Updated News From Kaup

ಪಡುಬಿದ್ರಿ : ಕಡಲ್ಕೊರೆತ ಸ್ಥಳಕ್ಕೆ ಶಾಸಕರ ಭೇಟಿ

Posted On: 10-07-2022 01:19PM

ಪಡುಬಿದ್ರಿ : ಕಾಪು ತಾಲೂಕಿನ ಹಲವೆಡೆ ಕಡಲ್ಕೊರೆತ ಉಂಟಾಗಿದ್ದು ಆ ಸ್ಥಳಗಳಿಗೆ ಮತ್ತು ಪಡುಬಿದ್ರಿಯಲ್ಲಿ ಕಡಲ್ಕೊರೆತಕ್ಕೆ ಒಳಗಾದ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ ನೀಡಿದರು.

'ಮುಖ್ಯಮಂತ್ರಿ ನಮ್ಮ ಮಾತು ಕೇಳುತ್ತಿಲ್ಲ' ಎಂದಾದರೆ ರಾಜೀನಾಮೆ ನೀಡಿ - ಡಾ.ಪ್ರಣಾವನಂದ ಸ್ವಾಮೀಜಿಯಿಂದ ಸಚಿವದ್ವಯರಿಗೆ ತಾಕೀತು

Posted On: 10-07-2022 12:28PM

ಮಂಗಳೂರು : ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್ ಅವರನ್ನು ಕೇಳಿದರೆ, 'ಮುಖ್ಯಮಂತ್ರಿ ನಮ್ಮ ಮಾತು ಕೇಳುತ್ತಿಲ್ಲ' ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ ಹೇಳಿದ್ದೇನೆ. ಆದರೆ ಸ್ಪಂದನ ಸಿಗುತ್ತಿಲ್ಲ. ಬದಲಾಗಿ ಅವರು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಸಮುದಾಯದ ಜನಪ್ರತಿನಿಧಿಗಳಾಗಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾ ಮಂಡಲದ ರಾಷ್ಟ್ರೀಯ ಅಧ್ಯಕ್ಷ, ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಡಾ.ಪ್ರಣಾವನಂದ ಸ್ವಾಮೀಜಿ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜನರಿಂದ ಜನರಿಗಾಗಿರುವ ಸಹಕಾರಿ ಬ್ಯಾಂಕುಗಳು ಸಾರ್ವಜನಿಕರ ಸೇವೆಗೆ ಸದಾ ಸಿದ್ಧ : ಡಾ| ಎಮ್.ಎನ್. ರಾಜೇಂದ್ರ ಕುಮಾರ್

Posted On: 10-07-2022 12:23PM

ಪಡುಬಿದ್ರಿ : ಸಹಕಾರಿ ಕ್ಷೇತ್ರದ ಬ್ಯಾಂಕುಗಳು ನಮ್ಮಲ್ಲಿ ಗುಣಮಟ್ಟದ ಸೇವೆಯನ್ನು ನೀಡುತ್ತಾ ಬಂದಿದೆ. ಅದರಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಕೂಡ ಒಂದಾಗಿದೆ. ನಮ್ಮವರೇ ಇರುವ ಸಹಕಾರಿ ಬ್ಯಾಂಕುಗಳನ್ನು ಬೆಳೆಸಬೇಕಾಗಿದೆ. ಹೊರ ರಾಜ್ಯದವರಿಂದ ಇಂದು ರಾಷ್ಟ್ರೀಕೃತ ಬ್ಯಾಂಕುಗಳು ತುಂಬಿದೆ. ಇಂತಹ ನಿಟ್ಟಿನಲ್ಲಿ ನಮ್ಮ ಯುವಜನಾಂಗ ಬ್ಯಾಂಕಿಂಗ್ ಕ್ಷೇತ್ರದತ್ತ ಗಮನಹರಿಸಬೇಕಾಗಿದೆ ಎಂದು ಶಾಸಕರಾದ ಲಾಲಾಜಿ ಆರ್. ಮೆಂಡನ್ ಹೇಳಿದರು. ಅವರು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ) ಇದರ ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆಯ ಉದ್ಘಾಟನೆ, ಕೃಷಿ ಸಲಕರಣೆಗಳ ಮಾರಾಟ ವಿಭಾಗದ ಶುಭಾರಂಭ, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಲೋಕಾರ್ಪಣೆಯ ನಂತರ ಪ್ರಧಾನ ಕಚೇರಿ ಸಹಕಾರ ಸಂಗಮ ಇಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು.

ಬಕ್ರೀದ್ ಹಬ್ಬ ಶಾಂತಿ ಸೌಹಾರ್ದತೆಯ ಪ್ರತೀಕವಾಗಿದೆ : ಫಾರೂಕ್ ಚಂದ್ರನಗರ

Posted On: 09-07-2022 05:35PM

ಕಾಪು : ಬಕ್ರೀದ್ ಹಬ್ಬ ಶಾಂತಿ ಸೌಹಾರ್ದ ತೆಯ ಪ್ರತೀಕವಾಗಿದೆ ಬಡವರು ಕೂಡ ಎಲ್ಲರಂತೆ ಹಬ್ಬ ವನ್ನು ಆಚರಿಸಲು ತ್ಯಾಗ ಬಲಿದಾನವನ್ನು ಇಸ್ಲಾಂನಲ್ಲಿ ಕಡ್ಡಾಯಗೊಳಿಸಲಾಗಿದೆ ಈ ಹಬ್ಬವು ಸಮಾಜದಲ್ಲಿ ಶಾಂತಿ ಭಾವೈಕ್ಯತೆ ಉಂಟಾಗಲು ನಾಂದಿಯಾಗಲಿ ಸರಕಾರದ ನಿಯಮವನ್ನು ಪಾಲಿಸುತ್ತ ನಾವು ಈದ್-ಉಲ್-ಅಲ್ಹಾ ವನ್ನು ಆಚರಿಸೋಣ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಸಂಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ತಿಳಿಸಿದ್ದಾರೆ.

ಬಕ್ರೀದ್ ಹಬ್ಬ ಸೌಹಾರ್ದಯುತವಾಗಿ ಆಚರಿಸಲು ಸೂಕ್ತ ಮುಂಜಾಗರೂಕತೆ ವಹಿಸುವ ಕುರಿತು ಕಾಪು ಪೊಲಿಸ್ ವೃತ್ತ ನಿರೀಕ್ಷಕರಿಗೆ ಮನವಿ

Posted On: 09-07-2022 01:41PM

ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ವತಿಯಿಂದ ನಾಳೆ ಆಚರಿಸುತ್ತಿರುವ ಈದುಲ್ ಅದ್ಹಾ ಹಬ್ಬದಂದು ಕುರ್ಬಾನಿ ಮಾಡಲು, ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅದ್ಯಕ್ಷರಾದ ಶರ್ಫುಧ್ದೀನ್ ಶೇಖ್ ಇವರ ನೇತ್ರತ್ವದಲ್ಲಿ ಕಾಪು ಪೊಲಿಸ್ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ಬಿರುವೆರ್ ಕಾಪು ಸೇವಾ ಸಮಿತಿಯಿಂದ ವರ್ಗಾವಣೆಗೊಳ್ಳಲಿರುವ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್ ರವರಿಗೆ ಗೌರವ

Posted On: 08-07-2022 07:47PM

ಕಾಪು : ಇಲ್ಲಿನ ಪೊಲೀಸ್ ವೃತ್ತ ನಿರೀಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿದ್ದ ಪ್ರಕಾಶ್ ಇವರು ಬಜ್ಪೆ ಠಾಣೆಗೆ ವರ್ಗಾವಣೆಗೊಂಡಿರುತ್ತಾರೆ.

ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ವಿಚಾರದಲ್ಲಿ ಸರಕಾರದ ತಾರತಮ್ಯ ನೀತಿ ಹಾಗು ಸಚಿವರುಗಳ ಸುಳ್ಳು ಭರವಸೆಗಳು - ಪ್ರವೀಣ್ ಎಂ ಪೂಜಾರಿ

Posted On: 08-07-2022 07:34PM

ಉಡುಪಿ : ಸಾರ್ವಕಾಲಿಕ ಸತ್ಯನಿಷ್ಠವಾದ ಮಾನವೀಯ ಮೌಲ್ಯಗಳನ್ನು ಸಾಕಾರಗೊಳಿಸಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತಂತೆ ಸರ್ಕಾರವು ಪದೇ ಪದೇ ನಕಾರಾತ್ಮಕ ನಿಲುವನ್ನು ಪ್ರಕಟಿಸುತ್ತಿರುವುದು ಸಮಂಜಸವಲ್ಲ. ಗಣರಾಜ್ಯೋತ್ಸವ ಟ್ಯಾಬ್ಲೋ ತಿರಸ್ಕಾರದ ಬಳಿಕ ಹೈಸ್ಕೂಲ್ ಪಠ್ಯಪುಸ್ತಕದಲ್ಲಿ ಗುರುಗಳ ಚಿಂತನೆಯ ಪಾಠವನ್ನು ಕೈಬಿಟ್ಟಿರುವುದರ ಕುರಿತು ಈಗಾಗಲೇ ಸಚಿವರುಗಳಿಗೆ ಮನವಿ ಸಲ್ಲಿಸಿದಾಗ ಯಾವುದೇ ಸಮಸ್ಯೆಯಾಗದಂತೆ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದರು‌. ಆದರೆ ಇದು ಸುಳ್ಳಾಗಿದ್ದು ಗುರುಗಳನ್ನು ಕೇವಲ ಭಾಷಾ ಪಾಠದಲ್ಲಿ ತೋರಿಸಿ ಮೆಲ್ನೋಟಕ್ಕೆ ಎಲ್ಲವೂ ಸರಿಯಾಗಿದೆ ಎಂದು ನಂಬಿಸಿದ್ದಾರೆ. ಗುರುಗಳ ಅನುಯಾಯಿಗಳಾದ ನಮಗೆ ಸರ್ಕಾರದ ನಡೆಯ ಕುರಿತು ತೀವ್ರ ಅಸಮಾಧಾನವಿದ್ದು ಈಗಾಗಲೇ ನೀಡಿರುವ ಮನವಿಯನ್ನು ಕಡೆಗಣಿಸಿದ್ದರ ಕುರಿತಾಗಿ ಸಂಘಟನಾ ಸ್ವರೂಪದ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.) ಇದರ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿ ಆಗ್ರಹಿಸಿದ್ದಾರೆ.

ಕಾಪು : ಎಲೆಕ್ಟ್ರಿಕಲ್ ಪೊಲ್‌ಗೆ ಕಾರು ಢಿಕ್ಕಿ, ಪಲ್ಟಿ ; ನವಯುಗ ಕಂಪನಿಗೆ ನಷ್ಟ

Posted On: 08-07-2022 07:25PM

ಕಾಪು : ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿಕೊಂಡು ಬಂದು ಎಲೆಕ್ಟ್ರಿಕಲ್ ಪೊಲ್‌ ಗೆ ಢಿಕ್ಕಿ ಹೊಡೆದು, ಪಲ್ಟಿಯಾಗಿ ಎಲೆಕ್ಟ್ರಿಕಲ್ ಪೊಲ್‌ ಜಖಂಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಮಸ್ಯೆಗಳನ್ನು 10 ದಿನದ ಒಳಗೆ ಸರಿಪಡಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Posted On: 08-07-2022 06:26PM

ಉಡುಪಿ : ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169 ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಎಲ್ಲಾ ರಸ್ತೆ ಮೂಲಭೂತ ಸಮಸ್ಯೆಗಳನ್ನು 10 ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಳೆಯ ರಜೆಯನ್ನು ಸಾರ್ವತ್ರಿಕ ರಜೆಗಳಂದು ಸರಿದೂಗಿಸಿ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

Posted On: 08-07-2022 05:58PM

ಮಂಗಳೂರು : ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದರು. ಇದು ಪ್ರಸ್ತುತ ಶೈಕ್ಷಣಿಕ ವರ್ಷದ ಪಠ್ಯಕ್ರಮದ ಮೇಲೆ ಪರಿಣಾಮ ಬೀರುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಮಹತ್ವದ ಆದೇಶ ಹೊರಡಿಸಿದ್ದಾರೆ.