Updated News From Kaup

ಉಡುಪಿ : ಕರ್ನಾಟಕ ಯುವ ಕಾಂಗ್ರೆಸ್ ವತಿಯಿಂದ ಉದ್ಯೋಗ ಸೃಷ್ಟಿ ಆ್ಯಪ್ ಬಗ್ಗೆ ಮಾಹಿತಿ

Posted On: 17-07-2022 11:34PM

ಉಡುಪಿ :ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಾಲ್ಪಡ್ ರವರ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಯೂಥ್ ಜೋಡೋ ಬೂತ್ ಜೋಡೋ ಎನ್ನುವ ಕಾರ್ಯಕ್ರಮ ಹಾಗೂ ಉದ್ಯೋಗ ಸೃಷ್ಟಿ ಎನ್ನುವ ಆ್ಯಪ್ ಬಿಡುಗಡೆ ಮಾಡಿದ್ದೇವೆ.

ಈ ಒಂದು ಆ್ಯಪ್ ನಲ್ಲಿ ಉಡುಪಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬ್ಲಾಕ್‌ಗಳಲ್ಲಿ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನಿರುದ್ಯೋಗಿಗಳ ಸರ್ವೇಯನ್ನು ಮಾಡುತ್ತಿದ್ದೇವೆ. ಇದರಿಂದ ಉಡುಪಿ ಜಿಲ್ಲೆಯಲ್ಲಿ ಎಷ್ಟು ನಿರುದ್ಯೋಗಿಗಳಿದ್ದಾರೆ ಎನ್ನುವ ಸಂಖ್ಯೆಯನ್ನು ಹುಡುಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಉದ್ಯೋಗ ಸೃಷ್ಟಿಯ ಬಗ್ಗೆ ವಿವರ ನೀಡಿ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಾವು ಯಾವ ರೀತಿ ಉದ್ಯೋಗ ಸೃಷ್ಟಿ ಮಾಡುವ ಯೋಜನೆಯನ್ನು ಹಾಕಿಕೊಳ್ಳಬೇಕು ಎಂದು ನಮ್ಮ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಯೋಜಕ ತೇಜಸ್ವಿ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ನವೀನ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ,ಕಾಪು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಝ್, ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

ಮಲ್ಪೆ ಪಡುಕೆರೆ : ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ

Posted On: 17-07-2022 11:11PM

ಉಡುಪಿ : ಭಾರತೀಯ ಜನತಾಪಾರ್ಟಿ, ಉಡುಪಿ ನಗರ ಇವರ ಆಶ್ರಯದಲ್ಲಿ ಶ್ರೀದೇವಿ ಅಂಜನೇಯ ಫ್ರೆಂಡ್ಸ್ (ರಿ.) ಕಿದಿಯೂರು ಪಡುಕೆರೆ, ಶ್ರೀ ಬಾಲಾಂಜನೇಯ ಪೂಜಾ ಮಂದಿರ, ಕಿದಿಯೂರು ಪಡುಕೆರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಇವರ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ 8 ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಸೇವೆ ಬಡವರ ಕಲ್ಯಾಣ, ಸುಶಾಸನ ಕಾರ್ಯಕ್ರಮದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ಮಲ್ಪೆ ಪಡುಕೆರೆ ಶ್ರೀ ದೇವಿ ಆಂಜನೇಯ ವಠಾರದಲ್ಲಿ ಜರಗಿತು.

ಈ ಸಂದರ್ಭ ಗಣ್ಯರು, ಪಕ್ಷದ ಪ್ರಮುಖರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಟಪಾಡಿ : ಮಟ್ಟು ಬ್ರಿಡ್ಜ್ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

Posted On: 17-07-2022 01:20PM

ಕಾಪು ತಾಲೂಕಿನ ಕಟಪಾಡಿಯ ಮಟ್ಟು ಬ್ರಿಡ್ಜ್ ಬಳಿ ಸುಮಾರು 50 ರಿಂದ 55 ವರ್ಷ ಪ್ರಾಯದ ವ್ಯಕ್ತಿಯ ಅಪರಿಚಿತ ಶವವೊಂದು ಕೊಳೆತ ರೀತಿಯಲ್ಲಿ ಪತ್ತೆಯಾಗಿದ್ದು, ಈ ಶವವು ಬೆಳಿಗ್ಗೆ ಸುಮಾರು 10.30 ರ ವೇಳೆಗೆ ಪಾಂಗಾಳ ಭಾಗದಲ್ಲಿ ಕಟಪಾಡಿ ಕಡೆಗೆ ತೇಲಿಕೊಂಡು ಹೋಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಕಟಪಾಡಿ ಬ್ರಿಡ್ಜ್ ಬಳಿ ಹೊಂದಿಕೊಂಡು ಪತ್ತೆಯಾದ ಈ ಅಪರಿಚಿತ ಶವವನ್ನು ಸೂರಿ ಶೆಟ್ಟಿ ಕಾಪು ನೇತೃತ್ವದಲ್ಲಿ ಮೇಲಕ್ಕೆ ಎತ್ತಿ, ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಕಾಪು ಠಾಣಾಧಿಕಾರಿ ಶ್ರೀಶೈಲಂ ಮುರಗೋಡು ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ : ವಿಪರೀತ ಮದ್ಯಪಾನದ ಚಟದಿಂದ ವ್ಯಕ್ತಿಯೋರ್ವ ನಿಧನ

Posted On: 17-07-2022 12:27PM

ಉಡುಪಿ : ಮಧುಕರ ಸುವರ್ಣ (43)ರವರು ತನ್ನ ತಾಯಿಯೊಂದಿಗೆ ಕುತ್ಪಾಡಿ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂದಿರದ ಬಳಿ ವಾಸ್ತವ್ಯವಿದ್ದು, ವಿಪರೀತ ಮದ್ಯಪಾನ ಮಾಡುವ ಚಟವನ್ನು ಹೊಂದಿದ್ದು, ಜುಲೈ 15ರ ಸಂಜೆ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದವರನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಮಧುಕರ ಸುವರ್ಣರು ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಚೈತನ್ಯ ಕಲಾವಿದರು ಬೈಲೂರು ತಂಡದ ನೂತನ ನಾಟಕದ ಮುಹೂರ್ತ

Posted On: 17-07-2022 12:15PM

ಉಡುಪಿ : ಚೈತನ್ಯ ಕಲಾವಿದರು ಬೈಲೂರು ತಂಡದ 8ನೇ ನಾಟಕ ವಾರ್ಡ್ ನಂಬರ್-2 ಇದರ ಶುಭ ಮುಹೂರ್ತವು ಜು. 15ರಂದು ಬೈಲೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಿತು.

ನೂತನ ಕಲಾ ಕುಸುಮವನ್ನು ಬೆಂಗಳೂರು ತುಳುವರ ಚಾವಡಿ ಅಧ್ಯಕ್ಷ ಡಿ. ಪುರುಷೋತ್ತಮ ಪೂಂಜ ಬಿಡುಗಡೆಗೊಳಿಸಿದರಬೈಲೂರು ಶ್ರೀ ಮಾರಿಯಮ್ಮ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ಭಟ್ ಕೌಡೂರು ಶುಭ ಮುಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಶುಭ ಹಾರೈಸಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುಮಿತ್ ಶೆಟ್ಟಿ, ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗದೀಶ ಪೂಜಾರಿ, ಬೈಲೂರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ, ವಿನಯ ಕುಮಾರ್ ಶೆಟ್ಟಿ, ಪ್ರಸಾದ ಐಸಿರ, ಸಂದೀಪ್ ಮಾಡ, ಆನಂದ ಪೂಜಾರಿ, ಸದಾನಂದ ಸಾಲಿಯಾನ್, ಗುರುರಾಜ್ ಮಾಡ, ಕೃಷ್ಣ ಶೆಟ್ಟಿ, ಸುಬ್ರಹ್ಮಣ್ಯ, ಹರೀಶ್ ಆಚಾರ್ಯ, ಪ್ರಿಯಾ ಪ್ರಸನ್ನ ಶೆಟ್ಟಿ, ಬಲೆ ತೆಲಿಪಾಲೆ ಖ್ಯಾತಿಯ ಪ್ರಶಂಸ ತಂಡದ ಕಲಾವಿದರಾದ ಸಂದೀಪ್ ಶೆಟ್ಟಿ, ಮರ್ವಿನ್ ಶಿರ್ವ, ಶರತ್ ಉಚ್ಚಿಲ, ಸುರೇಶ್ ಸಾಯಿರಾಮ್, ಕಾಪು ರಂಗ ತರಂಗ ತಂಡದ ಸದಸ್ಯರು, ಚೈತನ್ಯ ತಂಡದ ಕಲಾವಿದರು, ಕಲಾಪ್ರೋತ್ಸಾಹಕರು ಉಪಸ್ಥಿತರಿದ್ದರು.

ಕಾಪು : ಲಾರಿ ಚಾಲಕನ ನಿರ್ಲಕ್ಷ್ಯತನದ ಚಾಲನೆ ಕಾರಿಗೆ ಹಾನಿ

Posted On: 17-07-2022 12:11PM

ಕಾಪು : ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಕಾರೊಂದಕ್ಕೆ ಹಾನಿಯಾದ ಘಟನೆ ಜುಲೈ 16ರಂದು ಕಾಪುವಿನಲ್ಲಿ ನಡೆದಿದೆ.

ರೋಹಿತ್ ಆರ್ ಭಟ್ ಇವರು ಕೆಲಸಗಾರರಾದ ಮಂಜುನಾಥರವರೊಂದಿಗೆ ರಾಷ್ಟ್ರೀಯ ಹೆದ್ದಾರಿ-66 ರ ಉಡುಪಿ-ಮಂಗಳೂರು ರಸ್ತೆಯಲ್ಲಿ ಬೆಳಿಗ್ಗೆ ಕಾರನ್ನು ಚಲಾಯಿಸಿಕೊಂಡು ಬರುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ ಕಾಪುವಿನ ಮಹಾವೀರ ಟಾಕೀಸ್ ನ ಎದುರು ರಸ್ತೆಯ ಬಲಗಡೆ ಹೋಗುತ್ತಿರುವಾಗ ಕಾರ್‌ನ ಸಮಾನಾಂತರವಾಗಿ ಎಡಬದಿಯಲ್ಲಿ ಹೋಗುತ್ತಿದ್ದಾಗ ಲಾರಿಯೊಂದರ ಚಾಲಕನು ನಿರ್ಲಕ್ಷ್ಯತನದಿಂದ ಏಕಾಏಕಿಯಾಗಿ ಲಾರಿಯನ್ನು ಬಲಗಡೆ ಚಲಾಯಿಸಿಕೊಂಡು ಬಂದ ಪರಿಣಾಮ ಕಾರ್‌ನ ಎಡಬದಿಗೆ ಲಾರಿಯ ಬಲಬದಿಯ ಚಕ್ರಗಳು ಹಾಗು ಲಾರಿಯ ಬಾಡಿ ತಗುಲಿ, ಕಾರ್‌ನ ಎಡಬದಿಯ ಮುಂದಿನ ಬಂಪರ್, ಎಡಬದಿಯ ಎರಡು ಬಾಗಿಲುಗಳು ಹಾಗು ಬಾಗಿಲಿನ ಹಿಂಭಾಗದ ಬಾಡಿ. ಕಾರಿನ ಬಲಭಾಗದ ಟೈರ್ ಜಖಂಗೊಂಡಿದೆ.

ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾಪು : ಶಿರ್ವದಲ್ಲಿ ಅನಿಯಮಿತ ವಿದ್ಯುತ್ ಕಡಿತ ; ಬಳಕೆದಾರರಿಂದ ಮೆಸ್ಕಾಂ ಕಛೇರಿ ಎದುರು ಬೃಹತ್ ಪ್ರತಿಭಟನೆ

Posted On: 16-07-2022 04:26PM

ಶಿರ್ವ: ಮೆಸ್ಕಾಂ ಇಲಾಖೆಯ ವ್ಯಾಪ್ತಿಯಲ್ಲಿ ೫- ೬ ತಿಂಗಳಿಂದ ನಿರಂತರವಾಗಿ ಅನಿಯಮಿತ, ರಾತ್ರಿ ಹಗಲು ಎನ್ನದೆ ವಿದ್ಯುತ್ ಕಡಿತ, ಶಿರ್ವ ಮೆಸ್ಕಾಂ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯನ್ನು ಪ್ರತಿಭಟಿಸಿ, ಬಳಕೆದಾರರ ಬೃಹತ್ ಪ್ರತಿಭಟನೆ ಶಿರ್ವ ಮೆಸ್ಕಾಂ ಕಛೇರಿ ಎದುರು ಶನಿವಾರ ಬೆಳಿಗ್ಗೆ ನಡೆಯಿತು.

ಈ ಪ್ರತಿಭಟನೆಯ ನೇತೃತ್ವವನ್ನು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮರಾಯ ಪಾಟ್ಕರ್ ವಹಿಸಿದ್ದರು.

ಗ್ರಾಮಸ್ಥರ ಪರವಾಗಿ ಕೆಇಬಿ ಅಧಿಕಾರಿಗಳಾದ ಹರೀಶ್ ಕುಮಾರ್ ಮತ್ತು ಪ್ರಸನ್ನ ಕುಮಾರ್ ರವರಿಗೆ ಮನವಿ ಸಲ್ಲಿಸಲಾಯಿತು.

ಮುಂದಿನ ಹದಿನೈದು ದಿನಗಳಲ್ಲಿ ಸಮಸ್ಯೆ ಪರಿಹರಿಸದಿದ್ದರೆ, ಮತ್ತೆ ಪ್ರತಿಭಟನೆ ನಡೆಸುವುದಾಗಿ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮರಾಯ ಪಾಟ್ಕರ್ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಗ್ರಾಮಸ್ಥರು ಪಕ್ಷ, ಜಾತಿ ಭೇದ ಮರೆತು ಭಾಗವಹಿಸಿದ್ದರು.

ನಟ ಪೃಥ್ವಿ ಅಂಬಾರ್‌ ತಾಯಿ ವಿಧಿವಶ

Posted On: 16-07-2022 01:59PM

ಕಾಪು : ಉದಯೋನ್ಮುಖ ನಟ, ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ಮಂಗಳೂರಿನಲ್ಲಿ ನಡೆಯಲಿದೆ.

ದುರ್ಗಾಪರಮೇಶ್ವರಿ ಮಹಿಳಾ ಸಂಘದಲ್ಲಿ ತೊಡಗಿಸಿಕೊಂಡಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್‌ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ. ಚಿತ್ರಗಳ ಸಕ್ಸಸ್​ನ್ನು ಖುಷಿ ಪಡೋ ಸಮಯದಲ್ಲಿ ನಟ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ.

ಶಿರ್ವ ನಿರಂತರ, ಅನಿಯಮಿತ ವಿದ್ಯುತ್ ಕಡಿತ ನಾಳೆ ಬಳಕೆದಾರರ ಬೃಹತ್ ಪ್ರತಿಭಟನೆ

Posted On: 15-07-2022 11:30PM

ಶಿರ್ವ : ಮೆಸ್ಕಾಂ ಇಲಾಖೆಯ ವ್ಯಾಪ್ತಿಯಲ್ಲಿ 5- 6 ತಿಂಗಳಿಂದ ನಿರಂತರವಾಗಿ ಅನಿಯಮಿತ, ರಾತ್ರಿ ಹಗಲು ಎನ್ನದೆ ವಿದ್ಯುತ್ ಕಡಿತ, ಶಿರ್ವ ಮೆಸ್ಕಾಂ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯನ್ನು ಪ್ರತಿಭಟಿಸಿ ಬಳಕೆದಾರರ ಬೃಹತ್ ಪ್ರತಿಭಟನೆಯು ಜುಲೈ 16 ಬೆಳಿಗ್ಗೆ 10 ಗಂಟೆಗೆ ಶಿರ್ವ ಮೆಸ್ಕಾಂ ಕಛೇರಿ ಮುಂದೆ ಬಳಕೆದಾರರ ಪ್ರತಿಭಟನೆ ನಡೆಯಲಿದೆ ಎಂದು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ.ಆರ್ ಪಾಟ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಎಲ್ಲಾ ವಿದ್ಯುತ್ ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ‌.

ಆನ್ ಲೈನ್ ಮೋಸ : ಖರೀದಿಸಿದ ಶೂ ಹಿಂತಿರುಗಿಸುವ ಸಂದರ್ಭ ಬ್ಯಾಂಕ್ ಖಾತೆಯ ಹಣ ಗುಳುಂ

Posted On: 15-07-2022 10:16PM

ಉಡುಪಿ : ಶೂ ಖರೀದಿಸಿ ಅದನ್ನು ಹಿಂತಿರುಗಿಸುವ ಸಂದರ್ಭ ಕ್ರೆಡಿಟ್ ಕಾಡ್೯ ಮಾಹಿತಿಯನ್ನು ಒದಗಿಸಿ ಬ್ಯಾಂಕ್ ಖಾತೆಯಿಂದ ‌ಹಣವನ್ನು ಕಳೆದುಕೊಂಡ ಘಟನೆ ಜುಲೈ 13ರಂದು ಬ್ರಹ್ಮಾವರದಲ್ಲಿ ನಡೆದಿದೆ.

ವಸಂತ ಶೆಟ್ಟಿ ಎಂಬುವವರು ಬ್ರಹ್ಮಾವರ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು, ಅದೇ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ನಂಬ್ರ ಹೊಂದಿರುತ್ತಾರೆ. ಇವರು ಖರೀದಿಸಿದ್ದ ಶೂ ವನ್ನು ಹಿಂತಿರುಗಿಸುವ ಬಗ್ಗೆ ಕರೆ ಮಾಡಿದಾಗ ನಿಮ್ಮ ಶೂ ಹಣವನ್ನು ಹಿಂತಿರುಗಿಸಲು ನಿಮ್ಮ ಕ್ರೆಡಿಟ್ ಕಾರ್ಡ್ ವಿವರ ಒದಗಿಸುವಂತೆ ಸೂಚಿಸಿದ ಮೇರೆಗೆ ಕ್ರೆಡಿಟ್ ಕಾರ್ಡ್ ವಿವರ ಒದಗಿಸಿದ್ದು, ಆ ಬಳಿಕ ಅವರ ಕ್ರೆಡಿಟ್ ಕಾರ್ಡ್ ನಿಂದ ಅದೇ ದಿನ ರೂ. 20,290/-, ರೂ. 15,217/- ಹಾಗೂ ರೂ. 3,554/- ಒಟ್ಟು ರೂ. 39,061/- ಹಣವನ್ನು ಯಾರೋ ಅಪರಿಚಿತ ವ್ಯಕ್ತಿ ವಸಂತ್ ರವರ ಗಮನಕ್ಕೆ ಬಾರದೇ ಅನಧಿಕೃತವಾಗಿ ಆನ್ ಲೈನ್ ಮುಖೇನ ವರ್ಗಾವಣೆ ಮಾಡಿ ಮೋಸ ಮಾಡಿರುವುದಾಗಿದೆ.

ಈ ಬಗ್ಗೆ ಸೆನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.