Updated News From Kaup

ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬೂಸ್ಟರ್ ಡೋಸ್ ಲಸಿಕಾ ಅಭಿಯಾನ

Posted On: 22-07-2022 01:18PM

ಶಿರ್ವ : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್‍ಸಿಸಿ, ಎನ್‍ಎಸ್‍ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಬೂಸ್ಟರ್ ಡೋಸು ಲಸಿಕಾ ಅಭಿಯಾನವನ್ನು ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ, ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಜುಲೈ 22 ರಂದು ಆಯೋಜಿಸಲಾಯಿತು.

ಸುರತ್ಕಲ್ ರಸ್ತೆ ಅಪಘಾತದಲ್ಲಿ ಕಟಪಾಡಿಯ ಮೂಡಬೆಟ್ಟು ದೇವಸ್ಥಾನದ ಅರ್ಚಕ ದುರ್ಮರಣ

Posted On: 22-07-2022 01:10PM

ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ.

ಜುಲೈ 23 : ಮುಕುಂದ ಕೃಪಾ ನರ್ಸರಿ, ಪ್ರಾಥಮಿಕ ಶಾಲೆಯ ಸಂಸ್ಥಾಪಕರ ದಿನಾಚರಣೆ ಹಾಗೂ ಗೋಲ್ಡನ್ ಜ್ಯುಬ್ಲಿ ಸಂಭ್ರಮಾಚಾರಣೆ

Posted On: 21-07-2022 11:27AM

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ಬಳಿಯ ಮುಕುಂದ ಕೃಪಾ ಇಂಗ್ಲೀಷ್ ಮೀಡಿಯಂ ನರ್ಸರಿ ಹಾಗೂ ಪ್ರಾಥಮಿಕ ಶಾಲೆಯ ಸಂಸ್ಥಾಪಕರ ದಿನಾಚರಣೆ ಹಾಗೂ ಗೋಲ್ಡನ್ ಜ್ಯುಬ್ಲಿ ಸಂಭ್ರಮಾಚಾರಣೆಯ ಸಮಾರಂಭ ಜುಲೈ 23ರಂದು ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲಿ ಮಾಧ್ಯಾಹ್ನ 2:30 ಕ್ಕೆ ನಡೆಯಲಿದೆ.

ಕಡೆಕಾರು : ಉಚಿತ ಆರೋಗ್ಯ ತಪಾಸಣಾ ಶಿಬಿರ

Posted On: 20-07-2022 04:36PM

ಉಡುಪಿ‌: ಕಡೆಕಾರು ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಡೆಕಾರು, ಕುತ್ಪಾಡಿ ಇವರ ಸಹಯೋಗದೊಂದಿಗೆ ಜುಲೈ 20ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವು ಕಡೆಕಾರು- ಕುತ್ಪಾಡಿ ಅಂಗನವಾಡಿ ಪಡುಕೆರೆಯಲ್ಲಿ ಜರಗಿತು.

ಉದ್ಯಾವರ : ಗುಂಡಿ ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಕಂಟೈನರ್

Posted On: 20-07-2022 01:39PM

ಉದ್ಯಾವರ : ರಾಷ್ಟ್ರೀಯ ಹೆದ್ದಾರಿ 66 ಹಾಲಿಮಾ ಸಾಬ್ಜು ಸಭಾಂಗಣದ ಮುಂಭಾಗದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಂಟೈನರ್ ಕಾರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ತುಳುವಿನ ಮಾನ್ಯತೆಗೆ ರಾಜ್ಯಸಭೆಯಲ್ಲಿ ಪ್ರಯತ್ನ - ಡಾ. ಹೆಗ್ಗಡೆ ಭರವಸೆ

Posted On: 20-07-2022 12:05AM

ಮಂಗಳೂರು : ತುಳು ಭಾಷೆಯನ್ನು ಸಂವಿಧಾನದ ಕಲಂ 347ರ ಪ್ರಕಾರ ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾನ್ಯ ಮಾಡಲು, ಜನಪ್ರತಿನಿಧಿಗಳು ಹೇಳುತ್ತಿರುವ ತಾಂಂತ್ರಿಕ ಕಾರಣವನ್ನು ನಿವಾರಿಸುವಂತೆ ಜೈ ತುಳುನಾಡ್ ಸಂಘಟನೆಗಳು ಕಾರ್ಯಕರ್ತರು ಮಂಗಳವಾರ ಶ್ರೀಕ್ಷೇತ್ರದ ಧರ್ಮಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಜುಲೈ 24 : ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ವತಿಯಿಂದ ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ, ವಿದ್ಯಾರ್ಥಿವೇತನ ವಿತರಣೆ, ಸಾಧಕರಿಗೆ ಸನ್ಮಾನ

Posted On: 19-07-2022 11:29PM

ಕಾಪು : ಜಿ.ಎಸ್.ಬಿ ಸಮಾಜ ಹಿತರಕ್ಷಣಾ ವೇದಿಕೆ(ರಿ.), ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಮುದರಂಗಡಿ ಇದರ ಸಹಭಾಗಿತ್ವದಲ್ಲಿ ಜುಲೈ 24ರಂದು ವಿದ್ಯಾ ಪೋಷಕ ನಿಧಿ (2022-23)ವಿದ್ಯಾರ್ಥಿ ವೇತನವನ್ನು ಸುಮಾರು 500ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳಿಗೆ ಸುಮಾರು 70 ಲಕ್ಷ ಮೌಲ್ಯದ ವಿದ್ಯಾರ್ಥಿವೇತನ ವಿತರಣೆ, ಶೈಕ್ಷಣಿಕ ಪ್ರೇರಣಾ ಕಾರ್ಯಗಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದ ಮಾಧವ ಮಂಗಲ ಸಭಾಭವನದಲ್ಲಿ ಆಯೋಜಿಸಲಾಗಿದೆ. ಎಂದು ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಕಾಪು ವೆಂಕಟರಮಣ ದೇವಳದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ‌ ನೀಡಿದರು.

ಶಿರ್ವ ವಿಶ್ವಬ್ರಾಹ್ಮಣ ಯುವ ಸಂಗಮ ಮತ್ತು ಮಹಿಳಾ ಬಳಗದ ವತಿಯಿಂದ ಆಷಾಢ ಸಂಭ್ರಮ

Posted On: 19-07-2022 02:01PM

ಶಿರ್ವ : ಇಲ್ಲಿನ ವಿಶ್ವಬ್ರಾಹ್ಮಣ ಯುವ ಸಂಗಮ (ರಿ.) ಮತ್ತು ಮಹಿಳಾ ಬಳಗದ ವತಿಯಿಂದ ಶಿರ್ವದ ಹೋಟೆಲ್ ಮಂದಾರದ ಸಭಾಂಗಣದಲ್ಲಿ ನಡೆದ ಆಷಾಢ ಸಂಭ್ರಮ ಕಾರ್ಯಕ್ರಮವು ಜರಗಿತು.

ಜಿಲ್ಲೆಯಲ್ಲಿ 8 ಲಕ್ಷ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಿಕೆ ಗುರಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Posted On: 18-07-2022 07:42PM

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18 ರಿಂದ 59 ವರ್ಷದೊಳಗಿನ ಸಾರ್ವಜನಿಕರಿಗೆ ಸೆಪ್ಟಂಬರ್ 30 ರ ಒಳಗೆ 8 ಲಕ್ಷ ಕೋವಿಡ್-19 ಮುಂಜಾಗ್ರತಾ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಡೆದ, 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಉಚಿತ ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾಪು : ಬಿಜೆಪಿಯಿಂದ ರೈತ ಕಲ್ಯಾಣ ಯೋಜನೆಗಳ ಕರಪತ್ರ ಬಿಡುಗಡೆ ; ವಿದ್ಯಾರ್ಥಿಗಳಿಗೆ ಕೃಷಿ ಪ್ರಾತ್ಯಕ್ಷಿಕೆ

Posted On: 18-07-2022 06:20PM

ಕಾಪು : ಬಿಜೆಪಿಯ ಕಾಪು ಮಂಡಲ ರೈತ ಮೋರ್ಚಾ ಮತ್ತು ಗ್ರಾಮ ವಿಕಾಸ ಸಮಿತಿ ಪಟ್ಲ ಇವುಗಳ ಜಂಟಿ ಸಹಯೋಗದಲ್ಲಿ ಜುಲೈ 18ರಂದು ಪಟ್ಲದಲ್ಲಿ ಕೇಂದ್ರ ಸರ್ಕಾರದ ರೈತ ಕಲ್ಯಾಣ ಯೋಜನೆಗಳ ಕರಪತ್ರ ಬಿಡುಗಡೆ ಹಾಗೂ ನೇಜಿ ನಾಟಿಯ ಪ್ರಾತ್ಯಕ್ಷಿಕೆ ಕಾರ್ಯ ಜರಗಿತು.