Updated News From Kaup
ಇನ್ನಂಜೆ : ಗೋವುಗಳಿಗೆ ಮೇವು ಕಾರ್ಯಕ್ರಮ

Posted On: 27-06-2022 09:24PM
ಕಾಪು : ಇನ್ನಂಜೆ ಯುವತಿ ಮಂಡಲ (ರಿ.) ಇನ್ನಂಜೆ ಮತ್ತು ಬಿಲ್ಲವ ಸೇವಾ ಸಂಘ ಇನ್ನಂಜೆ ಇವರ ಜಂಟಿ ಆಶ್ರಯದಲ್ಲಿ ಜೂನ್ 27ರಂದು ಗೋವುಗಳಿಗೆ ಮೇವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮೇವಿಗಾಗಿ ಹುಲ್ಲನ್ನು ಗ್ರೇಗೋರಿ ಮಥಾಯಸ್ ನೀಡಿದರು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಆಶಾ ನಾಯಕ್, ಸದಸ್ಯರಾದ ಲಕ್ಷ್ಮಿ, ಸುಮಲತಾ, ಅಕ್ಷತಾ ,ಸೌಮ್ಯ ಹಾಗೂ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಸದಾಶಿವ ಪೂಜಾರಿ, ಸದಸ್ಯರಾದ ಶೇಖರ್ ಪೂಜಾರಿ, ಸುಮತಿ ಹಾಗೂ ಮೋಹನ್, ನವನೀತ್, ಸುಶಾಂತ್, ಶಶಾಂಕ್, ಸಂಜೀವ ಮೂಲ್ಯ ಸಹಕಾರ ನೀಡಿದರು. ಮೇವನ್ನು ಕಾಪು ಗೋಶಾಲೆಗೆ ನೀಡಲಾಯಿತು.
ಕಾಪು ಕುಲಾಲ ಸಂಘದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಆಯ್ಕೆ

Posted On: 27-06-2022 09:16PM
ಕಾಪು : ಇಲ್ಲಿನ ಕುಲಾಲ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚಿಗೆ ಸಂಘದ ಕಚೇರಿಯಲ್ಲಿ ಜರಗಿತು. ಸಂಘದ ಮುಂದಿನ ಕಾರ್ಯ ಅವಧಿಗೆ ಸಂದೀಪ್ ಬಂಗೇರ ಶಂಕರಪುರ ಅಧ್ಯಕ್ಷರಾಗಿ ಮರು ಆಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಮೂಲ್ಯ ಎಲ್ಲೂರು ಆಯ್ಕೆಯಾಗಿದ್ದಾರೆ.
ಈ ಹಿಂದೆ ಇದ್ದ ಕಾರ್ಯಕಾರಿಣಿ ಸಮಿತಿಯನ್ನು ಮುಂದುವರೆಸುವುದೆಂದು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಕಾಪು ಕುಲಾಲ ಸಂಘ ಪ್ರಕಟನೆಯಲ್ಲಿ ತಿಳಿಸಿದೆ.
ಪೆರ್ಡೂರು : ಅನಿಯಮಿತ ವಿದ್ಯುತ್ ಕಡಿತ - ಮನವಿ, ಪ್ರತಿಭಟನೆಯ ಎಚ್ಚರಿಕೆ

Posted On: 27-06-2022 08:39PM
ಉಡುಪಿ : ಪೆರ್ಡೂರು ಮೆಸ್ಕಾಂ ವ್ಯಾಪ್ತಿಯ ಬೆಳ್ಳರ್ಪಾಡಿ, 41ನೇ ಶಿರೂರು ಹಾಗೂ ಬೈರಂಪಲ್ಲಿ ಯಲ್ಲಿ ಅನಿಯಮಿತ ವಿದ್ಯುತ್ ಕಡಿತವನ್ನು ವಿರೋಧಿಸಿ ಬೈರಂಪಲ್ಲಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಪೆರ್ಡೂರು ಮೆಸ್ಕಾಂ ಕಚೇರಿಗೆ ತೆರಳಿ ಪೆರ್ಡೂರು ವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಮೆಸ್ಕಾಂ ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಫೋನ್ ಸಂಭಾಷಣೆ ಮುಖಾಂತರ ಮಾತನಾಡಿ ಇನ್ನು ಇದೇ ರೀತಿ ಮುಂದುವರೆದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಲಾಯಿತು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಲಾಲ್ ಪಕ್ಕಲೂ, ಬೈರಂಪಲ್ಲಿ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಸಾಂತ್ಯಾರು, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಮರ್ ಕುಲಾಲ್ ಬೈರಂಪಲ್ಲಿ, ಕಾಪು ಉತ್ತರ ವಲಯದ ಸಾಮಾಜಿಕ ಜಾಲತಾಣ ಅಧ್ಯಕ್ಷರಾದ ನಿತಿನ್ ಕುಮಾರ್ ಶೆಟ್ಟಿ ಬೆಳ್ಳರ್ಪಾಡಿ, ಬೈರಂಪಳ್ಳಿಯುವ ಕಾಂಗ್ರೆಸ್ ಅಧ್ಯಕ್ಷರಾದ ಗಣೇಶ್ ಕುಲಾಲ್ ಕಾಂಗ್ರೆಸ್ ಮುಖಂಡರುಗಳಾದ ಉದಯಕುಮಾರ್, ಕೃಷ್ಣನಂದ ನಾಯಕ್ ಹಾಗೂ ಇನ್ನಿತರ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.
ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ - ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳ ವಿಲೇವಾರಿ

Posted On: 26-06-2022 07:05PM
ಮಂಗಳೂರು : ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ಪೈಕಿ ಪ್ರಸ್ತುತ ಠಾಣೆಯಲ್ಲಿ ವಿಲೇವಾರಿಯ ಸಲುವಾಗಿ ಬಾಕಿ ಇರುವ ಮಾದಕ ವಸ್ತುಗಳನ್ನು ವಿಲೇವಾರಿಗೊಳಿಸುವ ಪ್ರಕ್ರಿಯೆ ಇಂದು ನಡೆಯಿತು.
ಈ ಸಂಬಂಧ ಮಾನ್ಯ ನ್ಯಾಯಾಲಯಗಳಿಂದ ಆದೇಶವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಮಾದಕ ದ್ರವ್ಯ ವಿಲೇವಾರಿ ಸಮಿತಿಯ ಅಧ್ಯಕ್ಷರಾದ ಸೋನವಣೆ ಋಷಿಕೇಶ್ ಭಗವಾನ್ ಐಪಿಎಸ್, ಮತ್ತು ಸದಸ್ಯರುಗಳಾದ ಶಿವಾಂಶು ರಜಪೂತ್ ಐಪಿಎಸ್, ಸಹಾಯಕ ಪೊಲೀಸ್ ಅಧೀಕ್ಷಕರು ಬಂಟ್ವಾಳ ಉಪವಿಭಾಗ ಮತ್ತು ಡಾ. ಗಾನ ಪಿ ಕುಮಾರ್, ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪ ವಿಭಾಗರವರ ಸಮಕ್ಷಮದಲ್ಲಿ ವಿವಿಧ ಠಾಣೆಯ 11 ಪ್ರಕರಣಗಳಲ್ಲಿ ಸುಮಾರು ರೂ 23,75,300/- ಮೌಲ್ಯದ 53 ಕೆ.ಜಿ 128 ಗ್ರಾಂ ಮಾದಕ ವಸ್ತು ಗಾಂಜಾವನ್ನು ಮತ್ತು ಸುಮಾರು ರೂ 30,00,000/- ಮೌಲ್ಯದ 120 ಗ್ರಾಂ ಹೆರಾಯಿನ್ ನ್ನು ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆ, ಸಂಸ್ಕರಣೆ ಮತ್ತು ವಿಲೇವಾರಿ ಘಟಕವಾದ ಮೆ|| ರಾಮ್ಕಿ ಎನರ್ಜಿ ಮತ್ತು ಎನ್ವಿರೋನ್ಮೆಂಟ್ ಲಿ. ರವರಿಗೆ ಹಸ್ತಾಂತರಿಸಿ ನಾಶಪಡಿಸಲಾಯಿತು.
ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಸೇವೆ

Posted On: 24-06-2022 06:43PM
ಉಡುಪಿ : ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಗ್ರಾಮ ಒನ್ ಯೋಜನೆಯಡಿ ಎಲ್ಲ ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಸರ್ಕಾರ ನಿಗದಿಪಡಿಸಿರುವ ದರದಲ್ಲಿ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕ್ರೇನ್ ಮುಖೇನ ಅನ್ ಲೋಡ್ ಮಾಡುವಾಗ ಅವಘಡ - ವ್ಯಕ್ತಿ ಮೃತ

Posted On: 23-06-2022 11:27PM
ಸುರತ್ಕಲ್ : ಎಂ ಆರ್ ಪಿ ಎಲ್ ಗೆ ಸಂಬಂಧಿಸಿದ ಕ್ರೇನ್ ಮುಖೇನ ಅನ್ ಲೋಡ್ ಮಾಡುವಾಗ ಕೌಂಟರ್ ವೇಟ್ ತಾಗಿ ವ್ಯಕ್ತಿಯೋರ್ವ ಗಾಯಗೊಂಡಿದ್ದು ಗಾಯಾಳುವನ್ನು ಚಿಕಿತ್ಸೆಗಾಗಿ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತ ಪಟ್ಟಿರುವ ಘಟನೆ ಜೂನ್ 22 ರಂದು ನಡೆದಿದೆ.
ಮೃತ ವ್ಯಕ್ತಿ ಕೇಶವ (47) ಕುತ್ತೆತ್ತೂರು ಗ್ರಾಮದ ಎಂ ಆರ್ ಪಿ ಎಲ್ ವರ್ಕ್ ಶಾಪ್ ಬಳಿ ಗುತ್ತಿಗೆ ಆಧಾರದಲ್ಲಿ ರಿಗ್ಗರ್ ಕೆಲಸ ಮಾಡಿಕೊಂಡಿದ್ದರು.
ಎಂ ಆರ್ ಪಿ ಎಲ್ ಗೆ ಸಂಬಂಧಿಸಿದ ಟ್ರೇಲರ್ ನಲ್ಲಿ ಇದ್ದ ಕೌಂಟರ್ ವೇಟ್ ನ್ನು ಎಂ ಆರ್ ಪಿ ಎಲ್ ಗೆ ಸಂಬಂಧಿಸಿದ ಕ್ರೇನ್ ಮುಖೇನ ಅನ್ ಲೋಡ್ ಮಾಡುವಾಗ ಕೌಂಟರ್ ವೇಟ್ ತಾಗಿ ಈ ಅವಘಡ ಸಂಭವಿಸಿದೆ.
ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ಒದಗಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Posted On: 23-06-2022 08:43PM
ಉಡುಪಿ : ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ದಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಮ್ಯಾನ್ಯವಲ್ ಸ್ಕ್ಯಾವೆಂಜರ್ ಪದ್ದತಿಯನ್ನು ಸಂಪೂರ್ಣವಾಗಿ ನಿಷೇಧಿಸಿ, ಕಾಯಿದೆ ಹಾಗೂ ನಿಯಮಗಳನ್ನು ಜಾರಿಗೆ ತರುವುದರೊಂದಿಗೆ , ಈ ವೃತ್ತಿಯಲ್ಲಿ ತೊಲಗಿಸಬೇಕು, ಒಂದೊಮ್ಮೆ ಕಾಯಿದೆಯನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ದ ಕಾನೂನಿಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಮ್ಯಾನ್ಯುವಲ್ ಸ್ಕ್ಯಾವೆಂಜರ್ ವೃತ್ತಿಯಿಂದ ಹೊರ ಬಂದಿರುವವರಿಗೆ ಸೂಕ್ತ ಪುರ್ನವಸತಿ ಒದಗಿಸಬೇಕು , ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಸಫಾಯಿ ಕರ್ಮಚಾರಿ ಅವರಿಗೆ ನಿವೇಶನ ಮಂಜೂರಾತಿಯನ್ನು ಪ್ರಥಮಾದ್ಯತೆಯ ಮೇಲೆ ನೀಡಬೇಕು ಎಂದು ಸೂಚಿಸಿದರು. ಮ್ಯಾನ್ಯುವಲ್ ಸ್ಕ್ಯಾವೆಂಜರ್ ನಿಂದ ಮೃತಪಟ್ಟ ಕಾರ್ಮಿಕರ ಕುಟುಂಬದ ಅವಲಂಬಿತ ಸದಸ್ಯರುಗಳಿಗೆ ಗುರುತಿನ ಚೀಟಿ ಹಾಗೂ ಪುರ್ನವಸತಿ ಕಲ್ಪಿಸುವ ಕಾರ್ಯವಾಗಬೇಕು ಎಂದರು.
ಸಕ್ಕಿಂಗ್ ಹಾಗೂ ಜಟ್ಟಿಂಗ್ ಯಂತ್ರ, ವೈಯಕ್ತಿಕವಾಗಿ , ಸಫಾಯಿ ಕರ್ಮಚಾರಿಗಳ ಸ್ವ ಸಹಾಯ ಗುಂಪುಗಳಿಂದ , ಖಾಸಗಿ ಏಜೆನ್ಸಿ ಗುತ್ತಿಗೆದಾರರಿಂದ ಹೊಸ ಯಂತ್ರಗಳನ್ನು ಖರೀದಿ ಮಾಡಲು ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುವುದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿ 3 ತಿಂಗಳಿಗೊಮ್ಮೆ ಸಾಮಾನ್ಯ ಅರೋಗ್ಯ ತಪಾಸಣೆ ಹಾಗೂ ವಾರ್ಷಿಕವಾಗಿ ಎರಡು ಬಾರಿ ಸಂಪೂರ್ಣ ದೇಹ ಪರೀಕ್ಷೆಯನ್ನು ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಮಾಡಿಸಿ, ವರದಿಯನ್ನು ಜಿಲ್ಲಾ ಜಾಗೃತಿ ಸಮಿತಿಗೆ ನೀಡಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಲೋರ್ಸ್ ಹಾಗೂ ಕ್ಲೀನರ್ ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ವ್ಯಕ್ತಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು , ಜಾಗೃತ ಸಮಿತಿ ಸದಸ್ಯರುಗಳಾದ ವೈ.ಲಕ್ಷ್ಮಣ್ , ಗಣೇಶ್, ಅನಿತಾ, ಹಾಗೂ ಎಲ್ಲಾ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಇಂಡಿಯಾ ಬುಕ್ ಆಫ್ ರೆಕಾಡ್೯ನಲ್ಲಿ ಕಾಪುವಿನ ಶಶಾಂಕ್ ಎಸ್. ಸಾಲಿಯಾನ್ ಕಲಾಕೃತಿ ; 13,940 ಮೊಳೆಗಳಲ್ಲಿ ಮೂಡಿದ ಆನೆ

Posted On: 23-06-2022 08:38PM
ಕಾಪು : ಗ್ರಾಮೀಣ ಪ್ರತಿಭೆಯಾಗಿರುವ ಶಶಾಂಕ್, ಕೇರಳದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಗರ್ಭಿಣಿ ಆನೆಯ ಸಾವಿಗೆ ಮರುಕ ಪಟ್ಟು ಮೊಳೆಗಳ ಜೋಡಣೆಯೊಂದಿಗೆ ಆನೆಯ ಕಲಾಕೃತಿ ರಚಿಸಿದ್ದಾರೆ. ಇದೊಂದು ಅಪೂರ್ವ ಸಾಧನೆಯಾಗಿದ್ದು, ಅವರ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿರುವುದು ಕಾಪುವಿನ ಜನತೆಗೆ ಹೆಮ್ಮೆಯನ್ನುಂಟು ಮಾಡಿದೆ ಎಂದು ಕಲಾ ಪ್ರೋತ್ಸಾಹಕ ಗುರುಚರಣ್ ಪೊಲಿಪು ಹೇಳಿದರು. ಅವರು ಕಾಪುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಸಂದರ್ಭ ಯುವ ಕಲಾವಿದ ಶಶಾಂಕ್ ಎಸ್. ಸಾಲಿಯಾನ್ ಮಾತನಾಡಿ, ಕೇವಲ ಮೊಳೆಗಳನ್ನು ಬಳಸಿಕೊಂಡು ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಕಲಾಕೃತಿ ಮಾಡಿರುವ ದಾಖಲೆ ಇಲ್ಲದಿರುವುದನ್ನು ತಿಳಿದುಕೊಂಡಿದ್ದೆ. ಮೊದಲಾಗಿ 2,000 ಮೊಳೆ ಬಳಸಿ ಸಣ್ಣ ಗಾತ್ರ ಕಲಾಕೃತಿ ರಚಿಸುವ ಯೋಜನೆ ಹಾಕಿಕೊಂಡಿದ್ದೆ. ಆದರೆ ತಂದೆ-ತಾಯಿ ಪ್ರೋತ್ಸಾಹ, ಸ್ನೇಹಿತರಾದ ಧೀರಜ್, ಸೌರಭ್, ಗೌರವ್, ಮನೀಶ್, ಶಶ್ಮಿತಾ ಮತ್ತು ಜೋಸ್ವಿನ್ ಸಹಕಾರದಿಂದ ಬೃಹತ್ ಗಾತ್ರದ ಕಲಾಕೃತಿ ಮಾಡಲು ಮುಂದಾದೆ. ಕಲಾಕೃತಿ ರಚಿಸಲು ಸುಶಾಂತ್ ಶೆಟ್ಟಿ, ಶಶ್ಮಿತಾ ಸಾಲಿಯಾನ್, ಐಶ್ವರ್ಯ ಮತ್ತು ಶ್ರೀಶ ಶೆಟ್ಟಿ ಪ್ರಾಯೋಜಕತ್ವ ವಹಿಸಿ ಇನ್ನಷ್ಟು ಉತ್ತೇಜಿಸಿದರು. ಅರ್ಧ ಇಂಚಿನ 13,940 ಮೊಳೆಗಳನ್ನು ಬಳಸಿಕೊಂಡು ಫೋಮ್ ಶೀಟ್ನಲ್ಲಿ 9 ಗಂಟೆಯಲ್ಲಿ ಆನೆಯ ಕಲಾಕೃತಿ ರಚಿಸಲಾಗಿದೆ. ಬ್ರಶ್ ಮತ್ತು ಬಣ್ಣಗಳನ್ನು ಉಪಯೋಗಿಸದೇ ಬಿಡಿಸಿರುವ ಕಲಾಕೃತಿಯ ಚಿತ್ರೀಕರಣದ ದಾಖಲೆಗಳನ್ನು ಆನ್ ಲೈನ್ ಮೂಲಕವಾಗಿ ಸಲ್ಲಿಸಿದ್ದು, ಅದನ್ನು ಪರೀಕ್ಷಿಸಿದ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆಯು ದಾಖಲೆ ಸಂದೇಶ ರವಾನಿಸಿದೆ. ವಾರದೊಳಗೆ ದಾಖಲೆ ಪ್ರಮಾಣ ಪತ್ರ ರವಾನಿಸುವುದಾಗಿಯೂ ತಿಳಿಸಿದೆ ಎಂದರು.
ಶಾಲಾ ದಿನಗಳಲ್ಲಿಯೇ ಕಲಾಕೃತಿ ರಚನೆ ಹವ್ಯಾಸವನ್ನು ಬೆಳೆಸಿಕೊಂಡಿದ್ದ ನಾನು. ಆವೆ ಮಣ್ಣಿನ ಕಲಾಕೃತಿ, ಪೇಂಟಿಂಗ್, ವಾಟರ್ ಕಲರ್, ಆಕ್ರಾಲಿಕ್ ಹೀಗೆ ವಿಭಿನ್ನ ಕಲಾ ಪ್ರಕಾರಗಳಲ್ಲಿ ಕಲಾಕೃತಿ ರಚನೆಯಲ್ಲಿ ತೊಡಗಿರುವುದಾಗಿ ವಿವರಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಶಶಾಂಕ್ ತಾಯಿ ಪುಷ್ಪಾ ಉಪಸ್ಥಿತರಿದ್ದರು.
ಜೂನ್ 24 : ಕಾಪು ಡಿವಿಷನ್ ಎಸ್ಸೆಸ್ಸೆಫ್ - ಸುಹ್ಬಾ ಕ್ಯಾಂಪ್

Posted On: 22-06-2022 11:14PM
ಕಾಪು : ರಾಜ್ಯ ಎಸ್ಸೆಸ್ಸೆಫ್ ಮಹಾತ್ವಾಕಾಂಕ್ಷೆಯ ಯೋಜನೆಯ ಸನ್ನದ್ಧ ಕಾರ್ಯಕರ್ತರ ಪಡೆಯನ್ನು ಮುಂದಿನ ಪೀಳಿಗೆಗಾಗಿ ಸಕ್ರೀಯ ಕಾರ್ಯಾಚರಣೆಗೆ ಸಿದ್ಧಪಡಿಸುವ ಉದ್ದೇಶದೊಂದಿಗೆ ರಾಜ್ಯ ಕ್ಯೂಡಿ ಉಪಸಮಿತಿ ಅಧೀನದಲ್ಲಿ ಸುಹ್ಬಾ ಕ್ಯಾಂಪ್ ರಾಜ್ಯಾದ್ಯಂತ ನಡೆಯುತ್ತಿರುವ ಅಂಗವಾಗಿ ಎಸ್ಸೆಸ್ಸೆಫ್ ಕಾಪು ಡಿವಿಷನ್ ವತಿಯಿಂದ 2022 ಜೂನ್ 24, ಶುಕ್ರವಾರ ಜೇಸಿಐ ಭವನ ಕಾಪುವಿನಲ್ಲಿ ನಡೆಯಲಿದೆ.
ಡಿವಿಷನ್ ಅಧ್ಯಕ್ಷ ಮುಹಮ್ಮದ್ ಮುಸ್ತಫ ಸಖಾಫಿ ಅಧ್ಯಕ್ಷತೆಯಲ್ಲಿ ಡಿವಿಷನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಶಿರ್ವ ಸ್ವಾಗತಿಸಿ, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಅಹ್ಮದ್ ಶಬೀರ್ ಸಖಾಫಿ ಉದ್ಘಾಟಿಸಲಿದ್ದಾರೆ.
ರಾಜ್ಯ ಕ್ಯೂಡಿ ಕಾರ್ಯದರ್ಶಿ ಮುಸ್ತಫ ನಈಮಿ ಹಿಮಮಿ ಹಾವೇರಿ ವಿಷಯ ಮಂಡಿಸಲಿದ್ದು, ಜಿಲ್ಲಾ ಕ್ಯೂಡಿ ಕನ್ವೀನರ್ ಮುಹಿಯ್ಯುದ್ದೀನ್ ಸಖಾಫಿ ಪಯ್ಯಾರು, ರಾಜ್ಯ ಸದಸ್ಯ ಹಾಗೂ ಡಿವಿಷನ್ ಉಸ್ತುವಾರಿ ಮನ್ಸೂರ್ ಕೆಎಸ್ಸೆಮ್ ಉಡುಪಿ, ರಾಜ್ಯ ಸದಸ್ಯ ಮುಹಮ್ಮದ್ ರಕೀಬ್ ಕನ್ನಂಗಾರ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೂರು ಹಾಗೂ ಡಿವಿಷನ್ ಸದಸ್ಯರು ಉಪಸ್ಥಿತರಿರುವರು.
ಈ ಕ್ಯಾಂಪಿನಲ್ಲಿ ಡಿವಿಷನ್ ವ್ಯಾಪ್ತಿಯ ಶಾಖೆಗಳ ನೊಂದಾಯಿತ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾಪು ಡಿವಿಷನ್ ಕ್ಯೂಡಿ ಕಾರ್ಯದರ್ಶಿ ಆಸಿಫ್ ಬೆಳಪು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ನಲ್ಲಿ ಯೋಗ ದಿನಾಚರಣೆ

Posted On: 22-06-2022 06:04PM
ಕಾಪು : ಆನೆಗುಂದಿ ಶ್ರೀ ಸರಸ್ವತಿ ಎಜುಕೇಷನಲ್ ಟ್ರಸ್ಟ್ - ಅಸೆಟ್ ನ ಅಧೀನದಲ್ಲಿರುವ ಆನೆಗುಂದಿ ಸರಸ್ವತಿ ಪೀಠ ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಿರ್ವದ ಪತಂಜಲಿ ಯೋಗ ಸಮಿತಿಯ ಸದಸ್ಯರಾದ ರಮೇಶ್ ಸಾಲಿಯಾನ್ ಹಾಗೂ ಪ್ರಭಾಕರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಯೋಗ ಮತ್ತು ಪ್ರಾಣಾಯಾಮದ ಮಹತ್ವವನ್ನು ಆಸನಗಳ ಪ್ರದರ್ಶನದ ಮೂಲಕ ವಿವರಿಸಿದರು. ವಿದ್ಯಾರ್ಥಿಗಳು ಅತ್ಯಂತ ಸಂಭ್ರಮದಿಂದ ಆಸನಗಳನ್ನು ಮಾಡಿದರು.
ಪ್ರಾಂಶುಪಾಲ ಗುರುದತ್ತ ಸೋಮಯಾಜಿ ಅಂತಾರಾಷ್ಟ್ರೀಯ ಯೋಗ ದಿನದ ಮಹತ್ವ ತಿಳಿಸಿದರು. ನಿಕಟಪೂರ್ವ ಅಧ್ಯಕ್ಷ ವಿದ್ವಾನ್ ಶಂಭುದಾಸ್ ಗುರೂಜಿ, ಶಿಕ್ಷಕಿ ರಜೀಶ್ಮಾ ಸಹಕರಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ , ಕನ್ನಡ ಅಧ್ಯಾಪಕ ಮಂಜುನಾಥ್ ಶೇಟ್ ಮತ್ತು ಶಿಕ್ಷಕವೃಂದದವರು ಪಾಲ್ಗೊಂಡಿದ್ದರು.