Updated News From Kaup

ಕಟಪಾಡಿ ಕೋಟೆ ಜಾಮಿಯಾ ಮಸೀದಿ : ನೂತನ ಆಡಳಿತ ಸಮಿತಿ ಅಧಿಕಾರ ಸ್ವೀಕಾರ

Posted On: 07-08-2022 06:09AM

ಕಟಪಾಡಿ : ಇಲ್ಲಿನ ಕೋಟೆ ಜಾಮಿಯಾ ಮಸೀದಿ ಇದರ ನೂತನ ಅಧ್ಯಕ್ಷ ಬಿ.ಎಂ. ಮೊಹಿದ್ದೀನ್ ಎ.ಆರ್. ಮತ್ತು ಆಡಳಿತ ಸಮಿತಿಯ ಅಧಿಕಾರ ಸ್ವೀಕಾರ ಸಮಾರಂಭ ಶುಕ್ರವಾರ ನಡೆಯಿತು ಕಟಪಾಡಿ ಮಸೀದಿಯನ್ನು ಮಾದರಿಯನ್ನಾಗಿಸಲಿ ಎಂದು ಬಹು| ಅಸ್ಸಯೈದ್ ಜಾಫರ್ ಸಾದಿಕ್ ತಂಗಳ್ ಕುಂಬೊಳ್ ಆಶೀರ್ವಚನ ಸಂದೇಶ ನೀಡಿದರು.

ಮಂಡೇಡಿ ಶ್ರೀದೇವಿ ಭಜನಾ ಮಂಡಳಿ : ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ; ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ

Posted On: 06-08-2022 10:22PM

ಕಾಪು : ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯಲ್ಲಿ ಸಾರ್ವಜನಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಆಗಸ್ಟ್ 8ರಂದು ಜರಗಿತು.

ಮುಂಡ್ಕೂರು‌ : ಕುಲಾಲ ಸಂಘದ ಮಹಿಳಾ ಘಟಕ ವತಿಯಿಂದ 15ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Posted On: 05-08-2022 11:19PM

ಮುಂಡ್ಕೂರು‌ : ಕುಲಾಲ ಸಂಘ (ರಿ.) ನಾನಿಲ್ತಾರ್ ಮುಲ್ಲಡ್ಕ ಮುಂಡ್ಕೂರು ಮಹಿಳಾ ಘಟಕ ವತಿಯಿಂದ 15ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಆಗಸ್ಟ್ 5ರಂದು ಕುಲಾಲ ಭವನದಲ್ಲಿ ನಡೆಯಿತು.

ಬಿಲ್ಲವರ ಸಹಾಯಕ ಸಂಘ ಕಾಪು : ವರಮಹಾಲಕ್ಷ್ಮಿ ಪೂಜೆ

Posted On: 05-08-2022 10:56PM

ಕಾಪು : ಇಲ್ಲಿನ ಬಿಲ್ಲವರ ಸಹಾಯಕ ಸಂಘದಲ್ಲಿ ವೈಭವದ ವರಮಹಾಲಕ್ಷ್ಮಿ ಪೂಜೆಯು ಕಟಪಾಡಿಯ ಚರಣ್ ಶಾಂತಿ ಪೌರೋಹಿತ್ಯದಲ್ಲಿ ಇಂದು ಜರಗಿತು.

ಬಂಟಕಲ್ಲು : ಶ್ರೀ ಗಾಯತ್ರಿ ಬಳಗದ ಸದಸ್ಯರಿಂದ ವರ ಮಹಾಲಕ್ಷ್ಮಿ ಪೂಜೆ ; ಯಕ್ಷಗಾನ ತಾಳ ಮದ್ದಳೆ

Posted On: 05-08-2022 10:41PM

ಬಂಟಕಲ್ಲು : ಇಲ್ಲಿನ ಶ್ರೀ ವಿಶ್ವಕರ್ಮ ಸಂಘ (ರಿ) ಇದರ ಆಶ್ರಯದಲ್ಲಿ ಶ್ರೀ ಗಾಯತ್ರಿ ಬಳಗದ ಸದಸ್ಯರಿಂದ ವರ ಮಹಾಲಕ್ಷ್ಮಿ ಪೂಜೆ ಬಂಟಕಲ್ಲು ಶ್ರೀ ವಿಶ್ವಕರ್ಮ ಸಂಘದಲ್ಲಿ ಜರಗಿತು.

ಪಡು ಕುತ್ಯಾರು : ಶ್ರೀ ದುರ್ಗಾ ಮಂದಿರದಲ್ಲಿ ವರಮಹಾಲಕ್ಷ್ಮಿ ಪೂಜೆ

Posted On: 05-08-2022 09:19PM

ಕಾಪು : ಇಲ್ಲಿನ ಪಡು ಕುತ್ಯಾರು,ಶ್ರೀ ದುರ್ಗಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ಪಡುಕುತ್ಯಾರು ಶ್ರೀಮದ್ ಆನೆಗುಂದಿ ಸಂಸ್ಥಾನದ ಶಿಷ್ಯವೃಂದದವರ ಪೌರೋಹಿತ್ಯದಲ್ಲಿ ಇಂದು ಜರಗಿತು.

ಕಾಪು : ಕಾಂಗ್ರೆಸ್ ಪಕ್ಷದಿಂದ ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸದ ಅಂಗವಾಗಿ ಕಾಲ್ನಡಿಗೆ ಜಾಥಾ

Posted On: 05-08-2022 09:09PM

ಕಾಪು : ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವದ ಸಂಭ್ರಮಾಚರಣೆಯನ್ನು ವೈಭವಪೂರ್ಣವಾಗಿ ಆಚರಿಸುವ ಸಲುವಾಗಿ, ಸ್ವಾತಂತ್ರ್ಯ ಸಂಗ್ರಾಮದ ವೀರ-ಯೋಧರ ತ್ಯಾಗ, ಬಲಿದಾನ ಮತ್ತು ಶಾಂತಿ, ಸಾಮರಸ್ಯ ಹಾಗೂ ದೇಶಪ್ರೇಮದ ಸಂದೇಶವನ್ನು ಸಾರುವ ನಿಟ್ಟಿನಲ್ಲಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ದೇಶದಾದ್ಯಂತ ಕಾಲ್ನಡಿಗೆ-ಜಾಥಾ ಹಮ್ಮಿಕೊಂಡಿದ್ದು ಈ‌ ನಿಟ್ಟಿನಲ್ಲಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ಕಟಪಾಡಿ ಮಟ್ಟುನಿಂದ ಪ್ರಾರಂಭಗೊಂಡು, ಕಟಪಾಡಿ -ಸುಭಾಸ್ ನಗರ/ಕುರ್ಕಾಲು - ಶಂಕರಪುರ - ಬಂಟಕಲ್ಲು - ಪಾಂಬೂರು - ಪಂಜಿಮಾರ್ ಮೂಲಕ ಸಾಗಿ, ಶಿರ್ವ ಪೇಟೆಯಲ್ಲಿ ಸಮಾಪಣೆಗೊಂಡಿತು.

ವರಮಹಾಲಕ್ಷ್ಮಿ ವ್ರತ : "ಸೌಭಾಗ್ಯ"ದ ಅಧಿದೇವತೆಯ ಆರಾಧನೆ

Posted On: 04-08-2022 08:52PM

ಲಕ್ಷ್ಮೀ ಸಮುದ್ರ ಮಥನದಲ್ಲಿ ಹುಟ್ಟಿದಳು. ನಾರಾಯಣನನ್ನು ವರಿಸಿ ತಾನು ಮಹಾಲಕ್ಷ್ಮೀ ಯಾದಳು. ನಾರಾಯಣನು ಲಕ್ಷ್ಮೀನಾರಾಯಣನಾದ, ಶ್ರೀಮನ್ನಾರಾಯಣನಾದ. ಸ್ಥಿತಿಕರ್ತನಾಗಿ-ಪಾಲನಾಧಿಕಾರಿಯಾಗಿದ್ದ ನಾರಾಯಣನು ಸಂಪತ್ತಿನ ಅಂದರೆ ಭಾಗ್ಯದ ಅಧಿದೇವತೆಯಾದ ಲಕ್ಷ್ಮೀಗೆ ವಲ್ಲಭನಾಗಿ ಸೌಭಾಗ್ಯವಂತನಾದ, ಭಕ್ತರ ಇಷ್ಟಾರ್ಥ ಅನುಗ್ರಹಿಸಲು ಸರ್ವಶಕ್ತನಾದ. ಶ್ರೀಮನ್ನಾರಾಯಣನಿಂದ ಲಕ್ಷ್ಮೀ ಬಹುಮಾನ್ಯಳಾದಳು. ಶ್ರೀಮನ್ನಾರಾಯಣ ಆಕೆಯನ್ನು ಹೃದಯದಲ್ಲೆ ಧರಿಸಿಕೊಂಡ. ಹೀಗೆ ಭಾಗ್ಯವತಿಯಾದ ಲಕ್ಷ್ಮೀಯಿಂದ ಸಮೃದ್ಧವಾದ ಸ್ಥಿರಸಂಪತ್ತನ್ನು ಪಡೆಯಲು, ಸರ್ವ ಭೋಗಭಾಗ್ಯದ ಸುಖವನ್ನು ಪಡೆಯಲು ಆಕೆಯನ್ನು ಆರಾಧಿಸುವ ಪರ್ವದಿನವು ಶ್ರಾವಣಮಾಸದ ಶುದ್ಧ ಪಕ್ಷದ ಎರಡನೇ ಶುಕ್ರವಾರ ಒದಗಿಬರುತ್ತದೆ . ಆದಿನದಂದು ಲಕ್ಷ್ಮೀಯು ವರಗಳನ್ನು ಕೊಡುವವಳು ಅಥವಾ ಅನುಗ್ರಹಿಸುವವಳು ಎಂಬ ಅನುಸಂಧಾನದೊಂದಿಗೆ ವರಮಹಾಲಕ್ಷ್ಮೀಯನ್ನಾಗಿ ಪರಿಕಲ್ಪಸಿಕೊಂಡು ಆರಾಧಿಸುವುದು. ಕಟ್ಟು, ಕಟ್ಟಳೆ, ನಿಯಮ, ವಿಧಿಗಳಿಗೆ ಬದ್ಧರಾಗಿ ನೋಂಪಿಯಂತೆ, ಧಾರ್ಮಿಕ ಪ್ರತಿಜ್ಞೆಯೊಂದಿಗೆ ಶ್ರದ್ಧೆಯಿಂದ ಪೂಜಿಸುವುದು ಆಗ ನಿರ್ದಿಷ್ಟ ವಿಧಿವಿಧಾನದಂತೆ ನೆರವೇರಿಸುವ ಪೂಜೆ ವ್ರತವಾಗುತ್ತದೆ. ಅದೇ : "ವರಮಹಾಲಕ್ಷ್ಮೀವ್ರತ".

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ

Posted On: 03-08-2022 09:48PM

ಶಿರ್ವ : ಮಂಗಳೂರಿನ ಪ್ರತಿಷ್ಠಿತ ಗ್ಲೋಟಚ್ ಟೆಕ್ನಾಲಜೀಸ್ (ದಿಯಾ ಸಿಸ್ಟಮ್ ಸಂಸ್ಥೆ)ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವೂ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್, ಸ್ಟಾಟಿಸ್ಟಿಕ್ಸ್, ಎಲೆಕ್ಟ್ರಾನಿಕ್ಸ್), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ( ಸಿ.ಎಸ್),ಎಂಎಸ್ಸಿ, ಎಂಸಿಎ, ಬಿಇ,ಬಿಟೆಕ್ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ,ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶ ವತಿಯಿಂದ ಆಗಸ್ಟ್ 03ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು.

ದಾಂಪತ್ಯದಲ್ಲಿ ಜೊತೆಯಾಗಿ ಸಾವಿನಲ್ಲೂ ಜೊತೆಯಾದ ದಂಪತಿ

Posted On: 03-08-2022 07:43PM

ಕಾಪು‌ : ಮಾನವ ಜೀವನದಲ್ಲಿ ಸಾವು ನಿಶ್ಚಿತ. ಆದರೆ ತಮ್ಮ ಪ್ರೀತಿ ಪಾತ್ರರ ಜೊತೆಗೆ ಸಾವು ವಿರಳ. ಅಂತಹ ಘಟನೆ ಬೆಳಪುವಿನಲ್ಲಿ ನಡೆದಿದೆ.