Updated News From Kaup

ಕಾಪು : ಟೀಮ್ ಮೋದಿ ವತಿಯಿಂದ ಯಶ್ಪಾಲ್ ಸುವರ್ಣ ಹುಟ್ಟು ಹಬ್ಬದ ಪ್ರಯುಕ್ತ ಹೂವಿನ ಪೂಜೆ

Thumbnail
Posted On: 24 Aug 2022, 08:48 PM

ಕಾಪು : ಟೀಮ್ ಮೋದಿ ಕಾಪು ವತಿಯಿಂದ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಇದರ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಇವರ ಹುಟ್ಟು ಹಬ್ಬದ ಪ್ರಯುಕ್ತ ಬುಧವಾರ ಹೂವಿನ ಪೂಜೆ ಜರಗಿತು. ಈ‌ ಸಂದರ್ಭ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯ್ ಕೊಡವೂರು, ಟೀಮ್ ಮೋದಿ ಕಾಪು ತಂಡದ ಅಧ್ಯಕ್ಷರಾದ ಯೋಗೀಶ್ ಪೂಜಾರಿ, ಉದ್ಯಮಿ ಪ್ರಭಾಕರ ಪೂಜಾರಿ ಮತ್ತು ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಟೀಮ್ ಮೋದಿ ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಕಾಪು : ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಎರಡನೇ ವರ್ಷದ ಡಿಪ್ಲೋಮಾ ಪ್ರವೇಶಾತಿ ಅವಧಿ ವಿಸ್ತರಣೆ

Thumbnail
Posted On: 24 Aug 2022, 08:03 PM

ಕಾಪು : ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಕಡಿಮೆ ಪ್ರವೇಶ ಶುಲ್ಕದೊಂದಿಗೆ ಪ್ರವೇಶ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 30 ರ ವರೆಗೆ ವಿಸ್ತರಿಸಲಾಗಿದೆ. ಎರಡನೇ ವರ್ಷದ ಮೂರನೇ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಾತಿಗೆ ಎರಡು ವರ್ಷಗಳ ಐ.ಟಿ.ಐ, ದ್ವಿತೀಯ ಪಿ.ಯು.ಸಿ ವಿಜ್ಞಾನ ಹಾಗೂ ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಆಟೋಮೇಷನ್ ಅಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಅಂಡ್ ಬಿಗ್ ಡೇಟಾ ಎಂಬ ಕೋರ್ಸುಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಯಲ್ಲಿ ಆಫ್ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು : ಮೊಬೈಲ್ ಸಂಖ್ಯೆ : 9480773870, 9945759720 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸಂತ ಮೇರಿ ಕಾಲೇಜು, ಶಿರ್ವ : "ಜಾವ ಮೇಡ್ ಈಜಿ” - ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆ

Thumbnail
Posted On: 24 Aug 2022, 07:51 PM

ಶಿವ೯: ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರಿನ ಯುನೈಟೆಡ್ ಏಜೆನ್ಸಿ ಇದರ ಸಂಪಾದಕರಾದ ಕೃಷ್ಣನ್ ಅಯ್ಯರ್ ಅವರು ಉಪನ್ಯಾಸಕ ಕೆ.ಪ್ರವೀಣ್ ಕುಮಾರ್ ರವರ “ಜಾವ ಮೇಡ್ ಈಜಿ" - ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆಗೊಳಿಸಿದರು. ಪರೀಕ್ಷಾ ತಯಾರಿಕೆಯಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಹೊಸ ಹೊಸ ಸವಾಲುಗಳು ಎದುರಾಗುವುದು ಸಹಜ. ಈ ನಿಟ್ಟಿನಲ್ಲಿ ಪರೀಕ್ಷಾ ಪೂವ೯ ತಯಾರಿಯಾಗಿ ಇಂತಹ ಪ್ರಶ್ನೋತ್ತರ ಮಾಲಿಕೆ ಪುಸ್ತಕಗಳು ವಿದ್ಯಾರ್ಥಿಯ ಪರೀಕ್ಷಾ ಒತ್ತಡವನ್ನು ಕಡಿಮೆಗೊಳಿಸಲು ಸಹಕಾರಿಯೆಂದು ಪ್ರಾಂಶುಪಾಲರಾದ ಡಾ.ಹೆರಾಲ್ಡ್ ಐವನ್ ಮೊನಿಸ್ ರವರು ಪುಸ್ತಕದ ಬಗ್ಗೆ ಲೇಖಕರನ್ನು ಪ್ರಶಂಸೆಯ ಮಾತುಗಳೊಂದಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಬಿ.ಸಿ.ಎ. ವಿಭಾಗದ ಮುಖ್ಯಸ್ಥ ಹಾಗೂ ಮಾಹಿತಿ ತಂತ್ರಜ್ಞಾನದ ಸಂಯೋಜಕರಾದ ಲೆಫ್ಟಿನೆಂಟ್ ಕೆ.ಪವೀಣ್ ಕುಮಾರ್ ರವರು ಇಂತಹ ಪುಸ್ತಕಗಳನ್ನು ತಯಾರು ಮಾಡಲು ನನ್ನ ಗಣಕ ವಿಜ್ಞಾನದ ವಿದ್ಯಾರ್ಥಿಗಳೆ ಪ್ರೇರಕ ಶಕ್ತಿ, ಅವರಿಗೆ ನಾನು ಅಭಾರಿಯಾಗಿದ್ದೇನೆ. ಪುಸ್ತಕದ ಬಗ್ಗೆ ಮಾತನಾಡುತ್ತಾ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ವಯ ದ್ವಿತೀಯ ಬಿ.ಸಿ.ಎ. ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷಾ ದೃಷ್ಟಿಯಿಂದ ಈ ಪುಸ್ತಕ ಹೆಚ್ಚು ಸಹಕಾರಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಯುನೈಟೆಡ್ ಏಜೆನ್ಸಿಯ ಪ್ರಸನ್ನ ಅಯ್ಯರ್, ಇನ್ಫೋಸಿಸ್ ಮತ್ತು ವಿಪ್ರೋ ಕಂಪನಿಯ ಜೂನಿಯರ್ ಅಸೋಸಿಯೇಟ್ಸ್ ರಾಮ್ದಾಸ್ ಭಟ್ , ಪೂಜಾರಿ ಪ್ರತೀಕ್ ಪ್ರಭಾಕರ್, ಉಪನ್ಯಾಸಕರುಗಳಾದ ಪ್ರಕಾಶ್ , ದಿವ್ಯಾಶ್ರೀ, ಪ್ರಣಿತ, ಬಿಸಿಎ ವಿಭಾಗದ ಎಲ್ಲಾ ಅಧ್ಯಾಪಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವಿಧಾತ್ ಶೆಟ್ಟಿ , ಅನುಕ್ ನಾಯಕ್ ಸಹಕರಿಸಿದ್ದರು. ದೀಪಿಕಾ ಮತ್ತು ಬಳಗ ಪಾರ್ಥಿಸಿದರು. ವರ್ಷ ಬಂಗೇರ ಸ್ವಾಗತಿಸಿದರು. ಸೃಷ್ಟಿ ಕಾರ್ಯಕ್ರಮ ನಿರೂಪಿಸಿದರು. ಶಮಿತಾ ಶೆಟ್ಟಿ ವಂದಿಸಿದರು.

ಎಸ್ ಕೆ ಪಿ ಎ ಕಾಪು ವಲಯ : ಉಚಿತ ನಿಕಾನ್ ಕಾರ್ಯಗಾರ

Thumbnail
Posted On: 24 Aug 2022, 07:41 PM

ಕಾಪು : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕಾಪು ವಲಯದ ವತಿಯಿಂದ ಕಾಪುವಿನ ಪ್ಯಾಲೇಸ್ ಗಾರ್ಡನ್ ಸಭಾ ಭವನದಲ್ಲಿ ನಿಕಾನ್ ಸಂಸ್ಥೆಯ ಉಚಿತ ಕಾರ್ಯಗಾರ ಜರಗಿತು. ಕಾರ್ಯಾಗಾರವನ್ನು ನಿಕೊನ್ ಸಂಸ್ಥೆಯ ಸೂರಜ್ ಪ್ರಭುರವರು ಉದ್ಘಾಟಿಸಿದರು. ನಿಕೊನ್ ಸಂಸ್ಥೆಯಿಂದ ಖ್ಯಾತ ಛಾಯಾಗ್ರಾಹಕ ಉಡುಪಿಯ ಫೋಕಸ್ ರಾಘುರವರು ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾಪು ಸಹಿತ ಬೇರೆ ಬೇರೆ ವಲಯಗಳ ನೂರಕ್ಕೂ ಅಧಿಕ ಛಾಯಾಗ್ರಹಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಈ ಸಂದರ್ಭ ಕಾಪು ವಲಯಾಧ್ಯಕ್ಷ ವಿನೋದ್ ಕಾಂಚನ್, ಉಪಾಧ್ಯಕ್ಷ ಸಚಿನ್ ಉಚ್ಚಿಲ, ಗೌರವಾಧ್ಯಕ್ಷ ರವಿಕುಮಾರ್ ಕಟ್ಪಾಡಿ, ಕಾರ್ಯದರ್ಶಿ ರಾಜೇಶ್ ಶಂಕರಪುರ, ಕೋಶಾಧಿಕಾರಿ ರಾಘವೇಂದ್ರ ಭಟ್, ಛಾಯಾ ಕಾರ್ಯದರ್ಶಿ ಅರುಣ್ ಡಿಸೋಜ ಮತ್ತಿತರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ರಜತ ಮಹೋತ್ಸವ : ಮ್ಯಾರಥಾನ್ ಓಟಕ್ಕೆ ಬಂಟಕಲ್ಲ್ ನಲ್ಲಿ ಸ್ವಾಗತ

Thumbnail
Posted On: 24 Aug 2022, 07:39 PM

ಬಂಟಕಲ್ಲು : ಉಡುಪಿ ಜಿಲ್ಲೆ ರಚನೆಯಾಗಿ ೨೫ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅದ್ದೂರಿ ಆಚರಣೆಯ ಅಂಗವಾಗಿ ಕಾರ್ಕಳದ ಭುವನೇಂದ್ರ ಕಾಲೇಜಿನಿಂದ ಬೆಳ್ಮಣ್ ವರೆಗೆ ಮ್ಯಾರಥಾನ್ ಓಟ ಪ್ರಾರಂಭಗೊಂಡಿದ್ದು, ಬುಧವಾರ ಸಂಜೆ ಬಂಟಕಲ್ಲು ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಎದುರು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಬಂಟಕಲ್ಲು ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್, ಬಿಜೆಪಿ ನಾಯಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ವೀಣಾ ಶೆಟ್ಟಿ. ಗೀತಾಂಜಲಿ ಸುವರ್ಣ, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಗಿರೀಶ್ ಕಾಂಚನ್, ಅರುಣ್ ಶೆಟ್ಟಿ ಪಾದೂರು, ಶ್ರೀ ಕಾಂತ್ ನಾಯಕ್, ನವೀನ್ ಶೆಟ್ಟಿ ಕುತ್ಯಾರು, ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಳತ್ತೂರು : ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ ಸಭೆ

Thumbnail
Posted On: 24 Aug 2022, 05:49 PM

ಕಳತ್ತೂರು : ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಯ ಸಭೆಯು ಗ್ರಾಮ ಆರೋಗ್ಯ ಸಮಿತಿ ಅಧ್ಯಕ್ಷ ಜನಾರ್ಧನ್ ಆಚಾರ್ಯರವರ ಅಧ್ಯಕ್ಷತೆಯಲ್ಲಿ ಜರಗಿತು. ಸಮಾಜಸೇವಾ ವೇದಿಕೆಯ ಅಧ್ಯಕ್ಷ ಫಾರೂಕ್ ಚಂದ್ರನಗರ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭ ಅವರು ಮಾತನಾಡಿ ಕಳತ್ತೂರು ಚಂದ್ರ ನಗರದ ಆರೋಗ್ಯ ಕೇಂದ್ರಗಳಿಗೆ ಕೊರೋನಾ ಸಂದರ್ಭ ಸಂಸ್ಥೆ ಸಹಕಾರ ನೀಡಿದ್ದು ಮುಂದಿನ ದಿನಗಳಲ್ಲಿಯೂ ಸಹಕಾರ ಮುಂದುವರಿಯಲಿದೆ ಎಂದರು. ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯೆ ದಿವ್ಯ ಶೆಟ್ಟಿಗಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿ ಸುಧಾವತಿ, ಜಾನ್ಸನ್ ಕರ್ಕಡ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶ್ರೀ ಶಕ್ತಿ ಗುಂಪಿನ ಸದಸ್ಯರು, ಗ್ರಾಮ ನೈರ್ಮಲ್ಯ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಹೆಜಮಾಡಿ : ತೆಂಗಿನ ಮರ ಹತ್ತುವವರಿಗೆ ಕೇರಾ ಸುರಕ್ಷಾ ವಿಮೆ ಬಗ್ಗೆ ಮಾಹಿತಿ ಹಾಗೂ ನೋಂದಾವಣಿ ಕಾರ್ಯಕ್ರಮ

Thumbnail
Posted On: 23 Aug 2022, 08:57 PM

ಹೆಜಮಾಡಿ : ಗ್ರಾಮ ಪಂಚಾಯತ್ ಹೆಜಮಾಡಿ ಹಾಗೂ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ 'ತೆಂಗಿನ ಮರ ಹತ್ತುವವರಿಗೆ ಕೇರಾ ಸುರಕ್ಷಾ ವಿಮೆ' ಬಗ್ಗೆ ಮಾಹಿತಿ ಹಾಗೂ ನೋಂದಾವಣಿ ಕಾರ್ಯಕ್ರಮಕ್ಕೆ ಮಂಗಳವಾರ ಶಾಸಕರಾದ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಾಂಡುರಂಗ ಕರ್ಕೇರ, ಉಪಾಧ್ಯಕ್ಷೆ ಪವಿತ್ರ ಗಿರೀಶ್, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ, ಹೆಜಮಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇನಾಯತ್ ಅಲಿ, ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡುಬಿದ್ರಿ ಪಿ. ಕೆ. ಸದಾನಂದ, ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಹೇಮಂತ್ ಕುಮಾರ್, ಕಾರ್ಯಕ್ರಮದ ಸಂಯೋಜಕ ಪ್ರಾಣೇಶ್ ಹೆಜಮಾಡಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಬ್ಯಾಂಕ್ ಆಫ್ ಬರೋಡ ಕಾಪು ಶಾಖೆ : ಬಿ.ಒ.ಬಿ ವಲ್ಡ್೯ ಆಪ್ ಮೇಳಕ್ಕೆ ಚಾಲನೆ

Thumbnail
Posted On: 23 Aug 2022, 08:46 PM

ಕಾಪು : ಬ್ಯಾಂಕ್ ಆಫ್ ಬರೋಡ ಕಾಪು ಬ್ರಾಂಚ್‌ ವತಿಯಿಂದ ನಡೆದ ಬಿ.ಒ.ಬಿ ವಲ್ಡ್೯ ಆಪ್ ಮೇಳಕ್ಕೆ ಉಡುಪಿ ರೀಜಿನಲ್‌ ಅಧಿಕಾರಿ ರೋಹಿತ್ ಸಿನ್ಹಾ ಕಾಪು ಬ್ಯಾಂಕ್ ಆಫ್ ಬರೋಡ ಕಛೇರಿಯಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕ್‌ನ ಗ್ರಾಹಕರುಗಳಾದ ದಿವಾಕರ.ಬಿ.ಶೆಟ್ಟಿ ಕಳತ್ತೂರು, ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ, ಕಾಪು ಉದ್ಯಮಿ ಎಚ್.ಅಬ್ದುಲ್ಲಾ, ಬ್ಯಾಂಕ್‌ನ ಪ್ರಬಂಧಕರಾದ ನಮೃತ ಸಿನ್ಹಾ, ಸಚಿನ್, ಬಬಿತ, ಶ್ರೀನಿಧಿ, ರೇವತಿ, ಧನ್ಯ ಹಾಗೂ ಮುಂತಾದವರು ಉಪಸ್ಥಿತರಿದ್ದರು.

ಪಣಿಯೂರು : ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ

Thumbnail
Posted On: 23 Aug 2022, 06:31 PM

ಪಣಿಯೂರು : ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಸಮಗ್ರ ಜೀರ್ಣೋದ್ಧಾರದ ಸಂಕಲ್ಪದೊಂದಿಗೆ ಹೂವಿನ ಪೂಜೆ ಮತ್ತು ಜೀರ್ಣೋದ್ಧಾರ ಮನವಿ ಪತ್ರ ಬಿಡುಗಡೆ ಸಮಾರಂಭವು ಮಂಗಳವಾರ ಪಣಿಯೂರು ಬಬ್ಬುಸ್ವಾಮಿ ದೈವಸ್ಥಾನದ ಆವರಣದಲ್ಲಿ ನಡೆಯಿತು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಮನವಿ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭ ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಶಾಸಕರ ಇತಿಮಿತಿಯೊಳಗೆ ಸರಕಾರದಲ್ಲಿ ಸಿಗುವ ಅನುದಾನ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯನ್ನ ಮಾಡುವುದಾಗಿ ಭರವಸೆ ನೀಡಿದರು. ಪಣಿಯೂರು ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವ, ಉದ್ಯಮಿ ಸುರೇಶ್ ಪಿ. ಶೆಟ್ಟಿ ಗುರ್ಮೆ, ದ. ಕ. ಮತ್ತು ಉಡುಪಿ ಜಿಲ್ಲಾ ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬೆಟ್ಟಿಗೆ ವೆಂಕಟರಾಜ ತಂತ್ರಿ, ಗುತ್ತಿನಾರ್ ಯೋಗೀಶ್ ಶೆಟ್ಟಿ ಪಣಿಯೂರುಗುತ್ತು, ಪ್ರಫುಲ್ಲ ಶೆಟ್ಟಿ ಎಲ್ಲೂರುಗುತ್ತು, ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ ಪಣಿಯೂರುಗುತ್ತು, ಕೊರಗ ಶೆಟ್ಟಿ ಬುಳಿಬೆಟ್ಟುಗುತ್ತು, ದೇವಿಪ್ರಸಾದ್ ಶೆಟ್ಟಿ ಬಡಕರಗುತ್ತು, ಜಗನ್ನಾಥ ಪೂಜಾರಿ, ಸುರೇಂದ್ರ ಪಣಿಯೂರು, ಮುಂಬಯಿ ಸಮಿತಿ ಅಧ್ಯಕ್ಷ ಸುಕುಮಾರ್ ಶೆಟ್ಟಿ ನಡಿಮನೆ ಮೊದಲಾದವರು ಉಪಸ್ಥಿತರಿದ್ದರು. ಡಾ. ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು. ಕರುಣಾಕರ ಶೆಟ್ಟಿ ವಂದಿಸಿದರು.

ಆಗಸ್ಟ್ 24 : ರವಿ ಕೃಷ್ಣಾ ರೆಡ್ಡಿ ನೇತೃತ್ವದ ಜನ ಚೈತನ್ಯ ಯಾತ್ರೆ ಉಡುಪಿಗೆ

Thumbnail
Posted On: 23 Aug 2022, 06:12 PM

ಉಡುಪಿ : ಭೃಷ್ಟಾಚಾರ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಭೃಷ್ಟಾಚರದ ವಿರುದ್ಧ ಜಾಗೃತಿ ಮಾಡುತ್ತಿರುವ ರವಿ ಕೃಷ್ಣಾ ರೆಡ್ಡಿ ನೇತೃತ್ವದ ಜನ ಚೈತನ್ಯ ಯಾತ್ರೆ ಉಡುಪಿಗೆ ಬರಲಿದೆ. ಉಡುಪಿಯ ನಗರ ಸಭೆಯ ಎದುರಿಗೆ ಆಗಸ್ಟ್ 24, ಮಧ್ಯಾಹ್ನ 2:30 ಗಂಟೆಗೆ ಭೃಷ್ಟಾಚಾರ ಮುಕ್ತ ಕರ್ನಾಟಕ ಅಭಿಯಾನ ನಡೆಯಲಿದೆ. ಸಮಾನ ಮನಸ್ಕರೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕೆ ಕೈ ಜೋಡಿಸಬೇಕಾಗಿಕರ್ನಾಟಕ ರಕ್ಷಣಾ ಸಮಿತಿ (KRS) ಉಡುಪಿ ಜಿಲ್ಲಾ ಘಟಕ ಪ್ರಕಟನೆಯಲ್ಲಿ ತಿಳಿಸಿದೆ.