Updated News From Kaup
ಬಂಟಕಲ್ಲು : ದೇವಾಡಿಗರ ಸಂಘದಿಂದ ಆಟಿಡೊಂಜಿ ದಿನ ಕಾರ್ಯಕ್ರಮ
Posted On: 25-07-2022 12:05AM
ಕಾಪು : ದೇವಾಡಿಗರ ಸಂಘ 92 ಹೇರೂರು ಬಂಟಕಲ್ಲು ಇವರ ಆಶ್ರಯದಲ್ಲಿ ಇಂದು ಆಟಿಡೊಂಜಿ ದಿನ ಕಾರ್ಯಕ್ರಮ ಹೇರೂರು ಶಶಿಕಲಾ ದಿನೇಶ್ ದೇವಾಡಿಗರವರ ಮನೆಯಲ್ಲಿ ನಡೆಯಿತು.
ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ
Posted On: 24-07-2022 11:50PM
ಕಾಪು : ಸಾಮಾಜಿಕ ಜಾಲತಾಣದ ಮೂಲಕ ಕರ್ನಾಟಕ ರಾಜ್ಯದಲ್ಲಿರುವ ಅನೇಕ ಜನರನ್ನು ಒಂದುಗೂಡಿಸಿ , ಅವರೆಲ್ಲರ ಸಹಕಾರದಿಂದ ಪ್ರಾರಂಭಗೊಂಡ ಅನಂತ ಇನ್ನಂಜೆಯವರ ನೇತೃತ್ವದ ಉಡುಪಿಯ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾಪು ಶ್ರೀ ಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ರವಿವಾರ ಉಡುಪಿ ಹಾಗೂ ಕಾಪು ತಾಲ್ಲೂಕಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಇವರು ಮಾತನಾಡಿ , ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ಮೂಲಕ ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಹಲವು ಕಡೆಗಳಲ್ಲಿ ನಿರಂತರ ಸಮಾಜ ಸೇವಾ ಚಟುವಟಿಕೆಗಳು ನಡೆಯುತ್ತಿವೆ. ಉಡುಪಿ ಜಿಲ್ಲೆಯ ವಿವಿಧ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಪ್ರಯತ್ನಕ್ಕೂ ಚಾಲನೆ ನೀಡಿರುವುದು ಸ್ವಾಗತಾರ್ಹವಾಗಿದೆ ಎಂದರು.
ಮಳೆಗಾಲದ ನೀರು ತುಂಬಿದ್ದ ಕಲ್ಲಿನ ಕ್ವಾರೆಯಲ್ಲಿ ಈಜಲು ಹೋಗಿ ಮೃತಪಟ್ಟ ಯುವಕ
Posted On: 24-07-2022 11:44PM
ಮಂಗಳೂರು : ಕ್ರಿಕೆಟ್ ಆಟದ ಬಳಿಕ ಕೆಂಪು ಕಲ್ಲಿನ ಕ್ವಾರೆಯಲ್ಲಿ ಮಳೆಗಾಲದ ನೀರು ತುಂಬಿದ ಹೊಂಡದಲ್ಲಿ ಈಜಲು ಹೋಗಿ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಉಲೈಬೆಟ್ಟು ಕಾಯರಪದವು ಎಂಬಲ್ಲಿ ನಡೆದಿದೆ.
ಪಡುಬಿದ್ರಿ : ರೋಟರಿ ಕ್ಲಬ್ ಮತ್ತು ಇನ್ನರ್ವೀಲ್ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ತ್
Posted On: 24-07-2022 11:36PM
ಪಡುಬಿದ್ರಿ : ತುಳುನಾಡು ಕೃಷ್ಣದೇವರಾಯ ಅರಸರಾಗಿ, ಹಲವಾರು ಸಾಮಂತರಾಜರು ಆಳಿದ ಸ್ಥಳವಾಗಿದೆ. ತುಳು ನೆಲದಲ್ಲಿ ವಿಶೇಷತೆ, ಅದರದೇ ಆದ ಮಹಿಮೆ ಜಗತ್ತಿನಲ್ಲಿ ಸ್ಥಾನವನ್ನು ಪಡೆದಿದೆ. ಇಲ್ಲಿ ಬಂದು ಅಧ್ಯಯನ ನಡೆಸಿದ ಬ್ರಿಟಿಷರಿಗೆ ಇಲ್ಲಿನ ಜನಪದ ಸಂಸ್ಕೃತಿ ಅವರನ್ನು ಕುತೂಹಲಿಗರನ್ನಾಗಿಸಿದೆ. ಅವರು ದಾಖಲಿಸಿದ್ದು ಜನರಿಗೆ ತಿಳಿಯುವಂತಾಗಿದೆ. ಜಗತ್ತಿನ ಹಲವಾರು ಭಾಷೆಗಳಿಗೆ ಅವುಗಳದೇ ಆದ ಮಹತ್ವ, ವ್ಯಾಪ್ತಿಯಿದೆ. ಸರಕಾರದ ಮಟ್ಟದಲ್ಲಿ ಮಾನ್ಯತೆ ದೊರಕಿದೆ. ಆದರೆ ಎಲ್ಲ ಇದ್ದು ಏನೂ ಇಲ್ಲದಂತೆ ಇರುವ ಭಾಷೆಯಾಗಿ ತುಳುವಿದೆ. ಸ್ವತಂತ್ರ ಕ್ಯಾಲೆಂಡರ್, ಸ್ವತಂತ್ರ ಲಿಪಿ, ಅಷ್ಟಮಠಾಧಿಪತಿಗಳು ತುಳು ಲಿಪಿಯಲ್ಲಿಯೇ ಸಹಿ ಹಾಕುವ ರೂಢಿಯಿದೆ. ಅಸಂಖ್ಯಾತ ಶಿಲಾಶಾಸನಗಳು, ಅಸಂಖ್ಯಾತ ತಾಮ್ರ ಶಾಸನಗಳು ತುಳುವಲ್ಲಿ ಇದೆ. ವಿಶ್ವದಲ್ಲಿ ಎರಡುವರೆ ಕೋಟಿ ಜನಸಂಖ್ಯೆ ಇದ್ದರೂ ತುಳು ಅಧಿಕೃತ ಭಾಷೆ ಆಗಲಿಲ್ಲ. ನಾವು ನಮ್ಮ ಭಾಷೆಯನ್ನು ಮರೆಯದಿರಲು ನಮ್ಮ ಕಾರ್ಯಕ್ರಮ, ಮನೆ ಮನಗಳಲ್ಲಿ ತುಳು ಭಾಷೆಯ ಬಳಕೆ ಅನಿವಾರ್ಯ. ಅದರಲ್ಲೂ ಕೃಷಿ ಪ್ರಧಾನ ಸಂಸ್ಕೃತಿಯಲ್ಲಿ ಒಂದಾದ ಆಟಿ ಆಚರಣೆಯು ನಮ್ಮಲ್ಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ಹೇಳಿದರು.
ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟನೆ
Posted On: 24-07-2022 02:18PM
ಕಾಪು : ಜಿ.ಎಸ್.ಬಿ ಸಮಾಜ ಹಿತರಕ್ಷಣಾ ವೇದಿಕೆ(ರಿ.), ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಮುದರಂಗಡಿ ಇದರ ಸಹಭಾಗಿತ್ವದಲ್ಲಿ ಜುಲೈ 24ರಂದು ವಿದ್ಯಾ ಪೋಷಕ ನಿಧಿ (2022-23)ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದ ಮಾಧವ ಮಂಗಲ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಮುಂಬಯಿಯ ಖ್ಯಾತ ಸುಪ್ರೀಂ ಕೋರ್ಟ್ ವಕೀಲರಾದ ರವಿಚಂದ್ರ ಕಿಣಿ ಉದ್ಘಾಟಿಸಿದರು.
ಕಾಪು : ಆಗಸ್ಟ್ 14ರಂದು ದೇಶಕ್ಕಾಗಿ ಓಟ
Posted On: 23-07-2022 10:54PM
ಕಾಪು : ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ದೇಶಕ್ಕಾಗಿ ಓಟ ಕಾರ್ಯಕ್ರಮ ಜರಗಲಿದೆ.
ಯುವವಾಹಿನಿ ಉಡುಪಿ ಘಟಕದಿಂದ ಸಾಹಿತ್ಯ ಸೌರಭ - ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು
Posted On: 23-07-2022 10:31PM
ಉಡುಪಿ : ಯುವ ವಾಹಿನಿ ಉಡುಪಿ ಘಟಕದಿಂದ ಸಾಹಿತ್ಯ ಸೌರಭ ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಜುಲೈ 23 ರಂದು ಉದ್ಯಾವರ ಬಲಾಯಿಪಾದೆಯ ಯುವವಾಹಿನಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಖ್ಯಾತ ಸಾಹಿತಿಗಳು ಹಾಗೂ ಉಪನ್ಯಾಸಕರಾದ ವಾಸಂತಿ ಅಂಬಲಪಾಡಿ ಮುಖ್ಯ ಅತಿಥಿಯಾಗಿ ಆಗಮಿಸಿ ಸ್ಪರ್ಧಾ ಕೂಟದ ಯಶಸ್ಸಿಗೆ ಶುಭ ಹಾರೈಸಿದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಕಾಪುವಿನಲ್ಲಿ ಎಸ್ಡಿಪಿಐ ಪ್ರತಿಭಟನೆ
Posted On: 23-07-2022 08:12PM
ಕಾಪು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಜಿಎಸ್ಟಿ ನೀತಿಯ ವಿರುದ್ಧ ಕಾಪುಪೇಟೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪ್ರತಿಭಟನಾ ಸಭೆ ನೆರವೇರಿತು.
ಕಟಪಾಡಿ : ಎಸ್. ವಿ.ಎಸ್ ಶಾಲೆಯ ಹಳೆವಿದ್ಯಾರ್ಥಿಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಕೊಡುಗೆ
Posted On: 23-07-2022 07:10PM
ಕಟಪಾಡಿ : ಇಲ್ಲಿನ ಎಸ್. ವಿ.ಎಸ್ ಹೈಸ್ಕೂಲ್ ಇದರ 1997ರಿಂದ 2002 ರ ಬ್ಯಾಚ್ ನ ಹಳೆವಿದ್ಯಾರ್ಥಿಗಳ ವತಿಯಿಂದ ಶಾಲಾ ಮಕ್ಕಳಿಗೆ ಗುರುತಿನ ಚೀಟಿ ನೀಡುವ ಕಾರ್ಯಕ್ರಮ ಜುಲೈ 22 ರಂದು ಎಸ್. ವಿ. ಎಸ್ ಹೈಸ್ಕೂಲ್ ಇದರ ಸಭಾಂಗಣದಲ್ಲಿ ಜರಗಿತು.
ಹೊಂಡ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಕಾರು
Posted On: 22-07-2022 06:23PM
ಕಾಪು : ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪು ಸಮೀಪ ಉಡುಪಿಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿರುವಾಗ ಹೊಂಡ ತಪ್ಪಿಸಲು ಹೋಗಿ ಕಾರೊಂದು ಗದ್ದೆಗೆ ಉರುಳಿದ ಘಟನೆ ನಡೆದಿದೆ.
