Updated News From Kaup

ಯುವಸೇನೆ ಮಡುಂಬು ನೂತನ ಅಧ್ಯಕ್ಷರಾಗಿ ಸುನಿಲ್ ಸಾಲಿಯಾನ್

Posted On: 03-07-2022 04:38PM

ಇನ್ನಂಜೆ : ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ವಲಯದಲ್ಲಿ ತನ್ನಿಂದ ಆದ ಸೇವೆಯನ್ನು ಮಾಡಿಕೊಂಡು ಇತರ ಸಂಸ್ಥೆಗಳಿಗೆ ಮಾದರಿಯಾಗಿರುವ ಯುವಸೇನೆ ಮಡುಂಬು (Y. S. M Friends) ಇದರ 2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುನಿಲ್ ಸಾಲಿಯಾನ್ , ಕಾರ್ಯದರ್ಶಿಯಾಗಿ ಸಚಿನ್ ಸಾಲಿಯಾನ್ ಹಾಗೂ ಕೋಶಾಧಿಕಾರಿಯಾಗಿ ಪೃಥ್ವಿರಾಜ್ ಶೆಟ್ಟಿ ಇವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು : ಪ್ರವಾಹದ ಕಾರಣ ದೋಣಿಯನ್ನು ದಡದ ಮೇಲೆತ್ತುವಾಗ ನೀರಿನ‌ ರಭಸಕ್ಕೆ ಕೊಚ್ಚಿ ಹೋದ ವ್ಯಕ್ತಿ

Posted On: 03-07-2022 08:04AM

ಮಂಗಳೂರು : ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆ ಯಲ್ಲಿ ಈ ಹಿಂದೆ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ ಉಪಯೋಗಿಸುತ್ತಿದ್ದ ದೋಣಿಯನ್ನು ಪ್ರವಾಹದ ಕಾರಣ ದಡಕ್ಕೆ ಮೇಲೆತ್ತುವಾಗ ನೀರಿನ ರಭಸಕ್ಕೆ ದೋಣಿ ಸಮೇತ ಕೊಚ್ಚಿಹೋಗಿ ಇಬ್ಬರು ಪಾರಾದರೆ, ವ್ಯಕ್ತಿಯೋರ್ವನು ಕೊಚ್ಚಿಹೋದ ಘಟನೆ ಅಡ್ಯಾರ್-ಪಾವೂರು ಬ್ರಿಡ್ಜಿನ ಸಮೀಪ ನಡೆದಿದೆ.

ಕಾರವಾರ : ಅಸ್ವಸ್ಥರಾಗಿದ್ದ ಅರವತ್ತು ವರ್ಷ ಪ್ರಾಯದ ವೃದ್ಧನ ರಕ್ಷಣೆ

Posted On: 03-07-2022 07:59AM

ಉಡುಪಿ : ಹೊಸ ಬೆಳಕು ಆಶ್ರಮ ಮಣಿಪಾಲ ಇವರ ವಿನಂತಿಯ ಮೇರೆಗೆ,ಕಾರವಾರ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ ತಂಗುದಾಣದಲ್ಲಿ ಅಸ್ವಸ್ಥರಾಗಿದ್ದ ಸುಮಾರು ಅರವತ್ತು ವರ್ಷ ಪ್ರಾಯದ ಒಂಪ್ರಕಾಶ್ ಎಂಬುವವರನ್ನು ಈಶ್ವರ್ ಮಲ್ಪೆರವರು ಸತ್ಯದ ತುಳುವೆರ್ (ರಿ) ಉಡುಪಿ- ಮಂಗಳೂರು ಸಂಸ್ಥೆಯ ಸಂಸ್ಥಾಪಕರಾಗಿರುವ ಪ್ರವೀಣ್ ಕುರ್ಕಾಲುರವರ ಹಾಗು ವಿಜಯ್ ಕೋಟ್ಯಾನ್ ಜೊತೆಗೆ, ಪ್ರಥಮ ಚಿಕಿತ್ಸೆ ಕೊಡಿಸಿ ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ಸೇರಿಸಿದರು.

ವಿಶ್ವ ವೈದ್ಯರ ದಿನ : ಡಾ. ಉದಯ್ ಕುಮಾರ್ ಶೆಟ್ಟಿಗೆ ಸನ್ಮಾನ

Posted On: 03-07-2022 07:52AM

ಕಟಪಾಡಿ : ಇಲ್ಲಿಯ ಜನರಿಗೆ ಹಲವಾರು ವರ್ಷಗಳಿಂದ ವೈದ್ಯಕೀಯ ಸೇವೆ ನೀಡುತ್ತಾ ಬಂದಿರುವ ಕಟಪಾಡಿಯ ಹೆಸರಾಂತ ವೈದ್ಯರಾದ ಡಾ. ಉದಯ್ ಕುಮಾರ್ ಶೆಟ್ಟಿಯವರನ್ನು ವಿಶ್ವ ವೈದ್ಯರ ದಿನದಂದು ಸನ್ಮಾನಿಸಲಾಯಿತು.

ಜಿಲ್ಲೆಯಲ್ಲಿ 10000 ಜನರಿಂದ ಯೋಗಾಭ್ಯಾಸ ಕಾರ್ಯಕ್ರಮ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Posted On: 02-07-2022 08:01PM

ಉಡುಪಿ : ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಅದರಿಂದ ದೇಹಕ್ಕೆ ಆಗುವ ಪ್ರಯೋಜನ ಕುರಿತು ಅರಿವು ಮೂಡಿಸುವುದು ಸೇರಿದಂತೆ ಯೋಗವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಲು ಆಗಸ್ಟ್ 12, 13 ಮತ್ತು 14 ರಂದು ಯೋಗಾಥಾನ್ ಕಾರ್ಯಕ್ರಮವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ ನಲ್ಲಿ, ಜಿಲ್ಲೆಯಲ್ಲಿ ಯೋಗಾಥಾನ್ ಕಾರ್ಯಕ್ರಮ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಲ್ಪೆ : ಅಂಗನವಾಡಿಯಿಂದ 13,900 ರೂ. ಮೌಲ್ಯದ ವಸ್ತುಗಳ ಕಳ್ಳತನ

Posted On: 02-07-2022 07:46PM

ಮಲ್ಪೆ: ಇಲ್ಲಿಯ ಕೊಳ -1ರಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಸುಮಾರು 13,900 ಮೌಲ್ಯದ ವಸ್ತುಗಳ ಕಳವುಗೈದ ಘಟನೆ ನಡೆದಿದೆ.

ಮಟ್ಟು : ಮೀನುಗಾರಿಕೆಯ ಸಂದರ್ಭ ಎದೆ ನೋವು ವ್ಯಕ್ತಿ ಸಾವು

Posted On: 02-07-2022 06:06PM

ಕಾಪು : ಅಣ್ಣ ಮತ್ತು ತಮ್ಮ ಮಟ್ಟುಗ್ರಾಮದ ಪಾಪನಾಶಿನಿ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದು ಅಣ್ಣನು ಮೀನು ಹಿಡಿಯುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡು ಮೃತಪಟ್ಟ ಘಟನೆ ಜುಲೈ 1ರಂದು ನಡೆದಿದೆ.

ಮಣಿಪಾಲ : ಮನೆಯಂಗಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ

Posted On: 01-07-2022 08:20PM

ಮಣಿಪಾಲ : ಮನೆಯ ಮುಂದಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಮನೆಯಂಗಳದಲ್ಲಿ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದು, ತಲೆಗೆ ತೀವ್ರ ತರಹದ ಗಾಯವಾಗಿ ವ್ಯಕ್ತಿಯೋರ್ವರು ಮೃತ ಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ.

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ದವಾಗಿರಬೇಕು : ಮನೋಜ್ ಜೈನ್

Posted On: 01-07-2022 03:28PM

ಉಡುಪಿ, ಜೂನ್ 30 : ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹೀಗೆ ಮುಂದುವರೆದಲ್ಲಿ ಅತಿವೃಷ್ಠಿ ಉಂಟಾಗಿ ಸಮಸ್ಯೆಗಳು ಆಗುವ ಸಾಧ್ಯತೆ ಇರುವ ಹಿನ್ನಲೆ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ದರಾಗಿರಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು. ಅವರು ಇಂದು ವರ್ಚುವಲ್ ಮೀಟಿಂಗ್ ಮೂಲಕ ನಡೆದ , ಜಿಲ್ಲೆಯ ಮಳೆ ಪರಿಸ್ಥಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜುಲೈ 3 : ಎನ್ ಎಸ್ ಸಿ ಡಿ ಎಫ್ ಆಶ್ರಯದಲ್ಲಿ ಸಂಸ್ಕೃತಿ ಜಾತ್ರೆ - ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ‌

Posted On: 30-06-2022 10:55PM

ಮಂಗಳೂರು : ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಒಂದು ದಿನದ ಸಂಸ್ಕೃತಿ ಜಾತ್ರೆ ಕಾರ್ಯಕ್ರಮ ಜುಲೈ 3, ಭಾನುವಾರ ಬೆಳಿಗ್ಗೆ (9ರಿಂದ ರಾತ್ರಿ 9ರ ವರೆಗೆ) ಮಂಗಳೂರು ಪುರ ಭವನದಲ್ಲಿ ನಡೆಯಲಿದೆ.