Updated News From Kaup

2021-22ನೇ ಸಾಲಿನಲ್ಲಿ ಉಡುಪಿ ತಾಲೂಕಿಗೆ ಪ್ರಥಮ ಅತ್ಯುತ್ತಮ ಸಂಘ ಪ್ರಶಸ್ತಿ ಪುರಸ್ಕೃತ ಇನ್ನಂಜೆ ಹಾಲು ಉತ್ಪಾದಕರ ಸಂಘ

Thumbnail
Posted On: 04 Sep 2022, 05:04 PM

ಕಾಪು : ಇನ್ನಂಜೆ ಹಾಲು ಉತ್ಪಾದಕರ ಸಂಘವು 2021 - 22ನೇ ಸಾಲಿನಲ್ಲಿ ಉಡುಪಿ ತಾಲೂಕಿಗೆ ಪ್ರಥಮ ಅತ್ಯುತ್ತಮ ಸಂಘವೆಂದು ಪ್ರಶಸ್ತಿ ಪಡೆದಿರುತ್ತದೆ. ಮಂಗಳೂರಿನ ಕೊರ್ಡೆಲ್ ಹಾಲ್, ಚಚ್೯ಗೇಟ್ ಕುಲಶೇಖರದಲ್ಲಿ ನಡೆದ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.) ಮಂಗಳೂರು ಇದರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಇನ್ನಂಜೆ, ಹಾಲು ಉತ್ಪಾದಕರ ಸಹಕಾರ ಸಂಘವನ್ನು 2021-2022ನೇ ಸಾಲಿನ ಅತ್ಯುತ್ತಮ ಸಂಘವೆಂದು ಘೋಷಿಸಿ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೆ ಪಿ ಸುಚರಿತ ಶೆಟ್ಟಿಯವರಿಂದ ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಲಕ್ಷ್ಮಣ ಕೆ ಶೆಟ್ಟಿ ಹಾಗೂ ಸಂಘದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಪ್ರಶಸ್ತಿ ಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷರಾದ ಎಸ್ ಬಿ ಜಯರಾಮ್ ರೈ, ಕೆ ಎಂ ಎಫ್ ನಿರ್ದೇಶಕರಾದ ದಿವಾಕರ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರಾದ ಕೆ ರವಿರಾಜ್ ಹೆಗ್ಡೆ, ವ್ಯವಸ್ಥಾಪಕ ನಿರ್ದೇಶಕರಾದ ಡಿ ಅಶೋಕ, ವ್ಯವಸ್ಥಾಪಕರಾದ ಡಾ.ನಿತ್ಯಾನಂದ ಭಕ್ತ, ಮಾಜಿ ಅಧ್ಯಕ್ಷರು, ನಿರ್ದೇಶಕರು, ಉಪ ವ್ಯವಸ್ಥಾಪಕರು, ಒಕ್ಕೂಟದ ಅಧಿಕಾರಿ ವರ್ಗ, ಸಿಬ್ಬಂದಿ ಉಪಸ್ಥಿತರಿದ್ದರು.

ಪಡುಬಿದ್ರಿ : ಶ್ರೀ ಸಾಯಿ ಹಾರ್ಡ್‌ವೇರ್ಸ್ ಶುಭಾರಂಭ

Thumbnail
Posted On: 04 Sep 2022, 03:30 PM

ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66 ಪಕ್ಕದಲ್ಲಿರುವ ಕಾಮತ್ ಪೆಟ್ರೋಲ್ ಪಂಪ್ ಬಳಿಯ ನಬೀಲ್ ಕಾಂಪ್ಲೆಕ್ಸ್ ನಲ್ಲಿ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಮಾಲೀಕತ್ವದ ಶ್ರೀ ಸಾಯಿ ಹಾರ್ಡ್‌ವೇರ್ಸ್ ನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭ ಗುರ್ಮೆ ಫೌಂಡೇಶನ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಪಡುಬಿದ್ರಿ ಉದ್ಯಮಿ ವೈ ಗೋಪಾಲ್ ಶೆಟ್ಟಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಲ್ಲವಿ ಬಾರ್ ಆಂಡ್ ರೆಸ್ಟೋರೆಂಟ್ ಮಾಲಕರಾದ ಸಂತೋಷ್ ಕುಮಾರ್ ಶೆಟ್ಟಿ, ಎರ್ಮಾಳು ಪಂಚಾಯತ್ ಅಧ್ಯಕ್ಷರಾದ ಕಸ್ತೂರಿ ಪ್ರವೀಣ್, ಪುಣೆಯ ಉದ್ಯಮಿ ಚಂದ್ರಹಾಸ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಡೆಗೋಡೆ ನಿರ್ಮಾಣಕ್ಕೆ ಧನಸಹಾಯ

Thumbnail
Posted On: 04 Sep 2022, 01:27 PM

ಉಚ್ಚಿಲ : ಕಾಪು ತಾಲೂಕಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬಡಾ ಉಚ್ಚಿಲದ ತಡೆಗೋಡೆ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2,50,000 ರೂಪಾಯಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕಿನ ಯೋಜನಾಧಿಕಾರಿಯಾದ ಜಯಂತಿ ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಅರ್ಚಕ ವೃಂದ, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಬ್ರಹ್ಮಬೈದರ್ಕಳ ಗರೋಡಿ ಎರ್ಮಾಳು, ತೆಂಕ : ಕಾಲಾವಧಿ ಹೂವಿನ ಪೂಜೆ

Thumbnail
Posted On: 04 Sep 2022, 12:58 PM

ಎರ್ಮಾಳು : ಶ್ರೀ ಬ್ರಹ್ಮಬೈದರ್ಕಳ ಗರೋಡಿ ಎರ್ಮಾಳು, ತೆಂಕ ಇಲ್ಲಿ ರವಿವಾರ ಕಾಲಾವಧಿ ಹೂವಿನ ಪೂಜೆಯು ವಿಜ್ರಂಭಣೆಯಿಂದ ಜರಗಿತು. ಈ ಸಂದರ್ಭ ಆಡಳಿತ ಮೊಕ್ತೇಸರರಾದ ವೈ ಜಯಕರ , ಸೇವಾ ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಡುಬಿದ್ರಿ : ಮಾದಕ ವ್ಯಸನಿಗಳು ಪೊಲೀಸ್ ವಶಕ್ಕೆ

Thumbnail
Posted On: 03 Sep 2022, 10:09 PM

ಪಡುಬಿದ್ರಿ : ಕಾಪು ತಾಲೂಕಿನ ಬಡಾ ಗ್ರಾಮದ ಬಾಂಗ್ಲ ಎಂಬಲ್ಲಿ ಈರ್ವರನ್ನು ಮತ್ತು ನಡ್ಸಾಲು ಗ್ರಾಮದ ಕಂಚಿನಡ್ಕದಲ್ಲಿ ಒರ್ವನನ್ನು ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ತೂರಾಡುತ್ತಿದ್ದ ಬಗ್ಗೆ ಅನುಮಾನಗೊಂಡು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗಸ್ಟ್ 30ರಂದು ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪುರುಷೋತ್ತಮ ಎ ಕಾಪು ತಾಲೂಕು ಬಡಾ ಗ್ರಾಮದ ಬಾಂಗ್ಲ ಎಂಬಲ್ಲಿ ಮಹಮ್ಮದ್‌ ಫವಾಜ್‌ (18), ಮಹಮ್ಮದ್‌ ಅಫ್ಜಲ್‌(22) ಮತ್ತು ನಡ್ಸಾಲು ಗ್ರಾಮದ ಕಂಚಿನಡ್ಕ ಎಂಬಲ್ಲಿ ಗುರುನಾಥ ಆರ್‌ (23) ಎಂಬುವವರ ಬಗ್ಗೆ ಅನುಮಾನಗೊಂಡು ವಶಕ್ಕೆ ಪಡೆದುಕೊಂಡು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರ ಎದುರು ಹಾಜರುಪಡಿಸಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು ಮೂವರು ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದಾಗಿ ಸೆಪ್ಟೆಂಬರ್ 02 ರಂದು ವೈದ್ಯರು ದೃಢಪಡಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾರ್ಕಳ : ಕ್ರಿಯೇಟಿವ್ ಪಿ ಯು ಕಾಲೇಜಿನ ಸುಜ್ಞಾನ್ ಎಂ ಆರ್ ಗೆ ಆರ್.ಐ.ಇ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ

Thumbnail
Posted On: 02 Sep 2022, 04:35 PM

ಕಾರ್ಕಳ : ಇಲ್ಲಿನ ಕ್ರಿಯೇಟಿವ್ ಪಿ ಯು ಕಾಲೇಜಿನ ಸುಜ್ಞಾನ್ ಎಂ ಆರ್ ಗೆ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್(ಆರ್.ಐ.ಇ)ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಲಭಿಸಿದೆ. ಮೂಲವಿಜ್ಞಾನ ಶಿಕ್ಷಣಕ್ಕೆ ಸೇರಬಯಸುವವರಿಗಾಗಿ ನಡೆಸಲಾಗುವ ರಾಷ್ಟ್ರಮಟ್ಟದ ಪರೀಕ್ಷೆಯಾದ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನ ಬಿ ಎಸ್ ಸಿ ಪದವಿ ವಿದ್ಯಾಭ್ಯಾಸಕ್ಕೆ ನಡೆಸಲಾಗುವ ಪರೀಕ್ಷೆಯಲ್ಲಿ ಸುಜ್ಞಾನ್ ಎಂ ಆರ್ ಈ ಸಾಧನೆ ಮಾಡಿದ್ದಾರೆ. ವಿಶೇಷವಾಗಿ ಪದವಿ ನಂತರ ಉಪನ್ಯಾಸಕರಾಗುವವರಿಗಾಗಿಯೇ ತರಬೇತಿ ನೀಡುವ ಸಂಸ್ಥೆಯಾಗಿರುವ ಆರ್ ಐ ಇ ನ ಅಡಿಯಲ್ಲಿ ಅತ್ಯುತ್ತಮ ತರಬೇತಿಯನ್ನು ನೀಡುವ ಸಂಸ್ಥೆಯಾಗಿದೆ. ಸುಜ್ಞಾನ್ ಎಂ.ಆರ್ ನ ಈ ಅಪೂರ್ವ ಸಾಧನೆಗೆ ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು,ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. ಸುಜ್ಞಾನ್ ತೀರ್ಥಹಳ್ಳಿಯ ರಾಜೇಂದ್ರ ಮತ್ತು ಸುಮಾ ದಂಪತಿಯ ಪುತ್ರ.

ಮಹಾರಾಷ್ಟ್ರ ಲೀಡರ್‌ಶಿಪ್ ಆವಾರ್ಡ್-2022 ಪುರಸ್ಕೃತರಾದ ತೋನ್ಸೆ ಆನಂದ್ ಎಂ.ಶೆಟ್ಟಿ

Thumbnail
Posted On: 02 Sep 2022, 03:59 PM

ಕಾಪು : ಆರ್ಗಾನಿಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಇದರ ಕಾರ್ಯಾಧ್ಯಕ್ಷರು-ಆಡಳಿತ ನಿರ್ದೇಶಕರಾದ ತೋನ್ಸೆಯ ಹೆಸರಾಂತ ಉದ್ಯಮಿ, ಕೊಡುಗೈದಾನಿ, ಫೆಡರೇಶನ್ ಆಫ್ ವರ್ಲ್ಡ್ ಬಂಟ್‌ಸ್‌ ಅಸೋಸಿಯೇಶನ್‌ಸ್‌ನ ಟ್ರಸ್ಟಿ ಆಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ತೋನ್ಸೆ ಆನಂದ್ ಎಂ.ಶೆಟ್ಟಿಯವರು ಪುಣೆ ಟೈಮ್ಸ್ ಮಿರರ್ ಪ್ರಾಯೋಜಿತ ಮಹಾರಾಷ್ಟ್ರ ಲೀಡರ್‌ಶಿಪ್ ಆವಾರ್ಡ್-2022 ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲ ಭಗತ್ ಸಿಂಗ್‌ ಕೊಶ್ಯಾರಿ ಅವರು ತೋನ್ಸೆ ಆನಂದ್ ಎಂ.ಶೆಟ್ಟಿಯವರಿಗೆ ಮಹಾರಾಷ್ಟ್ರ ಲೀಡರ್‌ಶಿಪ್ ಆವಾರ್ಡ್-2022 ನೀಡಿ‌ ಪುರಸ್ಕರಿಸಿದರು‌.

ಉಡುಪಿಯಲ್ಲಿ ನಡೆಯಲಿರುವ ಬೃಹತ್ ದುರ್ಗಾ ದೌಡ್ ಕಾರ್ಯಕ್ರಮದ ಸ್ಟಿಕ್ಕರ್ ಬಿಡುಗಡೆ

Thumbnail
Posted On: 02 Sep 2022, 03:47 PM

ಕಾಪು : ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಅಕ್ಟೋಬರ್ 2 ರಂದು ಉಡುಪಿಯಲ್ಲಿ ನಡೆಯಲಿರುವ ಬೃಹತ್ "ದುರ್ಗಾ ದೌಡ್" ಕಾರ್ಯಕ್ರಮದ ಸ್ಟಿಕ್ಕರ್ ಗಳನ್ನು ತಾಲೂಕಿನ ಬೇರೆ ಬೇರೆ ಕಡೆಗಳಲ್ಲಿ ನಡೆಯುತ್ತಿರುವ ಗಣೇಶೋತ್ಸವದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

ಕಾಪು ಪೇಟೆಯಲ್ಲಿ ಶಾಸಕ ಲಾಲಾಜಿ ಆರ್. ಮೆಂಡನ್ ರಿಂದ ಹೈಮಾಸ್ಕ್ ದೀಪ ಉದ್ಘಾಟನೆ

Thumbnail
Posted On: 02 Sep 2022, 03:31 PM

ಕಾಪು : ಇಲ್ಲಿನ ಪುರಸಭಾ ವತಿಯಿಂದ ಮೂರು ಲಕ್ಷ ರೂ. ಅನುದಾನದಲ್ಲಿ ಕಾಪು ಪೇಟೆಯಲ್ಲಿ ನೂತನವಾಗಿ ಅಳವಡಿಸಲಾದ ಹೈಮಾಸ್ಕ್ ದೀಪವನ್ನು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಗುರುವಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕಾಪು ಪೇಟೆಯ ಮಾರುಕಟ್ಟೆಗೆ ಪ್ರವೇಶಿಸುವ ಪ್ರದೇಶವು ಸಂಪೂರ್ಣ ಕತ್ತಲಿನಲ್ಲಿದ್ದ ಈ ಬಗ್ಗೆ ಸ್ಥಳೀಯ ವ್ಯಾಪಾರಸ್ಥರು ಮತ್ತು ಪುರಸಭಾ ಸದಸ್ಯರ ಬೇಡಿಕೆಯಿತ್ತು. ಅದರಂತೆ ಪುರಸಭೆ ಅಧಿಕಾರಿಗಳು ಕೂಡಾ ಪ್ರಸ್ತಾವನೆ ಸಲ್ಲಿಸಿದ್ದು ಅದರಂತೆ ಹೈಮಾಸ್ಕ್ ದೀಪ ಅಳವಡಿಸಲಾಗಿದೆ. ಕಾಪು ಪುರಸಭೆ ವ್ಯಾಪ್ತಿಯ ಇನ್ನೂ ಎರಡು ಪ್ರದೇಶಗಳಲ್ಲಿ ಹೈಮಾಸ್ಕ್ ದೀಪ ಅಳವಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು. ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ ಮಲ್ಲಾರು, ಪುರಸಭೆ ಸದಸ್ಯರಾದ ಅನಿಲ್ ಕುಮಾರ್, ಅರುಣ್ ಶೆಟ್ಟಿ ಪಾದೂರು, ಶೈಲೇಶ್ ಅಮೀನ್, ರತ್ನಾಕರ ಶೆಟ್ಟಿ, ನಾಗೇಶ್, ಫರ್ಜಾನ, ಶೋಭಾ ಬಂಗೇರ, ರಾಧಿಕಾ ಸುವರ್ಣ, ಕಾಪು ಗ್ರಾ.ಪಂ. ಮಾಜಿ ಅಧ್ಯಕ್ಷ ಯೋಗೀಶ್ ರೈ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಇಂಜಿನಿಯರ್ ನಯನ್ ತಾರಾ, ಕಾಪು ಪುರಸಭೆ ವ್ಯಾಪ್ತಿ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ, ಸ್ಥಳೀಯರಾದ ಎಚ್. ಅಬ್ದುಲ್ಲಾ, ಅಬ್ದುಲ್ ನಜೀರ್, ಪಿ.ಕೆ. ಹೈದರ್ ಮಲ್ಲಾರು, ಜಗದೀಶ್ ಮೆಂಡನ್, ರಮೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ಮಂಗಳೂರು ಭೇಟಿ ; ಸಂಚಾರ ಬದಲಾವಣೆ ; ಸಾಲುಗಟ್ಟಿ ನಿಂತ ಘನ ವಾಹನಗಳು

Thumbnail
Posted On: 02 Sep 2022, 12:39 PM

ಪಡುಬಿದ್ರಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಮಂಗಳೂರಿಗೆ ಭೇಟಿ ಹಿನ್ನೆಲೆಯಲ್ಲಿ ಪಡುಬಿದ್ರಿ ಜಂಕ್ಷನ್ ಬಳಿ ಎಲ್ಲಾ ಸಾರ್ವಜನಿಕ ವಾಹನಗಳನ್ನು, ಘನ ವಾಹನಗಳನ್ನು ಕಾರ್ಕಳ ರಸ್ತೆಯ ಮೂಲಕ ಸಾಗಲು ತಿಳಿಸಲಾಗುತ್ತಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸರು ಸಾರ್ವಜನಿಕರಿಗೆ ತಿಳಿಯಲು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಡುಬಿದ್ರೆ ಜಂಕ್ಷನ್ ಮುಖಾಂತರ ಬೆಂಗಳೂರು ಮತ್ತು ಕೇರಳಕ್ಕೆ ಸಂಚರಿಸುವ ವಾಹನಗಳು ಬೆಳ್ಳಣ್ಣು - ಕಾರ್ಕಳ -ಬೆಳುವಾಯಿ- ಮೂಡಬಿದ್ರೆ– ಬಿ.ಸಿ.ರೋಡ್ ಮುಖೇನ ಸಂಚರಿಸಬೇಕೆಂದು ಪಡುಬಿದ್ರಿ ಜಂಕ್ಷನ್ ಬಳಿ ಬ್ಯಾನರ್ ಅಳವಡಿಸಿದ್ದಾರೆ. ಹಲವಾರು ಚಾಲಕರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸುವುದು ಕಂಡು ಬಂದಿದೆ. ಕಾರ್ಕಳ ರಸ್ತೆಯ ಇಕ್ಕೆಲಗಳಲ್ಲಿ ಘನವಾಹನಗಳು ಜಾಮ್ ಆಗಿದ್ದು, ವಾಹನ ಚಾಲಕರು ಬದಲಿ ಮಾರ್ಗವಾಗಿ ಸಂಚರಿಸುವುದು ವಿಳಂಬವಾಗುವುದರಿಂದ ಸಂಜೆ 6 ಗಂಟೆಯವರೆಗೆ ಕಾದು ನಂತರ ಮುಂದುವರಿಯುವ ನಿರೀಕ್ಷೆಯಲ್ಲಿದ್ದಾರೆ. ಪಡುಬಿದ್ರಿ ಪಿಎಸ್ಐ ಪ್ರಕಾಶ್, ಸಾಲಿಯಾನ್ ದಿವಾಕರ್, ಹರೀಶ್, ರಾಜೇಶ್, ಹೈವೇ ಪಟ್ರೋಲ್ ಮತ್ತು ಗೃಹರಕ್ಷಕ ಸಿಬ್ಬಂದಿ ಹೆದ್ದಾರಿಯಲ್ಲಿ ಬಂದೋಬಸ್ತ್ ಮಾಡುತ್ತಿದ್ದಾರೆ.