Updated News From Kaup

ಉಡುಪಿ : ಬಿಜೆಪಿ‌ ಜಿಲ್ಲಾ ಒಬಿಸಿ‌‌‌ ಮೋರ್ಚಾ - ವಿಶ್ವಕರ್ಮ‌, ನಾರಾಯಣಗುರು ಜಯಂತಿ ಆಚರಣೆ ;ಸಾಧಕರಿಗೆ ಸನ್ಮಾನ

Thumbnail
Posted On: 18 Sep 2022, 08:51 PM

ಉಡುಪಿ : ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಮತ್ತು ಬ್ರಹ್ಮಶ್ರೀ‌ ನಾರಾಯಣ ಗುರು ಜಯಂತಿ ಆಚರಣೆಯು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಅಧ್ಯಕ್ಷತೆಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಸಕ್ತ‌ ಸಾಲಿನ ಕರ್ನಾಟಕ ರಾಜ್ಯ ಸರ್ಕಾರದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಡಾ| ಅಣ್ಣಯ್ಯ ಕುಲಾಲ್, ಅತ್ಯುತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಂಜೀವ ದೇವಾಡಿಗ, ಕೊರಗ ಸಮುದಾಯದ ಗುರಿಕಾರ ಸುಂದರ ಕೊರಗ ಇವರನ್ನು ಸನ್ಮಾನಿಸಲಾಯಿತು. ಭಗವಾನ್‌ ವಿಶ್ವಕರ್ಮರ ಕುರಿತು‌ ಉಪನ್ಯಾಸವನ್ನು ಕಟಪಾಡಿ ಆನೆಗುಂದಿ ಸಂಸ್ಥಾನದ ಪವನ್ ಶರ್ಮ ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ಉಪನ್ಯಾಸವನ್ನು ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದಯಾನಂದ ಡಿ. ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಅಶೋಕ್ ಮೂರ್ತಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಜಿಲ್ಲಾ ಒಬಿಸಿ ಮೋರ್ಚಾದ ಉಸ್ತುವಾರಿ ರೇಷ್ಮಾ ಉದಯ ಶೆಟ್ಟಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಒಬಿಸಿ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು, ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಬಿಲ್ಲವ ಸಮಾಜ ಬಾಂಧವರು ಮತ್ತು ವಿಶ್ವಕರ್ಮ ಸಮಾಜ ಬಾಂಧವರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಲಾಲ್ ಕಡಿಯಾಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅರುಣ್ ಕುಮಾರ್ ಬಾಣ ವಂದಿಸಿದರು.

ಶಿರ್ವದ ಹದಗೆಟ್ಟ ರಸ್ತೆ ದುರಸ್ತಿಗೊಳಿಸಿದ ಬಂಟಕಲ್ಲು ನಾಗರಿಕ ಸೇವಾ ಸಮಿತಿ ; ಸಾರ್ವಜನಿಕರಿಂದ ಶ್ಲಾಘನೆ

Thumbnail
Posted On: 18 Sep 2022, 08:36 PM

ಶಿರ್ವ : ಇಲ್ಲಿನ ರಾಜ್ಯ ರಸ್ತೆಯು ಗಣಪತಿ ದೇವಸ್ಥಾನ ಮತ್ತು ಜುಮ್ಮಾ ಮಸೀದಿ ಬಳಿ ತೀವ್ರ ಹದಗೆಟ್ಟಿದ್ದು, ಶಿಕ್ಷಕ ಅಲ್ವಿನ್ ದಾಂತಿಯವರು ರಸ್ತೆಯ ಛಾಯಾಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಈ ಘಟನೆಯ ಬಳಿಕ ಎಚ್ಚೆತ್ತ ಸಾರ್ವಜನಿಕರು ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಭಾನುವಾರ ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ರಾಮರಾಯ ಪಾಟ್ಕರ್ ಮತ್ತು ತಂಡದ ಸದಸ್ಯರು ಗುಂಡಿಗಳಿಗೆ ಜಲ್ಲಿ ಕಾಂಕ್ರೀಟ್ ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇವರ ಸೇವಾಕಾರ್ಯಕ್ಕೆ ಶಿರ್ವ ಗ್ರಾಮಸ್ಥರು ಹಾಗೂ ವಾಹನ ಚಾಲಕರು ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನಂಜೆ : ಉಚಿತ ಹೊಸ ಆಯುಷ್ಮಾನ್ ಕಾರ್ಡ್ ನೋಂದಾವಣೆ ಶಿಬಿರ

Thumbnail
Posted On: 18 Sep 2022, 07:09 PM

ಇನ್ನಂಜೆ : ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಇನ್ನಂಜೆ ದಾಸ ಭವನದಲ್ಲಿ ಉಚಿತ ಹೊಸ ಆಯುಷ್ಮಾನ್ ಕಾರ್ಡ್ ನೋಂದಾವಣೆ ಶಿಬಿರವು ಮಾಲಿನಿ ಇನ್ನಂಜೆ ನೇತೃತ್ವದಲ್ಲಿ ಗ್ರಾಮ ಒನ್ ಇನ್ನಂಜೆ ಇವರ ಸಹಭಾಗಿತ್ವದಲ್ಲಿ ನಡೆಯಿತು. 180 ಶಿಬಿರಾರ್ಥಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಂಡರು. ದಿವೇಶ್ ಶೆಟ್ಟಿ ಇನ್ನಂಜೆ,ಪ್ರವೀಣ್ ಶೆಟ್ಟಿ ಪಾಂಗಾಳ,ಸುರೇಖಾ ಶೆಟ್ಟಿ ಪಾಂಗಾಳ, ರಾಘವೇಂದ್ರ ಆಚಾರ್ಯ ಇನ್ನಂಜೆ, ಸುನೀಲ್ ಸಾಲ್ಯಾನ್ ಕಲ್ಯಾಲು,ನಾಗೇಂದ್ರ ಭಟ್ ಕಲ್ಯಾಲು,ಸುಬ್ರಮಣ್ಯ ಭಟ್ ಕಲ್ಯಾಲು,ಶ್ರೀಕಾಂತ್ ಭಟ್ ಇನ್ನಂಜೆ,ರವಿ ಆಚಾರ್ಯ, ಪ್ರಕಾಶ್ ಮತ್ತಿತರರು ಸಹಕರಿಸಿದರು.

ಇನ್ನಂಜೆ : ರೋಟರಿ ಸಮುದಾಯ ದಳ, ಗ್ರಾಮ ಪಂಚಾಯತ್ ಜಂಟಿಯಾಗಿ ರಸ್ತೆ ದುರಸ್ತಿ ಕಾರ್ಯ

Thumbnail
Posted On: 18 Sep 2022, 06:54 PM

ಇನ್ನಂಜೆ : ರೋಟರಿ ಸಮುದಾಯ ದಳ ಇನ್ನಂಜೆ ಮತ್ತು ಇನ್ನಂಜೆ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಇನ್ನಂಜೆ ಶಂಕರಪುರ ರಸ್ತೆ ಮತ್ತು ಮಾರ್ಕೆಟ್ ರೋಡ್ ರಸ್ತೆಯಲ್ಲಿ ಮಳೆಯ ರಭಸದಿಂದ ಉಂಟಾಗಿರುವ ಹೊಂಡಗಳನ್ನು ಮುಚ್ಚಲಾಯಿತು. ಈ ರಸ್ತೆ ದುರಸ್ತಿ ಕಾರ್ಯದಲ್ಲಿ ರಾಜೇಶ್ ರಾವ್ ಪಾಂಗಾಳ, ಶ್ರೀನಿವಾಸ್ ತಂತ್ರಿ ಮಡುಂಬು, ಸಂಜಿತ್ ಶೆಟ್ಟಿ ಕಲ್ಯಾಲು, ಚಂದ್ರೇಶ್ ಇನ್ನಂಜೆ ಸಹಕರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಆಚಾರ್ಯ, ಸದಸ್ಯರುಗಳಾದ ಪುಷ್ಪ, ಅನಿತಾ ಮಾಥಾಯಸ್,ರೋಟರಿ ಸಮುದಾಯ ದಳ ಇನ್ನಂಜೆ ಅಧ್ಯಕ್ಷ ದಿವೇಶ್ ಶೆಟ್ಟಿ, ಪೂರ್ವ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಸಭಾಪತಿ ಮಾಲಿನಿ ಇನ್ನಂಜೆ, ಸದಸ್ಯರುಗಳಾದ ವಜ್ರೇಶ್ ಆಚಾರ್ಯ, ಸಂದೀಪ್ ಸುವರ್ಣ, ಜೇಸುದಾಸ್ ಸೋನ್ಸ್, ಸುನೀಲ್ ಸಾಲ್ಯಾನ್, ಬಿಲ್ಲವ ಸಂಘ ಇನ್ನಂಜೆ ಅಧ್ಯಕ್ಷ ಸದಾಶಿವ ಪೂಜಾರಿ, ಪಂಚಾಯತ್ ಸಿಬ್ಬಂದಿ ರೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

ಪಡುಬಿದ್ರಿ : ಯುವವಾಹಿನಿ ಘಟಕದ ಪದಗ್ರಹಣ

Thumbnail
Posted On: 18 Sep 2022, 05:51 PM

ಪಡುಬಿದ್ರಿ : ಯುವವಾಹಿನಿ ಸಂಸ್ಥೆ ಹಲವಾರು ಸಮಾಜಮುಖಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತಾ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿರುವುದು ಸಂತಸವಾಗಿದೆ. ಪಡುಬಿದ್ರಿ ಘಟಕದ ಮುಂದಿನ ಕಾರ್ಯಕ್ರಮಗಳು ಶುಭವಾಗಲಿ ಎಂದು ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ ಪೂಜಾರಿ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2022-23 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಮಾತನಾಡಿ, ಸಂಸ್ಥೆಯ ಪದವಿಯ ಕಾರ್ಯಾವಧಿ ಕೊನೆಯಾದಾಗ ಪದಾಧಿಕಾರಿಗಳು ಸಂತಸದಿಂದಿರದೆ ಹೊಸ ತಂಡಕ್ಕೆ ಬೆನ್ನೆಲುಬಾಗಿ ಮುಂದೆಯೂ ಸಹಕಾರ ನೀಡಿ ಹೊಸ ಕಾರ್ಯಯೋಜನೆ ನಿರ್ವಹಿಸಬೇಕು. ಹಳೆ ಬೇರು ಹೊಸ ಚಿಗುರು ಎಂಬ ಮಾತಿನಂತೆ ಪಡುಬಿದ್ರಿ ಯುವವಾಹಿನಿ ಘಟಕ ಕ್ರಿಯಾಶೀಲ ಘಟಕವಾಗಿದೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವುದರೊಂದಿಗೆ ಯುವವಾಹಿನಿಯ ಘಟಕಗಳಲ್ಲಿ ಪ್ರತಿಷ್ಟಿತವಾಗಿದೆ ಎಂದರು. ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ, ಮಾತನಾಡಿ ಯುವವಾಹಿನಿ ಶಿಸ್ತುಬದ್ಧ ವ್ಯವಸ್ಥೆ, ಸಮಯ ಪರಿಪಾಲನೆ ಸಂಸ್ಥೆಯ ಗರಿಮೆಯಾಗಿದೆ. ಸಮಾಜ ಚಿಂತನೆ ನಮ್ಮಲ್ಲಿರಲಿ. ಯುವವಾಹಿನಿಯ ನಿಯಮದಂತೆ ಒಂದು ವರ್ಷದ ಅಧಿಕಾರಾವಧಿಯಲ್ಲಿ ಸಾಧ್ಯವಾದಷ್ಟು ಕಾರ್ಯಕ್ರಮಗಳು ಜರಗಲಿ ಎಂದು ಶುಭ ಹಾರೈಸಿದರು. ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಶೈಕ್ಷಣಿಕ ಆರ್ಥಿಕ ಸಹಾಯ, ಕಲಿಕಾ ಪರಿಕರ ವಿತರಿಸಲಾಯಿತು. ಘಟಕಕ್ಕೆ ಸೇರ್ಪಡೆಗೊಂಡ ನೂತನ ಸದಸ್ಯರನ್ನು ಗೌರವಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಮತ್ತು ಘಟಕದ ಅಧ್ಯಕ್ಷರಾದ ಯಶೋದರನ್ನು ಸನ್ಮಾನಿಸಲಾಯಿತು. ಅಧಿಕಾರ ಹಸ್ತಾಂತರ : ಘಟಕದ ಅಧ್ಯಕ್ಷರಾದ ಯಶೋದ ನಿಯೋಜಿತ ಅಧ್ಯಕ್ಷರಾದ ಶಾಶ್ವತ್ ರವರಿಗೆ ಮತ್ತು ಘಟಕದ ಕಾರ್ಯದರ್ಶಿ ವಿಧಿತ್ ನಿಯೋಜಿತ ಕಾರ್ಯದರ್ಶಿ ಡಾ| ಐಶ್ವರ್ಯ ಸಿ ಅಂಚನ್ ರವರಿಗೆ ಅಧಿಕಾರ ಹಸ್ತಾಂತರಿಸಿದರು‌. ಸಾಹಿತ್ಯ ಸೌರಭದ ಅಂಗವಾಗಿ ನಡೆದ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಚಿತ್ರಾಕ್ಷಿ ಕೆ ಕೋಟ್ಯಾನ್, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಪಡುಬಿದ್ರಿ ಅಧ್ಯಕ್ಷರಾದ ಯಶೋದ ವಹಿಸಿ, ಸ್ವಾಗತಿಸಿದರು. ಮಾಜಿ ಅಧ್ಯಕ್ಷರಾದ ಸುಜಿತ್ ಕುಮಾರ್ ಪ್ರಸ್ತಾವನೆಗೈದರು. ಕಾರ್ಯದರ್ಶಿ ವಿಧಿತ್ ಕುಮಾರ್ ವರದಿ ವಾಚಿಸಿದರು. ಚಿತ್ರಾಕ್ಷಿ ಕೆ ಕೋಟ್ಯಾನ್ ನೂತನ ಪದಾಧಿಕಾರಿಗಳ ಪಟ್ಟಿ ವಾಚಿಸಿದರು. ಪ್ರಸಾದ್ ವೈ ಕೋಟ್ಯಾನ್ ಮತ್ತು ತೃಪ್ತಿ ಕಾರ್ಯಕ್ರಮ ನಿರೂಪಿಸಿದರು. ಡಾ| ಐಶ್ವರ್ಯ ಸಿ ಅಂಚನ್ ವಂದಿಸಿದರು.

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ಒಕ್ಕೂಟ - ಅಭಾ ಕಾಡ್೯ ನೋಂದಾವಣೆ ಕಾರ್ಯಕ್ರಮ

Thumbnail
Posted On: 18 Sep 2022, 04:52 PM

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ಒಕ್ಕೂಟ ಇದರ ವತಿಯಿಂದ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ ಹಾಗೂ ಅಭಾ ಕಾರ್ಡ್ ಸಂಯೋಜನೆಯೊಂದಿಗೆ ಉಚಿತ ಹೊಸ ಆಯುಷ್ಮನ್ ಕಾರ್ಡ್ ನೋಂದಾವಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಮಹಾದೇವಿ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಪು ಪುರಸಭೆಯ ಸದಸ್ಯರಾದ ಅನಿಲ್ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಾದ ಜಯಂತಿ, ಕಾಪು ಒಕ್ಕೂಟದ ಅಧ್ಯಕ್ಷರಾದ ರಮಾ ಎಸ್ ಶೆಟ್ಟಿ, ವಲಯದ ಮೇಲ್ವಿಚಾರಕರಾದ ಮಮತಾ, ಕಾಪು ಒಕ್ಕೂಟದ ಅಧ್ಯಕ್ಷರಾದ ಸುಲೋಚನಾ ಬಂಗೇರ, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರೇಮ ರಮೇಶ್ ರವರು ಸ್ವಾಗತಿಸಿದರು. ಉಷ ಉಮೇಶ್ ಕರ್ಕೆರ ವಂದಿಸಿದರು.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ 1.26 ಕೋಟಿ ರೂ. ಲಾಭ ; ಶೇ. 25 ಡಿವಿಡೆಂಡ್

Thumbnail
Posted On: 18 Sep 2022, 10:47 AM

ಪಡುಬಿದ್ರಿ : ಇಲ್ಲಿನ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.) 2021-22ನೇ ಸಾಲಿಗೆ ವಾರ್ಷಿಕ 1.26 ಕೋಟಿ ರೂ. ವ್ಯವಹಾರಿಕ ಲಾಭ ದಾಖಲಿಸಿದ್ದು, ಈ ಬಾರಿಯೂ ಸದಸ್ಯರಿಗೆ ಶೇ.25 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಶನಿವಾರ ಪಡುಬಿದ್ರಿ ಸಹಕಾರ ಸಂಗಮದ ವೈ ಲಕ್ಷ್ಮಣ್ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ತಿಳಿಸಿದರು. ಸಂಘದ ಸಾಲ ವಸೂಲಾತಿಯು ಶೇ. 96.02ರಷ್ಟು ಆಗಿದೆ. ಸಂಘವು ಶತಕೋಟಿ ಠೇವಣಿ ಸಂಗ್ರಹಿಸಿದ್ದು, ಮುಂದಿನ ವರ್ಷದಲ್ಲಿ ಪಲಿಮಾರು ಹಾಗೂ ಹೆಜಮಾಡಿ ಶಾಖೆ ಗಳ ನವೀಕರಣದೊಂದಿಗೆ ಕಂಪ್ಯೂಟರೀಕೃತ ಶಾಖೆಗಳನ್ನಾಗಿಸಿ ಡಿಜಿಟಲೀಕೃತ ವ್ಯವಹಾರಗಳಿಗೆ ಒತ್ತು ನೀಡಲಾಗುತ್ತದೆ. ಹೆಜಮಾಡಿ ಯಲ್ಲೇ 1 ಕೋಟಿ ವೆಚ್ಚದಲ್ಲಿ ಗೋಡೌನ್ ನಿರ್ಮಿಸಲಾಗುವುದು. ಪಡುಬಿದ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಧುನೀಕೃತ ಶವಾಗಾರಕ್ಕೆ 7.75 ಲಕ್ಷ ರೂ. ವೆಚ್ಚದಲ್ಲಿ 2 ಮೃತದೇಹಗಳನ್ನು ಇರಿಸಬಹುದಾದ ಶೀತಲೀಕರಣ ಯಂತ್ರವನ್ನು ಸಂಘ ನೀಡಲಿದೆ. ಪಡುಬಿದ್ರಿ ಸುತ್ತಮುತ್ತಲ ಸಾರ್ವಜನಿಕರ ಅನುಕೂಲಕ್ಕಾಗಿ ಮೃತ ದೇಹವನ್ನು ಕಾಪಿಡಲು ಶೀತಲೀಕೃತ ಯಂತ್ರವನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ. ಸಂಘದ ವ್ಯವಹಾರ ಹೆಚ್ಚಿದಾಗ ಗ್ರಾಹಕರ ಸಾಲ ವಸೂಲಿಗೂ, ಶಾಖೆಗಳನ್ನು ಸಂದರ್ಶಿಸಲು ಉಪಯೋಗವಾಗುವಂತೆ 15 ಲಕ್ಷ ರೂ. ವೆಚ್ಚದ ವಾಹನ ಖರೀದಿಸಲಾಗಿದೆ. ಉಡುಪಿ ಜಿಲ್ಲೆಯ ಸಹಕಾರಿ ಯೂನಿಯನ್ ಕಟ್ಟಡಕ್ಕೆ 10 ಲಕ್ಷ ರೂ. ದೇಣಿಗೆ ಸಹಕಾರಿ ಸಂಘದ ಮೂಲಕ ನೀಡಲಾಗುವುದು ಎಂದು ತಿಳಿಸಿದರು. ಸಂಘದ ಉಪಾಧ್ಯಕ್ಷ ಗುರುರಾಜ ಪೂಜಾರಿ, ನಿರ್ದೇಶಕರಾದ ರಸೂಲ್ ವೈ ಜಿ, ಗಿರೀಶ್ ಪಲಿಮಾರ್, ಶಿವರಾಮ ಎನ್ ಶೆಟ್ಟಿ, ವಾಸುದೇವ ದೇವಾಡಿಗ, ಯಶವಂತ ಪಿ ಬಿ, ರಾಜಾರಾಮ್ ರಾವ್, ಮಾಧವ ಆಚಾರ್ಯ, ಸ್ಟೇನಿ ಕ್ವಾಡ್ರಸ್, ಸುಚರಿತ ಎಲ್ ಅಮೀನ್, ಕುಸುಮ ಎಂ. ಕರ್ಕೇರ, ಕಾಂಚನ, ಬಾಲಕೃಷ್ಣ ರಾವ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ವೈ ಸುಧೀ‌ರ್ ಕುಮಾರ್‌ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್‌. ವರದಿ ಮಂಡಿಸಿದರು. ಉಪಾಧ್ಯಕ್ಷ ಗುರುರಾಜ ಪೂಜಾರಿ ವಂದಿಸಿದರು.

ಕಾಪು : ಬೀಚ್ ಸ್ವಚ್ಛತಾ ಅಭಿಯಾನ

Thumbnail
Posted On: 17 Sep 2022, 10:31 PM

ಕಾಪು : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಭಾರತೀಯ ಸ್ವಚ್ಛತಾ ಲೀಗ್ ದೇಸೀಕ್ರೂ ಸಂಘಟನೆ, ಜಿಪ್ಸಿಶನ್ ಸಂಸ್ಥೆಯಿಂದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಶನಿವಾರ ಬೆಳಗ್ಗೆ ಕಾಪು ಲೈಟ್ ಹೌಸ್ ಬೀಚಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಕಾಪು ಪುರಸಭಾ ಅಧಿಕಾರಿ ವೆಂಕಟೇಶ್ ನಾವಡ ಮಾತನಾಡಿ, ಪ್ರವಾಸೋದ್ಯಮ ಕ್ಷೇತ್ರವಾದ ಕಾಪು ವಿನಲ್ಲಿ ವಿವಿಧ ಸಂಘಟನೆಗಳ ಆಯೋಜನೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕೇಂದ್ರ ಸರಕಾರದ ಯೋಜನೆ ಇದಾಗಿದ್ದು, ಇದರಲ್ಲಿ ನಾವು ಸಹಭಾಗಿ ಆಗುತ್ತಿದ್ದೇವೆ ಎಂದರು. ಈ ಸಂದರ್ಭ ಕಾಪು ಪುರಸಭಾ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ ತೋರಿದ ಸೈಂಟ್ ಜೋನ್ಸ್ ಅಕಾಡೆಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆ

Thumbnail
Posted On: 17 Sep 2022, 10:20 PM

ಕಟಪಾಡಿ‌ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಉಡುಪಿ ವಲಯ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಉಡುಪಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2022-23 ಇವರ ಸಹಯೋಗದೊಂದಿಗೆ ಎಸ್ ವಿ ಎಸ್ ಶಾಲೆ ಕಟಪಾಡಿ ಇವರ ಆಶ್ರಯದಲ್ಲಿ ಅಚ್ಚಡ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಸೆಪ್ಟೆಂಬರ್ 9 ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ಸೈಂಟ್ ಜೋನ್ಸ್ ಅಕಾಡೆಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸುಮಾರು 25 ಮಂದಿ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಗಳಿಸಿರುತ್ತಾರೆ. ಶಾಲಾ ಸಂಚಾಲಕರಾದ ವಂ. ಗುರು ಫರ್ಡಿನಾಂಡ್ ಗೊನ್ಸಾಲ್ವಿಸ್, ಶಾಲಾ ಪ್ರಾಂಶುಪಾಲೆ ಪ್ರಿಯಾ ಕೆ ಡೆ'ಸಾ, ಶಾಲಾ ಸಂಯೋಜಕ ರಾದ ವಂ. ಗುರು ವಿಜಯ್ ಡಿಸೋಜ, ಶಿಕ್ಷಕ ವಿನಯ್ ಶೆಟ್ಟಿ, ಶಿಕ್ಷಕಿಯರಾದ ಅಸುಂತ ದಾಂತಿ, ಕೋಮಲಾಂಗಿ, ತನುಶ್ರೀ ಹಾಗೂ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಾದ ಸೋಹನ್ ( ಜಾನಪದ ಗೀತೆ), ನಿಖಿಲ್ (ಗಝಲ್), ಆಲ್ಡ್ರಿನ್ (ಹಿಂದಿ ಭಾಷಣ), ಶ್ರೀಶಾಂತ್ (ಚಿತ್ರ ಕಲೆ), ಅದಿತಿ ( ಚರ್ಚಾ ಸ್ಪರ್ಧೆ) ಹಾಗೂ ಮೆಲ್ರಿಯ (ಭಾವಗೀತೆ) ಹಾಜರಿದ್ದರು.

ರಿಕ್ಷಾ ಚಾಲಕ ಮಾಲಕರ ಸೌಹಾರ್ದ ಸಹಕಾರಿ (ನಿ.) ಉಡುಪಿ : ಮಹಾಸಭೆ

Thumbnail
Posted On: 17 Sep 2022, 10:12 PM

ಉಡುಪಿ : ರಿಕ್ಷಾ ಚಾಲಕ ಮಾಲಕರ ಸೌಹಾರ್ದ ಸಹಕಾರಿ (ನಿ.) ಉಡುಪಿ ಇದರ 2021-22 ರ ಸಾಲಿನ ಮೊದಲ ವರ್ಷದ ಮಹಾಸಭೆಯು ಸೆಪ್ಟೆಂಬರ್ 17 ರಂದು ಉಡುಪಿಯ ಅಜ್ಜರಕಾಡಿನ ಪುರಭವನದಲ್ಲಿ ನಡೆಯಿತು. ಈ ಮಹಾ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಕೆ.ರಘುಪತಿ. ಭಟ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಇದರ ನೂತನ ನಿರ್ದೇಶಕರಾದ ಎಸ್. ಕೆ.ಮಂಜುನಾಥ ರಿಕ್ಷಾ ಚಾಲಕರ ಮಾಲಕರ ಸೌಹಾರ್ದ ಭಾಗವಹಿಸಿದ್ದರು. ಸಹಕಾರಿ(ನಿ)ಯ ಅಧ್ಯಕ್ಷರಾದ ಸುರೇಶ್ ಅಮೀನ್ ಅಧ್ಯಕ್ಷತೆಯಲ್ಲಿ ನಡೆಯಿತು.2021-22ನೇ ಸಾಲಿನ ಅಂದಾಜು ಆಯವ್ಯಯ ಪಟ್ಟಿಯನ್ನು ಸಭೆಯಲ್ಲಿ ಮಂಜೂರು ಮಾಡಲಾಯಿತು. ಉಪಾಧ್ಯಕ್ಷರಾದ ಸಂತೋಷ್ ರಾವ್ ಕಾರ್ಕಳ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಕುಲಾಲ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಸೊಸೈಟಿಯ ಉಪಾಧ್ಯಕ್ಷ ಸಂತೋಷ್ ರಾವ್, ನಿರ್ದೇಶಕರುಗಳಾದ ಜಗದೀಶ ಕೋಟ್ಯಾನ್, ಗೋಪಾಲ ಕೃಷ್ಣ ಶೆಟ್ಟಿ, ನಾಗರಾಜ ಕಿಣಿ, ನಾರಾಯಣ ಬಿ.ಕೆ. ರವೀಂದ್ರ ನಾಯಕ್,ಪ್ರಭಾಕರ ಶೆಟ್ಟಿ, ಲೋಕೇಶ ರಾವ್,ಅಶೋಕ ಶೆಟ್ಟಿ, ಟಿ.ಗೋಪಾಲಕೃಷ್ಣ ಕಾಮತ್, ಹರೀಶ್ ಕೋಟ್ಯಾನ್,ಶ್ಯಾಮ,ಸುದೇಶ್ ನಾಯ್ಕ್ ಸಹಕರಿಸಿದರು.ಈ ಬಾರಿಯ ಮಹಾಸಭೆಯ ಶೇರುದಾರರು,ಗ್ರಾಹಕರು, ಪಿಗ್ಮಿ ಏಜೆಂಟರು ಮತ್ತಿತರರು ಉಪಸ್ಥಿತರಿದ್ದರು. ಸಭೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಕುಲಾಲ್ ಇವರ ಬೀಳ್ಕೊಡುಗೆ ಸಮಾರಂಭ ನಡೆಯಿತು. ರವೀಶ್ ಕುಮಾರ್ ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕಗೊಂಡರು. ಸ್ವಪ್ನ.ಎಸ್.ಅಮೀನ್ ನಿರೂಪಣೆ ಮಾಡಿದರು. ಅಭಿಜಿತ್ ನಾಯ್ಕ್ ವಂದಿಸಿದರು.