Updated News From Kaup
ಇನ್ನಂಜೆ - ಮಂಡೇಡಿ ಕೆ. ಸದಾನಂದ ಶೆಟ್ಟಿ ಯವರಿಗೆ ಸನ್ಮಾನ
Posted On: 16 Aug 2022, 05:18 PM
ಕಾಪು : ಮಂಡೇಡಿ ಶ್ರೀದೇವಿ ಭಜನಾಮಂಡಳಿ ಹಾಗೂ ಮಂಡೇಡಿ ಅಂಗನವಾಡಿಯ ಜಂಟಿ ಆಶ್ರಯದಲ್ಲಿ ನಡೆದ 75 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಕೆ. ಸದಾನಂದ ಶೆಟ್ಟಿ ಯವರು ಧ್ವಜಾರೋಹಣ ಮಾಡುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಡೇಡಿ ಶ್ರೀದೇವಿ ಭಜನಾಮಂಡಳಿ ಹಾಗೂ ಗ್ರಾಮಸ್ಥರ ಪರವಾಗಿ ಕೆ ಸದಾನಂದ ಶೆಟ್ಟಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಮಾಜಿಗವರ್ನರ್ ವಿ. ಜಿ. ಶೆಟ್ಟಿ ಮಾತನಾಡಿ ಸದಾನಂದ ಶೆಟ್ಟಿ ಯವರು ಗ್ರಾಮದ ಎಲ್ಲಾ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಊರಿನ ಜನರಿಗೆ ಮಾರ್ಗದರ್ಶಕರಾಗಿದ್ದರು. ಇವರನ್ನು ಸನ್ಮಾನಿಸಲು ಸಿಕ್ಕ ಅವಕಾಶ ನಮ್ಮೆಲ್ಲರ ಭಾಗ್ಯವೆಂದು ಅವರಗುಣಗಾನ ಮಾಡಿದರು. ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಸುರೇಶ ಶೆಟ್ಟಿ, ಇನ್ನಂಜೆ ಸಿ. ಎ ಬ್ಯಾಂಕ್ ನ ಉಪಾಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಉಡುಪಿ ಮಿಡ್ ಟೌನ್ ಲಯನ್ಸ್ ಅಧ್ಯಕ್ಷೆ ವೀಣಾ ಜೀವನ್ ಶೆಟ್ಟಿ, ಇನ್ನಂಜೆ ರೋಟರಿ ಸಮುದಾಯದಳದ ಅಧ್ಯಕ್ಷ ಪ್ರಶಾಂತ ಶೆಟ್ಟಿ ಹಾಗೂ ಭಜನಾಮಂಡಳಿಯ ಪದಾಧಿಕಾರಿಗಳು, ಸರ್ವಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಭಜನಾಮಂಡಳಿಯ ಅಧ್ಯಕ್ಷರಾದ ಲಕ್ಷ್ಮಣ ಕೆ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿದರು. ಅಂಗನವಾಡಿ ಕಾರ್ಯಕರ್ತೆ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಆಗಸ್ಟ್ 19 : ಜೆಸಿಐ ಕಾಪುವಿನಿಂದ ಮುದ್ದು ಕೃಷ್ಣ ವೇಷ ಸ್ಪರ್ಧೆ
Posted On: 16 Aug 2022, 05:12 PM
ಕಾಪು : ಜೆಸಿಐ ಕಾಪು ವಲಯದಿಂದ ಜೆಸಿ ಜಗದೀಶ್ ಆಚಾರ್ಯ ಇವರ ಸ್ಮರಣಾರ್ಥ ಕಾಪು ಜಯಲಕ್ಷ್ಮೀ ಜ್ಯುವೆಲ್ಲಸ್೯ ಪ್ರಾಯೋಜಕತ್ವದಲ್ಲಿ 3 ವರ್ಷಕ್ಕಿಂತ ಕೆಳಗಿನ, ಅಂಗನವಾಡಿ ಮತ್ತು ಎಲ್ ಕೆ ಜಿ, ಯು ಕೆ ಜಿ, 1 ನೇ ಮತ್ತು 2 ನೇ ತರಗತಿಯ ಮಕ್ಕಳಿಗಾಗಿ ಆಗಸ್ಟ್ 19 ರಂದು ಕಾಪುವಿನ ಲಕ್ಷ್ಮೀ ಜನಾರ್ದನ ಸಭಾಂಗಣದಲ್ಲಿ ಬೆಳಗ್ಗೆ 9.30 ಕ್ಕೆ ಮುದ್ದು ಕೃಷ್ಣ ವೇಷ ಸ್ಪರ್ಧೆ ಜರಗಲಿದೆ. ಪ್ರತೀ ಸ್ಪರ್ಧೆಗೆ ವೇದಿಕೆಯಲ್ಲಿ ಒಂದು ನಿಮಿಷ ಅವಕಾಶ, ವೇಷ ಮತ್ತು ಭಾವಾಭಿನಯನಕ್ಕೆ ಪ್ರಾಧಾನ್ಯತೆ, ಹಿನ್ನಲೆ ಪರಿಕರಗಳನ್ನು ಅಗತ್ಯವಿದ್ದಲ್ಲಿ ಬಳಸಬಹುದು (ಅಂಕದ ಪ್ರಾಧಾನ್ಯತೆಯಿರುವುದಿಲ್ಲ), ಸ್ಪರ್ಧಾಳು ಮಕ್ಕಳ ಹೆಸರನ್ನು ಒಂದು ದಿನ ಮುಂಚಿತವಾಗಿ ಸಂಘಟಕರಲ್ಲಿ ನೋಂದಾಯಿಸ ತಕ್ಕದ್ದು, ವಿಜೇತರಿಗೆ ಅಂದೇ ಬಹುಮಾನಗಳನ್ನು ನೀಡಲಾಗುವುದು, ಸಂಘಟಕರ ತೀರ್ಮಾನವೇ ಅಂತಿಮ ಎಂದು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಶಿರ್ವ : ವಿಶ್ವ ಹಿಂದೂ ಪರಿಷತ್ ಭಜರಂಗದಳ - ಅಖಂಡ ಭಾರತ ಸಂಕಲ್ಪ ಹಾಗೂ ಪಂಜಿನ ಮೆರವಣಿಗೆ
Posted On: 16 Aug 2022, 04:26 PM
ಶಿರ್ವ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಶಿರ್ವ ವಲಯದ ನೇತೃತ್ವದಲ್ಲಿ ಅಖಂಡ ಭಾರತ ಸಂಕಲ್ಪ ಹಾಗೂ ಪಂಜಿನ ಮೆರವಣಿಗೆಯು ಆಗಸ್ಟ್ 14ರಂದು ಶಿರ್ವದಲ್ಲಿ ನಡೆಯಿತು. ದಕ್ಷಿಣ ಪ್ರಾಂತ್ಯದ ಮಾತೃ ಶಕ್ತಿ ಸಹ ಸಂಯೋಜಕಿ ಸುರೇಖಾರಾಜ್ ದಿಕ್ಸೂಚಿ ಭಾಷಣ ಮಾಡಿದರು. ಸಭೆಯ ಅಧ್ಯಕ್ಷತೆಯನ್ನು ಶಿರ್ವ ವಲಯದ ಅಧ್ಯಕ್ಷರಾದ ವಿಖ್ಯಾತ ಭಟ್ ವಹಿಸಿದ್ದರು ಈ ಸಂದರ್ಭದಲ್ಲಿ ಜಿಲ್ಲಾ ಸೇವಾಪ್ರಮುಖ್ ದೀಪಕ್ ಮೂಡುಬೆಳ್ಳೆ, ಮಠಮಂದಿರ ಸಂಪರ್ಕ್ ಕುಶಲ ಪೆರ್ಡೂರು, ಕಾಪು ಪ್ರಖಂಡ ಅಧ್ಯಕ್ಷ ಜಯಪ್ರಕಾಶ್ ಪ್ರಭು, ಪ್ರಖಂಡ ಕಾರ್ಯದರ್ಶಿ ರಾಜೇಂದ್ರ ಶಣೈ, ಪ್ರಖಂಡ ಸುರಕ್ಷಾ ಪ್ರಮುಖ್ ಆನಂದ್ ಶಿರ್ವ, ಶಿರ್ವ ವಲಯ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್, ವಲಯ ಭಜರಂಗದಳ ಸಹ ಸಂಚಾಲಕ್ ನೀರಜ ಪೂಜಾರಿ, ಎಲ್ಲಾ ಘಟಕಾಧ್ಯಕ್ಷರು ಹಾಗೂ ಮಾತೃಶಕ್ತಿ ಸಂಯೋಜಕಿಯರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಮೆಂಡನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕಾಂತ್ ನಾಯಕ್ ವಂದಿಸಿದರು.
ಯುವ ವಿಚಾರ ವೇದಿಕೆ : ಸ್ವಾತಂತ್ರ್ಯ ಅಮೃತೊತ್ಸವ ದ್ವಜಾರೋಹಣ ಹಾಗೂ ಮನೋರಂಜನಾ ಗ್ರಾಮೀಣ ಕ್ರೀಡಾಕೂಟ
Posted On: 16 Aug 2022, 07:12 AM
ಉಡುಪಿ : ಯುವ ವಿಚಾರ ವೇದಿಕೆ (ರಿ.) ಕೊಳಲಗಿರಿ ಉಪ್ಪೂರು ಇವರ ವತಿಯಿಂದ, ನಮ್ಮ ದೇಶ ಸ್ವತಂತ್ರ ಪಡೆದು 75 ಸಂವತ್ಸರ ಪೂರೈಸಿರುವ ಶುಭ ಸಂದರ್ಭದ "ಅಮೃತೋತ್ಸವ" ಕಾರ್ಯಕ್ರಮದನ್ವಯ ಸ್ವಾತಂತ್ರದ ಮುನ್ನಾ ದಿನ ಸಾರ್ವಜನಿಕರಿಗೆ ವಾಲಿಬಾಲ್ , ತ್ರೋಬಾಲ್, ಹಾಗೂ ಇನ್ನಿತರ ಗ್ರಾಮೀಣ ಮನೋರಂಜನಾ ಕ್ರೀಡಾ ಸ್ಪರ್ಧಾ ಕಾರ್ಯಕ್ರಮ, ಮಕ್ಕಳಿಗೆ, ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ನಡೆಸಲಾಗಿತ್ತು. ಆಗಸ್ಟ್ 15ರಂದು ಅಮೃತೋತ್ಸವ ದ್ವಜಾರೋಹಣದ ನಂತರ ಸಭಾ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಧ್ವಜಾರೋಹಣವನ್ನು ಉಪ್ಪೂರು ಗ್ರಾಮದ 20 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಊರಿನ ಹೆಮ್ಮೆಯ ವೀರ ಯೋಧ ರಮೇಶ್ ಪೂಜಾರಿ ತೆಂಕಬೆಟ್ಟು ಇವರು ನೆರವೇರಿಸಿದರು. ಕ್ರೀಡಾ ಸ್ಪರ್ಧಾ ಕಾರ್ಯಕ್ರಮವನ್ನು ಲಗೋರಿ ಪಲ್ಲೆಗೆ ಬಾಲ್ ಎಸೆಯುವುದರ ಮೂಲಕ ಯುವ ಉದ್ಯಮಿ ಆಗಿರುವ ಸಂದೀಪ್ ನಾಯಕ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾದ ಮಹೇಶ್ ಕೋಟ್ಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇನಾಯತ್ ಉಲ್ಲಾ ಬೇಗ್, ಪಂಚಾಯತ್ ಸದಸ್ಯರಾದ ಅಶ್ವಿನ್ ರೋಚ್, ಸತೀಶ್ ಪೂಜಾರಿ, ದೇಹ ದಾನಿ ಸಮಾಜ ಸೇವಕ ಹಿತೈಷಿ ರಮೇಶ್ ಕರ್ಕೇರಾ, ಸ್ಥಳೀಯರು ನಿರ್ವತ್ತ ಬ್ಯಾಂಕ್ ಉದ್ಯೋಗಿ ಪ್ರಭಾಕರ್ ನಾಯಕ್, ಮುಂಬೈ ಯುವ ಉದ್ಯಮಿ ಮೈಕಲ್, ವೇದಿಕೆಯ ಹಿರಿಯರಾದ ಮಾಧವ ಪಾಣ, ಮುಖ್ಯ ತೀರ್ಪುಗಾರರಾಗಿ ಆಗಮಿಸಿದ ನಾಗೇಶ್, ಉಪ್ಪೂರು ವ್ಯ.ಸೆ.ಸ.ಸಂಘ ಇದರ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಸಂದೀಪ್ ಶೆಟ್ಟಿ ಹಾಗೂ ವೇದಿಕೆಯ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಉಪಸ್ಥಿತರಿದ್ದರು. ಸ್ಪರ್ಧಾ ಕಾರ್ಯಕ್ರಮದಲ್ಲಿ ಸ್ಥಳೀಯ 8 ವಾಲಿಬಾಲ್ ಹಾಗೂ ಮಹಿಳೆಯರ ತ್ರೋಬಾಲ್ ತಂಡಗಳು ಸಾರ್ವಜನಿಕರು , ಶಾಲಾ ಮಕ್ಕಳು ವೇದಿಕೆಯ ಸದಸ್ಯರು ಭಾಗವಹಿಸಿದ್ದರು. ಕೊಳಲಗಿರಿಯ ಪುಷ್ಪಲತಾ ಸಸ್ಯಾಲಯದವರು ನೀಡಿದ ಸಸ್ಯಗಳನ್ನು ಅತಿಥಿ ಗಣ್ಯರಿಗೆ ಸ್ಮರಣಿಕೆಯಾಗಿ ನೀಡಲಾಯಿತು. ಅಧ್ಯಕ್ಷರಾದ ದಿನೇಶ್ ಶೆಟ್ಟಿ ಸ್ವಾಗತಿಸಿದರು, ಕು. ಕಾವ್ಯ ಸ್ಪರ್ಧಿಗಳ ಪಟ್ಟಿಯನ್ನು ವಾಚಿಸಿ, ಸದಾಶಿವ ಕುಮಾರ್, ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಯೋಗೀಶ್ ಕೊಳಲಗಿರಿ ವಂದಿಸಿದರು.
ಶ್ರೀ ದುರ್ಗಾಪರಮೇಶ್ವರಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಅಗ್ರಹಾರ ಕಟಪಾಡಿ : ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ
Posted On: 15 Aug 2022, 11:22 PM
ಕಟಪಾಡಿ : ಶ್ರೀ ದುರ್ಗಾಪರಮೇಶ್ವರಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಅಗ್ರಹಾರ ಕಟಪಾಡಿ ಇಲ್ಲಿ 75ನೇ ವರ್ಷದ ಸ್ವಾತಂತ್ರದ ಅಮೃತ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೈ ಭರತ್ ಹೆಗ್ಡೆ ಹಾಗೂ ಶಾಲಾ ಸಂಚಾಲಕರಾದ ರಂಜನ್ ಹೆಗ್ಡೆ ನೆರವೇರಿಸಿದರು. 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ಚಿತ್ರಕಲಾ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ಈ ಸಂಧರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸರೋಜಿನಿ, ತಾಲೂಕು ಪಂಚಾಯತ್ ಸದಸ್ಯರಾದ ನಾಗೇಶ್, ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕದ ಅಧ್ಯಕ್ಷರಾದ ದಿಲೀಪ್, ಕೋಶಾಧಿಕಾರಿ ಅರ್ಜುನ್,ಸದಸ್ಯರಾದ ಸಂತೋಷ್ ಪೂಜಾರಿ, ರಮೇಶ್, ಗಿರಿಧರ್, ಕರುಣಾಕರ್ ಶೆಟ್ಟಿ,ಸಂತೋಷ್.ಎನ್. ಎಸ್. ಕಟಪಾಡಿ, ದೀಪಕ್ ದುರ್ಗಾನಗರ, ಅಂಗನವಾಡಿ ಶಿಕ್ಷಕಿಯರಾದ ಸುಮ, ಸಹಾಯಕಿಯರಾದ ಮೋಹಿನಿ ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು. ಶಿಕ್ಷಕಿ ತಿಲಕ ಸ್ವಾಗತಿಸಿದರು. ಶಿಕ್ಷಕಿ ಜಯಂತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು : ಧ್ವಜಾರೋಹಣ ; 75 ಔಷಧೀಯ ಸಸ್ಯಗಳನ್ನು ನೆಟ್ಟ ವಿದ್ಯಾರ್ಥಿಗಳು
Posted On: 15 Aug 2022, 10:54 PM
ಕಾಪು : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ರಾಂಶುಪಾಲರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶಕ್ಕಾಗಿ ನಾವು ಎಂಬ ಧ್ಯೇಯ ಸಾರಿದರು. ಅಮೃತ ಮಹೋತ್ಸವ ಅಂಗವಾಗಿ 75 ಔಷಧೀಯ ಸಸ್ಯಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ
Posted On: 15 Aug 2022, 08:19 PM
ಉಡುಪಿ : ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿ, ಕುಮಾರ ಕೃಪದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರು ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು ಸ್ವಾತಂತ್ರ್ಯ ಸಿಕ್ಕಿ ನಮಗೆ 75 ವರ್ಷ ಆಯ್ತು ಅನೇಕ ಮಹನೀಯರು, ಹಿರಿಯರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ಕಳೆದುಕೊಂಡಿದ್ದಾರೆ. ನಾವು ವಿಮರ್ಶೆ ಮಾಡಿ ನೋಡಬೇಕಾಗುತ್ತದೆ. ಇನ್ನು 25 ವರ್ಷಗಳಲ್ಲಿ ಶತಮಾನೋತ್ಸವ ಸಂಭ್ರಮ ಬರುತ್ತದೆ. ನಾವೆಲ್ಲರೂ ಜಾತಿ, ಧರ್ಮ, ಪಕ್ಷ, ಮರೆತು ಭಾರತೀಯರು ಎಂಬ ರೀತಿಯಲ್ಲಿ ಒಗ್ಗಟ್ಟಾಗಿ ದೇಶದ ಬಗ್ಗೆ, ನಮ್ಮ ಊರಿನ ಬಗ್ಗೆ ಬೆಳವಣಿಗೆಯ ಬಗ್ಗೆ ಆಲೋಚನೆ ಮಾಡಬೇಕು. ರೋಟಿ, ಕಪಡ, ಮಖಾನ್, ಆರೋಗ್ಯ,ಶಿಕ್ಷಣ, ಎಲ್ಲ ಶ್ರೀಸಾಮಾನ್ಯರಿಗೆ ಸಿಕ್ಕಿದರೆ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಸಿಗುತ್ತದೆ . ಬಡತನ, ಭ್ರಷ್ಟಾಚಾರ ಭಯೋತ್ಪಾದನೆ ನಿರ್ಮೂಲನೇ ಆಗಿ ನಿಜವಾದ ಸ್ವಾತಂತ್ರ್ಯ ಜನಸಾಮಾನ್ಯರಿಗೆ ಸಿಗಲಿ ಎಂದು ಹಾರೈಸುತ್ತಾ ಶುಭಾಶಯಗಳು ಕೋರಿದರು. ಈ ಸಂದರ್ಭ ಪಕ್ಷ ನಾಯಕರುಗಳಾದ ವಾಸುದೇವ ರಾವ್, ಜಯಕುಮಾರ್ ಪರ್ಕಳ, ಜಯರಾಮ ಆಚಾರ್ಯ, ಗಂಗಾಧರ ಬಿರ್ತಿ, ಶಾಲಿನಿ ಬಿ ಶೆಟ್ಟಿ ಕೆಂಚನೂರು, ಮನ್ಸೂರ್ ಇಬ್ರಾಹಿಂ, ಸಂಕಪ್ಪ. ಎ, ಚಂದ್ರಹಾಸ್ ಎರ್ಮಾಳ್ ,ಉಮೇಶ್ ಕರ್ಕೇರ, ಸಂಜಯ್ ಕುಮಾರ್, ಇಕ್ಬಾಲ್ ಅತ್ರಾಡಿ, ಭರತ್ ಕುಮಾರ್ ಶೆಟ್ಟಿ, ಬಾಲಕೃಷ್ಣ ಆಚಾರ್ಯ, ಹುಸೇನ್ ಹೈಕಾಡಿ, ಎಂ ಎ ಬಾವು ಮೂಳೂರು, ಬಿ.ಕೆ ಮೊಹಮ್ಮದ್, ರಾಮರಾವ್, ರಝಕ್ ಉಚ್ಚಿಲ, ರಂಗ ಎನ್ ಕೋಟ್ಯಾನ್, ಸರ್ಫಾಜ್ ಮಲ್ಲಾರು, ಹರೀಶ್ ಶೆಟ್ಟಿ, ರಶೀದ್ ಸರ್ಕಾರಿಗುಡ್ಡೆ, ಸನಾ, ಪದ್ಮನಾಭ ಆರ್ ಕೋಟ್ಯಾನ್, ಸನವರ್ ಕಲೀಮ್, ಪೈಸೆಲ್ ಅಲೆವೂರು, ಅನೇಕ ಪಕ್ಷ ಕಾರ್ಯಕರ್ತರು ಉಪಸ್ಥಿತರಿದ್ದರು.
ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಶಿರ್ವ : ವಸತಿನಿಲಯ ಭೇಟಿ
Posted On: 15 Aug 2022, 07:52 PM
ಶಿರ್ವ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಕಾರವಾರ ಇದರ ಶಿರ್ವ ಶಾಖೆಯ ವತಿಯಿಂದ ಶಿರ್ವ ಆಕ್ಸಿಲಿಯಮ್ ವಸತಿ ನಿಲಯದ ಮಕ್ಕಳಿಗೆ ಸೋಲಾಪುರ ಚಾದರ್ ಮತ್ತು ಸಿಹಿತಿಂಡಿ ವಿತರಿಸಲಾಯಿತು. ಈ ಸಂದರ್ಭ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ| ರೊಲ್ವಿನ್ ಅರನ್ನಾ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ ಆರ್ ಪಾಟ್ಕರ್ ಮತ್ತು ಸ್ಥಳೀಯ ಸಮಾಜದ ಮುಂದಾಳುಗಳಾದ ಜೆರಾಲ್ಡ್ ರೊಡ್ರಿಗಸ್, ಫ್ಲಾವಿಯ ಡಿಸೋಜ, ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಕಳ : ಸ್ವದೇಶಿ ಭಾವ ಯುವ ಜನತೆಯಲ್ಲಿ ಜಾಗೃತಿಗೊಳ್ಳಲಿ - ನಿವೃತ್ತ ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್
Posted On: 15 Aug 2022, 06:50 PM
ಕಾರ್ಕಳ : ದೇಶದ ಇತಿಹಾಸವನ್ನು ಅರಿಯದೇ ಇದ್ದಲ್ಲಿ ಇತಿಹಾಸವನ್ನು ಸೃಜಿಸಲು ಅಸಾಧ್ಯ. ಹಿಂದೆ ಆದ ಐತಿಹಾಸಿಕ ದುರ್ಘಟನೆಗಳಿಂದ ಪಾಠ ಕಲಿತು ಸಂಪೂರ್ಣ ಸ್ವದೇಶಿ ಭಾವ ಭಾರತದ ಯುವಕ-ಯುವತಿಯರಲ್ಲಿ ಜಾಗೃತಗೊಂಡು ದೇಶ ಸೇವೆಯೇ ಗುರಿಯಾಗಿರಲಿ ಎಂದು ನಿವೃತ್ತ ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು. ವಿಶ್ವದ ಬಲಾಢ್ಯ ರಾಷ್ಟ್ರಗಳ ಸಾಲಿನಲ್ಲಿ ಭಾರತವು ಕಂಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರವು ಭೌಗೋಳಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಉನ್ನತಿ ಪಡೆಯಲಿ ಅದಕ್ಕೆ ಇಂದಿನ ಯುವ ಸಮೂಹವೇ ಮುಂದಾಳತ್ವ ವಹಿಸಲಿ ಎಂದು ಹಾರೈಸಿದರು. ಈ ವಿಜೃಂಭಣೆಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್, ಗಣನಾಥ ಶೆಟ್ಟಿ, ಅಮೃತ್ ರೈ, ಆದರ್ಶ ಎಂ ಕೆ, ಅಶ್ವಥ್ ಎಸ್ ಎಲ್, ವಿಮಲ್ ರಾಜ್, ಗಣಪತಿ ಭಟ್ ಕೆ ಎಸ್ ಹಾಗೂ ವಿದ್ಯಾಸಂಸ್ಥೆಯ ಉಪನ್ಯಾಸಕ ವೃಂದದವರು, ಉಪನ್ಯಾಸಕೇತರ ಬಳಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕರಾದ ರಾಜೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಪ್ರಸಿದ್ಧ ಹಿನ್ನಲೆ ಗಾಯಕಿ ನಿನಾದ ನಾಯಕ್ ಮತ್ತು ತಂಡದವರಿಂದ ದೇಶಭಕ್ತಿಯನ್ನು ಬಿಂಬಿಸುವ ಸದಭಿರುಚಿಯ “ಕ್ರಿಯೇಟಿವ್ ಸವಿಗಾನ” ಸಂಗೀತ ಕಾರ್ಯಕ್ರಮ ನೆರವೇರಿತು.
ಪಡುಬಿದ್ರಿ : ಗ್ರಾಮೀಣ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನೂತನ ಧ್ವಜಸ್ತಂಭ ಉದ್ಘಾಟನಾ ಕಾರ್ಯಕ್ರಮ ; ಧ್ವಜಾರೋಹಣ
Posted On: 15 Aug 2022, 06:24 PM
ಪಡುಬಿದ್ರಿ : ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ನಿಟ್ಟಿನಲ್ಲಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನೂತನವಾಗಿ ಪಡುಬಿದ್ರಿ ಹೃದಯಭಾಗದಲ್ಲಿ ಧ್ವಜಸ್ತಂಭ ಉದ್ಘಾಟನಾ ಕಾರ್ಯಕ್ರಮ ಹಾಗೂ 76ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಜರಗಿತು. ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ವಿನಯ್ ಕುಮಾರ್ ಸೊರಕೆ ಅವರು ಧ್ವಜಸ್ತಂಭವನ್ನು ಉದ್ಘಾಟಿಸಿ ಹಾಗೂ ಧ್ವಜಾರೋಹಣವನ್ನು ನೆರವೇರಿಸಿ ನಾಡಿನ ಸಮಸ್ತ ಜನತೆಗೆ ಶುಭ ಹಾರೈಸಿದರು. ಶಾಂತಿ ಸಹಬಾಳ್ವೆ ಬದುಕಬೇಕೆಂದು ಈ ಸಂದರ್ಭದಲ್ಲಿ ಹೇಳಿದರು. ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಕಾಂಗ್ರೆಸ್ಸಿನ ಅಧ್ಯಕ್ಷರಾದ ಕರುಣಾಕರ್ ಎಂ ಪೂಜಾರಿ, ನವೀನ ಚಂದ್ರ ಜೆ ಶೆಟ್ಟಿ, ನವೀನ್ ಎನ್ ಶೆಟ್ಟಿ, ಹರೀಶ್ ಶೆಟ್ಟಿ ಪಾದೆಬೆಟ್ಟು, ಸಂತೋಷ್ ಶೆಟ್ಟಿ, ಎಂ ಎಸ್ ಶಾಫಿ, ಜ್ಯೋತಿ ಮೆನನ್, ಗಣೇಶ್ ಕೋಟ್ಯಾನ್, ಅಬ್ದುರ್ರಹ್ಮಾನ್ ಕಣ್ಣಂಗಾರ್, ರಮೀಝ್ ಹುಸೇನ್, ಹಸನ್ ಬಾವ, ಅಶೋಕ್ ಸಾಲಿಯಾನ್, ದಿನೇಶ್ ಪಲಿಮಾರ್, ದಿನೇಶ್ ಕಂಚಿನಡ್ಕ, ಬುಡನ್ ಸಾಹೇಬ್, ಎಂ.ಎಸ್ ನಿಜಾಮ್, ಕೀರ್ತಿ ಕುಮಾರ್, ಎಂ ಎಸ್ ಮನ್ಸೂರ್ ಮತ್ತಿತರರು ಉಪಸ್ಥಿತರಿದ್ದರು.
