Updated News From Kaup

ಬಾಸ್ಕೆಟ್ ಬಾಲ್ ಪಂದ್ಯಾಟ : ಶಂಕರಪುರ ಸೈಂಟ್ ಜೋನ್ಸ್ ಅಕಾಡೆಮಿ ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರು ವಿಭಾಗಮಟ್ಟಕ್ಕೆ ಆಯ್ಕೆ

Thumbnail
Posted On: 14 Sep 2022, 08:36 PM

ಕಾಪು : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ, ಇವರ ಸಹಯೋಗದಲ್ಲಿ ಆಯೋಜಿಸಿದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಶಂಕರಪುರ ಸೈಂಟ್ ಜೋನ್ಸ್ ಅಕಾಡೆಮಿ ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತ ತಂಡದೊಂದಿಗೆ ಶಾಲಾ ಸಂಚಾಲಕರಾದ ವಂದನೀಯ ಫಾದರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಮುಖ್ಯೋಪಾದ್ಯಾಯಿನಿ ಸಿಸ್ಟರ್ ಸರಿತಾ ಡಿಸೋಜಾ, ದೈಹಿಕ ಶಿಕ್ಷಕರಾದ ಸದಾಶಿವ ಆಚಾರ್ಯ ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್ ಬಂಟಕಲ್ಲು ಬಿಸಿರೋಡ್ : ಶಿಕ್ಷಕರ ದಿನಾಚರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Thumbnail
Posted On: 14 Sep 2022, 09:15 AM

ಬಂಟಕಲ್ಲು : ಲಯನ್ಸ್ ಕ್ಲಬ್ ಬಂಟಕಲ್ಲು ಬಿಸಿರೋಡ್ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಪಾಂಬೂರು ಚರ್ಚ್ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ ವಿಲ್ಫ್ರೆಡ್ ಪಿಂಟೋ ವಹಿಸಿದ್ದರು . ಮುಖ್ಯ ಅತಿಥಿಗಳಾಗಿ ಫಸ್ಟ್ ವೈಸ್ ಡಿಸ್ಟ್ರಿಕ್ಟ್ ಗವರ್ನರ್ ಎಮ್ ಜೆ ಎಫ್ ಲ.ಡಾ. ನೇರಿ ಕರ್ನೇಲಿಯೊ ಹಾಗೂ ಜಿಇಟಿ ಎಮ್ ಜೆ ಎಫ್ ಲ. ರಾಜೀವ್ ಕೋಟ್ಯಾನ್ ರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಂಟಕಲ್ಲು , ಪಾಂಬೂರು , ಹೇರೂರು ಹಾಗೂ ಪಡುಬೆಳ್ಳೆ ಆಸುಪಾಸಿನ ಸುಮಾರು 8 ಶಾಲೆಯ ಎಂಬತ್ತು ಶಿಕ್ಷಕರನ್ನು ಹಾಗೂ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬಂಟಕಲ್ಲು ಆಸುಪಾಸಿನ ಇಪ್ಪತ್ತು ಶಿಕ್ಷಕರನ್ನು ಸನ್ಮಾನಿಸಲಾಯಿತು. ಸರಕಾರಿ ಪ್ರಾಥಮಿಕ ಶಾಲೆ ರಾಜೀವ್ ನಗರ ಉಡುಪಿ ಇದರ ಹಿರಿಯ ಶಿಕ್ಷಕ ಬಂಟಕಲ್ಲು ಸತ್ಯ ಸಾಯಿ ಪ್ರಸಾದ್ ಅವರು ಅತ್ಯುತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪಡೆದಿದ್ದು ಅವರನ್ನು ಲಯನ್ಸ್ ಕ್ಲಬ್ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ವಿನ್ಸೆಂಟ್ ಆಳ್ವರವರು ಒಬ್ಬ ಉತ್ತಮ ಶಿಕ್ಷಕನ ಜವಾಬ್ದಾರಿ ಮತ್ತು ನಾವು ನಮ್ಮನ್ನು ಕೇಳಬೇಕು ಶಿಕ್ಷಕ ವೃತ್ತಿಗೆ ತಾನು ಎಷ್ಟು ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆ ,ವಿದ್ಯಾರ್ಥಿಗಳ ಪ್ರಗತಿಯಲ್ಲಿ ಹೆತ್ತವರ ಮತ್ತು ಶಿಕ್ಷಕರ ಪಾತ್ರ ಬಗ್ಗೆ ಮಾತನಾಡಿದರು. 2021-22 ಶೈಕ್ಷಣಿಕ ವರ್ಷದಲ್ಲಿ ಅತ್ಯುತ್ತಮ ಸಾಧನೆಗೈದ ಸುಮಾರು 17 ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು . ಕಾರ್ಯಕ್ರಮವನ್ನು ಲ. ಅನಿತ ಡಿಸಿಲ್ವಾ ಮತ್ತು ಲ. ವಿಜಯ್ ಧೀರಜ್ ನಡೆಸಿಕೊಟ್ಟರು. ತನಿಷ್ಕಾ ಗೋಲ್ಡ್ & ಡೈಮೆಂಡ್ ಜ್ಯುವೆಲರಿ ಉಡುಪಿ ಕಾರ್ಯಕ್ರಮದ ಪ್ರಾಯೋಜಕತ್ವವಹಿಸಿದ್ದರು. ಲಯನ್ಸ್ ಅಧ್ಯಕ್ಷ ಪ್ರಾಸ್ತಾವಿಕವಾಗಿ ಮಾತನಾಡಿ ನೆರೆದಿರುವ ಎಲ್ಲಾ ಅತಿಥಿ ಹಾಗೂ ಶಿಕ್ಷಕ ವೃಂದ ಶಿಕ್ಷಕರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಲ. ಉಮೇಶ್ ಕುಲಾಲ್ ವಂದಿಸಿದರು.

ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವಸಂಗಮ ಮತ್ತು ಮಹಿಳಾ ಬಳಗದ ಮಹಾಸಭೆ

Thumbnail
Posted On: 13 Sep 2022, 10:35 PM

ಶಿರ್ವ : ತಮ್ಮ ಹೆಸರು ಶಾಶ್ವತವಾಗಿ ನಿಲ್ಲಬೇಕಾದರೆ ಇಂತಹ ಸಂಸ್ಥೆಯ ಪ್ರತಿನಿಧಿ ಆಗಬೇಕು ಮತ್ತು ನಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಬೇಕಿದ್ದರೆ ಅವರನ್ನು ಸಂಸ್ಥೆಗಳಿಗೆ ಸೇರಿಸಬೇಕು ಎಂದು ಬಂಟಕಲ್ಲು ಶ್ರೀ ವಿಶ್ವಕರ್ಮ ಯುವಕ ಸೇವಾದಳದ ಅಧ್ಯಕ್ಷರಾದ ರಾಜೇಶ್ ಆಚಾರ್ಯ ಹೇಳಿದರು. ಅವರು ಶ್ರೀ ವಿಶ್ವಬ್ರಾಹ್ಮಣ ಯುವಸಂಗಮ (ರಿ.) ಮತ್ತು ಮಹಿಳಾ ಬಳಗ ಶಿರ್ವ ಇದರ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಶಿರ್ವ ಎಸ್. ಕೆ. ಜಿ. ಬ್ಯಾಂಕ್ ನ ಪ್ರಬಂಧಕರಾದ ಕಸ್ತೂರಿ ದೇವರಾಜ್ ಆಚಾರ್ಯರು ದಶಮಾನೋತ್ಸವದ ಮೊದಲ ಕಾರ್ಯಕ್ರಮ ಗೋವಿಗಾಗಿ ಮೇವು ಲಾಂಛನ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಸೃಜನ್ ಆಚಾರ್ಯ ಇವರನ್ನು ಅಭಿನಂದಿಸಲಾಯಿತು. ಅಧ್ಯಕ್ಷ ಉಮೇಶ್ ಆಚಾರ್ಯ ಅತಿಥಿಗಳಿಗೆ ಸ್ಮರಣಿಕೆ ನೀಡಿ ಎಲ್ಲರೂ ಒಮ್ಮನಸ್ಸಿನಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ದಶಮಾನೋತ್ಸವ ಯಶಸ್ವಿಗೊಳಿಸಬೇಕೆಂದು ಎಲ್ಲರ ಸಹಕಾರ ಕೋರಿದರು. ಕಾರ್ಯದರ್ಶಿ ಪ್ರೀತಿ ಉಮೇಶ್ ವರದಿ ವಾಚಿಸಿದರು. ಶೋಭಾ ಶಂಕರ್ ಪರಿಚಯಿಸಿದರು. ಕೋಶಾಧಿಕಾರಿ ಪ್ರಶಾಂತ್ ಆಚಾರ್ಯ ಲೆಕ್ಕಪತ್ರ ಮಂಡಿಸಿ ದಶಮಾನೋತ್ಸವ ಕಾರ್ಯಕ್ರಮದ ಸ್ಥೂಲ ಪರಿಚಯ ನೀಡಿದರು. ಗೌರವಾಧ್ಯಕ್ಷ ಸುರೇಶ ಆಚಾರ್ಯ, ಮಹಿಳಾ ಬಳಗ ದ ಅಧ್ಯಕ್ಷೆ ಸುಮತಿ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶರ್ಮಿಳಾ ಆಚಾರ್ಯ ಪ್ರಾರ್ಥಿಸಿದರು. ಮಹಿಳಾ ಬಳಗದ ಉಪಾಧ್ಯಕ್ಷೆ ಮಂಜುಳಾ ಉಮೇಶ್ ಸ್ವಾಗತಿಸಿದರು. ಮಾಧವ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಪ್ರೀತಮ್ ಆಚಾರ್ಯ ವಂದಿಸಿದರು.

ರೋಟರಿ ಶಂಕರಪುರ : ಶಿಕ್ಷಕರ ದಿನಾಚರಣೆ

Thumbnail
Posted On: 13 Sep 2022, 10:18 PM

ಕಾಪು : ರೋಟರಿ ಶಂಕರಪುರ ವತಿಯಿಂದ ಸೆಪ್ಟೆಂಬರ್ 12ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರುಗಳಾದ ರಘುರಾಮ್ ಕೋಟ್ಯಾನ್ ಸುಭಾಸ್ ನಗರ, (ಮುಖ್ಯೋಪಾಧ್ಯಾಯರು ಆದಿಉಡುಪಿ ಪ್ರೌಢಶಾಲೆ ಆದಿ ಉಡುಪಿ )ಹಾಗೂ ರಾಚೆಲ್ ಐಡಾ ಮರಿಯಾ ಡಿಮೆಲ್ಲೊ ( ನಿವೃತ್ತ ಶಿಕ್ಷಕಿ ಪ್ರಾಥಮಿಕ ಶಾಲೆ ಮುಳೂರು) ಇವರುಗಳನ್ನು ಸನ್ಮಾನಿಸಲಾಯಿತು. ರೋಟರಿ ಶಂಕರಪುರದ ಅಧ್ಯಕ್ಷರಾದ ರೊ.ಗ್ಲಾಡ್ಸನ್ ಕುಂದರ್ ರವರು ಸ್ವಾಗತಿಸಿದರು. ರೊ. ನಂದನ್ ಕುಮಾರ್ ರವರು ರೋಟರಿ ಪ್ರಾರ್ಥನೆಯನ್ನು ಮಾಡಿದರು. ವೃತ್ತಿ ಸೇವಾ ನಿರ್ದೇಶಕರಾದ ರೊ. ವೆಲೇರಿಯನ್ ನೊರೂಂಹ್ನ, ಕಾರ್ಯದರ್ಶಿ ರೊ. ಸಿಲ್ವಿಯ ಕಸ್ಟಲೀನೋ, ಜಾರ್ಜ್ ಡಿಸಿಲ್ವ, ಅಂತೋನಿ ಡೇಸಾ, ವಿಕ್ಟರ್ ಮಾರ್ಟಿಸ್,ಪೌಲ್ ಕ್ವಾಡ್ರಸ್ ರೋಟರಿ ಸದಸ್ಯರು ಉಪಸಿತರಿದ್ದರು.

ಬಂಟಕಲ್ಲು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ - ಸಾಮೂಹಿಕ ಗಣ ಹೋಮ ಪೂಜೆ ಸಂಪನ್ನ

Thumbnail
Posted On: 13 Sep 2022, 09:55 PM

ಬಂಟಕಲ್ಲು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಂಟಕಲ್ಲು ಇವರ ಆಶ್ರಯದಲ್ಲಿ ಸಂಕಷ್ಟ ಹರ ಚತುರ್ಥಿಯ ಪ್ರಯುಕ್ತ ಪ್ರಥಮ ಬಾರಿಗೆ ಬಂಟಕಲ್ಲು ಸಾರ್ವಜನಿಕ ಶ್ರೀ ಗಣೇಶೋತ್ಸವ ವೇದಿಕೆಯಲ್ಲಿ ಸಾಮೂಹಿಕ ಗಣ ಹೋಮ ಪೂಜೆ ಸಂಪನ್ನಗೊಂಡಿತು. ಹೇರೂರು ಶ್ರೀ ಗುರು ರಾಘವೇಂದ್ರ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮುಲ್ಕಾ ಡಿ ಪಂಜಿಮಾರು ನಾಗರಾಜ್ ಭಟ್ ರವರಿಂದ ಪೂಜಾ ವಿಧಿ ವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಮಾಧವ ಕಾಮತ್, ಗೌರವಾಧ್ಯಕ್ಷರಾದ ಶಂಕರ ನಾಯಕ್, ಮಾಜಿ ಗೌರವ ಅಧ್ಯಕ್ಷರಾದ ಶೇಖರ ಪೂಜಾರಿ, ಕೃಷ್ಣ ಮೂಲ್ಯ, ಉದಯ ದೇವಾಡಿಗ, ವಿಜ್ಞೆಶ್ ಶೆಟ್ಟಿ, ನಿತಿನ್ ರಾವ್, ರವಿ ಆಚಾರ್ಯ, ಉದಯ ರಾವ್, ಕಾರ್ಯದರ್ಶಿ ದಿನೇಶ್ ದೇವಾಡಿಗ ಹೇರೂರು, ಭಜನಾ ಮಂಡಳಿಯ ಮಾಜಿ ಅಧ್ಯಕ್ಷರಾದ ಶಂಕರ್ ದೇವಾಡಿಗ, ಮಹಿಳಾ ಭಜನಾ ಮಂಡಳಿ ಅಧ್ಯಕ್ಷರಾದ ಶಶಿಕಲಾ, ಕಾರ್ಯದರ್ಶಿ ಪವಿತ್ರ ರಾವ್ ಮುಂತಾದವರು ಉಪಸ್ಥಿತರಿದ್ದರು.

ರೋಟರಿ ಸಮುದಾಯ ದಳ ಇನ್ನಂಜೆ - ಪದಪ್ರದಾನ

Thumbnail
Posted On: 12 Sep 2022, 11:16 PM

ಇನ್ನಂಜೆ : ರೋಟರಿ ಸಮುದಾಯ ದಳ ಇನ್ನಂಜೆ ಮಾತೃಸಂಸ್ಥೆ ರೋಟರಿ ಕ್ಲಬ್ ಶಂಕರಪುರ (ವಲಯ - 5 ರೋಟರಿ ಜಿಲ್ಲೆ 3182) ಇದರ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಸೆಪ್ಟೆಂಬರ್ 11ರಂದು ಇನ್ನಂಜೆಯ ದಾಸ ಭವನದಲ್ಲಿ ಜರಗಿತು. ರೋಟರಿ ಕ್ಲಬ್, ಶಂಕರಪುರ ಅಧ್ಯಕ್ಷರಾದ ರೋ.ಗ್ಲ್ಯಾಡ್ಸನ್ ಕುಂದರ್ ಪದಪ್ರದಾನ ಮಾಡಿದರು. ನಿರ್ಗಮನ ಅಧ್ಯಕ್ಷರಾದ ಆರ್ ಸಿ‌ ಸಿ‌ ಪ್ರಶಾಂತ್ ಶೆಟ್ಟಿ ನೂತನ ಅಧ್ಯಕ್ಷರಾದ ಆರ್ ಸಿ‌ ಸಿ‌ ದಿವೇಶ್ ಶೆಟ್ಟಿಯವರಿಗೆ ಮತ್ತು ನಿರ್ಗಮನ ಕಾರ್ಯದರ್ಶಿ ಆರ್ ಸಿ‌ ಸಿ‌. ಮನೋಹರ್ ಕಲ್ಲುಗುಡ್ಡೆ ನೂತನ ಕಾರ್ಯದರ್ಶಿ ಆರ್ ಸಿ‌ ಸಿ‌ ವಿಕ್ಕಿ ಪೂಜಾರಿಯವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಇದೇ ಸಂದರ್ಭ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನಟರಾಜ ಉಪಾಧ್ಯಾಯರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ‌ ಇನ್ನಂಜೆ ಸಿ.ಎ. ಬ್ಯಾಂಕ್‌ ಅಧ್ಯಕ್ಷರಾದ ರಾಜೇಶ್ ರಾವ್‌, ಝೋನಲ್ ಕೋ-ಆರ್ಡಿನೇಟರ್ ರೋನ್ - 5 ರೋ.ಗುರುರಾಜ್ ಭಟ್, ರೋಟರಿ ಶಂಕರಪುರ ಪೂರ್ವಾಧ್ಯಕ್ಷರಾದ ರೋ.ವಿಕ್ಟರ್ ಮಾರ್ಟಿಸ್, ರೋಟರಿ ಶಂಕರಪುರ ಪೂರ್ವ ಕಾರ್ಯದರ್ಶಿ ರೋ.ಜೆರಾಮ್ ರೊಡ್ರಿಗೆಸ್, ರೋಟರಿ ಶಂಕರಪುರ ಕಾರ್ಯದರ್ಶಿ ರೋ.ಸಿಲ್ವಿಯಾ ಕ್ಯಾಸ್ಥಲಿನೋ , ಇನ್ನಂಜೆ ಆರ್ ಸಿ‌ ಸಿ ಸಭಾಪತಿ ರೋ.ಮಾಲಿನಿ ಶೆಟ್ಟಿ, ರೋ. ನವೀನ್ ಅಮೀನ್ ಶಂಕರಪುರ ಉಪಸ್ಥಿತರಿದ್ದರು. ಆರ್ ಸಿ‌ ಸಿ‌. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ನಿರ್ಗಮನ ಕಾರ್ಯದರ್ಶಿ ಆರ್ ಸಿ‌ ಸಿ‌. ಮನೋಹರ್ ವರದಿ ವಾಚಿಸಿದರು. ರೋ.ಚಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ಆರ್ ಸಿ‌ ಸಿ‌. ವಿಕ್ಕಿ ಪೂಜಾರಿ ವಂದಿಸಿದರು.

ಬಿಲ್ಲವ ಸಮಾಜ ಸೇವಾ ಸಂಘ ಮಲ್ಪೆ - ಬ್ರಹ್ಮಶ್ರೀ ನಾರಾಯಣಗುರು ಜಯಂತಿ ; ಪ್ರತಿಭಾ ಪುರಸ್ಕಾರ ; ಸನ್ಮಾನ

Thumbnail
Posted On: 12 Sep 2022, 09:19 PM

ಉಡುಪಿ : ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜಯಂತಿಯ ಅಂಗವಾಗಿ ಸೆಪ್ಟೆಂಬರ್ 10ರಂದು ಮಲ್ಪೆ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಬೆಳಗ್ಗೆ ಧಾರ್ಮಿಕ ಪೂಜಾ ವಿಧಿ - ವಿಧಾನಗಳು, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ತಾವೂ ಕೂಡ ಇಂತಹ ವೇದಿಕೆಯಲ್ಲಿ ಸನ್ಮಾನಗೊಂಡು ಹತ್ತಾರು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸಹಾಯ ಮಾಡುವಂತಹ ದಿನಗಳು ತಮಗೆ ಒದಗಿಬರಲಿ ಎಂದು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಜತ್ತನ್ ರವರು ಶುಭ ಹಾರೈಸಿದರು. ಶಾಲಾ ಅಧ್ಯಕ್ಷರಾದ ರಘುರಾಮ್ ಸುವರ್ಣ ರವರು ದಿಕ್ಸೂಚಿ ಭಾಷಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗುರ್ಮೆ ಫೌ೦ಡೇಷನ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಪುರಸ್ಕರಿಸಿ, ಮಾತನಾಡಿ ವಿದ್ಯೆಯಿಂದ ಸ್ವತಂತ್ರರಾಗಿರಿ ಎಂಬ ಗುರುಗಳ ಸಂದೇಶದನ್ವಯ ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘವು ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ವಿದ್ಯಾ ದಾನ ಮಾಡುವ ಮೂಲಕ ಅವರ ಸಂದೇಶವನ್ನು ಪರಿಪೂರ್ಣಪಡಿಸುವಲ್ಲಿ ಸಫಲವಾಗಿದೆ ಎಂದರು. 2021 - 22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 90% ಕ್ಕಿಂತ ಅಧಿಕ ಅಂಕ ಪಡೆದ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಅಂತಿಮ ಪದವಿ ಪರೀಕ್ಷೆಯಲ್ಲಿ 80% ಕ್ಕಿಂತ ಅಧಿಕ ಅಂಕ ಪಡೆದ ಕೊಡವೂರು ಗ್ರಾಮಕ್ಕೆ ಒಳಪಟ್ಟ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ನಾರಾಯಣಗುರು ಜಯಂತಿ ಪ್ರಯುಕ್ತ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಬಿಲ್ಲವ ಮಹಿಳಾ ಘಟಕದ ಸದಸ್ಯರಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಲ್ಪೆ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯು 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಾಲೆಯು 100% ಫಲಿತಾಂಶ ಪಡೆದ ಬಗ್ಗೆ ಸಂಘದ ವತಿಯಿಂದ ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕುಮಾರ್ ಮತ್ತು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಡಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬಿಲ್ಲವ ಮಹಿಳಾ ಘಟಕ ಹಾಗೂ ನಾರಾಯಣಗುರು ಸೇವಾದಳದ ಸದಸ್ಯರು ವಿವಿಧ ವಿನೋದವಳಿಗಳನ್ನು ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ದಿವಾಕರ್ ಸನಿಲ್, ಕಾನಗುಡ್ಡೆ ಮಹಾಲಿಂಗೇಶ್ವರ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಗೋಪಾಲ್ ಸಿ. ಬಂಗೇರ, ಜಯದುರ್ಗಾ ಪರಮೇಶ್ವರಿ ದೇವಸ್ಥಾನ ಕನ್ನರ್ಪಾಡಿ ಇದರ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ಕರ್ಕೇರ ಇಂಜಿನಿಯರಿಂಗ್ ವರ್ಕ್ಸ್ ಕೊಪ್ಪಲ್ ತೋಟ ಇದರ ಮಾಲಕರಾದ ಪ್ರಕಾಶ್ ಕರ್ಕೇರ, ಸಂಘದ ಉಪಾಧ್ಯಕ್ಷರಾದ ಲೋಕನಾಥ್ ಕರ್ಕೇರ, ಕೋಶಾಧಿಕಾರಿಯವರಾದ ಹರಿನಾಥ್ ಕೆ. ಸುವರ್ಣ, ಶಾಲಾ ಕಾರ್ಯದರ್ಶಿಯವರಾದ ಲಕ್ಷ್ಮೀಶ್ ಎಂ. ಬಂಗೇರ, ನಾರಾಯಣಗುರು ಸೇವಾದಳದ ಸಂಚಾಲಕರಾದ ನಿತಿನ್ ಅಮೀನ್, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷರಾದ ಆಶಾ ಜೆ. ಬಂಗೇರ, ಭಜನಾ ಸಂಚಾಲಕರಾದ ಬಿ. ಬಿ. ಪೂಜಾರಿ, ವಿದ್ಯಾರ್ಥಿಗಳು, ಪೋಷಕರು ಸಂಘದ ಮತ್ತು ಉಪ ಸಮಿತಿಯ ಸದಸ್ಯರುಗಳು, ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಸುನಿಲ್ ದಾಸ್ ಎಂ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು , ಮಹಿಳಾ ಘಟಕದ ಸದಸ್ಯರಾದ ಚಂದ್ರಿಕಾ ವಿಜಯ್, ಜಯಲಕ್ಷ್ಮಿ ಶೇಖರ್, ನಿವೇದಿತಾ ಯಾದವ್ ಪಾರ್ಥಿಸಿದರು, ಸಂಘದ ಜೊತೆ ಕಾರ್ಯದರ್ಶಿ ಉಮೇಶ್ ಸುವರ್ಣ ವಂದಿಸಿದರು ಬಿಲ್ಲವ ಮಹಿಳಾ ಘಟಕದ ಸದಸ್ಯರಾದ ವಾರಿಜಾ ಮಧುಸೂದನ್ ಮತ್ತು ನಿರ್ಮಾಲ ಟೀಚರ್ ಕಾರ್ಯಕ್ರಮ ನಿರೂಪಿಸಿದರು.

ಸೆ. 13 : ದಿ. ಆಸ್ಕರ್ ಫೆರ್ನಾಂಡಿಸ್ ಪ್ರಥಮ ಪುಣ್ಯತಿಥಿ ಪ್ರಯುಕ್ತ ಹಣ್ಣುಹಂಪಲು ವಿತರಣೆ

Thumbnail
Posted On: 12 Sep 2022, 08:41 PM

ಉಡುಪಿ : ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ದಿ. ಆಸ್ಕರ್ ಫೆರ್ನಾಂಡಿಸ್ ಅವರ ಪ್ರಥಮ ಪುಣ್ಯ ತಿಥಿಯ ಪ್ರಯುಕ್ತವಾಗಿ ಸೆ. 13ರಂದು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಮತ್ತು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 11 ಗಂಟೆಗೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ನಡೆಯಲಿದೆ ಎಂದು ಗೌರವಾಧ್ಯಕ್ಷ ರೊನಾಲ್ಡ್ ಮನೋಹರ್ ಕರ್ಕಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದಿಂದ ವಿದ್ಯಾರ್ಥಿ ವೇತನ ಹಾಗೂ ಗುರಿಕಾರರಿಗೆ ಗೌರವ ಧನ ವಿತರಣಾ ಕಾರ್ಯಕ್ರಮ

Thumbnail
Posted On: 11 Sep 2022, 10:56 PM

ಉಚ್ಚಿಲ : ಮಹಾಲಕ್ಷ್ಮಿ ದೇವಸ್ಥಾನ ಜೀರ್ಣೋದ್ಧಾರ ಸಮಯದಲ್ಲಿ ಆಸೆ ಇಟ್ಟುಕೊಂಡು ಪ್ರಾರ್ಥನೆ ಮಾಡಿದ್ದು ಇಂದು ಆ ಮಹಾಲಕ್ಷ್ಮಿ ನಿಜ ಮಾಡಿ ತೋರಿಸುವ ಮೂಲಕ ಪವಾಡ ಮೆರೆದಿದ್ದಾಳೆ ಎಂದು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಗೌರವಾಧ್ಯಕ್ಷ ನಾಡೋಜ ಡಾ.ಜಿ.ಶಂಕರ್‌ ಹೇಳಿದರು. ಅವರು ದ.ಕ.ಮೊಗವೀರ ಮಹಾಜನ ಸಂಘ(ರಿ.)ಇದರ ವತಿಯಿಂದ ದಕ್ಷಿಣದ ಉಪ್ಪಳ ದಿಂದ ಉತ್ತರದ ಶೀರೂರುವರೆಗಿನ ಮೊಗವೀರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಗುರಿಕಾರರಿಗೆ ಗೌರವ ಧನ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ರವಿವಾರ ಮಾತನಾಡಿದರು. ಜೀರ್ಣೋದ್ಧಾರ ಸಮಯದಲ್ಲಿ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಇದ್ದ ಕನಸ್ಸು ಇಂದು ನನಸಾಯಿತು. ಮಂಗಳೂರು ದಸರಾ ಮಾದರಿಯಲ್ಲಿ ಉಚ್ಚಿಲ ದಸರಾ ಆಚರಿಸೋಣ ಎಂದರು. ಎಸ್.ಎಸ್‌. ಎಲ್.ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 25 ಲಕ್ಷ ರೂ.ಹಾಗೂ ಎಂ.ಬಿ.ಬಿ.ಎಸ್, ಇಂಜಿನಿಯರಿಂಗ್ ಕಲಿಕೆಯ ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ಸೇರಿದಂತೆ ಒಟ್ಟಾರೆಯಾಗಿ 50 ಲಕ್ಷ ರೂಪಾಯಿಯ ಸಹಕಾರ ಮಾಡುತ್ತಿದ್ದೇವೆ ಎಂದರು. ಈ ಸಂದರ್ಭದಲ್ಲಿ ಎಸ್‌. ಎಸ್. ಎಲ್.ಸಿ, ಪಿಯುಸಿ, ಎಂ.ಕಾಂ ಮತ್ತು ಸಿ.ಎ ನಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿದರು. ಮುಖ್ಯ ಅತಿಥಿಗಳಾಗಿ ಆನಂದ ಸಿ.ಕುಂದರ್, ಗುಂಡು,ಬಿ.ಅಮೀನ್, ಸತೀಶ್ ಅಮೀನ್ ಬಾರ್ಕೂರು, ಉದಯ್ ಕುಮಾರ್‌ , ಮೋಹನ್‌ ಕರ್ಕೇರ , ವಾಸುದೇವ ಸಾಲ್ಯಾನ್, ಭರತ್ ಕುಮಾರ್ ಎರ್ಮಾಳ್, ರಾಜೇಂದ್ರ ಹಿರಿಯಡ್ಕ, ಮೊಗವೀರ ಮಹಿಳಾ ಸಭಾಧ್ಯಕ್ಷೆ ಪೂರ್ಣಿಮಾ ಸಿ.ಇದ್ದರು. ದ.ಕ.ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ.ಸಿ.ಕೋಟ್ಯಾನ್ ಸ್ವಾಗತಿಸಿದರು. ಸತೀಶ್ ಅಮೀನ್ ನಿರ್ವಹಿಸಿದರು.

ಕಾಪು : ಮಾನವನ ಜ್ಞಾನವೇ ಯಶಸ್ಸಿನ ಕೀಲಿ ಕೈ - ಮೌಲಾನಾ ಸಲೀಮ್ ಉಮ್ರಿ

Thumbnail
Posted On: 11 Sep 2022, 10:42 PM

ಕಾಪು : ಶ್ರೀಮಂತರು ಜ್ಞಾನ ಗಳಿಸಲು ಲಕ್ಷಗಟ್ಟಲೆ ಹಣ ವಿನಿಯೋಗಿಸುತ್ತಾನರೆ. ಜ್ಞಾನ ಗಳಿಸುವುದರಲ್ಲಿ ಎರಡು ವಿಧವಿದ್ದು, ಒಂದರಲ್ಲಿ ಸ್ವತಃ ಆತನಿಗೂ ಸಮಾಜಕ್ಕೂ ಯಾವುದೇ ಪ್ರಯೋಜನ ಇರುವುದಿಲ್ಲ. ಆತನು , ತಾನು ಗಳಿಸಿದ ಜ್ಞಾನವನ್ನು ತನ್ನ ಸ್ವಾರ್ಥಕ್ಕಾಗಿ ಬಳಸುತ್ತಾ ಸಮಾಜದಲ್ಲಿ ಕೆಡುಕುಗಳನ್ನು ಹಬ್ಬಿಸಲು ಕಾರಣನಾಗುತ್ತಾನೆ. ಇನ್ನೊಂದು ವಿಧದ ಗುರಿಯನ್ನು ಇಟ್ಟು ಜ್ಞಾನ ಗಳಿಸಿದವನಿಗೆ ಆತನಿಗೂ, ಸಮಾಜಕ್ಕೂ ಉಪಯೋಗವಾಗುತ್ತದೆ. ಈ ಜ್ಞಾನವನ್ನು ಆತ ಬಳಸುತ್ತಾ, ತನ್ನ ಶಕ್ತಿ, ಸಾಮರ್ಥ್ಯಕ್ಕನುಸಾರವಾಗಿ ಒಳಿತಿನ ಕಾರ್ಯಗಳನ್ನು ಮಾಡುತ್ತಾ,ಅಭಿವೃದ್ಧಿಯನ್ನು ಬಯಸಿ, ದೇವನಿಗೆ ಶರಣಾಗಿ ಸಮಾಜದಲ್ಲಿ ಬದುಕುತ್ತಾನೆ. ಸಮಾಜದಲ್ಲಿ ಇರುವ ಪ್ರತಿಯೊಬ್ಬ ವ್ಯಕ್ತಿಗೂ ತಾನು ಈ ಭೂಮಿಗೆ ಬಂದ ಉದ್ದೇಶವೇನು ? ನನಗೆ ಇಲ್ಲಿ ಏನು ಮಾಡಬೇಕಾಗಿದೆ ಎಂಬ ಸಾಮಾನ್ಯ ಜ್ಞಾನ ಇರಬೇಕಾಗಿದೆ. ಈ ಬಗ್ಗೆ ಆತ ಗಾಢವಾಗಿ ಅಧ್ಯಯನ ಮಾಡಬೇಕು. ಯಾವ ರೀತಿ ನಾವು ಲೌಕಿಕ ವಿದ್ಯಾಭ್ಯಾಸ ಗಳಿಸಲು ಬಯಸುತ್ತೇವೆಯೋ ಅದೇ ರೀತಿ ಆದ್ಯಾತ್ಮಿಕ ವಿದ್ಯಾಭ್ಯಾಸ ಗಳಿಸಲು ಮುಂದೆ ಬರಬೇಕು. ಇದರಿಂದ ಅವರ ಇಹ ಮತ್ತು ಪರಲೋಕ ಬೆಳಗುತ್ತದೆ. ಇದೇ ಜ್ಞಾನದ ಯಶಸ್ಸಿನ ಕೀಲಿ ಕೈ ಎಂದು ಶಿವಮೊಗ್ಗ , ಉತ್ತರ ಕನ್ನಡ ವಲಯ ಸಂಚಾಲಕರಾದ ಮೌಲಾನಾ ಮುಹಮ್ಮದ್ ಸಲೀಮ್ ಉಮ್ರಿ ಯವರು ಹೇಳಿದರು. ಅವರು ಆದಿತ್ಯವಾರ ಕಾಪು ಹೋಟೆಲ್ ಮಂದಾರದಲ್ಲಿ ಎಸ್. ಐ. ಓ ಮತ್ತು ಜಮಾಅತೆ ಇಸ್ಲಾಮಿ ಹಿಂದ್ ಕಾಪು ವರ್ತುಲವು ಹಮ್ಮಿಕೊಂಡ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತಾಡಿದರು. ಇನ್ನೋರ್ವ ಮುಖ್ಯ ಅಥಿತಿ ಎಸ್. ಐ. ಓ ನ ರಾಜ್ಯ ಕಾರ್ಯದರ್ಶಿ ಹಸೀಬ್ ತರಫ್ದಾರ್ ರವರು , ಇಂದು ನಾವು ವಿದ್ಯಾಭ್ಯಾಸ ಪಡೆಯುತ್ತಿರುವಾಗ ಹಲವು ಭಾಷೆ ಕಲಿಯಲು ಪ್ರಯತ್ನಿಸಬೇಕು. ಇದರಿಂದ ನಮ್ಮ ಜ್ಞಾನವು ವೃದ್ಧಿಸುತ್ತದೆ. ಇತಿಹಾಸ ಅಧ್ಯಯನ ಮಾಡುವಾಗ ಭಾಷಾ ಜ್ಞಾನದಿಂದ ಸಮಾಜಕ್ಕೆ ಬಹಳ ಕೊಡುಗೆ ದೊರಕುವಂತಿರಬೇಕು. ಇದು ಇತರರಿಗೆ ಮಾದರಿಯಾಗಿರಬೇಕು ಎಂದರು. ಹಾಜಿ ಅಬ್ದುಲ್ ಜಲೀಲ್ ಉದ್ಯಾವರ ಸಂದರ್ಭೋಚಿತವಾಗಿ ಮಾತಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾಕ್ಟರ್ ಅಬ್ದುಲ್ ಅಜೀಜ್ ಎಮ್. ಐ. ಟಿ ಯವರು ವಹಿಸಿದ್ದರು. ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ ನ ಡಿಪ್ಲೋಮ ಕೋರ್ಸ್ ನಲ್ಲಿ ರಾಜ್ಯದಲ್ಲಿ ಪ್ರಥಮ ರಾಂಕ್ ಗಳಿಸಿದ ಸಮ್ರಿನ್ ಶಹಾಬುದ್ದಿನ್ ರವರಿಗೆ ಪ್ರಶಸ್ತಿ ಮತ್ತು ಸರ್ಟಿಫಿಕೇಟ್ ಹಾಗೂ ಉಳಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎಸ್. ಐ. ಓ. ವಿದ್ಯಾರ್ಥಿಗಳಿಗೆ ನಡೆಸಿದ ರಸ ಪ್ರಶ್ನೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಜಯ ಗಳಿಸಿದವರಿಗೆ ನಗದು ಮತ್ತು ಬಹುಮಾನ ನೀಡಲಾಯಿತು. ವಿಜೇತರ ಪಟ್ಟಿಯನ್ನು ಅನ್ವರ್ ಅಲಿ ಕಾಪು ಓದಿದರು. ಕಾರ್ಯಕ್ರಮವು ಮುಹಮ್ಮದ್ ರಾಯಿಫ್ ರವರ ಕುರಾನ್ ಪಠಣದೊಂದಿಗೆ ಪ್ರಾರಂಭ ಆಯಿತು. ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಎಸ್. ಐ. ಓ. ಕಾಪು ಘಟಕದ ಅಧ್ಯಕ್ಷ ಅನೀಸ್ ಅಲಿ ಮಾಡಿದರು. ಬೋರ್ಡ್ ಆಫ್ ಇಸ್ಲಾಮಿಕ್ ನ ನಿಯಮಾವಳಿಯನ್ನು ಜಮಾ ಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ಸಂಚಾಲಕಿ ಶೇಹೆನಾಜ್ ಕಾಪು ರವರು ಸಭೆಯ ಮುಂದಿಟ್ಟರು. ಮುಹಮ್ಮದ್ ಅವೀಜ್ ಕಾರ್ಯಕ್ರಮ ನಿರೂಪಿಸಿದರು. ಮುಹಮ್ಮದ್ ಇಕ್ಬಾಲ್ ಸಾಹೇಬ್ ವಂದಿಸಿದರು.