Updated News From Kaup
ನವೆಂಬರ್ 27 ರಂದು ಜರಗಲಿರುವ ಹಿಂದೂ ಸಮಾಜೋತ್ಸವದ ಪ್ರಚಾರದ ವೀಡಿಯೊ ತುಣುಕು ಬಿಡುಗಡೆ
Posted On: 03 Oct 2022, 03:13 PM
ಉಡುಪಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ನವೆಂಬರ್ 27 ರಂದು ಜರಗಲಿರುವ ಹಿಂದೂ ಸಮಾಜೋತ್ಸವದ ಪ್ರಚಾರದ ವೀಡಿಯೊ ತುಣುಕು ಬಿಡುಗಡೆ ಸೋಮವಾರ ನಡೆಯಿತು. ಬಂಟಕಲ್ಲು ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಶಿಧರ ವಾಗ್ಳೆಯವರು ಹಿಂದೂ ಸಮಾಜೋತ್ಸವದ ಪ್ರಚಾರದ ವೀಡಿಯೊ ಬಿಡುಗಡೆ ಮಾಡಿದರು. ವಿಶ್ವ ಹಿಂದೂ ಪರಿಷದ್ ಮಟ್ಟಾರು ಕಾರ್ಯದರ್ಶಿ ಸತೀಶ ಆಚಾರ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಯಾದ ಸಂದೀಪ್ ಶೆಟ್ಟಿ ನಾಲ್ಕುಬೀದಿ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಾರಿಜಾ ಪೂಜಾರಿ, ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾದ ಆಶಾ ಆಚಾರ್ಯ, ಬಜರಂಗದಳ ಕಾಪು ಪ್ರಖಂಡ ಸುರಕ್ಷಾ ಪ್ರಮುಖ್ ಆನಂದ, ವಿಶ್ವ ಹಿಂದೂ ಪರಿಷದ್ ಮಟ್ಟಾರು ಸೇವಾ ಪ್ರಮುಖ್ ಸತೀಶ್, ಪ್ರಚಾರ ಮತ್ತು ಸಾಮಾಜಿಕ ಜಾಲತಾಣ ಪ್ರಮುಖ್ ಪ್ರವೀಣ್ ಪೂಜಾರಿ, ಬಜರಂಗದಳ ಸುರಕ್ಷಾ ಪ್ರಮುಖ್ ಅಭಿಜಿತ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಯಪ್ರಕಾಶ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ಗಾಂಧೀಜಿಯ ಅಹಿಂಸಾ ತತ್ವ, ಜಾತ್ಯಾತೀತ ನಿಲುವು ನಮ್ಮ ದೇಶಕ್ಕೆ, ರಾಜ್ಯಕ್ಕೆ ತುಂಬಾ ಅಗತ್ಯ : ಯೋಗೀಶ್ ವಿ ಶೆಟ್ಟಿ
Posted On: 03 Oct 2022, 03:07 PM
ಉಡುಪಿ : ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷದ ವತಿಯಿಂದ 153ನೇ ಗಾಂಧಿ ಜಯಂತಿಯನ್ನು ಉಡುಪಿ ಜಿಲ್ಲಾ ಪಕ್ಷ ಕಚೇರಿ ಯಲ್ಲಿ ಆಚರಿಸಲಾಯಿತು. ಮಹಾತ್ಮಾ ಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಗೈದು ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರು ಮಾತನಾಡಿ, ಗಾಂಧಿಜಿಯವರ ಜೀವನವೇ ಒಂದು ಆದರ್ಶ, ನುಡಿದಂತೆ ನಡೆದು ತನ್ನ ಜೀವನವನ್ನು ಅದೇ ರೀತಿಯಲ್ಲಿ ಅನುಕರಣೆ ಮಾಡಿದ ಒಂದು ಮಹಾನ್ ವ್ಯಕ್ತಿ ಅವರ ಜೀವನ ನಮಗೆಲ್ಲರಿಗೂ ಆದರ್ಶ. ಅವರು ಏನು ಹೇಳುತ್ತಿದ್ದಾರೋ ಅದೇ ರೀತಿ ಜೀವನ ನಡೆಸುತ್ತಿದ್ದರು. ಇಂದಿನ ಕಲುಷಿತ ವಾತಾವರಣದಲ್ಲಿ ಅವರ ಅಹಿಂಸಾ ತತ್ವ ಜಾತ್ಯಾತೀತ ನಿಲುವು ನಮ್ಮ ದೇಶಕ್ಕೆ, ರಾಜ್ಯಕ್ಕೆ ತುಂಬಾ ಅಗತ್ಯ ಇದೆ. ಇದನ್ನು ನಾವು ಅನುಸರಿಸೋಣ ಎಂದು ನುಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಸುಧಾಕರ ಶೆಟ್ಟಿ, ವಾಸುದೇವ ರಾವ್, ಜಯರಾಮ ಆಚಾರ್ಯ, ಗಂಗಾಧರ ಬಿರ್ತಿ, ಜಯಕುಮಾರ್ ಪರ್ಕಳ, ಇಸ್ಮಾಯಿಲ್ ಪಲಿಮಾರು, ವೆಂಕಟೇಶ್ ಎಂ ಟಿ, ಬಿ. ಕೆ. ಮೊಹಮ್ಮದ್, ದೇವರಾಜ್, ಯು. ಎ. ರಶೀದ್, ರಂಗಾ ಕೋಟ್ಯಾನ್, ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪಡುಬಿದ್ರಿ : 2 ನೇ ವರ್ಷದ ಕಂಚಿನಡ್ಕ - ನಂದ್ಯೂರಮ್ಮನಡೆಗೆ ನಮ್ಮ ನಡೆ ಪಾದಯಾತ್ರೆ ಸಂಪನ್ನ
Posted On: 03 Oct 2022, 02:35 PM
ಪಡುಬಿದ್ರಿ : ಶರನ್ನವರಾತ್ರಿ ಸಂದರ್ಭದಲ್ಲಿ ಪಡುಬಿದ್ರಿಯ ಕಂಚಿನಡ್ಕದ ಹಿಂದೂ ಬಾಂಧವರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಅಕ್ಟೋಬರ್ 2 ರಂದು ಕಂಚಿನಡ್ಕದಿಂದ ನಂದಿಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಹಿರಿಯರಾದ ಮೊನಪ್ಪ, ಸುಂದರ್, ಕೃಷ್ಣ ಬಂಗೇರರವರು ದೀಪ ಪ್ರಜ್ವಲಿಸಿ, ದೇವಿ ಮಹಾತ್ಮೆಯಲ್ಲಿ ಉಚ್ಚರಿಸಲ್ಪಟ್ಟ ಸಪ್ತಶ್ಲೋಕದ ವಿಶೇಷ ಮಂತ್ರ ಪಾರಾಯಣದೊಂದಿಗೆ ಚಾಲನೆ ನೀಡಲಾಯಿತು. ಪಾದಯಾತ್ರೆಯಲ್ಲಿ ಸುರೇಶ್ ತಂಡದಿಂದ ಭಜನಾ ಸಂಕೀರ್ತನೆ ನಡೆಯಿತು. ನಂದಿಕೂರು ದೇವಳದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಮದ್ವರಾಯ ಭಟ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಇವರ ಉಪಸ್ಥಿತಿಯಲ್ಲಿ ಪಾದಯಾತ್ರಿಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿದರು. ಸುಮಾರು ನೂರಕ್ಕೂ ಅಧಿಕ ಮಂದಿ ಪಾದಯಾತ್ರಿಗಳು ಭಾಗವಹಿಸಿದ್ದರು.
ಉದ್ಯಾವರ : ಧರ್ಮಪ್ರಾಂತ್ಯದ ನೂತನ ಕುಲಪತಿಗೆ ಸನ್ಮಾನ
Posted On: 03 Oct 2022, 02:21 PM
ಉದ್ಯಾವರ : ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ನೂತನ ಕುಲಪತಿಗಳಾಗಿ ಆಯ್ಕೆಯಾಗಿರುವ ಅ. ವಂ. ಡಾ. ರೋಶನ್ ಡಿಸೋಜ ರವರನ್ನು ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದಲ್ಲಿ ಸಮ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ವಂ. ಡಾ. ರೋಶನ್ ಡಿಸೋಜ, ತನ್ನ ಮೇಲೆ ನಂಬಿಕೆ ಇಟ್ಟು ಚಿಕ್ಕ ವಯಸ್ಸಿನಲ್ಲಿ ದೊಡ್ಡ ಜವಾಬ್ದಾರಿಯನ್ನು ನೀಡಿರುವ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕಳೆದ ನಾಲ್ಕೂವರೆ ವರ್ಷ ಉಡುಪಿ ಧರ್ಮಪ್ರಾಂತ್ಯದ ಕುಲಪತಿಯಾಗಿ ಸೇವೆ ಸಲ್ಲಿಸಿದ್ದ ಉದ್ಯಾವರ ದೇವಾಲಯದ ಪ್ರಧಾನ ಧರ್ಮಗುರು ಅ. ವಂ. ಫಾ. ಸ್ಟ್ಯಾನಿ ಬಿ ಲೋಬೊರವರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಸಹಾಯಕ ಧರ್ಮಗುರು ವಂ. ಲಿಯೋ ಪ್ರವೀಣ್ ಡಿಸೋಜ, ಪಾಲನಾ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ, ಕಾರ್ಯದರ್ಶಿ ಮೈಕಲ್ ಡಿಸೋಜಾ ಮತ್ತು 20 ಆಯೋಗದ ಸಂಯೋಜಕ ಜೆರಾಲ್ಡ್ ಪಿರೇರಾ ಉಪಸ್ಥಿತರಿದ್ದರು.
ಕಾಪು : ಶ್ರೀ ಜನಾರ್ದನ ದೇಗುಲ ಮತ್ತು ಹೊಸ ಮಾರಿಗುಡಿಗೆ ಪ್ರಮೋದ್ ಮುತಾಲಿಕ್ ಭೇಟಿ
Posted On: 03 Oct 2022, 02:14 PM
ಕಾಪು : ಪ್ರಖರ ಹಿಂದುತ್ವವಾದಿ, ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರವರು ಸೋಮವಾರ ಕಾಪು ಶ್ರೀ ಜನಾರ್ದನ ದೇಗುಲ ಹಾಗೂ ಕಾಪು ಶ್ರೀ ಹೊಸಮಾರಿ ಗುಡಿ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಶ್ರೀ ಜನಾರ್ದನ ದೇಗುಲದಲ್ಲಿ ವೇದಮೂರ್ತಿ ಜನಾರ್ಧನ ತಂತ್ರಿಯವರು ಶಾಲು ಹೊದಿಸಿ ಸನ್ಮಾನಿಸಿ ಪ್ರಸಾದ ವಿತರಿಸಿದರು. ಕಾಪುಶ್ರೀ ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀನಿವಾಸ್ ತಂತ್ರಿಯವರು ಶಾಲು ಹೊದಿಸಿ ಸನ್ಮಾನಿಸಿ ಶ್ರೀದೇವಿಯ ಪ್ರಸಾದ ವಿತರಿಸಿದರು. ಈ ಸಂದರ್ಭ ಪ್ರಮೋದ್ ಮುತಾಲಿಕ್ ಮಾತನಾಡಿ, ಪ್ರಥಮ ಬಾರಿಗೆ ಇಲ್ಲಿಯ ದೇಗುಲಕ್ಕೆ ಬರುತ್ತಿದ್ದೇನೆ. ಇಲ್ಲಿಯ ವಾಸ್ತು ಹಾಗೂ ಪರಿಕಲ್ಪನೆ ಮನಸ್ಸಿಗೆ ಸಂತಸ ನೀಡುತ್ತಿದೆ ಎಂದರು. ಹೊಸಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಯನ್ನು ಪ್ರಮೋದ್ ಮುತಾಲಿಕ್ ರವರು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ, ಮೋಹನ ಭಟ್, ಜಯರಾಮ್ ಅಂಚಿ ಕಲ್ಲು, ಶರತ್, ಲಕ್ಷ್ಮೀಶ ಕಾಪು, ಸುದರ್ಶನ್ ಕಪ್ಪೆಟ್ಟು, ದಿವಾಕರ್, ರಾಧಾಕೃಷ್ಣ, ಸುಜಿತ್ ನಿಟ್ಟೂರು, ರಮೇಶ್ ಹೆಗ್ಡೆ ಕಲ್ಯ, ಗೋವರ್ಧನ್ ಶೇರಿಗಾರ್, ಶ್ರೀಧರ್ ತಂತ್ರಿ ಉಪಸ್ಥಿತರಿದ್ದರು.
ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇಗುಲಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ
Posted On: 02 Oct 2022, 04:31 PM
ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ನವರಾತ್ರಿ ಉತ್ಸವದ ಉಚ್ಚಿಲ ದಸರಾ 2022 ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರವರು ಸಚಿವರಿಗೆ ಪ್ರಸಾದ ವಿತರಿಸಿದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರವರು ಸಚಿವರಿಗೆ ಪ್ರಸಾದ ವಿತರಿಸಿದರು.
ಉದ್ಯಾವರ : ಗಾಂಧಿ ಜಯಂತಿ ಆಚರಣೆ
Posted On: 02 Oct 2022, 03:10 PM
ಉದ್ಯಾವರ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಮತ್ತು ಕಥೋಲಿಕ್ ಸಭಾ ಉದ್ಯಾವರ ಘಟಕ ಇವರ ಜಂಟಿ ಆಶ್ರಯದಲ್ಲಿ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವಠಾರದಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು. ಉಡುಪಿ ಧರ್ಮಪ್ರಾಂತ್ಯದ ನೂತನ ಕುಲಪತಿ ಅ. ವಂ. ಡಾ. ರೋಶನ್ ಡಿಸೋಜರವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ಅ. ವಂ. ಸ್ಟ್ಯಾನಿ ಬಿ ಲೋಬೊ ಮಾತಾನಾಡಿ, ಮಹಾತ್ಮ ಗಾಂಧೀಜಿಯವರ ನಾಯಕತ್ವ ಇಡೀ ದೇಶಕ್ಕೆ ಪ್ರೇರಣೆ. ಅವರ ಹೋರಾಟದ ಫಲದಿಂದ ನಾವೆಲ್ಲರೂ ಇಂದು ಸ್ವತಂತ್ರರಾಗಿದ್ದೇವೆ. ಅವರಂತೆ ಆಗಲು ಅಸಾಧ್ಯವಾದರೂ, ಅವರಂತೆ ನಮ್ಮ ಜೀವನದಲ್ಲೂ ಬದಲಾವಣೆ ತರೋಣ ಎಂದರು. ಈ ಸಂದರ್ಭದಲ್ಲಿ ಸಹಾಯಕ ಧರ್ಮಗುರು ವಂ. ಫಾ. ಲಿಯೋ ಡಿಸೋಜ, ಲಯನ್ಸ್ ಜಿಲ್ಲೆ 317Cಯ ವಲಯ 2ರ ಅಧ್ಯಕ್ಷ ಲ. ಜೋನ್ ಫೆರ್ನಾಂಡಿಸ್, ಕಥೋಲಿಕ್ ಸಭಾ ಕೇಂದ್ರೀಯ ಅಧ್ಯಕ್ಷೆ ಮೇರಿ ಡಿಸೋಜ, ಉಪಾಧ್ಯಕ್ಷ ರೊನಾಲ್ಡ್ ಅಲ್ಮೇಡಾ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ಲಯನ್ ಅನಿಲ್ ಲೋಬೊ, ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ, ಕಾರ್ಯದರ್ಶಿ ಮೈಕಲ್ ಡಿಸೋಜ, 20 ಅಯೋಗಗಳ ಸಂಯೋಜಕ ಜೆರಾಲ್ಡ್ ಪಿರೇರಾ, ಕಥೋಲಿಕ್ ಸಭಾ ಉದ್ಯಾವರ ಘಟಕದ ಕಾರ್ಯದರ್ಶಿ ಟೆರೆನ್ಸ್ ಪಿರೇರಾ ಮತ್ತಿತರರು ಉಪಸ್ಥಿತರಿದ್ದರು. ಕಥೋಲಿಕ್ ಸಭಾ ನಿಕಟಪೂರ್ವ ಅಧ್ಯಕ್ಷ ಲಾರೆನ್ಸ್ ಡೆಸಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಿರ್ದೇಶಕ ಲ. ವಿಲ್ಫ್ರೆಡ್ ಡಿಸೋಜ ವಂದಿಸಿದರು.
ಬಂಟಕಲ್ಲು : ಸಾಮರಸ್ಯ ನಡಿಗೆ, ಗಾಂಧಿ ನಮನ, ಸ್ವಚ್ಚತಾ ಕಾರ್ಯಕ್ರಮ
Posted On: 02 Oct 2022, 02:07 PM
ಬಂಟಕಲ್ಲು : ನಾಗರಿಕ ಸೇವಾ ಸಮಿತಿ (ರಿ.) ಬಂಟಕಲ್ಲು ಇವರ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಎಸ್. ವಿ.ಎಸ್ ಪ.ಪೂ ಕಾಲೇಜ್ ಇನ್ನಂಜೆ, ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್ ಇವರ ಸಹಯೋಗದೊಂದಿಗೆ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಚತಾ ಕಾರ್ಯದೊಂದಿಗೆ ಗಾಂಧಿ ನಮನ ಕಾರ್ಯಕ್ರಮವು ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ಶಾಲೆಯಲ್ಲಿ ನಡೆಯಿತು. ಬಂಟಕಲ್ಲು ಶಾಲೆಯಿಂದ ಇಂಜಿನಿಯರಿಂಗ್ ಕಾಲೇಜಿನವರೆಗೆ ಗಾಂಧಿ ಜಯಂತಿ ಪ್ರಯುಕ್ತ ಸಾಮರಸ್ಯ ನಡಿಗೆ ನಡೆಯಿತು. ನಂತರ ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜು ಬಳಿಯಿಂದ ಬಿ ಸಿ ರೋಡುವರೆಗೆ ರಸ್ತೆ ಇಕ್ಕಲಗಳ ಬೃಹತ್ ಸ್ವಚ್ಚತಾ ಕಾರ್ಯಕ್ರಮಕ್ಕೆ ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಕೆ ಆರ್ ಪಾಟ್ಕರ್ ಚಾಲನೆ ನೀಡಿದರು. ಎನ್.ಎಸ್ ಎಸ್ ವಿದ್ಯಾರ್ಥಿಗಳು, ನಾಗರಿಕ ಸೇವಾ ಸಮಿತಿ ಸದಸ್ಯರು, ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್ ಸದಸ್ಯರು ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದರು. ಸ್ವಚ್ಚತಾ ಕಾರ್ಯ ದ ಬಳಿಕ ಬಂಟಕಲ್ಲು ಶಾಲೆಯಲ್ಲಿ ಗಾಂಧಿನಮನ ಕಾರ್ಯಕ್ರಮ ಜರುಗಿತು. ಗಾಂಧಿಜಿ ಹಾಗೂ ಶಾಸ್ರ್ತಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಕೆ ಆರ್ ಪಾಟ್ಕರ್ ರವರು ಗಾಂಧಿಜಿಯವರಿಗೆ ನುಡಿನಮನ ಸಲ್ಲಿಸಿ ಮಾತನಾಡಿದರು. ಎನ್. ಎಸ್. ಎಸ್ ಯೋಜನಾಧಿಕಾರಿ ರಾಜೇಂದ್ರ ಪ್ರಭುರವರು ಗಾಂಧಿಜಿಯವರ ತತ್ವ, ಆದರ್ಶ, ಜೀವನ ದ ಬಗ್ಗೆ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಸಂಗೀತಾ ಪಾಟ್ಕರ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ.ಅನಿತಾ ಮೆಂಡೋನ್ಸಾ, ಜಗದೀಶ್ ಆಚಾರ್ಯ, ಉಮೇಶ್ ರಾವ್ ಶಿಕ್ಷಕ ಸತೀಶ್ ನಾಯಕ್, ಪ್ರಶಾಂತ್ ಶಾಲಾ ಶಿಕ್ಷಕಿಯರಾದ ಸೌಮ್ಯ, ಸುಮತಿ, ವಿನುತ, ಶಾಲಿನಿ,ಶ್ವೀತಾ ಮತ್ತಿತರರು ಉಪಸ್ಥಿತರಿದ್ದರು.
ಕಾಪು ತಾಲೂಕಿನ ವಿವಿದೆಡೆಯಲ್ಲಿ ಶಾಸಕ ಲಾಲಾಜಿ ಮೆಂಡನ್ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ
Posted On: 02 Oct 2022, 01:48 PM
ಕಾಪು : ಶಾಸಕರಾದ ಲಾಲಾಜಿ ಆರ್ ಮೆಂಡನ್ ನೇತೃತ್ವದಲ್ಲಿ ಕ್ಷೇತ್ರದ 9 ಪ್ರಮುಖ ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ನಿಟ್ಟಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಬೆಳಿಗ್ಗೆ 8.30 ಗಂಟೆಗೆ ಏಕಕಾಲದಲ್ಲಿ ಚಾಲನೆಗೊಂಡು 12 ಗಂಟೆ ತನಕ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು. ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರ ನೇತೃತ್ವದಲ್ಲಿ ಪ್ರತಿವರ್ಷ ಸ್ವಚ್ಛತಾ ಕಾರ್ಯಕ್ರಮ ನಡೆಯುತ್ತಿದ್ದು ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಶಾಲಾ ಕಾಲೇಜುಗಳ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು ಈ ಭಾರಿ ಕ್ಷೇತ್ರ 9 ಕಡೆಗಳಲ್ಲಿ ಸುಮಾರು 3500 ಮಂದಿ ಭಾಗವಹಿಸಿದರು. ಕಾಪು ಬೀಚ್ ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿದರು. ಕಾಪು ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಸುವರ್ಣ ಉಪಸ್ಥಿತರಿದ್ದರು. ಕಟಪಾಡಿ ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಹಾಗೂ ಎಸ್ ವಿ ಎಸ್ ವಿದ್ಯಾಸಂಸ್ಥೆಯ ಸತೇoದ್ರ ಪೈ, ಹಿರಿಯಡ್ಕ ವ್ಯಾಪ್ತಿಯಲ್ಲಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷರು ಉದಯ ಕುಮಾರ್ ಶೆಟ್ಟಿ, ಕುಕ್ಕೆಹಳ್ಳಿ ವ್ಯಾಪ್ತಿಯಲ್ಲಿ ಕರಾವಳಿ ಪ್ರಾಧಿಕಾರ ಅಧ್ಯಕ್ಷರು ಮಟ್ಟಾರು ರತ್ನಾಕರ್ ಹೆಗ್ಡೆ, ಪೆರ್ಡೂರ್ ವ್ಯಾಪ್ತಿಯಲ್ಲಿ ಕರ್ನಾಟಕ ಬಸ್ಸು ಮಾಲಕರ ಸಂಘದ ಅಧ್ಯಕ್ಷರು ಕುಯಿಲಾಡಿ ಸುರೇಶ್ ನಾಯಕ್, ಬೆಳ್ಳೆ ವ್ಯಾಪ್ತಿಯಲ್ಲಿ ಕಾಪು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಶೈಲಾ ಮುರುಗೋಡ, ಶಿರ್ವ ವ್ಯಾಪ್ತಿಯಲ್ಲಿ ಶಿರ್ವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಘವೇಂದ್ರ ಸಿ , ಪಡುಬಿದ್ರಿ ವ್ಯಾಪ್ತಿಯಲ್ಲಿ ಕಾಪು ವೃತ್ತ ನೀರಿಕ್ಷಕರಾದ ಪೂವಯ್ಯ ಹಾಗೂ ಉಚ್ಚಿಲ ವ್ಯಾಪ್ತಿಯಲ್ಲಿ ಕಾಪು ಯೋಜನಾ ಪ್ರಾಧಿಕಾರ ಅಧ್ಯಕ್ಷರು ಸುಧಾಮ ಶೆಟ್ಟಿ ಮತ್ತು ಉಚ್ಚಿಲ ಮೊಗವೀರ ಹಿತಾಸಾಧನ ಸಮಿತಿ ಅಧ್ಯಕ್ಷರು ಸರ್ವೋತ್ತಮ ಕುಂದರ್ ಚಾಲನೆ ನೀಡಿದರು. ಆಯಾ ಸ್ವಚ್ಛತಾ ಕೇಂದ್ರಗಳಿಗೆ ಸಂಬಂಧಪಟ್ಟಂತೆ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಗ್ರಾಮ ಪಂಚಾಯತ್ ಆಡಳಿತ ವರ್ಗ, ಸ್ವಯಂ ಸೇವಾ ಸಂಘ - ಸಂಸ್ಥೆಯವರು, ಎಲ್ಲಾ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಮುಖಂಡರು, ಶಾಲಾ ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸ್ವಚ್ಛತಾ ಕಾರ್ಯಕ್ರಮಕ್ಕೆ ಯಶಸ್ವಿಗೊಳಿಸಿದ ಎಲ್ಲರಿಗೂ ಈ ಮೂಲಕ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕೃತಜ್ಞತೆ ಸಲ್ಲಿಸಿದ್ದಾರೆ.
ಇನ್ನಂಜೆ : ಎಸ್ ವಿ ಎಸ್ ಮತ್ತು ಎಸ್ ವಿ ಎಚ್ ಶಾಲೆಯಲ್ಲಿ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ; ಶ್ರಮದಾನ
Posted On: 02 Oct 2022, 01:38 PM
ಇನ್ನಂಜೆ : ಎಸ್ ವಿ ಎಸ್ ಮತ್ತು ಎಸ್ ವಿ ಎಚ್ ಆಂಗ್ಲ ಮಾಧ್ಯಮ ನರ್ಸರಿ ಮತ್ತು ಹೈಯರ್ ಪ್ರೈಮರಿ ಶಾಲೆ ಇನ್ನಂಜೆ ಇಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನವನ್ನು ಶಾಲಾ ಆಡಳಿತಾಧಿಕಾರಿ ಅನಂತ ಮೂಡಿತ್ತಾಯರವರು ಉದ್ಘಾಟಿಸಿದರು. ಮಹಿಳಾ ಮಂಡಳಿ, ಗ್ರಾಮ ಪಂಚಾಯತ್ ಇನ್ನಂಜೆ, ರೋಟರಿಕ್ಲಬ್, ಯುವಕ ಮಂಡಲ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಬಿಲ್ಲವ ಸಂಘ, ಎಸ್ ವಿ ಎಚ್ ಕನ್ನಡ ಮಾಧ್ಯಮ ಸಂಯುಕ್ತಾಶ್ರಯದಲ್ಲಿ ಶಾಲಾ ವಠಾರದಲ್ಲಿ ಶ್ರಮದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಆಶಾ ನಾಯಕ್, ಉಮೇಶ್ ಆಚಾರ್ಯ, ದಿವೇಶ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಸುರೇಶ್ ಶೆಟ್ಟಿ, ಶೇಖರ, ಗುರುರಾಜ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯರಾದ ನಟರಾಜ ಉಪಾಧ್ಯಾಯ, ಸುಷ್ಮಾ, ಮಮತಾ ಹಾಗು ಶಿಕ್ಷಕಿಯರು ಉಪಸ್ಥಿತರಿದ್ದರು.
