Updated News From Kaup
ಸಿ.ಎ ಫೌಂಡೇಶನ್ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 3 ವಿದ್ಯಾರ್ಥಿಗಳು ತೇರ್ಗಡೆ
Posted On: 10 Aug 2022, 07:51 PM
ಕಾರ್ಕಳ : ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ ಫೌಂಡೇಶನ್ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್ ಎ ಎಂ ಹಾಗೂ ಅಭಿಷೇಕ್ ಲಕ್ಷ್ಮಣ್ ನಾಯ್ಕ್ ಇವರು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಪ್ರಥಮ ವರ್ಷದ ಸಿ. ಎ ಫೌಂಡೇಶನ್ ಫಲಿತಾಂಶದಲ್ಲಿಯೇ ಅರ್ಹತೆ ಪಡೆದಿರುವುದು ಪ್ರಶಂಸನೀಯ. ಮುಂದಿನ ಸಿ.ಎ ಮತ್ತು ಸಿ.ಎಸ್.ಇ.ಇ.ಟಿ ಪರೀಕ್ಷೆಯನ್ನು ಗುರಿಯಾಗಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್ ಎ ಎಂ ಹಾಗೂ ಅಭಿಷೇಕ್ ಲಕ್ಷ್ಮಣ್ ನಾಯ್ಕ್ ಇವರನ್ನು ಸಂಸ್ಥೆಯ ಪ್ರಾಂಶುಪಾಲರು, ಸಿ ಎ ಫೌಂಡೇಶನ್ ಸಂಯೋಜಕರಾದ ರಾಘವೇಂದ್ರ ಬಿ ರಾವ್, ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದಿಸಿದರು.
ಉಡುಪಿ : ಹರ್ ಗರ್ ತಿರಂಗ ಪ್ರಯುಕ್ತ ಮುನಿಯಲ್ ಕಾಲೇಜಿನಲ್ಲಿ ರಾಷ್ಟ್ರ ಧ್ವಜ ವಿತರಣೆ
Posted On: 10 Aug 2022, 07:47 PM
ಉಡುಪಿ : ಮುನಿಯಲ್ ಆಯುರ್ವೇದ ಮೆಡಿಕಲ್ ಸೈನ್ಸ್ ಮಣಿಪಾಲ ನ ಎನ್ ಎಸ್ ಎಸ್ ಯುನಿಟಿನಿಂದ ಇಂದು ಸರ್ಕಾರದ ಅಭಿಯಾನದ ಹರ್ ಗರ್ ತಿರಂಗ ಪ್ರಯುಕ್ತ ಮುನಿಯಲ್ ಕಾಲೇಜಿನಲ್ಲಿ ಸರ್ಕಾರದಿಂದ ಬಂದ ರಾಷ್ಟ್ರ ಧ್ವಜವನ್ನು ಎಲ್ಲರಿಗೂ ವಿತರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುನಿಯಲ್ ಕಾಲೇಜಿನ ಆಡಳಿತ ಅಧಿಕಾರಿಯಾದ ಯೋಗೀಶ್ ಶೆಟ್ಟಿ, ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಭಟ್, ಡಾ. ಸುದೀಪ್, ಡಾ. ರವಿಶಂಕರ ಶೇನೋಯ್, ಡಾ. ಗುರುರಾಜ್ ತಂತ್ರಿ ಹಾಗೂ ಎನ್ ಎಸ್ ಎಸ್ ವಿದ್ಯಾರ್ಥಿ ಪ್ರಮುಖರಾದ ಶಾರ್ವರಿ ಅಡಿಗ ಮತ್ತು ಹೃತಿಕ್ ಗೋಳಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜೆಡಿಎಸ್ ನ ಶಾಲಾ ಸಂಪರ್ಕ ಸೇತು ಯೋಜನೆಗೆ ತಿಲಾಂಜಲಿ ಇಟ್ಟ ಬಿಜೆಪಿ : ಯೋಗೀಶ್ ಶೆಟ್ಟಿ ಬಾಲಾಜಿ
Posted On: 10 Aug 2022, 05:41 PM
ಕಾಪು : ಇತ್ತೀಚೆಗಷ್ಟೇ ಬೈಂದೂರು ಕ್ಷೇತ್ರದ ಕಾಲ್ತೋಡು ಗ್ರಾಮದ ಬೊಳ್ಳಂಬಳ್ಳಿ ಮಕ್ಕಿಮನೆ ಪ್ರದೀಪ್ ಪೂಜಾರಿಯವರ 7 ವರ್ಷದ ಮಗಳು ಸನ್ನಿಧಿ ಕಾಲು ಸಂಕದಿಂದ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ನಿಜಕ್ಕೂ ಮನಕುಲಕುವಂತದ್ದು. ಮಕ್ಕಳಿಗೆ ಮಳೆಗಾಲದಲ್ಲಿ ಶಾಲೆಗೆ ತೆರಳಲು ಅನುಕೂಲವಾಗಲಿ ಎಂದು ಎಚ್.ಡಿ. ಕುಮಾರಸ್ವಾಮಿಯವರು ಜಾರಿಗೊಳಿಸಿದ ರಾಜ್ಯಾದ್ಯಂತ ಸೇತುವೆಗಳ ನಿರ್ಮಾಣ ಮಾಡುವ "ಶಾಲಾ ಸಂಪರ್ಕ ಸೇತು" ಯೋಜನೆಗೆ ಬಿಜೆಪಿ ಪಕ್ಷದ ಸರಕಾರ ತಿಲಾಂಜಲಿ ಇಟ್ಟದ್ದು ಇದಕ್ಕೆ ಕಾರಣ. ಇದರಿಂದ ಮಳೆಗಾಲದಲ್ಲಿ ಇಲ್ಲಿನ ಜನರು ಪರದಾಡುವಂತಾಗಿದೆ. ಆಗಸ್ಟ್ 8, ಸೋಮವಾರ ಬೈಂದೂರು ಕ್ಷೇತ್ರದ ಕಾಲ್ತೋಡು ಗ್ರಾಮದಲ್ಲಿ ಸನ್ನಿಧಿ ಎಂಬ 7 ವರ್ಷದ ಪುಟ್ಟ ಬಾಲಕಿ ಸರಿಯಾದ ಸಮರ್ಪಕವಾದ ಸೇತುವೆಗಳಿಲ್ಲದೆ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿ ಮೃತದೇಹವು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನಿಜವಾಗಿಯೂ ಮನಕಲಕುವಂತದ್ದು, ಒಂದು ವೇಳೆ ಎಚ್.ಡಿ. ಕುಮಾರಸ್ವಾಮಿಯವರ ಯೋಜನೆ ಪೂರ್ಣಗೊಂಡಿದ್ದರೆ ಈ ಘಟನೆ ಖಂಡಿತವಾಗಿಯೂ ನಡೆಯುತ್ತಿರಲಿಲ್ಲ. ಇಂತಹ ಘಟನೆಗಳಿಗೆ ಕಾರಣ ಏನೆಂದು ಜನರು ತಿಳಿದುಕೊಳ್ಳಬೇಕು, ಇನ್ನಾದರೂ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿಯವರು ವಿನಂತಿಸಿಕೊಂಡಿದ್ದಾರೆ.
ಪಡುಬಿದ್ರಿ : ಬೆಳ್ಳಂಬೆಳಗ್ಗೆ 2 ಕಡೆಗಳಲ್ಲಿ ಬೆಂಕಿ ಅವಘಡ
Posted On: 10 Aug 2022, 10:36 AM
ಪಡುಬಿದ್ರಿ : ವಿದ್ಯುತ್ ಅವಘಡದಿಂದ ಪಡುಬಿದ್ರಿ ಠಾಣೆಯ ಪಕ್ಕದಲ್ಲಿರುವ ಅಕ್ವೇರಿಯಂ ಮತ್ತು ಎಲೆಕ್ಟ್ರಾನಿಕ್ಸ್ ಅಂಗಡಿ ಹಾಗೂ ಕಣ್ಣಂಗಾರ್ ಸಮೀಪದ ಎಣ್ಣೆ ಗಿರಣಿ ಅಂಗಡಿಯ ತೆಂಗಿಕಾಯಿಗಳಿದ್ದ ಕೋಣೆ ಬೆಂಕಿಗಾಹುತಿಯಾದ ಘಟನೆ ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ನಡೆದಿದೆ. ಪಡುಬಿದ್ರಿ ಠಾಣೆಯ ಪಕ್ಕದಲ್ಲಿರುವ ಪಂಚಾಯತ್ ಕಟ್ಟಡದಲ್ಲಿರುವ ಅವಿಘ್ನ ಅಕ್ವೇರಿಯಂ ಮತ್ತು ಎಲೆಕ್ಟ್ರಾನಿಕ್ಸ್ ಅಂಗಡಿಯ ಮಾಲಿಕರಾದ ದಿನೇಶ್ ಮಾತನಾಡಿ ವಿದ್ಯುತ್ ಶಾಟ್೯ ಸಕ್ಯು೯ಟ್ ಅಥವಾ ಇನ್ನಿತರ ಕಾರಣದ ಬಗ್ಗೆ ಇನ್ನಷ್ಟೆ ತಿಳಿಯಬೇಕಾಗಿದೆ. ಈ ಘಟನೆ ಬೆಳಿಗ್ಗೆ ನಡೆದಿದೆ. ಇದರಿಂದ ಸುಮಾರು 5-6 ಲಕ್ಷ ನಷ್ಟವಾಗಿದೆ ಎಂದರು. ಪಡುಬಿದ್ರಿಯ ಕಣ್ಣಂಗಾರ್ ಸಮೀಪದ ಗಾಣಿಗ ಎಣ್ಣೆ ಗಿರಣಿಯಲ್ಲಿಯೂ ಬೆಳಿಗ್ಗೆ 6ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು ಸ್ಥಳೀಯರು ಮಾಲಿಕರಾದ ಸುಶೀಲ ಗಾಣಿಗರಿಗೆ ಮಾಹಿತಿ ನೀಡಿದ್ದಾರೆ. ಅಂದಾಜು 4-5 ಲಕ್ಷ ನಷ್ಟ ಅಂದಾಜಿಸಲಾಗಿದೆ. ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಮಾಡಿದೆ.
ಯುವವಾಹಿನಿ ಕಾಪು ಘಟಕದ ವತಿಯಿಂದ ಪರಿಸರ ಜಾಗೃತಿ, ಸಸಿ ವಿತರಣಾ ಸಮಾರಂಭ
Posted On: 08 Aug 2022, 12:57 PM
ಕಾಪು : ಯುವವಾಹಿನಿ ಕಾಪು ಘಟಕದ ವತಿಯಿಂದ ಯುವವಾಹಿನಿ ಸದಸ್ಯರು ಮತ್ತು ಸಾರ್ವಜನಿಕರಿಗೆ ಕಾಪು ಬಿಲ್ಲವರ ಸಹಾಯಕ ಸಂಘದ ಆವರಣದಲ್ಲಿ ಪರಿಸರ ಮಾಹಿತಿ ಜಾಗೃತಿಯೊಂದಿಗೆ ಸಸಿ ವಿತರಿಸಲಾಯಿತು. ಅರಣ್ಯ ಇಲಾಖೆಯ ಅಧಿಕಾರಿ ಕೇಶವ ಅಮೀನ್ ಅವರು ಪರಿಸರ ಜಾಗೃತಿ ಮಾಹಿತಿಯೊಂದಿಗೆ ಸಸಿ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಎರ್ಮಾಳು ಶುಭಾಶಂಸನೆಗೈದರು. ಯುವವಾಹಿನಿ ಕಾಪು ಘಟಕದ ಉಪಾಧ್ಯಕ್ಷರಾದ ಶಶಿಧರ್ ಸುವರ್ಣ, ಭವಾನಿ ಶೇಖರ್, ಪ್ರಧಾನ ಕಾರ್ಯದರ್ಶಿ ಸುಮಿತ್ರಾ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಕಾಪು ಘಟಕದ ಅಧ್ಯಕ್ಷ ಸಚಿನ್ ಕುಮಾರ್ ಉಚ್ಚಿಲ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷೆ ಸೌಮ್ಯ ರಾಕೇಶ್ ವಂದಿಸಿದರು
ಕಾಪು : ಬಿಜೆಪಿ ಮಹಿಳಾ ಮೋರ್ಚಾ - ಕೈ ಮಗ್ಗ ದಿನಾಚರಣೆ
Posted On: 07 Aug 2022, 09:34 PM
ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಕ್ಷೇತ್ರ ಮಹಿಳಾ ಮೋರ್ಚಾ ವತಿಯಿಂದ ಕೈ ಮಗ್ಗ ದಿನಾಚರಣೆಯನ್ನು ಆಚರಿಸಲಾಯಿತು. ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳತ್ತೂರು ನಿವಾಸಿ ಲಕ್ಷ್ಮಣ್ ಶೆಟ್ಟಿಗಾರ್ ರವರ ಧರ್ಮಪತ್ನಿಯಾದ ಸರೋಜಿನಿ ಸುಮಾರು 37 ವರ್ಷದಿಂದ ಕೈಮಗ್ಗದ ಸೀರೆಯನ್ನು ನೆಯ್ಯುತ್ತಿದ್ದು,ಅವರನ್ನು ಇಂದು ಗುರುತಿಸಿ ಮಹಿಳಾ ಮೋರ್ಚಾದಿಂದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ಶಿಲ್ಪ ಜಿ ಸುವರ್ಣ, ಕಾಪು ಕ್ಷೇತ್ರ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಖ ಶೈಲೇಶ್, ನೀತಾ ಗುರುರಾಜ್, ಕುತ್ಯಾರು ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ರಮ ವೈ ಶೆಟ್ಟಿ, ಸೌಮ್ಯಲತ ಶೆಟ್ಟಿ, ಶಾಂತಾ ಪೂಜಾರಿ, ದಿವ್ಯ,ಅಗ್ನೇಶ್ ಉಪಸ್ಥಿತರಿದ್ದರು.
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸುವಲ್ಲಿ ಪೋಷಕರ ಸಹಕಾರ ಅತ್ಯಗತ್ಯ : ಗುರ್ಮೆ ಸುರೇಶ್ ಶೆಟ್ಟಿ
Posted On: 07 Aug 2022, 09:22 PM
ಕಾಪು : ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸುವಲ್ಲಿ ಪೋಷಕರ ಸಹಕಾರ ಅತ್ಯಗತ್ಯವಾಗಿದೆ. ಕರಂದಾಡಿ ಶ್ರೀ ರಾಮ ಹಿ. ಪ್ರಾ. ಶಾಲೆಯಲ್ಲಿ ದಾನಿಗಳ ಸಹಕಾರದೊಂದಿಗೆ ವಿದ್ಯಾರ್ಥಿಗಳನ್ನು ಸೆಳೆಯುವಲ್ಲಿ ಆರಂಭಿಸಲಾಗಿರುವ ಆವರ್ತ ಠೇವಣಿ ಸಹಿತವಾದ ವಿವಿಧ ಸೌಲಭ್ಯಗಳನ್ನು ಜೋಡಿಸಿರುವುದು ಜಿಲ್ಲೆ ಮತ್ತು ರಾಜ್ಯಕ್ಕೆ ಮಾದರಿಯಾಗುವ ಕಾರ್ಯಕ್ರಮವಾಗಿದೆ ಗುರ್ಮೆ ಫೌಂಡೇಶನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ ಹೇಳಿದರು. ಆಗಸ್ಟ್ 6ರಂದು ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧರಣಿ ಸಮಾಜ ಸೇವಾ ಸಂಘ ಕಾಪು ಇವರ ವತಿಯಿಂದ ಆಯೋಜಿಸಲಾದ ಸಮವಸ್ತ್ರ ವಿತರಣೆ ಮತ್ತು ಸಾಧಕರಿಗೆ ಸಮ್ಮಾನ ಮತ್ತು ದಾನಿಗಳ ಸಹಕಾರದೊಂದಿಗೆ ಆವರ್ತ ಠೇವಣಿ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪದವಿಗಾಗಿ ಓದು, ಉದ್ಯೋಗಕ್ಕಾಗಿ ಪದವಿ ಎಂಬ ಸಂದಿಗ್ಧಮಯವಾದ ಜೀವನ ಕ್ರಮದಲ್ಲಿ ಮುಳುಗಿರುವ ಇಂದಿನ ಯುವಜನತೆ ನಾವು ಯಾಕೆ ಬದುಕ ಬೇಕು, ಹೇಗೆ ಬದುಕಬೇಕು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕಿದೆ. ಚಿಂತನಾಶೀಲ, ಪ್ರಯತ್ನಶೀಲ ಬದುಕಿಗೆ ಲೀಲಾಧರ ಶೆಟ್ಟಿ ಮಾದರಿಯಾಗಿದ್ದು ಅವರ ಸೇವಾ ಗುಣಗಳು ನಮಗೆಲ್ಲರಿಗೂ ಆದರ್ಶಮಯವಾಗಿದೆ ಎಂದರು. ಸಮ್ಮಾನ ಸ್ವೀಕರಿಸಿದ ಕನ್ನಡ, ತುಳು ಚಿತ್ರನಟ ಪೃಥ್ವಿ ಅಂಬರ್ ಮಾತನಾಡಿ, ಇದೊಂದು ಅತ್ಯಪೂರ್ವ ಕಾರ್ಯಕ್ರಮವಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ಎಲ್ಲೆಡೆ ಸಿಗುವ ಸಮ್ಮಾನ, ಗೌರವಕ್ಕಿಂತ ಹುಟ್ಟೂರಿನಲ್ಲಿ ಸಿಗುವ ಗೌರವಕ್ಕೆ ಹೆಚ್ಚಿನ ಮಹತ್ವವಿದೆ. ಕರಂದಾಡಿ ಶ್ರೀ ರಾಮ ಹಿ.ಪ್ರಾ. ಶಾಲೆಯು ವರ್ಷದಿಂದ ವರ್ಷಕ್ಕೆ ಎತ್ತರಕ್ಕೆ ಬೆಳೆಯುತ್ತಿದ್ದು ಶಾಲೆಯ ಬೆಳವಣಿಗೆಯಲ್ಲಿ ಎಲ್ಲರೂ ಕೈಜೋಡಿಸುವ ಅಗತ್ಯತೆಯಿದೆ ಎಂದರು. ಕಾಪು ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷ ಲೀಲಾಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಮಜೂರು ಗ್ರಾ. ಪಂ. ಅಧ್ಯಕ್ಷೆ ಶರ್ಮಿಳಾ ಜೆ. ಆಚಾರ್ಯ, ಪತ್ರಕರ್ತ ರಾಕೇಶ್ ಕುಂಜೂರು, ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಕಾಪು ಶಾಖಾ ಪ್ರಬಂಧಕಿ ಪ್ರಜ್ಞಾ ಜಗದೀಶ್ ಭಂಡಾರಿ, ಪಂಜಿತ್ತೂರುಗುತ್ತು ವೆಲ್ಪೇರ್ ಟ್ರಸ್ಟ್ ಅಧ್ಯಕ್ಷ ರವಿರಾಜ ಶೆಟ್ಟಿ ಪಂಜಿತ್ತೂರುಗುತ್ತು, ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಮಂಜಿತ್ತಾಯ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಪದ್ಮನಾಭ ಶಾನುಭೋಗ್, ಆಡಳಿತ ಮಂಡಳಿ ಸದಸ್ಯ ಶಶಿಶೇಖರ ಭಟ್, ಮುಖ್ಯೋಪಾಧ್ಯಾಯ ಆರ್.ಎಸ್. ಕಲ್ಲೂರ ಮೊದಲಾದವರು ಉಪಸ್ಥಿತರಿದ್ದರು. ಸಮವಸ್ತ್ರ ವಿತರಣೆ, ಆವರ್ತ ಠೇವಣಾತಿ ಉದ್ಘಾಟನೆ : ಧರಣಿ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. 2021ನೇ ಸಾಲಿನಲ್ಲಿ ಪ್ರವೇಶಾತಿ ಪಡೆದಿದ್ದ 28 ವಿದ್ಯಾರ್ಥಿಗಳಿಗೆ ಆವರ್ತ ಠೇವಣಾತಿ ನೀಡಲಾಗಿದ್ದು, 2022ನೇ ಸಾಲಿನಲ್ಲಿ 29 ವಿದ್ಯಾರ್ಥಿಗಳಿಗೆ ಆವರ್ತ ನಿಽಯ ಠೇವಣಾತಿಯನ್ನು ಹಸ್ತಾಂತರಿಸಲಾಯಿತು. ಪೋಸ್ಟ್ ಮಾಸ್ಟರ್ ಮಲ್ಲಪ್ಪ ಮದರಿ ಅವರನ್ನು ಸನ್ಮಾನಿಸಲಾಯಿತು. ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್ ಕುಮಾರ್ ಹೆಗ್ಡೆ ಪ್ರಸ್ತಾವನೆಗೈದರು. ದೈಹಿಕ ಶಿಕ್ಷಕ ಎಸ್. ಪ್ರಕಾಶ್ ಸ್ವಾಗತಿಸಿದರು. ಶಿಕ್ಷಕಿ ಸತ್ಯವತಿ ಕಾರ್ಯಕ್ರಮ ನಿರೂಪಿಸಿ, ಲವಿನಾ ಡಿ ಸೋಜ ವಂದಿಸಿದರು.
ಪಡುಬಿದ್ರಿ : ಶ್ರೀಸತ್ಯದೇವಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಕಂಚಿನಡ್ಕ- ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ
Posted On: 07 Aug 2022, 09:05 PM
ಪಡುಬಿದ್ರಿ : ಶ್ರೀಸತ್ಯದೇವಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಕಂಚಿನಡ್ಕ- ಪಡುಬಿದ್ರಿ ಇಲ್ಲಿಯ 2022-23ನೇ ಸಾಲಿನ ನೂತನ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗುರುಸ್ವಾಮಿಗಳಾದ ಕೃಷ್ಣ ಸಾಲ್ಯಾನ್, ಗುಣಕರ ಕೇರಿ ಮಾರ್ಗದರ್ಶನದಲ್ಲಿ ಗೌರವಾಧ್ಯಕ್ಷರಾಗಿ ಮೊನಪ್ಪ, ಮಾಧವ. ಅಧ್ಯಕ್ಷರಾಗಿ ಶಿವಪ್ಪ ಕಂಚಿನಡ್ಕ, ಉಪಾಧ್ಯಕ್ಷರಾಗಿ ಸಂಜೀವ ಕೇರಿ, ಶಂಕರ್, ರಮೇಶ್ ಜಿ.ಕೆ, ಪ್ರಭಾಕರ, ಗಣೇಶ್ ಪ್ರಸಾದ್. ಪ್ರಧಾನ ಕಾರ್ಯದರ್ಶಿ ಸಂತೋಷ್ ನಂಬಿಯಾರ್, ಕೋಶಾಧಿಕಾರಿಯಾಗಿ ಪವನ್ ಪಾದೆಬೆಟ್ಟು, ಸಂದೀಪ್ ಕೋಟ್ಯಾನ್. ಗೌರವ ಸಲಹೆಗಾರರಾಗಿ ಈಶ್ವರ, ಸುರೇಶ್, ಸುಂದರ್, ಕಿರಣ್ ಶೆಟ್ಟಿ. ಮಹಿಳಾ ಸಮಿತಿಯ ಪ್ರಮುಖರಾಗಿ ಸವಿತಾ ಶಿವಪ್ಪ ಆಯ್ಕೆಯಾಗಿದ್ದಾರೆ.
ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ
Posted On: 07 Aug 2022, 04:23 PM
ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಕಾಪು ಒಕ್ಕೂಟದ ವತಿಯಿಂದ ಆದಿತ್ಯವಾರ ಬೆಳಿಗ್ಗೆ ಮಹಾದೇವಿ ಪ್ರೌಢಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ರಮಾಶೆಟ್ಟಿ, ಕಾಪು ವಲಯದ ಮೇಲ್ವಿಚಾರಕರಾದ ಮಮತಾ, ಪುರಸಭಾ ಮಾಜಿ ಅಧ್ಯಕ್ಷರಾದ ಅನಿಲ್ ಕುಮಾರ್, ಒಕ್ಕೂಟದ ಸೇವಾ ಪ್ರತಿನಿಧಿ ಪ್ರೇಮ ಆರ್ ಕೋಟ್ಯಾನ್, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗು ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಜ್ಯೋತಿ ಉಪಸ್ಥಿತರಿದ್ದರು.
ಕಳತ್ತೂರು ಕುಲಾಲ ಒಕ್ಕೂಟ : ಸನ್ಮಾನ
Posted On: 07 Aug 2022, 02:36 PM
ಕಾಪು : ಕುಲಾಲ ಬಾಂಧವರು ಕಳತ್ತೂರು ಒಕ್ಕೂಟ ಇದರ ವತಿಯಿಂದ ರವಿವಾರ ತಿಂಗಳ ಮಾಸಿಕ ಸಭೆಯಲ್ಲಿ ಊರಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು. ಪ್ರತಿಭಾವಂತ ವಿದ್ಯಾರ್ಥಿಗಳಾದ ಶರಣ್ ಕುಲಾಲ್, ರವಿತೇಜ್ ಕುಲಾಲ್, ವೀಕ್ಷಾ ಕುಲಾಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸುಂದರ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು. ಕಾಂಚನ ಕುಲಾಲ್ ಪ್ರಾರ್ಥಿಸಿ, ಸಂತೋಷ್ ಕುಲಾಲ್ ಮಲಂಗೋಲಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
