Updated News From Kaup
ಮುಂಬೈ ಉದ್ಯಮಿ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್
Posted On: 06-07-2022 08:28AM
ಕಾಪು : ಅಖಿಲ ಭಾರತ ಉದ್ಯಮ ಅಭಿವೃದ್ಧಿ ಸಂಘವು ಮುಂಬೈ ಉದ್ಯಮಿ ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ 'ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫ಼ಾರ್ ಇಂಡಸ್ಟ್ರಿ ಡೆವಲಪ್ಮೆಂಟ್' ಎಂಬ ರಾಷ್ಟ್ರೀಯ ಪ್ರಶಸ್ತಿಯ ಗೌರವ ಪಡೆದರು.
ಮಂಗಳೂರಿನಲ್ಲಿ 518 ವಿದೇಶಿ ಪ್ರಜೆಗಳ ವಿಚಾರಣೆ
Posted On: 04-07-2022 10:55PM
ಮಂಗಳೂರು : ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚುವ ಕಾರ್ಯ ಸಾಗಿದ್ದು, ಕಳೆದ ಒಂದು ವಾರದಲ್ಲಿ 4 ಸಾವಿರ ಮಂದಿಯ ದಾಖಲೆ ಪರಿಶೀಲಿಸಲಾಗಿದೆ. ಈ ಪೈಕಿ ಸೂಕ್ತ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ 518 ಮಂದಿ ವಲಸೆ ಕಾರ್ಮಿಕರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಸೋಮವಾರ ನಗರದ ರೊಸಾರಿಯೊ ಶಾಲೆಯ ಸಭಾಂಗಣದಲ್ಲಿ ಪೊಲೀಸರು ಬೆಳಗ್ಗಿನಿಂದಲೇ ಪ್ರತಿಯೊಬ್ಬ ವಲಸೆ ಕಾರ್ಮಿಕರ ದಾಖಲೆ ಪರಿಶೀಲನೆ ಕಾರ್ಯ ನಡೆಸಿದ್ದಾರೆ.
ಅರ್ಜಿ ವಿಲೇವಾರಿಯಲ್ಲಿ ಶಿರ್ವ ಗ್ರಾಮ ಒನ್ ಕೇಂದ್ರ ಪ್ರಥಮ
Posted On: 04-07-2022 09:08PM
ಕಾಪು : ಉಡುಪಿ ಜಿಲ್ಲೆಯಲ್ಲಿ ಕಳೆದ 6 ತಿಂಗಳಲ್ಲಿ ಗ್ರಾಮ ಒನ್ ಕೇಂದ್ರಗಳಲ್ಲಿ ಅತೀ ಹೆಚ್ಚಿನ ಅರ್ಜಿ ವಿಲೇವಾರಿಯಲ್ಲಿ ಮಾಡಿದ ಶಿರ್ವ ಗ್ರಾಮ ಒನ್ ಕೇಂದ್ರ ಮೊದಲ ಸ್ಥಾನ ಪಡೆದುಕೊಂಡಿದೆ.
92 ಹೇರೂರು : ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಗಾರ
Posted On: 04-07-2022 08:48PM
ಕಾಪು, ಜು.4 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು, ಅಂಗನವಾಡಿ ಕೇಂದ್ರ 92 ಹೇರೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ 92 ಹೇರೂರು ಗ್ರಾಮದಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಲ್ಲುಗುಡ್ಡೆ ಕೊರಗಜ್ಜ ಸೇವಾಸಮಿತಿ ಅಧ್ಯಕ್ಷರಾಗಿ ಸುಧೀರ್ ಸೋನು ಪೂಜಾರಿ ಆಯ್ಕೆ
Posted On: 04-07-2022 08:28PM
ಕಾಪು : ಕೊರಗಜ್ಜ ಸೇವಾ ಸಮಿತಿ ಕಲ್ಲುಗುಡ್ಡೆ ಇದರ 2022-2024ನೇ ಸಾಲಿನ ಅಧ್ಯಕ್ಷರಾಗಿ ಸುಧೀರ್ ಸೋನು ಪೂಜಾರಿ, ಕಾರ್ಯದರ್ಶಿಯಾಗಿ ಅರವಿಂದ್ ಕೋಟ್ಯಾನ್ ಮತ್ತು ಕೋಶಾಧಿಕಾರಿಯಾಗಿ ಮನೋಹರ್ ಕಲ್ಲುಗುಡ್ಡೆ ಹಾಗೂ ಪದಾಧಿಕಾರಿಗಳನ್ನು ಜೂನ್ 29ರಂದು ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಪಡುಬಿದ್ರಿ : ರೋಟರಿ ಕ್ಲಬ್ ಪದಗ್ರಹಣ ; ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಗೀತಾ ಅರುಣ್
Posted On: 04-07-2022 07:30PM
ಪಡುಬಿದ್ರಿ : ಸ್ನೇಹ ಮತ್ತು ಏಕತೆಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಆರಂಭಗೊಂಡಿರುವ ರೋಟರಿಯು ಮುಂದೆ ಸೇವೆ ಮತ್ತು ವಿಭಿನ್ನತೆಯಲ್ಲಿ ಏಕತೆಯೊಂದಿಗೆ ಒಗ್ಗೂಡಿ ಮುನ್ನಡೆಯುತ್ತಿದೆ ರೋಟರಿ ಜಿಲ್ಲಾ ಸಹಾಯಕ ರಾಜ್ಯಪಾಲೆ ಡಾ| ಪ್ರೀತಿ ಮೋಹನ್ ಹೇಳಿದರು. ಅವರು ಶನಿವಾರ ಪಡುಬಿದ್ರಿಯ ರೋಟರಿ ಕ್ಲಬ್ ಪಡುಬಿದ್ರಿಯ ಪ್ರಥಮ ಮಹಿಳಾ ಅಧ್ಯಕ್ಷೆಯಾದ ಗೀತಾ ಅರುಣ್ ಅವರ ಪದಗ್ರಹಣ ಸಮಾರಂಭದ ಪದಪ್ರಧಾನ ಅಧಿಕಾರಿಯಾಗಿ ಮಾತನಾಡಿದ ಅವರು, ಸಮುದಾಯದ ಅವಶ್ಯಕತೆಗಳನ್ನು ಗ್ರಹಿಸಿ ಜನಸೇವೆಗೈಯ್ಯವುದೇ ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯ ಧ್ಯೇಯವಾಗಿದೆ ಎಂದರು.
ಉದ್ಯಾವರ : ಮಳೆಗಾಲದ ಸಮಸ್ಯೆ - ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದಿಂದ ಪಂಚಾಯತ್ಗೆ ಮನವಿ
Posted On: 04-07-2022 07:01PM
ಉದ್ಯಾವರ : ಇಲ್ಲಿನ ಕುಟುಂಬವೊಂದರ ಹಿರಿಯ ನಾಗರಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಮಳೆಗಾಲದಲ್ಲಿ ತುಂಬಿ ಹರಿಯುವ ನೀರಿನಿಂದ ನಡೆದಾಡಲು ಆಗುವ ಅಡೆತಡೆಗಳ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉದ್ಯಾವರ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಗೆ ಮನವಿ ನೀಡಲಾಯಿತು.
ದೈವಾರಾಧಕರಿಗೆ ವಿಶೇಷ ಪಿಂಚಣಿ : ಜಯನ್ ಮಲ್ಪೆ ಆಗ್ರಹ
Posted On: 04-07-2022 05:46PM
ಶಿರ್ವ : ಜೀವನವಿಡೀ ದೈವಾರಾಧನೆ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ದೈವಾರಾಧಕರಿಗೆ ಇಳಿ ವಯಸ್ಸಿನಲ್ಲಿ ಸರಕಾರ ವಿಶೇಷ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಹಿರಿಯ ದಲಿತ ಚಿಂತಕ, ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದರು. ಅವರು ಜು. ೩ರಂದು ಮೂಡುಬೆಳ್ಳೆ ಕಾಡಬೆಟ್ಟು ಪಂಜುರ್ಲಿ ದೈವಸ್ಥಾನದ ಆವರಣದಲ್ಲಿ ಪಾಣಾರಾ ಯಾನೆ ನಲಿಕೆ ಸಮಾಜ ಸೇವಾ ಸಂಘ ಮೂಡುಬೆಳ್ಳೆ ಘಟಕ ಮತ್ತು ಗಾಂಧೀ ವಿಚಾರ ವೇದಿಕೆ ಉಡುಪಿ ಜಿಲ್ಲಾ ಘಟಕ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ 'ಸನ್ಮತಿ' ಪ್ರೇರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಿಸ್ ಇಂಡಿಯಾ 2022 ಕಿರೀಟ ಮುಡಿಗೇರಿಕೊಂಡ ಸಿನಿ ಶೆಟ್ಟಿ
Posted On: 04-07-2022 12:17PM
ಉಡುಪಿ : ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ವಿ.ಎಲ್.ಸಿ.ಸಿ ಫೆಮಿನಾ ಇಂಡಿಯಾ 2022 ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಕಾಪು ತಾಲೂಕಿನ ಇನ್ನಂಜೆಯ ಮಡುಂಬುವಿನ ಸಿನಿ ಶೆಟ್ಟಿ ಅವರ ಮಿಸ್ ಇಂಡಿಯಾ 2022 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಕಕ್ಕುಂಜೆ : ಕಳವುಗೈದವರ ಬಂಧನ
Posted On: 03-07-2022 05:33PM
ಉಡುಪಿ : ತಾಲೂಕಿನ ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ಎಂಬಲ್ಲಿ 9 ಪವನ್ ತೂಕದ ರೂಪಾಯಿ 3,15,000 ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.
