Updated News From Kaup
ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ : ವಾರ್ಷಿಕ ಮಹಾಸಭೆ
Posted On: 11 Sep 2022, 05:17 PM
ಉಡುಪಿ : ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ 2021 - 2022 ನೇ ಸಾಲಿನ 20ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಸೆಪ್ಟೆಂಬರ್ 11ರಂದು ಬಿಲ್ಲವರ ಸೇವಾ ಸಂಘ (ರಿ.), ಬನ್ನಂಜೆ ಉಡುಪಿ ಇದರ ಶಿವಗಿರಿ ಸಭಾಂಗಣದಲ್ಲಿ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ವಾರ್ಷಿಕ ಸಾಮಾನ್ಯ ಸಭೆಯನ್ನು ಬ್ಯಾಂಕಿನ ಮಾರ್ಗದರ್ಶಕರಾದ ಎಸ್ ಕೆ ಸಾಲ್ಯಾನ್ ,ರಾಮಚಂದ್ರ ಕಿದಿಯೂರು ಮತ್ತು ಸೂರ್ಯ ಪ್ರಕಾಶ್ ಜಂಟಿಯಾಗಿ ಉದ್ಘಾಟಿಸಿ ಶುಭ ಹಾರೈಸಿದರು. ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ ಹರಿಶ್ಚಂದ್ರ ಅಮೀನ್ ಅವರು ಸರ್ವಸದಸ್ಯರುಗಳನ್ನು ಸ್ವಾಗತಿಸಿ ನಮ್ಮ ಬ್ಯಾಂಕ್ ಭಾರತೀಯ ರಿಸರ್ವ್ ಬ್ಯಾಂಕಿನ ಮಾನ್ಯತೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಬ್ಯಾಂಕ್ ಅಧುನಿಕ ಸೌಲಭ್ಯಗಳಾದ ಕೋರ್ ಬ್ಯಾಂಕಿಂಗ್ ,ಆರ್ ಟಿ ಜಿ ಎಸ್ / ನೆಪ್ಟ್ , ಸಿ ಟಿ ಎಸ್ ಚೆಕ್ ಕ್ಲಿಯರಿಂಗ್, ಸೇಫ್ ಲಾಕರ್ ಸೌಲಭ್ಯಗಳನ್ನು ಒಳಗೊಂಡಿದೆ . ಗ್ರಾಹಕರ ಐದು ಲಕ್ಷದವರೆಗಿನ ಠೇವಣಿಗಳಿಗೆ ಡಿ ಐ ಸಿ ಜಿ ಸಿ. ವಿಮಾ ಸೌಲಭ್ಯವನ್ನು ಹೊಂದಿದೆ . ಸ್ವಸಹಾಯ ಗುಂಪಿನ ಸದಸ್ಯರಿಗೆ ಅತ್ಯಂತ ಕಡಿಮೆ ಬಡ್ಡಿಯ ಸಾಲವನ್ನು ನೀಡುತ್ತಿದ್ದು ಚಿನ್ನಾಭರಣ ಈಡಿನ ಸಾಲ, ಗೃಹ ನಿರ್ಮಾಣ ಸಾಲ, ಅಡಮಾನ ಸಾಲ , ಭದ್ರತಾ ಸಾಲ , ವೈಯಕ್ತಿಕ ಸಾಲ , ವಾಹನ ಸಾಲ ವೇತನಾಧಾರಿತ ಸಾಲ ಹಾಗೂ ವ್ಯಾಪಾರ ಅಭಿವೃದ್ಧಿ ಸಾಲಗಳನ್ನು ವಾಣಿಜ್ಯ ಬ್ಯಾಂಕಿನ ಬಡ್ಡಿ ದರಕ್ಕೆ ಸ್ಪರ್ಧಾತ್ಮಕವಾಗಿ ನೀಡಲಾಗುತ್ತದೆ .ಗ್ರಾಹಕರ ಠೇವಣಿಗೆ ಅತ್ಯಧಿಕ ಬಡ್ಡಿಯನ್ನು ನೀಡುತ್ತಿದ್ದು ಹಿರಿಯ ನಾಗರಿಕರಿಗೆ 0.5% ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಗ್ರಾಹಕರ ಹಾಗೂ ಆಡಳಿತ ಮಂಡಳಿಯ ಸಹಕಾರ ಸಿಬ್ಬಂದಿಗಳ ನಗುಮೊಗದ ಸೇವೆ ಸದಸ್ಯರ ಪ್ರೋತ್ಸಾಹದಿಂದ ನಮ್ಮ ಬ್ಯಾಂಕ್ ಉತ್ತಮ ಲಾಭವನ್ನು ಕಾಣುವಂತಾಗಿದೆ ಎಂದರು. ಉಪಾಧ್ಯಕ್ಷರಾದ ವಿಜಯಾ ಜಿ ಬಂಗೇರ, ನಿರ್ದೇಶಕರಾದ ಕೆ. ಜಯಕುಮಾರ್, ಪ್ರಭಾಕರ ಬಂಗೇರ, ಬಿ.ಬಿ. ಪೂಜಾರಿ, ನವೀನ್ ಅಮೀನ್, ಆನಂದ ಜತ್ತನ್ನ, ಡಿ.ಆರ್ ರಾಜು, ಶೇಕರ ಬಿ ಪೂಜಾರಿ, ರಮೇಶ್ ಕೆ ಕೋಟ್ಯಾನ್, ಅಶೋಕ್ ಕುಮಾರ್ , ಅರುಣ್ ಜತ್ತನ್ನ, ವೃತ್ತಿಪರ ನಿರ್ದೇಶಕರಾದ ಭಾಸ್ಕರ ಪೂಜಾರಿ ಹಾಗೂ ಕೃಷ್ಣ ಬಿಲ್ಲವ ಉಪಸ್ಥಿತರಿದ್ದರು. ಸದಸ್ಯರಾದ ಗುರುದತ್ ಅಮೀನ್ , ಕಟಪಾಡಿ ಶಂಕರ್ ಪೂಜಾರಿ, ರಮೇಶ್ ಬಂಗೇರ ,ಶೇಖರ್ ಕೋಟ್ಯಾನ್ ಮತ್ತು ಸುಲೋಚನಾ ದಾಮೋದರ್ ಇವರು ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿ ಬ್ಯಾಂಕನ್ನು ಲಾಭದತ್ತ ಮುನ್ನಡೆಸಿದ ಆಡಳಿತ ಮಂಡಳಿಯನ್ನು ಅಭಿನಂದಿಸಿದರು. ಬ್ಯಾಂಕಿನ ನಿರ್ದೇಶಕರಾದ ಶಕುಂತಲ ಶ್ರೀನಿವಾಸ್ ಪ್ರಾರ್ಥಿಸಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಶನ್ ಫೌಸ್ಟಿನ್ ಆಲ್ವರವರು ಬ್ಯಾಂಕಿನ 19ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ವರದಿಯನ್ನು ವಾಚಿಸಿದರು. ನಿರ್ದೇಶಕ ಶಿವಾಜಿ ಸುವರ್ಣ ವಂದಿಸಿದರು.
ಕಾಪು : ಲಕ್ಷ್ಮಿಜನಾರ್ಧನ ದೇವಳಕ್ಕೆ ಚಲನಚಿತ್ರ ನಟ ಗಣೇಶ್ ಭೇಟಿ
Posted On: 11 Sep 2022, 05:10 PM
ಕಾಪು : ಇಲ್ಲಿನ ಲಕ್ಷ್ಮಿಜನಾರ್ಧನ ದೇವಳಕ್ಕೆ ಕನ್ನಡ ಚಲನಚಿತ್ರ ನಟ ಗೋಲ್ಡನ್ ಸ್ಟಾರ್ ಗಣೇಶ್ ಭೇಟಿ ನಿಡಿದರು. ದೇವಳದ ಪ್ರಧಾನ ಅರ್ಚಕರಾದ ಜನಾರ್ಧನ ತಂತ್ರಿಯವರು ಗಣೇಶರನ್ನು ಸನ್ಮಾನಿಸಿ ಶ್ರೀ ದೇವರ ಪ್ರಸಾದ ವಿತರಿಸಿದರು. ಈ ಸಂದರ್ಭ ಪ್ರಕಾಶ್ ಅಮ್ಮಣ್ಣಾಯ, ದೇವಳದ ಸಿಬ್ಬಂದಿ ದಿವಾಕರ್, ಲಕ್ಷ್ಮೀಕಾಂತ್, ರಾಧಾಕೃಷ್ಣ ಕಲ್ಲೂರಾಯ, ಕಾಪು ಪುರಸಭಾ ಸದಸ್ಯ ಅನಿಲ್ ಮತ್ತಿತರರು ಉಪಸ್ಥಿತರಿದ್ದರು.
ಮುದರಂಗಡಿ : ಮಟ್ಕಾ ಜುಗಾರಿ ; ಪೋಲಿಸ್ ದಾಳಿ ; ಓರ್ವನ ದಸ್ತಗಿರಿ
Posted On: 11 Sep 2022, 04:58 PM
ಮುದರಂಗಡಿ : ಕಾಪು ತಾಲೂಕು ಸಾಂತೂರು ಗ್ರಾಮದ ಮುದರಂಗಡಿ ಮೀನು ಮಾರ್ಕೆಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಆಟದ ಬಗ್ಗೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾನೆಂದು ಬಂದ ಮಾಹಿತಿಯಂತೆ ಪಡುಬಿದ್ರಿ ಪೋಲಿಸರು ದಾಳಿ ನಡೆಸಿದ್ದಾರೆ. ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಗೆ ಚೀಟಿ ಬರೆದು ಕೊಡುತ್ತಾ ಹಣ ಸಂಗ್ರಹಿಸುತ್ತಿದ್ದ, ದಿನೇಶ್ ಶೆಟ್ಟಿ ಎಂಬಾತನನ್ನು ದಸ್ತಗಿರಿ ಮಾಡಿ, ಅವನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ ಸಂಗ್ರಹಿಸಿದ ನಗದು ರೂಪಾಯಿ 1,050, ಮಟ್ಕಾ ನಂಬ್ರ ಬರೆದ ಚೀಟಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ : 1 ಕೋಟಿ 10 ಲಕ್ಷ ರೂ.ಗಳ ಕಾಮಗಾರಿ ; 3 ರಸ್ತೆಗಳ ಲೋಕಾರ್ಪಣೆ
Posted On: 11 Sep 2022, 03:09 PM
ಪಡುಬಿದ್ರಿ : ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಪಡುಬಿದ್ರೆ ಪಂಚಾಯತ್ ವ್ಯಾಪ್ತಿಯ 5 ನೇ ವಾರ್ಡಿನ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿ ಸುಮಾರು 1 ಕೋಟಿ 10 ಲಕ್ಷ ರೂಪಾಯಿಗಳ ಅಭಿವೃದ್ಧಿಗೊಂಡ 3 ರಸ್ತೆಗಳನ್ನು ಲೋಕಾರ್ಪಣೆಗೊಳಿಸಿದರು. ಸ್ಥಳೀಯರ ರಸ್ತೆ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು 1 ಕೋಟಿ ಅನುದಾನದಿಂದ, ಅಪ್ಪು ಪೂಜಾರಿ ಮನೆ ಸಮೀಪ ರಸ್ತೆ ಅಭಿವೃದ್ಧಿ 5 ಲಕ್ಷ, ರಘುಪತಿ ಭಟ್ ಮನೆ ಬಳಿ ರಸ್ತೆ ಅಭಿವೃದ್ಧಿಗೆ 5 ಲಕ್ಷ ಅನುದಾನದಿಂದ ರಸ್ತೆ ಅಭಿವೃದ್ಧಿಗೊಂಡು ಭರವಸೆಯಂತೆ ಸಾರ್ವಜನಿಕರ ಉಪಯೋಗಕ್ಕೆ ಬಿಟ್ಟುಕೊಡಲಾಗಿದೆ. ಪಂಚಾಯತ್ ವ್ಯಾಪ್ತಿಯ ಉಳಿದ ವಾರ್ಡ್ಗಳಲ್ಲಿ ಕೋಟಿ ರೂಗಳ ಅನುದಾನ ಮಂಜೂರುಗೊಂಡಿದ್ದು ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಗುದ್ದಲಿ ಪೂಜೆ ನೆರವೇರಿಸಲಾಗುವುದು ಹಾಗೂ ಬಿಜೆಪಿ ಆಡಳಿತವಿರುವ ಗ್ರಾಮ ಪಂಚಾಯತ್ ಈ ಭಾಗದ ಜನರ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿತ್ತಿದ್ದು ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದ್ದು. ಹಾಗೂ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಪಡುಬಿದ್ರಿ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷೆ ಯಶೋದ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಮಹೇಂದ್ರ ಪೂಜಾರಿ, ವಿನಾಯಕ್ ಪುತ್ರನ್ , ಅಶೋಕ್ ಪೂಜಾರಿ ಹಾಗೂ ಸ್ಥಳೀಯರು, ಕಾರ್ಯಕರ್ತರು, ಮತ್ತಿತರರು ಉಪಸ್ಥಿತರಿದ್ದರು.
ಘರ್ ಘರ್ ತಿರಂಗಾ - ತಿರಂಗಾ ಸೆಲ್ಫಿ : ರಾಘವೇಂದ್ರ ಪ್ರಭು ಕವಾ೯ಲುಗೆ ಪ್ರಥಮ ಬಹುಮಾನ
Posted On: 11 Sep 2022, 02:22 PM
ಉಡುಪಿ : ಇಂಡಿಯಾ ಬುಕ್ ಆಫ್ ವಲ್ಡ್೯ ರೆಕಾಡ್೯ ಸಂಸ್ಥೆ ಮತ್ತು ಆಯುಷ್ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಘರ್ ಘರ್ ತಿರಂಗಾ ಕುರಿತು ನಡೆದ ತಿರಂಗಾ ಸೆಲ್ಫಿ ಸ್ಪಧೆ೯ಯಲ್ಲಿ ಕ.ಸಾ.ಪ ತಾಲೂಕು ಸಂ.ಕಾಯ೯ದಶಿ೯ ರಾಘವೇಂದ್ರ ಪ್ರಭು,ಕವಾ೯ಲು ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ನಂದಿಕೂರಿನ ಮಹಿಳೆಗೆ ವೀಲ್ ಚೇರ್ ಹಸ್ತಾಂತರ
Posted On: 11 Sep 2022, 01:52 PM
ಪಲಿಮಾರು : ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಪಲಿಮಾರು ಇದರ ನೇತೃತ್ವದಲ್ಲಿ ನಂದಿಕೂರಿನ ಕಲ್ಯಾಣಿ ಪೂಜಾರ್ತಿಯವರಿಗೆ ವೀಲ್ ಚೇರ್ ಹಸ್ತಾಂತರಿಸಲಾಯಿತು. ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಇವರ ಮನವಿ ಮೇರೆಗೆ ಬೆಂಗಳೂರಿನ ಉದ್ಯಮಿ ಗಣೇಶ್ ಗುಜರನ್ ಪಡುಬಿದ್ರಿ ಕೂಡಲೇ ಸ್ಪಂದಿಸಿ ವೀಲ್ ಚೇರ್ ಕೊಡುಗೆ ನೀಡಿದ್ದರು. ಈ ಸಂದರ್ಭ ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಅಧ್ಯಕ್ಷರಾದ ಹರೀಶ್ ಪೂಜಾರಿ, ಸದಸ್ಯರಾದ ಪ್ರಕಾಶ್ ಪೂಜಾರಿ, ಉದ್ಯಮಿ ಗಣೇಶ್ ಗುಜರನ್ ಪಡುಬಿದ್ರಿ ಮತ್ತಿತರರು ಉಪಸ್ಥಿತರಿದ್ದರು.
ಪಂಚ ಪವಿತ್ರ ಗಿಡ ವಿತರಣಾ ಅಭಿಯಾನ
Posted On: 11 Sep 2022, 09:29 AM
ಉಡುಪಿ : ನಮ್ಮ ಹಿರಿಯರು ಗಿಡಗಳ ಮೂಲಕ ಧಾಮಿ೯ಕ ಭಾವನೆಗಳನ್ನು ಮೂಡಿಸಿದರ ಫಲವಾಗಿ ಇಂದು ಹಲವಾರು ಗಿಡ ಮರಗಳು ಉಳಿಯಲು ಕಾರಣವಾಗಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಸೆಪ್ಟೆಂಬರ್ 10 ರಂದು ಭಾರತೀಯ ಜನೌಷಧಿ ಕೇಂದ್ರ ಅಜ್ಜರಕಾಡು ಮತ್ತು ಜಯಂಟ್ಸ್ ಗ್ರೂಫ್ ಆಫ್ ಬ್ರಹ್ಮಾವರ ಇದರ ಆಶ್ರಯದಲ್ಲಿ ನಡೆದ ಧಾಮಿ೯ಕ ಕೇಂದ್ರಗಳು, ದೇವಾಲಯಗಳಿಗೆ ವಿತರಿಸುವ ಪಂಚ ಪವಿತ್ರ ಗಿಡ ವಿತರಣಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದಭ೯ದಲ್ಲಿ ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು, ಕೇಂದ್ರ ಸದಸ್ಯ ದಿನಕರ ಅಮೀನ್, ಲಕ್ಮೀಕಾಂತ್ ಬೆಸ್ಕೂರು, ಅಣ್ಣಯ್ಯದಾಸ್, ಶ್ರೀನಾಥ್ ಕೋಟ, ಇಕ್ಬಾಲ್ ಮನ್ನಾ, ಮುಂತಾದವರು ಉಪಸ್ಥಿತರಿದ್ದರು. ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕುಡೆ ಸ್ವಾಗತಿಸಿದರು. ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು.
ಮಣಿಪಾಲ : ಜೇಸಿ ಸಪ್ತಾಹ - ರಕ್ತದಾನ ಶಿಬಿರ
Posted On: 11 Sep 2022, 09:24 AM
ಮಣಿಪಾಲ : ಕೆ.ಎಂ.ಸಿ ಮಣಿಪಾಲ ರಕ್ತನಿಧಿ ಕೇಂದ್ರ ಮತ್ತು ಜೇಸಿಐ ಕಲ್ಯಾಣಪುರ ಇದರ ವತಿಯಿಂದ ಜೇಸಿ ಸಪ್ತಾಹ ವತಿಯಿಂದ ಸೆಪ್ಟಂಬರ್ 10 ರಂದು ರಕ್ತದಾನ ಶಿಬಿರ ನಡೆಯಿತು. ಈ ಸಂದಭ೯ ರಾಷ್ಟ್ರಮಟ್ಟದಲ್ಲಿ ಉತ್ತಮ ರಕ್ತನಿಧಿ ಕೇಂದ್ರ ಪ್ರಶಸ್ತಿ ಪಡೆದ ಕೇಂದ್ರದ ಮುಖ್ಯಸ್ಥರಾದ ಡಾII ಶಮ್ಮಿ ಶಾಸ್ರಿಯವರನ್ನು ಸನ್ಮಾನಿಸಲಾಯಿತು. ಈ ಸಂದಭ೯ ವಲಯ ನಿದೇ೯ಶಕ ರಾಘವೇಂದ್ರ ಪ್ರಭು ಕವಾ೯ಲು, ಉಮೇಶ್ ಅಮೀನ್ , ಅರುಣ್ ಕುಮಾರ್ , ಅದ್ಯಕ್ಷೆ ಜಯಶ್ರೀ, ಮಿತ್ರ ಕುಮಾರ್, ಚಿತ್ರ ಕುಮಾರ್ , ನಿತ್ಯಾನಂದ ಮತ್ತಿತರರು ಉಪಸ್ಥಿತರಿದ್ದರು.
ಪಡುಬಿದ್ರಿ : ಬ್ರಹ್ಮಶ್ರೀ ನಾರಾಯಣಗುರುವರ್ಯರ ಜನ್ಮದಿನೋತ್ಸವ ಆಚರಣೆ ; ಶೋಭಾಯಾತ್ರೆ ; ವಿದ್ಯಾರ್ಥಿವೇತನ ವಿತರಣೆ
Posted On: 10 Sep 2022, 10:48 PM
ಪಡುಬಿದ್ರಿ : ವಿದ್ಯೆಗೆ ಮಹತ್ವ ನೀಡುವುದರ ಜೊತೆಗೆ ಪ್ರತಿಭೆಗಳನ್ನು ಬೆಳೆಸಬೇಕಾಗಿದೆ. ಹೆತ್ತವರು ಮಕ್ಕಳಿಗೆ ಸಂಸ್ಕೃತಿಯನ್ನು ತಿಳಿಸಬೇಕಿದೆ. ನಾವು ಉತ್ತಮ ಸಂಸ್ಕೃತಿವಂತರಾಗಿ ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕೃತಿಯನ್ನು ತಿಳಿಸುವ ಎಂದು ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಇಲ್ಲಿ ಜರಗಿದ ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮ ದಿನೋತ್ಸವದ ಶೋಭಾಯಾತ್ರೆಯ ನಂತರ ಜರಗಿದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಬಿಲ್ಲವ ಸಮಾಜ ಇಂದು ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದೆ. ಮುಂದೆಯು ನಿಮ್ಮ ಪ್ರಗತಿ ಹೀಗೆಯೇ ಇರಲಿ. ಬ್ರಹ್ಮಶ್ರೀ ನಾರಾಯಣಗುರುಗಳು ಸರ್ವರಿಗೂ ಒಳ್ಳೆಯದು ಮಾಡಲಿ ಎಂದು ಶುಭ ಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಎರ್ಮಾಳು ಮಾತನಾಡಿ ನಾರಾಯಣಗುರುಗಳ ಆದರ್ಶವನ್ನು ಪಾಲಿಸುವ. ಅವರು ಸಮಸ್ತ ಹಿಂದುಳಿದ ವರ್ಗದ ಗುರುಗಳು. ಅವರ ತತ್ವಗಳನ್ನು ಜೀವನದಲ್ಲಿಯೂ ಅಳವಡಿಸುವ. ಇಂತಹ ಆಚರಣೆಗಳ ಮೂಲಕ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯ ಎಂದರು. ವಿದ್ಯಾರ್ಥಿವೇತನ, ಬಹುಮಾನ ವಿತರಣೆ, ಸನ್ಮಾನ : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಪ್ರಸ್ತುತ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ಸಂಘದ ವ್ಯಾಪ್ತಿಯ ಸಮಾಜ ಬಾಂಧವರಿಗಾಗಿ ಜರಗಿದ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರು ಮೂರ್ತಿ ಮೆರವಣಿಗೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆಯ ಸೇವಾಕರ್ತರಾದ ಸುಧೀರ್ ಎಸ್ ಕಲ್ಮಾಡಿ ಮತ್ತು ಗೀತಾ ದಂಪತಿಗಳನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ವಹಿಸಿದ್ದರು. ಬಿಲ್ಲವ ಸಂಘದ ಕಾರ್ಯದರ್ಶಿ ಲಕ್ಷಣ್ ಡಿ ಪೂಜಾರಿ, ಸೇವಾದಳದ ದಳಪತಿ ಯೋಗೀಶ್ ಪೂಜಾರಿ ಮಾದುಮನೆ, ಮಹಿಳಾ ವಿಭಾಗದ ಅಧ್ಯಕ್ಷರಾದ ಸುಚರಿತ ಎಲ್ ಅಮೀನ್, ಬಿಲ್ಲವ ಸಂಘ, ಮಹಿಳಾ ವಿಭಾಗ, ಬ್ರಹ್ಮಶ್ರೀ ನಾರಾಯಣಗುರು ಸೇವಾದಳದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಸ್ವಾಗತಿಸಿದರು. ಸುಜಿತ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಕಾರ್ಯದರ್ಶಿ ಲಕ್ಷ್ಮಣ ಡಿ ಪೂಜಾರಿ ವಂದಿಸಿದರು. ನಾರಾಯಣಗುರುಗಳ ಜನ್ಮದಿನೋತ್ಸವದ ಪ್ರಯುಕ್ತ ಬೆಳಗ್ಗೆ ಪೂಜಾ ಕೈಂಕರ್ಯ ಮತ್ತು ಬಿಲ್ಲವ ಸಂಘದ ಮಹಿಳಾ ವಿಭಾಗದವರಿಂದ ಭಜನಾ ಸೇವೆಯು ಜರಗಿತು. ಸಂಜೆ ಶೋಭಾಯಾತ್ರೆ, ಮಹಾಪೂಜೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.
ಕಾಪು : ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ
Posted On: 10 Sep 2022, 11:46 AM
ಕಾಪು : ಇಲ್ಲಿನ ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 168 ನೇ ಜಯಂತಿಯನ್ನು ಆಚರಿಸಲಾಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭ ಕಾಪು ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ಕಾಪು ಪುರಸಭಾ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಕಾಪು ಬಿಲ್ಲವರ ಸಹಾಯಕ ಸಂಘದ ಮಾಜಿ ಅಧ್ಯಕ್ಷ ಮಾಧವ ಆರ್ ಪಾಲನ್, ಮೂಳೂರು ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರಕಾಶ್ ಪೂಜಾರಿ, ಮೋಹನ್ ಕಲ್ಯಾ, ಮೂಳೂರು ಬಿಲ್ಲವ ಸಂಘದ ಸದಸ್ಯರು, ಕಾಪು ತಾಲೂಕು ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
