Updated News From Kaup

ಕಾಪು ಲಯನ್ಸ್‌ ಕ್ಲಬ್‌ : ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್‌ ಕುಮಾರ್ ಹೆಗ್ಡೆಗೆ ಸನ್ಮಾನ

Thumbnail
Posted On: 07 Sep 2022, 05:35 PM

ಕಾಪು : ಇಲ್ಲಿನ ಲಯನ್ಸ್‌ ಕ್ಲಬ್‌ ವತಿಯಿಂದ ಕರಂದಾಡಿ ಶ್ರೀರಾಮ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್‌ ಕುಮಾರ್ ಹೆಗ್ಡೆ ಅವರನ್ನು ಸಮ್ಮಾನಿಸಲಾಯಿತು. ಲಯನ್ಸ್‌ ಜಿಲ್ಲಾ ಮಾಜಿ ಗವರ್ನರ್ ಸುರೇಶ್ ಶೆಟ್ಟಿ, ಕಾಪು ಲಯನ್ಸ್ ಕ್ಲಬ್‌ ಅಧ್ಯಕ್ಷ ಐ.ಬಿ. ಅಶೋಕ್‌ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ಹರೀಶ್‌ ನಾಯಕ್‌, ವರುಣ್ ಶೆಟ್ಟಿ, ಉದಯ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್ : ಕಾನೂನು ಮಾಹಿತಿ , ಪತ್ರಿಕೆ ವಿತರಕರ ದಿನಾಚರಣೆ, ಪೋಷಣ್ ಅಭಿಯಾನ, ಆರೋಗ್ಯ ಮಾಹಿತಿ

Thumbnail
Posted On: 07 Sep 2022, 04:46 PM

ಬಂಟಕಲ್ಲು : ಇಲ್ಲಿನ ಲಯನ್ಸ್ ಕ್ಲಬ್ ಜಾಸ್ಮಿನ್ ಇವರ ಆಶ್ರಯದಲ್ಲಿ ಬಂಟಕಲ್ಲು ಅಂಗನವಾಡಿ ಕೇಂದ್ರದ ಸಹಯೋಗದಲ್ಲಿ ಮಹಿಳಾ ಕಾನೂನು ಮಾಹಿತಿ, ಪತ್ರಿಕಾ ವಿತರಕರ ದಿನಾಚರಣೆ ಹಾಗೂ ಪೋಷಣ್ ಅಭಿಯಾನ , ಆರೋಗ್ಯ ಮಾಹಿತಿ ಕಾರ್ಯಕ್ರಮವು ಬಂಟಕಲ್ಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಧೀಶೆ, ಜಿಲ್ಲಾ ಕಾನೂನು ಸೇವೆಗಳ ಕಾನೂನು ಪ್ರಾಧಿಕಾರ ಉಡುಪಿ ಇದರ ಸದಸ್ಯ ಕಾರ್ಯದರ್ಶಿ ಶರ್ಮಿಳಾರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಹಿಳೆಯರ ಕಾನೂನುಗಳು ಮತ್ತು ಅದರ ಅಗತ್ಯತೆ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಕೇಂದ್ರದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ವೈಷ್ಣವಿಯವರು ಪೋಷಣ್ ಅಭಿಯಾನ ಮತ್ತು ಸಾಮಾನ್ಯ ಆರೋಗ್ಯ ಮಾಹಿತಿ ನೀಡಿದರು. ಪತ್ರಿಕಾ ವಿತರಕರ ದಿನಾಚರಣೆಯ ಹಾಗು ಶಿರ್ವ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿದ್ದ ಕೆ ಆರ್ ಪಾಟ್ಕರ್ ರವರನ್ನು ಲಯನ್ಸ್ ಕ್ಲಬ್ ಹಾಗೂ ಅಂಗನವಾಡಿ ಕೇಂದ್ರದ ಪರವಾಗಿ ನ್ಯಾಯಧೀಶೆ ಶರ್ಮಿಳಾರವರು ಸನ್ಮಾನಿಸಿದರು. ಕೆ ಆರ್ ಪಾಟ್ಕರ್ ರವರು ಸನ್ಮಾನಕ್ಕೆ ಕೃತಜ್ಞತೆಯನ್ನು ತಿಳಿಸಿದರು. ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಅಂಗನವಾಡಿ ಮೇಲ್ವಿಚಾರಕಿ ಶಶಿಕಲಾರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷೆ ರೀನಾ ಡಿ ಸೋಜ, ಬಂಟಕಲ್ಲು ಶಾಲಾ ಮುಖ್ಯ ಶಿಕ್ಷಕಿ ಸಂಗೀತಾ ಪಾಟ್ಕರ್, ಅಂಗನವಾಡಿ ಕಾರ್ಯಕರ್ತೆಯರಾದ ವಿನಯಾ ಹರೀಶ್, ಉಷಾ ಪಾಟ್ಕರ್, ಜಯಂತಿ, ಲ ಐರಿನ್ ಸಿಕ್ವೇರಾ ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷರು, ಸದಸ್ಯರು, ಮಕ್ಕಳ ಹೆತ್ತವರು ಉಪಸ್ಥಿತರಿದ್ದರು. ಲಯನ್ಸ್ ಕಾರ್ಯದರ್ಶಿ ಅನಿತಾ ಮೆಂಡೋನ್ಸಾ ಕಾರ್ಯಕ್ರಮ ನಿರೂಪಿಸಿದರು. ವಿನಯಾ ವಂದಿಸಿದರು.

ರೋಟರಿ ಕ್ಲಬ್ ಪಡುಬಿದ್ರಿ : ನಿವೃತ್ತ ಶಿಕ್ಷಕಿ ಚಿತ್ರಾಕ್ಷಿಯವರಿಗೆ ಸನ್ಮಾನ

Thumbnail
Posted On: 06 Sep 2022, 11:34 PM

ಪಡುಬಿದ್ರಿ : ಇಲ್ಲಿನ ರೋಟರಿ ಕ್ಲಬ್ ಹಾಗು ರೋಟರಿ ಸಮುದಾಯ ದಳದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಿವೃತ್ತ ಶಿಕ್ಷಕಿ ಚಿತ್ರಾಕ್ಷಿಯವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಿ‌ ಗೌರವಿಸಲಾಯಿತು. ರೋಟರಿ ಅಧ್ಯಕ್ಷೆ ಗೀತಾ ಅರುಣ್ ‌ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ ‌ಪೂರ್ವ ಸಹಾಯಕ ಗವರ್ನರ್ ಗಣೇಶ್ ಅಚಾರ್ಯ ಉಚ್ಚಿಲ, ಪೂರ್ವ ಅಧ್ಯಕ್ಷ ರಾದ ಪಿ. ಕೃಷ್ಣ ಬಂಗೇರ , ರಮೀಜ್ ಹುಸೇನ್‌, ಸದಸ್ಯರಾದ ಸುನೀಲ್ ಕುಮಾರ್, ಪವನ್ ಸಾಲ್ಯಾನ್, ಪುಷ್ಪಲತಾ ಗಂಗಾಧರ್ , ಸಂತೋಷ್ ಪಡುಬಿದ್ರಿ ರೋಟರಿ ಸಮುದಾಯದಳ ಅಧ್ಯಕ್ಷೆ ದೀಪಾಶ್ರಿ ಕರ್ಕೇರ, ಕಾರ್ಯದರ್ಶಿ ತನಿಷಾ ಜಿ. ಕುಕ್ಯಾನ್ , ಸದಸ್ಯರಾದ ಅದ್ವಿತ್ ಕುಮಾರ್ ಉಪಸ್ಥಿತರಿದ್ದರು. ರೋಟರಿ ಅಧ್ಯಕ್ಷೆ ಗೀತಾ ಅರುಣ್ ಸ್ವಾಗತಿಸಿದರು. ಯಶೋಧ ಪಡುಬಿದ್ರಿ ನಿರೂಪಿಸಿದರು. ಕಾರ್ಯದರ್ಶಿ ಜ್ಯೋತಿ ಮೆನನ್ ವಂದಿಸಿದರು.

ಗುರುಪರಂಪರೆಯನ್ನು ಗೌರವಿಸಿ : ಸಚಿವ ವಿ ಸುನಿಲ್‌ ಕುಮಾರ್‌

Thumbnail
Posted On: 06 Sep 2022, 08:46 PM

ಕಾರ್ಕಳ : ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಕರನ್ನು ಹಾಗೂ ಗುರುಪರಂಪರೆಯನ್ನು ಗೌರವಿಸಿ ಸಂಸ್ಕಾರಯುತ ಶಿಕ್ಷಣ ಪಡೆದು, ದೇಶದ ಅಭಿವೃದ್ಧಿಯಲ್ಲಿ ಯುವಜನರು ಕೈಜೋಡಿಸುವಂತಾಗಬೇಕೆಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್‌ ಕುಮಾರ್‌ ಕರೆ ನೀಡಿದರು. ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ “ಗುರುದೇವೋ ಭವ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರಿಯೇಟಿವ್‌ “ನಿನಾದ” ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿ ಮಾತಾನಾಡಿದರು. ಪರೀಕ್ಷೆ ಮಾತ್ರ ಜೀವನದಲ್ಲಿ ಮುಖ್ಯವಲ್ಲ, ಅದರಾಚೆಗೂ ವ್ಯಕ್ತಿಗತ ಸಂಸ್ಕಾರ ಬಹಳ ಮುಖ್ಯವಾಗಿದೆ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳೂ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲಿ ಎಂದು ಹಾರೈಸಿದರು. ಶಿಕಾರಿಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ ಎಸ್‌ ಶಶಧರ್, ವಿಜೇತ ವಸತಿಯುತ ವಿಶೇಷ ಶಾಲೆಯ ಮುಖ್ಯೋಪಾಧ್ಯಾನಿ ಡಾ. ಕಾಂತಿ ಹರೀಶ್‌, ನಿವೃತ್ತ ಶಿಕ್ಷಕಿ ತಾರಾ ಕೆ ಹಿರ್ಗಾನ, ಉಪನ್ಯಾಸಕ, ಸಾಹಿತಿ ರಾಘವೇಂದ್ರ ಬಿ ರಾವ್‌ (ಅನು ಬೆಳ್ಳೆ) ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅನು ಬೆಳ್ಳೆಯವರ 54 ನೇ ಕಾದಂಬರಿ “ಮುಂಬೆಳಕಿನ ತಾರೆ” ಬಿಡುಗಡೆ ಗೊಳಿಸಲಾಯಿತು. ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಸಂಸ್ಥಾಪಕರುಗಳಾದ ವಿದ್ವಾನ್‌ ಗಣಪತಿ ಭಟ್‌, ಡಾ ಗಣನಾಥ ಶೆಟ್ಟಿ, ಅಮೃತ್‌ ರೈ, ಆದರ್ಶ ಎಂ ಕೆ, ವಿಮಲ್‌ರಾಜ್‌ ಜಿ, ಗಣಪತಿ ಭಟ್‌ ಕೆ ಎಸ್‌, ಹಿರ್ಗಾನ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಸಂತೋಷ್‌ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥಾಪಕರಾದ ಅಶ್ವಥ್‌ ಎಸ್‌ ಎಲ್‌ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಉಪನ್ಯಾಸಕ ಲೋಹಿತ್‌ ಎಸ್‌ ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಟಪಾಡಿ : ಹಿಂದೂ ಯುವ ಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕದಿಂದ 16 ನೇ ಸಾರ್ವಜನಿಕ ಶನಿಕಥಾ ಪಾರಾಯಣ

Thumbnail
Posted On: 06 Sep 2022, 08:35 PM

ಕಟಪಾಡಿ : ಹಿಂದೂ ಯುವ ಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಕಟಪಾಡಿ ಇವರ ವತಿಯಿಂದ 16 ನೇ ಸಾರ್ವಜನಿಕ ಶನಿಕಥಾ ಪಾರಾಯಣ ಸೆಪ್ಟೆಂಬರ್ 4 ರಂದು ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಊರ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಿತು. ಬೆಳ್ಳಿಗ್ಗೆ ಕಲಶ ಪ್ರತಿಷ್ಠೆಯಾಗಿ ಶನಿಕಥಾ ಪಾರಾಯಣ ಆರಂಭಗೊಂಡು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಸಂಜೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ಜರಗಿತು. ಈ ಸಂಧರ್ಭದಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಸುರೇಶ್ ಶೆಟ್ಟಿ ಗುರ್ಮೆ, ಶಿಲ್ಪಾ ಜಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ತಾಲೂಕ್ ಬಿ.ಜೆ.ಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಾಕ್ಷರಾದ ಶ್ರೀಶ ನಾಯಕ್ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ಗ್ರಾಮಸ್ಯರು ಉಪಸ್ಥಿತರಿದ್ದರು.

ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾಗಭೂಷಣ್ ರಾವ್ ಅವಿರೋಧ ಆಯ್ಕೆ

Thumbnail
Posted On: 06 Sep 2022, 07:53 PM

ಕಾಪು : ಮಜೂರು ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ನಾಗಭೂಷಣ್ ರಾವ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂತೋಷ್ ಉಳಿಯಾರು, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಮಜೂರು, ಜೊತೆ ಕಾರ್ಯದರ್ಶಿ ಮಯೂರ್ ಕುಲಾಲ್, ಕೋಶಾಧಿಕಾರಿ ಗಜೇಂದ್ರ, ಪ್ರಧಾನ ಭಜನಾ ಸಂಚಾಲಕರಾಗಿ ಯೋಗೀಶ್ ಆಚಾರ್ಯ ಸಹ ಸಂಚಾಲಕರಾಗಿ ದುರ್ಗಾ ಪ್ರಸಾದ್, ವಿಘ್ನೇಶ್, ಸುಜಲ್, ಪ್ರಜ್ವಲ್, ಸಂಕೇತ್ ಆಯ್ಕೆಯಾಗಿದ್ದಾರೆ.

ಉದ್ಯಾವರ : ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Thumbnail
Posted On: 06 Sep 2022, 07:49 PM

ಉದ್ಯಾವರ : ಕಥೋಲಿಕ್ ಸಭಾ ಉದ್ಯಾವರ ಮತ್ತು ಉದ್ಯಾವರೈಟ್ಸ್ ದುಬೈ ಇವರ ನೇತೃತ್ವದಲ್ಲಿ ಯುವ, ಸ್ತ್ರೀ ಮತ್ತು ಕುಟುಂಬ ಆಯೋಗದ ಸಹಭಾಗಿತ್ವದಲ್ಲಿ ಉದ್ಯಾವರದ ಸಂತ ಫ್ರಾನ್ಸಿಸ್ ಝೇವಿಯರ್ ವಿದ್ಯಾಸಂಸ್ಥೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಮಾಡಲಾಯಿತು. ಝೇವಿಯರ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ಅ. ವಂ. ಸ್ಟ್ಯಾನಿ ಬಿ ಲೋಬೊ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿ, ಗೌರವ ಧನ ವಿತರಿಸಿ, ಸನ್ಮಾನಿಸಿದರು. ಸಂತ ಫ್ರಾನ್ಸಿಸ್ ಝೇವಿಯರ್ ಕನ್ನಡ ಪ್ರೌಢಶಾಲೆ, ಆಂಗ್ಲಮಾಧ್ಯಮ ಪ್ರೌಢಶಾಲೆ ಮತ್ತು ಉನ್ನತ ವಿದ್ಯಾಭ್ಯಾಸದಲ್ಲಿ ಸಾಧನೆಗೈದ 25 ವಿದ್ಯಾರ್ಥಿಗಳನ್ನು ಗೌರವಿಸಿ, ಉದ್ಯಾವರೈಟ್ಸ್ ದುಬೈ ಪ್ರಾಯೋಜಕತ್ವ ವಹಿಸಿದ ಗೌರವಧನ ವಿತರಿಸಿಲಾಯಿತು. ಇದೇ ಸಂದರ್ಭದಲ್ಲಿ ಮಂಗಳೂರಿನ ಫಾದರ್ ಮುಲ್ಲರ್ಸ್ ಇನ್ಸ್ಟಿಟ್ಯೂಟ್ ನ ಡೀನ್ ಆಗಿ ನೇಮಕಗೊಂಡಿರುವ ಡಾ. ಉರ್ಬನ್ ಡಿಸೋಜ, ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಕ್ಲ್ಯಾರಿನ್ ಪಿಂಟೊ, ಆಯುರ್ವೇದ ವೈದ್ಯೆ ಡಾ. ಸಿಲ್ವಿನಿಯ ಫೆರ್ನಾಂಡಿಸ್ ಮತ್ತು ಹಿರಿಯ ಕ್ರೀಡಾಪಟು ಮತ್ತು ಕಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಅಂದ್ರಾದೆ ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸಹಾಯಕ ಧರ್ಮಗುರು ವಂ. ಲಿಯೋ ಪ್ರವೀಣ್ ಡಿಸೋಜ, ಉದ್ಯಾವರೈಟ್ಸ್ ದುಬೈ ಸ್ಥಾಪಕಾಧ್ಯಕ್ಷ ಜೆರಾಲ್ಡ್ ಪಿರೇರಾ, ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷೆ ಮೇರಿ ಡಿಸೋಜ, ಉಪಾಧ್ಯಕ್ಷ ರೊನಾಲ್ಡ್ ಅಲ್ಮೇಡಾ, ಪ್ರಮುಖರಾದ ಲೋರೆನ್ಸ್ ಡೇಸಾ, ಐರಿನ್ ಪಿರೇರಾ, ರೊಯ್ಸ್ ಫೆರ್ನಾಂಡಿಸ್, ವಿಲ್ ಫ್ರೆಡ್ ಕ್ರಾಸ್ಟೊ, ಟೆರೆನ್ಸ್ ಪಿರೇರಾ, ಜೆಫ್ರಿ ಕಸ್ತಲಿನೊ, ಆಸ್ಕರ್ ರೆಬೆಲ್ಲೋ, ಡೊನಾಲ್ಡ್ ಮಚಾದೋ ಮತ್ತಿತರರು ಉಪಸ್ಥಿತರಿದ್ದರು. ಮೈಕಲ್ ಡಿಸೋಜ ಸ್ವಾಗತಿಸಿದರು. ಅನಿಲ್ ಮಿನೇಜಸ್ ಕಾರ್ಯಕ್ರಮ ನಿರೂಪಿಸಿದರು. ಫ್ರಾಂಕ್ಯಿ ಕರ್ಡೋಜಾ ವಂದಿಸಿದರು.

ಪಾದೂರು ರೋಟರಿ ಸಮುದಾಯ ದಳ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಇಬ್ಬರು ಶಿಕ್ಷಕರಿಗೆ ಸನ್ಮಾನ

Thumbnail
Posted On: 06 Sep 2022, 07:24 PM

ಕಾಪು‌ : ಪಾದೂರು ರೋಟರಿ ಸಮುದಾಯ ದಳ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ರಾಜ್ಯೋತ್ಸವ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಪಾದೂರು ಯುಬಿಎಂಸಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಆಗಿದ್ದ ಶೈಲಿ ಪ್ರೇಮ ಕುಂದರ್ ಹಾಗೂ ಕಟಪಾಡಿ ಎಸ್ ವಿ ಎಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾಗಿರುವ ಪಾದೂರಿನ ನಿವಾಸಿ ಜ್ಯೋತಿಷ್ಯ ಶಾಸ್ತ್ರಜ್ಞ ಸುಬ್ರಹ್ಮಣ್ಯ ತಂತ್ರಿ ಅವರನ್ನು ನಿಕಟಪೂರ್ವ ಎಜಿ ರೊಟೇರಿಯನ್ ಪಿಎಚ್ ಎಫ್ ಡಾಕ್ಟರ್ ಅರುಣ್ ಹೆಗ್ಡೆಯವರು ಸನ್ಮಾನಿಸಿದರು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾದೂರು ಮಹಿಳಾ ಮಂಡಳದ ಅಧ್ಯಕ್ಷೆ ಜಯಲಕ್ಷ್ಮಿ ಆಳ್ವ ಹಾಗೂ ಶಿರ್ವ ರೋಟರಿ ಪೂರ್ವ ಅಧ್ಯಕ್ಷರಾಗಿದ್ದ ಮೈಕಲ್ ಮಥಾಯಸ್, ಆರ್ ಸಿಸಿ ಯ ಅಧ್ಯಕ್ಷ ಪ್ರಸಾದ್ ಆಚಾರ್ಯ ಹಾಗೂ ಕಾರ್ಯದರ್ಶಿ ಸಂತೋಷ್ ಆಚಾರ್ಯ ಹಾಗೂ ಆರ್ ಸಿಸಿಯ ಸಭಾಪತಿ ಜೆ ಕೆ ಆಳ್ವ ಅವರು ಉಪಸ್ಥಿತರಿದ್ದರು. ಸಭೆಯಲ್ಲಿ ಪಾದೂರು ಅಂಗನವಾಡಿ ಶಿಕ್ಷಕಿಯಾದ ವತ್ಸಲ ಶೆಟ್ಟಿ ಹಾಗೂ ಇನ್ನೋರ್ವ ಶಿಕ್ಷಕಿಯಾದ ಪ್ರಫುಲ್ಲಾ ಆಚಾರ್ಯ ಇವರನ್ನು ಅಭಿನಂದಿಸಲಾಯಿತು. ಸಭೆಯಲ್ಲಿ ಪೂರ್ಣಿಮಾ ಕೆ ಶೆಟ್ಟಿ, ಪ್ರಕಾಶ್ ಆಚಾರ್ಯ, ಮನೋಜ್ ಶೆಟ್ಟಿ , ಜೋಯಲ್ ಮಥಾಯಸ್ ಹಾಗೂ ಇತರರು ಉಪಸ್ಥಿತರಿದ್ದರು.

ಎಲ್ಲೂರು : ಡಾ.ಸುಬ್ರಹ್ಮಣ್ಯನ್ ಸ್ವಾಮಿ ನಿಧಿಯಿಂದ ನಿರ್ಮಾಣವಾಗಲಿರುವ ರಸ್ತೆಗೆ ಗುದ್ದಲಿ ಪೂಜೆ

Thumbnail
Posted On: 06 Sep 2022, 07:19 PM

ಎಲ್ಲೂರು : ನಿಕಟಪೂರ್ವ ರಾಜ್ಯಸಭಾ ಸದಸ್ಯ ಡಾ.ಸುಬ್ರಹ್ಮಣ್ಯನ್ ಸ್ವಾಮಿ ಅವರ ಎಂಪಿ‌ ಫಂಡ್ ನಿಂದ ಮಂಜೂರಾದ ಕೆಮುಂಡೇಲು‌ ಹಿ.ಪ್ರಾ. ಶಾಲೆಯಿಂದ ಜೆನ್ನಿ ರಾಮರಾವ್ ಮನೆಯವರೆಗಿನ‌ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ವಿರಾಟ್ ಹಿಂದೂಸ್ಥಾನ್ ಸಂಗಮ್ ನ ರಾಷ್ಟ್ರೀಯ ಪ್ರಧಾನ‌ಕಾರ್ಯದರ್ಶಿ ಜಗದೀಶ ಶೆಟ್ಟಿ‌ ಅವರು‌ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಕೆಮುಂಡೇಲು ಹಿ.ಪ್ರಾ.ಶಾಲೆಯಲ್ಲಿ ಎಲ್ಲೂರು ಪಂಚಾಯತ್ ಉಪಾಧ್ಯಕ್ಷರಾದ ಪ್ರಮೀಳಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ‌ ಡಾ.ಸುಬ್ರಹ್ಮಣ್ಯನ್ ಸ್ವಾಮಿ ಅವರ ವಿರಾಟ್ ಹಿಂದೂಸ್ಥಾನ್ ಸಂಗಮ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಗ್ರಾಮಾಂತರ ಪ್ರದೇಶಗಳಲ್ಲಿ ಅಗತ್ಯ ಬೇಕಿರುವ ಕೆಲಸಗಳಿಗಾಗಿ ಸ್ವಾಮಿಯವರ ಅನುದಾನಗಳನ್ನು ಹಂಚುವುದು ಹಾಗೂ ಸಮಾಜದ ಅನಿವಾರ್ಯತೆಗೆ ಸ್ಪಂದಿಸುವ ಅವರ ಆಶಯವನ್ನು ಅನುಷ್ಠಾನಿಸುವುದೇ ನಮ್ಮ ಆದ್ಯತೆಯಾಗಿದೆ ಎಂದು ಜಗದೀಶ ಶೆಟ್ಟಿ ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೆ.ಎಲ್.ಕುಂಡಂತಾಯ ಅವರು ಶೆಟ್ಟಿಯವರನ್ನು ಊರವರ ಪರವಾಗಿ ಸಮ್ಮಾನಿಸಿದರು.ಎಲ್ಲೂರು ಪಂಚಾಯತ್ ಪಿ.ಡಿ.ಒ.ಪ್ರದೀಪ ಕುಮಾರ್ ಸದಸ್ಯರಾದ ದಯಾನಂದ,ಹರೀಶ, ಶಾಂತಿ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಎ.ಪಿ.ಜೆನ್ನಿ , ನಿವೃತ್ತ ಪ್ರಾಂಶುಪಾಲ ಸುದರ್ಶನ ವೈ .ಎಸ್. ಮತ್ತು ಶಾಲೆಯ ಮುಖ್ಯೋಪಾಧ್ಯಾಯ ಜಗನ್ನಾಥ ಶೆಟ್ಟಿ‌ .ಮಾಜಿ ಪಂಚಾಯತ್ ಸದಸ್ಯರಾದ ಜೆನಟ್ ಬರ್ಬೋಜ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಸುಕೇತಾ ಸ್ವಾಗತಿಸಿದರು. ಸುನೀತಾ ಕಾರ್ಯಕ್ರಮ ನಿರ್ವಹಿಸಿದರು. ಸೌಮ್ಯಶ್ರೀ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಾಲೆಗೆ ಭೇಟಿ ನೀಡಿದ ಜಗದೀಶ ಶೆಟ್ಟಿಯವರು ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ಸುಮಾರು 150 ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಕೊರತೆ ಇರುವುದನ್ನು ಮನಗಂಡು ಸರಕಾರದ ಗಮನಸೆಳೆಯುವುದಾಗಿ ಹೇಳಿದರು.

ಬಂಟಕಲ್ಲು: ಅತ್ಯುತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪಡೆದ ಸತ್ಯ ಸಾಯಿ ಪ್ರಸಾದ್ ರಿಗೆ ನಾಗರಿಕ ಸಮಿತಿಯಿಂದ ಅಭಿನಂದನೆ

Thumbnail
Posted On: 06 Sep 2022, 07:09 PM

ಬಂಟಕಲ್ಲು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸರಕಾರಿ ಪ್ರಾರ್ಥಮಿಕ ಶಾಲೆ ರಾಜೀವ ನಗರ ಉಡುಪಿ ಇಲ್ಲಿಯ ಹಿರಿಯ ಶಿಕ್ಷಕ ಶ್ರೀ ಸತ್ಯ ಸಾಯಿ ಪ್ರಾಸಾದ್ ಬಂಟಕಲ್ಲು ಇವರು ಶಿಕ್ಷಕರ ದಿನಾಚರಣೆಯ ಸಂಧರ್ಭದಲ್ಲಿ ಅತ್ಯುತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪಡೆದಿರುತ್ತಾರೆ. ಇವರನ್ನು ನಾಗರಿಕ ಸೇವಾ ಸಮಿತಿ (ರಿ.) ಬಂಟಕಲ್ಲು ಇವರು ಶಿಕ್ಷಕ ಸತ್ಯ ಸಾಯಿ ಪ್ರಸಾದ್ ರವರ ಮನೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಸಮಿತಿ ಅಧ್ಯಕ್ಷ ಕೆ ಆರ್ ಪಾಟ್ಕರ್ ರವರು ಪ್ರಸಾದ್ ರವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಪೇಟ ತೊಡಿಸಿ ಸನ್ಮಾನಿಸಿ ಅಭಿನಂದಿಸಿ ಈ ನಿಮ್ಮ ಪ್ರಶಸ್ತಿ ನಮ್ಮ ಊರಿಗೆ, ಗ್ರಾಮಕ್ಕೆ ಹೆಮ್ಮೆಯ ವಿಷಯವಾಗಿದ್ದು ಮುಂದೆ ರಾಜ್ಯಪ್ರಶಸ್ತಿ ದೊರೆಯುವಂತಾಗಲಿ ಎಂದು ಶುಭಹಾರೈಸಿದರು. ಸಮಿತಿಯ ಉಪಾಧ್ಯಕ್ಷರಾದ ಪುಂಡಲೀಕ ಮರಾಠೆಯವರು ಪ್ರಸಾದ್ ರವರ ಸೇವೆಯನ್ನು ಶ್ಲಾಘಿಸಿ ಶುಭಹಾರೈಸಿದರು. ಇನ್ನೋರ್ವ ಉಪಾಧ್ಯಕ್ಷರಾದ ಮಾಧವ ಕಾಮತ್, ಸಮಿತಿ ಕಾರ್ಯದರ್ಶಿ ದಿನೇಶ್ ದೇವಾಡಿಗ, ಸದಸ್ಯರಾದ ಉಮೇಶ್ ರಾವ್, ಹರೀಶ್ ಹೇರೂರು, ಡೆನಿಸ್ ಡಿ' ಸೋಜ ಹಾಗೂ ಇಂದಿರಾ ಪ್ರಸಾದ್ ರವರು ಉಪಸ್ಥಿತರಿದ್ದರು.