Updated News From Kaup

ಎ.4 - 13 : ಕಾಪುವಿನಲ್ಲಿ ಹತ್ತು ದಿನದ ಪ್ರಾಣಾಯಾಮ - ಧ್ಯಾನದ ಉಚಿತ ಶಿಬಿರ

Posted On: 31-03-2025 04:13PM

ಕಾಪು : ಧೀಶಕ್ತಿ ಜ್ಞಾನ ಯೋಗ ಶಿಬಿರ ಮಂಗಳೂರು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾಪು ಮಂಡಲ ಇದರ ಆಶ್ರಯದಲ್ಲಿ ಕಾಯಿಲೆ ಹಾಗೂ ದು:ಖ ರಹಿತವಾದ ಜೀವನಕ್ಕಾಗಿ ಹತ್ತು ದಿನದ ಪ್ರಾಣಾಯಾಮ - ಧ್ಯಾನದ ಉಚಿತ ಶಿಬಿರ ಎಪ್ರಿಲ್ 04 ಶುಕ್ರವಾರದಿಂದ ಎಪ್ರಿಲ್ 13 ರವಿವಾರ ತನಕ ಸಾಯಂಕಾಲ 06 ಗಂಟೆಯಿಂದ 8.30 ಗಂಟೆಯವರೆಗೆ ಕಾಪು ಕಾಳಿಕಾಂಬಾ ದೇವಸ್ಥಾನದ ಸಭಾಭಾವನದಲ್ಲಿ ನಡೆಯಲಿದೆ.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಕಾಪು ತಾಲೂಕು : ಕಾಪುವಿನಲ್ಲಿ ಸಿಹಿತಿಂಡಿ ವಿತರಣೆ

Posted On: 31-03-2025 03:00PM

ಕಾಪು : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಕಾಪು ತಾಲೂಕು ವತಿಯಿಂದ ಸೋಮವಾರ ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ಕಾಪುವಿನಲ್ಲಿ ಸಿಹಿ ತಿಂಡಿ ವಿತರಿಸಲಾಯಿತು.

ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು : ಈದ್ ಉಲ್ ಫಿತ್ರ್ ಹಬ್ಬದ ಪ್ರಾರ್ಥನೆ

Posted On: 31-03-2025 12:41PM

ಕಾಪು : ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ಸೋಮವಾರ ಪ್ರಾರ್ಥನೆ ಸಲ್ಲಿಸಲಾಯಿತು.

ಪಾಜಕ ಕ್ಷೇತ್ರದಲ್ಲಿ ಭಕ್ತಿ ರಥ ಯಾತ್ರೆಗೆ ವೈಭವದ ಚಾಲನೆ

Posted On: 31-03-2025 08:49AM

ಕಾಪು : ಜಗದ್ಗುರು ಮಧ್ವಾಚಾರ್ಯರ ಪವಿತ್ರ ಜನ್ಮಭೂಮಿ ಉಡುಪಿ ಜಿಲ್ಲೆ ಪಾಜಕ ಕ್ಷೇತ್ರದಲ್ಲಿ ಭಕ್ತಿ ರಥಯಾತ್ರೆಗೆ ಅಧ್ವರ್ಯುಗಳೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು , ರಥದಲ್ಲಿ ಶ್ರೀ ಸೀತಾಲಕ್ಷ್ಮಣ ಆಂಜನೇಯ ಸಹಿತ ರಾಮದೇವರ ಪಂಚಲೋಹದ ಮೂರ್ತಿಯನ್ನು ಕುಳ್ಳಿರಿಸಿ ಪವಿತ್ರ ಮಂತ್ರೋದಕದಿಂದ ಶುದ್ಧೀಕರಿಸಿ ಅಲಂಕಾರಾದಿಗಳನ್ನು ಮಾಡಿ ಮಂಗಳಾರತಿ ಬೆಳಗಿದ ಬಳಿಕ ಭಗವಾಧ್ವಜ ಕೇಸರಿ ಪತಾಕೆಯ ನಿಶಾನೆ ತೋರಿಸಿ ಚಾಲನೆ ನೀಡಿದರು.

ಈದ್ ಸಂದೇಶ

Posted On: 31-03-2025 08:44AM

ಈದ್ ಉಲ್ ಫಿತ್ರ್ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಪವಿತ್ರ ಹಬ್ಬ ನಮ್ಮೆಲ್ಲರ ಜೀವನದಲ್ಲಿ ಸಂತೋಷ, ಸಹನೆ, ಶಾಂತಿ, ಪ್ರೀತಿ, ಸಮೃದ್ದಿಯನ್ನು ತರುವಂತಾಗಲಿ. (ಅಮೀನ್ ) ನಿಮ್ಮ ನೆರೆಕರೆಯವರಿಗೆ ಸಂತೋಷ ತರುವವರೆಗೂ, ನೀವು ಸಂಪೂರ್ಣವಾಗಿ ಹಬ್ಬವನ್ನು ಆಚರಿಸಿದವರಾಗಲಾರಿರಿ. (ಪ್ರವಾದಿ ವಚನ) ನಿಜವಾದ ಹಬ್ಬವೆಂದರೆ, ಅದು ಸಮಾಜದಲ್ಲಿರುವ ಪ್ರತಿಯೊಬ್ಬರ ಹೃದಯದಲ್ಲಿ ಸಂಭ್ರಮ ಮೂಡಿಸುವ ಹಬ್ಬವಾಗಿರಬೇಕು. ಹೌದು, ಭಾರತವೆಂಬುವುದು ಸರ್ವ ಜನಾಂಗದ ಶಾಂತಿಯ ಹೂದೋಟವಾಗಿರುತ್ತದೆ.

ಎಸ್ ಕೆ ಪಿ ಎ ಕಾಪು ವಲಯ : ಛಾಯಾ ಟ್ರೋಫಿ - 2025 ಉದ್ಘಾಟನೆ

Posted On: 31-03-2025 08:31AM

ಕಾಪು : ಸಂಘಟನೆಗಳು ಸದಸ್ಯರಿಗೆ ಒಗ್ಗಟ್ಟಿನ ಬಲದೊಂದಿಗೆ ನೈತಿಕ ಬೆಂಬಲವನ್ನು ನೀಡಬೇಕು. ಸೋತು ಗೆದ್ದಾಗ ಸಿಗುವ ಖುಷಿ ನಮ್ಮದಾಗಬೇಕು. ಸ್ಪರ್ಧಾತ್ಮಕತೆಯ ಯುಗದಲ್ಲಿ ತಾಂತ್ರಿಕತೆಗೆ ಅನುಗುಣವಾಗಿ ನಾವೂ ಹೊಂದಾಣಿಕೆ ಮಾಡಬೇಕಾಗಿದೆ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಕಾಪು ವಲಯ ಇವರ ಆಶ್ರಯದಲ್ಲಿ ಆದಿತ್ಯವಾರ ಕಟಪಾಡಿ ಎಸ್.ವಿ.ಎಸ್ ಕಾಲೇಜು ಮೈದಾನದಲ್ಲಿ ಪ್ರಪ್ರಥಮ ಬಾರಿಗೆ ಜರಗಿದ ಹೊನಲು ಬೆಳಕಿನ ಲೀಗ್ ಮಾದರಿಯ ಜಿಲ್ಲಾ ಮಟ್ಟದ ವಾಲಿಬಾಲ್ ಮತ್ತು ಹಗ್ಗ-ಜಗ್ಗಾಟ ಪಂದ್ಯಾಟ ಛಾಯಾ ಟ್ರೋಫಿ - 2025 ಉದ್ಘಾಟಿಸಿ ಮಾತನಾಡಿದರು.

ಬಂಟಕಲ್ಲು : ಬಿ.ಸಿ ರೋಡು - ಪಾಂಬೂರು ರಸ್ತೆ ಅಫಘಾತ ತಿರುವು ಬಂಟಕಲ್ಲು ನಾಗರಿಕ ಸಮಿತಿಯಿಂದ ದುರಸ್ಥಿ

Posted On: 30-03-2025 04:33PM

ಶಿರ್ವ : ಬಂಟಕಲ್ಲು ಸಮೀಪದ ಬಿ.ಸಿ ರೋಡು - ಪಾಂಬೂರು ರಸ್ತೆಯಲ್ಲಿ ಅನೇಕ ಅಫಘಾತಗಳಿಗೆ ಕಾರಣವಾಗಿರುವ ರಸ್ತೆಯ ತಿರುವು ಮರಗಿಡಗಳು ರಸ್ತೆಗೆ ಚಾಚಿಕೊಂಡಿರುವುದು ವಾಹನ ಸವಾರರಿಗೆ ರಸ್ತೆಯ ಮುಂದೆ ಕಾಣದೆ ಇರುವುದು ಹಾಗೂ ರಸ್ತೆಯ ಬದಿಯಲ್ಲಿ ಸ್ಥಳವಿಲ್ಲದೆ ದೂಡ್ಡ ದೊಡ್ಡ ಹೊಂಡಗಳನ್ನು ತಪ್ಪಿಸಲು ವಾಹನ ಸವಾರರು ಬಲಭಾಗಕ್ಕೆ ವಾಹನ ಚಲಾಯಿಸುತ್ತಿದ್ದುದರಿಂದ ಆ ತಿರುವುನಲ್ಲಿ ಅನೇಕ ಅಫಘಾತಗಳು ನಡೆಯುತ್ತಿದ್ದವು.

ಕಾಪು ಶ್ರೀ ಹೊಸ ಮಾರಿಗುಡಿಗೆ ಮುಂಬೈ ಪೊಲೀಸ್ ಆಡಳಿತಾಧಿಕಾರಿ ಭೇಟಿ

Posted On: 30-03-2025 10:19AM

ಕಾಪು : ಮುಂಬೈ ಪೊಲೀಸ್ ಆಡಳಿತಾಧಿಕಾರಿ ಜಯಕುಮಾರ್ ಐ. ಪಿ. ಎಸ್ ಅವರು ಸ್ನೇಹಿತರೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಅಮ್ಮನ ದರುಶನ ಪಡೆದು ಅನುಗ್ರಹ ಪ್ರಸಾದ ಸ್ವೀಕರಿಸಿದರು.

ಎ.6 : ಉಡುಪಿ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್

Posted On: 30-03-2025 08:35AM

ಕಾಪು : ಉಡುಪಿ ಜಿಲ್ಲಾ ಜಿಲ್ಲಾ ಚೆಸ್ ಅಸೋಸಿಯೇಷನ್ ಆಶ್ರಯದಲ್ಲಿ ಉಡುಪಿ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯು ಎಪ್ರಿಲ್ 6 ರಂದು ಡಾ. ಟಿ.ಎಂ.ಎ.ಪೈ ಮಣಿಪಾಲದಲ್ಲಿ ಜರಗಲಿದೆ.

ಸ.ಹಿ.ಪ್ರಾ.ಶಾಲೆ ಎರ್ಮಾಳು ಸೌತ್ ಶಾಲೆಗೆ ರೋಬೋ ಸಾಫ್ಟ್‌ ಸಂಸ್ಥೆಯಿಂದ ಪ್ರಾಜೆಕ್ಟರ್, ಲ್ಯಾಪ್ಟಾಪ್ ಹಸ್ತಾಂತರ

Posted On: 30-03-2025 08:05AM

ಎರ್ಮಾಳು : ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎರ್ಮಾಳು ಸೌತ್ ಶಾಲೆಗೆ ರೋಬೋ ಸಾಫ್ಟ್‌ ಸಂಸ್ಥೆಯವರು ನೀಡಿರುವ ಪ್ರಾಜೆಕ್ಟರ್ ಮತ್ತು ಲ್ಯಾಪ್ಟಾಪನ್ನು ರೋಬೋಸಾಫ್ಟ್ ಸಂಸ್ಥೆಯ ಕಾರ್ತಿಕ್ ಕೋಟ್ಯಾನ್ ರವರು ಶಾಲಾ ಮುಖ್ಯ ಶಿಕ್ಷಕಿಗೆ ಹಸ್ತಾಂತರಿಸಿದರು.