Updated News From Kaup
ಶ್ರೀ ದುರ್ಗಾಪರಮೇಶ್ವರಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಅಗ್ರಹಾರ ಕಟಪಾಡಿ : ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ
Posted On: 15 Aug 2022, 11:22 PM
ಕಟಪಾಡಿ : ಶ್ರೀ ದುರ್ಗಾಪರಮೇಶ್ವರಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಅಗ್ರಹಾರ ಕಟಪಾಡಿ ಇಲ್ಲಿ 75ನೇ ವರ್ಷದ ಸ್ವಾತಂತ್ರದ ಅಮೃತ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೈ ಭರತ್ ಹೆಗ್ಡೆ ಹಾಗೂ ಶಾಲಾ ಸಂಚಾಲಕರಾದ ರಂಜನ್ ಹೆಗ್ಡೆ ನೆರವೇರಿಸಿದರು. 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ಚಿತ್ರಕಲಾ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ಈ ಸಂಧರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸರೋಜಿನಿ, ತಾಲೂಕು ಪಂಚಾಯತ್ ಸದಸ್ಯರಾದ ನಾಗೇಶ್, ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕದ ಅಧ್ಯಕ್ಷರಾದ ದಿಲೀಪ್, ಕೋಶಾಧಿಕಾರಿ ಅರ್ಜುನ್,ಸದಸ್ಯರಾದ ಸಂತೋಷ್ ಪೂಜಾರಿ, ರಮೇಶ್, ಗಿರಿಧರ್, ಕರುಣಾಕರ್ ಶೆಟ್ಟಿ,ಸಂತೋಷ್.ಎನ್. ಎಸ್. ಕಟಪಾಡಿ, ದೀಪಕ್ ದುರ್ಗಾನಗರ, ಅಂಗನವಾಡಿ ಶಿಕ್ಷಕಿಯರಾದ ಸುಮ, ಸಹಾಯಕಿಯರಾದ ಮೋಹಿನಿ ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು. ಶಿಕ್ಷಕಿ ತಿಲಕ ಸ್ವಾಗತಿಸಿದರು. ಶಿಕ್ಷಕಿ ಜಯಂತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು : ಧ್ವಜಾರೋಹಣ ; 75 ಔಷಧೀಯ ಸಸ್ಯಗಳನ್ನು ನೆಟ್ಟ ವಿದ್ಯಾರ್ಥಿಗಳು
Posted On: 15 Aug 2022, 10:54 PM
ಕಾಪು : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ರಾಂಶುಪಾಲರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶಕ್ಕಾಗಿ ನಾವು ಎಂಬ ಧ್ಯೇಯ ಸಾರಿದರು. ಅಮೃತ ಮಹೋತ್ಸವ ಅಂಗವಾಗಿ 75 ಔಷಧೀಯ ಸಸ್ಯಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ
Posted On: 15 Aug 2022, 08:19 PM
ಉಡುಪಿ : ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿ, ಕುಮಾರ ಕೃಪದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರು ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು ಸ್ವಾತಂತ್ರ್ಯ ಸಿಕ್ಕಿ ನಮಗೆ 75 ವರ್ಷ ಆಯ್ತು ಅನೇಕ ಮಹನೀಯರು, ಹಿರಿಯರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ಕಳೆದುಕೊಂಡಿದ್ದಾರೆ. ನಾವು ವಿಮರ್ಶೆ ಮಾಡಿ ನೋಡಬೇಕಾಗುತ್ತದೆ. ಇನ್ನು 25 ವರ್ಷಗಳಲ್ಲಿ ಶತಮಾನೋತ್ಸವ ಸಂಭ್ರಮ ಬರುತ್ತದೆ. ನಾವೆಲ್ಲರೂ ಜಾತಿ, ಧರ್ಮ, ಪಕ್ಷ, ಮರೆತು ಭಾರತೀಯರು ಎಂಬ ರೀತಿಯಲ್ಲಿ ಒಗ್ಗಟ್ಟಾಗಿ ದೇಶದ ಬಗ್ಗೆ, ನಮ್ಮ ಊರಿನ ಬಗ್ಗೆ ಬೆಳವಣಿಗೆಯ ಬಗ್ಗೆ ಆಲೋಚನೆ ಮಾಡಬೇಕು. ರೋಟಿ, ಕಪಡ, ಮಖಾನ್, ಆರೋಗ್ಯ,ಶಿಕ್ಷಣ, ಎಲ್ಲ ಶ್ರೀಸಾಮಾನ್ಯರಿಗೆ ಸಿಕ್ಕಿದರೆ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಸಿಗುತ್ತದೆ . ಬಡತನ, ಭ್ರಷ್ಟಾಚಾರ ಭಯೋತ್ಪಾದನೆ ನಿರ್ಮೂಲನೇ ಆಗಿ ನಿಜವಾದ ಸ್ವಾತಂತ್ರ್ಯ ಜನಸಾಮಾನ್ಯರಿಗೆ ಸಿಗಲಿ ಎಂದು ಹಾರೈಸುತ್ತಾ ಶುಭಾಶಯಗಳು ಕೋರಿದರು. ಈ ಸಂದರ್ಭ ಪಕ್ಷ ನಾಯಕರುಗಳಾದ ವಾಸುದೇವ ರಾವ್, ಜಯಕುಮಾರ್ ಪರ್ಕಳ, ಜಯರಾಮ ಆಚಾರ್ಯ, ಗಂಗಾಧರ ಬಿರ್ತಿ, ಶಾಲಿನಿ ಬಿ ಶೆಟ್ಟಿ ಕೆಂಚನೂರು, ಮನ್ಸೂರ್ ಇಬ್ರಾಹಿಂ, ಸಂಕಪ್ಪ. ಎ, ಚಂದ್ರಹಾಸ್ ಎರ್ಮಾಳ್ ,ಉಮೇಶ್ ಕರ್ಕೇರ, ಸಂಜಯ್ ಕುಮಾರ್, ಇಕ್ಬಾಲ್ ಅತ್ರಾಡಿ, ಭರತ್ ಕುಮಾರ್ ಶೆಟ್ಟಿ, ಬಾಲಕೃಷ್ಣ ಆಚಾರ್ಯ, ಹುಸೇನ್ ಹೈಕಾಡಿ, ಎಂ ಎ ಬಾವು ಮೂಳೂರು, ಬಿ.ಕೆ ಮೊಹಮ್ಮದ್, ರಾಮರಾವ್, ರಝಕ್ ಉಚ್ಚಿಲ, ರಂಗ ಎನ್ ಕೋಟ್ಯಾನ್, ಸರ್ಫಾಜ್ ಮಲ್ಲಾರು, ಹರೀಶ್ ಶೆಟ್ಟಿ, ರಶೀದ್ ಸರ್ಕಾರಿಗುಡ್ಡೆ, ಸನಾ, ಪದ್ಮನಾಭ ಆರ್ ಕೋಟ್ಯಾನ್, ಸನವರ್ ಕಲೀಮ್, ಪೈಸೆಲ್ ಅಲೆವೂರು, ಅನೇಕ ಪಕ್ಷ ಕಾರ್ಯಕರ್ತರು ಉಪಸ್ಥಿತರಿದ್ದರು.
ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಶಿರ್ವ : ವಸತಿನಿಲಯ ಭೇಟಿ
Posted On: 15 Aug 2022, 07:52 PM
ಶಿರ್ವ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಕಾರವಾರ ಇದರ ಶಿರ್ವ ಶಾಖೆಯ ವತಿಯಿಂದ ಶಿರ್ವ ಆಕ್ಸಿಲಿಯಮ್ ವಸತಿ ನಿಲಯದ ಮಕ್ಕಳಿಗೆ ಸೋಲಾಪುರ ಚಾದರ್ ಮತ್ತು ಸಿಹಿತಿಂಡಿ ವಿತರಿಸಲಾಯಿತು. ಈ ಸಂದರ್ಭ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ| ರೊಲ್ವಿನ್ ಅರನ್ನಾ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ ಆರ್ ಪಾಟ್ಕರ್ ಮತ್ತು ಸ್ಥಳೀಯ ಸಮಾಜದ ಮುಂದಾಳುಗಳಾದ ಜೆರಾಲ್ಡ್ ರೊಡ್ರಿಗಸ್, ಫ್ಲಾವಿಯ ಡಿಸೋಜ, ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಕಳ : ಸ್ವದೇಶಿ ಭಾವ ಯುವ ಜನತೆಯಲ್ಲಿ ಜಾಗೃತಿಗೊಳ್ಳಲಿ - ನಿವೃತ್ತ ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್
Posted On: 15 Aug 2022, 06:50 PM
ಕಾರ್ಕಳ : ದೇಶದ ಇತಿಹಾಸವನ್ನು ಅರಿಯದೇ ಇದ್ದಲ್ಲಿ ಇತಿಹಾಸವನ್ನು ಸೃಜಿಸಲು ಅಸಾಧ್ಯ. ಹಿಂದೆ ಆದ ಐತಿಹಾಸಿಕ ದುರ್ಘಟನೆಗಳಿಂದ ಪಾಠ ಕಲಿತು ಸಂಪೂರ್ಣ ಸ್ವದೇಶಿ ಭಾವ ಭಾರತದ ಯುವಕ-ಯುವತಿಯರಲ್ಲಿ ಜಾಗೃತಗೊಂಡು ದೇಶ ಸೇವೆಯೇ ಗುರಿಯಾಗಿರಲಿ ಎಂದು ನಿವೃತ್ತ ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು. ವಿಶ್ವದ ಬಲಾಢ್ಯ ರಾಷ್ಟ್ರಗಳ ಸಾಲಿನಲ್ಲಿ ಭಾರತವು ಕಂಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರವು ಭೌಗೋಳಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಉನ್ನತಿ ಪಡೆಯಲಿ ಅದಕ್ಕೆ ಇಂದಿನ ಯುವ ಸಮೂಹವೇ ಮುಂದಾಳತ್ವ ವಹಿಸಲಿ ಎಂದು ಹಾರೈಸಿದರು. ಈ ವಿಜೃಂಭಣೆಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್, ಗಣನಾಥ ಶೆಟ್ಟಿ, ಅಮೃತ್ ರೈ, ಆದರ್ಶ ಎಂ ಕೆ, ಅಶ್ವಥ್ ಎಸ್ ಎಲ್, ವಿಮಲ್ ರಾಜ್, ಗಣಪತಿ ಭಟ್ ಕೆ ಎಸ್ ಹಾಗೂ ವಿದ್ಯಾಸಂಸ್ಥೆಯ ಉಪನ್ಯಾಸಕ ವೃಂದದವರು, ಉಪನ್ಯಾಸಕೇತರ ಬಳಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕರಾದ ರಾಜೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಪ್ರಸಿದ್ಧ ಹಿನ್ನಲೆ ಗಾಯಕಿ ನಿನಾದ ನಾಯಕ್ ಮತ್ತು ತಂಡದವರಿಂದ ದೇಶಭಕ್ತಿಯನ್ನು ಬಿಂಬಿಸುವ ಸದಭಿರುಚಿಯ “ಕ್ರಿಯೇಟಿವ್ ಸವಿಗಾನ” ಸಂಗೀತ ಕಾರ್ಯಕ್ರಮ ನೆರವೇರಿತು.
ಪಡುಬಿದ್ರಿ : ಗ್ರಾಮೀಣ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನೂತನ ಧ್ವಜಸ್ತಂಭ ಉದ್ಘಾಟನಾ ಕಾರ್ಯಕ್ರಮ ; ಧ್ವಜಾರೋಹಣ
Posted On: 15 Aug 2022, 06:24 PM
ಪಡುಬಿದ್ರಿ : ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ನಿಟ್ಟಿನಲ್ಲಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನೂತನವಾಗಿ ಪಡುಬಿದ್ರಿ ಹೃದಯಭಾಗದಲ್ಲಿ ಧ್ವಜಸ್ತಂಭ ಉದ್ಘಾಟನಾ ಕಾರ್ಯಕ್ರಮ ಹಾಗೂ 76ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಜರಗಿತು. ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ವಿನಯ್ ಕುಮಾರ್ ಸೊರಕೆ ಅವರು ಧ್ವಜಸ್ತಂಭವನ್ನು ಉದ್ಘಾಟಿಸಿ ಹಾಗೂ ಧ್ವಜಾರೋಹಣವನ್ನು ನೆರವೇರಿಸಿ ನಾಡಿನ ಸಮಸ್ತ ಜನತೆಗೆ ಶುಭ ಹಾರೈಸಿದರು. ಶಾಂತಿ ಸಹಬಾಳ್ವೆ ಬದುಕಬೇಕೆಂದು ಈ ಸಂದರ್ಭದಲ್ಲಿ ಹೇಳಿದರು. ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಕಾಂಗ್ರೆಸ್ಸಿನ ಅಧ್ಯಕ್ಷರಾದ ಕರುಣಾಕರ್ ಎಂ ಪೂಜಾರಿ, ನವೀನ ಚಂದ್ರ ಜೆ ಶೆಟ್ಟಿ, ನವೀನ್ ಎನ್ ಶೆಟ್ಟಿ, ಹರೀಶ್ ಶೆಟ್ಟಿ ಪಾದೆಬೆಟ್ಟು, ಸಂತೋಷ್ ಶೆಟ್ಟಿ, ಎಂ ಎಸ್ ಶಾಫಿ, ಜ್ಯೋತಿ ಮೆನನ್, ಗಣೇಶ್ ಕೋಟ್ಯಾನ್, ಅಬ್ದುರ್ರಹ್ಮಾನ್ ಕಣ್ಣಂಗಾರ್, ರಮೀಝ್ ಹುಸೇನ್, ಹಸನ್ ಬಾವ, ಅಶೋಕ್ ಸಾಲಿಯಾನ್, ದಿನೇಶ್ ಪಲಿಮಾರ್, ದಿನೇಶ್ ಕಂಚಿನಡ್ಕ, ಬುಡನ್ ಸಾಹೇಬ್, ಎಂ.ಎಸ್ ನಿಜಾಮ್, ಕೀರ್ತಿ ಕುಮಾರ್, ಎಂ ಎಸ್ ಮನ್ಸೂರ್ ಮತ್ತಿತರರು ಉಪಸ್ಥಿತರಿದ್ದರು.
ಕಾಪು ತಾಲೂಕು ಪಂಚಾಯತ್ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2022, 06:07 PM
ಕಾಪು : ಇಲ್ಲಿನ ತಾಲೂಕು ಪಂಚಾಯತ್ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ 76ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕಾಪು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಶಿವ ಪ್ರಕಾಶ್ ಎಸ್ ನೆರವೇರಿಸಿದರು. ಈ ಸಂದರ್ಭ ಅವರು ಎಲ್ಲರಿಗೂ ಶುಭಾಶಯಗಳನ್ನು ತಿಳಿಸುತ್ತಾ ಹಿರಿಯರ ಹಾಗೂ ಯೋಧರ ತ್ಯಾಗ ಬಲಿದಾನವನ್ನು ಸ್ಮರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಚಂದ್ರಕಲಾರವರು ಎಲ್ಲರನ್ನು ಸ್ವಾಗತಿಸಿದರು. ಈಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾಪು ತಾಲೂಕು ಆಡಳಿತದಿಂದ ಕಾಪುವಿನಲ್ಲಿ 76ನೇ ಸ್ವಾತಂತ್ರೋತ್ಸವ ದಿನಾಚರಣೆ
Posted On: 15 Aug 2022, 05:58 PM
ಕಾಪು : ಇಲ್ಲಿನ ತಾಲೂಕು ಮಟ್ಟದ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಸ್ವಾತಂತ್ರೋತ್ಸವ ಸೋಮವಾರ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ನಡೆಯಿತು. ಕಾಪು ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆ ವಹಿಸಿ ಶುಭಾಶಂಸನೆಗೈದರು. ಸಾಧಕರಾದ ನಾಟಿ ವೈದ್ಯೆ ಶಾಲಿನಿ, ಸಾಮಾಜಿಕ ಕಾರ್ಯಕರ್ತ ರವಿ ಕಟಪಾಡಿ, ನಿವೃತ್ತ ಹಿರಿಯ ಸೈನಿಕ ಜೆರೋಮ್ ಕೊಮೋಡೋರ್ ಕೆಸ್ತಲಿನೋ ಮತ್ತು ಜಾನಪದ ಕಲಾವಿದ ಗುರುಚರಣ್ ಪೊಲಿಪು ಇವರರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದವರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಕಾಶ್, ಕಾಪು ಪುರಸಭಾಧಿಕಾರಿ ವೆಂಕಟೇಶ್ ನಾವಡ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಶಿಕ್ಷಣ ಇಲಾಖೆಯ ಶಂಕರ ಸುವರ್ಣ, ಕಾಪು ಪೋಲಿಸ್ ವೃತ್ತ ನಿರೀಕ್ಷಕ ಪೂವಯ್ಯ ಕೆಸಿ, ಶಿರ್ವ ಠಾಣಾಧಿಕಾರಿ ರಾಘವೇಂದ್ರ, ಕಾಪು ಠಾಣಾಧಿಕಾರಿ ಶ್ರೀ ಶೈಲ ಮುರುಗೊಡ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್, ಪುರಸಭಾ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಕಟಪಾಡಿ : ಚಿಣ್ಣರ ಬಾಲವನ ನವೀಕರಣದ ಉದ್ಘಾಟನೆ
Posted On: 15 Aug 2022, 05:48 PM
ಕಟಪಾಡಿ : 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಏಣಗುಡ್ಡೆ ಅಗ್ರಹಾರದ ಗ್ರಾಮದ ಮಕ್ಕಳಿಗೆ ಅನುಕೂಲವಾಗುವಂತೆ ಊರ ದಾನಿಗಳ ಸಹಾಯದಿಂದ ನಿರ್ಮಾಣಗೊಂಡಿದ್ದ ಮಕ್ಕಳ ಬಾಲವನದ ನವೀಕರಣದ ಉದ್ಘಾಟನೆಯು ಆಗಸ್ಟ್ 15 ರಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅಗ್ರಹಾರ ದ ಬಳಿಯಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಇದರ ಅಧ್ಯಕ್ಷರಾದ ದಿಲೀಪ್ ಕುಮಾರ್, ಕಾರ್ಯದರ್ಶಿ ಮಂಜುನಾಥ್, ಕೋಶಾಧಿಕಾರಿ ಅರ್ಜುನ್, ತಾಲೂಕು ಪಂಚಾಯತ್ ಸದಸ್ಯರಾದ ನಾಗೇಶ್ ಹಾಗೂ ಕಾರ್ಯಕರ್ತರಾದ ದೀಪಕ್ ದುರ್ಗಾನಗರ, ಸಂತೋಷ್.ಎನ್.ಎಸ್, ಕಟಪಾಡಿ ಗಣೇಶ್ ಉಪಸ್ಥಿತರಿದ್ದರು.
ಸಚಿವ ಎಸ್ ಅಂಗಾರರಿಂದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎರ್ಮಾಳು ತೆಂಕದ ನೂತನ ಶಾಲಾ ಕೊಠಡಿ ಉದ್ಘಾಟನೆ
Posted On: 15 Aug 2022, 05:31 PM
ಪಡುಬಿದ್ರಿ : ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎರ್ಮಾಳು ತೆಂಕ ಇಲ್ಲಿನ ನೂತನ ಇಂಗ್ಲಿಷ್ ಭಾಷಾ ಕಲಿಕಾ ಕೊಠಡಿಯ ಉದ್ಘಾಟನೆಯನ್ನು ಬಂದರು ಮತ್ತು ಮೀನುಗಾರಿಕಾ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಊರಿನ ಶಾಲೆಯನ್ನು ಕಳೆದುಕೊಂಡಾಗ ಮತ್ತೆ ಪಡೆದುಕೊಳ್ಳುವುದು ಕಷ್ಟ. ಶಾಲೆಯನ್ನು ಉಳಿಸುವ ಪ್ರಯತ್ನ ಮಾಡಬೇಕು. ಗುಣಮಟ್ಟದ ಶಿಕ್ಷಣವನ್ನು ನೀಡಬೇಕಾದರೆ ತರಗತಿವಾರು, ವಿಷಯವಾರು ಶಿಕ್ಷಕರು ಇರಬೇಕು. ಅದು ಆಗದಾಗ ಗುಣಮಟ್ಟದ ಶಿಕ್ಷಣ ಸಾಧ್ಯವಾಗದು. ಇಚ್ಛಾಶಕ್ತಿ, ನಮ್ಮ ಊರಿನ ಶಾಲೆಯೆಂಬ ಅಭಿಮಾನ ಇದ್ದರೆ ನಮ್ಮ ಶಾಲೆಗೆ ನಾವೇ ಸೌಲಭ್ಯಗಳನ್ನು ಹೊಂದಿಸಲು ಸಾಧ್ಯ. ಅಂದಿನ ಜನರ ಮನಸ್ಥಿತಿ ಸಮಾಜಕ್ಕಾಗಿ ನೀಡಬೇಕೆಂಬ ಭಾವನೆಯಿತ್ತು ಆದರೆ ಈಗ ಸರಕಾರ ನೀಡಬೇಕೆಂಬ ಭಾವನೆಯಿದೆ. ಸ್ವಾತಂತ್ರ್ಯ ಬಂದಾಗಿದೆ ಕೊಟ್ಟಂತಹ ಸ್ವಾತಂತ್ರ್ಯ ಉಳಿಸಬೇಕಾದರೆ ನಮ್ಮಲ್ಲಿ ದೇಶಭಕ್ತಿ ಇರಬೇಕು.ಟೀಕೆ ವಿರೋಧಗಳಿಂದ ನಾವು ಯಾವುದನ್ನು ಸಾಧಿಸಲಾಗದು. ಜನರಲ್ಲಿ ದೇಶಭಕ್ತಿಯ ಭಾವ ಉಂಟಾದಾಗ ದೇಶಕ್ಕಾಗಿ ಕೊಡಬೇಕೆನ್ನುವ ಮನಸ್ಥಿತಿ ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ವಹಿಸಿದ್ದರು. ಈ ಸಂದರ್ಭ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶೀಲಾ ಕೆ ಶೆಟ್ಟಿ, ಎರ್ಮಾಳು ತೆಂಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಸ್ತೂರಿ, ಉಪಾಧ್ಯಕ್ಷೆ ಜಯಶ್ರೀ, ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಉಮಾ, ಎಸ್ಡಿಎಂಸಿ ಅಧ್ಯಕ್ಷರಾದ ಸೋಮಯ್ಯ, ಶಾಲಾ ಮುಖ್ಯಶಿಕ್ಷಕಿ ವಿನೋದ ಮತ್ತಿತರರು ಉಪಸ್ಥಿತರಿದ್ದರು.
