Updated News From Kaup

ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಡುಕಳತ್ತೂರು : ಪಾಯಸ ಸೇವೆಗೆ ಚಾಲನೆ

Thumbnail
Posted On: 04 Jul 2025, 05:58 AM

ಕಾಪು : ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಡುಕಳತ್ತೂರು ಶಾಲೆಯಲ್ಲಿ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್, ಶಂಕರಪುರ ವತಿಯಿಂದ ಶಾಲಾಮಕ್ಕಳಿಗೆ ಪಾಯಸ ಸೇವೆ ನೀಡಲಾಯಿತು. ಶ್ರೀ ಸಾಯಿ ಈಶ್ವರ್ ಗುರೂಜಿಯವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಾಯಿ ಮಂದಿರದ ಟ್ರಸ್ಟಿಗಳಾದ ಗೀತಾಂಜಲಿ ಸುವರ್ಣ, ಲಾವಣ್ಯ, ಶಾಲಾ ಸಂಚಾಲಕ ಪ್ರವೀಣ್ ಕುಮಾರ್ ಗುರ್ಮೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಕಿಶನ್ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷೆ ಲಕ್ಷ್ಮೀ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಸಂಧ್ಯಾ, ಶಾಲಾ ಶಿಕ್ಷಕರು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸೌಮ್ಯ ರೆಡ್ಡಿ ಭೇಟಿ

Thumbnail
Posted On: 03 Jul 2025, 08:34 PM

ಪಡುಬಿದ್ರಿ : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಗುರುವಾರ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಗಿರಿಧರ್ ಸುವರ್ಣ, ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ವಿಶ್ವಾಸ್ ಅಮೀನ್, ದಿನೇಶ್ ಎರ್ಮಾಳ್, ಕಾಪು ನಾಲ್ಕು ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಸುಗುಣ ಎಸ್. ಕರ್ಕೇರ, ರಚನ್ ಸಾಲ್ಯಾನ್, ದೇವಳದ ಪ್ರಭಂದಕರಾದ ಸತೀಶ್ ಅಮೀನ್ ಪಡುಕರೆ, ಕಾಪು ಮಹಿಳಾ ಸಂಘದ ಸದಸ್ಯೆಯರು ಉಪಸ್ಥಿತರಿದ್ದರು.

ಪ್ರಭಾಕರ್ ಎಸ್ ಪೂಜಾರಿ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ‌ ಆಯ್ಕೆ

Thumbnail
Posted On: 02 Jul 2025, 09:48 AM

ಕಾಪು : ಪ್ರತಿಷ್ಠಿತ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ‌ ಹೋಟೆಲ್ ಉದ್ಯಮಿ‌ ಪ್ರಭಾಕರ ಎಸ್ ಪೂಜಾರಿ ಆಯ್ಕೆಯಾಗಿದ್ದಾರೆ. ಇವರು ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷರಾಗಿ, ಹೋಟೆಲ್ ಶಿವ ಸಾಗರ್ ಇದರ ಮಾಲಕರೂ ಆಗಿದ್ದು, ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಕಾಪು : ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಅವಿರೋಧ ಆಯ್ಕೆ

Thumbnail
Posted On: 01 Jul 2025, 06:10 PM

ಕಾಪು : ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಅಧೀನದ ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಮಜೂರು ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಉಳಿಯಾರು ಆಯ್ಕೆಗೊಂಡಿದ್ದಾರೆ. ನೂತನ ಸಮಿತಿ ಸದಸ್ಯರಾಗಿ ರಾಘವೇಂದ್ರ ಭಟ್ ಉಳಿಯಾರು, ಗುರುರಾಜ್ ಭಟ್ ಉಳಿಯಾರು, ಜನಾರ್ಧನ ಆಚಾರ್ಯ ಉಳಿಯಾರು, ಗಣೇಶ್ ನಾಯ್ಕ್ ಉಳಿಯಾರು, ಶೈಲೇಶ್ ಮಜೂರು, ಯೋಗೀಶ್ ಉಳಿಯಾರು, ಅಶ್ವಿನಿ ಜಯರಾಮ ದೇವಾಡಿಗ ಉಳಿಯಾರು, ಗೀತಾ ಉಳಿಯಾರು ಆಯ್ಕೆಯಾಗಿದ್ದಾರೆ.

ಗಾನ ಕೋಗಿಲೆ -2025 : ದ.ಕ, ಉಡುಪಿ ಜಿಲ್ಲಾ ಮಟ್ಟದ ಕೊರೋಕೆ ಗಾಯನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

Thumbnail
Posted On: 01 Jul 2025, 11:50 AM

ಪಡುಬಿದ್ರಿ : ಸಂಗೀತವು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ಮಾನಸಿಕ ವಿಶ್ರಾಂತಿ, ಸೃಜನಶೀಲತೆ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ. ಇದು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ. ಸಂಗೀತವು ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಗ್ರಾಮೀಣ ಪ್ರದೇಶದ ಸಂಗೀತ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸುವ ಕಾರ್ಯವನ್ನು ಹಿನ್ನೆಲೆ ಗಾಯಕಿ ಸುಶ್ಮಿತಾ ಎರ್ಮಾಳ್ ಹಮ್ಮಿಕೊಂಡಿರುವುದು ಶ್ಲಾಘನೀಯ. ಈ ಮೂಲಕ ಬಹಳಷ್ಟು ಪ್ರತಿಭೆಗಳು ಹೂರಹೂಮ್ಮಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ‌.ಅಮೀನ್ ಹೇಳಿದರು. ಅವರು ಪಡುಬಿದ್ರಿ ಓಂಕಾರ್ ಕಲಾ ಸಂಗಮದಲ್ಲಿ ನಡೆದ ಸುಶ್ಮಿ ಮೆಲೋಡಿಯಸ್ ಎರ್ಮಾಳ್ ಸಂಸ್ಥೆಯ ವತಿಯಿಂದ ಹಿನ್ನೆಲೆ ಗಾಯಕಿ ಕು. ಸುಶ್ಮಿತಾ ಕೇಶವ್ ಎರ್ಮಾಳ್ ಸಾರಥ್ಯದಲ್ಲಿ ಜುಲೃೆ 27 ರಂದು ಪಡುಬಿದ್ರಿ ಸುಜಾತ ಆಡಿಟೋರಿಯಂ ನಲ್ಲಿ ನಡೆಯುವ ಗಾನ ಕೋಗಿಲೆ-2025 ದ.ಕ ಮತ್ತು ಉಡುಪಿ ಜಿಲ್ಲಾ ಮಟ್ಟದ ಕೊರೋಕೆ ಗಾಯನ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು. ‌‌ ಕಾರ್ಯಕ್ರಮ ಸಂಯೋಜಕಿ ಕು. ಸುಶ್ಮಿತಾ ಕೇಶವ್ ಎರ್ಮಾಳ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ಯಶೋಧ ಪಡುಬಿದ್ರಿ, ರೋಟರಿ ಪೂರ್ವ ಅಧ್ಯಕ್ಷೆ ಗೀತಾ ಅರುಣ್ , ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್, ಕ.ರ.ವೇ. ಉಡುಪಿ ಜಿಲ್ಲಾ ಮಹಿಳಾ ಸಮಿತಿ ಉಪಾಧ್ಯಕ್ಷೆ ಕಿರಣ್ ಪ್ರತಾಪ್ ಸಾಲ್ಯಾನ್ ಉಪಸ್ಥಿತರಿದ್ದರು. ಸುಶ್ಮಿತಾ ಎರ್ಮಾಳ್ ಸ್ವಾಗತಿಸಿ, ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಉಡುಪಿ ಜಿಲ್ಲಾ ಜೆಡಿಎಸ್ : ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

Thumbnail
Posted On: 30 Jun 2025, 07:34 PM

ಉಡುಪಿ : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರವು ಹೆಚ್ಚುತ್ತಿದ್ದು, ಸ್ವಜನಪಕ್ಷಪಾತ ತುಂಬಿ ತುಳುಕುತ್ತಿದೆ ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತದನಂತರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು. ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರುಗಳು ರಾಜ್ಯ ಸರ್ಕಾರದ ಮತ್ತು ಸಚಿವರುಗಳ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ದಾಖಲೆಗಳೊಂದಿಗೆ ಮಾಧ್ಯಮಗಳಲ್ಲಿ ಆರೋಪಿಸಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ವಸತಿ ಇಲಾಖೆಯು ರಾಜ್ಯದಲ್ಲಿನ ಅತ್ಯಂತ ಹಿಂದುಳಿದ, ಬಡತನದ ಕುಟುಂಬಗಳ ನಿವೇಶನ ಹಾಗೂ ವಸತಿ ರಹಿತ ನೈಜ್ಯ ಫಲಾನುಭವಿಗಳಿಗೆ ಮೀಸಲಾಗಿರುವ ವಸತಿ ಯೋಜನೆಗಳನ್ನು ಲಂಚ ನೀಡುವವರಿಗೆ ಮಾತ್ರ ನೀಡುತ್ತಿದ್ದು, ಇಲಾಖೆಯು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿರುವುದಾಗಿ ಈಗಾಗಲೇ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳು ಸಾಕಷ್ಟು ವರದಿ ಮಾಡಿವೆ. ಇದಲ್ಲದೆ, ರಾಜ್ಯ ಸರ್ಕಾರ ಇದುವರೆಗೂ ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಕೆರೆ ಕಟ್ಟೆಗಳ ಪುನಶ್ಚೇತನ, ಒಳಚರಂಡಿ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮುಂತಾದವುಗಳನ್ನು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುತ್ತದೆ. ಅಂತೆಯೇ, ಗುತ್ತಿಗೆದಾರರ ಬಾಕಿ ಹಣ ಪಾವತಿ ಮಾಡುವಲ್ಲಿಯೂ ಸಹ ವಿಳಂಬ ಮಾಡುತ್ತಾ ಬಂದಿದ್ದು ಬಡವರ ಹಾಗೂ ರೈತ ವಿರೋಧಿ ಸರ್ಕಾರವಾಗಿ ಮಾರ್ಪಟ್ಟಿರುತ್ತದೆ. ಪರಿಶಿಷ್ಟರಿಗೆ ಮೀಸಲಾಗಿರುವ ಹಣದಲ್ಲಿಯೂ ಅತ್ಯಂತ ತಾರತಮ್ಯವೆಸಗುತ್ತಿದ್ದು ಆ ವರ್ಗದ ಜನರಿಗೆ ಅನ್ಯಾಯ ಮಾಡುತ್ತಲಿದ್ದು, ಕೇವಲ ತುಷ್ಠಿಕರಣ ರಾಜಕಾರಣ ಮಾಡುತ್ತಲಿದ್ದು, ರಾಜ್ಯದ ಜನರಿಗೆ ಘನಘೋರ ಅನ್ಯಾಯವೆಸಗಿದೆ. ಇದಲ್ಲದೆ, ರಾಜೀವ್‌ಗಾಂಧಿ ವಸತಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಮನೆಗಳ ಹಂಚಿಕೆಯಲ್ಲಿ ವ್ಯಾಪಕವಾದ ಭ್ರಷ್ಟಾಚಾರ ನಡೆದಿರುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರೇ ನೇರವಾಗಿ ವಸತಿ ಸಚಿವರಾದ ಶ್ರೀ ಜಮೀರ್ ಅಹಮದ್ ರವರ ವಿರುದ್ಧ ಆಪಾದನೆ ಮಾಡಿರುತ್ತಾರೆ. ಮುಂದುವರೆದು, ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು, ರಾಜ್ಯ ಸರ್ಕಾರ ಕಳೆದ 2 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ ಜನರನ್ನು ವಂಚಿಸುತ್ತಿರುವುದಾಗಿ ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಭ್ರಷ್ಟಾಚಾರ ಹೊತ್ತಿರುವ ಶ್ರೀ ಜಮೀರ್ ಅಹಮದ್ ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸುತ್ತೇವೆ. ಮುಂದುವರೆದು, ಅತೀವ ಭ್ರಷ್ಟಾಚಾರ ಆಡಳಿತ ವೈಫಲ್ಯದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಸೂಕ್ತ ರೀತಿಯಲ್ಲಿ ಸಂವಿಧಾನ ಬದ್ಧವಾಗಿ ಆಡಳಿತ ನಡೆಸಲು ನಿರ್ದೇಶನ ನೀಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಕಾರ್ಯಧ್ಯಕ್ಷರಾದ ವಾಸುದೇವ ರಾವ್, ರಾಜ್ಯ ಕಾರ್ಯದರ್ಶಿ ಸುಧಾಕರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಮಾಜಿ ಜಿಲ್ಲಾಧ್ಯಕ್ಷರಾದ ದಕ್ಷತ್ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಗಂಗಾಧರ ಬಿರ್ತಿ, ಉದಯ ಹೆಗ್ಡೆ, ನಾಯಕರುಗಳಾದ ಚಂದ್ರಹಾಸ ಎರ್ಮಾಳ್, ಬ್ಲಾಕ್ ಅಧ್ಯಕ್ಷರುಗಳಾದ ಸಂದೇಶ್ ಭಟ್, ಶ್ರೀಕಾಂತ್ ಹೆಬ್ರಿ, ದೇವರಾಜ್ ತೊಟ್ಟಂ, ಯುವ ಜನತಾದಳ ಅಧ್ಯಕ್ಷ ಸಂಜಯ್ ಕುಮಾರ್, ನಾಯಕರುಗಳಾದ ಭರತ್ ಶೆಟ್ಟಿ, ರಮೇಶ್ ಕುಂದಾಪುರ, ಮನ್ಸೂರ್ ಇಬ್ರಾಹಿಂ, ಹುಸೇನ್ ಹೈಕಾಡಿ, ಸುರೇಶ್ ದೇವಾಡಿಗ, ರಾಮ ರಾವ್, ವೆಂಕಟೇಶ್ ಪಡುಬಿದ್ರಿ, ಬಿಕೆ ಮೊಹಮ್ಮದ್, ವಿನ್ಸೆಂಟ್ ಸುನಿಲ್, ರಂಗ ಕೋಟ್ಯಾನ್, ಆಶ್ರಫ್ ಪಡುಬಿದ್ರಿ, ಗುರುರಾಜ್ ಶೆಟ್ಟಿ, ಉಮಾನಾಥ ಶೆಟ್ಟಿ, ಶಂಶುದ್ದಿನ್ ಮಜೂರು, ಮಧುಕರ್ ಅಂಬಲಪಾಡಿ, ಸುರೇಶ್ ಉಡುಪಿ, ಪ್ರವೀಣ್ ಎರ್ಮಾಳ್, ಪ್ರಸಾದ್ ಪೂಜಾರಿ, ಉಮೇಶ್ ಶೆಟ್ಟಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಪು ಕ.ಸಾ.ಪ.ದಿಂದ ತಾಲೂಕಿನ ಪ.ಪೂ.ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ

Thumbnail
Posted On: 30 Jun 2025, 07:22 PM

ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ಘಟಕದ ವತಿಯಿಂದ ಕಾಪು ಕಂದಾಯ ತಾಲೂಕು ವ್ಯಾಪ್ತಿಯ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜು.12, ಶನಿವಾರ ಅಪರಾಹ್ನ ಗಂಟೆ 2 ಕ್ಕೆ ಕಟಪಾಡಿ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಭಾಷಣ ಸ್ಫರ್ಧೆ ಏರ್ಪಡಿಸಲಾಗಿದೆ. ಈ ಸ್ಫರ್ಧೆಯಲ್ಲಿ "ತಂತ್ರಜ್ಞಾನದಲ್ಲಿ ಕನ್ನಡ ಭಾಷೆಯ ಮಹತ್ವ " ಮತ್ತು "ಕೃಷಿಯ ಕಡೆಗೆ ಯುವಕರು - ಸವಾಲುಗಳು ಮತ್ತು ಅವಕಾಶಗಳು" ಎಂಬ ಎರಡು ವಿಷಯಗಳಲ್ಲಿ ಸ್ಫರ್ಧಾ ದಿನ ಚೀಟಿ ಎತ್ತುವ ಮೂಲಕ ಒಂದು ವಿಷಯದಲ್ಲಿ ಭಾಷಣ ಸ್ಫರ್ಧೆ ಏರ್ಪಡುತ್ತದೆ. (ಸಮಯದ ಮಿತಿ 4+1=5 ನಿ.) ಒಂದು ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಜುಲೈ 8 ಕೊನೆಯ ದಿನವಾಗಿರುತ್ತದೆ. ಕಸಾಪ ತಾಲೂಕು ಸಂಘಟನಾ ಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು[94817 60611] ಸ್ಫರ್ಧಾ ಸಂಯೋಜಕರಾಗಿದ್ದು, ಸ್ಫರ್ಧಾರ್ಥಿಗಳು ಕಾಲೇಜಿನ ದೃಢೀಕರಣ ಪತ್ರದೊಂದಿಗೆ ಆ ದಿನ ಕನಿಷ್ಠ 15 ನಿಮಿಷ ಮುಂಚಿತವಾಗಿ ಸ್ಫರ್ಧಾಸ್ಥಳದಲ್ಲಿ ಹಾಜರಿರಬೇಕು ಎಂದು ಕಾಪು ತಾಲೂಕು ಅಧ್ಯಕ್ಷರ ಪ್ರಕಟನೆ ತಿಳಿಸಿದೆ.

ಪಡುಬಿದ್ರಿ :ಕಾಡಿಪಟ್ನ ಮೊಗವೀರ ಮಹಾಸಭಾ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಅಶೋಕ್ ಸಾಲ್ಯಾನ್ ಪುನರಾಯ್ಕೆ

Thumbnail
Posted On: 29 Jun 2025, 10:09 PM

ಪಡುಬಿದ್ರಿ : ಇಲ್ಲಿನ ಕಾಡಿಪಟ್ನ ಮೊಗವೀರ ಮಹಾಸಭಾ ಆಡಳಿತ ಮಂಡಳಿಗೆ 2025-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಹಾಲಿ ಅಧ್ಯಕ್ಷರಾದ ಅಶೋಕ್ ಸಾಲ್ಯಾನ್ ಮೂರನೇ ಅವಧಿಗೆ ಅಧ್ಯಕ್ಷರಾಗಿ ಮಹಾಸಭೆಯಲ್ಲಿ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ ಹೇಮಚಂದ್ರ ಸಾಲ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಪಡುಬಿದ್ರಿ, ಕೋಶಾಧಿಕಾರಿಯಾಗಿ ಅಶೋಕ್ ಬಂಗೇರ, ಜೊತೆ ಕಾರ್ಯದರ್ಶಿಯಾಗಿ ಶರತ್ ಕರ್ಕೇರ ಮತ್ತು ಸತೀಶ್ ಸಾಲ್ಯಾನ್ ಜೊತೆ ಕೋಶಾಧಿಕಾರಿಯಾಗಿ ಸತೀಶ್ ಕೆ. ಸುವರ್ಣ ಆಯ್ಕೆಯಾದರು. ಸಮಿತಿ ಸದಸ್ಯರಾಗಿ ಗುರುಪ್ರಸಾದ್, ವಿಶ್ವಾಸ್ ವಿ.ಅಮೀನ್, ಸಾಗರ್ ಕರ್ಕೇರ , ಉದಯ ಸಾಲ್ಯಾನ್, ನಾರಾಯಣ್ ಎಮ್‌.ಕರ್ಕೇರ, ಜೀವನ್ ಎಸ್ ಸುವರ್ಣ, ಜೀವನ್ ಕೆ .ಸುವರ್ಣ, ಜಗದೀಶ್ ಬಂಗೇರ , ಮಿಥನ್ ಸಾಲ್ಯಾನ್, ಅಕ್ಷಿತ್ ಎ.ಕರ್ಕೇರ, ದೇವರಾಜ್ ಬಂಗೇರ,ತನುಜ್ ಕರ್ಕೇರ ಆಯ್ಕೆಗೊಂಡರು.

ಶಿರ್ವ ಸಹಕಾರಿ ವ್ಯವಸಾಯಿಕ ಸಂಘ : ವನಮಹೋತ್ಸವ ಆಚರಣೆ

Thumbnail
Posted On: 28 Jun 2025, 10:52 PM

ಶಿರ್ವ : ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘ (ನಿ.) ಶಿರ್ವ ವತಿಯಿಂದ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಕುತ್ಯಾರು ಇಲ್ಲಿ ಅಂತರಾಷ್ಟ್ರೀಯ ಸಹಕಾರಿ ವರ್ಷ - 2025 ನ್ನು ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. "ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು" ಎನ್ನುವ ವಿಶ್ವಾಸದೊಂದಿಗೆ ಏಕ್ ಪೇಡ್ ಮಾ ಕೆ ನಾಮ್ ಎನ್ನುವ ಪರಿಕಲ್ಪನೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ವನಮಹೋತ್ಸವದ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ವಿವಿಧ ಹಣ್ಣುಗಳ ಸಸಿಗಳನ್ನು ವಿತರಿಸಲಾಯಿತು. ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷರಾದ ವೀರೇಂದ್ರ ಪಾಟ್ಕರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯಿನಿ ಶರ್ಮಿಳಾ, ಎಸ್ ಸಿ ಡಿ‌‌‌ ಸಿ ಸಿ ಬ್ಯಾಂಕ್ ಪ್ರತಿನಿಧಿಯವರಾದ ಬಾಲಗೋಪಾಲ ಬಲ್ಲಾಳ್, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಎಲ್ಲಾ ನಿರ್ದೇಶಕರು, ಶಾಲಾ ಅಧ್ಯಾಪಕ ವೃಂದದವರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಾನಿಲ್ತಾರು ಕುಲಾಲ ಸಂಘದ 37 ನೇ ವರ್ಷದ ವಾರ್ಷಿಕ ಮಹಾಸಭೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Thumbnail
Posted On: 28 Jun 2025, 10:47 PM

ಕಾರ್ಕಳ : ತಾಲೂಕಿನ ನಾನಿಲ್ತಾರು ಕುಲಾಲ ಸಂಘದ 37 ನೇ ವರ್ಷದ ವಾರ್ಷಿಕ ಮಹಾಸಭೆಯ ಆಮಂತ್ರಣ ಪತ್ರಿಕೆಯನ್ನು ಶನಿವಾರ ಬಿಡುಗಡೆ ಮಾಡಲಾಯಿತು. ಜುಲೈ ತಿಂಗಳ 13 ಭಾನುವಾರ ಸಂಘದ ಸಮುದಾಯ ಭವನದಲ್ಲಿ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ ನಡೆಯಲಿದ್ದು ಸ್ವಜಾತಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿವಂತೆ ಸಂಘದ ಅಧ್ಯಕ್ಷರಾದ ಜಯರಾಮ್ ಕುಲಾಲ್ ಅಗ್ಗರಟ್ಟ ಪ್ರಕಟಣೆಯಲ್ಲಿ ತಿಳಿಸಿರುವರು.