Updated News From Kaup
ಕಾಪು : ಟೆಂಪೋ ಚಾಲಕ ಶಿವ ಪೂಜಾರಿ ನಿಧನ
Posted On: 13 Oct 2022, 11:29 PM
ಕಾಪು : ಟೆಂಪೋ ಚಾಲಕ ಶಿವ ಪೂಜಾರಿ ನಿಧನ ಕಾಪು : ಇಲ್ಲಿನ ಟೆಂಪೋ ಚಾಲಕ ಪೊಲಿಪುಗುಡ್ಡೆ ನಿವಾಸಿ ಶಿವ ಪೂಜಾರಿ (4೦) ಅವರು ಅಕ್ಟೋಬರ್ 13ರಂದು ಅಸೌಖ್ಯದಿಂದಾಗಿ ನಿಧನ ಹೊಂದಿದರು ಅವಿವಾಹಿತರಾಗಿದ್ದ ಅವರು ತಾಯಿ, ನಾಲ್ಕು ಮಂದಿ ಸಹೋದರರು ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಕಾಪು ಗೂಡ್ಸ್ ಟೆಂಪೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಯಾಗಿದ್ದ ಅವರು ಕಳೆದ 15 ವರ್ಷದಿಂದ ತನ್ನ ಸ್ವಂತ ಟೆಂಪೋ ಚಲಾಯಿಸುತ್ತಿದ್ದರು.
ಉಚ್ಚಿಲದಲ್ಲಿ ಸ್ಕಾರ್ಪಿಯೋ ಚಾಲಕನ ಅವಾಂತರ 4 ವಾಹನಗಳಿಗೆ ಡಿಕ್ಕಿ
Posted On: 13 Oct 2022, 11:25 PM
ಉಚ್ಚಿಲ : ರಾಷ್ಟ್ರೀಯ ಹೆದ್ದಾರಿ 66ರ ಅನಾಫಿ ಮಸೀದಿ ಎದುರು ಸ್ಕಾರ್ಪಿಯೋ ಚಾಲಕನ ಅತೀವೇಗ ಹಾಗೂ ನಿರ್ಲಕ್ಷತೆಯ ಚಾಲನೆಯಿಂದ ಸರಣಿ ಅಪಘಾತ ಗುರುವಾರ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕ ಎರ್ಮಾಳು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಅಲ್ಲಿ ನಿಲ್ಲಿಸದೆ ಅತಿವೇಗದಿಂದ ಬಂದು ಉಚ್ಚಿ. ರಾ. ರಾಷ್ಟ್ರೀಯ ಹೆದ್ದಾರಿ 66ರ ಅನಾಫಿ ಮಸೀದಿಯವರು ಎರ್ಟಿಗಾ ಕಾರು ಬೈಕು ಹಾಗೂ ಮೀನಿನ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಸ್ಕಾರ್ಪಿಯೋ ಕಾರು ಗುದ್ದಿದ ರಭಸಕ್ಕೆ ಎರ್ಟಿಗಾ ಕಾರು ವಿಭಾಜಕ ಏರಿ ಇನ್ನೊಂದು ಪಥದತ್ತ ತಿರುಗಿ ನಿಂತಿದೆ. ಸ್ಕೂಟಿ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾಪು ವೃತ್ತ ನಿರೀಕ್ಷಕ ಕೆಸಿ ಪೂವಯ್ಯ, ಕಾಪು ಠಾಣಾಧಿಕಾರಿ ಶ್ರೀಶೈಲ ಮುರುಗೋಡ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಮತ್ತು ಸಿಬ್ಬಂದಿ ಬೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಹೆದ್ದಾರಿಯಾಗಿ ಅಪಘಾತಕ್ಕೆ ಹೆದ್ದಾರಿ ಅರೆಬರೆ ಕಾಮಗಾರಿ ಮತ್ತು ಹೆದ್ದಾರಿಯಲ್ಲಿ ವಿದ್ಯುತ್ ಇಲ್ಲದ ಕಾರಣ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಜನತಾದಳ ಪಕ್ಷದ ಜಿಲ್ಲಾ ವಕ್ತಾರರಾಗಿ ವಾಸುದೇವ ರಾವ್
Posted On: 12 Oct 2022, 11:16 PM
ಉಡುಪಿ : ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಜನತಾದಳ( ಜಾತ್ಯತೀತ) ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂರವರು ವಾಸುದೇವ ರಾವ್ ರವರನ್ನು ಉಡುಪಿ ಜಿಲ್ಲೆಯ ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾ ವಕ್ತಾರರನ್ನಾಗಿ ನೇಮಕಗೊಳಿಸಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾಪು ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ರವೀಂದ್ರ ಪೂಜಾರಿ ಮರು ಆಯ್ಕೆ
Posted On: 12 Oct 2022, 06:17 PM
ಕಾಪು : ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ.) ಬೆಂಗಳೂರು, ಇದರ ಕಾಪು ತಾಲೂಕಿನ ಮಹಾ ಸಭೆಯು ಕಾಪು ಹೋಟೆಲ್ ಮಂದಾರದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಘವನ್ನು ಹುಟ್ಟು ಹಾಕಿ, ಸ್ಥಾಪಕ ಅಧ್ಯಕ್ಷರಾಗಿ ದೀರ್ಘ ಕಾಲ ಸೇವೆ ಸಲ್ಲಿಸಿದ ನಿಕಟಪೂರ್ವ ಜಿಲ್ಲಾ ಅಧ್ಯಕ್ಷರಾದ ನಾಗರಾಜ್ ರಾವ್ ಎಮ್. ರವರನ್ನು ಕಾಪು ತಾಲೂಕು ಸಮಿತಿಯಿಂದ ಸನ್ಮಾನಿಸಲಾಯಿತು. ಮುಂದಿನ ಮೂರು ವರ್ಷದ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲೆಯ ಮೇಲುಸ್ತುವಾರಿಯೊಂದಿಗೆ ಚುನಾವಣೆ ನಡೆದು, ಚುನಾವಣಾ ಪ್ರಕ್ರಿಯೆಯಲ್ಲಿ ಮಹಾದೇವಿ ಎಲೆಕ್ಟ್ರಿಕಲ್ಸ್ ನ ರವೀಂದ್ರ ಪೂಜಾರಿ ಯವರು ಮರು ಆಯ್ಕೆಯಾಗಿರುತ್ತಾರೆ ಎಂದು ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀಕಾಂತ್ ಶೆಣೈರವರು ಘೋಷಿಸಿದರು. ಉಪಾಧ್ಯಕ್ಷರಾಗಿ ವಸಂತ ಸುವರ್ಣ, ಕಾರ್ಯದರ್ಶಿಯಾಗಿ ಗಿರಿಧರ್, ಜತೆ ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿಯಾಗಿ ಮುಹಮ್ಮದ್ ಆಝಮ್ ರವರು ಅವಿರೋಧವಾಗಿ ಆಯ್ಕೆಯಾಗಿರುವರು ಎಂದು ತಿಳಿಸಿದರು. ಜಿಲ್ಲಾ ಮಟ್ಟದ ಸಂಘದ ಪ್ರಚಾರ ಸಭೆಯ ಅಧ್ಯಕ್ಷರಾಗಿ ಅನ್ವರ್ ಅಲಿ ಕಾಪು ರವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ಜಿಲ್ಲಾ ಅಧ್ಯಕ್ಷರಾದ ಶ್ರೀಕಾಂತ್ ಶೆಣೈ , ಉಪಾಧ್ಯಕ್ಷರು ಗಳಾದ ಅಶೋಕ್ ಸುವರ್ಣ , ಕೃಷ್ಣ ಕುಲಾಲ್, ಕಾರ್ಯದರ್ಶಿ ಸುರೇಶ್ ಜತ್ತನ್ನ , ಕೋಶಾಧಿಕಾರಿ ಆನಂದ ಶೇರಿಗಾರ, ಸಂಘಟನಾ ಕಾರ್ಯದರ್ಶಿ ಸುದರ್ಶನ್ ರವರು ಭಾಗವಹಿಸಿದ್ದರು. ಸಭಾಧ್ಯಕ್ಷತೆಯನ್ನು ರವೀಂದ ಪೂಜಾರಿ ವಹಿಸಿದ್ದರು. ಸುಪ್ರೀತ್ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ಹೇಮಂತ್ ಪಡುಬಿದ್ರಿ ಸ್ವಾಗತಿಸಿದರು. ಕಾರ್ಯದರ್ಶಿ ದೇವರಾಜ ಕೋಟ್ಯಾನ್ ವರದಿ ವಾಚಿಸಿದರು. ಕೋಶಾಧಿಕಾರಿ ಮೋಹನ ಆಚಾರ್ಯ ಲೆಕ್ಕ ಪತ್ರ ಮಂಡಿಸಿದರು. ಕಾರ್ಯಕ್ರಮವನ್ನು ಅನ್ವರ್ ಅಲಿ ಕಾಪು ಮತ್ತು ಪ್ರಕಾಶ್ ಅಂಚನ್ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಮುಹಮ್ಮದ್ ವಂದಿಸಿದರು.
ಕಾಪು: ನಿವೃತ್ತ ಯೋಧ ಮೂಳೂರು ನಿವಾಸಿ ಹಾಜಿ ಅಬ್ದುಲ್ ರಝಾಕ್ ಶಾಬಾನ್ ನಿಧನ
Posted On: 12 Oct 2022, 06:01 PM
ಕಾಪು : ನಿವೃತ್ತ ಯೋಧ ಮೂಳೂರು ನಿವಾಸಿ ಹಾಜಿ ಅಬ್ದುಲ್ ರಝಾಕ್ ಶಾಬಾನ್ (85) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನ ಹೊಂದಿದರು. 18ನೇ ವಯಸ್ಸಿನಲ್ಲಿ ವಾಯುಸೇನೆಗೆ ಸೇರ್ಪಡೆಗೊಂಡ ಅಬ್ದುಲ್ ರಝಾಕ್ ಶಾಬಾನ್ ಅವರು ಎರಡು ವರ್ಷ ಬೆಂಗಳೂರಿನ ಏರ್ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ ಕಮ್ಯುನಿಕೇಶನ್ ಎಂಜಿನಿಯರಿಂಗ್ ಡಿಪ್ಲೋಮಾ ಪಡೆದು ಬಳಿಕ ಕಮ್ಯುನಿಕೇಶನ್ ಆಫಿಸರ್ ಆಗಿ ಕಾರ್ಯನಿರ್ವಹಿಸಿದ್ದರು. ವಾಯುಸೇನಾ ಕಾಲಾವಧಿಯಲ್ಲಿ ದೆಹಲಿ, ಆಗ್ರಾ ಹಾಗೂ ಹಿಮಾಲಯದ ತಪ್ಪಲಿನ ಲಡಾಖ್ ಸೇನಾ ನೆಲೆಯಲ್ಲೂ ಕಾರ್ಯಾಚರಣೆ ನಡೆಸಿದ್ದರು. 1962ರ ಚೀನಾ ಯುದ್ಧ 1965ರ ಪಾಕಿಸ್ತಾನ ಯುದ್ಧ ಹಾಗೂ 1971ರ ಪಾಕಿಸ್ತಾನದ ವಿರುದ್ಧ ಸಮರ ಸೇನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅನೇಕ ಮೆಡಲ್ಗಳಿಂದ ಪುರಸ್ಕೃತರಾದರು. 1975ರಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ ನಂತರ ಧಾರ್ಮಿಕ ಸೇವಾರಂಗದಲ್ಲಿ ತೊಡಗಿಸಿಕೊಂಡಿದ್ದರು. ಮೂಳೂರಿನ ಮಸೀದಿಯ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಮೂರು ಭಾರಿ ಮದ್ರಸದ ಹಾಗೂ ಒಂದು ಭಾರಿ ಮಸೀದಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕೊಡುಗೈ ದಾನಿಯೂ ಆಗಿದ್ದ ಇವರು ತಂದೆಯ ಹೆಸರಿನಲ್ಲಿ ಮುಹಮ್ಮದ್ ಶಾಬಾನ್ ಟ್ರಸ್ಟ್ ಸ್ಥಾಪಿಸಿ ಅಶಕ್ತ ಕುಟುಂಬಗಳಿಗೆ ಧನಸಹಾಯ ನೀಡುತ್ತಿದ್ದರು. ಹಾಜಿ ಅಬ್ದುಲ್ ರಝಾಕ್ ಶಾಬಾನ್ ಅವರು ಪತ್ನಿ, ಗಂಡು ಮಕ್ಕಳು, ಬಂಧುಬಳಗವನ್ನು ಅಗಲಿದ್ದಾರೆ.
ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಗೆ ಹರ್ಷಿತಾ ಇನ್ನಂಜೆ ಆಯ್ಕೆ
Posted On: 12 Oct 2022, 05:54 PM
ಕಾಪು : ಪದವಿ ಪೂರ್ವ ಶಿಕ್ಷಣ ಇಲಾಖೆ ಇವರು ಶಿವಮೊಗ್ಗದಲ್ಲಿ ಅಕ್ಟೋಬರ್ 10 ರಂದು ನಡೆಸಿದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಮಾರಿ ಹರ್ಷಿತಾ ಇನ್ನಂಜೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿರುತ್ತಾರೆ. ಮುಂಬರುವ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಕತ್ತಲ ಚಿಗುರು ಮಕ್ಕಳ ಕಿರು ಚಿತ್ರ ಬಿಡುಗಡೆ
Posted On: 11 Oct 2022, 07:25 PM
ಉಡುಪಿ : ಕತ್ತಲ ಚಿಗುರು ಮಕ್ಕಳ ಕಿರು ಚಿತ್ರದ ಬಿಡುಗಡೆ ಕಾರ್ಯಕ್ರಮವು ಅಕ್ಟೋಬರ್ 9 ರಂದು ಬ್ರಹ್ಮಾವರ ಬಂಟರ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬ್ರಹ್ಮಾವರ ವಲಯ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಹಾವಂಜೆ ಉದ್ಘಾಟಿಸಿದರು. ಕಿರು ಚಿತ್ರವನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ ವಲಯ ಅಧ್ಯಕ್ಷರಾದ ಎಂ ಗಣೇಶ್ ಕುಮಾರ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಅಧ್ಯಾಪಕರಾದ ಸಂಜೀವ ಮಡಿವಾಳ ಕುಕ್ಕಿಕಟ್ಟೆ ಬೆಳ್ಳಂಪಳ್ಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆದಿತ್ಯ ಭಾಸ್ಕರ್ ಕರಂಬಳ್ಳಿ, ಶಿಕ್ಷಣ ಸಂಯೋಜಕರು ಕುಂದಾಪುರ ವಲಯ ಶೇಖರ್ ಯು., ವಿ ಎಸ್ ಗ್ರೂಪ್ ಹಾಗೂ ನಮ್ಮ ಉಡುಪಿ ಟಿವಿ ನಿರ್ದೇಶಕರು ಹಾಗೂ ಸಂಸ್ಥಾಪಕರು ಹಾಗೂ ಪ್ರಧಾನ ಕಾರ್ಯದರ್ಶಿ ಅಖಿಲ ಭಾರತ ತುಳುನಾಡ ದೈವರಾಧಕರ ಒಕ್ಕೂಟ( ರಿ ) ಉಡುಪಿ ಜಿಲ್ಲೆ ಇದರ ವಿನೋದ್ ಶೆಟ್ಟಿ, ಕಿರುತೆರೆ ನಟಿ ಪೂಜಾ ಶೆಟ್ಟಿ, ಹಾಲು ಉತ್ಪಾದಕರ ಸಹಕಾರಿ ಸಂಘ ಬೆಳ್ಳಂಪಳ್ಳಿ ಉಪಾಧ್ಯಕ್ಷ ಸದಾನಂದ ಶೆಟ್ಟಿ, ಭೂತರಾಜ ದೇವಸ್ಥಾನ ಬೆಳ್ಳಂಪಳ್ಳಿ ಕುಕ್ಕಿಕಟ್ಟೆ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಜಿಲ್ಲಾಧ್ಯಕ್ಷರು ಹಾಲು ಉತ್ಪಾದಕರ ನೌಕರರ ಸಂಘ ಬ್ಯಾಂಕಿಂಗ್ ವಿಭಾಗದ ಓಂ ಪ್ರಕಾಶ್ ಕೆಮ್ಮಣ್ಣು, ನಿರ್ಮಾಪಕರಾದ ಮಮತಾ ಪಿ ಶೆಟ್ಟಿ ಶ್ರೀನಗರ, ಮಮತಾ ಸಂತೋಷ್ ಶೆಟ್ಟಿ, ರಮಣಿ ಹಾಗೂ ಚಿತ್ರತಂಡದ ಎಲ್ಲಾ ಸದಸ್ಯರು ಉಪಸ್ಥಿತಿಯಿದ್ದರು. ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ ಇದರ ಉಪಾಧ್ಯಕ್ಷರಾದ ಶಶಿಧರ್ ಶೆಟ್ಟಿ ಸ್ವಾಗತಿಸಿದರು. ಕಿರುಚಿತ್ರದ ಚಿತ್ರಕಥೆ ಸಾಹಿತ್ಯ ಸಂಗೀತ ನಿರ್ದೇಶಕ ದಿನೇಶ್ ಕೊಡವೂರು ವಂದಿಸಿದರು.
ಕಾಪು ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ ಪೂರ್ಣಾಹುತಿ ; ಅನ್ನಸಂತರ್ಪಣೆ
Posted On: 11 Oct 2022, 07:07 PM
ಕಾಪು : ಇಲ್ಲಿನ ಗೌಡ ಸಾರಸ್ವತ ಸಮಾಜದ ಆಡಳಿತಕ್ಕೆ ಒಳಪಟ್ಟಿರುವ ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಅಕ್ಟೋಬರ್ 11ರಂದು ಚಂಡಿಕಾಯಾಗ ಪೂರ್ಣಾಹುತಿ ಮತ್ತು ಅನ್ನಸಂತರ್ಪಣೆ ನಡೆಯಿತು. ಹಳೇ ಮಾರಿಗುಡಿಯ ಅರ್ಚಕ ವೇ| ಮೂ| ಕಮಲಾಕ್ಷ ಭಟ್ ಅವರ ನೇತೃತ್ವದಲ್ಲಿ ವೈದಿಕ ವೃಂದದ ಸಹಭಾಗಿತ್ವದೊಂದಿಗೆ ಚಂಡಿಕಾಯಾಗ ಪೂರ್ಣಾಹುತಿಯ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬಳಿಕ ಹಾಲು ಪಾಯಸ ಸಹಿತವಾಗಿ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ಮಾರಿಯಮ್ಮ ದೇವಿಯ ದರ್ಶನ ಸೇವೆ ನಡೆದು ಭಕ್ತರಿಗೆ ಅನುಗ್ರಹ ಪ್ರಸಾದ ವಿತರಿಸಲಾಯಿತು. ಕಾಪು ಹಳೇ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಅಧ್ಯಕ್ಷ ಕೆ. ಪ್ರಸಾದ್ ಗೋಕುಲ್ದಾಸ್ ಶೆಣೈ, ಮಾಜಿ ಆಡಳಿತ ಮೊಕ್ತೇಸರ ಶ್ರೀಧರ ಆನಂದರಾಯ ಶೆಣೈ, ಮೊಕ್ತೇಸರರಾದ ಸದಾಶಿವ ರಾಧಾಕೃಷ್ಣ ಕಾಮತ್, ರಾಜೇಶ್ ಮಾಧವರಾಯ ಶೆಣೈ, ರಾಮ ಶಶಿಧರ ನಾಯಕ್, ಶ್ರೀಕಾಂತ ಲಕ್ಷ್ಮೀನಾರಾಯಣ ಭಟ್, ಆಡಳಿತ ಮಂಡಳಿಯ ಸದಸ್ಯರಾದ ಸುನೀಲ್ ಪೈ, ಚಂದ್ರಕಾಂತ್ ಕಾಮತ್, ಮೋಹನದಾಸ್ ಕಿಣಿ, ಕೃಷ್ಣಾನಂದ ನಾಯಕ್, ರಾಜೇಶ್ ಶೆಣೈ ಹಾಗೂ ವಿವಿಧ ಗಣ್ಯರು, ಕಾಪು ಪೇಟೆಯ ಹತ್ತು ಸಮಸ್ತರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.
ಅ.13 : ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿಯ ಪುಣೆ ಸಮಿತಿ ಉದ್ಘಾಟನಾ ಸಮಾರಂಭ ; ಶ್ರೀದೇವಿ ಮಹಾತ್ಮೆ ಯಕ್ಷಗಾನ
Posted On: 10 Oct 2022, 11:18 PM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿಗಾಗಿ ರಚಿಸಿದ ಪುಣೆ ಸಮಿತಿಯ ಉದ್ಘಾಟನಾ ಸಮಾರಂಭ ಹಾಗೂ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಹಾವಂಜೆ ಮೇಳದ ಕಲಾವಿದರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನವು ಅಕ್ಟೋಬರ್ 13, ಗುರುವಾರ ಮಧ್ಯಾಹ್ನ ಗಂಟೆ 12:30 ರಿಂದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ನಡೆಯಲಿದೆ. ಪುಣೆ ಬಂಟರ ಸಂಘದ ಅಧ್ಯಕ್ಷ ಹಾಗೂ ಕಾಪು ಮಾರಿಗುಡಿ ಅಭಿವೃದ್ಧಿ ಪುಣೆ ಸಮಿತಿಯ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯ ಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಎಂ ಆರ್ ಜಿ ಗ್ರೂಪ್ ನ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ, ಕಾಪು ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ , ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ , ಮುಂಬಯಿ ಸಮಿತಿಯ ಅಧ್ಯಕ್ಷರಾದ ಸುಧಾಕರ ಹೆಗ್ಡೆ , ಮುಂಬಯಿ ಸಮಿತಿಯ ಕಾರ್ಯಾಧ್ಯಕ್ಷರಾದ ರವಿ ಸುಂದರ್ ಶೆಟ್ಟಿ, ಕಾಪು ಮಾರಿಗುಡಿ ಅಭಿವೃದ್ಧಿ ಪ್ರಚಾರ ಸಮಿತಿ ಪ್ರಧಾನ ಸಂಚಾಲಕರಾದ ಯೋಗೀಶ್ ಶೆಟ್ಟಿ ಬಾಲಾಜಿ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾಗಿರುವ ಉದಯ್ ಸುಂದರ್ ಶೆಟ್ಟಿ, ಸಂದೀಪ್ ಶೆಟ್ಟಿ, ರವಿರಾಜ್ ಶೆಟ್ಟಿ ,ಮೋಹನ್ ಶೆಟ್ಟಿ ,ದಿವಾಕರ ಶೆಟ್ಟಿ, ದಯಾನಂದ್ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಂಗವಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಕೃಪಾಪೋಷಿತ ಯಕ್ಷಗಾನ ಮಂಡಳಿ , ನಾಗವ್ರುಜ ಕ್ಷೇತ್ರ ಪಾವಂಜೆಯ ಪ್ರಸಿದ್ಧ ಕಲಾವಿದರಿಂದ ಸಂಪೂರ್ಣ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಪು ಮಾರಿಯಮ್ಮನ ಭಕ್ತಾದಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಪುಣೆ ಸಮಿತಿಯ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು, ಕಾರ್ಯಾಧ್ಯಕ್ಷರಾದ ಪಾದೂರು ಹೊಸಮನೆ ಮಾಧವ ಆರ್ ಶೆಟ್ಟಿ , ಉಪಾಧ್ಯಕ್ಷರಾದ ಎರ್ಮಾಳ್ ಚಂದ್ರಹಾಸ ಶೆಟ್ಟಿ, ವಿಶ್ವನಾಥ ಪೂಜಾರಿ ಕಡ್ತಲ, ಪ್ರವೀಣ್ ಶೆಟ್ಟಿ ಪುತ್ತೂರು, ಪ್ರಧಾನ ಕಾರ್ಯದರ್ಶಿ ಪ್ರಸನ್ನ ಶೆಟ್ಟಿ ಇನ್ನಂಜೆ , ಕಾರ್ಯದರ್ಶಿ ಉದಯ್ ಶೆಟ್ಟಿ ಕಳತ್ತೂರು , ಗೌರವ ಕೋಶಾಧಿಕಾರಿ ದಿನೇಶ್ ಶೆಟ್ಟಿ ಕಳತ್ತೂರು, ಜೊತೆ ಕೋಶಾಧಿಕಾರಿ ಜಗದೀಶ್ ಶೆಟ್ಟಿ, ವಿವಿಧ ವಲಯಗಳ ಕಾರ್ಯಾಧ್ಯಕ್ಷರಾದ ಗಣೇಶ್ ಹೆಗ್ಡೆ ಪುಂಚೂರು ,ರಾಕೇಶ್ ಶೆಟ್ಟಿ ಬೆಳ್ಳಾರೆ, ರವಿ ಕೆ ಶೆಟ್ಟಿ , ಗಣೇಶ್ ಪೂಂಜಾ, ರೋನಕ್ ಜಯ ಶೆಟ್ಟಿ, ಕಾರ್ಯಾಧ್ಯಕ್ಷೆ ಸುಲತಾ ಸತೀಶ್ ಶೆಟ್ಟಿ ವಿನಂತಿಸಿದ್ದಾರೆ .
ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು : ತಾಂಬೂಲ ಪ್ರಶ್ನೆಯ ಪರಿಹಾರ ಕ್ರಮ ; ಜೀರ್ಣೋದ್ಧಾರದ ಪೂರ್ವಭಾವಿ ಸಭೆ
Posted On: 10 Oct 2022, 02:43 PM
ಕಾಪು : ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು ಇಲ್ಲಿ ತಾಂಬೂಲ ಪ್ರಶ್ನೆಯ ಪರಿಹಾರ ಪ್ರಾರಂಭ ಕಾರ್ಯಕ್ರಮಗಳು ಮತ್ತು ಜೀರ್ಣೋದ್ಧಾರ ಮಾಡುವ ಬಗ್ಗೆ ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ ಯವರ ಮುಂದಾಳತ್ವದಲ್ಲಿ ಪ್ರಥಮ ಪೂರ್ವಭಾವಿ ಸಭೆ ಮೂಡು ಮಟ್ಟಾರು ಬಬ್ಬರ್ಯ ಸಾನಿಧ್ಯದಲ್ಲಿ ಅಕ್ಟೋಬರ್ 9ರಂದು ನಡೆಯಿತು. ಕೇಂಜ ಶ್ರೀಧರ್ ತಂತ್ರಿ ಮತ್ತು ಗುಂಡು ಭಟ್ ಇವರ ತಂಬೂಲ ಪ್ರಶ್ನೆಯಲ್ಲಿ ಕಂಡುಬಂದಂತಹ ಪರಿಹಾರ ಕಾರ್ಯಕ್ರಮಗಳನ್ನು ಮಾಡುವ ದಿನಾಂಕ ಮತ್ತು ವಿವಿಧ ಕ್ರಮಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಜಯಪ್ರಕಾಶ್ ಪ್ರಭು ಅಧ್ಯಕ್ಷರು ವಿಶ್ವ ಹಿಂದೂ ಪರಿಷತ್ ಕಾಪು ತಾಲೂಕು , ಸುರೇಶ ನಾಯಕ್ ಮಟ್ಟಾರು , ಗೋಪಾಲ್ ನಾಯ್ಕ್ ಮಟ್ಟಾರು , ಪ್ರಸಾದ್ ಶೆಟ್ಟಿ, ಮೂಡು ಮಟ್ಟಾರು ದೈವಸ್ಥಾನ ಆಡಳಿತ ಕಮಿಟಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಗೌರವಾ ಧ್ಯಕ್ಷ ಶಂಕರ್ ಶೆಟ್ಟಿ ಉಪಸ್ಥಿತರಿದ್ದರು. ಕಮಿಟಿ ಕಾರ್ಯದರ್ಶಿ ಹರೀಶ್ ಪೂಜಾರಿ ಸ್ವಾಗತಿಸಿದರು. ಕೋಶಾಧಿಕಾರಿ ರವಿ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
