Updated News From Kaup
ರೋಟರಿ ಶಂಕರಪುರ : ಇಂಟರಾಕ್ಟ್ ಕ್ಲಬ್ ಪದ ಪ್ರದಾನ
Posted On: 21 Sep 2022, 11:54 PM
ಕಾಪು : ರೋಟರಿ ಶಂಕರಪುರದ ಅಂಗ ಸಂಸ್ಥೆಗಳಾದ ಎಸ್ ವಿ ಎಚ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಹಾಗೂ ಎಸ್ ವಿ ಎಚ್ ಕನ್ನಡ ಮೀಡಿಯಂ ಇಂಟರಾಕ್ಟ್ ಕ್ಲಬ್ ಪದ ಪ್ರದಾನ ಸಮಾರಂಭವನ್ನು ವಲಯ 5 ರ ಇಂಟರಾಕ್ಟ್ ವಲಯ ಸಂಯೋಜಕರಾದ ಜಯಕೃಷ್ಣ ಆಳ್ವಾರವರು ಇಂಟರಾಕ್ಟ್ ಅಧ್ಯಕ್ಷರುಗಳಾದ ಪಾವನ, ಪ್ರಜ್ಞಾ ಹಾಗೂ ಕಾರ್ಯದರ್ಶಿಗಳಾದ ಕಾರ್ತಿಕ್, ಶ್ರೇಯ ರವರಿಗೆ ಪದಪ್ರದಾನವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಇಂಟರಾಕ್ಟ್ ಟೀಚರ್ ಕೋ ಆರ್ಡಿನೇಟರ್ ಗಳಾದ ದೀಪ್ತಿ, ಅನಿತಾ ಹಾಗೂ ಶಾಲೆಯ ಆಡಳಿತ ಅಧಿಕಾರಿಯಾದ ಅನಂತಮುಡಿತಾಯ ಎಸ್ ವಿ ಎಚ್ ಇಂಗ್ಲಿಷ್ ಮೀಡಿಯಂ ಮುಖ್ಯೋಪಾಧ್ಯಾಯರಾದ ಸುಷ್ಮಾ, ರೋಟರಿಯ ಅಧ್ಯಕ್ಷರಾದ ಗ್ಲಾಡಸನ್ ಕುಂದರ್, ಕಾರ್ಯದರ್ಶಿಯಾದ ಸಿಲ್ವಿಯಾ ಕಸ್ಟಲೀನೋ , ಜೊತೆ ಕಾರ್ಯದರ್ಶಿ ಮಾಲಿನಿ ಶೆಟ್ಟಿ, ಶಾಲಾ ಶಿಕ್ಷಕಿಯರು, ಇಂಟರಾಕ್ಟ್ ಮಕ್ಕಳು ಉಪಸ್ಥಿತರಿದ್ದರು.
ಶಿರ್ವ : ದಶದಿಕ್ಕುಗಳಿಂದ ಸಂಪತ್ತು ಹರಿದು ಬರಲಿ - ಉಮೇಶ್ ಆಚಾರ್ಯ
Posted On: 21 Sep 2022, 03:04 PM
ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ ಶಿರ್ವ ಮತ್ತು ಮಹಿಳಾ ಬಳಗದ ವತಿಯಿಂದ ಕುತ್ಯಾರು ಶ್ರೀಮಠದ ಗೋವುಗಳಿಗೆ ಸುಮಾರು ಇನ್ನೂರು ಕಿಲೋ ಗಿಂತಲೂ ಹೆಚ್ಚು ಹಿಂಡಿ ಮತ್ತು ಹಸಿರು ಆಹಾರವನ್ನು ಅಧ್ಯಕ್ಷರಾದ ಉಮೇಶ್ ಆಚಾರ್ಯರು ಗೋಮಾತೆಗೆ ಸಮರ್ಪಿಸಿ ದಶದಿಕ್ಕುಗಳಿಂದ ನಮ್ಮ ಸಂಸ್ಥೆಗೆ ಸಂಪತ್ತು ಹರಿದುಬರಲಿ ಇನ್ನೂ ಮುಂದಕ್ಕೂ ಗೋಸೇವೆ ಸೇವೆ ಮಾಡುವ ಅವಕಾಶ ದೊರೆಯಲಿ ಎಂದು ಮಠಕ್ಕೆ ಗೋವಿಗಾಗಿ ಮೇವು ಸಮರ್ಪಣ ಸಮಾರಂಭದಲ್ಲಿ ನುಡಿದರು ಶ್ರೀಮಠದ ಗುರುಗಳು ಸದಸ್ಯರಿಗೆ ಫಲಮಂತ್ರಾಕ್ಷತೆ ಯನ್ನು ನೀಡಿ ಸಂಸ್ಥೆ ಉತ್ತರೋತ್ತರ ಅಭಿವೃದ್ಧಿಯಾಗಲಿ, ಗುರು ಆಶೀರ್ವಾದದೊಂದಿಗೆ ಗೋಮಾತೆಯ ಆಶೀರ್ವಾದ ಎಲ್ಲರಿಗೂ ಲಭಿಸಲಿ ಎಂದು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಮಠದ ಪರಿಯಾವರಣ ಅಧ್ಯಕ್ಷರಾದ ಸುಂದರ್ ಆಚಾರ್ಯ ಬೆಳುವಾಯಿ, ಕಾರ್ಯದರ್ಶಿ ಸುರೇಶ್ ಉಡುಪಿ, ಶ್ರೀಮಠದ ಲೋಲಾಕ್ಷ ಆಚಾರ್ಯ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ದಶಮಾನೋತ್ಸವದ ಸಂಚಾಲಕ ಪ್ರಶಾಂತ ಆಚಾರ್ಯ ಮತ್ತು ಪ್ರಿತಮ್ ಆಚಾರ್ಯ ಇವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಸುರೇಶಾಚಾರ್ಯ ಮಹಿಳಾ ಬಳಗದ ಅಧ್ಯಕ್ಷೆ ಸುಮತಿ ಭಾಸ್ಕರಾಚಾರ್ಯ ಕಾರ್ಯದರ್ಶಿ ಪ್ರೀತಿ ಉಮೇಶ್ ಆಚಾರ್ಯ ಮತ್ತು ಎಲ್ಲಾ ಸದಸ್ಯರು ಭಾಗವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಮಾಧವಾಚಾರ್ಯ ವಂದಿಸಿದರು.
ಪಡುಬಿದ್ರಿ : ಅನ್ನಭಾಗ್ಯ ಯೋಜನೆಯ ಅಕ್ರಮ ದಾಸ್ತಾನಿನ ಅಕ್ಕಿ ವಶ
Posted On: 21 Sep 2022, 02:59 PM
ಪಡುಬಿದ್ರಿ : ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿಯ ಆಧಾರದ ಮೇಲೆ ಕಾಪು ತಾಲೂಕು ಆಹಾರ ನಿರೀಕ್ಷಕ ಟಿ. ಲೀಲಾನಂದ, ಕಾಪು ಪೊಲೀಸ್ ವೃತ್ತ ನಿರೀಕ್ಷಕರಾದ ಕೆ.ಸಿ. ಪೂವಯ್ಯ ಮತ್ತು ಪಡುಬಿದ್ರಿ ಪೋಲೀಸರು ದಾಳಿ ನಡೆಸಿ 2,87,606 ರೂಪಾಯಿ ಮೌಲ್ಯದ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಇಲ್ಲಿನ ಕನ್ನಂಗಾರ್ನ ಮೊಹಮದ್ ಶಫೀಕ್ ಎಂಬುವವರ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿ, ಆಪಾದಿತರ ಮನೆಯ ಹೊರಾಂಗಣ ಮತ್ತು ಎದುರು ಇರುವ ಗೋದಾಮಿನಲ್ಲಿ ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿಯಾಗಿದ್ದು, 50 ಕೆ.ಜಿ ತೂಕದ 33 ಚೀಲ ಬೆಳ್ತಿಗೆ ಅಕ್ಕಿ (ಒಟ್ಟು ತೂಕ 1650 ಕೆ.ಜಿ), 50 ಕೆ ಜಿ ತೂಕದ 192 ಚೀಲ ಕುಚಲಕ್ಕಿ (ಒಟ್ಟು ತೂಕ 9600 ಕೆ.ಜಿ), 20 ಕೆ ಜಿ ತೂಕದ 31 ಚೀಲ ಕುಚಲಕ್ಕಿ (ಒಟ್ಟು ತೂಕ 620 ಕೆ.ಜಿ), 30 ಕೆ.ಜಿ. ತೂಕದ 02 ಚೀಲ ಕುಚಲಕ್ಕಿ (ಒಟ್ಟು ತೂಕ 60 ಕೆ.ಜಿ), ಮತ್ತು ಹೊಲಿಗೆ ಹಾಕದೇ ಇರುವ 10 ಚೀಲ ಕುಚಲಕ್ಕಿ (ಒಟ್ಟು ತೂಕ 303 ಕೆ.ಜಿ) ಸೇರಿದಂತೆ ಒಟ್ಟು 2,87,606/- ರೂಪಾಯಿ ಮೌಲ್ಯದ 13,073 ಕೆ.ಜಿ. ಅಕ್ಕಿ, ರೂಪಾಯಿ 4,000/- ಮೌಲ್ಯದ ತೂಕದಯಂತ್ರ-01, ರೂಪಾಯಿ 5,000/- ಮೌಲ್ಯದ ಚೀಲ ಹೊಲಿಯುವ ಯಂತ್ರ-01 ನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ
ಶಿರ್ವ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಕೋಡು ಹರಿಪ್ರಸಾದ್ ಸಾಲಿಯಾನ್ ಆಯ್ಕೆ
Posted On: 20 Sep 2022, 11:20 PM
ಶಿರ್ವ : ಇಲ್ಲಿನ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಕೋಡು ಹರಿಪ್ರಸಾದ್ ಸಾಲಿಯಾನ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಮಟ್ಟಾರು ರತ್ನಾಕರ ಹೆಗ್ಡೆ, ಉಪಾಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಕುತ್ಯಾರು, ಗೀತಾ ವಾಗ್ಲೆ, ಪ್ರವೀಣ್ ಪೂಜಾರಿ, ಮಿತ್ರಬೆಟ್ಟು ಕಾರ್ಯದರ್ಶಿಯಾಗಿ ರವೀಂದ್ರ ಪಾಟ್ಕರ್ ಕೋಡುಗುಡ್ಡೆ, ಜತೆ ಕಾರ್ಯದರ್ಶಿಯಾಗಿ ಜಯಶ್ರೀ ಶೆಟ್ಟಿ ಶಿರ್ವ, ರಾಜೇಶ್ ಶೆಟ್ಟಿ ಪಂಜಿಮಾರು, ಸುಮತಿ ಜೆ ಸುವರ್ಣ ಕೋಶಾಧಿಕಾರಿ ಪ್ರಕಾಶ್ ಕೋಟ್ಯಾನ್ ನ್ಯಾರ್ಮ ಹಾಗೂ 40 ಮಂದಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಮಾದಕ ಪದಾರ್ಥ ಬಳಕೆಯ ವಿರುದ್ಧ ಜನಜಾಗೃತಿ ಅಭಿಯಾನ ಕಾರ್ಯಕ್ರಮ
Posted On: 20 Sep 2022, 09:10 PM
ಕಾಪು : ಮೂಳೂರ್ ಜುಮಾ ಮಸೀದಿ ಹಾಗು ಸಿರಾಜುಲ್ ಇಸ್ಲಾಂ ಅರಬಿ ಮದ್ರಸ ಮೂಳೂರ್ ಇದರ ಜಂಟಿ ಆಶ್ರಯದಲ್ಲಿ ಇಂಲೈಟ್ ವೆಲ್ನೆಸ್ ಸೆಂಟರ್ ಕುತ್ತಾರ್ ಮಂಗಳೂರು ಇದರ ಸಹಯೋಗದೊಂದಿಗೆ ಮಾದಕ ಪದಾರ್ಥ ಬಳಕೆಯ ವಿರುದ್ಧ ಜನ ಜಾಗೃತಿ ಅಭಿಯಾನ ಕಾರ್ಯಕ್ರಮವು ಜುಮಾ ಮಸೀದಿ ಕ್ಯಾಂಪಸ್ ನಲ್ಲಿ ಜರುಗಿತು. ಮಸೀದಿ ಅಧ್ಯಕ್ಷ ಸೈಯದ್ ಮುರಾದ್ ಅಲಿ ಅಧ್ಯಕ್ಷತೆಯನ್ನು ವಹಿಸಿದ್ದರು. ಖತೀಬರಾದ ಹಫೀಳ್ ಅಶ್ರಫ್ ಸಖಾಫಿ ದುವಾ ನೆರವೇರಿಸಿದರು. ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯರವರು ಮಾದಕ ಪದಾರ್ಥ ಬಳಕೆಯಿಂದಾಗುವ ಅನಾಹುತಗಳ ಬಗ್ಗೆ ವಿವರಿಸಿ ಇಂದಿನ ಕಾಲಘಟ್ಟದಲ್ಲಿ ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ ಎಂದು ಕಾರ್ಯಕ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ ತರಬೇತುದಾರ ಬಹುಮಾನ್ಯ ಇಬ್ರಾಹಿಂ ಖಲೀಲ್ ರವರು ಲಹರಿಪದಾರ್ಥಗಳ ದಾಸರಾಗುವುದರಿಂದಾಗುವ ಅನಾಹುತಗಳ ಬಗ್ಗೆ ಹಾಗೂ ಪೋಷಕರು ತಮ್ಮ ಮಕ್ಕಳನ್ನು ಅದರಿಂದ ತಡೆಯಲು ಪೋಷಕರು ತೆಗೆದುಕೊಳ್ಳಬಹುದಾದ ಉಪಾಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಮದ್ರಸ ಅಧ್ಯಕ್ಷ ಅಹ್ಮದ್ ಬಾವ ವೈ.ಬಿ.ಸಿ, ಸದ್ರ್ ಉಸ್ತಾದ್ ಅಬ್ದುಲ್ ಲತೀಫ್ ಸಅದಿ , ಎಂ.ಎ. ಗಫೂರ್ ಉಪಸ್ಥಿತರಿದ್ದರು. ವೈ.ಬಿ.ಸಿ. ಬಷೀರ್ ಅಲಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಎಸ್ ಆರ್ ರಫೀಕ್ ವಂದಿಸಿದರು.
ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ
Posted On: 20 Sep 2022, 10:36 AM
ಉಡುಪಿ : ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಸೆಪ್ಟಂಬರ್ 21 ರಂದು ಬೈಂದೂರು ಪ್ರವಾಸಿ ಮಂದಿರ, ಸೆ. 22 ರಂದು ಕುಂದಾಪುರ ಪ್ರವಾಸಿ ಮಂದಿರ, ಸೆ. 23 ರಂದು ಹೆಬ್ರಿ ಪ್ರವಾಸಿ ಮಂದಿರ, ಸೆ. 26 ರಂದು ಕಾರ್ಕಳ ಪ್ರವಾಸಿ ಮಂದಿರ, ಸೆ. 27 ರಂದು ಬ್ರಹ್ಮಾವರ ತಾಲೂಕು ಕಚೇರಿ ಆವರಣ ಹಾಗೂ ಸೆ. 28 ರಂದು ಕಾಪು ತಾಲೂಕು ಕಚೇರಿ ಆವರಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಸ್ವೀಕರಿಸಲಾಗುವುದು. ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಛೇರಿಗೆ ನೀಡಬಹುದಾಗಿದೆ. ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದು, ಸಾರ್ವಜನಿಕರು ಸರ್ಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ ಅನುಭವಿಸಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೋಟರಿ ಶಂಕರಪುರ : ಇಂಜಿನಿಯರ್ಸ್ ದಿನಾಚರಣೆ
Posted On: 20 Sep 2022, 10:29 AM
ಕಾಪು : ರೋಟರಿ ಕ್ಲಬ್ ಶಂಕರಪುರದ ವತಿಯಿಂದ ಇಂಜಿನಿಯರ್ಸ್ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಇಂಜಿನೀಯರ್ ಗಳಾದ ಅಬ್ದುಲ್ ಖಾದರ್ ಹಾಗೂ ಕ್ಯಾರಲ್ ಡಿಸಿಲ್ವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದ ಪ್ರಾಯೋಜಕರಾಗಿ ಅನಿತಾ ಡಿಸೋಜರವರು ಸಹಕರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷರಾದ ಗ್ಲಾಡಸನ್ ಕುಂದರ್, ವೆಲೇರಿಯನ್ ನೊರೋಹ್ನ, ಮಾಲಿನಿ ಶೆಟ್ಟಿ, ಸಿಲ್ವಿಯ ಕಸ್ಟಲೀನೋ, ಅಂತೋನಿ ಡೇಸಾ, ಜಾರ್ಜ್ ಡಿಸಿಲ್ವ, ಪ್ಯಾಟ್ರಿಕ್ ಡಿಸೋಜಾ, ಫ್ಲಾವಿಯ ಮ್ಯಾನೇಜಸ್, ಫ್ರಾನ್ಸಿಸ್ ಡೇಸಾ, ಲಕ್ಷ್ಮಣ್ ಪೂಜಾರಿ, ರೋಟರಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಪಡುಬಿದ್ರಿ : ತೆಂಗಿನ ಮರ ಹತ್ತುವವರಿಗೆ ಕೇರಾ ಸುರಕ್ಷಾ ವಿಮೆ ಬಗ್ಗೆ ಮಾಹಿತಿ ಹಾಗೂ ನೋಂದಾವಣೆ ಕಾರ್ಯಕ್ರಮ
Posted On: 19 Sep 2022, 07:53 PM
ಪಡುಬಿದ್ರಿ : ಸಂಘಟನೆಯ ಕೊರತೆ ಮತ್ತು ವಿಚಾರಗಳ ಕೊರತೆಯಿಂದ ಕಾರ್ಮಿಕರು ಅಸಂಘಟಿತರಾಗುತ್ತಿದ್ದಾರೆ. ತೆಂಗಿನ ಮರ ಹತ್ತುವವರಿಗೆ ಇದೇ ಸಮಸ್ಯೆಯಾಗಿತ್ತು. ಇದನ್ನು ಗುರುತಿಸಿ ಅವರಿಗೆ ಉಪಯೋಗವಾಗುವ ಕಾರ್ಯವನ್ನು ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಾಣೇಶ್ ಹೆಜಮಾಡಿರವರು ಮಾಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕೇರಾ ಸುರಕ್ಷಾ ವಿಮೆ ಪ್ರಚಲಿತದಲ್ಲಿದೆ. ತಿಂಗಳಿಗೆ ಕೆಲವೊಂದು ತೆಂಗಿನ ಮರ ಹತ್ತುವವರ ಸಾವು ನಾವು ಕಾಣುತ್ತಿದ್ದೇವೆ. ಈ ವಿಮೆ ಅವರ ಕುಟುಂಬವರ್ಗಕ್ಕೆ ಸಹಾಯಕವಾಗಿದೆ. ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ. ಕೇವಲ 99ರೂಪಾಯಿ ನೀಡಿ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ಶಾಶ್ವತ ಅಂಗ ಊನ ಅಥವಾ ಮೂಳೆ ಮುರಿತವಾದವರಿಗೆ ಎರಡುವರೆ ಲಕ್ಷ ಸಿಗುತ್ತದೆ. ಓರಿಯಂಟಲ್ ಬ್ಯಾಂಕ್ ವಿಮೆ ಮತ್ತು ಕೇಂದ್ರ ಸರಕಾರದ ಮೂಲಕ ದೊರೆಯಲಿದೆ. ಸಣ್ಣಪುಟ್ಟ ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಕೊಡುವ ಅವಕಾಶವಿದೆ. ಅವರನ್ನು ಆಸ್ಪತ್ರೆಯಲ್ಲಿ ಆರೈಕೆ ಮಾಡುವವರಿಗೆ ದಿನಕ್ಕೆ 3 ಸಾವಿರದಂತೆ ಒಂದು ವಾರದವರೆಗೆ 18 ಸಾವಿರ ಖರ್ಚು ವೆಚ್ಚ ಭರಿಸುವ ಅವಕಾಶವಾಗಿದೆ. ನೋಂದಾವಣೆಗೆ ಅಕ್ಟೋಬರ್ 31 ಕೊನೆಯ ದಿನವಾಗಿದ್ದು ಆದಷ್ಟು ಬೇಗ ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ ಎಂದು ಉಡುಪಿ ಜಿಲ್ಲಾ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಹೇಮಂತ್ ಕುಮಾರ್ ತಿಳಿಸಿದರು. ಅವರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡುಬಿದ್ರಿ ಹಾಗೂ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 19ರಂದು ಪಡುಬಿದ್ರಿ ಮಾರ್ಕೆಟ್ ರಸ್ತೆಯ ಸಾಯಿ ಆರ್ಕೇಡ್ ಬಿಲ್ಡಿಂಗ್ ನಲ್ಲಿ ಜರಗಿದ ಪಡುಬಿದ್ರಿ, ಫಲಿಮಾರು, ಹಾಗೂ ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ತೆಂಗಿನ ಮರ ಹತ್ತುವವರಿಗೆ ಕೇರ ಸುರಕ್ಷಾ ವಿಮೆ ಬಗ್ಗೆ ಮಾಹಿತಿ ಹಾಗೂ ನೋಂದಾವಣೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಫಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ತೆಂಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಸ್ತೂರಿ ಪ್ರವೀಣ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ನೀತಾ ಗುರುರಾಜ್, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ ಪೂಜಾರಿ, ಉಡುಪಿ ಜಿಲ್ಲೆ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಾಣೇಶ್ ಹೆಜಮಾಡಿ, ಕಾಪುವಿನ ಸಹಾಯಕ ತೋಟಗಾರಿಕೆ ಅಧಿಕಾರಿ ಅಮಿತ ಸಿಂಪಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡುಬಿದ್ರಿ ಇದರ ಅಧ್ಯಕ್ಷರಾದ ಪಿ ಕೆ ಸದಾನಂದ ವಹಿಸಿದ್ದರು. ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿದರು.
ಕಾಪು : ಕೈಪುಂಜಾಲು ವಹಿಯುಲ್ಲಾ ದರ್ಗಾದ ಉರುಸ್ ; ಶಾಂತಿ ಸಭೆ
Posted On: 19 Sep 2022, 06:13 PM
ಕಾಪು : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮುಂಬರುವ ಸೆಪ್ಟೆಂಬರ್ 21 ರಂದು ಉಳಿಯಾರಗೋಳಿ ಗ್ರಾಮದ ಕೈಪುಂಜಾಲು ವಹಿಯುಲ್ಲಾ ದರ್ಗಾದ (ಕಾಪು ಪೋಲಿಪು ಜಾಮಿಯಾ ಮಸೀದಿಯ ಅಧೀನದಲ್ಲಿರುವ) ಉರುಸ್ ಕಾರ್ಯಕ್ರಮದ ಪ್ರಯುಕ್ತ ಶಾಂತಿ ಸಭೆಯನ್ನು ಪೊಲೀಸ್ ವೃತ್ತ ನಿರೀಕ್ಷಕರು ಕಾಪು ಇವರ ನೇತೃತ್ವದಲ್ಲಿ ನಡೆಸಲಾಯಿತು. ಈ ವೇಳೆ ಪೋಲಿಪು ಜಾಮಿಯಾ ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಕೈ ಪುಂಜಾಲು ವಾರ್ಡ್ನ ಪುರಸಭಾ ಸದಸ್ಯರು ಹಾಗೂ ಕೈಪುಂಜಾಲಿನ ಸ್ಥಳೀಯರು ಉಪಸ್ಥಿತಿಯಿದ್ದರು.
ಮಟ್ಟಾರು : ಹಿಂದೂ ಸಮಾಜೋತ್ಸವದ ಮನವಿ ಪತ್ರ ಬಿಡುಗಡೆ
Posted On: 18 Sep 2022, 10:41 PM
ಮಟ್ಟಾರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ಇದರ ನೇತೃತ್ವದಲ್ಲಿ ನವೆಂಬರ್ 27 ರಂದು ನಡೆಯಲಿರುವ ಹಿಂದೂ ಸಮಾಜೋತ್ಸವದ ಮನವಿ ಪತ್ರ ಇಂದು ಬಿಡುಗಡೆ ಮಾಡಲಾಯಿತು. ವಿಶ್ವ ಹಿಂದೂ ಪರಿಷದ್ ಮಟ್ಟಾರು ಘಟಕದ ಗೌರವಾಧ್ಯಕ್ಷ ವಿಜಯ ಪೂಜಾರಿ ಸಭಾಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು ಮತ್ತು ಅಯೋಧ್ಯಾ ಶ್ರೀರಾಮ ಜನ್ಮಭೂಮಿ ಕರಸೇವಕರಾದ ಪಾಂಗಾಳ ಪಾಂಡುರಂಗ ಶ್ಯಾನಭಾಗ್ ಮನವಿ ಪತ್ರ ಬಿಡುಗಡೆ ಮಾಡಿದರು. ಅಯೋಧ್ಯಾ ಶ್ರೀರಾಮ ಜನ್ಮಭೂಮಿ ಕರಸೇವಕರಾದ ಸುಂದರ ಪ್ರಭು ಶಿರ್ವ,ರಮೇಶ್ ಪ್ರಭು ಬೆಳೆಂಜಾಲೆ,ದಿನೇಶ್ ಪಾಟ್ಕರ್ ಮಟ್ಟಾರು,ಶ್ರೀಪತಿ ಕಾಮತ್ ಶಿರ್ವ, ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಕಾರ್ಯದರ್ಶಿ ರಾಜೇಂದ್ರ ಶೆಣೈ, ಶಿರ್ವ ವಲಯ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್,ಮಟ್ಟಾರು ಘಟಕ ಅಧ್ಯಕ್ಷ ಪ್ರಕಾಶ್ ಶೆಟ್ಟಿ,ಬಜರಂಗದಳ ಸಂಚಾಲಕ ವಿಶ್ವನಾಥ ಆಚಾರ್ಯ, ಮಾತೃಶಕ್ತಿ ಪ್ರಮುಖ್ ಸುಲೋಚನಾ ಆಚಾರ್ಯ, ದುರ್ಗಾವಾಹಿನಿ ಸಂಚಾಲಕಿ ದೀಕ್ಷಾ ಪ್ರಭು ಉಪಸ್ಥಿತರಿದ್ದರು.ಕಾಪು ಪ್ರಖಂಡ ಅಧ್ಯಕ್ಷ ಜಯಪ್ರಕಾಶ್ ಪ್ರಭು ಪ್ರಸ್ತಾವನೆಗೈದರು.
