Updated News From Kaup

ಜೂ.13 -14 : ಮಥುರಾದಲ್ಲಿ ನಡೆಯಲಿರುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ

Thumbnail
Posted On: 11 Jun 2025, 11:07 AM

ಕಾಪು : ಉತ್ತರ ಪ್ರದೇಶ ಮಥುರಾದ ಶ್ರೀಧಾಮ ವೃಂದಾವನದಲ್ಲಿ ಜೂನ್ 13 ಮತ್ತು 14 ರಂದು ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಟಪಾಡಿಯ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಶ್ರೀ ಕೃಷ್ಣ ಜನ್ಮ ಭೂಮಿ ಮತ್ತು ಕಾಶಿ ಮುಕ್ತಿ ಹಾಗೂ ಯಾತ್ರಾ ಸ್ಥಳಗಳು ಮತ್ತು ಭವಿಷ್ಯದ ಏಳಿಗೆಗಳಿಗೆ ಭೌತಿಕ ಮತ್ತು ಆಧ್ಯಾತ್ಮಿಕ ಅಭಿವೃದ್ಧಿ, ಪಂಗಡದ ಅನಾನುಭವಿ ಸನ್ಯಾಸಿಗಳ ತರಬೇತಿಗಳ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಶಿರ್ವ ರೋಟರಿ : ಕೃತಜ್ಞತಾ ಸಮರ್ಪಣೆ, ಅಭಿನಂದನೆ, ಕುಟುಂಬ ಸಮ್ಮಿಲನ ಕಾರ್ಯಕ್ರಮ

Thumbnail
Posted On: 08 Jun 2025, 04:05 PM

ಶಿರ್ವ : 55 ವರ್ಷಗಳ ಸೇವಾ ಇತಿಹಾಸ ಹೊಂದಿರುವ ಶಿರ್ವ ರೋಟರಿಯ 2024 -25ನೇ ಸೇವಾ ವರ್ಷದ ಕೃತಜ್ಞತಾ ಸಮರ್ಪಣೆ, ಅಭಿನಂದನೆ ಹಾಗೂ ಕುಟುಂಬ ಸಮ್ಮಿಲನದ ಕಾರ್ಯಕ್ರಮ ಶಿರ್ವ ರೋಟರಿ ಸಭಾ ಭವನ ಬಂಟಕಲ್ಲು ಇಲ್ಲಿ ಜರಗಿತು. ಶಿರ್ವ ರೋಟರಿ ಅಧ್ಯಕ್ಷ ಆಲ್ವಿನ್ ಅಮಿತ್ ಅರಾನ್ಹಾ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ 2024-25ನೇ ಸಾಲಿನಲ್ಲಿ ವಲಯ 5ರ ನೇತೃತ್ವ ವಹಿಸಿದ ಸಹಾಯಕ ಗವರ್ನರ್ ಅನಿಲ್ ಡೇಸಾ ಶಂಕರಪುರ, ವಲಯ ಸೇನಾನಿ ಮೆಲ್ವಿನ್ ಡಿಸೋಜ ಶಿರ್ವ ಹಾಗೂ ವಲಯ ತರಬೇತುದಾರ ಶೈಲೇಂದ್ರ ರಾವ್ ಕಾರ್ಕಳ ಇವರನ್ನು ಶಿರ್ವ ರೋಟರಿ ವತಿಯಿಂದ ವಲಯದ ಮಾಜಿ ಸಹಾಯ ಗವರ್ನರ್‌ಗಳಾದ ಬಿ.ಪುಂಡಲೀಕ ಮರಾಠೆ ಮತ್ತು ಡಾ.ಅರುಣ್‌ಕುಮಾರ್ ಹೆಗ್ಡೆ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅಶ್ವಿನಿ ಅಮಿತ್ ಅರಾನ್ಹಾ, ಹಿರಿಯರಾದ ಹೆರಾಲ್ಡ್ ಕುಟಿನ್ಹೊ, ಮಾಜಿ ಅಧ್ಯಕ್ಷ ವಿಷ್ಣುಮೂರ್ತಿ ಸರಳಾಯ ವೇದಿಕೆಯಲ್ಲಿದ್ದರು. 2025-26ರ ನಿಯೋಜಿತ ಅಧ್ಯಕ್ಷ ವಿಲಿಯಮ್ ಮಚಾದೋ ಕಾರ್ಯಕ್ರಮ ನಿರೂಪಿಸಿದರು.

ಯುವ ವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು : ರಜತ ಸಂಭ್ರಮ ; ಮಳೆ ನೀರು ಕೊಯ್ಲು ಉದ್ಘಾಟನೆ

Thumbnail
Posted On: 08 Jun 2025, 03:45 PM

ಉಡುಪಿ : ಯುವ ವಿಚಾರ ವೇದಿಕೆಯ ರಜತ ಸಂಭ್ರಮದ ಅಂಗವಾಗಿ ಭೂಮಿಯ ಅಂತರ್ಜಲ ಮರುಪೂರಣ, ಪರಿಸರ ಸ್ನೇಹಿ ಸರಳ ತಂತ್ರಜ್ಞಾನದ ವಿಶಿಷ್ಟ ಯೋಜನೆಯಾದ ಮಳೆ ನೀರು ಕೊಯ್ಲು ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಭಾನುವಾರ ವೇದಿಕೆಯ ವಠಾರದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಪ್ಪೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ಪೂಜಾರಿ, ಅರ್ಥಪೂರ್ಣ ಯೋಜನೆ ಯಶಸ್ಸಾಗಲಿ. ಗ್ರಾಮದ ಜನತೆಗೆ ಮಾದರಿಯಾಗಲಿ ಎಂದರು. ಅತಿಥಿಗಳಾದ ಗ್ರಾಮ ಪಂಚಾಯತ್ ಸದಸ್ಯರಾದ ಅಶ್ವಿನ್ ರೊಚ್, ಉಪ್ಪೂರು ವ್ಯ.ಸೇ.ಸ. ಸಂಘದ ನಿರ್ದೇಶಕರಾದ ರಮೇಶ್ ಕರ್ಕೇರ, ಉಪ್ಪೂರು ಸರಕಾರಿ ಪ್ರೌಢ ಶಾಲೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರತ್ನಾಕರ ಮೊಗವೀರ ಮಾತನಾಡಿದರು. ವೇದಿಕೆ ವಠಾರದಲ್ಲಿ ಗಿಡಗಳನ್ನು ನೆಡಲಾಯಿತು. ವೇದಿಕೆಯ ಪ್ರಧಾನ ಕಾರ್ಯದರ್ಶಿ ಸದಾಶಿವ ಕುಮಾರ್ ಸ್ವಾಗತಿಸಿದರು. ಅಧ್ಯಕ್ಷರಾದ ಸಂದೀಪ್ ಶೆಟ್ಟಿ ವಂದಿಸಿದರು. ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಸಂದೀಪ್ ಕುಮಾರ್ ಮಂಜ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ

Thumbnail
Posted On: 08 Jun 2025, 03:21 PM

ಕಾಪು : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಸಂದೀಪ್ ಕುಮಾರ್ ಮಂಜ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ (ರಿ.) ಇದರ ಅಧ್ಯಕ್ಷರಾದ ಸಂದೀಪ್ ಕುಮಾರ್ ಮಂಜ ಇವರನ್ನು ಬ್ರಾಹ್ಮಣ ಸಮುದಾಯಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ.) ರಾಜ್ಯ ಉಪಾಧ್ಯಕ್ಷರನ್ನಾಗಿ ಅಧ್ಯಕ್ಷರಾದ ಎಸ್ ರಘುನಾಥ್ ಇವರು ಆಯ್ಕೆ ಮಾಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಲ್ಲಾರು-ಮಜೂರು : ನಿವೃತ್ತ ತಹಸೀಲ್ದಾರ್ ಪಿ ಬಾಬು ರವರಿಗೆ ಬಿ.ಜೆ.ಎಂ ಮಸ್ಜಿದ್ ಕಮಿಟಿಯಿಂದ ಸನ್ಮಾನ

Thumbnail
Posted On: 08 Jun 2025, 03:18 PM

ಕಾಪು : ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಮಸ್ಜಿದ್ ಆಡಳಿತ ಕಚೇರಿಗೆ ನಿವೃತ್ತ ತಹಶೀಲ್ದಾರ್ ಪಿ ಬಾಬು ಭೇಟಿ ನೀಡಿದರು. ಈ ಸಂದರ್ಭ ಮಸ್ಜಿದ್ ಕಮಿಟಿ ವತಿಯಿಂದ ಮಸ್ಜಿದ್ ಅಧ್ಯಕ್ಷರಾದ ಡಾ.ಯು.ಎಂ ಫಾರೂಕ್ ಚಂದ್ರನಗರ ಸನ್ಮಾನಿಸಿದರು. ಸನ್ಮಾನಿಸಿ ಮಾತನಾಡಿದ ಅವರು, ಪಿ ಬಾಬು ರವರು ತಹಸೀಲ್ದಾರ್ ಆಗಿ ಉತ್ತಮ ಕೆಲಸ ಮಾಡಿ ಜನ ಸಾಮಾನ್ಯರ ಮೆಚ್ಚುಗೆ ಪಡೆದವರು. ನಮ್ಮ ಊರಿನವರು ಎಂಬ ಹೆಗ್ಗಳಿಕೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಸ್ಜಿದ್ ಉಪಾಧ್ಯಕ್ಷರಾದ ಹಸನಬ್ಬ ಮಜೂರು, ರಝಕ್ ಕೊಪ್ಪಲ್ ತೋಟ, ರಝಕ್ ಮಲ್ಲಾರು, ಇಮ್ರಾನ್ ಮಜೂರು ರಝಕ್ ಕೊಪ್ಪ, ಶಂಶು ರಝಕ್ ಕರಂದಾಡಿ, ಉಮ್ಮರ್ ಗಾರ್ಡನ್ ಸಿಟಿ, ರಝಕ್ ಕೊಪ್ಪ ,ಅಬ್ದುಲ್ ರೆಹಮಾನ್, ರಜಬ್ ಕರಂದಾಡಿ, ಹಸನಬ್ಬ ಗುಡ್ಡೆಕೇರಿ ಮತ್ತಿತರರು ಉಪಸ್ಥಿತರಿದ್ದರು.

ಪಡುಬಿದ್ರಿ ಸಿ.ಎ.ಸೊಸೈಟಿಯ ಹೆಜಮಾಡಿ ಶಾಖಾ ಕಟ್ಟಡದಲ್ಲಿ ನೂತನ ಸಭಾಂಗಣ ಉದ್ಘಾಟನೆ

Thumbnail
Posted On: 08 Jun 2025, 03:11 PM

ಪಡುಬಿದ್ರಿ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ಹೆಜಮಾಡಿ ಶಾಖಾ ಕಟ್ಟಡದಲ್ಲಿರುವ 'ಎಚ್. ನಾರಾಯಣ' ನೂತನ ಸಭಾಂಗಣವನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸಹಿತ ಗಣ್ಯರು ಭಾನುವಾರ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಸಹಕಾರಿ ರಂಗದ ತತ್ವದಂತೆ ಕಾರ್ಯನಿರ್ವಹಿಸುತ್ತಿರುವ ಪಡುಬಿದ್ರಿ ಸಿ.ಎ.ಸೊಸೈಟಿ ಕಾರ್ಯ ಸಹಕಾರಿ ಸಂಸ್ಥೆಗಳಿಗೆ ಮಾದರಿಯಾಗಿದೆ. ಸರಕಾರಿ ಬ್ಯಾಂಕುಗಳಿಗಿಂತ ಸಹಕಾರಿ ಸೊಸೈಟಿಗಳಿಂದ ಜನಸಾಮಾನ್ಯರಿಗೆ ಅನುಕೂಲಕರವಾಗಿದೆ ಎಂದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ವಿದ್ಯೆ, ಆರೋಗ್ಯ, ಸಾಮಾಜಿಕ ಒಳಿತನ್ನು ಮಾಡುವ ದೃಷ್ಟಿಯಲ್ಲಿ ನಮ್ಮ ಜವಾಬ್ದಾರಿ ಎಂಬಂತೆ ಪಡುಬಿದ್ರಿ ಸಿ.ಎ. ಸೊಸೈಟಿ ಜನಸೇವೆ ಮಾಡುತ್ತಿದೆ ಎಂದರು. ಸನ್ಮಾನ : ದೈನಿಕ ಠೇವಣಿ ಸಂಗ್ರಹಕಾರರಾಗಿರುವ ವಿಠ್ಠಲ ದೇವಾಡಿಗ ಮತ್ತು ಗೋಪಾಲ ದೇವಾಡಿಗ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 5ನೇ ರ‌್ಯಾಂಕ್ ಪಡೆದ ಭೂಮಿಕಾ ಎಚ್.ಪುತ್ರನ್, ಸೊಸೈಟಿ ವ್ಯಾಪ್ತಿಯ ಶೇ. 95 ಕ್ಕಿಂತ ಅಧಿಕ ಅಂಕ ಗಳಿಸಿದ ರಿಷಿಕಾ ಕಿಶೋರ್, ಪ್ರಣವ್ ಪೂಜಾರಿ, ಶೇ. 100 ಫಲಿತಾಂಶ ದಾಖಲಿಸಿದ ಶಾಲೆಗಳನ್ನು ಗೌರವಿಸಲಾಯಿತು. ಕೆ.ಎಂ.ಎಫ್. ಬೆಂಗಳೂರು ನಿರ್ದೇಶಕರಾದ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ, ನಿವೃತ್ತ ಶಾಖಾ ವ್ಯವಸ್ಥಾಪಕರಾದ ಶ್ರೀನಿವಾಸ ಭಟ್, ಶಕುಂತಳಾರವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿರ್ದೇಶಕರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಕೆ.ಎಂ.ಎಫ್. ಬೆಂಗಳೂರು ನಿರ್ದೇಶಕರಾದ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ, ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷರಾದ ಬಿ. ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಕರ್ಜೆ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ನಿರ್ದೇಶಕ ಬಿ. ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಲ್ಲಿ, ಹೆಜಮಾಡಿ ಅಲ್-ಅಝರ್ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕ ಶೇಖಬ್ಬ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷರಾದ ವೈ.ಸುಧೀರ್ ಕುಮಾರ್ ವಹಿಸಿದ್ದರು. ಈ ಸಂದರ್ಭ ಹೆಜಮಾಡಿ ಗ್ರಾ.ಪಂ.ಅಧ್ಯಕ್ಷೆ ರೇಶ್ಮಾ ಮೆಂಡನ್, ಹೆಜಮಾಡಿ ಗ್ರಾ.ಪಂ.ಉಪಾಧ್ಯಕ್ಷ ಮೋಹನ್ ಸುವರ್ಣ, ಪಡುಬಿದ್ರಿ ಸಿ.ಎ ಸೊಸೈಟಿ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭ ಎಚ್ ಪುತ್ರನ್, ಪ್ರಭಾರ ಶಾಖಾ ವ್ಯವಸ್ಥಾಪಕಿ ಕೀರ್ತಿ, ಸೊಸೈಟಿ ನಿರ್ದೇಶಕರುಗಳು ಉಪಸ್ಥಿತರಿದ್ದರು. ವೈ.ಸುಧೀರ್ ಕುಮಾರ್ ಸ್ವಾಗತಿಸಿ, ವೀಕ್ಷಿತ ನಿರೂಪಿಸಿ, ಗುರುರಾಜ್ ಪೂಜಾರಿ ವಂದಿಸಿದರು.

ಕಾಪು : ಮಜೂರು ಮದರಸದಲ್ಲಿ ಮಾದಕ ದ್ರವ್ಯದ ವಿರುದ್ದ ಅಭಿಯಾನ

Thumbnail
Posted On: 07 Jun 2025, 01:31 PM

ಕಾಪು : ಸಮಾಜದಲ್ಲಿ ಅಮಲು ಪದಾರ್ಥದ ಉಪಯೋಗವು ಜಾಸ್ತಿಯಾಗುತಿದ್ದು ಮಾದಕ ದ್ರವ್ಯ ವಿರುದ್ಧದ ಅಭಿಯಾನಗಳು ಸಮಾಜದ ಕಣ್ಣು ತೆರೆಸಲು ಕಾರಣವಾಗಿರುತ್ತದೆ ಎಂದು ಮಸ್ಜಿದ್ ಅಧ್ಯಕ್ಷರಾದ ಡಾ. ಫಾರೂಕ್ ಚಂದ್ರನಗರ ತಿಳಿಸಿದರು. ಅವರು ಸಿರಾಜುಲ್ ಹುದಾ ಮದರಸ ಮಜೂರು -ಮಲ್ಲಾರು ಇದರ ವಿದ್ಯಾರ್ಥಿಗಳು ಸುನ್ನಿ ಬಾಲ ಸಂಘ ಇದರ ಅಧೀನದಲ್ಲಿ ನಡೆಸಿದ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು. ಮಜೂರ- ಮಲ್ಲಾರು ದಫ್ ಸಮಿತಿ ಯಂಗ್ಮೆನ್ಸ್ ಸಮಿತಿ, ಸ್ವಲಾತ್ ಸಮಿತಿ ಉತ್ತಮ ಕೆಲಸ ಮಾಡಿ ಜನ ಪ್ರೇರಣೆಯಾಗಿದೆ ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಜಮಾತ್ ಕತಿಬರಾದ ಅಬ್ದುರಶೀದ್ ಸಖಾಫಿ ಹಾಗೂ ಉಸ್ತಾದುರುಗಳು ಜಮಅತ್ ಸದಸ್ಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಡುವಣ ಲೋಕದ ನಡೆ - ಪುಸ್ತಕ ಬಿಡುಗಡೆ

Thumbnail
Posted On: 04 Jun 2025, 06:58 AM

ಕಾಪು : ಜಾನಪದ ಆರಾಧನೆಗಳಲ್ಲಿ ಮರೆಯಾಗುತ್ತಿರುವ ಸಾಂಸ್ಕೃತಿಕ ಮೌಲ್ಯಗಳನ್ನು ಹಾಗೂ ಸಂಪ್ರದಾಯ ಮತ್ತು ಪರಂಪರೆಗಳನ್ನು ಕಾಪಿಡಲು ಕ್ಷೇತ್ರಕಾರ್ಯ ಆಧರಿತ ಕೆಲಸಗಳು ಇನ್ನಷ್ಟು ನಡೆಯಬೇಕು ಎಂದು ಹಿರಿಯ ಸಾಹಿತಿ, ವಿಮರ್ಶಕ ಡಾ. ಬಿ.ಜನಾರ್ದನ ಭಟ್ ಹೇಳಿದರು. ಅವರು ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಜರಗಿದ ಕೆ‌.ಎಲ್.ಕುಂಡಂತಾಯರ "ನಡುವಣ ಲೋಕದ ನಡೆ - ದೈವಾರಾಧನೆ ನೆಲೆ ಕಲೆ" ಎಂಬ ಪುಸ್ತಕದ ದ್ವಿತೀಯ ಆವೃತ್ತಿಯ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತುಳುನಾಡಿನಲ್ಲಿ ಬೆಳೆದಿರುವ ದೇವಾಲಯ ಸಂಸ್ಕೃತಿ, ಜನಜೀವನದೊಂದಿಗೆ ಹಾಸುಹೊಕ್ಕಾಗಿರುವ ದೈವಾರಾಧನೆ, ನಾಗಾರಾಧನೆ ಮುಂತಾದ ಶ್ರದ್ಧೆಗಳ ವಿಭಾಗಗಳಲ್ಲಿ ಅಧ್ಯಯನ ನಡೆಸಿ ಲೇಖನಗಳನ್ನು ಬರೆಯುತ್ತಿರುವ ಕುಂಡಂತಾಯರ ಕಾರ್ಯವನ್ನು ಭಟ್ ಶ್ಲಾಘಿಸಿದರು. ಉದ್ಯಮಿ ನೈಮಾಡಿ ನಾರಾಯಣ ಕೆ.ಶೆಟ್ಟಿ ಅವರು "ನಡುವಣ ಲೋಕದ ನಡೆ" ಪುಸ್ತಕದ ದ್ವಿತೀಯ ಆವೃತ್ತಿಯನ್ನು ಬಿಡುಗಡೆಗೊಳಿಸಿದರು. ಎಲ್ಲೂರು ದೇವಳದ ಮಾಜಿ ಆಡಳಿತೆ ಮೊಕ್ತೇಸರ ಎಲ್ಲೂರು ಗುತ್ತು ಪ್ರಪುಲ್ಲ ಶೆಟ್ಟಿ, ಕುಂಜೂರು ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ದೇವರಾಜ ರಾವ್ ನಡಿಮನೆ, ಗ್ರಾಮಪಂಚಾಯತ್ ಸದಸ್ಯ ಯಶವಂತ ಶೆಟ್ಟಿ, ದೇವಳದ ಪ್ರಬಂಧಕ ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ಸಾಹಿತಿ, ಲೇಖಕ, ನಾಟಕಕಾರ ನಿವೃತ್ತ ಪ್ರಾಧ್ಯಾಪಕ ರಾಮದಾಸ ಕುಂಡಂತಾಯ, ನಿವೃತ್ತ ಬ್ಯಾಂಕ್ ಅಧಿಕಾರಿ ವಾಮನ ಕುಂಡಂತಾಯ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಕಲಾ ಶಿಕ್ಷಕ ಡಾ.ರಾಧಾಕೃಷ್ಣ ಉಪಾಧ್ಯಾಯ ಮೂಡುಬೆಳ್ಳೆ ಹಾಗೂ ಡಾ. ಜನಾರ್ದನ ಭಟ್ ಅವರನ್ನು ಗೌರವಿಸಲಾಯಿತು. ನಿವೃತ್ತ ಪ್ರಾಂಶುಪಾಲ ಸುದರ್ಶನ ವೈ.ಎಸ್. ಪ್ರಸ್ತಾವಿಸಿ ಸ್ವಾಗತಿಸಿದರು. ಸತೀಶ ಕುಂಡಂತಾಯ, ಭಾರ್ಗವ ಕುಂಡಂತಾಯ, ಶ್ರೀಕಾಂತ ಕುಂಡಂತಾಯ ಪಾಲ್ಗೊಂಡಿದ್ದರು. ಸತೀಶ ಶೆಟ್ಟಿ ಗುಡ್ಡೆಚ್ಚಿ‌‌ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಮುಂಡಾಲ ಯುವ ವೇದಿಕೆ ಪಡುಬಿದ್ರಿ : ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Thumbnail
Posted On: 01 Jun 2025, 07:17 PM

ಪಡುಬಿದ್ರಿ : ಇಲ್ಲಿನ ಮುಂಡಾಲ ಯುವ ವೇದಿಕೆಯ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಶೈಕ್ಷಣಿಕ ಪರಿಕರ ವಿತರಣಾ ಕಾರ್ಯಕ್ರಮ ರವಿವಾರ ಪಡುಬಿದ್ರಿ ಸಾಯಿ ಆರ್ಕೇಡ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ನಿವೃತ್ತ ಬ್ಯಾಂಕ್ ಅಧಿಕಾರಿ ರವಿಂದ್ರ ಸಾಲ್ಯಾನ್ ವೇದಿಕೆಯ ಕಾರ್ಯವನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಅಧ್ಯಕ್ಷರಾದ ಮಂಜುನಾಥ್ ಕರ್ಕೇರ ,ಕಾರ್ಯದರ್ಶಿ ನಿತಿನ್ ಸಾಲ್ಯಾನ್, ಕೋಶಾಧಿಕಾರಿ ಪ್ರಕಾಶ್ ಮುಂಡ್ಕೂರ್, ಪ್ರಮುಖರಾದ ಸುರೇಶ್ ಪಡುಬಿದ್ರಿ, ಶೇಖರ್ ಮುಂಡ್ಕೂರ್, ಪ್ರವೀಣ್ ಎರ್ಮಾಳ್, ಸೋಮಯ್ಯ ಎರ್ಮಾಳ್, ಮೋಹನ್ ಪಾದೆಬೆಟ್ಟು, ಕು.ಅಶ್ವಿನಿ ಸುವರ್ಣ, ಶಾಲಿನಿ ಸುರೇಶ್, ಭಾರತಿ ಪ್ರಸನ್ನ, ಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುರೇಶ್ ಪಡುಬಿದ್ರಿ ನಿರೂಪಿಸಿ, ಪ್ರವೀಣ್ ಎರ್ಮಾಳ್ ವಂದಿಸಿದರು.

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ರವರಿಗೆ ಸನ್ಮಾನ

Thumbnail
Posted On: 27 May 2025, 11:49 AM

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ನೂತನವಾಗಿ ಆಯ್ಕೆಯಾದ ಕರ್ನಾಟಕ ರಾಜ್ಯ ಹಾಲು ಮಹಾ ಮಂಡಲ ಬೆಂಗಳೂರು ಹಾಗು ದಕ್ಷಿಣ ಕನ್ನಡ ಒಕ್ಕೂಟ ನಿಗಮದ ನಿರ್ದೇಶಕರಾಗಿ ಆಯ್ಕೆಯಾದ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕರಾದ ದಯಾನಂದ್, ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ, ವಿಘ್ನೇಶ್ ಉಪಸ್ಥಿತರಿದ್ದರು.