Updated News From Kaup
ಅ.13 : ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿಯ ಪುಣೆ ಸಮಿತಿ ಉದ್ಘಾಟನಾ ಸಮಾರಂಭ ; ಶ್ರೀದೇವಿ ಮಹಾತ್ಮೆ ಯಕ್ಷಗಾನ
Posted On: 10 Oct 2022, 11:18 PM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿಗಾಗಿ ರಚಿಸಿದ ಪುಣೆ ಸಮಿತಿಯ ಉದ್ಘಾಟನಾ ಸಮಾರಂಭ ಹಾಗೂ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಹಾವಂಜೆ ಮೇಳದ ಕಲಾವಿದರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನವು ಅಕ್ಟೋಬರ್ 13, ಗುರುವಾರ ಮಧ್ಯಾಹ್ನ ಗಂಟೆ 12:30 ರಿಂದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ನಡೆಯಲಿದೆ. ಪುಣೆ ಬಂಟರ ಸಂಘದ ಅಧ್ಯಕ್ಷ ಹಾಗೂ ಕಾಪು ಮಾರಿಗುಡಿ ಅಭಿವೃದ್ಧಿ ಪುಣೆ ಸಮಿತಿಯ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯ ಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಎಂ ಆರ್ ಜಿ ಗ್ರೂಪ್ ನ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ, ಕಾಪು ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ , ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ , ಮುಂಬಯಿ ಸಮಿತಿಯ ಅಧ್ಯಕ್ಷರಾದ ಸುಧಾಕರ ಹೆಗ್ಡೆ , ಮುಂಬಯಿ ಸಮಿತಿಯ ಕಾರ್ಯಾಧ್ಯಕ್ಷರಾದ ರವಿ ಸುಂದರ್ ಶೆಟ್ಟಿ, ಕಾಪು ಮಾರಿಗುಡಿ ಅಭಿವೃದ್ಧಿ ಪ್ರಚಾರ ಸಮಿತಿ ಪ್ರಧಾನ ಸಂಚಾಲಕರಾದ ಯೋಗೀಶ್ ಶೆಟ್ಟಿ ಬಾಲಾಜಿ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾಗಿರುವ ಉದಯ್ ಸುಂದರ್ ಶೆಟ್ಟಿ, ಸಂದೀಪ್ ಶೆಟ್ಟಿ, ರವಿರಾಜ್ ಶೆಟ್ಟಿ ,ಮೋಹನ್ ಶೆಟ್ಟಿ ,ದಿವಾಕರ ಶೆಟ್ಟಿ, ದಯಾನಂದ್ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಂಗವಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಕೃಪಾಪೋಷಿತ ಯಕ್ಷಗಾನ ಮಂಡಳಿ , ನಾಗವ್ರುಜ ಕ್ಷೇತ್ರ ಪಾವಂಜೆಯ ಪ್ರಸಿದ್ಧ ಕಲಾವಿದರಿಂದ ಸಂಪೂರ್ಣ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಪು ಮಾರಿಯಮ್ಮನ ಭಕ್ತಾದಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಪುಣೆ ಸಮಿತಿಯ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು, ಕಾರ್ಯಾಧ್ಯಕ್ಷರಾದ ಪಾದೂರು ಹೊಸಮನೆ ಮಾಧವ ಆರ್ ಶೆಟ್ಟಿ , ಉಪಾಧ್ಯಕ್ಷರಾದ ಎರ್ಮಾಳ್ ಚಂದ್ರಹಾಸ ಶೆಟ್ಟಿ, ವಿಶ್ವನಾಥ ಪೂಜಾರಿ ಕಡ್ತಲ, ಪ್ರವೀಣ್ ಶೆಟ್ಟಿ ಪುತ್ತೂರು, ಪ್ರಧಾನ ಕಾರ್ಯದರ್ಶಿ ಪ್ರಸನ್ನ ಶೆಟ್ಟಿ ಇನ್ನಂಜೆ , ಕಾರ್ಯದರ್ಶಿ ಉದಯ್ ಶೆಟ್ಟಿ ಕಳತ್ತೂರು , ಗೌರವ ಕೋಶಾಧಿಕಾರಿ ದಿನೇಶ್ ಶೆಟ್ಟಿ ಕಳತ್ತೂರು, ಜೊತೆ ಕೋಶಾಧಿಕಾರಿ ಜಗದೀಶ್ ಶೆಟ್ಟಿ, ವಿವಿಧ ವಲಯಗಳ ಕಾರ್ಯಾಧ್ಯಕ್ಷರಾದ ಗಣೇಶ್ ಹೆಗ್ಡೆ ಪುಂಚೂರು ,ರಾಕೇಶ್ ಶೆಟ್ಟಿ ಬೆಳ್ಳಾರೆ, ರವಿ ಕೆ ಶೆಟ್ಟಿ , ಗಣೇಶ್ ಪೂಂಜಾ, ರೋನಕ್ ಜಯ ಶೆಟ್ಟಿ, ಕಾರ್ಯಾಧ್ಯಕ್ಷೆ ಸುಲತಾ ಸತೀಶ್ ಶೆಟ್ಟಿ ವಿನಂತಿಸಿದ್ದಾರೆ .
ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು : ತಾಂಬೂಲ ಪ್ರಶ್ನೆಯ ಪರಿಹಾರ ಕ್ರಮ ; ಜೀರ್ಣೋದ್ಧಾರದ ಪೂರ್ವಭಾವಿ ಸಭೆ
Posted On: 10 Oct 2022, 02:43 PM
ಕಾಪು : ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು ಇಲ್ಲಿ ತಾಂಬೂಲ ಪ್ರಶ್ನೆಯ ಪರಿಹಾರ ಪ್ರಾರಂಭ ಕಾರ್ಯಕ್ರಮಗಳು ಮತ್ತು ಜೀರ್ಣೋದ್ಧಾರ ಮಾಡುವ ಬಗ್ಗೆ ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ ಯವರ ಮುಂದಾಳತ್ವದಲ್ಲಿ ಪ್ರಥಮ ಪೂರ್ವಭಾವಿ ಸಭೆ ಮೂಡು ಮಟ್ಟಾರು ಬಬ್ಬರ್ಯ ಸಾನಿಧ್ಯದಲ್ಲಿ ಅಕ್ಟೋಬರ್ 9ರಂದು ನಡೆಯಿತು. ಕೇಂಜ ಶ್ರೀಧರ್ ತಂತ್ರಿ ಮತ್ತು ಗುಂಡು ಭಟ್ ಇವರ ತಂಬೂಲ ಪ್ರಶ್ನೆಯಲ್ಲಿ ಕಂಡುಬಂದಂತಹ ಪರಿಹಾರ ಕಾರ್ಯಕ್ರಮಗಳನ್ನು ಮಾಡುವ ದಿನಾಂಕ ಮತ್ತು ವಿವಿಧ ಕ್ರಮಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಜಯಪ್ರಕಾಶ್ ಪ್ರಭು ಅಧ್ಯಕ್ಷರು ವಿಶ್ವ ಹಿಂದೂ ಪರಿಷತ್ ಕಾಪು ತಾಲೂಕು , ಸುರೇಶ ನಾಯಕ್ ಮಟ್ಟಾರು , ಗೋಪಾಲ್ ನಾಯ್ಕ್ ಮಟ್ಟಾರು , ಪ್ರಸಾದ್ ಶೆಟ್ಟಿ, ಮೂಡು ಮಟ್ಟಾರು ದೈವಸ್ಥಾನ ಆಡಳಿತ ಕಮಿಟಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಗೌರವಾ ಧ್ಯಕ್ಷ ಶಂಕರ್ ಶೆಟ್ಟಿ ಉಪಸ್ಥಿತರಿದ್ದರು. ಕಮಿಟಿ ಕಾರ್ಯದರ್ಶಿ ಹರೀಶ್ ಪೂಜಾರಿ ಸ್ವಾಗತಿಸಿದರು. ಕೋಶಾಧಿಕಾರಿ ರವಿ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಅಕ್ರಮ ಕಸಾಯಿಖಾನೆ - ಶಿರ್ವ ಪೋಲಿಸರ ದಾಳಿ
Posted On: 10 Oct 2022, 01:14 PM
ಕಾಪು : ತಾಲೂಕಿನ ಬೆಳಪು ಗ್ರಾಮದ ಹಾಜಿಗೇಟ್ ಬಳಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಯ ಮಾಹಿತಿಯ ಮೇರೆಗೆ ಶಿರ್ವ ಪೋಲಿಸರು ಮಿಂಚಿನ ದಾಳಿ ನಡೆಸಿ ಗೋಮಾಂಸ ಮತ್ತು ಕರುಗಳನ್ನು ವಶಪಡಿಸಿಕೊಂಡು ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಗೋಮಾಂಸ ಮಾಡಲು ಉಪಯೋಗಿಸುತ್ತಿದ್ದ ಪರಿಕರಗಳು, ಗೋಮಾಂಸ ವಶ ಪಡಿಸಿಕೊಂಡಿರುವ ಪೋಲಿಸರು ಒಂದು ಕರುವನ್ನು ರಕ್ಷಿಸಲಾಗಿದ್ದು 3 ದ್ವಿಚಕ್ರ ವಾಹನಗಳನ್ನು ವಶ ಪಡೆದುಕೊಂಡಿದ್ದಾರೆ. ಆರೋಪಿಗಳು ದನದ ಮಾಂಸ ಮಾರಿ ಬಂದ ಹಣವನ್ನು ಹಬ್ಬಕ್ಕಾಗಿ ಖರ್ಚು ಮಾಡಿದ್ದೇವೆ ಎಂದು ಪೋಲಿಸರಿಗೆ ತಿಳಿಸಿದ್ದು, ಕದ್ದು ತಂದ ಸ್ಥಳದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಹಾವೇರಿ ಜಿಲ್ಲಾ ಸಹಕಾರಿ ಯೂನಿಯನ್ ತಂಡ ಭೇಟಿ
Posted On: 10 Oct 2022, 12:42 PM
ಪಡುಬಿದ್ರಿ : ಇಲ್ಲಿನ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.)ಗೆ ಹಾವೇರಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ಅಧ್ಯಕ್ಷರಾದ ಶಿವಾನಂದ ರಾಮಗೇರಿ ಹಾಗೂ ಆಡಳಿತ ಮಂಡಳಿ ಸದಸ್ಯರನ್ನು ಒಳಗೊಂಡ ಅಧ್ಯಯನ ತಂಡವು ಅಕ್ಟೋಬರ್ 7ರಂದು ಭೇಟಿ ನೀಡಿತು. ಈ ಸಂದರ್ಭ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ ಪೂಜಾರಿ ಹಾಗೂ ನಿರ್ದೇಶಕರಾದ ರಸೂಲ್ ವೈ.ಜಿ. ಸೊಸೈಟಿಯ ಕಾರ್ಯವೈಖರಿ ಬಗ್ಗೆ ಅಧ್ಯನ ತಂಡಕ್ಕೆ ಮಾಹಿತಿ ನೀಡಿದರು. ಹಾವೇರಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಶಿವಾನಂದ ರಾಮಗೇರಿ ಯವರು ಸೊಸೈಟಿಯ ಅಭಿವೃದ್ಧಿ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ, ನಿರ್ದೇಶಕರಾದ ರಸೂಲ್ ವೈ.ಜಿ., ಗಿರೀಶ್ ಪಲಿಮಾರ್, ರಾಜಾರಾಮ್ ರಾವ್, ಯಶವಂತ್ ಪಿ.ಬಿ., ಮಾಧವ ಆಚಾರ್ಯ, ಸ್ಟೇನ್ನಿ ಕ್ವಾಡ್ರಸ್, ಮುಖ್ಯಕಾರ್ಯನಿರ್ವಾಹಣಾಧಿಕಾರಿ ನಿಶ್ಮಿತಾ ಪಿ.ಎಚ್ ಹಾಗೂ ಸಿಬಂದಿ ವೃಂದ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ (ಪ್ರಭಾರ) ಹರೀಶ್ ಬಿ., ಸಿಬಂದಿ ವಿಶ್ವನಾಥ್ ಉಪಸ್ಥಿತರಿದ್ದರು.
ಮೂಳೂರು : ಎಸ್ಡಿಪಿಐಯಿಂದ ಆಂಬುಲೆನ್ಸ್ ಲೋಕಾರ್ಪಣೆ ; ಪಕ್ಷ ಸೇರ್ಪಡೆ ಕಾರ್ಯಕ್ರಮ
Posted On: 10 Oct 2022, 12:14 PM
ಮೂಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಮೂಳೂರು ವಲಯ ಇದರ ವತಿಯಿಂದ ಅಂಬುಲೆನ್ಸ್ ಹಸ್ತಾಂತರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ಅಕ್ಟೋಬರ್ 9 ರಂದು ಕಾಪು ತಾಲೂಕಿನ ಮೂಳೂರಿನಲ್ಲಿ ಜರಗಿತು. ಪಕ್ಷದ ಸಮಾಜಸೇವೆಯನ್ನು ಗುರುತಿಸಿಕೊಂಡು ದಾನಿಗಳು ಜಾತಿ-ಮತ ಭೇದವಿಲ್ಲದೆ ಸಾರ್ವಜನಿಕರ ಸೇವೆಗಾಗಿ ಆಂಬುಲೆನ್ಸ್ ನ್ನು ಎಸ್ಡಿಪಿಐ ಮೂಳೂರು ವಲಯಕ್ಕೆ ಹಸ್ತಾಂತರಿಸಲಾಯಿತು. ಸಾರ್ವಜನಿಕ ಸೇವೆಗಾಗಿ ನೀಡಿದ ಆಂಬುಲೆನ್ಸ್ ಉದ್ಘಾಟನೆಯನ್ನು ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರು ಹಾಗೂ ಎಸ್ಡಿಪಿಐ ಉಡುಪಿ ಜಿಲ್ಲಾ ಉಸ್ತುವಾರಿಯಾದ ಅಥಾವುಲ್ಲಾ ಜೋಕಟ್ಟೆ ನೆರವೇರಿಸಿದರು. ತದನಂತರ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡ 30 ಕ್ಕೂ ಅಧಿಕ ಜನರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರೀಫ್ ಹಸನಬ್ಬ ವಹಿಸಿದ್ದರು .ಮುಖ್ಯ ಅತಿಥಿಯಾಗಿ ಎಸ್ಡಿಪಿಐ ಉಡುಪಿ ಜಿಲ್ಲಾ ಅಧ್ಯಕ್ಷರಾದ ಶಾಹಿದ್ ಆಲಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಅಶ್ರಫ್ ಬಾವ, ಪಕ್ಷದ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.
ಶಿರ್ವ: ಪಿಕಪ್ ವಾಹನ ಡಿಕ್ಕಿ- ಪಾದಾಚಾರಿ ಮೃತ್ಯು
Posted On: 10 Oct 2022, 11:48 AM
ಶಿರ್ವ : ಪಿಕಪ್ ವಾಹನ ಡಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಶಿರ್ವದ ಮುಖ್ಯ ರಸ್ತೆಯ ನ್ಯಾರ್ಮ ಸೇತುವೆ ಬಳಿ ರವಿವಾರ ರಾತ್ರಿ ನಡೆದಿದೆ. ಮೃತ ಪಾದಚಾರಿಯನ್ನು ಎವುಜಿನ್ ಬ್ರಿಟ್ಟೊ(50) ಎಂದು ಗುರುತಿಸಲಾಗಿದೆ. ಎವುಜಿನ್ ಬ್ರಿಟ್ಟೊ ಅವರು ಶಿರ್ವ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಟಪಾಡಿ ಕಡೆಯಿಂದ ಬಂದ ಪಿಕಪ್ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಮಟ್ಟಾರುವಿನಲ್ಲಿ ಭಾರತ್ ಮಾತಾ ಪೂಜನಾ, ಸಾಮೂಹಿಕ ದೀಪ ಪ್ರಜ್ವಲನೆ
Posted On: 09 Oct 2022, 10:21 PM
ಉಡುಪಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ವತಿಯಿಂದ ದಶಮಾನೋತ್ಸವದ ಪ್ರಯುಕ್ತ ಭಾರತ್ ಮಾತಾ ಪೂಜನಾ,ಸಾಮೂಹಿಕ ದೀಪ ಪ್ರಜ್ವಲನೆ ಕಾರ್ಯಕ್ರಮ ಜರಗಿತು. ಈ ಸಂದರ್ಭ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಕರ್ನಾಟಕ ಪ್ರದೇಶ ಜನತಾದಳ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಸುಧಾಕರ ಶೆಟ್ಟಿ ಹೆಜಮಾಡಿ ನೇಮಕ
Posted On: 09 Oct 2022, 09:53 PM
ಉಡುಪಿ : ಜನತಾದಳ (ಜಾತ್ಯತೀತ) ಪಕ್ಷದ ಸುಧಾಕರ ಶೆಟ್ಟಿ ಹೆಜಮಾಡಿ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಜನತಾದಳ( ಜಾತ್ಯತೀತ) ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ ರವರು ಸುಧಾಕರ ಶೆಟ್ಟಿ ಹೆಜಮಾಡಿಯವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು : ಶಬರಿಮಲೆ ಅಯ್ಯಪ್ಪ ಸೇವಾ ಸಮಾಜ ತಾಲೂಕು ಘಟಕದ ಅಧ್ಯಕ್ಷರಾಗಿ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಆಯ್ಕೆ
Posted On: 09 Oct 2022, 06:20 PM
ಕಾಪು : ಶ್ರೀ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಇದರ ಕಾಪು ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆಯ ಸಭೆಯು ಎರ್ಮಾಳು ಪೂಂದಾಡು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಸಾಸ್ ನ ಉಡುಪಿ ಜಿಲ್ಲಾ ಅಧ್ಯಕ್ಷರಾದ ರಾಧಾಕೃಷ್ಣ ಮೆಂಡನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಾಲಿಗೆ ನೂತನ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ ಕೊಪ್ಪಲಂಗಡಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಗೌರವ ಅಧ್ಯಕ್ಷರಾಗಿ ಸುರೇಶ್ ಶೆಟ್ಟಿ ಗುರ್ಮೆ, ಮೋಹನ್ ಬಂಗೇರ ಕಾಪು, ಲೀಲಾಧರ ಶೆಟ್ಟಿ ಕರಂದಾಡಿ, ಗೌರವ ಸಲಹೆಗಾರರಾಗಿ ವಿನಯ ಕುಮಾರ ಶೆಟ್ಟಿ ಎಲ್ಲದಡಿ ಎರ್ಮಾಳು, ನಾರಾಯಣ ಗುರುಸ್ವಾಮಿ ಕಾಪು ಪ್ರಧಾನ ಕಾರ್ಯದರ್ಶಿಯಾಗಿ ದಿವಾಕರ್ ಶೆಟ್ಟಿ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಧರ್ ಶೆಟ್ಟಿಗಾರ್ ಕರಂದಾಡಿ ಕೋಶಾಧಿಕಾರಿಯಾಗಿ ಜಿತೇಶ್ ಶೆಟ್ಟಿ ಮಜೂರು, ಉಪಾಧ್ಯಕ್ಷರಾಗಿ ಜಯ ಎರ್ಮಾಳು, ಶಂಕರ ಗಿರಿನಗರ ಕಾರ್ಯದರ್ಶಿಯಾಗಿ ಧನಂಜಯ ಮಲ್ಲಾರು, ನಾಗೇಶ್ ಮಲ್ಲಾರು ಭಜನಾ ಸಹ ಸಂಚಾಲಕರಾಗಿ ಸುರೇಶ್ ಅದಮಾರು ಆಯ್ಕೆಯಾದರು. ಸಾಸ್ ಉಡುಪಿ ಜಿಲ್ಲಾ ಅಧ್ಯಕ್ಷರಾದ ರಾಧಾಕೃಷ್ಣ ಮೆಂಡನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಸುಂದರ ಗುರುಸ್ವಾಮಿ ನಿಟ್ಟೂರು, ವಿನಯಕುಮಾರ್ ಶೆಟ್ಟಿ ಎಲ್ಲದಡಿ ಎರ್ಮಾಳು, ಮೋಹನ ಬಂಗೇರ ಕಾಪು ಮತ್ತಿತರರು ಉಪಸ್ಥಿತರಿದ್ದರು ದಿವಾಕರ ಶೆಟ್ಟಿ ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ರಂಜಿತ್ ಶೆಟ್ಟಿ ವಂದಿಸಿದರು.
ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಹಿತಸಾಧನ ವೇದಿಕೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Posted On: 09 Oct 2022, 04:57 PM
ಉಚ್ಚಿಲ : ಮಹಾಲಕ್ಷ್ಮಿ ವಿದ್ಯಾಸಂಸ್ಥೆ ಸಭಾಭವನದಲ್ಲಿ ನಡೆದ ದಕ್ಷಿಣ ಕನ್ನಡ ಮೊಗವೀರ ಹಿತಸಾಧನ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರವಿವಾರ ಜರಗಿತು. ಈ ಸಂದರ್ಭ ಶಾಸಕರಾದ ಲಾಲಾಜಿ ಆರ್ ಮೆಂಡನ್ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ದ. ಕ ಮೊಗವೀರ ಹಿತಸಾಧನ ವೇದಿಕೆ ಅಧ್ಯಕ್ಷ ಸರ್ವೋತ್ತಮ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಹರಿಯಪ್ಪ ಕೋಟ್ಯಾನ್, ಮೋಹನ್ ಬೆಂಗ್ರೆ, ವಿನೀತ್ ಅಮೀನ್, ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಪೀಟರ್ ಜೋಸೆಫ್, ವಿಶ್ವನಾಥ್ ಕುರಾಡಿ, ಸುಧಾಕರ್ ಕರ್ಕೇರ, ಸತೀಶ್ ಆರ್ ಸಾಲ್ಯಾನ್, ರವಿ ಕುಂದರ್, ವೇದವ್ಯಾಸ ಬಂಗೇರ ಹಾಗೂ ಮೊಗವೀರ ಹಿತಸಾಧನ ವೇದಿಕೆ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಗಂಗಾಧರ ಕರ್ಕೇರ ಸ್ವಾಗತಿಸಿದರು. ಪುಷ್ಪರಾಜ್ ಕೋಟ್ಯಾನ್ ವಂದಿಸಿದರು. ಲಕ್ಷ್ಮಣ್ ಮೈಂದನ್ ಕಾರ್ಯಕ್ರಮ ನಿರೂಪಿಸಿದರು.
