Updated News From Kaup

ಉಡುಪಿ : ಜೆಡಿಎಸ್ ಪಕ್ಷದ ಜಿಲ್ಲಾ ವಕ್ತಾರರಾಗಿ ಶ್ರೀಕಾಂತ್ ಕುಚ್ಚೂರು ನೇಮಕ

Thumbnail
Posted On: 14 Oct 2022, 11:28 AM

ಉಡುಪಿ :ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಜನತಾದಳ( ಜಾತ್ಯತೀತ) ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂರವರು ಶ್ರೀಕಾಂತ್ ಕುಚ್ಚೂರುರವರನ್ನು ಉಡುಪಿ ಜಿಲ್ಲೆಯ ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾ ವಕ್ತಾರರನ್ನಾಗಿ ನೇಮಕಗೊಳಿಸಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾಂತಾರ ತುಳುನಾಡಿನ ದೈವಾರಾಧನೆಯನ್ನು ಪ್ರಪಂಚದ ಮೂಲೆ ಮೂಲೆಗೆ ತಲುಪಿಸಿದೆ. ಆದರೆ....!

Thumbnail
Posted On: 13 Oct 2022, 11:39 PM

" ಕಾಂತಾರ " ಇಂದು ಜಗತ್ತಿನಾದ್ಯಂತ ತುಂಬಿರುವ ತುಳು ಕನ್ನಡಿಗರ ವಲಯದಲ್ಲಿ ತುಂಬಾ ಜನಪ್ರಿಯತೆಯನ್ನು ಪಡೆದಂತಹ ದೈವ ಆಧಾರಿತ ಚಲನ ಚಿತ್ರ. ತುಳುನಾಡಿನ ಜನತೆಗೆ "ದೈವ"ಮೊದಲು "ದೇವರು"ನಂತರ ಎಂಬ ಮೂಲ ನಂಬಿಕೆಗೆ ಸಂಪೂರ್ಣವಾಗಿ ಶರಣಾದಂತಹ ಸತ್ಯ ಸಂಕಲ್ಪ. ಅದಕ್ಕಾಗಿಯೇ ತುಳುವರು "ದೈವ ದೇವೆರೇ " ಎಂದು ಕರೆಯುವುದೇ ಅವರ ಮಹಾಮಂತ್ರ ಎಂದರೆ ತಪ್ಪಾಗಲಾರದು. ಭಯದ ಅಡಿಯಲ್ಲಿ ಭಕ್ತಿಯನ್ನು ಪಾಲಿಸಿಕೊಂಡು ಬಂದಿರುವ ಏಕೈಕ ಸಂಪ್ರದಾಯ ನಮ್ಮ ತುಳುವರದ್ದು. ದೈವ ಎಂಬುವುದು ಒಂದು ಕುಟುಂಬಕ್ಕೆ ಮಾವ (ತಮ್ಮಲೆ)ನಂತೆ ಎಂದೂ ಹೇಳುತ್ತಾರೆ .ತುಳುವರು ತಾಯಿ ತಂದೆಯ ಮೇಲೆ ಅಪಾರ ಭಕ್ತಿಯನ್ನು ತೋರಿಸಿ ಮಾವನಿಗೆ ತುಂಬಾ ಹೆದರುವ ಗೌರವ ಕೊಡುವ ನಮ್ಮ ಸಂಸ್ಕ್ರತಿ.ಹಾಗಾಗಿ ದೇವರು ಸಲಹುವವನಾದರೆ ನಾವು ಧರ್ಮ ತಪ್ಪಿದಲ್ಲಿ ದಂಡಿಸುವ ಮತ್ತು ತಿದ್ದುವ ಕೆಲಸವನ್ನು ಮಾವ(ತಮ್ಮಲೆ ) ನ ಸ್ಥಾನದಲ್ಲಿ ನಿಂತು ದೈವಗಳೆ ಮಾಡುವುದು ಎಂಬುವುದನ್ನು ಬಲವಾಗಿ ನಂಬಲೇ ಬೇಕಾದ ವಿಚಾರ. ಈಗ ನಾವು ಕಾಂತಾರ ಸಿನಿಮಾದ ಬಗ್ಗೆ ದೃಷ್ಟಿ ಹರಿಸೋಣ ! ಕಾಂತಾರ ಸಿನಿಮಾದ ಕಥೆ ಒಂದು ದಂತಕಥೆಯಾಗಿ ತೆರೆಯ ಮೇಲೆ ಬಂದಿರುವುದು ಎಷ್ಟು ಸರಿ.ಎಷ್ಟು ತಪ್ಪು ಎಂಬುದನ್ನು ಹೇಳಲು ದೈವ ಚಿಂತಕರಿಂದ ಮಾತ್ರ ಸಾಧ್ಯ. ಆದರೆ ಜಗತ್ತಿನ ಮೂಲೆ ಮೂಲೆಯಲ್ಲಿರುವ ತುಳುವರನ್ನು ಈ ಒಂದು ಸಿನೆಮಾ ಬಡಿದು ಎಬ್ಬಿಸಿದ್ದಂತೂ ನೂರಕ್ಕೆ ನೂರು ಸತ್ಯ ತುಳುವನ ದೇಹದ ರಕ್ತದಲ್ಲಿ ಒಂದು ದೈವ ಸಂಚಾರವನ್ನೇ ಮೂಡಿಸಿದೆ. ಅಲ್ಲದೆ ತುಳುನಾಡಿಗೆ ಕೋರ್ಟು ಕಚೇರಿ ಕಾನೂನಿಗಿಂತಲೂ ದೈವದ ತೀರ್ಪೇ ಮೇಲು ಎಂಬ ಸತ್ಯ ಸಂದೇಶವನ್ನು ಈ ಸಿನೆಮಾ ನೀಡಿದೆ. ಸಿನಿಮಾದ ಒಂದು ದೃಶ್ಯದಲ್ಲಿ: ಗುರುವ ಎಂಬ ದೈವದ ಚಾಕರಿ ಮಾಡುವವನ ಕೊಲೆಯಾದಾಗ .ಜೈಲಲ್ಲಿರುವ ನಾಯಕ ನಟ ಶಿವನಿಗೆ ತನ್ನ ಮನೆಯವರಿಂದ ಸುದ್ದಿ ಮುಟ್ಟುವ ಮೊದಲು.ಜೈಲಿನ ವರಾಂಡದಲ್ಲಿ ದೈವ ಕುಳಿತು ಕಣ್ಣೀರು ಹಾಕಿ ತನ್ನ ಚಾಕರಿಯವನ ಕೊಲೆಗೆ ಸಂತಾಪಗೊಂಡು ರೋಧಿಸುವ ಸನ್ನಿವೇಶ ನಿಜವಾಗಿಯೂ ದೈವ ಭಕ್ತ ಪ್ರೇಕ್ಷಕನ ಕಣ್ಣಲ್ಲಿ ನೀರು ಬರುವುದಂತೂ ಖಂಡಿತ.ತನ್ನ ಚಾಕರಿ ಮಾಡುವವನನ್ನು ದೈವ ಎಷ್ಟೊಂದು ಪ್ರೀತಿಸುತಿದೇ ಎಂಬುದನ್ನು ಮನ ಮುಟ್ಟುವಂತೆ ಚಿತ್ರಿಸಿದ್ದಾರೆ. ಚಿತ್ರದ ಕೊನೆ ಘಳಿಗೆಯಲ್ಲಿ ದೈವದ ಅಧೀನ ದಲ್ಲಿರುವ ಜಾಗ ದೈವದ ಸುಪರ್ದಿಗೆ ಸೇರಲು ಶ್ರಮಿಸಿದ ಪೊಲೀಸ್ ಅಧಿಕಾರಿಯನ್ನು ದೈವ ತನ್ನ ಕೈ ಭಾಷೆಯಲ್ಲಿ ಕರೆದು ಅಧಿಕಾರಿಯ ಕೈಯನ್ನು ತನ್ನ ಎದೆಗೆ ಒತ್ತಿ ಮುದ್ದಾಡಿ ತನ್ನ ಸಂತಸವನ್ನು ವ್ಯಕ್ತ ಪಡಿಸುವ ದೃಶ್ಯವಂತೂ ತುಂಬಾ ಹೃದಯ ಕರಗುವಂತಿತ್ತು.ದೈವಕ್ಕೆ ತನ್ನನ್ನು ನಂಬಿಕೊಂಡು ಬದುಕುವವರು ಧರ್ಮದ ಹಾದಿಯಲ್ಲಿ ಬದುಕುವಂತಾದರೆ ಅದರಷ್ಟು ಖುಷಿ ದೈವಕ್ಕೆ ಬೇರೊಂದಿಲ್ಲ ಅನ್ನಬಹುದು ಅಲ್ಲವೇ !! ಒಂದು ಆದ್ಯಾತ್ಮಿಕ ಹಾದಿಯಲ್ಲಿ ಹೋಗುವ ಈ ಚಿತ್ರದ ನಡುವೆ ನಾಯಕ ನಟ ನಟಿಯರ ಪ್ರಣಯಕ್ಕೆ ಸಂಬಂಧಿಸಿ ಹಾಕಿದ ಮಸಾಲ ಹಾಗೂ ಸಾಹುಕಾರನ ಅನೈತಿಕ ಸಂಬಂಧ ನಡೆಯುತ್ತಿರುವಾಗ ಕಾದು ಕುಳಿತ ಶಿವನಿಗೆ ಅಲ್ಲಿ ದೈವ ಕಣ್ಣ ಮುಂದೆ ಬಂದಂತಾದಾಗ ಸಾಹುಕಾರ ಹೆದರಿ ತನ್ನ ಬಟ್ಟೆ ಯನ್ನು ಕೈಯಲ್ಲಿ ಹಿಡಿದು ಓಡುವ ದೃಶ್ಯ ಕಮರ್ಷಿಯಲ್ ದೃಷ್ಟಿ ಯಿಂದ ಒಪ್ಪಬೇಕೆ ವಿನಃ ಅದನ್ನು ಬೇರೆ ರೀತಿಯಲ್ಲಿ ತೋರಿಸುತ್ತಿದ್ದರೆ ಇನ್ನೂ ಭಕ್ತಿ ಪೂರ್ವಕವಾಗಿ ಮೂಡಿ ಬರುತ್ತಿತ್ತು..ಯಾಕೆಂದರೆ ತುಳು ಮಾತನಾಡಲು ಬರುವ ಕನ್ನಡ ಬಾರದ ಮಕ್ಕಳಿಗೆ ದೈವದ ಭಕ್ತಿಯ ಹಾದಿಯಲಿ ನಡೆಯುವ ದೃಶ್ಯಗಳ ನಡುವೆ ಇಂತಹ ದೃಶ್ಯ ಬಂದಾಗ ಸ್ವಲ್ಪ ಗೊಂದಲ ಮೂಡಿಸಿರುವುದು ಸತ್ಯ ದರ್ಶನ...ಕ್ಷಮಿಸಿ ಇಂತಹಾ ಸಿನೆಮಾ ಇಷ್ಟರ ತನಕ ಬಂದಿಲ್ಲ! ಇನ್ನು ಮುಂದೆ ಬರಕೂಡದು !... ಇದೇ ಮೊದಲು ಇದೇ ಕೊನೆಯಾಗಲಿ..............................ಯಾಕೆ??? ಯಾಕೆಂದರೆ!!!ಇವತ್ತು ಒಂದು ಪಂಜುರ್ಲಿ ದೈವ ಮತ್ತು ಅದಕ್ಕೆ ಸೇರಿದ ಜಾಗವನ್ನು ಆಧಾರವಾಗಿಟ್ಟುಕೊಂಡು ಒಂದು ಕತೆ ನಿರ್ಮಿಸಿ. ದೈವಾರಾಧನೆಯನ್ನು ತೆರೆಯ ಮೇಲೆ ತೋರಿಸಿ .ಜನಮನ ಹಣ ಗೆದ್ದ ನಿರ್ಮಾಪಕರು ಉತ್ಸಾಹದಿಂದ ನಾಳೆ ಇದರ ಮುಂದುವರಿದ ಭಾಗ ಕಾಂತಾರ -2 ಬಂದರೂ ಬರಬಹುದು.ಅಥವಾ ಇಂತಹ ಸಿನಿಮಾದಿಂದ ಪ್ರೇರಿತಗೊಂಡ ಕನ್ನಡ ತುಳು ಚಿತ್ರ ನಿರ್ಮಾಪಕರು ಮುಂದಿನ ಕತೆಗಳಲ್ಲಿ ಜುಮಾದಿ ಜಾರಂದಾಯ ಕೊರಗಜ್ಜಾ ಮುಂತಾದ ಕಾರ್ಣಿಕದ ಕ್ಷೇತ್ರಗಳ ಕತೆ ಸೃಷ್ಟಿಸಿ ಕೋಲ ನೇಮ ತಂಬಿಲದ ಕೆಲವೊಂದು ದೃಶ್ಯಗಳನ್ನು ಕತೆಗೆ ಬಂಡವಾಳವನ್ನಾಗಿಸಿ ಹಣ ಮಾಡುವ ದಂಧೆ ಶುರು ಆದರೂ ಆಗಬಹುದು..ದೈವ ನರ್ತನ ಆರಾಧನೆಯನ್ನು ಬೇಕಂತಲೇ ಸ್ವಲ್ಪ ವಿರೂಪಗೊಳಿಸಿ ಚಿತ್ರವನ್ನು ವಿರೋಧಿಸುವಂತೆ ಅವರೇ ಮಾಡಿ ಪ್ರಚಾರ ಪಡೆದು ಸಿನಿಮಾವನ್ನು ಗೆಲ್ಲಿಸುವ ಕೆಟ್ಟ ಪ್ರಜ್ಞೆ ಬಂದರೂ ಆಶ್ಚರ್ಯವಿಲ್ಲ.... ಹಿಂದೂ ಧರ್ಮದ ದೇವರುಗಳನ್ನು ಕೆಟ್ಟದಾಗಿ ತೋರಿಸಿ ಸಿನಿಮಾ ಮಾಡಿರುವುದನ್ನು ನಾವು ನೋಡುತ್ತಲೇ ಬಂದಿದ್ದೇವೆ.ಯಾಕೆಂದರೆ ಕೆಲವೊಂದು ನಿರ್ಮಾಪಕರಿಗೆ ತನ್ನ ಜನಪ್ರಿಯತೆ ಹಾದಿ ತಪ್ಪಿಸುವುದರಲ್ಲಿ ಸಂಶಯವಿಲ್ಲ.. ತುಳುನಾಡಿನ ದೈವ ಮತ್ತು ಆರಾಧನೆಯನ್ನು ತೆರೆಯ ಮೇಲೆ ಭಯವಿಲ್ಲದೆ ತೋರಿಸಿ ಮುಂದಿನ ದಿನಗಳಲ್ಲಿ ಕೋಲ ನೇಮ ಗಳನ್ನೂ ತೆರೆಯ ಮೇಲೆ ಮಾತ್ರ ನೋಡುವ ಕಾಲ ಬಂದರೂ ಬರಬಹುದು.....ಇವತ್ತು ಕಾಂತಾರ ಸಿನೆಮಾದಲ್ಲಿ ಬರುವ ಕೋಲದ ದೃಶ್ಯ ಕಂಡು ಭಾವೋದ್ರೇಕರಾಗಿ ಕೈ ಮುಗಿಯುವುದು ಅದನ್ನು ನೋಡಿ ಭಕ್ತಿಪರವಶ ವಾಗಿರುವುದನ್ನು ನೋಡಿದರೆ ಮುಂದಿನ ದಿನಗಳಲ್ಲಿ ಅದು ನಮ್ಮ ದುರಾದೃಷ್ಟ ಎಂದೆಣಿಸಿಕೊಳ್ಳ ಬಹುದು....!! ದೈವ ಕಾರ್ಣಿಕಗಳನ್ನು ನಮ್ಮ ಭಯ ಭಕ್ತಿಯ ಮೂಲಕ ನಮ್ಮ ಮಣ್ಣಿನಲ್ಲಿಯೇ ಆರಾಧಿಸಿಕೊಂಡು ಅದನ್ನು ಅನುಭವಿಸಬೇಕೇ ವಿನಃ. ..ಸಿನಿಮಾದಲ್ಲಿನ ಕ್ರಿಯೇಟಿವ್ ಥಿಯೇಟರಿನ ಸೌಂಡ್ ಎಫೆಕ್ಟ್ ಗಳಿಗೆ ರೋಮಾಂಚನಗೊಂಡು ಭಕ್ತಿ ಪರವಶಗೊಳ್ಳುವುದು ನಿಜವಾದ ದೈವ ಭಕ್ತಿ ಅಲ್ಲವೇ ಅಲ್ಲ...ತುಳುನಾಡಿನ ದೈವ ದೇವರುಗಳ ಆರಾಧನೆಯನ್ನು ತುಳುವರ ಮುಂದಿನ ಪೀಳಿಗೆಗೆ ತಿಳಿಸುವಂತಾಗಲು .. ಕೋಲ ಧರ್ಮ ನೇಮಗಳಂತಹ ಕಾರ್ಯಗಳನ್ನು. ನಮ್ಮ ನೆಲದಲ್ಲಿಯೇ ಮಾಡಿ.ವಾದ್ಯ ಪಾರ್ಧನ ದೈವ ನರ್ತನಗಳನ್ನು ನಿಜ ಕಣ್ಣಿನಿಂದ ನೋಡಿ ಭಯ ಭಕ್ತಿಯನ್ನು ತುಂಬಿಸಿ ಕೊಂಡರೆ ಖಂಡಿತವಾಗಿಯೂ ದೈವ ದೇವರುಗಳ ಕಾರ್ಣಿಕಗಳನ್ನು ನಿಜ ಜೀವನದಲ್ಲಿ ಅನುಭವಿಸಬಲ್ಲಿರಿ !! ಸಿನಿಮಾ ನೋಡಿ "ಸೌಂಡ್ ಎಫೆಕ್ಟ್ ಗೆ ಭಯ ಭಕ್ತಿ ಬಂದಲ್ಲಿ ದೈವದ ಕಾರ್ಣಿಕ ಖಂಡಿತಾ ಅನುಭವಿಸಲಾರಿರಿ.....ಅಲ್ಲದೆ ಅದರಿಂದ ವಿಘ್ನವೇ ಹೆಚ್ಚು ಈ ಒಂದು ಸಿನೆಮಾ ಕೆಲವರನ್ನು ಎಚ್ಚರಿಸುವ ಸಲುವಾಗಿ ದೈವ ಸಂಕಲ್ಪದಿಂದ ಭರ್ಜರಿ ಯಶಸ್ಸು ಕಂಡಿದೆ ಮಾತ್ರವಲ್ಲದೆ ಇನ್ನು ಮುಂದೆ ಇಂತಹ ಸಿನಿಮಾವನ್ನು ತಯಾರಿಸಿದರೆ ಯಶಸ್ಸು ಬಿಡಿ ಹಲವಾರು ಸಮಸ್ಯೆಗಳನ್ನು ಎದುರಿಸುವ ಸಮಸ್ಯೆ ಬರಲಿದೆ....ನಿಮಗೆ ತಿಳಿದಿರಲೂ ಬಹುದು ಕೋಟಿ ಚೆನ್ನಯ ಪ್ರಥಮ ಬ್ಲಾಕ್ ಆಂಡ್ ವೈಟ್ ಸಿನಿಮಾವನ್ನು ಕೂರ್ಕಾಲ್ ಗರಡಿಯಲ್ಲಿ ಚಿತ್ರೀಕರಣ ಮಾಡಿದಾಗ ಮತ್ತು ಬಿಡುಗಡೆಗೊಂಡ ನಂತರ ನಟಿಸಿದ ನಟರಿಗೆ ಹಲವಾರು ಸಮಸ್ಯೆಗಳು ಬಂದಿರುವುದನ್ನು ನಾನು ಸಣ್ಣ ವಯಸ್ಸಿನಲ್ಲಿ ಕೇಳಿದ ನೆನಪು...ಆಪ್ತ ಮಿತ್ರದಂತಹ ಕನ್ನಡ ಸಿನೆಮಾದಲ್ಲೂ ಸಮಸ್ಯೆ ಕಂಡುಬಂದಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.... ಎಚ್ಚರಿಕೆ ನಿರ್ಮಾಪಕರೇ ತುಳು ನಾಡಿನ ದೈವಗಳು ಇದಕ್ಕಿಂತಲೂ ಭಯ ಭಯಂಕರ !!ಆಯೆ ಬುಡಿಯೆಡಲಾ ಯಾನ್ ಬುಡಯೆ!! ಈ ದೈವ ನುಡಿ ನೆನಪಿರಲಿ ನನ್ನ ಆಲೋಚನೆ ತಪ್ಪಿದ್ದರೆ ಕ್ಷಮೆ ಇರಲಿ ಬರಹ : ಚಂದ್ರಕೃಷ್ಣ ಶೆಟ್ಟಿ ಬೆರ್ಮೊಟ್ಟು ಇನ್ನಂಜೆ ( ಕಾಪುದಾರ್ )

ಕಾಪು : ಟೆಂಪೋ ಚಾಲಕ ಶಿವ ಪೂಜಾರಿ ನಿಧನ

Thumbnail
Posted On: 13 Oct 2022, 11:29 PM

ಕಾಪು : ಟೆಂಪೋ ಚಾಲಕ ಶಿವ ಪೂಜಾರಿ ನಿಧನ ಕಾಪು : ಇಲ್ಲಿನ ಟೆಂಪೋ ಚಾಲಕ ಪೊಲಿಪುಗುಡ್ಡೆ ನಿವಾಸಿ ಶಿವ ಪೂಜಾರಿ (4೦) ಅವರು ಅಕ್ಟೋಬರ್ 13ರಂದು ಅಸೌಖ್ಯದಿಂದಾಗಿ ನಿಧನ ಹೊಂದಿದರು ಅವಿವಾಹಿತರಾಗಿದ್ದ ಅವರು ತಾಯಿ, ನಾಲ್ಕು ಮಂದಿ ಸಹೋದರರು ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಕಾಪು ಗೂಡ್ಸ್ ಟೆಂಪೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಯಾಗಿದ್ದ ಅವರು ಕಳೆದ 15 ವರ್ಷದಿಂದ ತನ್ನ ಸ್ವಂತ ಟೆಂಪೋ ಚಲಾಯಿಸುತ್ತಿದ್ದರು.

ಉಚ್ಚಿಲದಲ್ಲಿ ಸ್ಕಾರ್ಪಿಯೋ ಚಾಲಕನ ಅವಾಂತರ 4 ವಾಹನಗಳಿಗೆ ಡಿಕ್ಕಿ

Thumbnail
Posted On: 13 Oct 2022, 11:25 PM

ಉಚ್ಚಿಲ : ರಾಷ್ಟ್ರೀಯ ಹೆದ್ದಾರಿ 66ರ ಅನಾಫಿ ಮಸೀದಿ ಎದುರು ಸ್ಕಾರ್ಪಿಯೋ ಚಾಲಕನ ಅತೀವೇಗ ಹಾಗೂ ನಿರ್ಲಕ್ಷತೆಯ ಚಾಲನೆಯಿಂದ ಸರಣಿ ಅಪಘಾತ ಗುರುವಾರ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕ ಎರ್ಮಾಳು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಅಲ್ಲಿ ನಿಲ್ಲಿಸದೆ ಅತಿವೇಗದಿಂದ ಬಂದು ಉಚ್ಚಿ. ರಾ. ರಾಷ್ಟ್ರೀಯ ಹೆದ್ದಾರಿ 66ರ ಅನಾಫಿ ಮಸೀದಿಯವರು ಎರ್ಟಿಗಾ ಕಾರು ಬೈಕು ಹಾಗೂ ಮೀನಿನ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಸ್ಕಾರ್ಪಿಯೋ ಕಾರು ಗುದ್ದಿದ ರಭಸಕ್ಕೆ ಎರ್ಟಿಗಾ ಕಾರು ವಿಭಾಜಕ ಏರಿ ಇನ್ನೊಂದು ಪಥದತ್ತ ತಿರುಗಿ ನಿಂತಿದೆ. ಸ್ಕೂಟಿ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾಪು ವೃತ್ತ ನಿರೀಕ್ಷಕ ಕೆಸಿ ಪೂವಯ್ಯ, ಕಾಪು ಠಾಣಾಧಿಕಾರಿ ಶ್ರೀಶೈಲ ಮುರುಗೋಡ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಮತ್ತು ಸಿಬ್ಬಂದಿ ಬೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಹೆದ್ದಾರಿಯಾಗಿ ಅಪಘಾತಕ್ಕೆ ಹೆದ್ದಾರಿ ಅರೆಬರೆ ಕಾಮಗಾರಿ ಮತ್ತು ಹೆದ್ದಾರಿಯಲ್ಲಿ ವಿದ್ಯುತ್ ಇಲ್ಲದ ಕಾರಣ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ : ಜನತಾದಳ ಪಕ್ಷದ ಜಿಲ್ಲಾ ವಕ್ತಾರರಾಗಿ ವಾಸುದೇವ ರಾವ್

Thumbnail
Posted On: 12 Oct 2022, 11:16 PM

ಉಡುಪಿ : ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಜನತಾದಳ( ಜಾತ್ಯತೀತ) ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂರವರು ವಾಸುದೇವ ರಾವ್ ರವರನ್ನು ಉಡುಪಿ ಜಿಲ್ಲೆಯ ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾ ವಕ್ತಾರರನ್ನಾಗಿ ನೇಮಕಗೊಳಿಸಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾಪು ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ರವೀಂದ್ರ ಪೂಜಾರಿ ಮರು ಆಯ್ಕೆ

Thumbnail
Posted On: 12 Oct 2022, 06:17 PM

ಕಾಪು : ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ.) ಬೆಂಗಳೂರು, ಇದರ ಕಾಪು ತಾಲೂಕಿನ ಮಹಾ ಸಭೆಯು ಕಾಪು ಹೋಟೆಲ್ ಮಂದಾರದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಘವನ್ನು ಹುಟ್ಟು ಹಾಕಿ, ಸ್ಥಾಪಕ ಅಧ್ಯಕ್ಷರಾಗಿ ದೀರ್ಘ ಕಾಲ ಸೇವೆ ಸಲ್ಲಿಸಿದ ನಿಕಟಪೂರ್ವ ಜಿಲ್ಲಾ ಅಧ್ಯಕ್ಷರಾದ ನಾಗರಾಜ್ ರಾವ್ ಎಮ್. ರವರನ್ನು ಕಾಪು ತಾಲೂಕು ಸಮಿತಿಯಿಂದ ಸನ್ಮಾನಿಸಲಾಯಿತು. ಮುಂದಿನ ಮೂರು ವರ್ಷದ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲೆಯ ಮೇಲುಸ್ತುವಾರಿಯೊಂದಿಗೆ ಚುನಾವಣೆ ನಡೆದು, ಚುನಾವಣಾ ಪ್ರಕ್ರಿಯೆಯಲ್ಲಿ ಮಹಾದೇವಿ ಎಲೆಕ್ಟ್ರಿಕಲ್ಸ್ ನ ರವೀಂದ್ರ ಪೂಜಾರಿ ಯವರು ಮರು ಆಯ್ಕೆಯಾಗಿರುತ್ತಾರೆ ಎಂದು ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀಕಾಂತ್ ಶೆಣೈರವರು ಘೋಷಿಸಿದರು. ಉಪಾಧ್ಯಕ್ಷರಾಗಿ ವಸಂತ ಸುವರ್ಣ, ಕಾರ್ಯದರ್ಶಿಯಾಗಿ ಗಿರಿಧರ್, ಜತೆ ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿಯಾಗಿ ಮುಹಮ್ಮದ್ ಆಝಮ್ ರವರು ಅವಿರೋಧವಾಗಿ ಆಯ್ಕೆಯಾಗಿರುವರು ಎಂದು ತಿಳಿಸಿದರು. ಜಿಲ್ಲಾ ಮಟ್ಟದ ಸಂಘದ ಪ್ರಚಾರ ಸಭೆಯ ಅಧ್ಯಕ್ಷರಾಗಿ ಅನ್ವರ್ ಅಲಿ ಕಾಪು ರವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ಜಿಲ್ಲಾ ಅಧ್ಯಕ್ಷರಾದ ಶ್ರೀಕಾಂತ್ ಶೆಣೈ , ಉಪಾಧ್ಯಕ್ಷರು ಗಳಾದ ಅಶೋಕ್ ಸುವರ್ಣ , ಕೃಷ್ಣ ಕುಲಾಲ್, ಕಾರ್ಯದರ್ಶಿ ಸುರೇಶ್ ಜತ್ತನ್ನ , ಕೋಶಾಧಿಕಾರಿ ಆನಂದ ಶೇರಿಗಾರ, ಸಂಘಟನಾ ಕಾರ್ಯದರ್ಶಿ ಸುದರ್ಶನ್ ರವರು ಭಾಗವಹಿಸಿದ್ದರು. ಸಭಾಧ್ಯಕ್ಷತೆಯನ್ನು ರವೀಂದ ಪೂಜಾರಿ ವಹಿಸಿದ್ದರು. ಸುಪ್ರೀತ್ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ಹೇಮಂತ್ ಪಡುಬಿದ್ರಿ ಸ್ವಾಗತಿಸಿದರು. ಕಾರ್ಯದರ್ಶಿ ದೇವರಾಜ ಕೋಟ್ಯಾನ್ ವರದಿ ವಾಚಿಸಿದರು. ಕೋಶಾಧಿಕಾರಿ ಮೋಹನ ಆಚಾರ್ಯ ಲೆಕ್ಕ ಪತ್ರ ಮಂಡಿಸಿದರು. ಕಾರ್ಯಕ್ರಮವನ್ನು ಅನ್ವರ್ ಅಲಿ ಕಾಪು ಮತ್ತು ಪ್ರಕಾಶ್ ಅಂಚನ್ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಮುಹಮ್ಮದ್ ವಂದಿಸಿದರು.

ಕಾಪು: ನಿವೃತ್ತ ಯೋಧ ಮೂಳೂರು ನಿವಾಸಿ ಹಾಜಿ ಅಬ್ದುಲ್ ರಝಾಕ್ ಶಾಬಾನ್ ನಿಧನ

Thumbnail
Posted On: 12 Oct 2022, 06:01 PM

ಕಾಪು : ನಿವೃತ್ತ ಯೋಧ ಮೂಳೂರು ನಿವಾಸಿ ಹಾಜಿ ಅಬ್ದುಲ್ ರಝಾಕ್ ಶಾಬಾನ್ (85) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನ ಹೊಂದಿದರು. 18ನೇ ವಯಸ್ಸಿನಲ್ಲಿ ವಾಯುಸೇನೆಗೆ ಸೇರ್ಪಡೆಗೊಂಡ ಅಬ್ದುಲ್ ರಝಾಕ್ ಶಾಬಾನ್ ಅವರು ಎರಡು ವರ್ಷ ಬೆಂಗಳೂರಿನ ಏರ್‌ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ ಕಮ್ಯುನಿಕೇಶನ್ ಎಂಜಿನಿಯರಿಂಗ್ ಡಿಪ್ಲೋಮಾ ಪಡೆದು ಬಳಿಕ ಕಮ್ಯುನಿಕೇಶನ್ ಆಫಿಸರ್ ಆಗಿ ಕಾರ್ಯನಿರ್ವಹಿಸಿದ್ದರು. ವಾಯುಸೇನಾ ಕಾಲಾವಧಿಯಲ್ಲಿ ದೆಹಲಿ, ಆಗ್ರಾ ಹಾಗೂ ಹಿಮಾಲಯದ ತಪ್ಪಲಿನ ಲಡಾಖ್ ಸೇನಾ ನೆಲೆಯಲ್ಲೂ ಕಾರ್ಯಾಚರಣೆ ನಡೆಸಿದ್ದರು. 1962ರ ಚೀನಾ ಯುದ್ಧ 1965ರ ಪಾಕಿಸ್ತಾನ ಯುದ್ಧ ಹಾಗೂ 1971ರ ಪಾಕಿಸ್ತಾನದ ವಿರುದ್ಧ ಸಮರ ಸೇನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅನೇಕ ಮೆಡಲ್‌ಗಳಿಂದ ಪುರಸ್ಕೃತರಾದರು. 1975ರಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ ನಂತರ ಧಾರ್ಮಿಕ ಸೇವಾರಂಗದಲ್ಲಿ ತೊಡಗಿಸಿಕೊಂಡಿದ್ದರು.  ಮೂಳೂರಿನ ಮಸೀದಿಯ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಮೂರು ಭಾರಿ ಮದ್ರಸದ ಹಾಗೂ ಒಂದು ಭಾರಿ ಮಸೀದಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕೊಡುಗೈ ದಾನಿಯೂ ಆಗಿದ್ದ ಇವರು ತಂದೆಯ ಹೆಸರಿನಲ್ಲಿ ಮುಹಮ್ಮದ್ ಶಾಬಾನ್ ಟ್ರಸ್ಟ್ ಸ್ಥಾಪಿಸಿ ಅಶಕ್ತ ಕುಟುಂಬಗಳಿಗೆ ಧನಸಹಾಯ ನೀಡುತ್ತಿದ್ದರು. ಹಾಜಿ ಅಬ್ದುಲ್ ರಝಾಕ್ ಶಾಬಾನ್ ಅವರು ಪತ್ನಿ, ಗಂಡು ಮಕ್ಕಳು, ಬಂಧುಬಳಗವನ್ನು ಅಗಲಿದ್ದಾರೆ.

ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಗೆ ಹರ್ಷಿತಾ ಇನ್ನಂಜೆ ಆಯ್ಕೆ

Thumbnail
Posted On: 12 Oct 2022, 05:54 PM

ಕಾಪು : ಪದವಿ ಪೂರ್ವ ಶಿಕ್ಷಣ ಇಲಾಖೆ ಇವರು ಶಿವಮೊಗ್ಗದಲ್ಲಿ ಅಕ್ಟೋಬರ್ 10 ರಂದು ನಡೆಸಿದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಮಾರಿ ಹರ್ಷಿತಾ ಇನ್ನಂಜೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿರುತ್ತಾರೆ. ಮುಂಬರುವ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ಕತ್ತಲ ಚಿಗುರು ಮಕ್ಕಳ ಕಿರು ಚಿತ್ರ ಬಿಡುಗಡೆ

Thumbnail
Posted On: 11 Oct 2022, 07:25 PM

ಉಡುಪಿ : ಕತ್ತಲ ಚಿಗುರು ಮಕ್ಕಳ ಕಿರು ಚಿತ್ರದ ಬಿಡುಗಡೆ ಕಾರ್ಯಕ್ರಮವು ಅಕ್ಟೋಬರ್ 9 ರಂದು ಬ್ರಹ್ಮಾವರ ಬಂಟರ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬ್ರಹ್ಮಾವರ ವಲಯ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಹಾವಂಜೆ ಉದ್ಘಾಟಿಸಿದರು. ಕಿರು ಚಿತ್ರವನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ ವಲಯ ಅಧ್ಯಕ್ಷರಾದ ಎಂ ಗಣೇಶ್ ಕುಮಾರ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಅಧ್ಯಾಪಕರಾದ ಸಂಜೀವ ಮಡಿವಾಳ ಕುಕ್ಕಿಕಟ್ಟೆ ಬೆಳ್ಳಂಪಳ್ಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆದಿತ್ಯ ಭಾಸ್ಕರ್ ಕರಂಬಳ್ಳಿ, ಶಿಕ್ಷಣ ಸಂಯೋಜಕರು ಕುಂದಾಪುರ ವಲಯ ಶೇಖರ್ ಯು., ವಿ ಎಸ್ ಗ್ರೂಪ್ ಹಾಗೂ ನಮ್ಮ ಉಡುಪಿ ಟಿವಿ ನಿರ್ದೇಶಕರು ಹಾಗೂ ಸಂಸ್ಥಾಪಕರು ಹಾಗೂ ಪ್ರಧಾನ ಕಾರ್ಯದರ್ಶಿ ಅಖಿಲ ಭಾರತ ತುಳುನಾಡ ದೈವರಾಧಕರ ಒಕ್ಕೂಟ( ರಿ ) ಉಡುಪಿ ಜಿಲ್ಲೆ ಇದರ ವಿನೋದ್ ಶೆಟ್ಟಿ, ಕಿರುತೆರೆ ನಟಿ ಪೂಜಾ ಶೆಟ್ಟಿ, ಹಾಲು ಉತ್ಪಾದಕರ ಸಹಕಾರಿ ಸಂಘ ಬೆಳ್ಳಂಪಳ್ಳಿ ಉಪಾಧ್ಯಕ್ಷ ಸದಾನಂದ ಶೆಟ್ಟಿ, ಭೂತರಾಜ ದೇವಸ್ಥಾನ ಬೆಳ್ಳಂಪಳ್ಳಿ ಕುಕ್ಕಿಕಟ್ಟೆ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಜಿಲ್ಲಾಧ್ಯಕ್ಷರು ಹಾಲು ಉತ್ಪಾದಕರ ನೌಕರರ ಸಂಘ ಬ್ಯಾಂಕಿಂಗ್ ವಿಭಾಗದ ಓಂ ಪ್ರಕಾಶ್ ಕೆಮ್ಮಣ್ಣು, ನಿರ್ಮಾಪಕರಾದ ಮಮತಾ ಪಿ ಶೆಟ್ಟಿ ಶ್ರೀನಗರ, ಮಮತಾ ಸಂತೋಷ್ ಶೆಟ್ಟಿ, ರಮಣಿ ಹಾಗೂ ಚಿತ್ರತಂಡದ ಎಲ್ಲಾ ಸದಸ್ಯರು ಉಪಸ್ಥಿತಿಯಿದ್ದರು. ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ ಇದರ ಉಪಾಧ್ಯಕ್ಷರಾದ ಶಶಿಧರ್ ಶೆಟ್ಟಿ ಸ್ವಾಗತಿಸಿದರು. ಕಿರುಚಿತ್ರದ ಚಿತ್ರಕಥೆ ಸಾಹಿತ್ಯ ಸಂಗೀತ ನಿರ್ದೇಶಕ ದಿನೇಶ್ ಕೊಡವೂರು ವಂದಿಸಿದರು.

ಕಾಪು ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ ಪೂರ್ಣಾಹುತಿ ; ಅನ್ನಸಂತರ್ಪಣೆ

Thumbnail
Posted On: 11 Oct 2022, 07:07 PM

ಕಾಪು : ಇಲ್ಲಿನ ಗೌಡ ಸಾರಸ್ವತ ಸಮಾಜದ ಆಡಳಿತಕ್ಕೆ ಒಳಪಟ್ಟಿರುವ ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಅಕ್ಟೋಬರ್ 11ರಂದು ಚಂಡಿಕಾಯಾಗ ಪೂರ್ಣಾಹುತಿ ಮತ್ತು ಅನ್ನಸಂತರ್ಪಣೆ ನಡೆಯಿತು. ಹಳೇ ಮಾರಿಗುಡಿಯ ಅರ್ಚಕ ವೇ| ಮೂ| ಕಮಲಾಕ್ಷ ಭಟ್ ಅವರ ನೇತೃತ್ವದಲ್ಲಿ ವೈದಿಕ ವೃಂದದ ಸಹಭಾಗಿತ್ವದೊಂದಿಗೆ ಚಂಡಿಕಾಯಾಗ ಪೂರ್ಣಾಹುತಿಯ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬಳಿಕ ಹಾಲು ಪಾಯಸ ಸಹಿತವಾಗಿ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ಮಾರಿಯಮ್ಮ ದೇವಿಯ ದರ್ಶನ ಸೇವೆ ನಡೆದು ಭಕ್ತರಿಗೆ ಅನುಗ್ರಹ ಪ್ರಸಾದ ವಿತರಿಸಲಾಯಿತು. ಕಾಪು ಹಳೇ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಅಧ್ಯಕ್ಷ ಕೆ. ಪ್ರಸಾದ್ ಗೋಕುಲ್‌ದಾಸ್ ಶೆಣೈ, ಮಾಜಿ ಆಡಳಿತ ಮೊಕ್ತೇಸರ ಶ್ರೀಧರ ಆನಂದರಾಯ ಶೆಣೈ, ಮೊಕ್ತೇಸರರಾದ ಸದಾಶಿವ ರಾಧಾಕೃಷ್ಣ ಕಾಮತ್, ರಾಜೇಶ್ ಮಾಧವರಾಯ ಶೆಣೈ, ರಾಮ ಶಶಿಧರ ನಾಯಕ್, ಶ್ರೀಕಾಂತ ಲಕ್ಷ್ಮೀನಾರಾಯಣ ಭಟ್, ಆಡಳಿತ ಮಂಡಳಿಯ ಸದಸ್ಯರಾದ ಸುನೀಲ್ ಪೈ, ಚಂದ್ರಕಾಂತ್ ಕಾಮತ್, ಮೋಹನದಾಸ್ ಕಿಣಿ, ಕೃಷ್ಣಾನಂದ ನಾಯಕ್, ರಾಜೇಶ್ ಶೆಣೈ ಹಾಗೂ ವಿವಿಧ ಗಣ್ಯರು, ಕಾಪು ಪೇಟೆಯ ಹತ್ತು ಸಮಸ್ತರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.