Updated News From Kaup

ಯುವವಾಹಿನಿ ಕಾಪು ಘಟಕದ ವತಿಯಿಂದ ಪರಿಸರ ಜಾಗೃತಿ, ಸಸಿ ವಿತರಣಾ ಸಮಾರಂಭ

Thumbnail
Posted On: 08 Aug 2022, 12:57 PM

ಕಾಪು : ಯುವವಾಹಿನಿ ಕಾಪು ಘಟಕದ ವತಿಯಿಂದ ಯುವವಾಹಿನಿ ಸದಸ್ಯರು ಮತ್ತು ಸಾರ್ವಜನಿಕರಿಗೆ ಕಾಪು ಬಿಲ್ಲವರ ಸಹಾಯಕ ಸಂಘದ ಆವರಣದಲ್ಲಿ ಪರಿಸರ ಮಾಹಿತಿ ಜಾಗೃತಿಯೊಂದಿಗೆ ಸಸಿ ವಿತರಿಸಲಾಯಿತು. ಅರಣ್ಯ ಇಲಾಖೆಯ ಅಧಿಕಾರಿ ಕೇಶವ ಅಮೀನ್ ಅವರು ಪರಿಸರ ಜಾಗೃತಿ ಮಾಹಿತಿಯೊಂದಿಗೆ ಸಸಿ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಎರ್ಮಾಳು ಶುಭಾಶಂಸನೆಗೈದರು. ಯುವವಾಹಿನಿ ಕಾಪು ಘಟಕದ ಉಪಾಧ್ಯಕ್ಷರಾದ ಶಶಿಧರ್ ಸುವರ್ಣ, ಭವಾನಿ ಶೇಖರ್, ಪ್ರಧಾನ ಕಾರ್ಯದರ್ಶಿ ಸುಮಿತ್ರಾ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಕಾಪು ಘಟಕದ ಅಧ್ಯಕ್ಷ ಸಚಿನ್ ಕುಮಾರ್ ಉಚ್ಚಿಲ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷೆ ಸೌಮ್ಯ ರಾಕೇಶ್ ವಂದಿಸಿದರು

ಕಾಪು : ಬಿಜೆಪಿ ಮಹಿಳಾ ಮೋರ್ಚಾ - ಕೈ ಮಗ್ಗ ದಿನಾಚರಣೆ

Thumbnail
Posted On: 07 Aug 2022, 09:34 PM

ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಕ್ಷೇತ್ರ ಮಹಿಳಾ ಮೋರ್ಚಾ ವತಿಯಿಂದ ಕೈ ಮಗ್ಗ ದಿನಾಚರಣೆಯನ್ನು ಆಚರಿಸಲಾಯಿತು. ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳತ್ತೂರು ನಿವಾಸಿ ಲಕ್ಷ್ಮಣ್ ಶೆಟ್ಟಿಗಾರ್ ರವರ ಧರ್ಮಪತ್ನಿಯಾದ ಸರೋಜಿನಿ ಸುಮಾರು 37 ವರ್ಷದಿಂದ ಕೈಮಗ್ಗದ ಸೀರೆಯನ್ನು ನೆಯ್ಯುತ್ತಿದ್ದು,ಅವರನ್ನು ಇಂದು ಗುರುತಿಸಿ ಮಹಿಳಾ ಮೋರ್ಚಾದಿಂದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ಶಿಲ್ಪ ಜಿ ಸುವರ್ಣ, ಕಾಪು ಕ್ಷೇತ್ರ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಖ ಶೈಲೇಶ್, ನೀತಾ ಗುರುರಾಜ್, ಕುತ್ಯಾರು ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ರಮ ವೈ ಶೆಟ್ಟಿ, ಸೌಮ್ಯಲತ ಶೆಟ್ಟಿ, ಶಾಂತಾ ಪೂಜಾರಿ, ದಿವ್ಯ,ಅಗ್ನೇಶ್ ಉಪಸ್ಥಿತರಿದ್ದರು.

ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸುವಲ್ಲಿ ಪೋಷಕರ ಸಹಕಾರ ಅತ್ಯಗತ್ಯ : ಗುರ್ಮೆ ಸುರೇಶ್ ಶೆಟ್ಟಿ

Thumbnail
Posted On: 07 Aug 2022, 09:22 PM

ಕಾಪು : ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸುವಲ್ಲಿ ಪೋಷಕರ ಸಹಕಾರ ಅತ್ಯಗತ್ಯವಾಗಿದೆ. ಕರಂದಾಡಿ ಶ್ರೀ ರಾಮ ಹಿ. ಪ್ರಾ. ಶಾಲೆಯಲ್ಲಿ ದಾನಿಗಳ ಸಹಕಾರದೊಂದಿಗೆ ವಿದ್ಯಾರ್ಥಿಗಳನ್ನು ಸೆಳೆಯುವಲ್ಲಿ ಆರಂಭಿಸಲಾಗಿರುವ ಆವರ್ತ ಠೇವಣಿ ಸಹಿತವಾದ ವಿವಿಧ ಸೌಲಭ್ಯಗಳನ್ನು ಜೋಡಿಸಿರುವುದು ಜಿಲ್ಲೆ ಮತ್ತು ರಾಜ್ಯಕ್ಕೆ ಮಾದರಿಯಾಗುವ ಕಾರ್ಯಕ್ರಮವಾಗಿದೆ ಗುರ್ಮೆ ಫೌಂಡೇಶನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ ಹೇಳಿದರು. ಆಗಸ್ಟ್ 6ರಂದು ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧರಣಿ ಸಮಾಜ ಸೇವಾ ಸಂಘ ಕಾಪು ಇವರ ವತಿಯಿಂದ ಆಯೋಜಿಸಲಾದ ಸಮವಸ್ತ್ರ ವಿತರಣೆ ಮತ್ತು ಸಾಧಕರಿಗೆ ಸಮ್ಮಾನ ಮತ್ತು ದಾನಿಗಳ ಸಹಕಾರದೊಂದಿಗೆ ಆವರ್ತ ಠೇವಣಿ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪದವಿಗಾಗಿ ಓದು, ಉದ್ಯೋಗಕ್ಕಾಗಿ ಪದವಿ ಎಂಬ ಸಂದಿಗ್ಧಮಯವಾದ ಜೀವನ ಕ್ರಮದಲ್ಲಿ ಮುಳುಗಿರುವ ಇಂದಿನ ಯುವಜನತೆ ನಾವು ಯಾಕೆ ಬದುಕ ಬೇಕು, ಹೇಗೆ ಬದುಕಬೇಕು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕಿದೆ. ಚಿಂತನಾಶೀಲ, ಪ್ರಯತ್ನಶೀಲ ಬದುಕಿಗೆ ಲೀಲಾಧರ ಶೆಟ್ಟಿ ಮಾದರಿಯಾಗಿದ್ದು ಅವರ ಸೇವಾ ಗುಣಗಳು ನಮಗೆಲ್ಲರಿಗೂ ಆದರ್ಶಮಯವಾಗಿದೆ ಎಂದರು. ಸಮ್ಮಾನ ಸ್ವೀಕರಿಸಿದ ಕನ್ನಡ, ತುಳು ಚಿತ್ರನಟ ಪೃಥ್ವಿ ಅಂಬರ್ ಮಾತನಾಡಿ, ಇದೊಂದು ಅತ್ಯಪೂರ್ವ ಕಾರ್ಯಕ್ರಮವಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ಎಲ್ಲೆಡೆ ಸಿಗುವ ಸಮ್ಮಾನ, ಗೌರವಕ್ಕಿಂತ ಹುಟ್ಟೂರಿನಲ್ಲಿ ಸಿಗುವ ಗೌರವಕ್ಕೆ ಹೆಚ್ಚಿನ ಮಹತ್ವವಿದೆ. ಕರಂದಾಡಿ ಶ್ರೀ ರಾಮ ಹಿ.ಪ್ರಾ. ಶಾಲೆಯು ವರ್ಷದಿಂದ ವರ್ಷಕ್ಕೆ ಎತ್ತರಕ್ಕೆ ಬೆಳೆಯುತ್ತಿದ್ದು ಶಾಲೆಯ ಬೆಳವಣಿಗೆಯಲ್ಲಿ ಎಲ್ಲರೂ ಕೈಜೋಡಿಸುವ ಅಗತ್ಯತೆಯಿದೆ ಎಂದರು. ಕಾಪು ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷ ಲೀಲಾಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಮಜೂರು ಗ್ರಾ. ಪಂ. ಅಧ್ಯಕ್ಷೆ ಶರ್ಮಿಳಾ ಜೆ. ಆಚಾರ್ಯ, ಪತ್ರಕರ್ತ ರಾಕೇಶ್ ಕುಂಜೂರು, ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಕಾಪು ಶಾಖಾ ಪ್ರಬಂಧಕಿ ಪ್ರಜ್ಞಾ ಜಗದೀಶ್ ಭಂಡಾರಿ, ಪಂಜಿತ್ತೂರುಗುತ್ತು ವೆಲ್ಪೇರ್ ಟ್ರಸ್ಟ್ ಅಧ್ಯಕ್ಷ ರವಿರಾಜ ಶೆಟ್ಟಿ ಪಂಜಿತ್ತೂರುಗುತ್ತು, ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಮಂಜಿತ್ತಾಯ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಪದ್ಮನಾಭ ಶಾನುಭೋಗ್, ಆಡಳಿತ ಮಂಡಳಿ ಸದಸ್ಯ ಶಶಿಶೇಖರ ಭಟ್, ಮುಖ್ಯೋಪಾಧ್ಯಾಯ ಆರ್.ಎಸ್. ಕಲ್ಲೂರ ಮೊದಲಾದವರು ಉಪಸ್ಥಿತರಿದ್ದರು. ಸಮವಸ್ತ್ರ ವಿತರಣೆ, ಆವರ್ತ ಠೇವಣಾತಿ ಉದ್ಘಾಟನೆ : ಧರಣಿ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. 2021ನೇ ಸಾಲಿನಲ್ಲಿ ಪ್ರವೇಶಾತಿ ಪಡೆದಿದ್ದ 28 ವಿದ್ಯಾರ್ಥಿಗಳಿಗೆ ಆವರ್ತ ಠೇವಣಾತಿ ನೀಡಲಾಗಿದ್ದು, 2022ನೇ ಸಾಲಿನಲ್ಲಿ 29 ವಿದ್ಯಾರ್ಥಿಗಳಿಗೆ ಆವರ್ತ ನಿಽಯ ಠೇವಣಾತಿಯನ್ನು ಹಸ್ತಾಂತರಿಸಲಾಯಿತು. ಪೋಸ್ಟ್ ಮಾಸ್ಟರ್ ಮಲ್ಲಪ್ಪ ಮದರಿ ಅವರನ್ನು ಸನ್ಮಾನಿಸಲಾಯಿತು. ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್ ಕುಮಾರ್ ಹೆಗ್ಡೆ ಪ್ರಸ್ತಾವನೆಗೈದರು. ದೈಹಿಕ ಶಿಕ್ಷಕ ಎಸ್. ಪ್ರಕಾಶ್ ಸ್ವಾಗತಿಸಿದರು. ಶಿಕ್ಷಕಿ ಸತ್ಯವತಿ ಕಾರ್ಯಕ್ರಮ ನಿರೂಪಿಸಿ, ಲವಿನಾ ಡಿ ಸೋಜ ವಂದಿಸಿದರು.

ಪಡುಬಿದ್ರಿ : ಶ್ರೀಸತ್ಯದೇವಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಕಂಚಿನಡ್ಕ- ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ

Thumbnail
Posted On: 07 Aug 2022, 09:05 PM

ಪಡುಬಿದ್ರಿ : ಶ್ರೀಸತ್ಯದೇವಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಕಂಚಿನಡ್ಕ- ಪಡುಬಿದ್ರಿ ಇಲ್ಲಿಯ 2022-23ನೇ ಸಾಲಿನ ನೂತನ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗುರುಸ್ವಾಮಿಗಳಾದ ಕೃಷ್ಣ ಸಾಲ್ಯಾನ್, ಗುಣಕರ ಕೇರಿ ಮಾರ್ಗದರ್ಶನದಲ್ಲಿ ಗೌರವಾಧ್ಯಕ್ಷರಾಗಿ ಮೊನಪ್ಪ, ಮಾಧವ. ಅಧ್ಯಕ್ಷರಾಗಿ ಶಿವಪ್ಪ ಕಂಚಿನಡ್ಕ, ಉಪಾಧ್ಯಕ್ಷರಾಗಿ ಸಂಜೀವ ಕೇರಿ, ಶಂಕರ್, ರಮೇಶ್ ಜಿ.ಕೆ, ಪ್ರಭಾಕರ, ಗಣೇಶ್ ಪ್ರಸಾದ್. ಪ್ರಧಾನ ಕಾರ್ಯದರ್ಶಿ ಸಂತೋಷ್ ನಂಬಿಯಾರ್, ಕೋಶಾಧಿಕಾರಿಯಾಗಿ ಪವನ್ ಪಾದೆಬೆಟ್ಟು, ಸಂದೀಪ್ ಕೋಟ್ಯಾನ್. ಗೌರವ ಸಲಹೆಗಾರರಾಗಿ ಈಶ್ವರ, ಸುರೇಶ್, ಸುಂದರ್, ಕಿರಣ್ ಶೆಟ್ಟಿ. ಮಹಿಳಾ ಸಮಿತಿಯ ಪ್ರಮುಖರಾಗಿ ಸವಿತಾ ಶಿವಪ್ಪ ಆಯ್ಕೆಯಾಗಿದ್ದಾರೆ.

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Thumbnail
Posted On: 07 Aug 2022, 04:23 PM

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಕಾಪು ಒಕ್ಕೂಟದ ವತಿಯಿಂದ ಆದಿತ್ಯವಾರ ಬೆಳಿಗ್ಗೆ ಮಹಾದೇವಿ ಪ್ರೌಢಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ರಮಾಶೆಟ್ಟಿ, ಕಾಪು ವಲಯದ ಮೇಲ್ವಿಚಾರಕರಾದ ಮಮತಾ, ಪುರಸಭಾ ಮಾಜಿ ಅಧ್ಯಕ್ಷರಾದ ಅನಿಲ್ ಕುಮಾರ್, ಒಕ್ಕೂಟದ ಸೇವಾ ಪ್ರತಿನಿಧಿ ಪ್ರೇಮ ಆರ್ ಕೋಟ್ಯಾನ್, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗು ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಜ್ಯೋತಿ ಉಪಸ್ಥಿತರಿದ್ದರು.

ಕಳತ್ತೂರು ಕುಲಾಲ ಒಕ್ಕೂಟ : ಸನ್ಮಾನ

Thumbnail
Posted On: 07 Aug 2022, 02:36 PM

ಕಾಪು : ಕುಲಾಲ ಬಾಂಧವರು ಕಳತ್ತೂರು ಒಕ್ಕೂಟ ಇದರ ವತಿಯಿಂದ ರವಿವಾರ ತಿಂಗಳ ಮಾಸಿಕ ಸಭೆಯಲ್ಲಿ ಊರಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು. ಪ್ರತಿಭಾವಂತ ವಿದ್ಯಾರ್ಥಿಗಳಾದ ಶರಣ್ ಕುಲಾಲ್, ರವಿತೇಜ್ ಕುಲಾಲ್, ವೀಕ್ಷಾ ಕುಲಾಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸುಂದರ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು. ಕಾಂಚನ ಕುಲಾಲ್ ಪ್ರಾರ್ಥಿಸಿ, ಸಂತೋಷ್ ಕುಲಾಲ್ ಮಲಂಗೋಲಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ಕಟಪಾಡಿ ಕೋಟೆ ಜಾಮಿಯಾ ಮಸೀದಿ : ನೂತನ ಆಡಳಿತ ಸಮಿತಿ ಅಧಿಕಾರ ಸ್ವೀಕಾರ

Thumbnail
Posted On: 07 Aug 2022, 06:09 AM

ಕಟಪಾಡಿ : ಇಲ್ಲಿನ ಕೋಟೆ ಜಾಮಿಯಾ ಮಸೀದಿ ಇದರ ನೂತನ ಅಧ್ಯಕ್ಷ ಬಿ.ಎಂ. ಮೊಹಿದ್ದೀನ್ ಎ.ಆರ್. ಮತ್ತು ಆಡಳಿತ ಸಮಿತಿಯ ಅಧಿಕಾರ ಸ್ವೀಕಾರ ಸಮಾರಂಭ ಶುಕ್ರವಾರ ನಡೆಯಿತು ಕಟಪಾಡಿ ಮಸೀದಿಯನ್ನು ಮಾದರಿಯನ್ನಾಗಿಸಲಿ ಎಂದು ಬಹು| ಅಸ್ಸಯೈದ್ ಜಾಫರ್ ಸಾದಿಕ್ ತಂಗಳ್ ಕುಂಬೊಳ್ ಆಶೀರ್ವಚನ ಸಂದೇಶ ನೀಡಿದರು. ಅಧಿಕಾರ ವಹಿಸಿಕೊಂಡ ನೂತನ ಅಧ್ಯಕ್ಷ ಬಿ.ಎಂ. ಮೊಹಿದ್ದೀನ್ ಎ.ಆರ್. ಮಾತನಾಡಿ, ವಕ್ಪ್ ಇಲಾಖೆಯ ಮೂರು ವರ್ಷದ ಆಡಳಿತದ ಬಳಿಕ ಮುಂದಿನ ಮೂರು ವರ್ಷದ ಅವಧಿಗೆ ಅಧ್ಯಕ್ಷನಾಗಿ ಆಯ್ಕೆಗೊಂಡಿದ್ದು, ಸಭಾಭವನ, ಹಾಸ್ಟೆಲ್ ನಿರ್ಮಾಣ, ಶಾಲೆ ತೆರೆಯುವ ಯೋಜನೆಗಳನ್ನು ಅನುಷ್ಠಾನಗೊಳಿಸುವ ಇರಾದೆಯನ್ನು ಹೊಂದಿದ್ದು ಸಮಸ್ತರ ಸಹಕಾರ ಯಾಚಿಸಿದರು. ಉಡುಪಿ ಜಿಲ್ಲಾ ವಕ್ ಸಲಹಾ ಸಮಿತಿ ಅಧ್ಯಕ್ಷ ಜನಾಬ್ ಸಿ.ಹೆಚ್. ಅಬ್ದುಲ್ ಮುತ್ತಲ್ಲಿ ವಂಡ್ಸೆ ಅಧ್ಯಕ್ಷತೆ ವಹಿಸಿದ್ದರು. ಮಸೀದಿಯ ಖತೀಬರಾದ ಹಾಜಿ ಮುಹಮ್ಮದ್ ಬಶೀರ್ ಮದನಿ ಹಿತವಚನ ಬೋಧಿಸಿದರು. ಆಡಳಿತಾಧಿಕಾರಿ ಸೈಯ್ಯದ್ ಸಫೀಯುಲ್ಲಾ ಅಧಿಕಾರ ಹಸ್ತಾಂತರಿಸಿದರು. ಅಧಿಕಾರಿ ಅಬೂಬಕರ್ ಎಂ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ವಕ್ ಸಲಹಾ ಸಮಿತಿ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ರಝ್ವಿ ಕಲ್ಕಟ್ಟ, ಸಲಹಾ ಸಮಿತಿ ಸದಸ್ಯ ಜುನೈದ್, ಸಿಬಂದಿ ಮುಜಾಹಿದ್ ಪಾಷ, ಮಸೀದಿಯ ಆಡಳಿತಾಧಿಕಾರಿ ಸೆಯ್ಯದ್ ಸಫೀಯುಲ್ಲಾ, ಉಪಾಧ್ಯಕ್ಷ ಜ|ಅಬ್ದುಲ್ ರಝಾಕ್ ವೈ.ಎಂ., ಕೋಶಾಧಿಕಾರಿ ಅಬ್ದುಲ್ ರಝಾಕ್ ಶಫಿ, ನೂತನ ಸದಸ್ಯರಾದ ಶೈಖ್ ಆಸಿಫ್, ಹಸೈನಾರ್ ಕೆ.ಪಿ.ಹೆಚ್., ಅಕ್ಬರ್ ಎ.ಆರ್., ಇಬ್ರಾಹೀಂ, ಸುಲೈಮಾನ್, ಶಾಹಿದ್, ಮೊಹಮ್ಮದ್ ವೇದಿಕೆಯಲ್ಲಿದ್ದರು. ಇಕ್ಬಾಲ್ ಎಸ್.ಕೆ ಸ್ವಾಗತಿಸಿದರು. ಇಸ್ಮಾಯಿಲ್ ಹುಸೈನ್ ಶಫಿ ಕಟಪಾಡಿ ನಿರೂಪಿಸಿದರು. ಕಾರ್ಯದರ್ಶಿ ಮುಹಮ್ಮದ್ ಇಲ್ಯಾಸ್ ವಂದಿಸಿದರು.

ಮಂಡೇಡಿ ಶ್ರೀದೇವಿ ಭಜನಾ ಮಂಡಳಿ : ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ; ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ

Thumbnail
Posted On: 06 Aug 2022, 10:22 PM

ಕಾಪು : ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯಲ್ಲಿ ಸಾರ್ವಜನಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಆಗಸ್ಟ್ 8ರಂದು ಜರಗಿತು. ಪಾಂಗಾಳ ಮುರಳಿ ಭಟ್ ಅವರ ನೇತೃತ್ವದಲ್ಲಿ ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯಲ್ಲಿ ಸಾರ್ವಜನಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಗ್ರಾಮದ ಈ ಬಾರಿಯ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಮಂಡೇಡಿ ದೇರೆಕಾರ್ ಮನೆ ದಿ|ವಿಠಲ ಶೆಟ್ಟಿ ಸ್ಮರಣಾರ್ಥ ಅವರ ಮಗ ದಯಾನಂದ ವಿ ಶೆಟ್ಟಿಯವರು ಪ್ರೋತ್ಸಾಹ ಧನ ನೀಡಿದರು ಹಾಗು ಕುಂಜಿರಬೆಟ್ಟು ಶಶಿಧರ ಕೆ ಶೆಟ್ಟಿ ವಿದ್ಯಾರ್ಥಿಗಳಿಗೆ ಶಾಲು, ಸ್ಮರಣಿಕೆ ನೀಡಿ, ಕುಮಾರಿ ಸೃಷ್ಟಿ ಶಶಿಧರ ಶೆಟ್ಟಿ ಇವರಿಂದ ಅನ್ನಪ್ರಸಾದ ಸೇವೆ ಜರಗಿತು. ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ಲಕ್ಷ್ಮಣ ಕೆ ಶೆಟ್ಟಿ, ಕಾರ್ಯದರ್ಶಿ ಕೃಷ್ಣ ವಿ ಶೆಟ್ಟಿ, ಕೋಶಾಧಿಕಾರಿ ಸಂತೋಷ್ ಎನ್ ಶೆಟ್ಟಿ, ಜೀವನ್ ಪ್ರಕಾಶ್ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಶಿವರಾಮ ಜೆ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ರಮೇಶ್ ಶೆಟ್ಟಿ, ಶೇಖರ ಶೆಟ್ಟಿ, ಸುಧಾಕರ್ ಶೆಟ್ಟಿ ಮತ್ತು ಮಂಡಳಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂಡ್ಕೂರು‌ : ಕುಲಾಲ ಸಂಘದ ಮಹಿಳಾ ಘಟಕ ವತಿಯಿಂದ 15ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Thumbnail
Posted On: 05 Aug 2022, 11:19 PM

ಮುಂಡ್ಕೂರು‌ : ಕುಲಾಲ ಸಂಘ (ರಿ.) ನಾನಿಲ್ತಾರ್ ಮುಲ್ಲಡ್ಕ ಮುಂಡ್ಕೂರು ಮಹಿಳಾ ಘಟಕ ವತಿಯಿಂದ 15ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಆಗಸ್ಟ್ 5ರಂದು ಕುಲಾಲ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ‌ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

ಬಿಲ್ಲವರ ಸಹಾಯಕ ಸಂಘ ಕಾಪು : ವರಮಹಾಲಕ್ಷ್ಮಿ ಪೂಜೆ

Thumbnail
Posted On: 05 Aug 2022, 10:56 PM

ಕಾಪು : ಇಲ್ಲಿನ ಬಿಲ್ಲವರ ಸಹಾಯಕ ಸಂಘದಲ್ಲಿ ವೈಭವದ ವರಮಹಾಲಕ್ಷ್ಮಿ ಪೂಜೆಯು ಕಟಪಾಡಿಯ ಚರಣ್ ಶಾಂತಿ ಪೌರೋಹಿತ್ಯದಲ್ಲಿ ಇಂದು ಜರಗಿತು. ಈ ಸಂದರ್ಭದಲ್ಲಿ ‌ಸುಮಾರು‌ ಒಂದು ಸಾವಿರಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸಿ ಶ್ರೀ ವರ ಮಹಾಲಕ್ಷ್ಮಿಯ ಪ್ರಸಾದವನ್ನು ಸ್ವೀಕರಿಸಿದರು. ಬಿಲ್ಲವರ ಸಹಾಯಕ ಸಂಘ ಕಾಪು ಗೌರವಾಧ್ಯಕ್ಷರಾದ ಪ್ರಭಾಕರ ಪೂಜಾರಿ, ಅಧ್ಯಕ್ಷರಾದ ವಿಕ್ರಂ ಕಾಪು, ಮಹಿಳಾ ಮಂಡಳಿಯ ಅಧ್ಯಕ್ಷರಾದ ಆಶಾಶಂಕರ್, ಉಪಾಧ್ಯಕ್ಷೆ ಸರಿತ, ಶಶಿಧರ ಸುವರ್ಣ, ಯೋಗೀಶ್ ಕೋಟ್ಯಾನ್, ಉದಯ‌ ಸನಿಲ್, ಅನಿಲ್ ಕುಮಾರ್, ಶೇಖರ್, ಸಕೇಂದ್ರ ಸುವರ್ಣ, ಗೀತಾಂಜಲಿ ‌ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.