Updated News From Kaup
ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದಿಂದ ವಿದ್ಯಾರ್ಥಿ ವೇತನ ಹಾಗೂ ಗುರಿಕಾರರಿಗೆ ಗೌರವ ಧನ ವಿತರಣಾ ಕಾರ್ಯಕ್ರಮ
Posted On: 11 Sep 2022, 10:56 PM
ಉಚ್ಚಿಲ : ಮಹಾಲಕ್ಷ್ಮಿ ದೇವಸ್ಥಾನ ಜೀರ್ಣೋದ್ಧಾರ ಸಮಯದಲ್ಲಿ ಆಸೆ ಇಟ್ಟುಕೊಂಡು ಪ್ರಾರ್ಥನೆ ಮಾಡಿದ್ದು ಇಂದು ಆ ಮಹಾಲಕ್ಷ್ಮಿ ನಿಜ ಮಾಡಿ ತೋರಿಸುವ ಮೂಲಕ ಪವಾಡ ಮೆರೆದಿದ್ದಾಳೆ ಎಂದು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಗೌರವಾಧ್ಯಕ್ಷ ನಾಡೋಜ ಡಾ.ಜಿ.ಶಂಕರ್ ಹೇಳಿದರು. ಅವರು ದ.ಕ.ಮೊಗವೀರ ಮಹಾಜನ ಸಂಘ(ರಿ.)ಇದರ ವತಿಯಿಂದ ದಕ್ಷಿಣದ ಉಪ್ಪಳ ದಿಂದ ಉತ್ತರದ ಶೀರೂರುವರೆಗಿನ ಮೊಗವೀರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಗುರಿಕಾರರಿಗೆ ಗೌರವ ಧನ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ರವಿವಾರ ಮಾತನಾಡಿದರು. ಜೀರ್ಣೋದ್ಧಾರ ಸಮಯದಲ್ಲಿ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಇದ್ದ ಕನಸ್ಸು ಇಂದು ನನಸಾಯಿತು. ಮಂಗಳೂರು ದಸರಾ ಮಾದರಿಯಲ್ಲಿ ಉಚ್ಚಿಲ ದಸರಾ ಆಚರಿಸೋಣ ಎಂದರು. ಎಸ್.ಎಸ್. ಎಲ್.ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 25 ಲಕ್ಷ ರೂ.ಹಾಗೂ ಎಂ.ಬಿ.ಬಿ.ಎಸ್, ಇಂಜಿನಿಯರಿಂಗ್ ಕಲಿಕೆಯ ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ಸೇರಿದಂತೆ ಒಟ್ಟಾರೆಯಾಗಿ 50 ಲಕ್ಷ ರೂಪಾಯಿಯ ಸಹಕಾರ ಮಾಡುತ್ತಿದ್ದೇವೆ ಎಂದರು. ಈ ಸಂದರ್ಭದಲ್ಲಿ ಎಸ್. ಎಸ್. ಎಲ್.ಸಿ, ಪಿಯುಸಿ, ಎಂ.ಕಾಂ ಮತ್ತು ಸಿ.ಎ ನಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿದರು. ಮುಖ್ಯ ಅತಿಥಿಗಳಾಗಿ ಆನಂದ ಸಿ.ಕುಂದರ್, ಗುಂಡು,ಬಿ.ಅಮೀನ್, ಸತೀಶ್ ಅಮೀನ್ ಬಾರ್ಕೂರು, ಉದಯ್ ಕುಮಾರ್ , ಮೋಹನ್ ಕರ್ಕೇರ , ವಾಸುದೇವ ಸಾಲ್ಯಾನ್, ಭರತ್ ಕುಮಾರ್ ಎರ್ಮಾಳ್, ರಾಜೇಂದ್ರ ಹಿರಿಯಡ್ಕ, ಮೊಗವೀರ ಮಹಿಳಾ ಸಭಾಧ್ಯಕ್ಷೆ ಪೂರ್ಣಿಮಾ ಸಿ.ಇದ್ದರು. ದ.ಕ.ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ.ಸಿ.ಕೋಟ್ಯಾನ್ ಸ್ವಾಗತಿಸಿದರು. ಸತೀಶ್ ಅಮೀನ್ ನಿರ್ವಹಿಸಿದರು.
ಕಾಪು : ಮಾನವನ ಜ್ಞಾನವೇ ಯಶಸ್ಸಿನ ಕೀಲಿ ಕೈ - ಮೌಲಾನಾ ಸಲೀಮ್ ಉಮ್ರಿ
Posted On: 11 Sep 2022, 10:42 PM
ಕಾಪು : ಶ್ರೀಮಂತರು ಜ್ಞಾನ ಗಳಿಸಲು ಲಕ್ಷಗಟ್ಟಲೆ ಹಣ ವಿನಿಯೋಗಿಸುತ್ತಾನರೆ. ಜ್ಞಾನ ಗಳಿಸುವುದರಲ್ಲಿ ಎರಡು ವಿಧವಿದ್ದು, ಒಂದರಲ್ಲಿ ಸ್ವತಃ ಆತನಿಗೂ ಸಮಾಜಕ್ಕೂ ಯಾವುದೇ ಪ್ರಯೋಜನ ಇರುವುದಿಲ್ಲ. ಆತನು , ತಾನು ಗಳಿಸಿದ ಜ್ಞಾನವನ್ನು ತನ್ನ ಸ್ವಾರ್ಥಕ್ಕಾಗಿ ಬಳಸುತ್ತಾ ಸಮಾಜದಲ್ಲಿ ಕೆಡುಕುಗಳನ್ನು ಹಬ್ಬಿಸಲು ಕಾರಣನಾಗುತ್ತಾನೆ. ಇನ್ನೊಂದು ವಿಧದ ಗುರಿಯನ್ನು ಇಟ್ಟು ಜ್ಞಾನ ಗಳಿಸಿದವನಿಗೆ ಆತನಿಗೂ, ಸಮಾಜಕ್ಕೂ ಉಪಯೋಗವಾಗುತ್ತದೆ. ಈ ಜ್ಞಾನವನ್ನು ಆತ ಬಳಸುತ್ತಾ, ತನ್ನ ಶಕ್ತಿ, ಸಾಮರ್ಥ್ಯಕ್ಕನುಸಾರವಾಗಿ ಒಳಿತಿನ ಕಾರ್ಯಗಳನ್ನು ಮಾಡುತ್ತಾ,ಅಭಿವೃದ್ಧಿಯನ್ನು ಬಯಸಿ, ದೇವನಿಗೆ ಶರಣಾಗಿ ಸಮಾಜದಲ್ಲಿ ಬದುಕುತ್ತಾನೆ. ಸಮಾಜದಲ್ಲಿ ಇರುವ ಪ್ರತಿಯೊಬ್ಬ ವ್ಯಕ್ತಿಗೂ ತಾನು ಈ ಭೂಮಿಗೆ ಬಂದ ಉದ್ದೇಶವೇನು ? ನನಗೆ ಇಲ್ಲಿ ಏನು ಮಾಡಬೇಕಾಗಿದೆ ಎಂಬ ಸಾಮಾನ್ಯ ಜ್ಞಾನ ಇರಬೇಕಾಗಿದೆ. ಈ ಬಗ್ಗೆ ಆತ ಗಾಢವಾಗಿ ಅಧ್ಯಯನ ಮಾಡಬೇಕು. ಯಾವ ರೀತಿ ನಾವು ಲೌಕಿಕ ವಿದ್ಯಾಭ್ಯಾಸ ಗಳಿಸಲು ಬಯಸುತ್ತೇವೆಯೋ ಅದೇ ರೀತಿ ಆದ್ಯಾತ್ಮಿಕ ವಿದ್ಯಾಭ್ಯಾಸ ಗಳಿಸಲು ಮುಂದೆ ಬರಬೇಕು. ಇದರಿಂದ ಅವರ ಇಹ ಮತ್ತು ಪರಲೋಕ ಬೆಳಗುತ್ತದೆ. ಇದೇ ಜ್ಞಾನದ ಯಶಸ್ಸಿನ ಕೀಲಿ ಕೈ ಎಂದು ಶಿವಮೊಗ್ಗ , ಉತ್ತರ ಕನ್ನಡ ವಲಯ ಸಂಚಾಲಕರಾದ ಮೌಲಾನಾ ಮುಹಮ್ಮದ್ ಸಲೀಮ್ ಉಮ್ರಿ ಯವರು ಹೇಳಿದರು. ಅವರು ಆದಿತ್ಯವಾರ ಕಾಪು ಹೋಟೆಲ್ ಮಂದಾರದಲ್ಲಿ ಎಸ್. ಐ. ಓ ಮತ್ತು ಜಮಾಅತೆ ಇಸ್ಲಾಮಿ ಹಿಂದ್ ಕಾಪು ವರ್ತುಲವು ಹಮ್ಮಿಕೊಂಡ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತಾಡಿದರು. ಇನ್ನೋರ್ವ ಮುಖ್ಯ ಅಥಿತಿ ಎಸ್. ಐ. ಓ ನ ರಾಜ್ಯ ಕಾರ್ಯದರ್ಶಿ ಹಸೀಬ್ ತರಫ್ದಾರ್ ರವರು , ಇಂದು ನಾವು ವಿದ್ಯಾಭ್ಯಾಸ ಪಡೆಯುತ್ತಿರುವಾಗ ಹಲವು ಭಾಷೆ ಕಲಿಯಲು ಪ್ರಯತ್ನಿಸಬೇಕು. ಇದರಿಂದ ನಮ್ಮ ಜ್ಞಾನವು ವೃದ್ಧಿಸುತ್ತದೆ. ಇತಿಹಾಸ ಅಧ್ಯಯನ ಮಾಡುವಾಗ ಭಾಷಾ ಜ್ಞಾನದಿಂದ ಸಮಾಜಕ್ಕೆ ಬಹಳ ಕೊಡುಗೆ ದೊರಕುವಂತಿರಬೇಕು. ಇದು ಇತರರಿಗೆ ಮಾದರಿಯಾಗಿರಬೇಕು ಎಂದರು. ಹಾಜಿ ಅಬ್ದುಲ್ ಜಲೀಲ್ ಉದ್ಯಾವರ ಸಂದರ್ಭೋಚಿತವಾಗಿ ಮಾತಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾಕ್ಟರ್ ಅಬ್ದುಲ್ ಅಜೀಜ್ ಎಮ್. ಐ. ಟಿ ಯವರು ವಹಿಸಿದ್ದರು. ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ ನ ಡಿಪ್ಲೋಮ ಕೋರ್ಸ್ ನಲ್ಲಿ ರಾಜ್ಯದಲ್ಲಿ ಪ್ರಥಮ ರಾಂಕ್ ಗಳಿಸಿದ ಸಮ್ರಿನ್ ಶಹಾಬುದ್ದಿನ್ ರವರಿಗೆ ಪ್ರಶಸ್ತಿ ಮತ್ತು ಸರ್ಟಿಫಿಕೇಟ್ ಹಾಗೂ ಉಳಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎಸ್. ಐ. ಓ. ವಿದ್ಯಾರ್ಥಿಗಳಿಗೆ ನಡೆಸಿದ ರಸ ಪ್ರಶ್ನೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಜಯ ಗಳಿಸಿದವರಿಗೆ ನಗದು ಮತ್ತು ಬಹುಮಾನ ನೀಡಲಾಯಿತು. ವಿಜೇತರ ಪಟ್ಟಿಯನ್ನು ಅನ್ವರ್ ಅಲಿ ಕಾಪು ಓದಿದರು. ಕಾರ್ಯಕ್ರಮವು ಮುಹಮ್ಮದ್ ರಾಯಿಫ್ ರವರ ಕುರಾನ್ ಪಠಣದೊಂದಿಗೆ ಪ್ರಾರಂಭ ಆಯಿತು. ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಎಸ್. ಐ. ಓ. ಕಾಪು ಘಟಕದ ಅಧ್ಯಕ್ಷ ಅನೀಸ್ ಅಲಿ ಮಾಡಿದರು. ಬೋರ್ಡ್ ಆಫ್ ಇಸ್ಲಾಮಿಕ್ ನ ನಿಯಮಾವಳಿಯನ್ನು ಜಮಾ ಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ಸಂಚಾಲಕಿ ಶೇಹೆನಾಜ್ ಕಾಪು ರವರು ಸಭೆಯ ಮುಂದಿಟ್ಟರು. ಮುಹಮ್ಮದ್ ಅವೀಜ್ ಕಾರ್ಯಕ್ರಮ ನಿರೂಪಿಸಿದರು. ಮುಹಮ್ಮದ್ ಇಕ್ಬಾಲ್ ಸಾಹೇಬ್ ವಂದಿಸಿದರು.
ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ : ವಾರ್ಷಿಕ ಮಹಾಸಭೆ
Posted On: 11 Sep 2022, 05:17 PM
ಉಡುಪಿ : ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ 2021 - 2022 ನೇ ಸಾಲಿನ 20ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಸೆಪ್ಟೆಂಬರ್ 11ರಂದು ಬಿಲ್ಲವರ ಸೇವಾ ಸಂಘ (ರಿ.), ಬನ್ನಂಜೆ ಉಡುಪಿ ಇದರ ಶಿವಗಿರಿ ಸಭಾಂಗಣದಲ್ಲಿ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ವಾರ್ಷಿಕ ಸಾಮಾನ್ಯ ಸಭೆಯನ್ನು ಬ್ಯಾಂಕಿನ ಮಾರ್ಗದರ್ಶಕರಾದ ಎಸ್ ಕೆ ಸಾಲ್ಯಾನ್ ,ರಾಮಚಂದ್ರ ಕಿದಿಯೂರು ಮತ್ತು ಸೂರ್ಯ ಪ್ರಕಾಶ್ ಜಂಟಿಯಾಗಿ ಉದ್ಘಾಟಿಸಿ ಶುಭ ಹಾರೈಸಿದರು. ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ ಹರಿಶ್ಚಂದ್ರ ಅಮೀನ್ ಅವರು ಸರ್ವಸದಸ್ಯರುಗಳನ್ನು ಸ್ವಾಗತಿಸಿ ನಮ್ಮ ಬ್ಯಾಂಕ್ ಭಾರತೀಯ ರಿಸರ್ವ್ ಬ್ಯಾಂಕಿನ ಮಾನ್ಯತೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಬ್ಯಾಂಕ್ ಅಧುನಿಕ ಸೌಲಭ್ಯಗಳಾದ ಕೋರ್ ಬ್ಯಾಂಕಿಂಗ್ ,ಆರ್ ಟಿ ಜಿ ಎಸ್ / ನೆಪ್ಟ್ , ಸಿ ಟಿ ಎಸ್ ಚೆಕ್ ಕ್ಲಿಯರಿಂಗ್, ಸೇಫ್ ಲಾಕರ್ ಸೌಲಭ್ಯಗಳನ್ನು ಒಳಗೊಂಡಿದೆ . ಗ್ರಾಹಕರ ಐದು ಲಕ್ಷದವರೆಗಿನ ಠೇವಣಿಗಳಿಗೆ ಡಿ ಐ ಸಿ ಜಿ ಸಿ. ವಿಮಾ ಸೌಲಭ್ಯವನ್ನು ಹೊಂದಿದೆ . ಸ್ವಸಹಾಯ ಗುಂಪಿನ ಸದಸ್ಯರಿಗೆ ಅತ್ಯಂತ ಕಡಿಮೆ ಬಡ್ಡಿಯ ಸಾಲವನ್ನು ನೀಡುತ್ತಿದ್ದು ಚಿನ್ನಾಭರಣ ಈಡಿನ ಸಾಲ, ಗೃಹ ನಿರ್ಮಾಣ ಸಾಲ, ಅಡಮಾನ ಸಾಲ , ಭದ್ರತಾ ಸಾಲ , ವೈಯಕ್ತಿಕ ಸಾಲ , ವಾಹನ ಸಾಲ ವೇತನಾಧಾರಿತ ಸಾಲ ಹಾಗೂ ವ್ಯಾಪಾರ ಅಭಿವೃದ್ಧಿ ಸಾಲಗಳನ್ನು ವಾಣಿಜ್ಯ ಬ್ಯಾಂಕಿನ ಬಡ್ಡಿ ದರಕ್ಕೆ ಸ್ಪರ್ಧಾತ್ಮಕವಾಗಿ ನೀಡಲಾಗುತ್ತದೆ .ಗ್ರಾಹಕರ ಠೇವಣಿಗೆ ಅತ್ಯಧಿಕ ಬಡ್ಡಿಯನ್ನು ನೀಡುತ್ತಿದ್ದು ಹಿರಿಯ ನಾಗರಿಕರಿಗೆ 0.5% ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಗ್ರಾಹಕರ ಹಾಗೂ ಆಡಳಿತ ಮಂಡಳಿಯ ಸಹಕಾರ ಸಿಬ್ಬಂದಿಗಳ ನಗುಮೊಗದ ಸೇವೆ ಸದಸ್ಯರ ಪ್ರೋತ್ಸಾಹದಿಂದ ನಮ್ಮ ಬ್ಯಾಂಕ್ ಉತ್ತಮ ಲಾಭವನ್ನು ಕಾಣುವಂತಾಗಿದೆ ಎಂದರು. ಉಪಾಧ್ಯಕ್ಷರಾದ ವಿಜಯಾ ಜಿ ಬಂಗೇರ, ನಿರ್ದೇಶಕರಾದ ಕೆ. ಜಯಕುಮಾರ್, ಪ್ರಭಾಕರ ಬಂಗೇರ, ಬಿ.ಬಿ. ಪೂಜಾರಿ, ನವೀನ್ ಅಮೀನ್, ಆನಂದ ಜತ್ತನ್ನ, ಡಿ.ಆರ್ ರಾಜು, ಶೇಕರ ಬಿ ಪೂಜಾರಿ, ರಮೇಶ್ ಕೆ ಕೋಟ್ಯಾನ್, ಅಶೋಕ್ ಕುಮಾರ್ , ಅರುಣ್ ಜತ್ತನ್ನ, ವೃತ್ತಿಪರ ನಿರ್ದೇಶಕರಾದ ಭಾಸ್ಕರ ಪೂಜಾರಿ ಹಾಗೂ ಕೃಷ್ಣ ಬಿಲ್ಲವ ಉಪಸ್ಥಿತರಿದ್ದರು. ಸದಸ್ಯರಾದ ಗುರುದತ್ ಅಮೀನ್ , ಕಟಪಾಡಿ ಶಂಕರ್ ಪೂಜಾರಿ, ರಮೇಶ್ ಬಂಗೇರ ,ಶೇಖರ್ ಕೋಟ್ಯಾನ್ ಮತ್ತು ಸುಲೋಚನಾ ದಾಮೋದರ್ ಇವರು ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿ ಬ್ಯಾಂಕನ್ನು ಲಾಭದತ್ತ ಮುನ್ನಡೆಸಿದ ಆಡಳಿತ ಮಂಡಳಿಯನ್ನು ಅಭಿನಂದಿಸಿದರು. ಬ್ಯಾಂಕಿನ ನಿರ್ದೇಶಕರಾದ ಶಕುಂತಲ ಶ್ರೀನಿವಾಸ್ ಪ್ರಾರ್ಥಿಸಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಶನ್ ಫೌಸ್ಟಿನ್ ಆಲ್ವರವರು ಬ್ಯಾಂಕಿನ 19ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ವರದಿಯನ್ನು ವಾಚಿಸಿದರು. ನಿರ್ದೇಶಕ ಶಿವಾಜಿ ಸುವರ್ಣ ವಂದಿಸಿದರು.
ಕಾಪು : ಲಕ್ಷ್ಮಿಜನಾರ್ಧನ ದೇವಳಕ್ಕೆ ಚಲನಚಿತ್ರ ನಟ ಗಣೇಶ್ ಭೇಟಿ
Posted On: 11 Sep 2022, 05:10 PM
ಕಾಪು : ಇಲ್ಲಿನ ಲಕ್ಷ್ಮಿಜನಾರ್ಧನ ದೇವಳಕ್ಕೆ ಕನ್ನಡ ಚಲನಚಿತ್ರ ನಟ ಗೋಲ್ಡನ್ ಸ್ಟಾರ್ ಗಣೇಶ್ ಭೇಟಿ ನಿಡಿದರು. ದೇವಳದ ಪ್ರಧಾನ ಅರ್ಚಕರಾದ ಜನಾರ್ಧನ ತಂತ್ರಿಯವರು ಗಣೇಶರನ್ನು ಸನ್ಮಾನಿಸಿ ಶ್ರೀ ದೇವರ ಪ್ರಸಾದ ವಿತರಿಸಿದರು. ಈ ಸಂದರ್ಭ ಪ್ರಕಾಶ್ ಅಮ್ಮಣ್ಣಾಯ, ದೇವಳದ ಸಿಬ್ಬಂದಿ ದಿವಾಕರ್, ಲಕ್ಷ್ಮೀಕಾಂತ್, ರಾಧಾಕೃಷ್ಣ ಕಲ್ಲೂರಾಯ, ಕಾಪು ಪುರಸಭಾ ಸದಸ್ಯ ಅನಿಲ್ ಮತ್ತಿತರರು ಉಪಸ್ಥಿತರಿದ್ದರು.
ಮುದರಂಗಡಿ : ಮಟ್ಕಾ ಜುಗಾರಿ ; ಪೋಲಿಸ್ ದಾಳಿ ; ಓರ್ವನ ದಸ್ತಗಿರಿ
Posted On: 11 Sep 2022, 04:58 PM
ಮುದರಂಗಡಿ : ಕಾಪು ತಾಲೂಕು ಸಾಂತೂರು ಗ್ರಾಮದ ಮುದರಂಗಡಿ ಮೀನು ಮಾರ್ಕೆಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಆಟದ ಬಗ್ಗೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾನೆಂದು ಬಂದ ಮಾಹಿತಿಯಂತೆ ಪಡುಬಿದ್ರಿ ಪೋಲಿಸರು ದಾಳಿ ನಡೆಸಿದ್ದಾರೆ. ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಗೆ ಚೀಟಿ ಬರೆದು ಕೊಡುತ್ತಾ ಹಣ ಸಂಗ್ರಹಿಸುತ್ತಿದ್ದ, ದಿನೇಶ್ ಶೆಟ್ಟಿ ಎಂಬಾತನನ್ನು ದಸ್ತಗಿರಿ ಮಾಡಿ, ಅವನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ ಸಂಗ್ರಹಿಸಿದ ನಗದು ರೂಪಾಯಿ 1,050, ಮಟ್ಕಾ ನಂಬ್ರ ಬರೆದ ಚೀಟಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ : 1 ಕೋಟಿ 10 ಲಕ್ಷ ರೂ.ಗಳ ಕಾಮಗಾರಿ ; 3 ರಸ್ತೆಗಳ ಲೋಕಾರ್ಪಣೆ
Posted On: 11 Sep 2022, 03:09 PM
ಪಡುಬಿದ್ರಿ : ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಪಡುಬಿದ್ರೆ ಪಂಚಾಯತ್ ವ್ಯಾಪ್ತಿಯ 5 ನೇ ವಾರ್ಡಿನ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿ ಸುಮಾರು 1 ಕೋಟಿ 10 ಲಕ್ಷ ರೂಪಾಯಿಗಳ ಅಭಿವೃದ್ಧಿಗೊಂಡ 3 ರಸ್ತೆಗಳನ್ನು ಲೋಕಾರ್ಪಣೆಗೊಳಿಸಿದರು. ಸ್ಥಳೀಯರ ರಸ್ತೆ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು 1 ಕೋಟಿ ಅನುದಾನದಿಂದ, ಅಪ್ಪು ಪೂಜಾರಿ ಮನೆ ಸಮೀಪ ರಸ್ತೆ ಅಭಿವೃದ್ಧಿ 5 ಲಕ್ಷ, ರಘುಪತಿ ಭಟ್ ಮನೆ ಬಳಿ ರಸ್ತೆ ಅಭಿವೃದ್ಧಿಗೆ 5 ಲಕ್ಷ ಅನುದಾನದಿಂದ ರಸ್ತೆ ಅಭಿವೃದ್ಧಿಗೊಂಡು ಭರವಸೆಯಂತೆ ಸಾರ್ವಜನಿಕರ ಉಪಯೋಗಕ್ಕೆ ಬಿಟ್ಟುಕೊಡಲಾಗಿದೆ. ಪಂಚಾಯತ್ ವ್ಯಾಪ್ತಿಯ ಉಳಿದ ವಾರ್ಡ್ಗಳಲ್ಲಿ ಕೋಟಿ ರೂಗಳ ಅನುದಾನ ಮಂಜೂರುಗೊಂಡಿದ್ದು ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಗುದ್ದಲಿ ಪೂಜೆ ನೆರವೇರಿಸಲಾಗುವುದು ಹಾಗೂ ಬಿಜೆಪಿ ಆಡಳಿತವಿರುವ ಗ್ರಾಮ ಪಂಚಾಯತ್ ಈ ಭಾಗದ ಜನರ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿತ್ತಿದ್ದು ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದ್ದು. ಹಾಗೂ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಪಡುಬಿದ್ರಿ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷೆ ಯಶೋದ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಮಹೇಂದ್ರ ಪೂಜಾರಿ, ವಿನಾಯಕ್ ಪುತ್ರನ್ , ಅಶೋಕ್ ಪೂಜಾರಿ ಹಾಗೂ ಸ್ಥಳೀಯರು, ಕಾರ್ಯಕರ್ತರು, ಮತ್ತಿತರರು ಉಪಸ್ಥಿತರಿದ್ದರು.
ಘರ್ ಘರ್ ತಿರಂಗಾ - ತಿರಂಗಾ ಸೆಲ್ಫಿ : ರಾಘವೇಂದ್ರ ಪ್ರಭು ಕವಾ೯ಲುಗೆ ಪ್ರಥಮ ಬಹುಮಾನ
Posted On: 11 Sep 2022, 02:22 PM
ಉಡುಪಿ : ಇಂಡಿಯಾ ಬುಕ್ ಆಫ್ ವಲ್ಡ್೯ ರೆಕಾಡ್೯ ಸಂಸ್ಥೆ ಮತ್ತು ಆಯುಷ್ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಘರ್ ಘರ್ ತಿರಂಗಾ ಕುರಿತು ನಡೆದ ತಿರಂಗಾ ಸೆಲ್ಫಿ ಸ್ಪಧೆ೯ಯಲ್ಲಿ ಕ.ಸಾ.ಪ ತಾಲೂಕು ಸಂ.ಕಾಯ೯ದಶಿ೯ ರಾಘವೇಂದ್ರ ಪ್ರಭು,ಕವಾ೯ಲು ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ನಂದಿಕೂರಿನ ಮಹಿಳೆಗೆ ವೀಲ್ ಚೇರ್ ಹಸ್ತಾಂತರ
Posted On: 11 Sep 2022, 01:52 PM
ಪಲಿಮಾರು : ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಪಲಿಮಾರು ಇದರ ನೇತೃತ್ವದಲ್ಲಿ ನಂದಿಕೂರಿನ ಕಲ್ಯಾಣಿ ಪೂಜಾರ್ತಿಯವರಿಗೆ ವೀಲ್ ಚೇರ್ ಹಸ್ತಾಂತರಿಸಲಾಯಿತು. ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಇವರ ಮನವಿ ಮೇರೆಗೆ ಬೆಂಗಳೂರಿನ ಉದ್ಯಮಿ ಗಣೇಶ್ ಗುಜರನ್ ಪಡುಬಿದ್ರಿ ಕೂಡಲೇ ಸ್ಪಂದಿಸಿ ವೀಲ್ ಚೇರ್ ಕೊಡುಗೆ ನೀಡಿದ್ದರು. ಈ ಸಂದರ್ಭ ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಅಧ್ಯಕ್ಷರಾದ ಹರೀಶ್ ಪೂಜಾರಿ, ಸದಸ್ಯರಾದ ಪ್ರಕಾಶ್ ಪೂಜಾರಿ, ಉದ್ಯಮಿ ಗಣೇಶ್ ಗುಜರನ್ ಪಡುಬಿದ್ರಿ ಮತ್ತಿತರರು ಉಪಸ್ಥಿತರಿದ್ದರು.
ಪಂಚ ಪವಿತ್ರ ಗಿಡ ವಿತರಣಾ ಅಭಿಯಾನ
Posted On: 11 Sep 2022, 09:29 AM
ಉಡುಪಿ : ನಮ್ಮ ಹಿರಿಯರು ಗಿಡಗಳ ಮೂಲಕ ಧಾಮಿ೯ಕ ಭಾವನೆಗಳನ್ನು ಮೂಡಿಸಿದರ ಫಲವಾಗಿ ಇಂದು ಹಲವಾರು ಗಿಡ ಮರಗಳು ಉಳಿಯಲು ಕಾರಣವಾಗಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಸೆಪ್ಟೆಂಬರ್ 10 ರಂದು ಭಾರತೀಯ ಜನೌಷಧಿ ಕೇಂದ್ರ ಅಜ್ಜರಕಾಡು ಮತ್ತು ಜಯಂಟ್ಸ್ ಗ್ರೂಫ್ ಆಫ್ ಬ್ರಹ್ಮಾವರ ಇದರ ಆಶ್ರಯದಲ್ಲಿ ನಡೆದ ಧಾಮಿ೯ಕ ಕೇಂದ್ರಗಳು, ದೇವಾಲಯಗಳಿಗೆ ವಿತರಿಸುವ ಪಂಚ ಪವಿತ್ರ ಗಿಡ ವಿತರಣಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದಭ೯ದಲ್ಲಿ ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು, ಕೇಂದ್ರ ಸದಸ್ಯ ದಿನಕರ ಅಮೀನ್, ಲಕ್ಮೀಕಾಂತ್ ಬೆಸ್ಕೂರು, ಅಣ್ಣಯ್ಯದಾಸ್, ಶ್ರೀನಾಥ್ ಕೋಟ, ಇಕ್ಬಾಲ್ ಮನ್ನಾ, ಮುಂತಾದವರು ಉಪಸ್ಥಿತರಿದ್ದರು. ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕುಡೆ ಸ್ವಾಗತಿಸಿದರು. ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು.
ಮಣಿಪಾಲ : ಜೇಸಿ ಸಪ್ತಾಹ - ರಕ್ತದಾನ ಶಿಬಿರ
Posted On: 11 Sep 2022, 09:24 AM
ಮಣಿಪಾಲ : ಕೆ.ಎಂ.ಸಿ ಮಣಿಪಾಲ ರಕ್ತನಿಧಿ ಕೇಂದ್ರ ಮತ್ತು ಜೇಸಿಐ ಕಲ್ಯಾಣಪುರ ಇದರ ವತಿಯಿಂದ ಜೇಸಿ ಸಪ್ತಾಹ ವತಿಯಿಂದ ಸೆಪ್ಟಂಬರ್ 10 ರಂದು ರಕ್ತದಾನ ಶಿಬಿರ ನಡೆಯಿತು. ಈ ಸಂದಭ೯ ರಾಷ್ಟ್ರಮಟ್ಟದಲ್ಲಿ ಉತ್ತಮ ರಕ್ತನಿಧಿ ಕೇಂದ್ರ ಪ್ರಶಸ್ತಿ ಪಡೆದ ಕೇಂದ್ರದ ಮುಖ್ಯಸ್ಥರಾದ ಡಾII ಶಮ್ಮಿ ಶಾಸ್ರಿಯವರನ್ನು ಸನ್ಮಾನಿಸಲಾಯಿತು. ಈ ಸಂದಭ೯ ವಲಯ ನಿದೇ೯ಶಕ ರಾಘವೇಂದ್ರ ಪ್ರಭು ಕವಾ೯ಲು, ಉಮೇಶ್ ಅಮೀನ್ , ಅರುಣ್ ಕುಮಾರ್ , ಅದ್ಯಕ್ಷೆ ಜಯಶ್ರೀ, ಮಿತ್ರ ಕುಮಾರ್, ಚಿತ್ರ ಕುಮಾರ್ , ನಿತ್ಯಾನಂದ ಮತ್ತಿತರರು ಉಪಸ್ಥಿತರಿದ್ದರು.
