Updated News From Kaup

ಉಡುಪಿ ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಂದು ಯೋಗಾಥಾನ್ ಕಾರ್ಯಕ್ರಮ

Thumbnail
Posted On: 09 Sep 2022, 11:06 PM

ಉಡುಪಿ : ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಂದು 15000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸೂಚಿಸಿದರು. ಅವರು ಇಂದು ಉಡುಪಿ ತಾಲೂಕು ಕಚೇರಿ ಸಭಾಂಗಣದಲ್ಲಿ, ಯೋಗಾಥಾನ್ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರವು ಈಗಾಗಲೇ ಯೋಗವನ್ನು ಶಾಲಾ ಮತ್ತು ಕಾಲೇಜು ಶಿಕ್ಷಣದಲ್ಲಿ ಪಠ್ಯವನ್ನಾಗಿ ಸೇರ್ಪಡೆ ಮಾಡಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆಪ್ಟಂಬರ್ 17 ರಂದು ಏಕಕಾಲದಲ್ಲಿ 5 ಲಕ್ಷ ಜನರಿಂದ ಯೋಗಾಸನವನ್ನು ಆಯೋಜಿಸಿದ್ದು, ಉಡುಪಿ ಜಿಲ್ಲೆಯಿಂದ 15000 ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರಿ ನೀಡಲಾಗಿದೆ ಎಂದರು. ಮಣಿಪಾಲದ ಮಾಹೆ ಕ್ರೀಡಾಂಗಣದಲ್ಲಿ ಯೋಗಾಥಾನ್ ಆಯೋಜಿಸಲು ಈಗಾಗಲೇ ಸ್ಥಳ ನಿಗದಿಪಡಿಸಿದ್ದು, ಜಿಲ್ಲೆಯ 20 ಪ್ರೌಢಶಾಲೆ, 14 ಪದವಿ ಪೂರ್ವ ಕಾಲೇಜು, 11 ಪದವಿ ಕಾಲೇಜು, 5 ಐಟಿಐ, 5 ಪ್ಯಾರಾ ಮೆಡಿಕಲ್ ಕಾಲೇಜುಗಳಿಂದ ಕನಿಷ್ಠ 300 ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆತರಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಶಾಲಾ-ಕಾಲೇಜುಗಳ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ 45 ನಿಮಿಷಗಳ ಕಾಲ ವಿವಿಧ ಯೋಗಾಸನಗಳ ಪ್ರದರ್ಶನ ನಡೆಯಲಿದ್ದು, 150 ಕ್ಕೂ ಹೆಚ್ಚು ಯೋಗ ಶಿಕ್ಷಕರು ಶಾಲಾ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಯೋಗಾಸನಗಳ ತರಬೇತಿ ನೀಡಲಿದ್ದು, ಯೋಗಾಥಾನ್ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳನ್ನು ಆನ್ಲೈನ್ನಲ್ಲಿ ನೊಂದಣಿ ಮಾಡುವಂತೆ ತಿಳಿಸಿದ ಅಪರ ಜಿಲ್ಲಾಧಿಕಾರಿಗಳು, ಎಲ್ಲಾ ಸರ್ಕಾರಿ ಕಚೇರಿಗಳ ಸಿಬ್ಬಂದಿಗಳು ಹಾಗೂ ಶಿಕ್ಷಕರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸೂಚಿಸಿದರು. ಸಭೆಯಲ್ಲಿ ಉಡುಪಿ ತಹಸೀಲ್ದಾರ್ ಶ್ರೀನಿವಾಸ ಮೂರ್ತಿ, ಡಿಡಿಪಿಐ ಶಿವರಾಜ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ, ಲೀಡ್ ಕಾಲೇಜು ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ ಹಾಗೂ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

ಸೆಪ್ಟೆಂಬರ್ 11 : ರೋಟರಿ ಸಮುದಾಯ ದಳ ಇನ್ನಂಜೆ - ಪದಪ್ರಧಾನ ಸಮಾರಂಭ

Thumbnail
Posted On: 09 Sep 2022, 10:51 PM

ಇನ್ನಂಜೆ : ರೋಟರಿ ಸಮುದಾಯ ದಳ ಇನ್ನಂಜೆ ಮಾತೃಸಂಸ್ಥೆ ರೋಟರಿ ಕ್ಲಬ್ ಶಂಕರಪುರ (ವಲಯ - 5 ರೋಟರಿ ಜಿಲ್ಲೆ 3182) ಇದರ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಸೆಪ್ಟೆಂಬರ್ 11, ಆದಿತ್ಯವಾರ ಸಂಜೆ 6.30ಕ್ಕೆ ಇನ್ನಂಜೆಯ ದಾಸ ಭವನದಲ್ಲಿ ಜರಗಲಿದೆ. ರೋಟರಿ ಕ್ಲಬ್, ಶಂಕರಪುರ ಅಧ್ಯಕ್ಷರಾದ ಗ್ಲ್ಯಾಡ್ಸನ್ ಕುಂದರ್ ಪದಪ್ರದಾನ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ‌ ಇನ್ನಂಜೆ ಸಿ.ಎ. ಬ್ಯಾಂಕ್‌ ಅಧ್ಯಕ್ಷರಾದ ರಾಜೇಶ್ ರಾವ್‌, ಆರ್.ಸಿ.ಸಿ. ಜಿಲ್ಲಾ ಪ್ರತಿನಿಧಿ ರೊ. ಜಿ. 3182 ನಾಗರಾಜ್ ಎಂ., ಝೋನಲ್ ಕೋ-ಆರ್ಡಿನೇಟರ್ ರೋನ್ - 5 ಗುರುರಾಜ್ ಭಟ್, ರೋಟರಿ ಶಂಕರಪುರ ಪೂರ್ವಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್, ರೋಟರಿ ಶಂಕರಪುರ ಪೂರ್ವ ಕಾರ್ಯದರ್ಶಿ ಜೆರಾಮ್ ರೊಡ್ರಿಗೆಸ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿರ್ವ : ಆರೋಗ್ಯ ಮಾತಾ ದೇವಾಲಯದಲ್ಲಿ ಮೊಂತಿ ಫೆಸ್ಟ್ ಆಚರಣೆ

Thumbnail
Posted On: 09 Sep 2022, 06:58 PM

ಶಿರ್ವ : ಉಡುಪಿ ಪ್ರಾಂತ್ಯದಲ್ಲಿಯೇ ಅತಿ ದೊಡ್ಡದಾದ ಚರ್ಚ್ ಎಂಬ ಹೆಗ್ಗಳಿಕೆಯ ಶಿರ್ವ ಆರೋಗ್ಯ ಮಾತ ದೇವಾಲಯದಲ್ಲಿ ಗುರುವಾರ ಕನ್ಯಾಮರಿಯಮ್ಮನ ಜನ್ಮದಿನ ಮೋಂತಿ ಪೇಸ್ಟ್ ಅನ್ನು ಕ್ರೈಸ್ತ ಬಾಂಧವರು ಭಯ ಭಕ್ತಿಯಿಂದ ಆಚರಿಸಿದರು. ಪುಟ್ಟ ಮಕ್ಕಳು ಕನ್ಯಾಮರಿಯಮ್ಮನ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಆಯಾ ಗ್ರಾಮದ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್ನು ಮೆರವಣಿಗೆಯಲ್ಲಿ ಚರ್ಚು ಒಳಗೆ ಕೊಂಡೊಯ್ದು ಬಳಿಕ ಪವಿತ್ರ ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು. ಪವಿತ್ರ ಬಲಿ ಪೂಜೆಯ ಬಳಿಕ ಪ್ರತಿ ಕುಟುಂಬಕ್ಕೆ ತೆನೆ, ಕಬ್ಬು ಹಾಗೂ ಸಿಹಿ ತಿಂಡಿ ವಿತರಿಸಲಾಯಿತು. ಈ ಸಂದರ್ಭ ಪ್ರಧಾನ ಗುರುಗಳಾದ ರೆ. ಫಾ ಡಾ. ಲೆಸ್ಲಿ ಡಿಸೋಜಾ ರವರು ಬಲಿ ಪೂಜೆ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭ ಫಾದರ್ ರೋಲ್ವಿನ್ ಅರ್ಹಾನಾ, ಫಾದರ್ ನೆಲ್ಸನ್ ಪೆರಿಸ್, ಡೆಕೋನ್ ಜಾನ್ಸನ್ ಪಿಂಟೊ, ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ೧೫೦೦ ಅಧಿಕ ಕ್ರೈಸ್ತ ಬಾಂಧವರು ಹಬ್ಬ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

ಮೂಳೂರಿನಲ್ಲಿ ಪಾದಾಚಾರಿಗೆ ಸ್ಕೂಟಿ ಡಿಕ್ಕಿ ; ಸ್ಕೂಟಿ ಸವಾರ ಸಾವು, ಪಾದಚಾರಿಗೆ ಗಾಯ

Thumbnail
Posted On: 09 Sep 2022, 06:54 PM

ಕಾಪು : ಮಲ್ಪೆಯಿಂದ ಮೀನಿನ ಕೆಲಸ ಮುಗಿಸಿ ಸ್ಕೂಟಿಯಲ್ಲಿ ಬರುತ್ತಿದ್ದಾಗ ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಯೋರ್ವರು ಅಡ್ಡ ಬಂದ ಪರಿಣಾಮ, ಸ್ಕೂಟಿ ರಸ್ತೆಗೆ ಬಿದ್ದು, ಸವಾರ ಮೃತ ಪಟ್ಟು, ಪಾದಾಚಾರಿಯ ಕಾಲು ಮುರಿತ ಗೊಂಡ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೃತ ಸುರೇಶ್ ರವರು ತನ್ನ ಸಹೋದ್ಯೋಗಿ ಹರೀಶ್ ರವರೊಂದಿಗೆ ಮಲ್ಪೆಯಿಂದ ಮೀನಿನ ಕೆಲಸ ಮುಗಿಸಿ ಉಚ್ಚಿಲದ ತಮ್ಮ ಮನೆಗೆ ಬರುತ್ತಿದ್ದಾಗ ಪಾದಚಾರಿ ಈರಯ್ಯ ಎಂಬವರಿಗೆ ಸ್ಕೂಟಿ ಡಿಕ್ಕಿ ಹೊಡೆದಿದೆ. ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸುರೇಶ್ ವೃತ್ತಪಟ್ಟಿದ್ದಾರೆ. ಹರೀಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ ಪಾದಾಚಾರಿ ಈರಯ್ಯನವರ ಕಾಲು ಮುರಿತಗೊಂಡಿದೆ. ಕಾಪು ಪೊಲೀಸ್ ಠಾಣಾಧಿಕಾರಿ ಶ್ರೀಶೈಲ ಮುರುಗೋಡ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು : ಶ್ರೀ ವೆಂಕಟರಮಣ ದೇವಸ್ಥಾನಲ್ಲಿ ಅನಂತ ಚತುರ್ದಶಿ ವಿಜ್ರಂಭಣೆಯಿಂದ ಆಚರಣೆ

Thumbnail
Posted On: 09 Sep 2022, 06:49 PM

ಕಾಪು : ಶ್ರೀ ವೆಂಕಟರಮಣ ದೇವಸ್ಥಾನಲ್ಲಿ ಅನಂತ ಚತುರ್ದಶಿ ಉತ್ಸವವನ್ನು ಶುಕ್ರವಾರ ವಿಜ್ರಂಭಣೆಯಿಂದ ಆಚರಿಸಲಾಯಿತು. ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ದಶಿ ದಿನವನ್ನು ಅನಂತ ಚತುರ್ದಶಿ ಎಂದು ಕರೆಯಲಾಗುತ್ತದೆ. ಭಗವಾನ್ ವಿಷ್ಣುವಿನ ಶಾಶ್ವತ ರೂಪವನ್ನು ಪೂಜಿಸಲು ಈ ದಿನ ಅತ್ಯಂತ ಪ್ರಮುಖ ದಿನವೆಂದು ಪರಿಗಣಿಸಲಾಗಿದೆ. ವಿಷ್ಣುವಿನ ಭಕ್ತರು ಇಂದು ಇಡೀ ದಿನ ಉಪವಾಸ ಮಾಡುತ್ತಾರೆ ಮತ್ತು ಪೂಜೆಯ ಸಮಯದಲ್ಲಿ ಪವಿತ್ರ ದಾರವನ್ನು ಕೈಗೆ ಕಟ್ಟಿಕೊಳ್ಳುತ್ತಾರೆ. ಈ ಉಪವಾಸವನ್ನು ಆಚರಿಸುವ ಮೂಲಕ, ಒಬ್ಬ ವ್ಯಕ್ತಿಯು ಅನೇಕ ಪಟ್ಟು ಹೆಚ್ಚು ಶುಭ ಫಲಿತಾಂಶಗಳನ್ನು ಪಡೆಯುತ್ತಾನೆ ಎಂದು ಹೇಳಲಾಗುತ್ತದೆ. ಅನಂತ ಚತುರ್ದಶಿ ಹಬ್ಬವು ಗಣೇಶ ಚತುರ್ಥಿಯ ಅಂತ್ಯವನ್ನು ಸೂಚಿಸುತ್ತದೆ. ಈ ದಿನವೇ ಗಣೇಶ ವಿಸರ್ಜನೆಯನ್ನು ಮಾಡಲಾಗುತ್ತದೆ. ನೂರಾರು ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಇದೇ ಸಂದರ್ಭ ರಂಗಪೂಜೆಯೂ ನಡೆಯಿತು.

ಕಾಪು : ವಿವಿಧ ಬೇಡಿಕೆಗಳ ಬಗ್ಗೆ ಶಾಸಕರಿಗೆ ಮನವಿ ಸಲ್ಲಿಸಿದ ಟೈಲರ್ಸ್ ಅಸೋಸಿಯೇಷನ್

Thumbnail
Posted On: 09 Sep 2022, 06:29 PM

ಕಾಪು : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ಸೆಪ್ಟೆಂಬರ್ 9ರಂದು ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರ ಮನೆಗೆ ಭೇಟಿ ನೀಡಿ ಟೈಲರ್ಸ್ ಗಳ ಬೇಡಿಕೆಗಳನ್ನು ಮನವಿ ಮೂಲಕ ನೀಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಬಿ ಕೆ ಶ್ರೀನಿವಾಸ್ ಹಾಗೂ ಉಪಾಧ್ಯಕ್ಷರಾದ ರಮಾನಂದ್ ಅತ್ತೂರ್ ಹಾಗೂ ಕೋಶಾಧಿಕಾರಿ ಸುರೇಶ ಶೆಟ್ಟಿಗಾರ್ ಹಾಗೂ ಸಹ ಕಾರ್ಯದರ್ಶಿ ನಾರಾಯಣ ಅಂಚನ್ ಹಾಗೂ ಕಾಪು ವಲಯ ಸಮಿತಿಯ ಅಧ್ಯಕ್ಷರಾದ ಸುರೇಖಾ ಶೈಲೇಶ್ ಹಾಗೂ ಬೆಳ್ಮಣ್ ವಲಯದ ಅಧ್ಯಕ್ಷರಾದ ಪ್ರಕಾಶ್ ಸಾಲ್ಯಾನ್ ಹಾಗೂ ಕ್ಷೇತ್ರದ ಮಾಜಿ ಅಧ್ಯಕ್ಷರು ಆನಂದ್ ಪುತ್ರನ್ ಹಾಗೂ 5 ವಲಯದ ಸದಸ್ಯರುಗಳು ಉಪಸ್ಥಿತರಿದ್ದರು.

ಬಂಟಕಲ್ಲು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕದಿರು ಹಬ್ಬ

Thumbnail
Posted On: 09 Sep 2022, 10:32 AM

ಬಂಟಕಲ್ಲು : ಅನಂತ ಚತುರ್ದಶಿಯ ಪುಣ್ಯದಿನವಾದ ಇಂದು ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕದಿರು ಹಬ್ಬವನ್ನು ಆಚರಿಸಲಾಯಿತು . ಶಿರ್ವ ಅನಂತರಾಯ ಶೆಣೈರವರ ಗದ್ದೆಯಿಂದ ಕದಿರನ್ನು ತೆಗೆದು ಬಂಟಕಲ್ಲು ದೇವಳದ ಅರ್ಚಕರಾದ ವೇದಮೂರ್ತಿ ಸಂದೇಶ್ ಭಟ್ ರವರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಿಸಿ ಬಂಟಕಲ್ಲು ದೇವಸ್ಥಾನಕ್ಕೆ ಕದಿರನ್ನು ಶೋಭಾಯಾತ್ರೆಯಮೂಲಕ ತರಲಾಯಿತು. ದೇವಸ್ಥಾನದಲ್ಲಿ ಕದಿರು ಪೂಜೆಯನ್ನು ನೆರವೇರಿಸಿ ಭಕ್ತಾಧಿಗಳಗೆ ಕದಿರನ್ನು ವಿತರಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿಯ ಆಡಳಿತ ಮೊಕ್ತೇಸರರಾದ ಶಶಿಧರ ವಾಗ್ಲೆ, ಅಧ್ಯಕ್ಷರಾದ ಜಯರಾಮ ಪ್ರಭು ಉಪಾಧ್ಯಕ್ಷರಾರ ಉಮೇಶ್ ಪ್ರಭು, ಆಡಳಿತ ಮಂಡಳಿಯ ಸುರೇಂದ್ರ ನಾಯಕ್, ಸಂತೋಷ್ ನಾಯಕ್, ರಾ ಸಾ ಯುವ ವೃಂದದ ಗೌರವಾಧ್ಯಕ್ಷ ಕೆ.ಆರ್ ಪಾಟ್ಕರ್, ಕಾರ್ಯದರ್ಶಿ ಅನಂತರಾಮ ವಾಗ್ಲೆ, ದೇವಸ್ಥಾನದ ಕಛೇರಿ ವ್ಯವಸ್ಥಾಪಕ ಕೃಷ್ಣಮೂರ್ತಿ ಪಾಟ್ಕರ್, ಅರ್ಚಕ ಸುಧೀಂದ್ರ ಭಟ್, ನರೇಶ್ ಭಟ್, ನಿವೃತ್ತ ಶಿಕ್ಷಕ ಪುಂಡಲೀಕ ಮರಾಠೆ, ವಿರೇಂದ್ರ ಪಾಟ್ಕರ್, ಯೋಗಿಶ್ ಸಾಲ್ವಣ್ಕರ್,ರವೀಂದ್ರ ನಾಯಕ್, ಅಚ್ಚುತ ನಾಯಕ್, ದಯಾನಂದ ಪಾಟ್ಕರ್ ಮುಂತಾದವರು ಉಪಸ್ಥಿತರಿದ್ದರು.

ಕ್ರಿಯೇಟಿವ್‌ ಕಾಲೇಜಿನ ಪ್ರಥಮ ವರ್ಷದ ನೀಟ್‌ ಫಲಿತಾಂಶದಲ್ಲಿಯೇ ವಿದ್ಯಾರ್ಥಿಗಳ ಅಮೋಘ ಸಾಧನೆ

Thumbnail
Posted On: 08 Sep 2022, 06:08 PM

ಕಾರ್ಕಳ : ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ನೀಟ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿ ಯು ಕಾಲೇಜಿನ ವಿದ್ಯಾರ್ಥಿಗಳಾದ ರಾಘವೇಂದ್ರ ತಾಳಿಕೋಟಿ (646), ಸಾತ್ವಿಕ್‌ ಶ್ರೀಕಾಂತ್‌ ಹೆಗಡೆ (641), ಸೋಹನ್‌ ಎಸ್‌ ನೀಲಕರಿ (598), ಸುದೀಪ್‌ ಅಸಂಗಿಹಾಲ್‌ (552), ಹಾಸನದ ವಿಕಾಸ್‌ ಗೌಡ ಎಂ (608) ಅಂಕಗಳನ್ನು ಗಳಿಸಿದ್ದಾರೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ನಿರ್ಮಿಸಿರುವ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ನಿರಂತರವಾಗಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ತರಬೇತಿ ನಡೆಯುತ್ತಿದೆ. ಕಾಲೇಜಿನ ಪ್ರಥಮ ವರ್ಷದ ನೀಟ್‌ ಫಲಿತಾಂಶದಲ್ಲಿಯೇ ಪರೀಕ್ಷೆಗೆ ಕುಳಿತ 88 ವಿದ್ಯಾರ್ಥಿಗಳಲ್ಲಿ 76 ವಿದ್ಯಾರ್ಥಿಗಳು ಅರ್ಹತೆಗಳಿಸಿದ್ದು, 23 ವಿದ್ಯಾರ್ಥಿಗಳು 400 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ಈ ಮೊದಲು ಪ್ರಕಟಗೊಂಡ JEE, CET, RIE, NDA, NATA, C.A ಮತ್ತು C.S.E.E.T, ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆ ದಾಖಲಿಸಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ನೀಟ್‌ ಸಂಯೋಜಕರಾದ ಲೋಹಿತ್‌ ಎಸ್‌ ಕೆ, ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಪೆರ್ಡೂರು ಕುಲಾಲ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಹಿರಿಯಡ್ಕ ಆಯ್ಕೆ

Thumbnail
Posted On: 08 Sep 2022, 06:01 PM

ಕಾಪು : ಕುಲಾಲ ಸಂಘ (ರಿ.) ಪೆರ್ಡೂರು ಇದರ 2022-2023 ನೇ ಸಾಲಿನ ಅವಧಿಗೆ ನೂತನ ಅಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಹಿರಿಯಡ್ಕ ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾಗಿ ರಾಮ ಕುಲಾಲ್ ಪಕ್ಕಾಲು ಮತ್ತು ಐತು ಕುಲಾಲ್ ಕನ್ಯಾನ ಉಪಾಧ್ಯಕ್ಷರಾಗಿ ಕಾಳು ಕುಲಾಲ್ ಪೆರ್ಡೂರು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕುಲಾಲ್ ಹಂದಿಬೆಟ್ಟು, ಜೊತೆ ಕಾರ್ಯದರ್ಶಿಯಾಗಿ ಗಣೇಶ್ ಕುಲಾಲ್ ಪಕ್ಕಾಲು. ಕೋಶಾಧಿಕಾರಿಯಾಗಿ ಯೋಗೀಶ್ ಕುಲಾಲ್ ಬೋರುಗುಡ್ಡೆ, ಸಂಘಟನಾ ಕಾರ್ಯದರ್ಶಿಯಾಗಿ ಕೃಷ್ಣ ಕುಲಾಲ್ ಕುಂಟಲ್ ಕಟ್ಟೆ ಹಾಗೂ ಸಹ ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಕುಕ್ಕೆಹಳ್ಳಿ ಅವರು ನೇಮಕಗೊಂಡಿದ್ದಾರೆ.

ಅಂತರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ಪ್ರಣಿತ್ .ಪಿ ಕೋಟ್ಯಾನ್ ಗೆ ಎರಡು ಪದಕ

Thumbnail
Posted On: 08 Sep 2022, 05:51 PM

ಕಾಪು : ಶಿವಮೊಗ್ಗ ಜಿಲ್ಲೆಯಲ್ಲಿ ಅಗಸ್ಟ್ 20 ಮತ್ತು 21ರಂದು ನಡೆದ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧಾಕೂಟದಲ್ಲಿ ವಿದ್ಯಾವರ್ಧಕ ಸೆಂಟ್ರಲ್ ಸ್ಕೂಲ್ ಶಿರ್ವ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಪ್ರಣಿತ್ ಪಿ ಕೋಟ್ಯಾನ್ ಕುಮಿಟೆಯಲ್ಲಿ ಚಿನ್ನದ ಪದಕ ಮತ್ತು ಕಟದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ. ಇವರು ಪ್ರತಿಷ್ಠಿತ ಬುಡಾಕನ್ ಕರಾಟೆ ಹಾಗೂ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯ ಮುಖ್ಯ ಶಿಕ್ಷಕರಾದ ರೆಂಷಿ ವಾಮನ್ ಪಾಲನ್ ಹಾಗೂ ಶಿಕ್ಷಕಿ ಮೇಘ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಉಚ್ಚಿಲ ನಿವಾಸಿಯಾದ ಪ್ರದೀಪ್ ಎಸ್. ಕೋಟ್ಯಾನ್ ಮತ್ತು ಪ್ರೀತಿ ಪ್ರದೀಪ್ ಕೋಟ್ಯಾನ್ ರವರ ಪುತ್ರನಾಗಿದ್ದಾರೆ.