Updated News From Kaup

ಕನ್ನಡ ಶಾಲೆಗಳು ಉಳಿಯಲು ಕಾಲಕ್ಕೆ ತಕ್ಕಂತೆ ಪರಿವರ್ತನೆ ಅಗತ್ಯ : ರಾಘವೇಂದ್ರ ಶ್ರೀನಿವಾಸ ಭಟ್

Thumbnail
Posted On: 28 May 2026, 09:59 AM

ಕಾಪು : ಅಧ್ಯಾಪಕರು ಮತ್ತು ಸಮಾಜಸೇವಕರನ್ನು ಸಮಾಜ ಸದಾ ನೆನಪಿನಲ್ಲಿ ಇಡುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿ ಸೋದೆ ಶ್ರೀಗಳಾದ ವಿಶ್ವೇಂದ್ರತೀರ್ಥ ಶ್ರೀಪಾದರಿಂದ ಸಂಸ್ಥಾಪಿಸಲ್ಪಟ್ಟ ಈ ವಿದ್ಯಾಸಂಸ್ಥೆ ಭವಿಷ್ಯದ ಕನಸ್ಸನ್ನು ಹೊತ್ತು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸಂಸ್ಕಾರವಂತ ಶಿಕ್ಷಣವನ್ನು ನೀಡಿದೆ. ಶಿಕ್ಷಣ ಕ್ಷೇತ್ರಕ್ಕೆ ಉಡುಪಿ ಅಷ್ಟಮಠಗಳಲ್ಲಿ ಅದಮಾರು, ಪೇಜಾವರ, ಸೋದೆ ಮಠಗಳ ಕೊಡುಗೆ ಅವಿಸ್ಮರಣೀಯ. ವಿದ್ಯಾರ್ಥಿಗಳು ತಾಯಿ, ತಂದೆ ಮತ್ತು ಶಾಲೆಯನ್ನೂ ಯಾವತ್ತೂ ಮರೆಯಬಾರದು. ಇಂದಿನ ಸ್ಫರ್ಧಾತ್ಮಕ ಕಾಲಘಟ್ಟದಲ್ಲಿ ಕನ್ನಡ ಶಾಲೆಗಳು ಉಳಿಯಲು ಕಾಲಕ್ಕೆ ತಕ್ಕಂತೆ ಪರಿವರ್ತನೆ ಅಗತ್ಯ ಎಂದು ಶತಮಾನೋತ್ತರ ಸೇವಾ ಇತಿಹಾಸ ಹೊಂದಿರುವ ಕರ್ನಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ನುಡಿದರು. 
ಅವರು ಬುಧವಾರ ಇನ್ನಂಜೆ ಎಸ್.ವಿ.ಎಚ್ ಕನ್ನಡ ಮಾಧ್ಯಮ ಶಾಲೆಗೆ ಬ್ಯಾಂಕ್‌ನ ಸಿಎಸ್‌ಆರ್ ನಿಧಿಯಿಂದ ಕೊಡುಗೆಯಾಗಿ ನೀಡಿದ ವಾಹನದ ದಾಖಲೆ ಸಹಿತ ಕೀ ಯನ್ನು ಯಸ್‌ವಿಎಚ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರೂ, ಉಡುಪಿ ಶ್ರೀಸೋದೆ ಮಠದ ಯತಿವರ್ಯರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರಿಗೆ ಹಸ್ತಾಂತರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೋದೆ ಶ್ರೀಗಳು ತಮ್ಮ ಆಶೀರ್ವಚನದಲ್ಲಿ 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ಆರಂಭೋತ್ಸವ ಕರ್ನಾಟಕ ಬ್ಯಾಂಕ್‌ನ ವಾಹನದ ಕೊಡುಗೆಯ ಮೂಲಕ ಶುಭಾರಂಭಗೊಂಡಿದೆ. ಕಾಲ ಬದಲಾಗುತ್ತಿದೆ. ವ್ಯವಸ್ಥೆಗಳು ಜಾಸ್ತಿಯಾಗುತ್ತಿವೆ. ಮಕ್ಕಳ ಭೌದ್ಧಿಕ ಮಟ್ಟ ಅಭಿವೃದ್ಧಿಗೆ ಶಿಕ್ಷಣದ ಜೊತೆಗೆ ಪೂರಕ ವ್ಯವಸ್ಥೆಗಳೂ ಆಗಬೇಕು. ಕರ್ನಾಟಕ ಬ್ಯಾಂಕ್‌ಗೂ ಸೋದೆ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಇನ್ನಂಜೆ ಶಿಕ್ಷಣ ಸಂಸ್ಥೆಗೆ ಇದು ಮೂರನೇ ಬಸ್‌ನ ಕೊಡುಗೆಯಾಗಿ ಬಂದಿದೆ. ವಿದ್ಯಾರ್ಥಿಗಳಿಗೂ ಈ ಭಾವನೆ ಇರಬೇಕು ಎಂದರು. 

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್.ಐತಾಳ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

 ಟ್ರಸ್ಟ್ನ ಉಪಾಧ್ಯಕ್ಷ ಪಿ.ಶ್ರೀನಿವಾಸ ತಂತ್ರಿ, ಎಸ್‌ವಿಎಚ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ವೇದಿಕೆಯಲ್ಲಿದ್ದರು.

 ಕರ್ನಾಟಕ ಬ್ಯಾಂಕ್ ಉಡುಪಿ ವಲಯದ ಸಹಾಯಕ ಮಹಾ ಪ್ರಬಂಧಕರಾದ ರಮೇಶ್ ವೈದ್ಯ, ಕರ್ನಾಟಕ ಬ್ಯಾಂಕ್ ಉಡುಪಿ ಶಾಖಾಧಿಕಾರಿ ಪ್ರಶಾಂತ್ ರಾವ್, ಬಂಟಕಲ್ಲು ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ನಾಗರಾಜ ಭಟ್, ಇನ್ನಂಜೆ ಪ್ರೌಢ ಶಾಲಾ ಮುಖ್ಯ ಶಿಕ್ಷಕ ನಟರಾಜ ಉಪಾಧ್ಯಾಯ ಉಪಸ್ಥಿತರಿದ್ದರು.

 ಸಂಸ್ಕೃತ ಪಂಡಿತರಾದ ರಾಘವೇಂದ್ರ ಪುರಾಣಿಕ್ ಪರಿಚಯಿಸಿದರು. ಉಪನ್ಯಾಸಕಿ ರೊಯಿಲಿನ್ ಪ್ರಿಯಾ ಕಸ್ತಲಿನೋ ನಿರೂಪಿಸಿದರು. ಸಂಸ್ಥೆಯ ಪ್ರಾಂಶುಪಾಲ ರಾಜೇಂದ್ರ ಪ್ರಭು ವಂದಿಸಿದರು.

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ತೃತೀಯ ವಾರ್ಷಿಕ ಪ್ರತಿಷ್ಠ ಮಹೋತ್ಸವ

Thumbnail
Posted On: 27 May 2026, 09:43 AM

ಮಂಗಳೂರು : ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ತೃತೀಯ ವಾರ್ಷಿಕ ಪ್ರತಿಷ್ಠ ಮಹೋತ್ಸವ.ಮೇ24 ರವಿವಾರ ವಿವಿಧ ಧಾರ್ಮಿಕ ಶ್ರೀ ಕ್ಷೇತ್ರದ ತಂತ್ರಿಗಳಾದ  ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ  ಜನಾರ್ಧನ ಭಟ್ಟ ಮತ್ತು ವಿಪ್ರ ವೃಂದದವರು ಬಹುಳ ವಿಜೃಂಭಣೆಯಿಂದ ನಡೆಸಿದರು.
.
 ಗಣಹೋಮ , ನಾಗದೇವರಿಗೆ ಪಂಚಾಮೃತ,ಸಾಮೂಹಿಕ ತಂಬಿಲ,ಆಶ್ಲೇಷ ಬಲಿ ಮತ್ತು ಪರಿವಾರ ಶಕ್ತಿಗಳಿಗೆ ಪರ್ವಪೂಜೆ, ಮಹಾಪೂಜೆ,ಮಹಾನ್ನಸಂತರ್ಪಣೆ ನಡೆಯಿತು.

 ನಂತರ ರಾಜಾಂಗಣದಲ್ಲಿ  ಐಶ್ವರ್ಯ ನವೀನ್ ಕುಲಾಲ್ ಕೊಡ್ಮಾನ್ ದಂಪತಿಗಳಿಂದ ದೀಪ ಬೆಳಗಿಸಿ ಭಜನಾ ಸಂಕೀರ್ತನೆ ಉದ್ಘಾಟಿಸಲಾಯಿತು.

ಕ್ಷೇತ್ರದ ಆಡಳಿತ ಮೊಕ್ತೇಸರರಾದ  ಸುಂದರ ಕುಲಾಲ್ ಶಕ್ತಿನಗರ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಕಾರ್ಯದಲ್ಲಿ ಭಕ್ತರು ವಿಶೇಷ ಸಹಕಾರವನ್ನು ನೀಡುತ್ತಾ ಬಂದಿದ್ದಾರೆ ಅವರೆಲ್ಲರೂ ಸಹಕಾರದಿಂದ ವರ್ಷಪೂರ್ತಿ ವಿವಿಧ ಧಾರ್ಮಿಕ ಕಾರ್ಯಗಳು ಯಶಸ್ವಿಯಾಗಿ ನಡೆಯಲು ಸಾಧ್ಯವಾಗಿದೆ ಎಂದು ನುಡಿದರು. 

ಕಾರ್ಯದರ್ಶಿ ಗಿರಿಧರ್ ಜೆ ಮುಲ್ಯ ಸ್ವಾಗತಿಸಿ, ಧನ್ಯವಾದ ನೀಡಿದರು.

ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಕದ್ರಿ, ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಸಂಕೀರ್ತನ ಸೇವಾ ವೃಂದ ಮತ್ತು ಶ್ರೀ ವೀರನಾರಾಯಣ ಭಕ್ತವೃಂದದವರಿಂದ ಭಜನಾ ಕಾರ್ಯಕ್ರಮವು ಜರಗಿತು, ಸಂಜೆ ಶ್ರೀ ದೇವರಿಗೆ ರಂಗಪೂಜೆ  ಪ್ರಸಾದ ವಿತರಣೆಯಾಯಿತು. ಸಾವಿರಾರು. ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು. ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ  ಅಧ್ಯಕ್ಷ ಮಯೂರ್ ಉಳ್ಳಾಲ್, ಕ್ಷೇತ್ರದ ಆಡಳಿತ ಮೊಕ್ತೇಸರರಾದ . ಸುಂದರ ಕುಲಾಲ್ ಶಕ್ತಿನಗರ, ಸೇವಾ ಟ್ರಸ್ಟ್ (ರಿ)ಅಧ್ಯಕ್ಷರಾದ  ಪ್ರೇಮಾನಂದ ಕುಲಾಲ್, ಮಾತೃ ಮಂಡಳಿ ಅಧ್ಯಕ್ಷೆ  ಮಮತಾ ದೇವದಾಸ್, ಜೀರಣೊದ್ಧಾರ ಸಮಿತಿ ಅಧ್ಯಕ್ಷರಾದ ದಾಮೋದರ ಎ. ಮತ್ತು.  ಕ್ಷೇತ್ರದ ಆಡಳಿತ ಮಂಡಳಿಯ ಗಿರಿಧರ್ ಜೆ. ಮೂಲ್ಯ (ಕಾರ್ಯದರ್ಶಿ), ದಯಾನಂದ ಪಿ.ಎಸ್. ಕುತ್ತಾರು (ಕೋಶಾಧಿಕಾರಿ),ಮೊಕ್ತೇಸರರಾದ ಮೋಹನ್ ದಾಸ್ ಅಳಪೆ, ರಾಜೇಶ್ ಕುಲಾಲ್ ಶಕ್ತಿನಗರ, ಸದಾನಂದ ಬಂಗೇರ ಕೆ. ಮುಡಿಪು, ಆನಂದ ಪಿ. ಉರ್ವ, ವಾಸುದೇವ ಮೂಲ್ಯ ಉಳಾಯಿಬೆಟ್ಟು ಮತ್ತು ರಮೇಶ್ ಎಂ. ಬಾಳ.
, ಶ್ರೀ ವೀರನಾರಾಯಣ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕಿರಣ್ ಅಟ್ಲೂರು.ಮತ್ತಿತರ ಪದಾಧಿಕಾರಿಗಳು. ಸುರೇಶ್ ಕುಲಾಲ್ ಮಂಗಳದೇವಿ, ಮುಂಬೈ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ ಮತ್ತಿತರರು ಉಪಸ್ಥಿತರಿದ್ದರು.
    

ಕಾಪು : ಚಂದ್ರನಗರದಲ್ಲಿ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Thumbnail
Posted On: 27 May 2026, 09:39 AM

ಕಾಪು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಘಟಕ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಬಟರ್ ಫ್ಲೈ ಗೆಸ್ಟ್ ಹೌಸ್ & ಪಾರ್ಟಿ ಹಾಲ್ ಚಂದ್ರನಗರ ಗ್ರಾಮ ಪಂಚಾಯತ್ ಕುತ್ಯಾರು /ಕಳತ್ತೂರು, ಅಲಯನ್ಸ್ ಕ್ಲಬ್ ಉಡುಪಿ ರಾಯಲ್, ರೋಟರಿ ಕ್ಲಬ್ ಶಿರ್ವ ಇದರ ಸಹಯೋಗದೊಂದಿಗೆ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಚಂದ್ರನಗರದ ಬಟರ್ ಫ್ಲೈ ಹಾಲ್ ಸಭಾಂಗಣದಲ್ಲಿ ಸಮಾಜ ಸೇವಕರು ಬಟರ್ ಫ್ಲೈ ಪಾರ್ಟಿ ಹಾಲ್ ಮಾಲಕರಾದ ಡಾ.ಫಾರೂಕ್ ಚಂದ್ರನಗರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಾಜ ಸೇವಕರಾದ ಡಾ.ಫಾರೂಕ್ ಮಾತನಾಡಿ, ಆರೋಗ್ಯ ಇಲಾಖೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ನಿಜಕ್ಕೂ ಶ್ಲಾಘನೀಯ  ಎಂದು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ದಂತ ಆರೋಗ್ಯ ಅಧಿಕಾರಿ ಡಾ.ಗಾಯತ್ರಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಹಲ್ಲುಗಳ ಶುಚಿತ್ವ ಕಾಪಾಡುವ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ವಸಂತಿ ಐ.ಸಿ.ಟಿ.ಸಿ ಆಪ್ತ ಸಮಾಲೋಚಕಿ ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಇವರು ಮಾತನಾಡಿ, ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ ಕಾರ್ಯಕ್ರಮದ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು.

ಉಚಿತ ನೇತ್ರ ತಪಾಸಣೆ, ಮಧುಮೇಹ ರಕ್ತದೊತ್ತಡ ತಪಾಸಣೆ, ದಂತ ಆರೋಗ್ಯ ತಪಾಸಣೆ, ರಕ್ತ ಹೀನತೆ ಕಂಡುಹಿಡಿಯುವ ಪರೀಕ್ಷೆ ಶಿಬಿರದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಶೆಣೈ, ಆರೋಗ್ಯ ರಕ್ಷಾ ಸಮಿತಿ ಕಾಪು ತಾಲೂಕು ಸದಸ್ಯರಾದ ದಿವಾಕರ.ಬಿ ಶೆಟ್ಟಿ ಕಳತ್ತೂರು, ಸಮಾಜ ಸೇವಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು, ಸೌರ್ಯ ಟ್ರಸ್ಟ್ ವ್ಯವಸ್ಥಾಪಕರಾದ ಸುಭ್ರಮಣ್ಯ, ನೇತ್ರಾಧಿಕಾರಿ ರಕ್ಷಿತಾ, ಶಿರ್ವ ರೋಟರಿ ಕ್ಲಬ್ ಸದಸ್ಯರಾದ ವಿಠ್ಠಲ್ ನಾಯ್ಕ್, ಏನ್.ಏನ್ ಓ ಜಿಲ್ಲಾ ಉಪಾಧ್ಯಕ್ಷರಾದ ಯು.ಎ ರಶೀದ್ ಕಾಪು, ಸಮಾಜ ಸೇವಕರಾದ ಡಾ.ಶೇಖ್ ವಹಿದ್ ಉದ್ಯಾವರ, ಶಂಶುದ್ದಿನ್ ಕರಂದಾಡಿ, ಎಸ್.ಎ ರಝಕ್ ಚಂದ್ರನಗರ ಹಾಗೂ ಕಳತ್ತೂರು ಕುತ್ಯಾರು ವಿಭಾಗದ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಸಮುದಾಯ ಆರೋಗ್ಯ ಅಧಿಕಾರಿ ದೀಪಿಕಾ ನಾಯಕ್ ನಿರ್ವಹಿಸಿದರು.

ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜು ಶಿರ್ವ - ವಾರ್ಷಿಕೋತ್ಸವ

Thumbnail
Posted On: 23 May 2026, 09:37 AM

ಶಿರ್ವ: ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಇದರ   ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿ, ಇಂದಿನ   ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸದಾ ಜಾಗೃತರಾಗಿದ್ದು ಭವಿಷ್ಯ ರೂಪಿಸಿಕೊಳ್ಳಬೇಕು. ನಾಲ್ಕುವರೆ ದಶಕಗಳ ಹಿಂದೆ ಕಷ್ಟಪಟ್ಟು ಕಟ್ಟಿಬೆಳೆಸಿದ ಈ ವಿದ್ಯಾದೇಗುಲದ ಕೀರ್ತಿಗೆ ಭಾಜನರಾಗುವಂತೆ ಸಾಧನೆ ಮಾಡಬೇಕು ಎಂದರು.   

ಅಧ್ಯಕ್ಷತೆ ವಹಿಸಿದ್ದ ವಿದ್ಯಾವರ್ಧಕ ಸಂಘ (ರಿ.), ಶಿರ್ವ ಇದರ ಆಡಳಿತಾಧಿಕಾರಿ ಪ್ರೊ.ವೈ.   ಭಾಸ್ಕರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ನಿಶ್ಚಿತ ಗುರಿ ಹೊಂದಿ ಅದರ ಸಾಧನೆಗೆ   ಕಟಿಬದ್ಧರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಕಾಲೇಜಿನ ವಾರ್ಷಿಕೋತ್ಸವ ನಿಮ್ಮ   ಸಾಧನೆಗಳನ್ನು ಗುರುತಿಸಿ ಹುರಿದುಂಬಿಸುವ ಸಮಾರಂಭ. ಗ್ರಾಮೀಣ ಭಾಗದ ಸಂಸ್ಥೆಗಳನ್ನು   ನಿಮ್ಮ ಕೊಡುಗೆಗಳ ಮೂಲಕ   ಪುನಶ್ಚೇತನಗೊಳಿಸಬೇಕು ಎಂದರು.      

ಈ ಸಂದರ್ಭದಲ್ಲಿ ಕಾಲೇಜಿನಲ್ಲಿ 40 ವರ್ಷ 8 ತಿಂಗಳು ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಬೋಧಕೇತರ ಸಿಬ್ಬಂದಿ ಗೀತಾ ಕುಮಾರಿ ಹಾಗೂ ಥೈಲ್ಯಾಂಡ್‌ನ ರಾಚ್‌ಭೂರಿ   ಪ್ರಾವಿನ್ಸ್ ಕ್ರೀಡಾಂಗಣದಲ್ಲಿ ನಡೆದ   ಥೈಲಾಂಡ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್   2026ರಲ್ಲಿ ಭಾಗವಹಿಸಿ ೧೦೦ ಮೀಟರ್ ರಿಲೇ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಗುಂಡೆಸೆತದಲ್ಲಿ ಕಂಚಿನ ಪದಕವನ್ನು ಪಡೆದ ಕಾಲೇಜಿನ   ದೈಹಿಕ ಶಿಕ್ಷಣ ನಿರ್ದೇಶಕಿ ಸೌಮ್ಯ ಕುಮಾರಿ   ಇವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಮಿಥುನ್ ಚಕ್ರವರ್ತಿ ಶೈಕ್ಷಣಿಕ ವರ್ಷದ ವರದಿ ವಾಚಿಸಿದರು.   

ವಿದ್ಯಾರ್ಥಿ ಕ್ಷೇಮಾಧಿಕಾರಿ ಹೇಮಲತಾ ಶೆಟ್ಟಿ   ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಕು. ಪ್ರಣತಿ ನಿರೂಪಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೃತ್ವಿಕ್   ಆಚಾರ್ಯ ವಂದಿಸಿದರು. 

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪವನ್, ಕಾಲೇಜಿನ ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಕಾಪು : ಒಲಂಪಿಯಾಡ್ ಉತ್ತೀರ್ಣರಾದ 219 ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣೆ

Thumbnail
Posted On: 21 May 2026, 06:34 AM

ಕಾಪು : ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಯಲು ಒಲಂಪಿಯಾಡ್ ಸಹಕಾರಿಯಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕಿನ ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ ಅವರು ಅಭಿಪ್ರಾಯಪಟ್ಟರು.

     ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾಪು ತಾಲೂಕಿನ ವ್ಯಾಪ್ತಿಯಲ್ಲಿ ಒಲಂಪಿಯಾಡ್ 6.0 ಪರೀಕ್ಷೆ ಬರೆದು ಉತ್ತೀರ್ಣರಾದ ಒಟ್ಟೂ 219 ವಿದ್ಯಾರ್ಥಿಗಳಿಗೆ  ಸರ್ಟಿಫಿಕೇಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

      ಪ್ರಸ್ತುತ ದಿನಗಳಲ್ಲಿ ಯಾವುದೇ ಹುದ್ದೆಯನ್ನು ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಬೇಕಾಗಿದ್ದು ಸಾಮಾನ್ಯವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕಾದರೆ ಸಾಕಷ್ಟು ಪೂರ್ವ ತಯಾರಿ ಅಗತ್ಯವಿರುತ್ತದೆ. ಗಾಮಾಭಿವೃದ್ಧಿ ಯೋಜನೆಯ CSC ಕೇಂದ್ರಗಳ ಮೂಲಕ 3 ರಿಂದ 12 ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಒಲಂಪಿಯಾಡ್ ಪರೀಕ್ಷೆಗೆ ನೋಂದಾವಣೆ ಮಾಡಿಸಿ  ಆನ್ಲೈನ್ ಮೂಲಕ ಪರೀಕ್ಷೆ ಬರೆದು ಸರ್ಟಿಫಿಕೇಟ್ ಪಡೆಯಬಹುದು ಹಾಗೂ ಅತೀ ಹೆಚ್ಚಿನ ಅಂಕಪಡೆದ ವಿದ್ಯಾರ್ಥಿಗಳು ಸ್ಕಾಲರ್ಶಿಪ್‌ಗಳನ್ನು ಪಡೆಯಬಹುದಾಗಿದೆ.

        ಒಲಂಪಿಯಾಡ್ ಕಾರ್ಯಕ್ರಮವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತಡರಹಿತ ವಾತಾವರಣ ರೂಪಿಸಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಗೆ ಸಹಕಾರಿಯಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಡಿಜಿಟಲ್ ಮಾಧ್ಯಮದ ಮೂಲಭೂತ ತಿಳುವಳಿಕೆ ಪಡೆಯಲು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಿ. ಎಸ್. ಸಿ ತಾಲೂಕಾ ನೋಡೆಲ್ ಅಧಿಕಾರಿಗಳಾದ ಶಿವಾನಂದ ಉಪಸ್ಥಿತರಿದ್ದರು.

ಕಾಪು : ಮಜೂರು ಪ್ರೀಮಿಯರ್ ಲೀಗ್-2026

Thumbnail
Posted On: 20 May 2026, 01:24 PM

ಕಾಪು : ಮಜೂರು ಪ್ರೀಮಿಯರ್ ಲೀಗ್ -2026 ಎಂ.ಪಿ.ಎಲ್ ಸೀಸನ್ 05 ಇದರ ಉದ್ಘಾಟನೆಯನ್ನು ಕಾಪು ಪೊಲೀಸ್ ವೃತ್ತ ನಿರೀಕ್ಷಕರಾದ ಆಜ್ಮತ್ ಆಲಿರವರು ನೆರವೇರಿಸಿದರು.
 ನೆರವೇರಿಸಿ ಮಾತನಾಡಿದ ಅವರು ಈ ರೀತಿಯ ಕ್ರೀಡಾಕೂಟ ಆಯೋಜಿಸಿದ ಯುವಕರ ಬಗ್ಗೆ ಮೆಚ್ಚುಗೆ ವಹಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಇಲ್ಲಿಯ 
ಯುವಕರು ಸಾಮಾಜಿಕ ಕಳಕಳಿ ಹಾಗೂ ಕ್ರೀಡಾಕೂಟಕ್ಕೆ ನೀಡುತ್ತಿರುವ ಪ್ರೋತ್ಸಾಹ ನಿಜಕ್ಕೂ ಸ್ಲಾಘನೀಯ ಎಂದು ಪ್ರೋತ್ಸಹಿಸಿ ಮಾತನಾಡಿದರು. 

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಪ್ರಥಮ ಬಹುಮಾನ ಪಡೆದ ಫೈಝಿ ಬಾಯ್ಸ್ ಹಾಗೂ ದ್ವಿತೀಯ ಬಹುಮಾನ ಪಡೆದ ಫ್ರೆಂಡ್ಸ್ ಮಜೂರು ತಂಡಕ್ಕೆ ಶುಭ ಹಾರೈಸಿದರು. 

ಅತಿಥಿಗಳಾಗಿ ಭಾಗವಹಿಸಿದ ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಅಧ್ಯಕ್ಷರಾದ ಡಾ.ಫಾರೂಕ್ ಚಂದ್ರನಗರ ಮಾತನಾಡಿ ಈ ಕ್ರೀಡಾಕೂಟಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೆ ಕೃತಜ್ಞತೆ ಸಲ್ಲಿಸಿದರು.

ಅನಿವಾಸಿ ಭಾರತೀಯ ಉದ್ಯಮಿ ರೈಟ್ ಚಾಯ್ಸ್ ಇದರ ಮಾಲಕರಾದ ಆಯಾಜ್ ಕೈಕಂಬ, ಮಾಜಿ ಕಾಪು ಪುರಸಭೆ ಸದಸ್ಯರಾದ ಇಮ್ರಾನ್ ಮಜೂರು, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಕ್, ಎಸ್.ಡಿ.ಪಿ.ಐ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೆ.ಪಿ ಸಾದಿಕ್, ಅಯಾನ್ ಡೆಕೋರೇಷನ್ ಮಾಲಕರಾದ ಆಸೀಫ್ ಮಜೂರು, ಎಂ ಹೆಚ್ ಹಮೀದ್,ಶೋಕತ್ತಾಲಿ ಮಲ್ಲಾರು, ಆಯಾಜ್ ಕುಚ್ಚಿಗುಡ್ಡೆ, ಫಕ್ರುದ್ದೀನ್ ಮಜೂರು, ಹರೀಶ್ ಪೂಜಾರಿ, ನಸ್ರುದ್ದಿನ್ ಮಜೂರು, ದೀಪಕ್ ಕುಮಾರ್, ಇಸ್ಮಾಯಿಲ್ ಎಂ.ಎಂ.ಎಸ್, ಎರ್ಮಳ್,,ಹರೀಶ್ ಪೂಜಾರಿ,ಪ್ರಕಾಶ್ ಶೆಟ್ಟಿ, ಫಯಾಜ್ ಎಫ್.ಎ ವಿಲ್ಲಾ ,ಮಂಜುನಾಥ್ ಮಜೂರು, ಕೌಸರ್ ಜುಬೈಲ್ ಇನ್ನಿತರರು ಉಪಸ್ಥಿತಿಯೊಂದಿಗೆ 
ಕಾರ್ಯಕ್ರಮದ ಆಯೋಜಕರಾದ 
ಮಿಸ್ಕಿನ್ ಫೌಂಡೇಶನ್ ಸೌದಿ ಅರೇಬಿಯಾ ಇದರ ಅಧ್ಯಕ್ಷರಾದ ಶಂಶುದ್ದಿನ್ ಉಮ್ಮರ್,ಸಲೀಂ ಮಜೂರ್ ಕಾಪು ಸುಲ್ತಾನ್ ಚಾಯ್ಸ್ ಇದರ ಮಾಲಕರಾದ ಕಬೀರ್ ಮಜೂರು,.  ಅಕ್ಬರಲಿ ಮುಸ್ತಾಫಾ ಶಾಯಿಲ್ ಮಜೂರ್  ತಂಡಗಳ ಉಸ್ತುವಾರಿಯಾಗಿ ,ಫೈಸಲ್ ಮಜೂರು ಹಾಗೂ  ಹಮೀದ್ ಮಲ್ಲಾರ್ ಮತ್ತಿತರರು  ಉಪಸ್ಥಿತರಿದ್ದರು.

ಪಡುಬೆಳ್ಳೆ ವಿಶ್ವಹಿಂದು ಪರಿಷದ್ ರಜತ ಸಂಭ್ರಮಾಚರಣೆ

Thumbnail
Posted On: 20 May 2026, 12:45 PM

ಶಿರ್ವ : ಭಗವಂತ ಎಲ್ಲರ ಕಲ್ಯಾಣಕ್ಕಾಗಿ ಭೂಮಿಗೆ ಬಂದಿದ್ದಾರೆ. ಸತ್ಕರ್ಮಗಳನ್ನು ಮಾಡಲು ದೇವರು ನಮ್ಮನ್ನು ಇಲ್ಲಿ ಇಟ್ಟಿದ್ದಾರೆ. ನಮ್ಮ ಸನಾತನ ಸಂಸ್ಕೃತಿ ಅತ್ಯಂತ ಬಲಿಷ್ಟವಾದುದು. ನಮ್ಮೊಳಗೆ ಜಾತಿ,ಮೇಲು,ಕೀಳು ಎಂಬ ಚಿಂತನೆ ಬಂತು.ಮೆಕಾಲೆ ಶಿಕ್ಷಣ ದಿಂದ ನಮ್ಮ ಮನೆಯೊಳಗೂ ವಿಭಜನೆಯ ಕಾನೂನು ಬಂತು. ನಮ್ಮ ಸಂಸ್ಕೃತಿಯನ್ನು ನಾವೇ ಹಾಳು ಮಾಡಿದ್ದೇವೆ. ಹಿಂದುಗಳಲ್ಲಿ ಭೇದಭಾವ ಸಲ್ಲದು. ಹಿಂದುಗಳು ಸದೃಢವಾದರೆ ಮಾತ್ರ ದೇಶ ಸದೃಢವಾಗುತ್ತದೆ. ಮನೆಯ ಸಂಸ್ಕಾರ,ವ್ಯವಸ್ಥೆ ಸದೃಢವಾಗಬೇಕಾದರೆ ನಾವು ಎಚ್ಚರಗೊಳ್ಳಬೇಕು. ಕುಟುಂಬ ಜೀವನ ಗಟ್ಟಿಯಾಗಬೇಕು. ಉಚಿತಗಳು ಸಮಾಜವನ್ನೇ ನಶ್ವರ ಮಾಡುತ್ತಿವೆ. ಹಿಂದೂ ಸಂಘಟನೆಗಳಿಗೆ ಸದಾ ಪ್ರೋತ್ಸಾಹ ನೀಡಬೇಕು.ಹಿಂದುಗಳು ಸಂಘಟಿತರಾದಾಗ ದೇಶ ಬಲಿಷ್ಟಿಗೊಳ್ಳುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀರಾಜಶೇಖರಾನಂದ ಸ್ವಾಮೀಜಿ ನುಡಿದರು. ಅವರು ರವಿವಾರ ಪಡುಬೆಳ್ಳೆ ಶ್ರೀಮಹಾಲಿಂಗೇಶ್ವರ ದೇವಳದ ಸಭಾಂಗಣದಲ್ಲಿ ವಿಶ್ವಹಿಂದು ಪರಿಷದ್,ಭಜರಂಗದಳ ಪಡುಬೆಳ್ಳೆ ಇದರ ರಜತ ಸಂಭ್ರಮ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವನ ನೀಡುತ್ತಾ, ಪ್ರತೀಮನೆಗಳಲ್ಲಿಯೂ ಕನಿಷ್ಠ ಮೂರು ಮಕ್ಕಳು ಇರಬೇಕು. ಧನಾತ್ಮಕವಾಗಿ ನೋಡುವ ಮನಸ್ಥಿತಿಯನ್ನು ರೂಢಿಸಿಕೊಳ್ಳಿ. ಸಂಸ್ಕಾರ, ಸಂಸ್ಕೃತಿ ಬೆಳೆಯುತ್ತದೆ. ಸಮಾಜ ಸಂಘಟನೆಗಳು ಬೆಳೆಯಲು ಮಕ್ಕಳು ಬೇಕು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರಬೇಕು ಎಂದರು. 

ಸಮಾರಂಭದ ಅಧ್ಯಕ್ಷತೆಯನ್ನು ಪಡುಬೆಳ್ಳೆ ವಿಶ್ವಹಿಂದು ಪರಿಷದ್ ಸ್ಥಾಪಕ ಅಧ್ಯಕ್ಷ ಬೆಳ್ಳೆ ದೊಡ್ಡಮನೆ ಅಜಿತ್ ಪುಷ್ಕರ ಶೆಟ್ಟಿ ವಹಿಸಿ ಮಾತನಾಡಿ, ಈ ಭಾಗದಲ್ಲಿ ಸಂಘಟನೆಯನ್ನು ಸ್ಥಾಪಿಸಲು ಪ್ರೇರಣೆ,ಮಾರ್ಗದರ್ಶನ ನೀಡಿದ ದಿ.ಕಮಲಾಕ್ಷ ಶೆಣೈ, ಪಾಂಗಾಳ ಪಾಂಡುರಂಗ ಶ್ಯಾನುಭಾಗ್, ಪುಂಡಲೀಕ ಮರಾಠೆ ಸಹಿತ ಅನೇಕ ಹಿರಿಯರು ಪ್ರೋತ್ಸಾಹಿಸಿದ್ದಾರೆ. ಜೊತೆಗೆ ಅನೇಕ ಪ್ರತಿರೋಧಗಳನ್ನೂ ಎದುರಿಸಿ, ನಿರಂತರ ಜಾತಿಮತಧರ್ಮಗಳ ಭೇಧವಿಲ್ಲದೆ ಸಮಾಜಮುಖಿಯಾಗಿ ಹತ್ತುಹಲವು ಯೋಜನೆಗಳನ್ನು ರೂಪಿಸಿ ಸಾರ್ವಜನಿಕರ ಪ್ರೀತಿ, ಪ್ರೋತ್ಸಾಹವನ್ನು ಗಳಿಸಿದ್ದೇವೆ ಎಂದರು. ಪಡುಬೆಳ್ಳೆ ವಿಹಿಂಪ ಸ್ಥಾಪಕ ಕಾರ್ಯದರ್ಶಿ ಶ್ರೀಶ ಸಾಮಗ ಪ್ರಾಸ್ತಾವಿಕ ಮಾತುಗಳಲ್ಲಿ ಈ ಸಂಘಟನೆ ಬೆಳೆದುಬಂದ ಸನ್ನಿವೇಶವನ್ನು ವಿವರಿಸಿದರು.

 ಮುಖ್ಯ ಅತಿಥಿಗಳಾಗಿ ವಿಹಿಂಪ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಸಂಘಟನೆಯ ಸ್ಥಾಪನೆಗೆ ಮಾರ್ಗದರ್ಶನ ನೀಡಿದ ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ, ಕಟ್ಟಿಂಗೇರಿ ಶ್ರೀಮಹಾಲಿಂಗೇಶ್ವರ ದೇವಳದ ಆಡಳಿತ ಧರ್ಮದರ್ಶಿ ಕೆ.ದೇವದಾಸ್ ಹೆಬ್ಬಾರ್ ಮಾತನಾಡಿದರು. 

ಕಾರ್ಯದರ್ಶಿ ವಿಘ್ನೇಶ್ ದೇವಾಡಿಗ ವರದಿ ವಾಚಿಸಿದರು. ವೇದಿಕೆಯಲ್ಲಿ ಪಡುಬೆಳ್ಳೆ ವಿಶ್ವಹಿಂದು ಪರಿಷದ್ ಅಧ್ಯಕ್ಷ ವಿಕಾಸ್ ಪೂಜಾರಿ, ಉಪಾಧ್ಯಕ್ಷ ಉದಯ ಆಚಾರ್ಯ, ಕೋಶಾಧಿಕಾರಿ ಅವಿನಾಶ್ ಆಚಾರ್ಯ, ಭಜರಂಗದಳದ ಸಂಚಾಲಕ ದಿವಾಕರ ಆಚಾರ್ಯ ಉಪಸ್ಥಿತರಿದ್ದರು. 

 ಗೌರವ ಅಧ್ಯಕ್ಷ ಬೆಳ್ಳೆ ಮಧ್ವರಾಜ ಭಟ್, ಹಿರಿಯರಾದ ಬೆಳ್ಳೆ ಸದಾನಂದ ಶೆಣೈ,ಗೌರವ ಸಲಹೆಗಾರರಾದ ಪರಶುರಾಮ ಭಟ್, ಸಂತೋಷ್ ಕುಲಾಲ್, ರಾಕೇಶ್ ಆಚಾರ್ಯ ಪಡುಬೆಳ್ಳೆ, ಸಹ ಕಾರ್ಯದರ್ಶಿ ಮಧುಕರ್ ಕುಲಾಲ್, ಭಜರಂಗದಳ ಸಹ ಸಂಚಾಲಕ ಕಿರಣ್ ದೇವಾಡಿಗ,ಸಾಮರಸ್ಯ ಪ್ರಮುಖ್ ರಾಘವೇಂದ್ರ ಶೆಟ್ಟಿ, ಧರ್ಮಪ್ರಸಾರಕ್ ಶಶಿಕಾಂತ್ ಕುಕ್ಯಾನ್, ಮಠ ಮಂದಿರ ಪ್ರಮುಖ್ ಮಹೇಶ್ ಪೂಜಾರಿ, ಗೋರಕ್ಷಕ್ ಪ್ರಮುಖ್ ಸುನಿಲ್ ದೇವಾಡಿಗ, ವಿದ್ಯಾರ್ಥಿ ಪ್ರಮುಖ್ ಸುದೀಪ್ ದೇವಾಡಿಗ, ಉಪಸ್ಥಿತರಿದ್ದರು.  
ಸಂಧ್ಯಾ ಶೆಟ್ಟಿ ಸ್ವಾಗತಿಸಿದರು. ರಾಶಿ ಶೆಟ್ಟಿ ಪ್ರಾರ್ಥಿಸಿದರು. ಬೆಳ್ಳೆ ನಡಿಮನೆ ವಿಶ್ವನಾಥ್ ಶೆಟ್ಟಿ ವಂದಿಸಿದರು.

25ನೇ ವರ್ಷದ "ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ" ಧಾರ್ಮಿಕ ಅನುಷ್ಠಾನಗಳು ವೇದಮೂರ್ತಿ ಮಧ್ವರಾಜ ಭಟ್ ಪಡುಬೆಳ್ಳೆ ಇವರ ನೇತೃತ್ವದಲ್ಲಿ ನಡೆಯಿತು. ಶ್ರೀಮಹಾಲಿಂಗೇಶ್ವರ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ "ಶ್ರೀದೇವಿ ಅಗ್ನಿ ಕಲ್ಲುರ್ಟಿ" ಯಕ್ಷಗಾನ ಬಯಲಾಟ ಜರುಗಿತು. 
ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಶ್ರೀದೇವಳಕ್ಕೆ ಆಗಮಿಸಿ ಪ್ರಸಾದ ಸ್ವೀಕರಿಸಿದರು. ವಿಶ್ವಹಿಂದು ಪರಿಷದ್ ಗೌರವ ಸನ್ಮಾನ ಸ್ವೀಕರಿಸಿ ಶುಭ ಹಾರೈಸಿದರು.

ಪಂಜಿಮಾರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ "ಉದ್ಭವ" ಲೋಕಾರ್ಪಣೆ

Thumbnail
Posted On: 20 May 2026, 12:36 PM

ಕಾಪು : ಗ್ರಾಮೀಣ ಭಾಗದ ಸಂಘಗಳು ಬಲಗೊಳ್ಳುತ್ತಿವೆ. ಸ್ವಂತ ಕಟ್ಟಡದ ಕನಸು ನನಸಾಗಿದೆ. ದಾನಿಗಳ ಸಹಕಾರದೊಂದಿಗೆ ಮಾಡಿದ ಈ ಸಾಧನೆಗೆ ಅಭಿನಂದನೆಗಳು. ಹಾಲಿನ ಸಂಗ್ರಹಣೆ 500 ರಿಂದ 600 ಲೀಟರ್‌ಗಳಿಗೆ ಏರಿಸಬೇಕು. ರಾಜ್ಯದ 15 ಒಕ್ಕೂಟಗಳಲ್ಲಿ ಗರಿಷ್ಠದರ ನೀಡುವ ಒಕ್ಕೂಟ ನಮ್ಮದು. ಲಾಭಾಂಶ ಕಡಿಮೆ ಮಾಡಿ ರೈತರಿಗೆ ನೀಡುತ್ತಿದ್ದೇವೆ. ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದೇವೆ. ಗುಣಮಟ್ಟದ ಕಲಬೆರಕೆ ರಹಿತ ಹಾಲು ಕೊಡಿ, ಉತ್ತಮ ಮಾರುಕಟ್ಟೆ ಒದಗಿಸುತ್ತೇವೆ ಎಂದು ದ.ಕ.ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು ನುಡಿದರು. 
ಅವರು ಮಂಗಳವಾರ ಶಿರ್ವ ಸಮೀಪದ ಪಂಜಿಮಾರು ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಇವರು ಖರೀದಿಸಿದ 4 ಸೆಂಟ್ಸ್ ಸ್ಥಳದಲ್ಲಿ ನಿರ್ಮಿಸಿದ ಸ್ವಂತ ಕಟ್ಟಡ "ಉದ್ಭವ"ವನ್ನು ಲೋಕಾರ್ಪಣೆಗೊಳಿಸಿ ಕೋಡು ಮುಲ್ಕಾಡಿ ಶ್ರೀದುರ್ಗಾಪರಮೆಶ್ವರೀ ದೇವಳದ ಸಭಾಂಗಣದಲ್ಲಿ ಏರ್ಪಡಿಸಿದ ಸಭಾಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಹಾಲಿನ ಉತ್ಪನ್ನಗಳನ್ನು ವಿವಿಧ ಮಾದರಿಯಲ್ಲಿ ಪರಿವರ್ತಿಸಿ ಜನರಿಗೆ ತಲುಪಿಸುತ್ತಿದ್ದೇವೆ. ತಿರುಪತಿಗೆ ನಂದಿನಿ ತುಪ್ಪ ಹೋಗುತ್ತದೆ. ಒಕ್ಕೂಟ ಹೈನುಗಾರರಿಗೆ ವಿವಿಧ ಯೋಜನೆಗಳ ಮೂಲಕ ಪಶುಆಹಾರ,  ಪೂರಕ ವಿವಿಧ ಪರಿಕರಗಳಿಗೆ ಅನುದಾನ ನೀಡುತ್ತಿದೆ ಎಂದರು. 

ಸಮಾರಂಭದ ಅಧ್ಯಕ್ಷತೆಯನ್ನು ಪಂಜಿಮಾರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಕೋಡು ವಹಿಸಿದ್ದರು. 

ಈ ಸಂದರ್ಭದಲ್ಲಿ ಪಂಜಿಮಾರು ಘಟಕದ ವತಿಯಿಂದ ಮಂಗಳೂರು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು, ಮತ್ತು ಉಪಾಧ್ಯಕ್ಷ ಉದಯ ಎಸ್ ಕೊಟ್ಯಾನ್,  ಕರ್ನಾಟಕ ಹಾಲು ಮಹಾ ಮಂಡಲ ಬೆಂಗಳೂರು ಮತ್ತು ದ.ಕ. ಹಾಲು ಒಕ್ಕೂಟ ನಿ. ಮಂಗಳೂರು ಇದರ ನಿರ್ದೇಶಕ ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಪಂಜಿಮಾರು ಸಹಕಾರಿ ಸಂಘದ ಮಾಜಿ ಅಧ್ಯಕ್ಷರುಗಳನ್ನು ಅಭಿನಂದಿಸಲಾಯಿತು. 

ಉದಯ ಎಸ್ ಕೋಟ್ಯಾನ್, ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ಸೇರಿದಂತೆ ವೇದಿಕೆಯಲ್ಲಿನ ಗಣ್ಯರು ಶುಭಾಶಂಸನೆ ಗೈದರು. 

ವೇದಿಕೆಯಲ್ಲಿ ನಿರ್ದೇಶಕರುಗಳಾದ ಸುಧಾಕರ ಶೆಟ್ಟಿ ಮೂಡಾರು, ಕೆ.ಶಿವಮೂರ್ತಿ, ಮಮತಾ ಆರ್ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ಶೇಖರಣೆ ಮತ್ತು ತಾಂತ್ರಿಕ ವಿಭಾಗದ ವ್ಯವಸ್ಥಾಪಕ ಡಾ.ರವಿರಾಜ್ ಉಡುಪ, ಶ್ರೀಕ್ಷೇತ್ರ ಧ.ಗ್ರಾ.ಯೋಜನೆ ಕಾಪು ಇದರ ಯೋಜನಾಧಿಕಾರಿ ಮಮತಾ ಶೆಟ್ಟಿ, ಶ್ರೀಮುಲ್ಕಾಡಿ ಶ್ರೀದುರ್ಗಾಪರಮೇಶ್ವರೀ ದೇವಳದ ಆಡಳಿತ ಮೊಕ್ತೇಸರ ಸುಧೀರ್ ಹೆಗ್ಡೆ, ಶಿರ್ವ ವ್ಯ.ಸೇ.ಸ.ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ, ವಲದೂರು ವೆಲ್ಫೇರ್ ಎಸೋಸಿಯೇಶನ್ ಅಧ್ಯಕ್ಷ ಅಶೋಕ್ ಕುಮಾರ್ ವಲದೂರು, ಬಂಟಕಲ್ಲು ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷ ಬಂಟಕಲ್ಲು ಮಾಧವ ಕಾಮತ್, ಕೋಡು ಶಾಲಾ ಹಳೆವಿದ್ಯಾರ್ಥಿ ಸಂಘದ ಕೋಶಾಧಿಕಾರಿ ರಾಜೇಶ್ ಶೆಟ್ಟಿ, ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ.ಮಾಧವ ಐತಾಳ್, ಸಹಾಯಕ ವ್ಯವಸ್ಥಾಪಕ ಡಾ.ಪ್ರಶಾಂತ್ ಆರ್.ಜಿ, ವಿಸ್ತರಣಾಧಿಕಾರಿ ಅಬ್ದುಲ್ ಶಮೀರ್, ಪಂಜಿಮಾರು ಸಂಘದ ಉಪಾಧ್ಯಕ್ಷ ನಿತ್ಯಾನಂದ ನಾಯಕ್ ಪಾಲಮೆ ಉಪಸ್ಥಿತರಿದ್ದರು.

 ಪ್ರಸಾದ್ ಶೆಟ್ಟಿ ವಲದೂರು ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶ್ ಪೂಜಾರಿ ವಲದೂರು ವರದಿ ವಾಚಿಸಿ, ವಂದಿಸಿದರು. ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಯಶವಂತ ನಿರೂಪಿಸಿದರು.

ಪಡುಬಿದ್ರಿ : ಶ್ರೀ ಮಹಮ್ಮಾಯಿ ತೆರಿಗೆ ಪಾವತಿದಾರರ ಮತ್ತು ಉಳಿತಾಯಗಾರರ ಕ್ರೆಡಿಟ್ ಕೊ -ಆಪರೇಟಿವ್ ಸೊಸೈಟಿಯ ನೂತನ ಪ್ರಧಾನ ಕಚೇರಿಯ ಉದ್ಘಾಟನೆ

Thumbnail
Posted On: 18 May 2026, 04:38 PM

ಪಡುಬಿದ್ರಿ :  ಭಾರತದ ಆರ್ಥಿಕತೆಯು ಪ್ರಾಥಮಿಕ ಕೃಷಿ ಆಧಾರಿತವಾಗಿರುವುದರಿಂದ ಹೆಚ್ಚಿನ ಸಹಕಾರಿ ಬ್ಯಾಂಕುಗಳು ಈ ವಿಭಾಗವನ್ನು ಪೊರೃೆಸುತ್ತಿದೆ. ಸಹಕಾರ ಮತ್ತು  ಸಮಾನತೆಯ ತತ್ವಗಳ ಮೇಲೆ ಕಾರ್ಯ ನಿರ್ವಹಿಸುವ ಭಾರತದ ಸಹಕಾರಿ ಬ್ಯಾಂಕುಗಳು, ವಿಶೇಷವಾಗಿ ಗ್ರಾಮೀಣ  ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನಿಲ್ಲಬೇಕು. ಈ ಬ್ಯಾಂಕುಗಳು ಲಾಭಗಳಿಸುವುದಕ್ಕಿಂತ ಹೆಚ್ಚಾಗಿ ಜನರಿಗೆ ಸೇವೆ ಸಲ್ಲಿಸುವುದನ್ನು ಪ್ರಮುಖ ಗುರಿಯಾಗಿ ಹೊಂದಬೇಕು. ರಾಜ್ಯ ಮಟ್ಟದ ಅತ್ಯುನ್ನತ ಸಹಕಾರಿ ಬ್ಯಾಂಕ್ ಅಗಿ ಮೂಡಿಬರಲಿ ಎಂದು  ಡಿ.ಕೆ ಗ್ರೂಫ್ ಅಫ್ ಕಂಪನಿಸ್ ಅಡಳಿತ ನಿರ್ದೇಶಕ ಅಲ್ವಿನ್ ಜೋಯಲ್ ನೊರಾನ್ಹ ಹೇಳಿದರು.
   ಅವರು ಪಡುಬಿದ್ರಿಯ ಅಗ್ರಜ ಮಂಜುಶ್ರೀ ಬಿಲ್ಡಿಂಗ್ ನ ಪ್ರಥಮ ಮಹಡಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಮಹಮ್ಮಾಯಿ ತೆರಿಗೆ ಪಾವತಿದಾರರ ಮತ್ತು ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೂ-ಅಪರೇಟಿವ್ ಸೊಸೈಟಿಯನ್ನು ಉದ್ಘಾಟಿಸಿ ಮಾತನಾಡಿದರು.

   ಗ್ರಾಮೀಣ ಪ್ರದೇಶದ ಸಹಕಾರಿ ಬ್ಯಾಂಕುಗಳು ಕೇವಲ ಹಣಕಾಸಿನ ವಹಿವಾಟು ನಡೆಸುವ ಸಂಸ್ಥೆಗಳಾಗಬಾರದು. ಗ್ರಾಮೀಣ ಪ್ರದೇಶದ ಬಡತನ ನಿರ್ಮೂಲನೆಗೆ, ಕೃಷಿಕರ ಅಭಿವೃದ್ಧಿಗೆ  ಹಾಗೂ ದೇಶದ ಆರ್ಥಿಕತೆಯ ತಳಹದಿಯನ್ನು ಬಲಪಡಿಸುವ ಗುರಿ ಹೂಂದುವುದು  ಅತ್ಯಗತ್ಯವಾಗಿದೆ ಎಂದು ಉಡುಪಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ನವೀನ್ ಚಂದ್ರ ಜೆ.  ಶೆಟ್ಚಿ ಹೇಳಿದರು.
 
ಡಿ.ಕೆ ಟ್ರಾನ್ಸ್ ಪೋರ್ಟ್ ಕಂಪನಿಯ ಮಾಲಕಿ ಲಿಜ್ಜಿ  ಡಿ'ಸೋಜ ಅಧ್ಯಕ್ಷತೆ ವಹಿಸಿದ್ದರು.

   ಈ ಸಂದರ್ಭದಲ್ಲಿ ಪಡುಬಿದ್ರಿ ಕಾಡಿಪಟ್ನ ಮೊಗವೀರ ಮಹಾಸಭಾದ ಅಧ್ಯಕ್ಷ ಅಶೋಕ್ ಸಾಲ್ಯಾನ್, ಉದ್ಯಮಿ ದೀಪಕ್ ಎರ್ಮಾಳ್, ರೋಟರಿ ವಲಯ ಪೂರ್ವ ಸಹಾಯಕ ಗವರ್ನರ್ ಗಣೇಶ್ ಅಚಾರ್ಯ ಉಚ್ಚಿಲ,   ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ವಿಶ್ವಾಸ್ ಅಮೀನ್, ಸೆಂಟ್ರಲ್‌ ಬ್ಯಾಂಕ್ ನಿವೃತ್ತ ಸೀನಿಯರ್ ಮೆನೇಜರ್ ರವೀಂದ್ರ ಶೆಟ್ಚಿ ಮುಂಬಯಿ,  ಕಾಪು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ರಮೀಜ್ ಹುಸೇನ್, ಕಾಪು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ದುಲ್‌ ಹಮೀದ್,  ಸಂಸ್ಥೆಯ ಪಾಲುದಾರ ಸಂತೋಷ್ ಪಡುಬಿದ್ರಿ, ವ್ಯವಸ್ಥಾಪಕ ಪಾಲುದಾರರಾದ ಪ್ರೇಮ ಕೋಟ್ಯಾನ್, ಸಂಸ್ಥೆಯ ಉಪಾಧ್ಯಕ್ಷ ಶರತ್ ಶೆಟ್ಚಿ ಎರ್ಮಾಳ್  ಉಪಸ್ಥಿತರಿದ್ದರು.
 
  ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು‌‌.‌ ಸುಧಾಕರ್. ಕೆ  ನಿರೂಪಿಸಿ, ವಂದಿಸಿದರು.

ಪಡುಬಿದ್ರಿ ದೇವಳದಲ್ಲಿ ಜರಗಿದ ಸಂಕಲ್ಪ – ಸಂಪನ್ನ – ಸಂಭ್ರಮ ಕಾರ್ಯಕ್ರಮ

Thumbnail
Posted On: 18 May 2026, 11:29 AM

ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಪಡುಬಿದ್ರಿ ಇಲ್ಲಿಯ ಸಮಗ್ರ ಜೀರ್ಣೋದ್ಧಾರ - ಪುನಃ ಪ್ರತಿಷ್ಠೆ - ಬ್ರಹ್ಮಕಲಶೋತ್ಸವದ ಸಂಕಲ್ಪದೊಂದಿಗೆ ಹಮ್ಮಿಕೊಂಡ ಭಜನೆ – ಸಂಕೀರ್ತನೆ - ಶಿವಪಂಚಾಕ್ಷರಿ ಜಪಯಜ್ಞ ದೀಪಾರಾಧನೆಯೊಂದಿಗೆ ಸಂಕಲ್ಪ – ಸಂಪನ್ನ – ಸಂಭ್ರಮ ಕಾರ್ಯಕ್ರಮವು ಭಾನುವಾರ ಪ್ರಾತ:ಕಾಲ ದೀಪ ಪ್ರಜ್ವಲನೆಯೊಂದಿಗೆ ಚಾಲನೆ ದೊರೆತು ದೀಪಾರಾಧನೆಯೊಂದಿಗೆ ಮುಕ್ತಾಯಗೊಂಡಿತು.

ಕಾರ್ಯಕ್ರಮವನ್ನು ಅನುವಂಶಿಕ ಮೊಕ್ತೇಸರರಾದ ಪಡುಬಿದ್ರಿ ಪೇಟೆಮನೆ ಭವಾನಿ ಶಂಕರ ಹೆಗ್ಡೆ ಹಾಗೂ ಕೊರ್ನಾಯ ಶ್ರೀಪತಿ ರಾವ್ ಉದ್ಘಾಟಿಸಿದರು.

ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ಸ್ಥಳೀಯ ಆಹ್ವಾನಿತ 12 ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರಗಿತು. ಭಕ್ತ ಜನರ ಸೇರುವಿಕೆಯೊಂದಿಗೆ ಸಂಜೆ ದೀಪಾರಾಧನೆಯು ಜರಗಿತು.

ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ಸ್ವಾಮೀಜಿ ಆಶೀರ್ವಚಿಸಿದರು.
 
ಗಾಯಕಿ  ಶಾಂತೇರಿ ಲಿಖಿತ್ ಪ್ರಭು, ಮಂಜೇಶ್ವರ ಮತ್ತು ಬಳಗದವರಿಂದ ಭಜನ್ ಸಂಧ್ಯಾ ಕಾರ್ಯಕ್ರಮವೂ ಜರಗಿತು.

ವೇದಮೂರ್ತಿ ಅಚ್ಚಡ ಶ್ರೀನಿವಾಸ ಆಚಾರ್ಯ ಮತ್ತು ಭಜನೆ, ಸಂಕೀರ್ತನೆ, ಶಿವಪಂಚಾಕ್ಷರಿ ಜಪಯಜ್ಞ ದೀಪಾರಾಧನೆಯಲ್ಲಿ ಸಹಕರಿಸಿದವರನ್ನು, ಶಾಂತೇರಿ ಲಿಖಿತ್ ಪ್ರಭು, ಮಂಜೇಶ್ವರ ಮತ್ತು ಬಳಗದವರನ್ನು ಗೌರವಿಸಲಾಯಿತು.

ಈ ಸಂದರ್ಭ ಅರ್ಚಕರುಗಳಾದ  ಎಚ್. ಪದ್ಮನಾಭ ಭಟ್, ಗುರುರಾಜ್ ಭಟ್, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ರವೀಂದ್ರನಾಥ್ ಜಿ. ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾವಡ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಶ್ರೀನಾಥ್ ಹೆಗ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳೀನಾಥ್ ಶೆಟ್ಟಿ, ಡಾ.ಎನ್.ಟಿ.ಅಂಚನ್, ಸುಚರಿತ ಅಂಚನ್, ಪ್ರಕಾಶ್ ದೇವಾಡಿಗ, ರಮಾಕಾಂತ ರಾವ್, ವೈ. ಸುರೇಶ್ ರಾವ್, ನಟರಾಜ ರಾವ್ ಪಿ.ಎಸ್., ಪಿ.ರಮಾಕಾಂತ ರಾವ್, ಸುಧಾ ಆರ್. ನಾವಡ, ಕಸ್ತೂರಿ ರಾಮಚಂದ್ರ, ರಾಜೇಂದ್ರ ಶೆಣೈ, ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶ್ರೀಧರ ಆಚಾರ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.