Updated News From Kaup

ಆಗಸ್ಟ್ 18 : ಕಡಲ ತೀರದ ಸ್ವಚ್ಛತೆ ಹಾಗೂ ಸಮುದ್ರ ಮಾಲಿನ್ಯ ಕುರಿತು ಅರಿವು ಕಾರ್ಯಕ್ರಮ

Thumbnail
Posted On: 17 Aug 2022, 08:55 PM

ಉಡುಪಿ : ಕೇಂದ್ರ ಸರ್ಕಾರದ ಭೂವಿಜ್ಞಾನ ಸಚಿವಾಲಯ, ಸಮುದ್ರ ಜೀವ ಸಂಪನ್ಮೂಲ ಮತ್ತು ಪರಿಸರ ವಿಜ್ಞಾನ ಕೇಂದ್ರ ಹಾಗೂ ಎ.ಟಿ.ಎ.ಎಲ್ ಭವನ್ ಕೊಚ್ಚಿ ಇವರ ಸಹಯೋಗದಲ್ಲಿ ಸ್ವಚ್ಛ್ ಸಾಗರ್ ಸುರಕ್ಷಿತ್ ಸಾಗರ್ ಕಾರ್ಯಕ್ರಮದಡಿ ಸಮುದ್ರ ಮಾಲಿನ್ಯ ಮತ್ತು ಕಡಲ ತೀರದ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವು ಆಗಸ್ಟ್ 18 ರಂದು ಬೆಳಗ್ಗೆ 9 ಗಂಟೆಗೆ ಉಡುಪಿಯ ಮಲ್ಪೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ನಗರಸಭೆಯ ಪೌರಾಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ, ಉಡುಪಿ ಎಂ.ಜಿ.ಎಮ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಕಳತ್ತೂರು : ಕುಶಲ ಶೇಖರ ಶೆಟ್ಟಿ ಆಡಿಟೋರಿಯಂ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Thumbnail
Posted On: 17 Aug 2022, 08:16 PM

ಕಾಪು : ಕುಶಲ ಶೇಖರ ಶೆಟ್ಟಿ ಇಂಟರ್‌ನ್ಯಾಷನಲ್ ಆಡಿಟೋರಿಯಂ ಕಳತ್ತೂರು ಇದರ ವತಿಯಿಂದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಹಿರಿಯರಾದ ವಾಸು ಶೆಟ್ಟಿ ನೆರವೇರಿಸಿದರು. ಆಡಿಟೋರಿಯಂನ ಮಾಲಕರಾದ ಶೇಖರ ಬಿ ಶೆಟ್ಟಿ ಅಧ್ಯಕ್ಷತೆ ವಹಿಸಿ ಈ ಸಲ 75ನೇ ವರ್ಷದ ಸವಿನೆನಪಿಗಾಗಿ ದ್ವಜಾರೋಹಣವನ್ನು ವಿಶೇಷವಾಗಿ ಆಚರಿಸಿದ್ದು, ಗ್ರಾಮಸ್ಥರಿಗೆ ಸತ್ಕಾರಕೂಟ ಏರ್ಪಡಿಸಲಾಗಿದೆ ಎಂದರು. ಕುಶಲ ಶೇಖರ ಶೆಟ್ಟಿ ಆಡಿಟೋರಿಯಂ ನಿರ್ದೇಶಕಿ ಕುಶಲ ಶೇಖರ ಶೆಟ್ಟಿ, ಆನಂದಿ ಶೆಟ್ಟಿ, ದಿವಾಕರ ಬಿ ಶೆಟ್ಟಿ, ದಿನೇಶ ಶೆಟ್ಟಿ ಕೊತ್ವಲಂಗಡಿ ಮತ್ತು ಶ್ರೀ ರಾಮ ಹಿರಿಯ ಪಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕರಂದಾಡಿ ಶಿಕ್ಷಕ ನಿರ್ಮಲ್ ಕುಮಾ‌ರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ದೇವರಾಜ ಅರಸು ಜಯಂತಿ ಅರ್ಥಪೂರ್ಣವಾಗಿ ಆಚರಣೆ : ಕೋಟ ಶ್ರೀನಿವಾಸ ಪೂಜಾರಿ

Thumbnail
Posted On: 17 Aug 2022, 04:58 PM

ಉಡುಪಿ : ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107 ನ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಗಸ್ಟ್ 20 ರಿಂದ 22 ರ ವರೆಗೆ 3 ದಿನಗಳ ಕಾಲ ಅಜ್ಜರಕಾಡಿನ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಡಿ.ದೇವರಾಜ ಅರಸು ಜಯಂತಿ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದುಳಿದ ವರ್ಗದವರ ಕಲ್ಯಾಣಾಭಿವೃದ್ಧಿಗೆ ದೇವರಾಜ ಅರಸು ಅವರ ಕೊಡುಗೆ ಅಪಾರವಾದುದು, ಅವರು ಅನುಷ್ಠಾನಗೊಳಿಸಿದ ಯೋಜನೆಗಳಿಂದ ಆ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದೆ ಅವರ ಸ್ಮರಣೆ ಶಾಶ್ವತವಾದುದು ಎಂದರು. ಆಗಸ್ಟ್ 20 ರಂದು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಅವರು ಮಧ್ಯಾಹ್ನ 3.30 ಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ , ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ದೇವರಾಜ ಅರಸು ಅವರ ಕುರಿತು ಉಪನ್ಯಾಸ ಕಾರ್ಯಕ್ರಮ ಸಹ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಹಿಂದುಳಿದ ವರ್ಗಗಳ ಸಮುದಾಯಗಳ ಕಸಬುಗಾರಿಕೆಯ ಕರ ಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಉದ್ಘಾಟನೆ ನಡೆಯಲಿದೆ. ಆಗಸ್ಟ್ 21 ರಂದು ಬೆಳಗ್ಗೆ 10 ಗಂಟೆಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 22 ರಂದು ಬೆಳಗ್ಗೆ 10 ಗಂಟೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳಿಂದ ಕರಾಟೆ ಹಾಗೂ ಯೋಗ ಪ್ರದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಕತ್ವದಲ್ಲಿ ಜಿಲ್ಲೆಯ ಸುಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ಯಕ್ಷ ಕೂಟ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2.30 ಕ್ಕೆ ಡಿ. ದೇವರಾಜ ಅರಸು ಜನ್ಮ ದಿನಾಚರಣೆಯ ಸಮಾರೋಪ ಸಮಾರಂಭ ನಡೆಯಲಿದೆ. ಜನ್ಮ ದಿನಾಚರಣೆಯ ಅಂಗವಾಗಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಸಮಾರೋಪ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದ ಅವರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಸಚಿನ್ ಕುಮಾರ್, ವಾರ್ತಾಧಿಕಾರಿ ಬಿ.ಮಂಜುನಾಥ್, ಹಾಗೂ ವಿವಿಧ ಹಿಂದುಳಿದ ವರ್ಗಗಳ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ವಾಹನ ರ‍್ಯಾಲಿ

Thumbnail
Posted On: 17 Aug 2022, 04:39 PM

ಉದ್ಯಾವರ : ದೇಶದ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತ್ರತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ವಾಹನ ರ‍್ಯಾಲಿ ನಡೆಸಿ ಸಂಭ್ರಮಿಸಲಾಯಿತು. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಕೆಥೋಲಿಕ್ ಸಭಾ, ಸ್ತ್ರೀ ಸಂಘಟನೆ, ಐಸಿವೈಎಂ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ವಾಹನ ರ‍್ಯಾಲಿಯನ್ನು ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷೆ ಮೇರಿ ಡಿಸೋಜ ಮತ್ತು ಉದ್ಯಮಿ, ಆಕರ್ಷಣ್ ಫೂಟ್ ವೇರ್ ಮಾಲಕ ಸಾದಿಕ್ ಅಹ್ಮದ್ ಸಂಘಟನೆಗಳ ಅಧ್ಯಕ್ಷರಿಗೆ ಧ್ವಜ ಹಸ್ತಾಂತರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮೇರಿ ಡಿಸೋಜ, ವೀರ ಯೋಧರ ಮತ್ತು ರಾಷ್ಟ್ರ ನಾಯಕರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ದೇಶದಲ್ಲಿ ಇರುವಂಥ ನಿರುದ್ಯೋಗ ಮತ್ತು ಬಡತನದಿಂದ ನಾವು ಇನ್ನೂ ಮುಕ್ತಿ ಕಂಡಿಲ್ಲ. ಇಂತಹ ರ‍್ಯಾಲಿಗಳ ಮೂಲಕವಾಗಿ ಸಮಾಜದಲ್ಲಿ ಮತ್ತು ದೇಶದಲ್ಲಿ ಸೌಹಾರ್ದತೆ ಮೂಡಲಿದೆ ಎಂದರು. ಈ ಸಂದರ್ಭದಲ್ಲಿ ಲಯನ್ಸ್ ವಲಯಾಧ್ಯಕ್ಷ ಲ. ಜೋನ್ ಫೆರ್ನಾಂಡಿಸ್, ಕೆಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಅಂದ್ರಾದೆ, ಐಸಿವೈಎಂ ಅಧ್ಯಕ್ಷ, ಪ್ರಿತೇಶ್ ಪಿಂಟೊ, ಸ್ತ್ರೀ ಸಂಘಟನೆ ಅಧ್ಯಕ್ಷೆ ಐರಿನ್ ಪಿರೇರಾ, ಪ್ರಮುಖರಾದ ಜೆರಾಲ್ಡ್ ಪಿರೇರಾ, ಲೋರೆನ್ಸ್ ಡೇಸಾ, ಟೆರೆನ್ಸ್ ಪಿರೇರಾ, ಜೋನ್ ಗೋಮ್ಸ್, ರೋಯ್ಸ್ ಫೆರ್ನಾಂಡಿಸ್, ವಿಲ್ಫ್ರೆಡ್ ಡಿಸೋಜಾ, ರೊನಾಲ್ಡ್ ಡಿಸೋಜ, ಪ್ರೇಮ್ ಮಿನೇಜಸ್, ಜೂಲಿಯ ಡಿಸೋಜ, ಪ್ರಕಾಶ್ ಸಿಕ್ವೇರಾ ಮತ್ತಿತರರು ಉಪಸ್ಥಿತರಿದ್ದರು. ಕೋಶಾಧಿಕಾರಿ ಲ. ರೋಶನ್ ಕ್ರಾಸ್ತಾ ಸ್ವಾಗತಿಸಿದರು. ಮಾಜಿ ಕಾರ್ಯದರ್ಶಿ ಲ. ಮೈಕಲ್ ಡಿಸೋಜಾ ಧನ್ಯವಾದ ಸಮರ್ಪಿಸಿದರು. ಲ. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು. ವಾಹನ ರ‍್ಯಾಲಿಯು ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವಠಾರದಿಂದ ಆರಂಭಗೊಂಡು ಗುಡ್ಡೆಯಂಗಡಿ, ಪಿತ್ರೋಡಿ ಉದ್ಯಾವರ ಮೇಲ್ಪೇಟೆ ಮೂಲಕ ಸಾಗಿತು. ರ‍್ಯಾಲಿಗೆ ಮುಂಚಿತವಾಗಿ ಸ್ಥಳೀಯ ಸಂತ ಪಲೋಟ್ಟಿ ಕಾನ್ವೆಂಟ್ ನಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಸಿ ರಾಷ್ಟ್ರಕ್ಕೆ ಗೌರವ ಸಲ್ಲಿಸಲಾಯಿತು.

ಪಡುಬಿದ್ರಿ : ವ್ಯಕ್ತಿ ಆತ್ಮಹತ್ಯೆ

Thumbnail
Posted On: 17 Aug 2022, 12:05 PM

ಪಡುಬಿದ್ರಿ : ಆರ್ಥಿಕ ಮುಗ್ಗಟ್ಟಿನಿಂದ ನೊಂದಿದ್ದ ಪೇಂಟರ್ ವೃತ್ತಿಮಾಡಿಕೊಂಡಿದ್ದ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಪಡುಬಿದ್ರಿ ಬೀಡು ಬಳಿಯ ಬಾಡಿಗೆ ಮನೆಯಲ್ಲಿ ನಡೆದಿದೆ. ಮೃತ ವ್ಯಕ್ತಿ ಸೋನಿತ್‌ ಪೂಜಾರಿ(30) ಅಣ್ಣ ಹಾಗೂ ಅತ್ತಿಗೆಯ ಜೊತೆ ಬೀಡು ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಈತನ ಅಣ್ಣ ಹಾಗೂ ಅತ್ತಿಗೆ ಕೆಲಸಕ್ಕೆ ಹೋದ ವೇಳೆ ಈತ ಸಾವನ್ನಪ್ಪಿದ್ದಾನೆ. ಮಂಗಳವಾರ ಸಂಜೆ ಐದು ಗಂಟೆಯವರೆಗೆ ಪೇಟೆಯಲ್ಲಿ ತಿರುಗುತ್ತಿದ್ದ ಸಂಜೆ ಹೊತ್ತಿಗೆ ಅತ್ತಿಗೆ ಮನೆಗೆ ಬಂದಾಗ ಒಳಗಡೆಯಿಂದ ಚಿಲಕ ಹಾಕಿಕೊಂಡಿದ್ದು, ಕಿಟಕಿಯಿಂದ ಇಣುಕಿದಾಗ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿಕ್ಷಕಿ ಸುಷ್ಮಿತಾ ಗಿರಿರಾಜ್ ಕೈ‌ಚಳಕದಿ ನೇಜಿಯಲ್ಲಿ ಮೂಡಿದ ಭಾರತದ ಭೂಪಟ

Thumbnail
Posted On: 16 Aug 2022, 11:48 PM

ಉದ್ಯಾವರ : ಇಲ್ಲಿನ ಸ್ಮಾರ್ಟ್ ಇಂಡಿಯನ್ ಇಂಗ್ಲಿಷ್‌ ಮೀಡಿಯಂ ಸ್ಕೂಲ್‌ನಲ್ಲಿ ಶಿಕ್ಷಕಿ, ಕಲಾವಿದೆ ಸುಷ್ಮಿತಾ ಗಿರಿರಾಜ್ ಅವರು ಭಾರತದ ಭೂಪಟವನ್ನು ಭತ್ತದ ಸಸಿ(ನೇಜಿ)ಯಲ್ಲಿ ಬೆಳೆಸಿ ಗಮನ ಸೆಳೆದಿದ್ದಾರೆ. ಕೃಷಿಯ ಬಗೆಗೆ ಆಸಕ್ತಿ ಕುಂಠಿತವಾಗುತ್ತಿರುವ ಕಾಲದಲ್ಲಿ ವಿದ್ಯಾರ್ಥಿಗಳಲ್ಲಿ ಕೃಷಿ ಪ್ರೇಮವನ್ನು ಸೆಳೆಯುವ ನಿಟ್ಟಿನಲ್ಲಿ ತಿರಂಗ ಸಹಿತ ಭಾರತವನ್ನು ರಚಿಸಿ ಸ್ವಾತಂತ್ರ್ಯ 75ರ ಅಮೃತ ಮಹೋತ್ಸವವನ್ನು ಸಂಭ್ರಮಿಸಲಾಗಿದೆ. ಸದಿಯ ಸಾಹುಕಾರ್ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಮಹೇಶ್‌ ಉದ್ಯಾವರ, ಮುಖ್ಯ ಶಿಕ್ಷಕಿ ಅರ್ಚನಾ, ಆಡಳಿತಾಧಿಕಾರಿಗಳಾದ ಪ್ರತಿಭಾ ಕೋಟ್ಯಾನ್‌, ಅಪ್ಸರೀ ರಫಿಕ್ ಖಾನ್, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರಿಂದ ಮೆಚ್ಚುಗೆ ಪಾತ್ರವಾಗಿದೆ.

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಿಂದ ಜಾಥಾ

Thumbnail
Posted On: 16 Aug 2022, 11:11 PM

ಪಡುಬಿದ್ರಿ : 75 ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪ್ರಧಾನ ಕಚೇರಿ ಸಹಕಾರ ಸಂಗಮದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವೃಂದ, ದೈನಿಕ ಠೇವಣಿ ಸಂಗ್ರಹಗಾರರು, ಸರಾಫರು ಹಾಗೂ ಭದ್ರತಾ ಸಿಬ್ಬಂದಿಗಳು ಗಾಂಧಿ ಟೋಪಿ ಧರಿಸಿ ಹಾಗೂ ತ್ರಿವರ್ಣ ಧ್ವಜದೊಂದಿಗೆ ಸೊಸೈಟಿಯ ಪ್ರಧಾನ ಕಚೇರಿಯಿಂದ ಪಡುಬಿದ್ರಿ ನಾರಾಯಣ ಗುರು ಸಂಘದವರೆಗೆ ಜಾಥಾವನ್ನು ನಡೆಸಿ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ ದಿನಾಚರಣೆಯ ಅಮೃತಮಹೋತ್ಸವವನ್ನು ಆಚರಿಸಿದರು.

ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಅಕ್ಷಯ್ ಮಚೀಂದ್ರ

Thumbnail
Posted On: 16 Aug 2022, 10:54 PM

ಉಡುಪಿ : ಜಿಲ್ಲೆಯ ನೂತನ ಎಸ್ಪಿಯಾಗಿ ಅಕ್ಷಯ್ ಮಚೀಂದ್ರ ನೇಮಿಸಿ ಸರಕಾರ ಆದೇಶಿಸಿದೆ. ಅಕ್ಷಯ್ ಮಚೀಂದ್ರ ಚಿಕ್ಕಮಗಳೂರು ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಕಳೆದೆರಡು ವರ್ಷಗಳ ಹಿಂದೆ ಉಡುಪಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಅಧೀಕ್ಷಕರಾಗಿ ಸರಕಾರ ನೇಮಕ ಮಾಡಿದೆ.

ಉಡುಪಿ : ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದಿಂದ ಸ್ವಾತಂತ್ರ್ಯ ದಿನಾಚರಣೆ ; ಸನ್ಮಾನ

Thumbnail
Posted On: 16 Aug 2022, 08:09 PM

ಉಡುಪಿ : ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆಯ ವತಿಯಿಂದ ಆಗಸ್ಟ್ 15ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವ ಸಮಾರಂಭ ಬೊಬ್ಬರ್ಯ ದೈವಸ್ಥಾನದಲ್ಲಿ ವಠಾರದಲ್ಲಿ ಜರಗಿತು. ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರವಿ ಶೆಟ್ಟಿ ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭ ಹಾರೈಸಿದರು. ಒಕ್ಕೂಟದ ಹಿರಿಯರಾದ ಹಾಗೂ ಸದಸ್ಯರಾದ ಉಡುಪಿ ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ದೈವಚಾಕ್ರಿ ಮಾಡುತ್ತಿರುವ ಸರಳ ಸಜ್ಜನಿಕೆ ಹೆಸರಾಂತ ಕೊರಗ ಸಮುದಾಯದ ಡೋಲು ಬಾರಿಸುವ ಮೂಲಕ ದೈವಚಾಕ್ರಿ ಮಾಡಿದ ಬಾಬು ಅಲೆವೂರ್ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೊಬ್ಬರ್ಯ ಯುವ ಸೇವ ಸಮಿತಿ ಅಧ್ಯಕ್ಷರಾದ ವರದರಾಜ ಕಾಮತ್, ಉಡುಪಿ ಬ್ರಹ್ಮಾವರ ಘಟಕದ ಅಧ್ಯಕ್ಷರಾದ ಹಾಗೂ ಉಡುಪಿ ಕೋಶಾಧಿಕಾರಿಯಾದ ಶ್ರೀಧರ್ ಪೂಜಾರಿ, ಉಪಾಧ್ಯಕ್ಷರಾದ ಯೋಗೀಶ್ ಪೂಜಾರಿ ಹಾಗೂ ಮಹೇಶ್ ಪಂಬದ, ವಾಮನ, ಸದಸ್ಯರು ಉಪಸ್ಥಿತಿಯಿದ್ದರು. ಸಂಘಟನೆ ಕಾರ್ಯದರ್ಶಿಯಾದ ರಕ್ಷಿತ್ ಕೋಟ್ಯಾನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿಯಾದ ವಿನೋದ್ ಶೆಟ್ಟಿ ವಂದಿಸಿದರು.

ಉಡುಪಿ : ತುಳುನಾಡ ರಕ್ಷಣಾ ವೇದಿಕೆ - ಆಟಿಡೊಂಜಿ ದಿನ

Thumbnail
Posted On: 16 Aug 2022, 07:55 PM

ಉಡುಪಿ : ಇಲ್ಲಿನ ಬಹ್ಮಗಿರಿಯ ಲಯನ್ಸ್ ಭವನದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ನೂರಾರು ತುಳು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಹಯೋಗದಿಂದ ಆಗಸ್ಟ್ 14ರಂದು ಆಟಿಡೊಂಜಿ ದಿನ ಎಂಬ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದ ಉಧ್ಘಾಟನೆಯನ್ನು ಹಿರಿಯ ಅರ್ಚಕರಾದ ಕೇಶವ ಶಾಂತಿಯವರು ಉಧ್ಘಾಟಿಸಿದರು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪುರವರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪನೆ, ಉದ್ದೇಶ, ಸಾಮಾಜಿಕ ಹೋರಾಟ, ಸಾಮಾಜಿಕ ನೆರವು ಹಾಗೂ ಅಗತ್ಯತೆ ಬಗ್ಗೆ ಅಚ್ಚುಕಟ್ಟಾಗಿ ವಿವರಿಸಿದರು. ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಟಪಾಡಿ ಶಂಕರ್ ಪೂಜಾರಿ ಆಟಿ ತಿಂಗಳ ವಿಶೇಷತೆಯ ಬಗ್ಗೆ ಹೇಳಿದರು. ಸಾಮಾಜಿಕ ಕಾರ್ಯಕರ್ತ, ಉದ್ಯಮಿ ಕೃಷ್ಣಮೂರ್ತಿ ಆಚಾರ್ಯರವರು ಕಾರ್ಯಕ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತಾ, ತುಳುನಾಡ ಸಂಸ್ಕೃತಿ ಉಳಿಯಬೇಕಾದಲ್ಲಿ ಈ ಸಂಘಟನೆ ಅಗತ್ಯ ಹಾಗೂ ನಿಮ್ಮೊಂದಿಗೆ ಸದಾ ಇರುವ ಭರವಸೆ ನೀಡಿದರು. ಮುಖ್ಯ ಅತಿಥಿಯಾದ ಉಡುಪಿ ನಗರ ಠಾಣಾ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ರವರು ಕಾನೂನಿನ ಬಗ್ಗೆ ಹಾಗೂ ತುಳುನಾಡಿನ ಬಗ್ಗೆ, ತುಳುನಾಡ ರಕ್ಷಣಾ ವೇದಿಕೆಯ ಅಗತ್ಯತೆಯ ಬಗ್ಗೆ ಸವಿವರದೊಂದಿಗೆ ವಿಸ್ತರಿಸಿ ಮುಂದಿನ ದಿನಗಳಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಉತ್ತಮ ಕೆಲಸಗಳಿಗೆ ಸಹಕಾರ ನೀಡುವ ಭರವಸೆ ನೀಡಿದರು. ಜನತಾದಳ ಜಾತ್ಯಾತೀತ ಉಡುಪಿ ಜಿಲ್ಲಾ ಕಾರ್ಯಧ್ಯಕ್ಷರಾದ ವಾಸುದೇವ್ ರಾವ್ ರವರು ತುಳುನಾಡ ಸಂಸ್ಕೃತಿ ಬಗ್ಗೆ ಅಚ್ಚುಕಟ್ಟಾಗಿ ವಿವರಿಸಿದರು. ಹಿರಿಯ ವಕೀಲರಾದ ಹಮ್ಜತ್ ಹೆಜಮಾಡಿಯವರು ತುಳುನಾಡು ಮತ್ತು ತುಳು ಭಾಷೆಯ ಬಗ್ಗೆ ಸಂಪೂರ್ಣವಾಗಿ ವಿಸ್ತರಿಸಿ ರಾಷ್ಟ್ರಾದ್ಯಂತ ತುಳುನಾಡ ಸಂಸ್ಕೃತಿ ಬೆಳಗಲಿಯೆಂದು ಶುಭ ಹಾರೈಸಿದರು. ಉಡುಪಿ ಜಿಲ್ಲಾ ಮತ್ತು ದ.ಕ ಮೀನು ಮಾರಾಟ ಫೆಡರೇಶನ್ ನ ಅಧ್ಯಕ್ಷರಾದ ಯಶ್ಪಾಲ್ ಸುವರ್ಣರವರು ತುಳುನಾಡು ಮತ್ತು ತುಳುವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಗರ ಸಭಾ ಸದಸ್ಯರು ಹಾಗೂ ವಿರೋಧ ಪಕ್ಷ ನಾಯಕರಾದ ರಮೇಶ್ ಕಾಂಚನ್ ಸಂದರ್ಭೋಚಿತವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರುದ್ದೀನ್ ಸುಬ್ರಹ್ಮಣ್ಯ ನಗರ, ಮುಖ್ಯ ಅತಿಥಿಗಳಾದ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ ಉಡುಪಿ ಜಿಲ್ಲೆ ಇದರ ಸಂಸ್ಥಾಪಕರಾದ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ಶೆಟ್ಟಿ, ಮಹಿಳಾ ಘಟಕ ಗೌರವ ಸಲಹಾಗಾರರಾದ ಶೋಭ ಪಾಂಗಳ, ಗೌರವ ಸಲಹಾಗಾರರಾದ ಸುಧಾಕರ್ ಅಮೀನ್, ಜಿಲ್ಲಾ ಉಪಾಧ್ಯಕ್ಷರಾದ ಜಯರಾಮ್ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರಾದ ಕೃಷ್ಣ ಕುಮಾರ್, ಮಹಿಳಾ ಘಟಕ ಜಿಲ್ಲಾಧ್ಯಕ್ಷರಾದ ಸುಕನ್ಯ ಪ್ರಭಾಕರ್, ಮಹಿಳಾ ಘಟಕ ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ, ಮಹಿಳಾ ಘಟಕ ಉಪಾಧ್ಯಕ್ಷರು ಹಾಗೂ ಕಾನೂನು ಸಲಹಾಗರರಾದ ನಾಗಲಕ್ಷ್ಮಿ, ಯುವ ಘಟಕದ ಅಧ್ಯಕ್ಷರಾದ ಸುನಿಲ್ ಫೆರ್ನಾಂಡಿಸ್, ಐಟಿ ವಿಂಗ್ ಅಧ್ಯಕ್ಷರಾದ ರೋಷನ್ ಡಿಸೋಜ, ಕಾರ್ಮಿಕ ಘಟಕ ಅಧ್ಯಕ್ಷರಾದ ಜುನೈದ್, ಜಿಲ್ಲಾ ಉಪಾಧ್ಯಕ್ಷರಾದ ರಹೀಂ, ಜೊತೆ ಕಾರ್ಯದರ್ಶಿ ಶುಭಾಶ್ ಸುಧಾನ್, ಕಾರ್ನಿಕ ಘಟಕ ಪ್ರಧಾನ ಕಾರ್ಯದರ್ಶಿ ರಿತೇಶ್ ರಾವ್, ಖಜಾಂಚಿ ಡ್ಯಾನಿ, ಜಿಲ್ಲಾ ಕಾರ್ಯದರ್ಶಿ ಮಜೀದ್, ಮಹಳಾ ಘಟಕ ಜಿಲ್ಲಾ ಉಪಾಧ್ಯಕ್ಷರಾದ ಶಾಂಭವಿ, ಮಹಿಳಾ ಘಟಕ ಜಿಲ್ಲಾ ಉಪಾಧ್ಯಕ್ಷರಾದ ಸುಲತ, ಮಹಿಳಾ ಘಟಕ ಜೊತೆ ಕಾರ್ಯದರ್ಶಿ ಅನುಪಮ, ರೇಣುಕಾ, ಜಿಲ್ಲಾ ಕಾರ್ಯದರ್ಶಿಯಾದ ಸದಾನಂದ ಮತ್ತಿತರರು ಉಪಸ್ಥಿತರಿದ್ದರು. ಪ್ರತಿಕ್ಷಾ ರಿಧಮಿಕ್ ವಾಯಿಸ್ ಆಫ್ ಉಡುಪಿ ಹಾಗೂ ಉಡುಪಿ ಕರೊಕೆ ತಂಡದಿಂದ ತುಳು ಸಂಗೀತ ರಸಮಂಜರಿ ನೀಡಲ್ಪಟ್ಟಿತು. ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರು ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿಯಾದ ಮೊಹಮ್ಮದ್ ಹಾರಿಸ್ ರವರು ನಿರೂಪಣೆ ಮಾಡಿದರು.