Updated News From Kaup
ಉಡುಪಿ : ಅಪರ ಜಿಲ್ಲಾಧಿಕಾರಿ ಮನೆಯಲ್ಲಿ ಕಪ್ಪೆ ಚಿಪ್ಪಲ್ಲಿ ಅರಳಿದ ಭಾರತ
Posted On: 13-08-2022 02:20PM
ಉಡುಪಿ : ಇಲ್ಲಿಯ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಅವರು ತಮ್ಮ ಮನೆಯಲ್ಲಿ ಕಪ್ಪೆಚಿಪ್ಪುಗಳ ಮೂಲಕ ಭಾರತ ಭೂಪಟವನ್ನು ರಚಿಸಿ, ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಅಂತಾರಾಷ್ಟ್ರೀಯ ಯುವ ದಿನ ಆಚರಣೆ
Posted On: 13-08-2022 02:06PM
ಉಡುಪಿ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಉಡುಪಿಯ ಸಂತ ಸಿಸಿಲಿ ಪದವಿಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು. ದೇಶದ ಸ್ವಾತಂತ್ರ್ಯದ ಅಮೃತೋತ್ಸವದ ಸಂಭ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ನಾಯಕ ಮತ್ತು ನಾಯಕಿಗೆ ರಾಷ್ಟ್ರ ಧ್ವಜ ಹಸ್ತಾಂತರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ವಿಶೇಷ ಬಹುಮಾನ
Posted On: 12-08-2022 11:39PM
ಪಡುಬಿದ್ರಿ : ಇಲ್ಲಿನ ಸಹಕಾರಿ ವ್ಯವಸಾಯಿಕ ಸೊಸೈಟಿಯ 2021-22ನೇ ವಾರ್ಷಿಕ ಸಾಲಿನ ಬ್ಯಾಂಕಿಂಗ್ ವ್ಯವಹಾರದಲ್ಲಿ ಗಳಿಸಿದ ಪ್ರಗತಿಯನ್ನು ಗುರುತಿಸಿ ಆಗಸ್ಟ್ 5ರಂದು ಮಂಗಳೂರು ಕೊಡಿಯಾಲ್ ಬೈಲ್ ನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರಗಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2021-22 ನೇ ಸಾಲಿನ ಮಹಾಸಭೆಯಲ್ಲಿ 2021-22 ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ನೀಡಿ ಗೌರವಿಸಲಾಯಿತು.
ಗ್ರಾಮ-1 : ತಿರಂಗ ಧ್ವಜ ವಿತರಣೆ
Posted On: 12-08-2022 11:20PM
ಉಡುಪಿ :ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರಲು ಖಾಸಗಿ ಸಹಭಾಗಿತ್ವದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಅನುಷ್ಟಾನಗೊಳಿಸಲು ಗ್ರಾಮ-1 ಯೋಜನೆಯನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದ್ದು, ಉಡುಪಿ ಜಿಲ್ಲೆಯಲ್ಲೂ ಸಹ ಹಲವು ಗ್ರಾಮ-1 ಕೇಂದ್ರಗಳು ಪ್ರಾರಂಭಗೊಂಡು ಸಕ್ರಿಯವಾಗಿರುತ್ತದೆ.
ಕಾಪು ಜಿ.ಎಸ್. ಬಿ ಸಮಾಜ ಬಾಂಧವರಿಂದ ಸಮುದ್ರ ಪೂಜೆ
Posted On: 12-08-2022 08:45PM
ಕಾಪು : ಅನಾದಿ ಕಾಲದಿಂದ ಹಿರಿಯರ ಮಾರ್ಗದರ್ಶನದಂತೆ ಕಾಪುವಿನ ಜಿ.ಎಸ್. ಬಿ ಸಮಾಜ ಬಾಂಧವರಿಂದ ನಡೆಯುತ್ತಿದ್ದ ಸಮುದ್ರ ಪೂಜೆ ಆಗಸ್ಟ್ 11ರಂದು ನೆರವೇರಿತು.
ಕಟಪಾಡಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಎಸ್ ವಿ ಎಸ್ ಪ್ರೌಢಶಾಲೆಯ ಮಕ್ಕಳಿಗೆ ಉಚಿತ ತ್ರಿವರ್ಣ ಧ್ವಜ ವಿತರಣೆ
Posted On: 12-08-2022 08:30PM
ಕಟಪಾಡಿ : ದೇಶವು ಸ್ವಾತಂತ್ರ್ಯದ 75 ಸಂವತ್ಸರಗಳನ್ನು ಪೂರೈಸಿದ ಶುಭ ಸಂದರ್ಭದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ "ಹರ್ ಘರ್ ತಿರಂಗಾ" (ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ) ಅಭಿಯಾನವು ಆಗಸ್ಟ್ 13ರಿಂದ ಆಗಸ್ಟ್ 15ರ ವರೆಗೆ ದೇಶಾದ್ಯಂತ ನಡೆಯಲಿದೆ. ಈ ಪ್ರಯುಕ್ತ ಕಟಪಾಡಿಯ ಎಸ್ ವಿ ಎಸ್ ಪ್ರೌಢಶಾಲಾ - ಕಾಲೇಜು ಹಳೆವಿದ್ಯಾರ್ಥಿಗಳ ವತಿಯಿಂದ ಎಸ್ ವಿ ಎಸ್ ಪ್ರೌಢಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ ತ್ರಿವರ್ಣ ಧ್ವಜವನ್ನು ವಿತರಿಸಲಾಯಿತು.
ರಾಘವೇಂದ್ರ ಯತಿ ಸಾರ್ವಭೌಮರು - "ಶುಭಯೋಗ ತರುವ ಯೋಗಿ"
Posted On: 12-08-2022 07:40PM
ಸತ್ಯ-ಧರ್ಮ ಮಗ್ನರಾಗಿ ಭಜಿಸಿದವರಿಗೆ ಕಲ್ಪವೃಕ್ಷವಾಗಿ ನಮಿಸಿದವರಿಗೆ ಕಾಮಧೇನುವಾಗಿ ಕೋಟ್ಯಂತರ ಭಕ್ತ-ಶಿಷ್ಯ ಸಂದೋಹವನ್ನು ಪೊರೆಯುತ್ತಾರೆ ಎಂಬ ವಿಶ್ವಾಸಕ್ಕೆ ಪಾತ್ರರಾದವರು ಶ್ರೀ ರಾಘವೇಂದ್ರ ಗುರು ಸಾರ್ವಭೌಮರು. ಗುರುರಾಯರೆಂದೊ, ರಾಯರೆಂದೊ ಕರೆಯಲ್ಪಡುವ ಈ ಮಹಾಗುರುವಿನ ಆರಾಧನಾ ಮಹೋತ್ಸವ ನಾಡಿನಾದ್ಯಂತ ಶ್ರದ್ಧಾಭಕ್ತಿಯೊಂದಿಗೆ ಆಚರಿಸಲ್ಪಡುವುದು. ಈ ಪರ್ವ ದಿನಗಳ ಸಂಭ್ರಮ, ಮುಗ್ಧ ಭಕ್ತಿಯ ಹಿನ್ನೆಲೆಯಲ್ಲಿದೆ ಪವಿತ್ರವಾದ ಹಾಗೂ ಗುರುತರವಾದ ಗುರು-ಶಿಷ್ಯ ಅನುಬಂಧ, ಇದು ಅವರ್ಣನೀಯ ಸಂಬಂಧವೊಂದರ ವಿರಾಡ್ ದರ್ಶನ.
ಉಡುಪಿ ಜಿಲ್ಲಾ ಜೆಡಿಎಸ್ ವಿಕಲಚೇತನ ಘಟಕದ ಅಧ್ಯಕ್ಷರಾದ ವಿಲ್ಫ್ರೆಡ್ ವಿ ಗೋಮ್ಸ್ ವಿಧಿವಶ
Posted On: 11-08-2022 02:10PM
ಕಾಪು : ಉಡುಪಿ ಜಿಲ್ಲಾ ಜೆಡಿಎಸ್ ವಿಕಲಚೇತನ ಘಟಕದ ಅಧ್ಯಕ್ಷರಾದ ವಿಲ್ಫ್ರೆಡ್ ವಿ ಗೋಮ್ಸ್ ವಿಧಿವಶರಾಗಿದ್ದಾರೆ.
ಉದ್ಯಾವರ : ವಾಹನವೊಂದು ಢಿಕ್ಕಿಯಾಗಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವು
Posted On: 10-08-2022 08:25PM
ಉದ್ಯಾವರ : ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಸೇತುವೆ ಬಳಿ ಸ್ಕೂಟಿಗೆ ವಾಹನವೊಂದು ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ಆಗಸ್ಟ್ 7 - 30 : ಉಡುಪಿಯ ಸಾಲಿಡಾರಿಟಿ ಯೂತ್ ಮೂಮೆಂಟ್, ಡಾ.ಎ.ವಿ.ಬಾಳಿಗ ಮೆಮೋರಿಯಲ್ ಆಸ್ಪತ್ರೆ, ನಶೆ ಮುಕ್ತ ಅಭಿಯಾನ ಸಹಯೋಗದೊಂದಿಗೆ ಮಾದಕ ವಿರೋಧಿ ಅಭಿಯಾನ
Posted On: 10-08-2022 08:04PM
ಕಾಪು : ಇಂದಿನ ಯುವ ಪೀಳಿಗೆ ದಿನೇ ದಿನೇ ಮಾದಕ ದ್ರವ್ಯಗಳ ವ್ಯಸನಕ್ಕೀಡಾಗಿ ಅದರ ದಾಸರಾಗುತ್ತಾರೆ. ಮಾದಕ ದ್ರವ್ಯಗಳ ಕಳ್ಳ ಸಾಗಣಿಕೆದಾರರು ತಮ್ಮ ತಿಜೋರಿಯನ್ನು ತುಂಬಿಸಿಕೊಳ್ಳಲು ದೇಶದ ಯುವಶಕ್ತಿಯನ್ನು ನಶೆಯ ಕೂಪಕ್ಕೆ ತಳ್ಳುತ್ತಿದ್ದಾರೆ ಎಂದು ಖ್ಯಾತ ಮನೋರೋಗ ತಜ್ಞ ಡಾ.ಪಿ.ವಿ ಭಂಡಾರಿ ಹೇಳಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ಡಾ.ಏ.ವಿ.ಬಾಳಿಗ ಮೆಮೊರಿಯಲ್ ಆಸ್ಪತ್ರೆ ಮತ್ತು ನಶಾಮುಕ್ತ ಅಭಿಯಾನ,ಉಡುಪಿ ಜಿಲ್ಲೆ ಹಾಗೂ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಇವರು ಆಯೋಜಿಸಿದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.
