Updated News From Kaup

ಫೆಬ್ರವರಿ 12 : ಸೇನಾ ನಿವೃತ್ತಿ ಪಡೆದು ಹುಟ್ಟೂರಿಗೆ ಆಗಮಿಸುತ್ತಿರುವ ಪೆರ್ಡೂರು ರಮೇಶ್ ಕುಲಾಲ್

Thumbnail
Posted On: 01 Feb 2026, 03:56 PM

ಕಾಪು : ಭಾರತೀಯ ಸೇನೆಯ ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ (AOC) ತರಬೇತಿ ಕೇಂದ್ರದಲ್ಲಿ 22 ವರ್ಷ ಸುದೀರ್ಘ ಸೇವೆಗೈದು ನಿವೃತ್ತಿ ಹೊಂದಿ ತನ್ನ ಹುಟ್ಟೂರು ಕಾಪು ವಿಧಾನ ಸಭಾ ವ್ಯಾಪ್ತಿಯ ಪೆರ್ಡೂರು ದೂಪದಕಟ್ಟೆಗೆ ಫೆಬ್ರವರಿ 12 ರಂದು ಮಧ್ಯಾಹ್ನ 1 ಗಂಟೆಗೆ ಆಗಮಿಸಲಿದ್ದಾರೆ.

 ರಮೇಶ್ ಕುಲಾಲ್ ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಪಂಜಾಬ್, ಮಧ್ಯಪ್ರದೇಶ, ರಾಜಸ್ಥಾನ, ದಿಲ್ಲಿ, ಬೆಂಗಳೂರು ಹೀಗೆ ಹಲವೆಡೆ ಭಾರತೀಯ ಸೇನಾ ಸೇವೆಯಲ್ಲಿ ಸುದೀರ್ಘ ಸೇವೆ ನೀಡಿರುವರು.

ಪೆಭ್ರವರಿ 12: 22 ವರ್ಷದ ಸೇನಾ ನಿವೃತ್ತಿ ಪಡೆದು ಹುಟ್ಟೂರಿಗೆ ಆಗಮಿಸುತ್ತಿರುವ ಪೆರ್ಡೂರು ರಮೇಶ್ ಕುಲಾಲ್.

Thumbnail
Posted On: 31 Jan 2026, 05:58 PM

ಕಾಪು :: ಭಾರತೀಯ ಸೇನೆಯ ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ (AOC) ತರಬೇತಿ ಕೇಂದ್ರದಲ್ಲಿ 22 ವರ್ಷ ಸುದೀರ್ಘ ಸೇವೆಗೈದು ನಿವೃತ್ತಿ ಹೊಂದಿ ತನ್ನ ಹುಟ್ಟೂರು ಕಾಪು ವಿಧಾನ ಸಭಾ ವ್ಯಾಪ್ತಿಯ ಪೆರ್ಡೂರು ದೂಪದಕಟ್ಟೆಗೆ ಪೆಭ್ರವರಿ 12 ರಂದು ಮಧ್ಯಾಹ್ನ 1 ಗಂಟೆಗೆ ಆಗಮಿಸಲಿದ್ದಾರೆ, ರಮೇಶ್ ಕುಲಾಲ್ ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಪಂಜಾಬ್, ಮಧ್ಯಪ್ರದೇಶ, ರಾಜಸ್ಥಾನ, ದಿಲ್ಲಿ, ಬೆಂಗಳೂರು ಹೀಗೆ ಹಲವೆಡೆ ಭಾರತೀಯ ಸೇನಾ ಸೇವೆಯಲ್ಲಿ ಸುದೀರ್ಘ ಸೇವೆ ನೀಡಿರುವರು..

ಜ.31 : ಕಾಪು ಜೆಸಿಐ ಪದಗ್ರಹಣ

Thumbnail
Posted On: 29 Jan 2026, 05:19 PM

ಕಾಪು : ಪ್ರತಿಷ್ಠಿತ ಕಾಪು ಜೆಸಿಐ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣವು ಜನವರಿ 31 ರಂದು ಸಂಜೆ 7 ಗಂಟೆಗೆ ಕಾಪುವಿನ ಜೆಸಿಐ ಭವನದಲ್ಲಿ ಜರಗಲಿದೆ.

ನೂತನ ಅಧ್ಯಕ್ಷರಾಗಿ ನಮ್ಮ ಕಾಪು ನ್ಯೂಸ್ ಇದರ ಪ್ರವರ್ತಕ ವಿಕ್ಕಿ ಪೂಜಾರಿ ಮಡುಂಬು ಅಧಿಕಾರ ವಹಿಸಲಿದ್ದಾರೆ.

ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕಾಪು ಶ್ರೀ ಹೊಸ ಮಾರಿಗುಡಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜರ್ಷಿ ಕೆ.ವಾಸುದೇವ ಶೆಟ್ಟಿ ಭಾಗವಹಿಸಲಿದ್ದು, ಜೆಸಿಐ ಇಂಡಿಯಾ ವಲಯ 15ರ ಅಧ್ಯಕ್ಷರಾದ ಜೆಎಫ್ಎಫ್ ಸಂತೋಷ್ ಶೆಟ್ಟಿ, ಅತಿಥಿಗಳಾಗಿ ವಲಯ 15ರ ಮಾಜಿ‌ ಅಧ್ಯಕ್ಷರಾದ ಜೆಸಿಐ ಪಿಪಿಪಿ ರಾಕೇಶ್ ಕುಂಜೂರು, ವಲಯ 15ರ ವಲಯ ಉಪಾಧ್ಯಕ್ಷರಾದ ಜೆಎಫ್ಎಮ್ ಅರುಣ್ ಮಂಜ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ಜೆಸಿಐ ಕಾಪು ಪ್ರಕಟಣೆ ತಿಳಿಸಿದೆ.

ಕಾಪು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ವರ್ಗ ಹೊಸ ಮಾರಿಗುಡಿ ಭೇಟಿ

Thumbnail
Posted On: 27 Jan 2026, 06:55 PM

ಕಾಪು : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳಿ ಹಾಗೂ ತಾಯಿ ಗಿರಿಜಾ ಹಟ್ಟಿಹೋಳಿ ಮತ್ತು ಕುಟುಂಬಸ್ಥರೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.

ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಅವರನ್ನು ಗೌರವಿಸಲಾಯಿತು.

ದೇವಸ್ಥಾನದ ಎದುರಿನ ಎನ್.ಎಚ್ 66 ಹೆದ್ದಾರಿಯ ಡೈವರ್ಶನ್ ಅಂಡರ್ ಪಾಸ್ ಬಳಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಮನವಿ ನೀಡಲಾಯಿತು. ಇಲಾಖೆಯಿಂದ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಮಾಧವ ಆರ್. ಪಾಲನ್, ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಪ್ರಮುಖರಾದ ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
    

ಕುತ್ಯಾರು ಯುವಕ ಮಂಡಲ : ಕೆ.ಪಿ.ಎಲ್ ಟ್ರೋಫಿ 2026 ಸಂಪನ್ನ

Thumbnail
Posted On: 27 Jan 2026, 05:31 PM

ಕಾಪು : ಉಡುಪಿ ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಕುತ್ಯಾರು ಇವರ ಆಶ್ರಯದಲ್ಲಿ  ಕುತ್ಯಾರು ಪ್ರೀಮಿಯರ್ - 2026, 40 ಗಜಗಳ ಕ್ರಿಕೆಟ್ ಪಂದ್ಯಾಟ ಯುವಕ ಮಂಡಲದ ವಠಾರದಲ್ಲಿ ಭಾನುವಾರ ನಡೆಯಿತು.

ಯುವಕ ಮಂಡಲ ಅಧ್ಯಕ್ಷ ಮನೋಜ್ ಕುತ್ಯಾರು ಅಧ್ಯಕ್ಷತೆಯಲ್ಲಿ, ಪಂದ್ಯಾಟದ ಉದ್ಘಾಟನೆಯನ್ನು ಕುತ್ಯಾರು ಅರಮನೆಯ ಜಿನೇಶ್ ಬಲ್ಲಾಳ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವೇ|ಮೂ| ಕೇಂಜ ಶ್ರೀಧರ್ ತಂತ್ರಿ, ಶಿರ್ವ ಸಹಕಾರಿ ವ್ಯವಸಾಯಿಕ ಸಂಘ. ನಿ. ಶಿರ್ವ ಇದರ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ, ಶಿರ್ವ ಠಾಣೆಯ ಪಿ.ಎಸ್.ಐ  ಮಂಜುನಾಥ್ 
ಸಭಾಳಲ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

 ಸಂಜೆ ಸಮಾರೋಪ ಸಮಾರಂಭದಲ್ಲಿ ಶಿರ್ವದ ಉದ್ಯಮಿ ರತನ್ ಶೆಟ್ಟಿ ಕೊಲ್ಲೊಟ್ಟು, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಯುವಕ ಮಂಡಲ ಕುತ್ಯಾರು ಇದರ ಮಾಜಿ ಅಧ್ಯಕ್ಷರಾದ ಗುಲ್ವಾರ್ ಖಾನ್, ಉಲ್ಲಾಯ ಫ್ರೆಂಡ್ಸ್ ಕುತ್ಯಾರು ಅಧ್ಯಕ್ಷರಾದ  ಭಾರ್ಗವ ತಂತ್ರಿ, ಉದ್ಯಮಿ ದಿನೇಶ್ ಕುಲಾಲ್ ಶಿರ್ವ, ಕುತ್ಯಾರು ಗ್ರಾಮಸ್ಥರು, ಕ್ರೀಡಾಭಿಮಾನಿಗಳು, ಯುವಕ ಮಂಡಲ (ರಿ.) ಕುತ್ಯಾರು ಇದರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿ : ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಭೇಟಿ

Thumbnail
Posted On: 25 Jan 2026, 05:46 PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಅವರು ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.

 ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಲಾಯಿತು.

 ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶೇಖರ ಸಾಲ್ಯಾನ್ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್  ಹಾಗೂ ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.
 
    

ಜ.25 : ಶಿರ್ವದಲ್ಲಿ ರಥ ಸಪ್ತಮಿ -ಸಾಮೂಹಿಕ ಸೂರ್ಯ ನಮಸ್ಕಾರ ಯಜ್ಞ

Thumbnail
Posted On: 23 Jan 2026, 05:04 PM

ಶಿರ್ವ : ಪತಂಜಲಿ ಯೋಗ ಸಮಿತಿ, ಉಡುಪಿ ಜಿಲ್ಲೆ ಮತ್ತು ಶಿರ್ವ ಇದರ ನೇತೃತ್ವದಲ್ಲಿ ಮಹಿಳಾ ಮಂಡಲ(ರಿ.) ಶಿರ್ವ, ಯುವಕ ಮಂಡಲ(ರಿ.) ಕುತ್ಯಾರು, ಮತ್ತು ಶಿರ್ವ ಪರಿಸರದ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜ.25 ರವಿವಾರ 'ರಥಸಪ್ತಮಿ"(ಸೂರ್ಯ ಜಯಂತಿ)ಯ ಶುಭಾವಸರದಲ್ಲಿ ಶಿರ್ವ ಶ್ರೀ ಮಹಾಲಸಾ ನಾರಾಯಣೀ ದೇವಳದ ವಠಾರದಲ್ಲಿ  "ಸಾಮೂಹಿಕ ಸೂರ್ಯ ನಮಸ್ಕಾರ ಯಜ್ಞದ ದಶಮಾನೋತ್ಸವ" ಸಂಪನ್ನಗೊಳ್ಳಲಿದೆ.

"ರಥಸಪ್ತಮಿ"ಯ ದಿನವನ್ನು ಭಾರತೀಯ ಶಾಸ್ತ್ರಗಳ ಪ್ರಕಾರ "ಸೂರ್ಯ ಜಯಂತಿ'ಯಾಗಿ ಆಚರಿಸಲಾಗುತ್ತಿದೆ.  ಸೂರ್ಯನು ಮಕರ ರಾಶಿಯಿಂದ  ಉತ್ತರಾಭಿಮುಖವಾಗಿ  ಚಲನೆಯನ್ನು ಆರಂಭಿಸಿ ಏಳನೇಯ ದಿನವನ್ನು "ಮಾಘ ಶುಕ್ಲಸಪ್ತಮಿ" ಎಂದು ಕರೆಯುತ್ತಾರೆ. ಜಗತ್ತಿನ ಜೀವ ಜಂತುಗಳಿಗೆ  ಚೈತನ್ಯವನ್ನು  ತುಂಬಿದ ಸೂರ್ಯ ಜಯಂತಿಯಂದು  ನಾವು ನಿರೋಗಿಗಳಾಗಿ  ಶತಸಂವತ್ಸರ ಕಾಲ ಬಾಳುವಂತಾಗಲಿ ಎಂಬ ಆಶಯದೊಂದಿಗೆ  ಶಿರ್ವದಲ್ಲಿ ಪತಂಜಲಿ ಯೋಗ ಸಮಿತಿಯ ನೇತೃತ್ವದಲ್ಲಿ ಕಳೆದ ಒಂಭತ್ತು ವರ್ಷಗಳಿಂದ "ಸಾಮೂಹಿಕ ಸೂರ್ಯ ನಮಸ್ಕಾರ ಯಜ್ಞ" ನಡೆಯುತ್ತಿದೆ.
 

ಕಾಂಗ್ರೆಸ್ ಪಕ್ಷವೇ ಇಲ್ಲದ ಕಾಲದಲ್ಲಿ ಕೇಸರಿ ಧ್ವಜದ ಅಸ್ಥಿತ್ವ ಪ್ರಾರಂಭ : ರಮಿತಾ ಸೂರ್ಯವಂಶಿ

Thumbnail
Posted On: 23 Jan 2026, 03:35 PM

ಕಾಪು : ಉಡುಪಿ ಪರ್ಯಾಯದಲ್ಲಿ ಜಿಲ್ಲಾಧಿಕಾರಿಗಳು ಕೇಸರಿ ಧ್ವಜ ಹಾರಿಸಿದರು ಅನ್ನುವ ವಿಷಯದಲ್ಲಿ ಗೊಂದಲ ಮಾಡಿಕೊಂಡು ಹಿಂದೂಗಳ ಭಾವನೆಗೆ ಹಾಗೂ ಪರ್ಯಾಯಕ್ಕೆ ಅವಮಾನ ಮಾಡುವ ವ್ಯಕ್ತಿಗಳಿಗೆ ಮೊದಲು ಶಿಕ್ಷೆ ನೀಡಬೇಕು ಎಂದು ಬಿಜೆಪಿ ಮುಖಂಡೆ, ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಹೇಳಿದ್ದಾರೆ.

ಪರ್ಯಾಯ ಹಿಂದೂ ಕಾರ್ಯಕ್ರಮವಾಗಿದ್ದು ಇಲ್ಲಿ ಎಲ್ಲರೂ ಪಕ್ಷವನ್ನು ಮರೆತು ಕೆಲಸ ಮಾಡುವ ಅಗತ್ಯ ಇತ್ತು. ಅಲ್ಲದೇ ಕಾಂಗ್ರೆಸ್ ನವರು ಭಾಗವ ಧ್ವಜಕ್ಕೆ ಅವಮಾನಿಸಿದ್ದಲ್ಲದೆ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಭಾಗವ ಧ್ವಜ ಬುದ್ಧರು ಬಳಸಿದ ಇತಿಹಾಸ ಕಾಣಬಹುದು. ಮುಂದೆ ಶಿವಾಜಿ ಮಹಾರಾಜರ ಕಾಲದಲ್ಲಿ ಕೇಸರಿ ಧ್ವಜವನ್ನು ಶಿವಾಜಿಯ ಅಧ್ಯಾತ್ಮಿಕ  ಗುರು ಸಮರ್ಥ ರಾಮದಾಸ್  ತನ್ನ ಅಂಗ ವಸ್ತ್ರದಿಂದ ಹರಿದು ಕೊಟ್ಟಿದ್ದರಿಂದಾಗಿ ಅದು ತ್ರಿಕೋನ ಆಕಾರದಲ್ಲಿ ಇತ್ತು ಅನ್ನುವ ಇತಿಹಾಸ ಇದೆ.

 ರಾಮಾಯಣ, ಮಹಾಭಾರತ ಕಾಲದಲ್ಲೂ ಇದ್ದ ಇತಿಹಾಸವಿದೆ ಅಂತೂ ಕಾಂಗ್ರೆಸ್ ಪಕ್ಷವೇ ಇಲ್ಲದ ಕಾಲದಲ್ಲಿ ಕೇಸರಿ ಧ್ವಜದ ಅಸ್ಥಿತ್ವ ಪ್ರಾರಂಭವಾಗಿದೆ. ಅಂದ ಮೇಲೆ ಅದರ ಬಗ್ಗೆ ಮಾತಾಡುವ ನೈತಿಕತೆಯು ಇವರಿಗಿಲ್ಲ. ಅನ್ಯಧರ್ಮದವರನ್ನು ಓಲೈಕೆ ಮಾಡುವ ಕಾರಣಕ್ಕೆ ಇಂತಹ ನೀಚ ಕೆಲಸಕ್ಕೆ ಕೈ ಹಾಕಿ ಅದ್ಧುರಿ ಆಗಿರುವ ಪರ್ಯಾಯಕ್ಕೆ ಅವಮಾನ ಮಾಡಬೇಡಿ.  ಮುಂದೆ ಇದರಿಂದ ಜಿಲ್ಲಾಧಿಕಾರಿಗಳಿಗೆ ಸಮಸ್ಯೆ ಮಾಡಿದಲ್ಲಿ ಮಾತೃ ಶಕ್ತಿ ರಸ್ತೆಗಿಳಿಯಬೇಕಾದಿತು ಎಂದು ಎಚ್ಚರಿಕೆ ನೀಡಿದ್ದಾರೆ.

ಶ್ರೀ ಕ್ಷೇತ್ರ ಶಂಕರಪುರ: ಶ್ರೀ ಸೌಭಾಗ್ಯ ಕಾರ್ಯಕ್ರಮದಡಿ ಚಿನ್ನದ ಮೂಗುತಿ ಧಾರಣೆ

Thumbnail
Posted On: 23 Jan 2026, 03:28 PM

ಕಾಪು :  ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ಕಾಲಭೈರವ ದೇವಸ್ಥಾನದಲ್ಲಿ ದ್ವಾರಕಾಮಾಯಿ ಮಠದ ಏಕಾಜಾತಿ ಧರ್ಮ ಪೀಠದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಸಂಕಲ್ಪದಂತೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಶ್ರೀ ಸೌಭಾಗ್ಯ ಕಾರ್ಯಕ್ರಮದ ಮುಖ್ಯೆನ ಚಿನ್ನದ ಮೂಗುತಿ ಧಾರಣೆಯು ಶುಕ್ರವಾರ ಜರಗಿತು.

 ಹಿಂದೂ ಹೆಣ್ಣು ಮಕ್ಕಳ ಭಾಗ್ಯೋದಯದ ಬೆಳಕು ಶ್ರೀ ಸೌಭಾಗ್ಯ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಶಂಕರಪುರದಲ್ಲಿ ಆಯೋಜಿಸಿದ್ದು, ಗುರೂಜಿ ಅವರು ಪ್ರತಿ ಗುರುವಾರ ಹಾಗೂ ಶುಕ್ರವಾರ 5 ಹೆಣ್ಣು ಮಕ್ಕಳಿಗೆ ಮೂಗು ಚುಚ್ಚುವ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಇಂದು 4 ಹೆಣ್ಣು ಮಕ್ಕಳಿಗೆ ಗುರೂಜಿಯವರ ಉಪಸ್ಥಿತಿಯಲ್ಲಿ ಮೂಗುತಿ ಧಾರಣೆಯು ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಕಾಶ್ ಆಚಾರ್ಯರವರ ತಂಡ ಮೂಗುತಿ ಚುಚ್ಚುವ ಕಾರ್ಯಕ್ರಮವನ್ನು ಕೈಗೊಂಡಿದ್ದರು ಎಂದು ಮಠದ ಪ್ರಕಟಣೆ ತಿಳಿಸಿದೆ.

ಮಾ.1 ರಿಂದ 3 : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿ ಪ್ರಯುಕ್ತ ಮಾತೃ ವೈಭವ

Thumbnail
Posted On: 19 Jan 2026, 05:57 PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿಯ ಪ್ರಯುಕ್ತ ಮಾರ್ಚ್ 1 ರಿಂದ 3 ರ ವರೆಗೆ ಕಾಪುವಿನ ಅಮ್ಮನ ಸನ್ನಿದಾನದಲ್ಲಿ  ಭಕ್ತರ ಸಹಕಾರದೊಂದಿಗೆ  ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ " ಮಾತೃ ವೈಭವ " ವನ್ನು ವಿಜೃಂಭಣೆಯಿಂದ  ಆಚರಿಸಲು ಭಾನುವಾರ ಶ್ರೀಮಾತಾ ಸಭಾಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಯಿತು. 

ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಪ್ರಸ್ತಾವನೆಗೈದರು, ದೇಶ ವಿದೇಶಗಳಲ್ಲಿ ನೆಲೆಸಿರುವ ಭಕ್ತರು ಮತ್ತು ಕಾಪುವಿನ ಅಮ್ಮನ ಮಕ್ಕಳೆಲ್ಲರ ಸಹಕಾರದೊಂದಿಗೆ ಕಾಪು ಮಾರಿಯಮ್ಮನ ದೇವಸ್ಥಾನದ ಜೀರ್ಣೋದ್ಧಾರ, ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವೈಭವದಿಂದ ಸಂಪನ್ನಗೊಂಡಿದೆ. ಪ್ರತೀ ವರ್ಷ ಮಾರ್ಚ್ 1, 2, 3 ರಂದು ಪ್ರತಿಷ್ಠಾ ವರ್ಧಂತಿಯನ್ನು
 ವಿಜ್ರಂಭಣೆಯಿಂದ  ಆಚರಿಸಲು ಎಲ್ಲರೂ ಒಗ್ಗೂಡಿಕೊಂಡು ಮಾತೃ ವೈಭವ ಉತ್ಸವ ಸಮಿತಿಯನ್ನು ರಚಿಸಿ, ವಾರ್ಷಿಕ ಉತ್ಸವವನ್ನು ಆಚರಿಸುವಂತಾಗಬೇಕು‌ ಎನ್ನುವುದು ನಮ್ಮ ಅಭಿಲಾಷೆಯಾಗಿದೆ. ಎಲ್ಲರ ಸಹಕಾರವಿರಲಿ ಎಂದರು.

ಸಮಿತಿ ಕಾರ್ಯಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯ ನಡೆದು ಬಂದಿದೆ. ದೇಶ ವಿದೇಶಗಳಲ್ಲಿಯೂ ಪ್ರಶಂಸೆ ವ್ಯಕ್ತವಾಗುತ್ತಿದೆ. ರಾಜ್ಯ, ಕೇಂದ್ರ ಸರಕಾರಗಳ ಪ್ರತಿ‌ನಿಧಿಗಳು, ಎಲ್ಲಾ ರಾಜಕಾರಣಿಗಳೂ ಮಾರಿಗುಡಿಯ‌ ಬಗ್ಗೆ ಧನಾತ್ಮಕ ಅಭಿಪ್ರಾಯ ಹೊಂದಿದ್ದಾರೆ. ಪ್ರತಿಷ್ಠಾ ವರ್ಧಂತಿಯನ್ನು ವಿಶೇಷವಾಗಿ ಕಾಪುವಿಗೆ ಪ್ರಸಿದ್ಧಿ ತರುವ ಉತ್ಸವವನ್ನಾಗಿ ಆಚರಿಸೋಣ. ಈ ಉತ್ಸವ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೇ ಮಾದರಿಯಾಗಿ ಆಯೋಜನೆಗೊಳ್ಳಬೇಕಿದೆ ಎಂದರು.

ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರವು ಎಲ್ಲರ ಸಹಕಾರದೊಂದಿಗೆ ತಪಸ್ಸಿನ ರೀತಿಯಲ್ಲಿ  ಸಂಪನ್ನಗೊಂಡಿದೆ. ಅದರ ವಾರ್ಷಿಕ ವರ್ಧಂತಿಯನ್ನು ವಿಶೇಷ ರೀತಿಯಲ್ಲಿ ಆಚರಿಸುವ ಸಮಿತಿಯ ಉದ್ದೇಶ ಸ್ವಾಗತಾರ್ಹವಾಗಿದೆ. ಭಕ್ತರ ಸಹಕಾರದೊಂದಿಗೆ ವಿಜ್ರಂಭಣೆಯಿಂದ ಆಯೋಜನೆಗೊಳ್ಳುವಂತಾಗಲಿ ಎಂದು ಹಾರೈಸಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಲಾಲಾಜಿ‌ ಆರ್. ಮೆಂಡನ್, ಅನಿಲ್ ಬಲ್ಲಾಳ್ ಕಾಪು ಬೀಡು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಎಸ್. ಶೆಟ್ಟಿ, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕ್ರಂ ಕಾಪು, ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ ಸಾಲ್ಯಾನ್, ಮನೋಹರ ರಾವ್ ಕಲ್ಯ, ರವೀಂದ್ರ ಮಲ್ಲಾರು, ಜಯಲಕ್ಷ್ಮೀ ಎಸ್. ಶೆಟ್ಟಿ, ಚರಿತಾ ದೇವಾಡಿಗ ಹಾಗೂ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್‌ ಸ್ವಾಗತಿಸಿದರು. ಗೌರವ ಸಲಹೆಗಾರ ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.