Updated News From Kaup

ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಕಟಪಾಡಿ : ಸ್ವಚ್ಛತಾ ಕಾರ್ಯಕ್ರಮ

Posted On: 15-08-2022 02:14PM

ಕಟಪಾಡಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸ್ವಚ್ಛ ಭಾರತ ಶ್ರೇಷ್ಠ ಭಾರತ ಎಂಬ ಪರಿಕಲ್ಪನೆಯೊಂದಿಗೆ ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಕಟಪಾಡಿ ಇದರ ವತಿಯಿಂದ ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ಶಾಲಾ ವಠಾರದಲ್ಲಿ ಆಗಸ್ಟ್ 13ರಂದು ಸ್ವಚ್ಛತಾ ಕಾರ್ಯಕ್ರಮವು ನಡೆಯಿತು.

ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ – ರೇಮಂಡ್ ಡಿ.ಕುನ್ಹ ತಾಕೊಡೆ

Posted On: 15-08-2022 12:56PM

ಮಂಗಳೂರು : ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು. ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೋಡೆ ಹೇಳಿದರು . ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಆಗಸ್ಟ್ 14ರಂದು ಮಂಗಳೂರಿನ ಕದ್ರಿ ಬಾಲಭವನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ ಭಾರತಾಂಬೆಗೆ ಕನ್ನಡದಾರತಿ ಮತ್ತು ಸಾಧಕರಿಗೆ ಸನ್ಮಾನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈಗ ಸಂಘಟಕರು ಸಂಶೋಧಕರು ಮತ್ತು ಸಾಹಿತಿಗಳು ಈ ಮೂರು ವರ್ಗದವರಿಂದ ಸಾಹಿತ್ಯ ಸೇವೆ ನಡೀತಿದೆ. ಇದರಲ್ಲಿ ಸಾಹಿತಿಗಳು ಸಂಶೋಧನೆ ಮತ್ತು ಸಂಘಟನೆ ಮಾಡಿದ್ರೆ ಉತ್ತಮ ಸಾಹಿತ್ಯ ಬರುತ್ತದೆ ಎಂದರು.

ಶಿರ್ವ ಸಂತ ಮೇರಿ ಮಹಾವಿದ್ಯಾಲಯ : 75 ನೇ ಅಮೃತ ಮಹೋತ್ಸವದ ಸಂಭ್ರಮ

Posted On: 15-08-2022 12:45PM

ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2022ರ ಆಗಸ್ಟ್ 15 ರಂದು 76ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದ 75 ನೇ ಅಮೃತ ಮಹೋತ್ಸವ ಪ್ರಯುಕ್ತ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಧ್ವಜಾರೋಹಣವನ್ನು ನೆರವೇರಿಸಿ, ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯವೆಂದರೆ ಇದರ ಹಿಂದಿನ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಕೋಟ್ಯಾಂತರ ಭಾರತೀಯರ ತ್ಯಾಗ-ಬಲಿದಾನ- ಹೋರಾಟದ ಕಥೆ ಇದೆ. ನಮ್ಮ ಯೋಧರ ತ್ಯಾಗಗಳನ್ನು ಸ್ಮರಿಸೋಣ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ನೆನೆಯೋಣ. ನವಸಮಾಜ ನಿರ್ಮಾಣ ಜೊತೆಗೆ ದೇಶಾಭಿವೃದ್ಧಿಗಾಗಿ ಇಂದು ಯುವಕರು ಸರಿಯಾದ ಮಾರ್ಗದರ್ಶನವನ್ನು ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಕಠಿಣ ಪರಿಶ್ರಮ ನೀಡಿ ದೇಶ ಪ್ರಗತಿಗೆ ಕೈಜೋಡಿಸಬೇಕು ಎಂದು ಕರೆ ನೀಡಿ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ಮತ್ತು ಪ್ರಾಮುಖ್ಯತೆಯನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಕಟಪಾಡಿ : ರಥ ಕೊಡ್ಕೆ ಫ್ರೆಂಡ್ಸ್ ವತಿಯಿಂದ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Posted On: 14-08-2022 07:18PM

ಕಟಪಾಡಿ : ರಥ ಕೊಡ್ಕೆ ಫ್ರೆಂಡ್ಸ್ ಕಟಪಾಡಿ ವತಿಯಿಂದ ಜಿ ಎಸ್ ಬಿ ಸಮಾಜದ ಎಸ್ ಎಸ್ ಎಲ್ ಸಿ ಸಾಧಕರಾದ ಸಂದೀಪ್ ಪೈ, ಸಾತ್ವಿಕ್ ಕಾಮತ್, ಅಮೇಯ ಶೆಣೈ, ವೈಭವಿ ಕಾಮತ್, ಪ್ರಥಮ್ ಕಾಮತ್ ಇವರನ್ನು ಸನ್ಮಾನಿಸಲಾಯಿತು.

ಬೆಳಪು : ಜಮಾ ಅತೆ ಇಸ್ಲಾಮಿ ಕಾಪು ವರ್ತುಲದ ವತಿಯಿಂದ ಉಚಿತ ಹಿಜಾಮ ಶಿಬಿರ

Posted On: 14-08-2022 06:11PM

ಕಾಪು : ಸೃಷ್ಟಿಕರ್ತನು ಮಾನವನನ್ನು ಭೂಮಿಯ ಮೇಲೆ ತನ್ನ ಪ್ರತಿನಿಧಿಯಾಗಿ ಕಳುಹಿಸಿ , ಕೆಡುಕನ್ನು ಅಳಿಸಿ ಒಳಿತನ್ನು ಸ್ಥಾಪಿಸಲು ಆದೇಶಿಸಿ , ಸ್ವಸ್ಥ ಸುಂದರ , ಆರೋಗ್ಯಪೂರ್ಣ ಸಮಾಜ ನಿರ್ಮಿಸಿ ರೋಗ ರುಜಿನ ಪೀಡಿತರ ಸೇವೆಗೈಯ್ಯಲು ತಿಳಿಸಿರುವನು. ನಿಮ್ಮಲ್ಲಿರುವ ಸಂಪತ್ತನ್ನು ಸೃಷ್ಟಿಕರ್ತನ ಸಂಪ್ರೀತಿ ಗಳಿಸಲು ಬಡವರ ಉದ್ಧಾರಕ್ಕೆ ಬಳಸಿದರೆ ಅದು ದೇವ ಮಾರ್ಗದಲ್ಲಿ ಬಳಸಿದಂತೆ ಎಂದು ಅನ್ವರ್ ಅಲಿ ಕಾಪು ಹೇಳಿದರು. ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ಜಮಾ ಅತೆ ಇಸ್ಲಾಮಿ ಕಾಪು ವರ್ತುಲದ ವತಿಯಿಂದ ಬೆಳಪು ಮಸ್ಜಿದ್ ಎ ತೈಬಾ ದಲ್ಲಿ ಉಚಿತ ಹಿಜಾಮ ಶಿಬಿರದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಹೇಳಿದರು.

ಕುದ್ರೋಳಿ : 18 ಗಂಟೆಗಳ ಶ್ರಮದಿಂದ ಧಾನ್ಯ, ತರಕಾರಿ, ಅಕ್ಕಿ ಇತ್ಯಾದಿ ವಸ್ತುಗಳಿಂದ ಮೂಡಿದ ತಿರಂಗ

Posted On: 14-08-2022 03:14PM

ಮಂಗಳೂರು : ಸ್ವಾತಂತ್ರ್ಯದ 75ರ ಅಮೃತ ಮಹೋತ್ಸವದ ಸಂಭ್ರಮದ ಪ್ರಯುಕ್ತ ಗುರುಬೆಳದಿಂಗಳು ಸೇವಾ ಸಂಸ್ಥೆಯ ಆಶ್ರಯದಲ್ಲಿ ಮಂಗಳೂರಿನ ಪ್ರಸಿದ್ಧ ಕುದ್ರೋಳಿ ದೇವಳ ಮುಂಭಾಗ ಧಾನ್ಯ, ತರಕಾರಿ, ಅಕ್ಕಿ, ಕಳಶ, ಬಾಳೆ ಎಲೆ, ವೀಳ್ಯದೆಲೆ ಇತ್ಯಾದಿ ವಸ್ತುಗಳಿಂದ ಭಾರತದ ತ್ರಿವರ್ಣ ಧ್ವಜವನ್ನು ರಚಿಸಲಾಗಿದೆ.

ಬಿಜೆಪಿ ಹಿಂದುಳಿದ ಮೋರ್ಚಾ ವತಿಯಿಂದ ಕಾಪು ಟು ಪಡುಬಿದ್ರಿ : ದೇಶಕ್ಕಾಗಿ ಓಟ

Posted On: 14-08-2022 11:52AM

ಪಡುಬಿದ್ರಿ : ಸ್ವಾತಂತ್ರ್ಯದ 75ರ ಅಮೃತ ಮಹೋತ್ಸವದ ಅಂಗವಾಗಿ ಕಾಪು ಬಿಜೆಪಿ ಹಿಂದುಳಿದ ಮೋರ್ಚಾ ವತಿಯಿಂದ ದೇಶಕ್ಕಾಗಿ ಓಟ ಕಾರ್ಯಕ್ರಮವು ಕಾಪು ರಾಷ್ಟ್ರೀಯ ಹೆದ್ದಾರಿ ಸಮೀಪದ ಸರಕಾರಿ ಶಾಲೆಯ ಸಮೀಪದಿಂದ ಪ್ರಾರಂಭಗೊಂಡು ಪಡುಬಿದ್ರಿ ಬೋಡ್೯ ಶಾಲಾ ಮೈದಾನದಲ್ಲಿ ಸಮಾಪ್ತಿಗೊಂಡಿತು.

ಹೇರೂರು : ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ; ಧಾರ್ಮಿಕ ಸಭಾ ಕಾರ್ಯಕ್ರಮ

Posted On: 14-08-2022 10:28AM

ಕಾಪು : ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿ ಮತ್ತು ಮಹಿಳಾ ಬಳಗ ಹೇರೂರು ಇವರ ಆಶ್ರಯದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ

Posted On: 13-08-2022 10:25PM

ಕಾಪು : ತಾಲೂಕಿನ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಒಂದು ಮಗುಚಿ ಬಿದ್ದ ಘಟನೆ ಶನಿವಾರ ಸಂಜೆ ಸಂಭವಿಸಿದೆ.

ಪಡುಬಿದ್ರಿ : ಹಿಂದು ಜಾಗರಣ ವೇದಿಕೆಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ

Posted On: 13-08-2022 10:13PM

ಪಡುಬಿದ್ರಿ : ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಶನಿವಾರ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ ನಡೆಯಿತು. ಪಡುಬಿದ್ರಿಯ ಕಂಚಿನಡ್ಕದ ಮಿಂಚಿನ ಬಾವಿ ಕ್ಷೇತ್ರದಲ್ಲಿ ದಲಿತ ಮುಖಂಡ ಲೋಕೇಶ್ ಕಂಚಿನಡ್ಕ ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು.