿಮಾರು : ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಪಲಿಮಾರು ಇದರ ನೇತೃತ್ವದಲ್ಲಿ ದಿನಾಂಕ ಬುಧವಾರದಂದು ಭಾರತಮಾತೆಗೆ ಪುಷ್ಪಾರ್ಚನೆಯನ್ನೂ ಸಲ್ಲಿಸಿ, ಸಾಮೂಹಿಕ ಗೋಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಿಂಚಿತ್ತು ಸೇವೆ ಮಾಡುವ ಉದ್ದೇಶದಿಂದ, ದೇಣಿಗೆಯನ್ನು ಸಂಗ್ರಹಿಸಲು ಕಾಣಿಕೆ ಡಬ್ಬಿಯನ್ನು ನೀಡಲಾಯಿತು. ಪಲಿಮಾರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗಾಯತ್ರಿ ಡಿ ಪ್ರಭು ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಗೋರಕ್ಷಕ ಪ್ರಮುಖರಾದ ಸಂದೇಶ್ ಶೆಟ್ಟಿ ಪಾದೆಬೆಟ್ಟು, ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಲೋಕೇಶ್ ಪಲಿಮಾರು, ಭಗವತಿ ಗ್ರೂಪ್ ಇದರ ಪ್ರಮುಖರಾದ ಯುವರಾಜ್ ಕುಲಾಲ್ ಪಡುಬಿದ್ರಿ, ಹಾಗೂ ಶ್ರೀದೇವಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರು, ಹಾಗೂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಪು : ಕಡಲ ಕಿನಾರೆಯಲ್ಲಿ ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ನಡೆದ ಗೂಡುದೀಪ ಸ್ಪರ್ಧೆ ; ಬಹುಮಾನ ವಿತರಣೆ
Posted On: 26 Oct 2022, 08:25 PM
ಕಾಪು : ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ರವಿವಾರ ಕಾಪು ಬೀಚ್ ನಲ್ಲಿ ಗೂಡುದೀಪ ಸ್ಪರ್ಧೆಯು ನಡೆಯಿತು. ಈ ಸಂದರ್ಭ ಮಾತಾಡಿದ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಸಾಂಪ್ರದಾಯಿಕತೆಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸ್ಪರ್ಧೆಗಳು ಅನಿವಾರ್ಯ. ಶಂಕರ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ ಎಂದರು. ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ಟ್ರಸ್ಟಿ ಶ್ರೀಶ ನಾಯಕ್ ಮಾತನಾಡಿ ಪ್ರತಿವರ್ಷ ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ನಮ್ಮ ಟ್ರಸ್ಟ್ ತಂದೆಯ ಆಶಯದಂತೆ ನಡೆಯುತ್ತಿದೆ. ಸಾಂಸ್ಕೃತಿಕ, ಧಾರ್ಮಿಕವಾಗಿ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಮ್ಮ ಟ್ರಸ್ಟ್ ಇದೆ ಎಂದರು. ಧನ ಸಹಾಯ : ಆರೋಗ್ಯ ಮತ್ತು ಗೃಹ ನಿರ್ಮಾಣಕ್ಕಾಗಿ ಟ್ರಸ್ಟ್ ವತಿಯಿಂದ ಧನಸಹಾಯ ವಿತರಿಸಲಾಯಿತು. ಬಹುಮಾನ ವಿಜೇತರು : ಪ್ರಥಮ ಬಹುಮಾನ ರೂ. 11,111ನ್ನು ರಕ್ಷಿತ್ ಕುಮಾರ್ ಕಾಪಿಕಾಡ್, ದ್ವಿತೀಯ ರೂ. 7,777ನ್ನು ರವಿರಾಜ್ ಮಂಗಳೂರು, ತೃತೀಯ ರೂ.5,555ನ್ನು ಉಮೇಶ್ ಕಾವೂರು ಪಡೆದುಕೊಂಡರು. ಕಲಾವಿದರಾದ ಶಶಾಂಕ್, ರಕ್ಷಾ ಮತ್ತು ಯಶವಂತ್ ಗೂಡುದೀಪ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಉದಯ ಕುಮಾರ್ ಶೆಟ್ಟಿ, ಶಾಸಕ ಲಾಲಾಜಿ ಆರ್ ಮೆಂಡನ್, ಶ್ರೀಕಾಂತ ನಾಯಕ್, ಕುತ್ಯಾರು ನವೀನ್ ಶೆಟ್ಟಿ, ವೀಣಾ ಶೆಟ್ಟಿ, ದಿನೇಶ್ ಮೆಂಡನ್, ಗಂಗಾಧರ ಸುವರ್ಣ, ಶಿಲ್ಪಾ ಸುವರ್ಣ, ಮಿಥುನ್ ಹೆಗ್ಡೆ, ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಅನಿಲ್ ಶೆಟ್ಟಿ, ಸ್ವೀಕಾರ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು. ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ಟ್ರಸ್ಟಿ ಶ್ರೀಶ ನಾಯಕ್ ಸ್ವಾಗತಿಸಿ, ಪ್ರಸ್ತಾವಿಸಿದರು. ಯಶವಂತ್ ಕಾರ್ಯಕ್ರಮ ನಿರೂಪಿಸಿದರು. ಸಂತೋಷ್ ಕುಮಾರ್ ಮೂಡುಬೆಳ್ಳೆ ವಂದಿಸಿದರು.
ಕಾಪು : ಅಜಿಲಕಾಡು ಯುವಕರಿಂದ ಬಾವಿಗೆ ಬಿದ್ದ ನಾಯಿಯ ರಕ್ಷಣೆ
Posted On: 26 Oct 2022, 05:10 PM
ಕಾಪು : ಕಲ್ಲುಗುಡ್ಡೆ ಕುಂಜ ಪರಿಸರದ ಕಾಡಿನ ನಡುವೆ ಸತತ ನಾಲ್ಕು ದಿನಗಳಿಂದ ಬಾವಿಯಲ್ಲಿ ಬಿದ್ದ ನಾಯಿಯನ್ನು ಯುವಕ ವೃಂದ ಅಜಿಲಕಾಡು ಇದರ ಸದಸ್ಯರು ಇಂದು ರಕ್ಷಿಸಿದರು.
ಕಟಪಾಡಿ : ಈ ಬಾರಿ ಕಾಂತಾರ ಇಫೆಕ್ಟ್ ನಲ್ಲಿ ರಿಕ್ಷಾ ಚಾಲಕ ಜಯಕರ್
Posted On: 26 Oct 2022, 02:02 PM
ಕಟಪಾಡಿ : ಆಟೋ ಚಾಲಕ ಜಯಕರ್ ಆಯುಧ ಪೂಜೆಯ ಪ್ರಯುಕ್ತ ರಿಕ್ಷಾಕ್ಕೆ ಕಾಂತಾರ ಸಿನಿಮಾ ಶೈಲಿಯಲ್ಲಿ ಸಿಂಗರಿಸಿ ತುಳುನಾಡಿನ ಕಂಬಳ ಮತ್ತು ಕಾಡು ಹಾಗು ಜನರ ನಡುವಿನ ಸಂಬಂಧದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಸುಮಾರು 17 ವರ್ಷಗಳಿಂದ ರಿಕ್ಷಾ ಚಾಲಕನಾಗಿ ದುಡಿದು ತನ್ನ ಜೀವನ ಸಾಗಿಸುತ್ತಿರುವ ಜಯಕರ್ ಹತ್ತು ವರ್ಷಗಳಿಂದ ತನ್ನ ಜೀವನ ಬಂಡಿ ಸಾಗಿಸುವ ರಿಕ್ಷಾಕ್ಕೆ ವಿವಿಧ ರೀತಿಯಲ್ಲಿ ಸಿಂಗರಿಸಿ ದೀಪಾವಳಿಯ ಸಂದರ್ಭ ರಿಕ್ಷಾ ಪೂಜೆಯನ್ನು ಮಾಡುತ್ತಾರೆ. ಕೊರೋನಾ ಸಂದರ್ಭದಲ್ಲಿ ರಿಕ್ಷಾ ಬೆಲೂನ್ ಸಿಂಗರಿಸಿ ಕಟಪಾಡಿ ಪರಿಸರದಲ್ಲಿ ಓಡಾಟ ಮಾಡಿ ಮಕ್ಕಳ ಮನ ಗೆದ್ದಿದ್ದರು. ಈ ಬಾರಿ ರಿಕ್ಷಾವನ್ನು ವಿವಿಧ ಹೂ ಮತ್ತು ಬಳ್ಳಿಗಳಿಂದ ಅಲಂಕರಿಸಿ ಪ್ರಕೃತಿ ಉಳಿಸುವ ಮಾಹಿತಿಯನ್ನು ಜನರಲ್ಲಿ ನೀಡುತ್ತಿದ್ದಾರೆ.
ಕಾಪು : ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ವಾಹನ ಪೂಜಾ ಕಾರ್ಯಕ್ರಮ
Posted On: 26 Oct 2022, 01:18 PM
ಕಾಪು : ಹೊಸ ಮಾರಿಗುಡಿಯಲ್ಲಿ ಕಾಪು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ವಾಹನ ಪೂಜೆ ಕಾರ್ಯಕ್ರಮವನ್ನು ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಬುಧವಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಬಿಜೆಪಿ ಪಕ್ಷದ ವತಿಯಿಂದ ವಿವಿದೆಡೆಯಲ್ಲಿ ವಾಹನ ಪೂಜಾ, ಗೋ ಪೂಜಾ ಕಾರ್ಯಕ್ರಮಗಳು ನಡೆಯುತ್ತಿದೆ. ಸಮಾಜಮುಖಿ ಚಿಂತನೆಯುಳ್ಳ, ಹಿಂದೂ ಧಾರ್ಮಿಕ ಆಚರಣೆಗಳನ್ನು ಸಂಭ್ರಮದಿಂದ ಇನ್ನಷ್ಟು ಜನರಿಗೆ ತಲುಪಿಸುವ ಕಾರ್ಯ ಆಗುತ್ತಿದೆ. ನವೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಾಪುವಿಗೆ ಭೇಟಿ ನೀಡಲಿದ್ದಾರೆ. ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದರು. ಶ್ರೀಧರ ತಂತ್ರಿ ನೇತೃತ್ವದಲ್ಲಿ ವಾಹನಗಳಿಗೆ ಪೂಜಾ ಕೈಂಕರ್ಯ ನೆರವೇರಿತು. ಈ ಸಂದರ್ಭ ಯಶ್ಪಾಲ್ ಸುವರ್ಣ, ಸಂತೋಷ್ ಕುಮಾರ್ ಮೂಡುಬೆಳ್ಳೆ, ಗೀತಾಂಜಲಿ ಸುವರ್ಣ, ಅನಿಲ್ ಕುಮಾರ್, ರತ್ನಾಕರ ಶೆಟ್ಟಿ, ಶಶಿಪ್ರಭ, ರವಿ ಉದ್ಯಾವರ, ಪ್ರವೀಣ್ ಪೂಜಾರಿ ಕಾಪು, ಸುಮ ಶೆಟ್ಟಿ, ಸರಿತಾ ಪೂಜಾರ್ತಿ, ಉಷ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.
ಕಾಪು : ಶ್ರೀ ಲಕ್ಷ್ಮಿ ಜನಾರ್ಧನ ದೇವಳದಲ್ಲಿ ಸಾರ್ವಜನಿಕ ಗೋಪೂಜೆ, ವಾಹನ ಪೂಜೆ
Posted On: 26 Oct 2022, 12:45 PM
ಕಾಪು : ಇಲ್ಲಿನ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಸಾರ್ವಜನಿಕ ಗೋಪೂಜೆ ಮತ್ತು ವಾಹನ ಪೂಜೆಯು ಬುಧವಾರ ನೆರವೇರಿತು. ದೇವಳದ ಪ್ರಧಾನ ತಂತ್ರಿ ಶ್ರೀಶ ತಂತ್ರಿ ನೇತೃತ್ವದಲ್ಲಿ ಗೋ ಪೂಜೆ ನೆರವೇರಿತು. ಈ ಸಂಧರ್ಭ ಬೀಡು ಮನೆತನದ ಅನಿಲ್ ಬಳ್ಳಾಲ್, ಕಾರ್ಯನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ, ಆಡಳಿತಾಧಿಕಾರಿ ಗಣೇಶ್ ರಾವ್, ಲೀಲಾಧರ ಶೆಟ್ಟಿ ಕಾಪು, ನಡಿಕೆರೆ ರತ್ನಾಕರ್ ಶೆಟ್ಟಿ, ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯ, ಯೋಗೀಶ್ ಪೂಜಾರಿ, ದಿವಾಕರ್, ಲಕ್ಷ್ಮೀಶ್, ಸಿಬಂದಿ ವರ್ಗ ಉಪಸ್ಥಿತರಿದ್ದರು.
ಕಳತ್ತೂರಿನಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ
Posted On: 25 Oct 2022, 09:10 PM
ಕಾಪು : ಕುಶಲ ಶೇಖರ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಕಳತ್ತೂರು ಶೇಖರ ಬಿ. ಶೆಟ್ಟಿ ನೇತ್ರತ್ವದಲ್ಲಿ ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ,ಅಂಧತ್ವ ನಿವಾರಣ ವಿಭಾಗ ಉಡುಪಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಆದಿತ್ಯವಾರ ಕಳತ್ತೂರಿನ ಕುಶಲ ಶೇಖರ ಶೆಟ್ಟಿ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಿತು. ಶಿಬಿರದ ಉದ್ಘಾಟನೆಯನ್ನು ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ಆಡಳಿತ ನಿರ್ದೇಶಕರಾದ ಡಾ. ಕೃಷ್ಣಪ್ರಸಾದ್ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸುಸಜ್ಜಿತವಾದ ಅಂತರಾಷ್ಟ್ರೀಯ ಮಟ್ಟದ ಚಿಕಿತ್ಸೆಯನ್ನು ಕೊಡಿಸುವುದೇ ನಮ್ಮ ಶಿಬಿರದ ಉದ್ದೇಶವಾಗಿದೆ ಎಂದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಶೇಖರ್ ಬಿ.ಶೆಟ್ಟಿ ಇವರ ಸೇವೆಯನ್ನು ಕೊಂಡಾಡಿದರು. ಮುಖ್ಯ ಅತಿಥಿಯಾಗಿ ಉಡುಪಿಯ ನ್ಯಾಯವಾದಿ ಕುತ್ಯಾರು ಗ್ರಾ.ಪಂ. ಮಾಜಿ ಅಧ್ಯಕ್ಷ ಉಮೇಶ ಶೆಟ್ಟಿ ಕಳತ್ತೂರು ಮಾತನಾಡಿ ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಚಿಕಿತ್ಸೆಯು ಸಿಗಬೇಕು. ಸಮಾಜಕ್ಕೆ ತುಂಬಾ ಉಪಕಾರ ಮಾಡುವ ಉದ್ದೇಶದಿಂದ ಈ ಶಿಬಿರ ನಡೆಸಲಾಗುತ್ತಿದೆ. ಶೇಖರ ಬಿ ಶೆಟ್ಟಿಯವರು ಈ ಭವ್ಯವಾದ ಸಭಾಂಗಣವನ್ನು ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ಮಾಡಿ ಹಲವಾರು ಸಮಾಜ ಸೇವೆ ಮಾಡಿ ಪ್ರಖ್ಯಾತರಾಗಿದ್ದಾರೆ ಎಂದರು. ಈ ಸಂದರ್ಭದಲ್ಲಿ ಪ್ರಖ್ಯಾತ ನೇತ್ರ ತಜ್ಞರಾದ ಡಾ. ಕೃಷ್ಣಪ್ರಸಾದ್ ಇವರನ್ನು ಹಿರಿಯರಾದ ವಾಸು ಶೆಟ್ಟಿ ಇವರು ಅಭಿನಂದಿಸಿ ಗೌರವಿಸಿದರು. ಸಭಾಧ್ಯಕ್ಷತೆಯನ್ನು ಶೇಖರ ಬಿ. ಶೆಟ್ಟಿ ವಹಿಸಿದರು. ಮುಖ್ಯ ಅತಿಥಿಯಾಗಿ ಜನ ಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷ ದಿವಾಕರ ಬಿ.ಶೆಟ್ಟಿ ಕಳತೂರು, ಸಮಾಜ ಸೇವಾ ವೇದಿಕೆ ಅಧ್ಯಕ್ಷ ಉದ್ಯಮಿ ಮೊಹಮ್ಮದ್ ಫಾರೂಕ್ ಚಂದ್ರನಗರ, ಕಳತ್ತೂರು ರಾಘವೇಂದ್ರ ಭಟ್, ಜಯಲಕ್ಷ್ಮಿ ಆಳ್ವ ಪಾದೂರು ಗುತ್ತು, ಹಿರಿಯರಾದ ವಾಸು ಶೆಟ್ಟಿ ಕಳತೂರು, ಡಾ. ಅಕ್ಷತಾ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ ಕುಮಾರ್ ಹೆಗ್ಡೆ ನಿರೂಪಿಸಿದರು. ಸಮಾಜ ಸೇವಾ ವೇದಿಕೆ ಸಂಚಾಲಕ ದಿವಾಕರ ಡಿ ಶೆಟ್ಟಿ ವಂದಿಸಿದರು.
ಶಿರ್ವದ ಕಡಂಬುವಿನಲ್ಲಿ ರಾರಾಜಿಸುತ್ತಿದೆ ಕೆ ಕೆ ಫ್ರೆಂಡ್ಸ್ ರಚಿಸಿದ ಬೃಹತ್ ಗೂಡುದೀಪ
Posted On: 25 Oct 2022, 08:59 PM
ಶಿರ್ವ : ಕೆ ಕೆ ಫ್ರೆಂಡ್ಸ್ ಕಡಂಬು ಇದರ ವತಿಯಿಂದ ದೀಪಾವಳಿಯ ಪ್ರಯುಕ್ತ ಕಡಂಬು ಮೈದಾನದಲ್ಲಿ ಸೋಮವಾರ ಬೃಹತ್ ಗೂಡುದೀಪ ಅಳವಡಿಸಿ ದೀಪಾವಳಿ ಆಚರಿಸಲಾಯಿತು. ಸುಮಾರು 9 ಫೀಟ್ ಎತ್ತರ ಮತ್ತು 5 ಫೀಟ್ ಅಗಲದ ಗೂಡುದೀಪ ಜೊತೆಗೆ ವಿದ್ಯುತ್ ದೀಪದ ಮೆರುಗು ಕಡಂಬು ಮೈದಾನದಲ್ಲಿ ರಾರಾಜಿಸುತ್ತಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಕೆ ಕೆ ಫ್ರೆಂಡ್ಸ್ ನ ಸದಸ್ಯರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪಡುಬಿದ್ರಿ : ಕೊರಗಜ್ಜ ಕ್ಷೇತ್ರದ ಜೀರ್ಣೋದ್ಧಾರದ ನೀಲ ನಕ್ಷೆ, ವಿಜ್ಞಾಪನಾ ಪತ್ರ ಬಿಡುಗಡೆ
Posted On: 24 Oct 2022, 06:10 PM
ಪಡುಬಿದ್ರಿ : ಪ್ರೇರಣೆಯಿಲ್ಲದೆ ಯಾವುದೇ ಕಾರ್ಯ ನಡೆಯದು. ಅದು ವಿಜ್ಞಾಪನ ಪತ್ರದ ಮೂಲಕ ಈ ಸಮಾಜಕ್ಕೆ ತಲುಪಲಿದೆ. ಸಂಕಲ್ಪವು ಮಹಾ ಸಂಕಲ್ಪವಾಗಿ ಮೂಡಿದಾಗ ಸಂಪತ್ತು ಕ್ರೋಢೀಕರಣ ಸಾಧ್ಯ. ಮನುಷ್ಯ ಪ್ರಯತ್ನ ಜತೆಗೆ ದೈವಾನುಗ್ರಹ ಇದ್ದರೆ ಕಾರ್ಯ ಸಾಧ್ಯ. ಈ ಸಾನಿಧ್ಯದ ಸಂಕಲ್ಪ ಮಹಾ ಸಂಕಲ್ಪವಾಗಿ ಜೀರ್ಣೋದ್ಧಾರವಾಗಲಿ ಎಂದು ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಹೇಳಿದರು. ಅವರು ಕಾಪು ತಾಲೂಕಿನ ಸಾವಿರಾರು ವರ್ಷಗಳ ಇತಿಹಾಸವಿರುವ ಪಡುಬಿದ್ರಿಯ ಶ್ರೀ ಆದಿಶಕ್ತಿ ಆದಿ ಮಾಯೆ ಅಣ್ಣಪ್ಪ ಪಂಜುರ್ಲಿ ಮಂತ್ರ ದೇವತೆ ಹಾಗೂ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಅಕ್ಟೋಬರ್ 22ರಂದು ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಗಣ್ಯರ ಸಮ್ಮುಖ ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಜೀರ್ಣೋದ್ದಾರದ ನೀಲನಕ್ಷೆ ಮತ್ತು ವಿಜ್ಞಾಪನ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ, ಕ್ಷೇತ್ರದ ಧರ್ಮದರ್ಶಿಗಳಾದ ಸುಧಾಕರ ಮಡಿವಾಳ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ ಶೆಟ್ಟಿ, ದೇವಿ ಪ್ರಸಾದ್ ಶೆಟ್ಟಿ ಬೆಳಪು, ಕಿಶೋರ್ ಶೆಟ್ಟಿ, ಕಂಚನ್ ರಮೇಶ್ ಕಾಂಚನ್, ಸದಾನಂದ ಸಾಲಿಯಾನ್, ಶ್ರೀಕರ್ ಶೆಟ್ಟಿ ಕಾಪು, ಪ್ರಕಾಶ್ ಶೆಟ್ಟಿ ಪಡುಹಿತ್ಲು, ವಿನೋದ್ ಶೆಟ್ಟಿ, ಮಮತಾ ಪಿ ಶೆಟ್ಟಿ, ನೀತಾ ಪ್ರಭು, ಶ್ಯಾಮಲ ಕುಂದರ್, ನಿತಿನ್ ಪೂಜಾರಿ, ದಿನೇಶ್ ಶೆಟ್ಟಿ ಕಾಪು ಕಲ್ಯ, ಕರಿಯ ಶೆಟ್ಟಿ ಉಪಸ್ಥಿತರಿದ್ದರು. ಅಮೃತಾ ಹಾಗು ಯಶೋಧ ಪ್ರಾರ್ಥಿಸಿದರು. ಪ್ರಕಾಶ್ ಶೆಟ್ಟಿ ಪಡುಹಿತ್ಲು ಸ್ವಾಗತಿಸಿದರು. ಸದಾನಂದ ಸಾಲ್ಯಾನ್ ಕೆರ್ವಾಶೆ ಪ್ರಸ್ತಾವನೆಗೈದರು. ಪ್ರೀತಿ ಕಲ್ಯಾಣಪುರ ಕಾರ್ಯಕ್ರಮ ಸಂಯೋಜಿಸಿ, ಸ್ವಾತಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ದಿನೇಶ್ ಶೆಟ್ಟಿ ಕಾಪು ಕಲ್ಯ ವಂದಿಸಿದರು.
