Updated News From Kaup

ನಟ ಪೃಥ್ವಿ ಅಂಬಾರ್‌ ತಾಯಿ ವಿಧಿವಶ

Posted On: 16-07-2022 01:59PM

ಕಾಪು : ಉದಯೋನ್ಮುಖ ನಟ, ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಶಿರ್ವ ನಿರಂತರ, ಅನಿಯಮಿತ ವಿದ್ಯುತ್ ಕಡಿತ ನಾಳೆ ಬಳಕೆದಾರರ ಬೃಹತ್ ಪ್ರತಿಭಟನೆ

Posted On: 15-07-2022 11:30PM

ಶಿರ್ವ : ಮೆಸ್ಕಾಂ ಇಲಾಖೆಯ ವ್ಯಾಪ್ತಿಯಲ್ಲಿ 5- 6 ತಿಂಗಳಿಂದ ನಿರಂತರವಾಗಿ ಅನಿಯಮಿತ, ರಾತ್ರಿ ಹಗಲು ಎನ್ನದೆ ವಿದ್ಯುತ್ ಕಡಿತ, ಶಿರ್ವ ಮೆಸ್ಕಾಂ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯನ್ನು ಪ್ರತಿಭಟಿಸಿ ಬಳಕೆದಾರರ ಬೃಹತ್ ಪ್ರತಿಭಟನೆಯು ಜುಲೈ 16 ಬೆಳಿಗ್ಗೆ 10 ಗಂಟೆಗೆ ಶಿರ್ವ ಮೆಸ್ಕಾಂ ಕಛೇರಿ ಮುಂದೆ ಬಳಕೆದಾರರ ಪ್ರತಿಭಟನೆ ನಡೆಯಲಿದೆ ಎಂದು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ.ಆರ್ ಪಾಟ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನ್ ಲೈನ್ ಮೋಸ : ಖರೀದಿಸಿದ ಶೂ ಹಿಂತಿರುಗಿಸುವ ಸಂದರ್ಭ ಬ್ಯಾಂಕ್ ಖಾತೆಯ ಹಣ ಗುಳುಂ

Posted On: 15-07-2022 10:16PM

ಉಡುಪಿ : ಶೂ ಖರೀದಿಸಿ ಅದನ್ನು ಹಿಂತಿರುಗಿಸುವ ಸಂದರ್ಭ ಕ್ರೆಡಿಟ್ ಕಾಡ್೯ ಮಾಹಿತಿಯನ್ನು ಒದಗಿಸಿ ಬ್ಯಾಂಕ್ ಖಾತೆಯಿಂದ ‌ಹಣವನ್ನು ಕಳೆದುಕೊಂಡ ಘಟನೆ ಜುಲೈ 13ರಂದು ಬ್ರಹ್ಮಾವರದಲ್ಲಿ ನಡೆದಿದೆ.

ಜಿಲ್ಲೆಯ ಅಸಂಘಟಿತ ಕಾರ್ಮಿಕರನ್ನು ಪಿಂಚಣಿ ಯೋಜನೆಗೆ ಸೇರ್ಪಡೆ ಮಾಡಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Posted On: 15-07-2022 08:40PM

ಉಡುಪಿ : ಜಿಲ್ಲೆಯಲ್ಲಿನ ಎಲ್ಲಾ ಅರ್ಹ ಅಸಂಘಟಿತ ಕಾರ್ಮಿಕರನ್ನು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆ ಮಾಡಲು ಹಾಗೂ ಇ-ಶ್ರಮ್ ಯೋಜನೆಯಲ್ಲಿ ನೋಂದಣಿ ಮಾಡುವಂತೆ ಕಾರ್ಮಿಕ ಇಲಾಖೆ ಮತ್ತು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ನಿರ್ದೇಶನ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ ಹಾಗೂ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡೇಟಾಬೇಸ್ ಇ-ಶ್ರಮ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿರ್ವ : ಸ್ಪರ್ಧೆಗಳಿಂದ ಪ್ರತಿಭೆಗಳ ಅನಾವರಣ

Posted On: 13-07-2022 02:57PM

ಶಿರ್ವ: ಇಂದು ನಾವು ಸ್ಪರ್ಧಾತ್ಮಕ ಮತ್ತು ತಾಂತ್ರಿಕ ಯುಗದಲ್ಲಿ ಇದ್ದೇವೆ. ಪ್ರತಿಯೊಂದು ಉದ್ಯೋಗ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿದ್ದು ಅದನ್ನು ಪಡೆಯುವುದರಲ್ಲಿ ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ದೆಸೆಯಲ್ಲೇ ಪಡೆದುಕೊಳ್ಳಲು ವಿವಿಧ ಸ್ಪರ್ಧೆಗಳ ಅವಶ್ಯಕತೆ ಇಂದು ಅನಿವಾರ್ಯವಾಗಿದೆ . ಪ್ರತಿಯೊಂದು ಸ್ಪರ್ಧೆಯು ಯುವ ಪೀಳಿಗೆಗಳಿಗೆ ಜೀವನದ ಕೌಶಲ್ಯ ಜೊತೆಗೆ ವ್ಯಕ್ತಿತ್ವ ವಿಕಸನವನ್ನು ರೂಪಿಸುವಲ್ಲಿ ಸಹಕಾರಿಯಾಗಲಿದೆ, ತನ್ಮೂಲಕ ಪ್ರತಿಭೆಗಳ ಅನಾವರಣ ಆಗಲಿದೆ ಎಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಬಿಸಿಎ ವಿದ್ಯಾರ್ಥಿಗಳಿಗೆ ಆಯೋಜಿಸಿದ ಟೆಕ್ ಮಂತನ 22 ಐಟಿ ಕಾಂಪಿಟೇಶನ್ಸ್ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸ್ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ವಿಜೇತರಿಗೆ ಪ್ರಮಾಣ ಪತ್ರ ಜೊತೆಗೆ ಬಹುಮಾನಗಳನ್ನು ವಿತರಿಸಿದರು.

ಕಾಪು : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವನಿಗೆ ಹೃದಯಾಘಾತ

Posted On: 12-07-2022 11:14PM

ಕಾಪು : ಮಂಗಳೂರಿನಿಂದ ಗುಲ್ಬರ್ಗಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಪು ಸಮೀಪದ ಉದ್ಯಾವರದಲ್ಲಿ ಜುಲೈ 11 ರ ರಾತ್ರಿ ನಡೆದಿದೆ.

ಕಾಪು ಕುಲಾಲ ಸಮುದಾಯ ಭವನಕ್ಕೆ ನಿವೇಶನ ಒದಗಿಸಲು ಮುಖ್ಯಮಂತ್ರಿಗೆ ಮನವಿ

Posted On: 12-07-2022 09:23PM

ಕಾಪು : ಕುಲಾಲ ಸಮಾಜದ ಬಹು ದಿನದ ಕನಸು ಕಾಪು ಕುಲಾಲ ಸಮುದಾಯ ಭವನ. ಇದಕ್ಕಾಗಿ ನಿವೇಶನ ಒದಗಿಸುವಂತೆ ಇತ್ತೀಚಿಗೆ ಮುಖ್ಯಮಂತ್ರಿ ಉಡುಪಿ ಭೇಟಿ ಸಮಯ ಮನವಿ ನೀಡಲಾಯಿತು. ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಕಡಿಯಾಳಿ ಮನವಿ ಸಲ್ಲಿಸಿದರು.

ಚಿತ್ರಕಲಾ ಶಿಕ್ಷಕ ರಮೇಶ್ ಆಚಾರ್ಯ ಬಂಟಕಲ್ಲು ರಚಿಸಿದ ತುಳುನಾಡಿನ ಭೂತಾರಾಧನೆ ಮುಖವಾಡ( ಮೊಗ) ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Posted On: 12-07-2022 07:33PM

ಕಾಪು : ತಾಲೂಕಿನ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ವಾಸವಾಗಿರುವ ರಮೇಶ್‌ ಆಚಾರ್ಯ ಬಂಟಕಲ್ಲು ಇವರು ರಚಿಸಿದ 7ಪೀಟ್‌ ಉದ್ದ 5ಪೀಟ್ 11ಇಂಚು ಅಗಲದ ಸೆಣಬು ನಾರಿನ ಚೌಕಟ್ಟಿನೊಳಗೆ ಡ್ರಾಯಿಂಗ್ ಶೀಟ್ ಗಂ, ಸರಿಗೆ ಮತ್ತು ಬಣ್ಣಗಳನ್ನು ಉಪಯೋಗಿಸಿ ತುಳುನಾಡಿನ ಭೂತಾರಾಧನೆ ಮುಖವಾಡ(ಮೊಗ) ವನ್ನು ರಚಿಸಿದ್ದು ಜನಮನ ಗೆದ್ದು ,ಜೂನ್10, 2022ರಂದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆಯಾಗಿರುತ್ತದೆ

ಯುವವಾಹಿನಿ‌ ಕಾಪು ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ

Posted On: 12-07-2022 07:10PM

ಕಾಪು : ಪರಿಸರದಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳೊಂದಿಗೆ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಯುವವಾಹಿನಿ‌ ಕಾಪು ಘಟಕದ ವತಿಯಿಂದ ಕಾಪು ಬಿಲ್ಲವರ ಸಹಾಯಕ ಸಂಘದ ಸಭಾಭವನದಲ್ಲಿ ಸನ್ಮಾನಿಸಲಾಯಿತು. ಕಾಪು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 90% ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ.

ಬೋಳ : ದೇವಳದ ಮೂರ್ತಿ, ನಗದು ಕಳವು

Posted On: 11-07-2022 07:25PM

ಕಾರ್ಕಳ : ತಾಲೂಕು ಬೋಳ ಗ್ರಾಮದ ಬೋಳ ಕೋಡಿಯಲ್ಲಿರುವ ಶ್ರೀ ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೂರ್ತಿ, ನಗದು, ಡಿವಿಆರ್ ನ್ನು ಕಳವುಗೈದ ಪ್ರಕರಣ ನಡೆದಿದೆ.