Updated News From Kaup

ಮಳೆಯಿಂದ ಹಾನಿಗೊಳಗಾದ ಭತ್ತದ ಬೆಳೆಗೆ ಶೀಘ್ರ ಪರಿಹಾರ ಒದಗಿಸಿ : ಸಚಿವೆ ಶೋಭಾ ಕರಂದ್ಲಾಜೆ

Posted On: 11-07-2022 06:37PM

ಉಡುಪಿ : ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಭಿತ್ತನೆ ಮಾಡಿದ ಭತ್ತದ ಬೆಳೆಯು ಹಾನಿಯಾಗಿದ್ದು, ರೈತರಿಗೆ ಹಾನಿಯ ಮೊತ್ತವನ್ನು ಶೀಘ್ರದಲ್ಲಿಯೇ ಒದಗಿಸಬೇಕು. ಅವರು ಮತ್ತೊಮ್ಮೆ ಭಿತ್ತನೆ ಮಾಡಲು ಅಗತ್ಯಕ್ಕನುಗುಣವಾಗಿ ಭಿತ್ತನೆ ಬೀಜವನ್ನು ಸಮರ್ಪಕವಾಗಿ ವಿತರಣೆ ಮಾಡಲು ಮುಂದಾಗಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ, ಜಿಲ್ಲೆಯ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಜೂನ್ ನಲ್ಲಿ ವಾಡಿಕೆ ಮಳೆಗಿಂತ ಶೇ.31 ರಷ್ಟು ಕಡಿಮೆ ಮಳೆಯಾಗಿ ಜುಲೈ 1 ರಿಂದ ಈವರೆಗೆ ವಾಡಿಕೆ ಮಳೆಗಿಂತ ಶೇ.136 ರಷ್ಟು ಹೆಚ್ಚುವರಿ ಮಳೆಯಾಗಿದೆ. ಕಳೆದ ವರ್ಷದಲ್ಲಿ ಕುಂಠಿತ ಮಳೆಯಿಂದಾಗಿ ಭಿತ್ತನೆ ಕಾರ್ಯಗಳು ನಿಗದಿತ ಪ್ರಮಾಣದಲ್ಲಿ ಆಗದೇ ಜೂನ್ ಕೊನೆಯ ವಾರದಲ್ಲಿ ಹಾಗೂ ಜುಲೈ ಮೊದಲ ವಾರದಲ್ಲಿ ಭಿತ್ತನೆ ಕಾರ್ಯಗಳು ಚುರುಕುಗೊಂಡಿದ್ದು, ಇದುವರೆಗೆ 13526 ಹೆಕ್ಟೇರ್ ಭಿತ್ತನೆ ಆಗಿದ್ದು, ಕಳೆದ 4-5 ದಿನಗಳಿಂದ ಸುರಿದ ಹೆಚ್ಚಿನ ಮಳೆಯಿಂದಾಗಿ ಅಂದಾಜು 1300 ಹೆಕ್ಟೇರ್ಗೂ ಅಧಿಕ ಬೆಳೆಹಾನಿ ಉಂಟಾಗಿದೆ ಎಂದರು.

ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಷಯ ಸೇರ್ಪಡೆಗೆ ಶಿಕ್ಷಣ ಸಚಿವರಿಂದ ಅಧಿಕಾರಿಗಳಿಗೆ ಸೂಚನೆ

Posted On: 11-07-2022 06:15PM

ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಅಳವಡಿಸಿದ್ದು ಅದರ ಬದಲು ಸಮಾಜ ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸುವಂತೆ ಹಲವು ಪ್ರತಿಭಟನೆಗಳು ನಡೆದಿತ್ತು. ಇಂದು ಸಚಿವರಾದ ವಿ ಸುನಿಲ್ ಕುಮಾರ್ ಮತ್ತು ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಿಕ್ಷಣ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.

ಮೂಳೂರು : ಕಡಲ್ಕೊರೆತ ಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Posted On: 11-07-2022 04:08PM

ಕಾಪು : ಇಲ್ಲಿನ ಮೂಳೂರು ಭಾಗದ ಕಡಲ್ಕೊರೆತ ಸ್ಥಳಕ್ಕೆ ಕೇಂದ್ರ ಸಚಿವೆ ಮತ್ತು ಉಡುಪಿ ಜಿಲ್ಲಾ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು.

ಕಾಪು : ಅಕ್ರಮ ಗೋ ಮಾಂಸ‌ ಮಾರಾಟ : ಇಬ್ಬರು ಪೋಲಿಸ್ ವಶಕ್ಕೆ

Posted On: 11-07-2022 03:23PM

ಕಾಪು : ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿ ಬಂದ ಮೇರೆಗೆ ಮಲ್ಲಾರು ಗ್ರಾಮದ ಕೋಟೆ ರಸ್ತೆಯ ರೈಲ್ವೆ ಸೇತುವೆ ಬಳಿ ಇಬ್ಬರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ನಂದಿಕೂರು : ರಸ್ತೆ ಹೊಂಡ - ಬಾಳೆಗಿಡ ನೆಟ್ಟು ಪ್ರತಿಭಟನೆ

Posted On: 11-07-2022 02:41PM

ಪಡುಬಿದ್ರಿ : ಇಲ್ಲಿನ ರಾಜ್ಯ ಹೆದ್ದಾರಿಯಾದ ಕಾರ್ಕಳ ರಸ್ತೆಯ ನಂದಿಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಹೊಂಡಮಯವಾಗಿದ್ದು ಸಂಚಾರಕ್ಕೆ ತೊಂದರೆಯಾಗಿ ಸಂಬಂಧಪಟ್ಟ ಇಲಾಖೆಗಳ ಮೌನದಿಂದ ಬೇಸತ್ತ ಸ್ಥಳೀಯರು ಬಾಳೆಗಿಡನೆಟ್ಟು ಜುಲೈ 10 ರಂದು ಪ್ರತಿಭಟಿಸಿದ್ದಾರೆ.

ಹೆಜಮಾಡಿ : ತೆಂಗಿನಮರ ಬಿದ್ದು ಮನೆಗೆ ಹಾನಿ

Posted On: 11-07-2022 02:29PM

ಹೆಜಮಾಡಿ : ಇಲ್ಲಿನ ಪಂಚಾಯತ್ ವ್ಯಾಪ್ತಿಯ ಹೆಜಮಾಡಿ ಕೋಡಿ 7ನೇ ವಾರ್ಡಿನಲ್ಲಿ ಪಾರ್ವತಿ ಪುತ್ರನ್ ಅವರ ಮನೆಗೆ ಜುಲೈ 10ರಂದು ತೆಂಗಿನ ಮರ ಬಿದ್ದು ಸುಮಾರು ರೂ.50,000 ಅಂದಾಜು ನಷ್ಟವಾಗಿರುತ್ತದೆ.

ಶಂಕರಪುರ : ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟ - ಕಂಡಡೊಂಜಿ ದಿನ

Posted On: 10-07-2022 10:05PM

ಕಾಪು : ಜೆಸಿಐ ಶಂಕರಪುರ ಜಾಸ್ಮಿನ್, ಬಿಲ್ಲವ ಸಂಘ ಇನ್ನಂಜೆ, ಯುವತಿ ಮಂಡಲ (ರಿ.) ಇನ್ನಂಜೆ, ಯುವಕ ಮಂಡಲ (ರಿ.) ಇನ್ನಂಜೆ, ಇಂಡಿಯನ್ ಸೀನಿಯರ್ ಜೆಸಿಐ ಉಡುಪಿ ಟೆಂಪಲ್ ಸಿಟಿ ರಿಜನ್, ರೋಟರಿ ಸಮುದಾಯ ದಳ ಇನ್ನಂಜೆ, ಸೈಂಟ್ ಜೋನ್ಸ್ ಶಾಲೆಗಳ ಹಳೆ ವಿದ್ಯಾರ್ಥಿ ಸಂಘ ಶಂಕರಪುರ, ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ, ಟೆಂಪೋ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ ಇವರ ಸಂಯುಕ್ತ ಆಶ್ರಯದಲ್ಲಿ ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟ ಕಂಡಡೊಂಜಿ ದಿನವು ಶಂಕರಪುರ ಮಾರ್ಕೆಟ್ ರೋಡ್ ತೆಂಡೆಮನೆ ಕೆಸರುಗದ್ದೆಯಲ್ಲಿ ಜರಗಿತು.

ನಂದಳಿಕೆ : ಅಪಘಾತ - ಸಹೋದರರಿಬ್ಬರ ದುರ್ಮರಣ

Posted On: 10-07-2022 07:08PM

ಕಾರ್ಕಳ : ದ್ವಿಚಕ್ರ ವಾಹನವು ಕಾರಿಗೆ ಢಿಕ್ಕಿಯಾಗಿ ಸಹೋದರರಿಬ್ಬರು ಸಾವನ್ನಪ್ಪಿದ ಘಟನೆ ನಂದಳಿಕೆಯಲ್ಲಿ ನಡೆದಿದೆ.

ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಬಂಟಕಲ್ಲು - ಪೀನ ಕನ್ನಡಿಯ ಉದ್ಘಾಟನೆ

Posted On: 10-07-2022 06:35PM

ಕಾಪು : 25 ನೇ ಬೆಳ್ಳಿ ಹಬ್ಬದ ಹೊಸ್ತಿಲಲ್ಲಿ ಇರುವ ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ.) ಬಂಟಕಲ್ಲು ಇದರ ಮೊದಲ ಯೋಜನೆ, 92 ಹೇರೂರು ಗ್ರಾಮದಲ್ಲಿ ಪೀನ ಕನ್ನಡಿ ಹಾಕುವ ಮೂಲಕ ಉದ್ಘಾಟಿಸಲಾಯಿತು. ಉದ್ಘಾಟನೆಯನ್ನು ದುರ್ಗಾ ಮೆಟಲ್ ವರ್ಕ್ಸ್ ನ ಮಾಲೀಕರಾದ ಅನಿಲ್ ಕಲ್ಲುಗುಡ್ಡೆ ಇವರು ನೆರವೇರಿಸಿದರು.

ಪ್ರತಿಭೆಗಳನ್ನು ಬರಹದ ಮೂಲಕ ಅನಾವರಣಗೊಳಿಸಿದ ಬರಹಗಾರ, ಕಲಾ ಸಂಘಟಕ - ಪ್ರಭಾಕರ ಬೆಳುವಾಯಿ

Posted On: 10-07-2022 03:56PM

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ಲಾಡಿ ಮನೆ ದಿ. ಬಾಬು ಪೂಜಾರಿ ಹಾಗೂ ಬೆಳುವಾಯಿ ಮಿತ್ತಬೆಟ್ಟು ಬರ್ಕೆ ಕೆಳಗಿನಮನೆ ಗೋಪಿ ಪೂಜಾರಿ ದಂಪತಿಗಳ ಮಗನಾಗಿರುವ ಪ್ರಭಾಕರ ಇವರು ಜೀವನಕ್ಕಾಗಿ ಮುಂಬೈ ನಲ್ಲಿ ಹೋಟೆಲ್ ಒಂದರಲ್ಲಿ ಕೆಲಸಕ್ಕೆ ಸೇರಿದರು ಆ ಬಿಡುವಿಲ್ಲದ ಜೀವನದ ನಡುವೆಯೂ ತನ್ನಲ್ಲಿ ಇರುವ ಪ್ರತಿಭೆನ ಬೆಳೆಸಿದ ಉತ್ಸಾಹಿ ಯುವ ಬರಹಗಾರ ಪ್ರಭಾಕರ್ ಬೆಳುವಾಯಿ. ವ್ಯಕ್ತಿ ಪರಿಚಯ, ನಾಟಕ ವಿಮರ್ಶೆ, ಕಥೆ, ಕವನ, ವೈಚಾರಿಕ ಲೇಖನಗಳ ಮೂಲಕ ಪರಿಚಯವಾದರು.