Updated News From Kaup

ಶ್ರೀ ದುರ್ಗಾಪರಮೇಶ್ವರಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಅಗ್ರಹಾರ ಕಟಪಾಡಿ : ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ

Posted On: 15-08-2022 11:22PM

ಕಟಪಾಡಿ : ಶ್ರೀ ದುರ್ಗಾಪರಮೇಶ್ವರಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಅಗ್ರಹಾರ ಕಟಪಾಡಿ ಇಲ್ಲಿ 75ನೇ ವರ್ಷದ ಸ್ವಾತಂತ್ರದ ಅಮೃತ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೈ ಭರತ್ ಹೆಗ್ಡೆ ಹಾಗೂ ಶಾಲಾ ಸಂಚಾಲಕರಾದ ರಂಜನ್ ಹೆಗ್ಡೆ ನೆರವೇರಿಸಿದರು.

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು : ಧ್ವಜಾರೋಹಣ ; 75 ಔಷಧೀಯ ಸಸ್ಯಗಳನ್ನು ನೆಟ್ಟ ವಿದ್ಯಾರ್ಥಿಗಳು

Posted On: 15-08-2022 10:54PM

ಕಾಪು : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ರಾಂಶುಪಾಲರು ಧ್ವಜಾರೋಹಣ ನೆರವೇರಿಸಿದರು.

ಉಡುಪಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ

Posted On: 15-08-2022 08:19PM

ಉಡುಪಿ : ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿ, ಕುಮಾರ ಕೃಪದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರು ನೆರವೇರಿಸಿದರು.

ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಶಿರ್ವ : ವಸತಿನಿಲಯ ಭೇಟಿ

Posted On: 15-08-2022 07:52PM

ಶಿರ್ವ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಕಾರವಾರ ಇದರ ಶಿರ್ವ ಶಾಖೆಯ ವತಿಯಿಂದ ಶಿರ್ವ ಆಕ್ಸಿಲಿಯಮ್ ವಸತಿ ನಿಲಯದ ಮಕ್ಕಳಿಗೆ ಸೋಲಾಪುರ ಚಾದರ್ ಮತ್ತು ಸಿಹಿತಿಂಡಿ ವಿತರಿಸಲಾಯಿತು.

ಕಾರ್ಕಳ : ಸ್ವದೇಶಿ ಭಾವ ಯುವ ಜನತೆಯಲ್ಲಿ ಜಾಗೃತಿಗೊಳ್ಳಲಿ - ನಿವೃತ್ತ ಏರ್ ವೈಸ್‌ ಮಾರ್ಷಲ್‌ ರಮೇಶ್‌ ಕಾರ್ಣಿಕ್‌

Posted On: 15-08-2022 06:50PM

ಕಾರ್ಕಳ : ದೇಶದ ಇತಿಹಾಸವನ್ನು ಅರಿಯದೇ ಇದ್ದಲ್ಲಿ ಇತಿಹಾಸವನ್ನು ಸೃಜಿಸಲು ಅಸಾಧ್ಯ. ಹಿಂದೆ ಆದ ಐತಿಹಾಸಿಕ ದುರ್ಘಟನೆಗಳಿಂದ ಪಾಠ ಕಲಿತು ಸಂಪೂರ್ಣ ಸ್ವದೇಶಿ ಭಾವ ಭಾರತದ ಯುವಕ-ಯುವತಿಯರಲ್ಲಿ ಜಾಗೃತಗೊಂಡು ದೇಶ ಸೇವೆಯೇ ಗುರಿಯಾಗಿರಲಿ ಎಂದು ನಿವೃತ್ತ ಏರ್ ವೈಸ್‌ ಮಾರ್ಷಲ್‌ ರಮೇಶ್‌ ಕಾರ್ಣಿಕ್‌ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು. ವಿಶ್ವದ ಬಲಾಢ್ಯ ರಾಷ್ಟ್ರಗಳ ಸಾಲಿನಲ್ಲಿ ಭಾರತವು ಕಂಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರವು ಭೌಗೋಳಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಉನ್ನತಿ ಪಡೆಯಲಿ ಅದಕ್ಕೆ ಇಂದಿನ ಯುವ ಸಮೂಹವೇ ಮುಂದಾಳತ್ವ ವಹಿಸಲಿ ಎಂದು ಹಾರೈಸಿದರು.

ಪಡುಬಿದ್ರಿ : ಗ್ರಾಮೀಣ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನೂತನ ಧ್ವಜಸ್ತಂಭ ಉದ್ಘಾಟನಾ ಕಾರ್ಯಕ್ರಮ ; ಧ್ವಜಾರೋಹಣ

Posted On: 15-08-2022 06:24PM

ಪಡುಬಿದ್ರಿ : ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ನಿಟ್ಟಿನಲ್ಲಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನೂತನವಾಗಿ ಪಡುಬಿದ್ರಿ ಹೃದಯಭಾಗದಲ್ಲಿ ಧ್ವಜಸ್ತಂಭ ಉದ್ಘಾಟನಾ ಕಾರ್ಯಕ್ರಮ ಹಾಗೂ 76ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಜರಗಿತು.

ಕಾಪು ತಾಲೂಕು ಪಂಚಾಯತ್ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ

Posted On: 15-08-2022 06:07PM

ಕಾಪು : ಇಲ್ಲಿನ ತಾಲೂಕು ಪಂಚಾಯತ್ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ 76ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕಾಪು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಶಿವ ಪ್ರಕಾಶ್ ಎಸ್ ನೆರವೇರಿಸಿದರು.

ಕಾಪು ತಾಲೂಕು ಆಡಳಿತದಿಂದ ಕಾಪುವಿನಲ್ಲಿ 76ನೇ ಸ್ವಾತಂತ್ರೋತ್ಸವ ದಿನಾಚರಣೆ

Posted On: 15-08-2022 05:58PM

ಕಾಪು : ಇಲ್ಲಿನ ತಾಲೂಕು ಮಟ್ಟದ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಸ್ವಾತಂತ್ರೋತ್ಸವ ಸೋಮವಾರ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ನಡೆಯಿತು.

ಕಟಪಾಡಿ : ಚಿಣ್ಣರ ಬಾಲವನ ನವೀಕರಣದ ಉದ್ಘಾಟನೆ

Posted On: 15-08-2022 05:48PM

ಕಟಪಾಡಿ : 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಏಣಗುಡ್ಡೆ ಅಗ್ರಹಾರದ ಗ್ರಾಮದ ಮಕ್ಕಳಿಗೆ ಅನುಕೂಲವಾಗುವಂತೆ ಊರ ದಾನಿಗಳ ಸಹಾಯದಿಂದ ನಿರ್ಮಾಣಗೊಂಡಿದ್ದ ಮಕ್ಕಳ ಬಾಲವನದ ನವೀಕರಣದ ಉದ್ಘಾಟನೆಯು ಆಗಸ್ಟ್ 15 ರಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅಗ್ರಹಾರ ದ ಬಳಿಯಲ್ಲಿ ನಡೆಯಿತು.

ಸಚಿವ ಎಸ್ ಅಂಗಾರರಿಂದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎರ್ಮಾಳು ತೆಂಕದ ನೂತನ ಶಾಲಾ ಕೊಠಡಿ ಉದ್ಘಾಟನೆ

Posted On: 15-08-2022 05:31PM

ಪಡುಬಿದ್ರಿ : ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎರ್ಮಾಳು ತೆಂಕ ಇಲ್ಲಿನ ನೂತನ ಇಂಗ್ಲಿಷ್ ಭಾಷಾ ಕಲಿಕಾ ಕೊಠಡಿಯ ಉದ್ಘಾಟನೆಯನ್ನು ಬಂದರು ಮತ್ತು ಮೀನುಗಾರಿಕಾ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಊರಿನ ಶಾಲೆಯನ್ನು ಕಳೆದುಕೊಂಡಾಗ ಮತ್ತೆ ಪಡೆದುಕೊಳ್ಳುವುದು ಕಷ್ಟ. ಶಾಲೆಯನ್ನು ಉಳಿಸುವ ಪ್ರಯತ್ನ ಮಾಡಬೇಕು. ಗುಣಮಟ್ಟದ ಶಿಕ್ಷಣವನ್ನು ನೀಡಬೇಕಾದರೆ ತರಗತಿವಾರು, ವಿಷಯವಾರು ಶಿಕ್ಷಕರು ಇರಬೇಕು. ಅದು ಆಗದಾಗ ಗುಣಮಟ್ಟದ ಶಿಕ್ಷಣ ಸಾಧ್ಯವಾಗದು. ಇಚ್ಛಾಶಕ್ತಿ, ನಮ್ಮ ಊರಿನ ಶಾಲೆಯೆಂಬ ಅಭಿಮಾನ ಇದ್ದರೆ ನಮ್ಮ ಶಾಲೆಗೆ ನಾವೇ ಸೌಲಭ್ಯಗಳನ್ನು ಹೊಂದಿಸಲು ಸಾಧ್ಯ. ಅಂದಿನ ಜನರ ಮನಸ್ಥಿತಿ ಸಮಾಜಕ್ಕಾಗಿ ನೀಡಬೇಕೆಂಬ ಭಾವನೆಯಿತ್ತು ಆದರೆ ಈಗ ಸರಕಾರ ನೀಡಬೇಕೆಂಬ ಭಾವನೆಯಿದೆ. ಸ್ವಾತಂತ್ರ್ಯ ಬಂದಾಗಿದೆ ಕೊಟ್ಟಂತಹ ಸ್ವಾತಂತ್ರ್ಯ ಉಳಿಸಬೇಕಾದರೆ ನಮ್ಮಲ್ಲಿ ದೇಶಭಕ್ತಿ ಇರಬೇಕು.ಟೀಕೆ ವಿರೋಧಗಳಿಂದ ನಾವು ಯಾವುದನ್ನು ಸಾಧಿಸಲಾಗದು. ಜನರಲ್ಲಿ ದೇಶಭಕ್ತಿಯ ಭಾವ ಉಂಟಾದಾಗ ದೇಶಕ್ಕಾಗಿ ಕೊಡಬೇಕೆನ್ನುವ ಮನಸ್ಥಿತಿ ಸಾಧ್ಯ ಎಂದರು.