Updated News From Kaup

ಪಡುಬಿದ್ರಿ : ಆಟಿದ ಲೇಸ್ ಕಾರ್ಯಕ್ರಮ

Posted On: 18-07-2022 05:58PM

ಪಡುಬಿದ್ರಿ : ಇಲ್ಲಿನ ಬಿಲ್ಲವ ಸಮಾಜ ಸೇವಾಸಂಘದ ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಮತ್ತು ಕಲ್ಪತರು ಮಹಿಳಾ ಸ್ವಸಹಾಯ ಗುಂಪು ಇವರ ಆಶ್ರಯದಲ್ಲಿ ಜುಲೈ 17ರಂದು ಪಡುಬಿದ್ರಿ ಬಿಲ್ಲವ ಸಂಘದಲ್ಲಿ ಆಟಿದ ಲೇಸ್ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮವನ್ನು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಮತ್ತು ಕೋಶಾಧಿಕಾರಿ ಅಶೋಕ್ ಪೂಜಾರಿ ಪಾದೆಬೆಟ್ಟು ಚೆನ್ನೆಮಣೆ ಆಡುವ ಮೂಲಕ ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ.ವಿರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಿದ ಗಣ್ಯರು

Posted On: 18-07-2022 05:45PM

ಕಾಪು : ರಾಜ್ಯಸಭೆಯ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ, ಪದ್ಮವಿಭೂಷಣ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಗುರ್ಮೆ ಫೌಂಡೇಶನ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಭಿನಂದಿಸಿದರು.

ಮಜೂರು : ರೈನ್ ಬೊ ಸೆಕ್ಟರ್ ಸಂಗಮ

Posted On: 18-07-2022 03:31PM

ಕಾಪು : ತಾಲೂಕಿನ ಮಜೂರು ಇಲ್ಲಿ ರೈನ್ ಬೊ ಸೆಕ್ಟರ್ ಸಂಗಮ ಜರಗಿತು. ಈ ಕಾರ್ಯಕ್ರಮವನ್ನು ಬಶೀರ್ ಉಸ್ತಾದ್ ರವರು ಉದ್ಘಾಟಿಸಿದರು.

ಉಡುಪಿ : ಕರ್ನಾಟಕ ಯುವ ಕಾಂಗ್ರೆಸ್ ವತಿಯಿಂದ ಉದ್ಯೋಗ ಸೃಷ್ಟಿ ಆ್ಯಪ್ ಬಗ್ಗೆ ಮಾಹಿತಿ

Posted On: 17-07-2022 11:34PM

ಉಡುಪಿ :ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಾಲ್ಪಡ್ ರವರ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಯೂಥ್ ಜೋಡೋ ಬೂತ್ ಜೋಡೋ ಎನ್ನುವ ಕಾರ್ಯಕ್ರಮ ಹಾಗೂ ಉದ್ಯೋಗ ಸೃಷ್ಟಿ ಎನ್ನುವ ಆ್ಯಪ್ ಬಿಡುಗಡೆ ಮಾಡಿದ್ದೇವೆ.

ಮಲ್ಪೆ ಪಡುಕೆರೆ : ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ

Posted On: 17-07-2022 11:11PM

ಉಡುಪಿ : ಭಾರತೀಯ ಜನತಾಪಾರ್ಟಿ, ಉಡುಪಿ ನಗರ ಇವರ ಆಶ್ರಯದಲ್ಲಿ ಶ್ರೀದೇವಿ ಅಂಜನೇಯ ಫ್ರೆಂಡ್ಸ್ (ರಿ.) ಕಿದಿಯೂರು ಪಡುಕೆರೆ, ಶ್ರೀ ಬಾಲಾಂಜನೇಯ ಪೂಜಾ ಮಂದಿರ, ಕಿದಿಯೂರು ಪಡುಕೆರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಇವರ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ 8 ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಸೇವೆ ಬಡವರ ಕಲ್ಯಾಣ, ಸುಶಾಸನ ಕಾರ್ಯಕ್ರಮದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ಮಲ್ಪೆ ಪಡುಕೆರೆ ಶ್ರೀ ದೇವಿ ಆಂಜನೇಯ ವಠಾರದಲ್ಲಿ ಜರಗಿತು.

ಕಟಪಾಡಿ : ಮಟ್ಟು ಬ್ರಿಡ್ಜ್ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

Posted On: 17-07-2022 01:20PM

ಕಾಪು ತಾಲೂಕಿನ ಕಟಪಾಡಿಯ ಮಟ್ಟು ಬ್ರಿಡ್ಜ್ ಬಳಿ ಸುಮಾರು 50 ರಿಂದ 55 ವರ್ಷ ಪ್ರಾಯದ ವ್ಯಕ್ತಿಯ ಅಪರಿಚಿತ ಶವವೊಂದು ಕೊಳೆತ ರೀತಿಯಲ್ಲಿ ಪತ್ತೆಯಾಗಿದ್ದು, ಈ ಶವವು ಬೆಳಿಗ್ಗೆ ಸುಮಾರು 10.30 ರ ವೇಳೆಗೆ ಪಾಂಗಾಳ ಭಾಗದಲ್ಲಿ ಕಟಪಾಡಿ ಕಡೆಗೆ ತೇಲಿಕೊಂಡು ಹೋಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಕಟಪಾಡಿ ಬ್ರಿಡ್ಜ್ ಬಳಿ ಹೊಂದಿಕೊಂಡು ಪತ್ತೆಯಾದ ಈ ಅಪರಿಚಿತ ಶವವನ್ನು ಸೂರಿ ಶೆಟ್ಟಿ ಕಾಪು ನೇತೃತ್ವದಲ್ಲಿ ಮೇಲಕ್ಕೆ ಎತ್ತಿ, ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಕಾಪು ಠಾಣಾಧಿಕಾರಿ ಶ್ರೀಶೈಲಂ ಮುರಗೋಡು ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ : ವಿಪರೀತ ಮದ್ಯಪಾನದ ಚಟದಿಂದ ವ್ಯಕ್ತಿಯೋರ್ವ ನಿಧನ

Posted On: 17-07-2022 12:27PM

ಉಡುಪಿ : ಮಧುಕರ ಸುವರ್ಣ (43)ರವರು ತನ್ನ ತಾಯಿಯೊಂದಿಗೆ ಕುತ್ಪಾಡಿ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂದಿರದ ಬಳಿ ವಾಸ್ತವ್ಯವಿದ್ದು, ವಿಪರೀತ ಮದ್ಯಪಾನ ಮಾಡುವ ಚಟವನ್ನು ಹೊಂದಿದ್ದು, ಜುಲೈ 15ರ ಸಂಜೆ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದವರನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಮಧುಕರ ಸುವರ್ಣರು ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿದೆ.

ಚೈತನ್ಯ ಕಲಾವಿದರು ಬೈಲೂರು ತಂಡದ ನೂತನ ನಾಟಕದ ಮುಹೂರ್ತ

Posted On: 17-07-2022 12:15PM

ಉಡುಪಿ : ಚೈತನ್ಯ ಕಲಾವಿದರು ಬೈಲೂರು ತಂಡದ 8ನೇ ನಾಟಕ ವಾರ್ಡ್ ನಂಬರ್-2 ಇದರ ಶುಭ ಮುಹೂರ್ತವು ಜು. 15ರಂದು ಬೈಲೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಿತು.

ಕಾಪು : ಲಾರಿ ಚಾಲಕನ ನಿರ್ಲಕ್ಷ್ಯತನದ ಚಾಲನೆ ಕಾರಿಗೆ ಹಾನಿ

Posted On: 17-07-2022 12:11PM

ಕಾಪು : ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಕಾರೊಂದಕ್ಕೆ ಹಾನಿಯಾದ ಘಟನೆ ಜುಲೈ 16ರಂದು ಕಾಪುವಿನಲ್ಲಿ ನಡೆದಿದೆ.

ಕಾಪು : ಶಿರ್ವದಲ್ಲಿ ಅನಿಯಮಿತ ವಿದ್ಯುತ್ ಕಡಿತ ; ಬಳಕೆದಾರರಿಂದ ಮೆಸ್ಕಾಂ ಕಛೇರಿ ಎದುರು ಬೃಹತ್ ಪ್ರತಿಭಟನೆ

Posted On: 16-07-2022 04:26PM

ಶಿರ್ವ: ಮೆಸ್ಕಾಂ ಇಲಾಖೆಯ ವ್ಯಾಪ್ತಿಯಲ್ಲಿ ೫- ೬ ತಿಂಗಳಿಂದ ನಿರಂತರವಾಗಿ ಅನಿಯಮಿತ, ರಾತ್ರಿ ಹಗಲು ಎನ್ನದೆ ವಿದ್ಯುತ್ ಕಡಿತ, ಶಿರ್ವ ಮೆಸ್ಕಾಂ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯನ್ನು ಪ್ರತಿಭಟಿಸಿ, ಬಳಕೆದಾರರ ಬೃಹತ್ ಪ್ರತಿಭಟನೆ ಶಿರ್ವ ಮೆಸ್ಕಾಂ ಕಛೇರಿ ಎದುರು ಶನಿವಾರ ಬೆಳಿಗ್ಗೆ ನಡೆಯಿತು.