Updated News From Kaup
ವಿಕಲ ಚೇತನರ ಬಾಳಿನಲ್ಲಿ ಬೆಳಕು ಕಾಣುವ NSCDF ಕಾರ್ಯ ಸ್ತುತ್ಯರ್ಹ : ಲಾಲಾಜಿ ಆರ್ ಮೆಂಡನ್
Posted On: 18 Oct 2022, 11:05 PM
ಕಾಪು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ಬೆಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ (NSCDF) ಮಂಗಳೂರು ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣಾ ಕಾರ್ಯಕ್ರಮ ಅಕ್ಟೋಬರ್ 18ರಂದು ಕಾಪುವಿನ ಶ್ರೀ ಆದಿಶಕ್ತಿ ವೀರಭದ್ರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪರಿಕರಗಳಿಗೆ ಹೂವಿನ ಎಸಳು ಚೆಲ್ಲುವ ಮೂಲಕ ಚಾಲನೆ ನೀಡಿದ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ ಇಂತಹ ಕಾರ್ಯಕ್ರಮಗಳು ಪ್ರತಿ ಕ್ಷೇತ್ರಗಳಲ್ಲಿಯೂ ನಡೆಯಬೇಕು ಆ ಮೂಲಕ ವಿಕಲ ಚೇತನರ ಬಾಳಿನಲ್ಲಿ ಬೆಳಕು ಕಾಣಬಹುದು ಎಂದ ಅವರು NSCDF ಕಾರ್ಯ ಸ್ತುತ್ಯರ್ಹ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿದ್ದ ಕವಿ, ಲೇಖಕ ಕೆ.ವಿ.ಲಕ್ಷ್ಮಣ ಮೂರ್ತಿ ಮಾತನಾಡಿ ಇದೊಂದು ದೇಶಕ್ಕೆ ಮಾದರಿ ಕಾರ್ಯಕ್ರಮ , ಇದರಿಂದಾಗಿ ಅನೇಕರು ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು. ಅಧ್ಯಕ್ಷತೆವಹಿಸಿದ್ದ NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ ಇದು ಭಾಷಣ ಮಾಡುವ ಕಾರ್ಯಕ್ರಮವಲ್ಲ ಬದಲಿಗೆ ವಿಕಲ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ ಎಂದು ಹೇಳಿದರು. 15 ಹೊಲಿಗೆ ಯಂತ್ರ, 3 ಗಾಲಿ ಕುರ್ಚಿ ಮತ್ತು 1 ಶ್ರವಣ ಸಾಧನ ವಿಕಲ ಚೇತನರಿಗೆ ಹಸ್ತಾಂತರಿಸಲಾಯಿತು. ಡಾ.ನೆಲ್ಲಿಷಾ, ಲಾವಣ್ಯ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ , ಶ್ರುತಿ ಎಂಟರ್ಪ್ರೈಸಸ್ ಮಾಲ್ಹಕ ಸುರೇಶ್ ಮತ್ತು NSCDF ಸದಸ್ಯೆ ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.
ಇನ್ನಂಜೆ : ದಿವಂಗತ ಕೆ. ಸದಾನಂದ ಶೆಟ್ಟಿ - ನುಡಿನಮನ, ಸಂಸ್ಮರಣೆ
Posted On: 18 Oct 2022, 08:16 PM
ಕಾಪು : ಯಸ್. ವಿ.ಯಚ್ ವಿದ್ಯಾಸಂಸ್ಥೆಯ ಸಂಚಾಲಕರಾಗಿದ್ದ, ಶಿಕ್ಷಣ ಪ್ರೇಮಿ ಸಮಾಜಸೇವಕ ಮಂಡೇಡಿ ಹೊಸಮನೆ ದಿವಂಗತ ಕೆ. ಸದಾನಂದ ಶೆಟ್ಟಿ ಅವರಿಗೆ ನುಡಿ ನಮನ ಹಾಗೂ ಸಂಸ್ಮರಣಾ ಕಾರ್ಯಕ್ರಮವು ಶಾಲೆಯ ಹಯವದನ ಸಭಾ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು. ಆಡಳಿತಾಧಿಕಾರಿ ಅನಂತ ಮೂಡಿತ್ತಾಯ ಸಭಾಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರಾದ ಪುಂಡರಿಕಾಕ್ಷ ಕೊಡಂಚ, ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಶೆಟ್ಟಿ ನುಡಿ ನಮನ ಸಮರ್ಪಿಸಿದರು. ವೇದಿಕೆಯಲ್ಲಿ ದಿವಂಗತ ಕೆ.ಸದಾನಂದ ಶೆಟ್ಟಿ ಅವರ ಸಹೋದರರಾದ ಕೆ. ರಮಾನಂದ ಶೆಟ್ಟಿ ಮತ್ತು ಕೆ.ದಯಾನಂದ ಶೆಟ್ಟಿ, ಅಳಿಯಂದಿರಾದ ಬಾಲಕೃಷ್ಣ ಶೆಟ್ಟಿ ಮತ್ತು ವಿಜಯ ಶೆಟ್ಟಿ, ಇನ್ನಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಲಕ್ಷ್ಮಣ ಕೆ.ಶೆಟ್ಟಿ ಮಂಡೇಡಿ, ನಿರ್ದೇಶಕರಾದ ಶಿವರಾಮ ಶೆಟ್ಟಿ ಮಂಡೇಡಿ , ಎಸ್. ವಿ. ಎಚ್ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ನಟರಾಜ ಉಪಾಧ್ಯಯ, ಮುಖ್ಯ ಶಿಕ್ಷಕರಾದ ಸುಷ್ಮಾ, ಮಮತಾ ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಾಂಗಾಳ ವಿದ್ಯಾವರ್ಧಕ ಶಾಲೆ, ಪಾಂಗಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಇನ್ನಂಜೆ ಶಾಲಾ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.
ಇತಿಹಾಸ ಪ್ರಸಿದ್ಧ ಕಾಪು ಶ್ರೀ ವೆಂಕಟರಮಣ ದೇಗುಲಕ್ಕೆ ಕಾಶಿ ಮಠಾಧೀಶರ ಭೇಟಿ ; ಪಾದಪೂಜೆ
Posted On: 18 Oct 2022, 08:00 PM
ಕಾಪು : ಇತಿಹಾಸ ಪ್ರಸಿದ್ಧ ಕಾಪು ಶ್ರೀ ವೆಂಕಟರಮಣ ದೇಗುಲಕ್ಕೆ ಮಂಗಳವಾರ ಕಾಶಿ ಮಠಾಧೀಶರಾದ ಶ್ರೀಮದ್ ಸಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ ನೀಡಿ ವೆಂಕಟರಮಣ ದೇವರ ದರ್ಶನ ಪಡೆದರು. ದೇವಳದ ವತಿಯಿಂದ ಸ್ವಾಮೀಜಿಯವರ ಪಾದ ಪೂಜೆ ನೆರವೇರಿಸಲಾಯಿತು. ದೇವಳದ ಪ್ರಧಾನ ಅರ್ಚಕ ಕಮಲಾಲಕ್ಷ ಭಟ್, ಅರ್ಚಕರಾದ ಶ್ರೀನಿವಾಸ್ ಭಟ್ ಮತ್ತು ರವೀಂದ್ರ ಭಟ್ ಶಿರ್ವ ರವರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭ ಆಡಳಿತ ಮೊಕ್ತೆಸರ ಪ್ರಸಾದ್ ಶೆಣೈ, ಮೊಕ್ತೆಸರರಾದ ರಾಮನಾಯಕ್, ಶ್ರೀಕಾಂತ್ ಭಟ್, ರಾಜೇಶ್ ಶೆಣೈ, ಸದಾಶಿವ ಕಾಮತ್, ಸದಸ್ಯರಾದ ಮಜೂರು ರಾಜೇಶ್ ಶೆಣೈ, ಚಂದ್ರಕಾಂತ್ ಕಾಮತ್, ಕೃಷ್ಣಾನಂದ್ ನಾಯಕ್, ಅತುಲ್ ಕುಡ್ವಾ ಮೊದಲಾದವರು ಉಪಸ್ಥಿತರಿದ್ದರು.
ಅಕ್ಟೋಬರ್ 30 : ಕಾಪುವಿನಲ್ಲಿ ಬೃಹತ್ ರಕ್ತದಾನ ಶಿಬಿರ
Posted On: 18 Oct 2022, 06:15 PM
ಕಾಪು : ಧರಣಿ ಸಮಾಜ ಸೇವಾ ಸಂಘ ಕಾಪು, ಜೆಸಿಐ ಕಾಪು ಮತ್ತು ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಕಾಪು ವಲಯ ಇವರ ಆಶ್ರಯದಲ್ಲಿ ಸರಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 30, ಆದಿತ್ಯವಾರ ಬೆಳಿಗ್ಗೆ ಗಂಟೆ 9ರಿಂದ ಅಪರಾಹ್ನ ಗಂಟೆ 1ರ ತನಕ ವೀರಭದ್ರ ಸಭಾಭವನ, ಕಾಪು ಇಲ್ಲಿ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಮ್ಯಾಷರ್ಸ್ ವೆಲ್ಫೇರ್ ಆಂಡ್ ಸ್ಫೋಟ್ಸ್೯ ಕ್ಲಬ್ ಪಡುಬಿದ್ರಿ : ಅಧ್ಯಕ್ಷರಾಗಿ ರಮೀಝ್ ಹುಸೇನ್ ಪುನರಾಯ್ಕೆ
Posted On: 18 Oct 2022, 05:17 PM
ಪಡುಬಿದ್ರಿ : ರಾಜ್ಯಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿ, ಕೊರೊನಾ ಲಾಕ್ಡೌನ್ ಸಮಯದಲ್ಲಿ ಕಿಟ್ ವಿತರಣೆ, ಈದ್ ಕಿಟ್ ವಿತರಣೆ, ಸ್ವಚ್ಚತಾ ಕಾರ್ಯ, ಸಮಾಜ ಸೇವೆಯಲ್ಲಿ ತೊಡಗಿರುವ ಸ್ಮ್ಯಾಷರ್ಸ್ ವೆಲ್ಫೇರ್ ಆಂಡ್ ಸ್ಫೋಟ್ಸ್೯ ಕ್ಲಬ್ ಪಡುಬಿದ್ರಿ ಇದರ ವಾರ್ಷಿಕ ಮಹಾಸಭೆ ಮಂಗಳವಾರ ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ರಮೀಝ್ ಹುಸೇನ್ ಪುನರಾಯ್ಕೆಯಾದರು. ಗೌರವ ಅಧ್ಯಕ್ಷರಾಗಿ ಮೊಹಮ್ಮದ್ ಕೌಸರ್, ಉಪಾಧ್ಯಕ್ಷರಾಗಿ ನಸ್ರುಲ್ಲ, ರಾಝಿ, ಅನ್ವರ್. ಕಾರ್ಯದರ್ಶಿಯಾಗಿ ನಿಝಾರ್, ಜೊತೆ ಕಾರ್ಯದರ್ಶಿಯಾಗಿ ರಾಝಿಕ್, ಕೋಶಾಧಿಕಾರಿಯಾಗಿ ಮಿಶೈಲ್, ಕ್ಲಬ್ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಮುಸ್ತಾಕ್, ಅರ್ಶಾದ್, ಶಾಮಿಲ್, ಅಝ್ಮಾಲ್, ಸಲಹೆಗಾರರಾಗಿ ಅಬ್ದುಲ್ ಮುತ್ತಲಿಬ್, ಕ್ರೀಡಾ ಕಾರ್ಯದರ್ಶಿಯಾಗಿ ರಿಯಾಝ್ ಆಯ್ಕೆಯಾದರು.
ಅಕ್ಟೋಬರ್ 26 : ಕಾಪು ಬಿಜೆಪಿ ಹಿಂದುಳಿದ ಮೋರ್ಚಾ ವತಿಯಿಂದ ಬೃಹತ್ ಸಾರ್ವಜನಿಕ ವಾಹನ ಪೂಜೆ
Posted On: 18 Oct 2022, 01:00 PM
ಕಾಪು : ವಿಧಾನ ಸಭಾ ಕ್ಷೇತ್ರ ಬಿಜೆಪಿ ಹಿಂದುಳಿದ ಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಬೃಹತ್ ಸಾರ್ವಜನಿಕ ವಾಹನ ಪೂಜೆಯು ಕಾಪು ಹೊಸ ಮಾರಿಗುಡಿ ವಠಾರದಲ್ಲಿ 26 ನೇ ಬೆಳ್ಳಿಗೆ 9 ಗಂಟೆಗೆ ನಡೆಯಲಿದೆ ಎಂದು ಕಾಪು ಹಿಂದುಳಿದ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ಕುಮಾರ್ ಮೂಡುಬೆಳ್ಳೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾಪು ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಶ್ರೀಮದ್ ಸಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ
Posted On: 18 Oct 2022, 12:55 PM
ಕಾಪು: ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಕಾಶಿ ಮಠಾಧೀಶರಾದ ಶ್ರೀಮದ್ ಸಯಮೀಂದ್ರ ತೀರ್ಥ ಸ್ವಾಮೀಜಿ ಅವರು ಭೇಟಿ ನೀಡಿ ದೇವರ ದರುಶನ ಪಡೆದರು. ಪ್ರಪ್ರಥಮ ಬಾರಿಗೆ ಕಾಪು ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಚಂಡಿಕಯಾಗದ ಪೂರ್ಣಹುತಿ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಅರ್ಚಕರಾದ ಕಮಾಲಕ್ಷ ಭಟ್, ಶ್ರೀನಿವಾಸ್ ಭಟ್ , ರವೀಂದ್ರ ಭಟ್ ಶಿರ್ವ, ಆಡಳಿತ ಮೊಕ್ತೆಸರ ಪ್ರಸಾದ್ ಶೆಣೈ, ಮೊಕ್ತೆಸರರಾದ ರಾಮನಾಯಕ್, ಶ್ರೀಕಾಂತ್ ಭಟ್, ರಾಜೇಶ್ ಶೆಣೈ, ಸದಾಶಿವ ಕಾಮತ್, ಸದಸ್ಯರಾದ ಮಜೂರು ರಾಜೇಶ್ ಶೆಣೈ, ಚಂದ್ರಕಾಂತ್ ಕಾಮತ್, ಕೃಷ್ಣಾನಂದ್ ನಾಯಕ್, ಅತುಲ್ ಕುಡ್ವಾ ಮೊದಲಾದವರು ಉಪಸ್ಥಿತರಿದ್ದರು.
ಬೆಳ್ಮಣ್ : ಉದ್ಯೋಗ ರತ್ನ ಪ್ರಶಸ್ತಿ ಪುರಸ್ಕೃತರಾದ ಸುಧಾಕರ ಪೂಜಾರಿ
Posted On: 18 Oct 2022, 10:53 AM
ಬೆಳ್ಮಣ್ : ಜೇಸಿಐ ಇಂಡಿಯ ವಲಯದ ಪಂಚರತ್ನ ಪ್ರಶಸ್ತಿಗಳಲ್ಲಿ ಒಂದಾದ ಉದ್ಯೋಗ ರತ್ನ - 2022 ಪ್ರಶಸ್ತಿಯನ್ನು ಅಕ್ಟೋಬರ್ 16ರಂದು ಬೆಳ್ಮಣ್ ನಲ್ಲಿ ಜರಗಿದ ವಲಯ 15ರ ವ್ಯವಹಾರ ಸಮ್ಮೇಳನ 'ಸಂಚಲನ' ಸಾಧಕರ ಸಮಾಗಮ ಕಾರ್ಯಕ್ರಮದಲ್ಲಿ ವೃತ್ತಿ ಕ್ಷೇತ್ರದ ಸಾಧನೆ ಪರಿಗಣಿಸಿ ಜೆಸಿಐ ಶಂಕರಪುರ ಜಾಸ್ಮಿನ್ ನ ಸುಧಾಕರ ಪೂಜಾರಿಯವರಿಗೆ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೆಸಿಐ ಶಂಕರಪುರ ಜಾಸ್ಮಿನ್ ಘಟಕದ ಮೂಲಕ 2007ರಲ್ಲಿ ಜೆಸಿಐ ಅಂದೋಲನಕ್ಕೆ ಪಾದಾರ್ಪಣೆ ಮಾಡಿದ ಇವರು ಘಟಕದಲ್ಲಿ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ 2018ರಲ್ಲಿ ಘಟಕಾಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ವಲಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಇನ್ನಂಜೆಯಲ್ಲಿ ಪೂರೈಸಿರುವ ತಾವು ಕಳೆದ 24 ವರ್ಷಗಳಿಂದ ಶಂಕರಪುರ ಫ್ರೆಂಡ್ಸ್ ಕ್ಯಾಟರರ್ಸ್ ಎಂಬ ಸಂಸ್ಥೆಯಲ್ಲಿ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಾಪು : ಕಲ್ಲಿದ್ದಲು ಸಾಗಾಟದ ಟ್ರಕ್ನಲ್ಲಿ ಆಕಸ್ಮಿಕ ಬೆಂಕಿ ; ತಪ್ಪಿದ ಭಾರಿ ಅವಘಡ
Posted On: 18 Oct 2022, 10:35 AM
ಕಾಪು : ಮಂಗಳೂರು ಬಂದರ್ನಿಂದ ಮುನವಳ್ಳಿಗೆ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಟ್ರಕ್ಗೆ ಸೋಮವಾರ ತಡರಾತ್ರಿ ಕಾಪುವಿನ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬಂದಿಗಳ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರಿ ಅವಘಡವೊಂದು ತಪ್ಪಿದಂತಾಗಿದೆ. ಟ್ರಕ್ನಲ್ಲಿ ತುಂಬಿದ್ದ ಕಲ್ಲಿದ್ದಲ್ಲಿನಲ್ಲಿ ಘರ್ಷಣೆಯುಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು ಟ್ರಕ್ ಚಾಲಕ ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಡುಪಿ ಅಗ್ನಿಶಾಮಕದಳಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಟ್ರಕ್ನ ಮೇಲೇರಿ ಹೊಗೆಯನ್ನು ಸಂಪೂರ್ಣವಾಗಿ ನಂದಿಸುವ ಮೂಲಕ ಮುಂದೆ ಸಂಭವಿಸಬಹುದಾಗಿದ್ದ ಭಾರೀ ಅವಘಡವೊಂದನ್ನು ತಪ್ಪಿಸಿದ್ದಾರೆ.
ಇನ್ನಂಜೆ : ಶ್ರೀ ವಿಠೋಭ ಭಜನಾ ಮಂಡಳಿ ಗೋಳಿಕಟ್ಟೆ - ನೂತನ ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳ ಆಯ್ಕೆ
Posted On: 17 Oct 2022, 08:01 PM
ಇನ್ನಂಜೆ : ಕಾಪು ತಾಲೂಕಿನ ಶ್ರೀ ವಿಠೋಭ ಭಜನಾ ಮಂಡಳಿ ಗೋಳಿಕಟ್ಟೆ ಇನ್ನಂಜೆ ಇದರ 2022 ರಿಂದ 2024 ರ ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಇನ್ನಂಜೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ರಾಘವೇಂದ್ರ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಲಾಲ್, ಕಾರ್ಯದರ್ಶಿಯಾಗಿ ಅಶೋಕ್ ಕುಲಾಲ್, ಕೋಶಾಧಿಕಾರಿಯಾಗಿ ವಿಶ್ವನಾಥ ಕುಲಾಲ್ ಗೋಳಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುಧಾಕರ ಕುಲಾಲ್ ಗೋಳಿಕಟ್ಟೆ ಆಯ್ಕೆಯಾದರು.
