Updated News From Kaup

ಉದ್ಯಾವರ : ಹೃದಯಾಘಾತದಿಂದ ಮಹಿಳೆ ಸಾವು

Posted On: 30-06-2022 07:59PM

ಉದ್ಯಾವರ : ಇಲ್ಲಿನ ಗುಡ್ಡೆಅಂಗಡಿ ಉದ್ಯಾವರದ ವಸಂತಿ (55) ರವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜೂನ್ 30 ರಂದು ನಡೆದಿದೆ.

ಉಡುಪಿ : ಭಾರೀ ಮಳೆಯ ಸಾಧ್ಯತೆ - ಶಾಲಾ,ಕಾಲೇಜುಗಳಿಗೆ ರಜೆ

Posted On: 30-06-2022 07:55PM

ಉಡುಪಿ : ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗರೂಕತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ - ಜುಲೈ 1ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶಿಸಿದ್ದಾರೆ.

ಕಟಪಾಡಿ : ಶ್ರೇಷ್ಠ ನಾದಸ್ವರ ವಾದಕ ಅಗ್ರಹಾರ ಚಂದಯ್ಯ ಶೇರಿಗಾರ್ ವಿಧಿವಶ

Posted On: 30-06-2022 07:01PM

ಕಟಪಾಡಿ : ನಾಡಿನ ಶ್ರೇಷ್ಠ ನಾದಸ್ವರ ವಾದಕರಾಗಿ ಹೆಸರುವಾಸಿಯಾಗಿರುವ ಅಗ್ರಹಾರ ಚಂದಯ್ಯ ಶೇರಿಗಾರ್ ರವರು ಜೂನ್ 30 ರ ಬೆಳಿಗ್ಗೆ ತಮ್ಮ ಸ್ವಗ್ರಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ದೈವಾಧೀನರಾದರು.

ಮರೆಯಾಯಿತು ಶ್ರಮಜೀವಿಯ ಬದುಕು : ಶ್ರೀ ಸಂಜೀವ ಪೂಜಾರಿ

Posted On: 29-06-2022 07:50PM

ಕಾಪು : ಮೂಡುಬೆಳ್ಳೆ ಗರಡಿಯ ಪೂ ಪೂಜನೆಯ ಸಂಜೀವ ಪೂಜಾರಿಯವರು ಜೂನ್ 28ರಂದು ದೈವಾಧೀನರಾದರು.

ರೋಟರಿ ಶಂಕರಪುರ 2022-23ನೇ ಸಾಲಿನ ಪದಗ್ರಹಣ

Posted On: 29-06-2022 10:46AM

ಕಟಪಾಡಿ : ರೋಟರಿ ಜಿಲ್ಲೆ 3182 ವಲಯ 5ರ ರೋಟರಿ ಶಂಕರಪುರ 2022-23ನೇ ಸಾಲಿನ ಪದಗ್ರಹಣವು ರೋಟರಿ ಶತಾಬ್ದಿ ಭವನದಲ್ಲಿ ಜೂ.28ರಂದು ಜರಗಿತು. ರೋಟರಿ ಜಿಲ್ಲಾ ಗವರ್ನರ್ ರೊ|ಡಾ| ಜಯಗೌರಿ ಹಡಿಗಾಲ್ ಪದಗ್ರಹಣ ನೆರವೇರಿಸಿ ಶುಭ ಕೋರಿದರು.

ಉಡುಪಿ : ಸ್ವಚ್ಛ ವಿದ್ಯಾಲಯ ಪ್ರಶಸ್ತಿ ಪುರಸ್ಕಾರ

Posted On: 28-06-2022 09:43PM

ಉಡುಪಿ : ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡುವುದು ಮುಖ್ಯ ಕರ್ತವ್ಯವಾಗಿದೆ. ಇದರಿಂದ ಸಮಾಜದಲ್ಲಿ ಎಲ್ಲರೂ ಉತ್ತಮ ಅರೋಗ್ಯವಂತರಾಗಿ ಇರಲು ಸಾಧ್ಯ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ನಮ್ಮ ಸುತಮುತ್ತಲಿನ ಪರಿಸರವನ್ನು ನಾವು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರಥಮ ಆದ್ಯತೆಯಾಗಬೇಕು. ಕೇವಲ ಪ್ರಶಸ್ತಿ ಪುರಸ್ಕಾರ ಪಡೆಯುವ ದೃಷ್ಠಿಯಿಂದ ಈ ಕಾರ್ಯವನ್ನು ಮಾಡುವುದು ಸರಿಯಲ್ಲ. ಇದು ನಮ್ಮ ದೈನಂದಿನ ಚಟುವಟಿಕೆಗಳ ಕಾರ್ಯವಾಗಬೇಕು ಎಂದರು.

ಜೂನ್ 30 ರಂದು ಹಿರಿಯ ಪತ್ರಕರ್ತ ಕೆ.ಎಲ್.ಕುಂಡಂತಾಯರಿಗೆ ಪತ್ರಿಕಾ ದಿನದ ಗೌರವ ಪ್ರದಾನ

Posted On: 28-06-2022 02:15PM

ಉಡುಪಿ: ಹಿರಿಯ ಪತ್ರಕರ್ತ, ಯಕ್ಷಪ್ರಭಾ ಸಂಪಾದಕ ಕೆ.ಎಲ್.ಕುಂಡಂತಾಯ ಅವರಿಗೆ ಬೆಂಗಳೂರಿನ ಪತ್ರಕರ್ತರ ವೇದಿಕೆ ನೀಡುವ ಪತ್ರಿಕಾ ದಿನದ ಗೌರವವನ್ನು ಜೂನ್ ೩೦ ರಂದು ಅವರ ನಿವಾಸದಲ್ಲಿ ನಡೆಯುವ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಡಾ. ಹರಿಕೃಷ್ಣ ಪುನರೂರು ಅವರು ಹಿರಿಯ ಪತ್ರಕರ್ತ ಪ್ರತಿನಿಧಿ ಸಂಪಾದಕ ಡಾ. ಉದಯ ರವಿ ಅವರ ಅಧ್ಯಕ್ಷತೆಯಲ್ಲಿ ಪ್ರದಾನಿಸುವರು ಎಂದು ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಡಾ.ಶೇಖರ ಅಜೆಕಾರು ತಿಳಿಸಿದ್ದಾರೆ.

ಉಡುಪಿ : ಬೆಂಗಳೂರನ್ನು ನಗರವನ್ನಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ - ಸಿಇಓ ಪ್ರಸನ್ನ ಹೆಚ್

Posted On: 27-06-2022 11:31PM

ಉಡುಪಿ : ಮಣ್ಣಿನ ಕೋಟೆಯಿಂದ ಕಟ್ಟಿದ ಹಳ್ಳಿ ಪ್ರದೇಶವಾಗಿದ್ದ ಬೆಂದಕಾಳೂರನ್ನು ನಗರವಾಗಿ ನಿರ್ಮಿಸಿದ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರಿಂದ, ಬೆಂಗಳೂರು ನಗರ ಇಂದು ದೇಶ-ವಿದೇಶಿಗರಿಗೆ ಚಿರಪರಿಚಿತವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಸಿ.ಜಿ.ಕೆ ರಂಗ ಪ್ರಶಸ್ತಿ-2022 ಪುರಸ್ಕೃತರಾದ ನಟ, ರಂಗನಿರ್ದೇಶಕ, ರಂಗಸಂಘಟಕ ಪ್ರದೀಪ್ ಚಂದ್ರ ಕುತ್ಪಾಡಿ

Posted On: 27-06-2022 11:22PM

ಉಡುಪಿ : ನಮ ತುಳುವೆರ್ ಕಲಾ ಸಂಘಟನೆ (ರಿ.) ನಾಟ್ಕದೂರು, ಮುದ್ರಾಡಿ ಆಯೋಜನೆಯಲ್ಲಿ ಸಂಸ ಥಿಯೇಟರ್‌, ಬೆಂಗಳೂರು - ಕರ್ನಾಟಕ ಬೀದಿ ನಾಟಕ ಅಕಾಡೆಮಿ ಮತ್ತು ಎಂ.ಜಿ.ಎಂ ಕಾಲೇಜು, ಉಡುಪಿ ಸಹಭಾಗಿತ್ವದಲ್ಲಿ ಸಿ.ಜಿ.ಕೆ ಬೀದಿರಂಗ ದಿನ ಪ್ರಯುಕ್ತ ಜೂನ್ 26 ರಂದು ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಸಿ.ಜಿ.ಕೆ ರಂಗ ಪ್ರಶಸ್ತಿ-2022 ನ್ನು ನಟ, ರಂಗನಿರ್ದೇಶಕ, ರಂಗಸಂಘಟಕ ಪ್ರದೀಪ್ ಚಂದ್ರ ಕುತ್ಪಾಡಿ ಇವರಿಗೆ ನೀಡಿ ಗೌರವಿಸಲಾಯಿತು.

ಇನ್ನಂಜೆ : ಮಂಡೇಡಿ ಶ್ರೀದೇವಿ ಭಜನಾ ಮಂಡಳಿ‌ಯ ನೂತನ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿ ಆಯ್ಕೆ

Posted On: 27-06-2022 11:09PM

ಕಾಪು : ತಾಲೂಕಿನ ಇನ್ನಂಜೆಯ ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯ 2022-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಕ್ಷ್ಮಣ್ ಕೆ ಶೆಟ್ಟಿ, ಕಾರ್ಯದರ್ಶಿಯಾಗಿ ಕೃಷ್ಣ ವಿ ಶೆಟ್ಟಿ ಮತ್ತು ಕೋಶಾಧಿಕಾರಿಯಾಗಿ ಸಂತೋಷ್ ಎಸ್ ಶೆಟ್ಟಿ ಆಯ್ಕೆಯಾಗಿರುತ್ತಾರೆ.