Updated News From Kaup

ಇಂಡಿಯಾ ಬುಕ್ ಆಫ್ ರೆಕಾಡ್೯ನಲ್ಲಿ ಕಾಪುವಿನ ಶಶಾಂಕ್ ಎಸ್. ಸಾಲಿಯಾನ್ ಕಲಾಕೃತಿ ; 13,940 ಮೊಳೆಗಳಲ್ಲಿ ಮೂಡಿದ ಆನೆ

Posted On: 23-06-2022 08:38PM

ಕಾಪು : ಗ್ರಾಮೀಣ ಪ್ರತಿಭೆಯಾಗಿರುವ ಶಶಾಂಕ್, ಕೇರಳದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಗರ್ಭಿಣಿ ಆನೆಯ ಸಾವಿಗೆ ಮರುಕ ಪಟ್ಟು ಮೊಳೆಗಳ ಜೋಡಣೆಯೊಂದಿಗೆ ಆನೆಯ ಕಲಾಕೃತಿ ರಚಿಸಿದ್ದಾರೆ. ಇದೊಂದು ಅಪೂರ್ವ ಸಾಧನೆಯಾಗಿದ್ದು, ಅವರ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿರುವುದು ಕಾಪುವಿನ ಜನತೆಗೆ ಹೆಮ್ಮೆಯನ್ನುಂಟು ಮಾಡಿದೆ ಎಂದು ಕಲಾ ಪ್ರೋತ್ಸಾಹಕ ಗುರುಚರಣ್ ಪೊಲಿಪು ಹೇಳಿದರು. ಅವರು ಕಾಪುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜೂನ್ 24 : ಕಾಪು ಡಿವಿಷನ್ ಎಸ್ಸೆಸ್ಸೆಫ್ - ಸುಹ್ಬಾ ಕ್ಯಾಂಪ್

Posted On: 22-06-2022 11:14PM

ಕಾಪು : ರಾಜ್ಯ ಎಸ್ಸೆಸ್ಸೆಫ್ ಮಹಾತ್ವಾಕಾಂಕ್ಷೆಯ ಯೋಜನೆಯ ಸನ್ನದ್ಧ ಕಾರ್ಯಕರ್ತರ ಪಡೆಯನ್ನು ಮುಂದಿನ ಪೀಳಿಗೆಗಾಗಿ ಸಕ್ರೀಯ ಕಾರ್ಯಾಚರಣೆಗೆ ಸಿದ್ಧಪಡಿಸುವ ಉದ್ದೇಶದೊಂದಿಗೆ ರಾಜ್ಯ ಕ್ಯೂಡಿ ಉಪಸಮಿತಿ ಅಧೀನದಲ್ಲಿ ಸುಹ್ಬಾ ಕ್ಯಾಂಪ್ ರಾಜ್ಯಾದ್ಯಂತ ನಡೆಯುತ್ತಿರುವ ಅಂಗವಾಗಿ ಎಸ್ಸೆಸ್ಸೆಫ್ ಕಾಪು ಡಿವಿಷನ್ ವತಿಯಿಂದ 2022 ಜೂನ್ 24, ಶುಕ್ರವಾರ ಜೇಸಿಐ ಭವನ ಕಾಪುವಿನಲ್ಲಿ ನಡೆಯಲಿದೆ.

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ನಲ್ಲಿ ಯೋಗ ದಿನಾಚರಣೆ

Posted On: 22-06-2022 06:04PM

ಕಾಪು : ಆನೆಗುಂದಿ ಶ್ರೀ ಸರಸ್ವತಿ ಎಜುಕೇಷನಲ್ ಟ್ರಸ್ಟ್ - ಅಸೆಟ್ ನ ಅಧೀನದಲ್ಲಿರುವ ಆನೆಗುಂದಿ ಸರಸ್ವತಿ ಪೀಠ ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿ : ಮಟ್ಟಾರು ರತ್ನಾಕರ ಹೆಗ್ಡೆ

Posted On: 21-06-2022 09:43PM

ಉಡುಪಿ : ಇಂದಿನ ಯಾಂತ್ರಿಕ ಬದುಕಿನಲ್ಲಿ, ದೇಹಕ್ಕೆ ಸೂಕ್ತ ವ್ಯಾಯಾಮ ದೊರೆಯದೇ, ನಾವುಗಳು ಅನೇಕ ರೋಗಗಳಿಂದ ಬಳಲುತ್ತಿದ್ದು, ದೈನಂದಿನ ಬದುಕಿನಲ್ಲಿ ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗಲಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠ ರಾಜಾಂಗಣದಲ್ಲಿ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ವಿಭಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪರ್ಯಾಯ ಕೃಷ್ಣಾಪುರ ಮಠ ಉಡುಪಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೂನ್ 26 : ಪಡುಬಿದ್ರಿ ಗ್ರಾಮೀಣ ಕಾಂಗ್ರೇಸ್ ವತಿಯಿಂದ ಚಿಂತನ ಮಂಥನ ಸಭೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Posted On: 21-06-2022 08:04PM

ಪಡುಬಿದ್ರಿ : ಗ್ರಾಮೀಣ ಕಾಂಗ್ರೇಸ್ ಸಮಿತಿ, ಪಡುಬಿದ್ರಿ ಇದರ ವತಿಯಿಂದ ಚಿಂತನ ಮಂಥನ ಸಭೆ ಜೂನ್ 26, ಆದಿತ್ಯವಾರದಂದು ಸಂಜೆ 4.30ಕ್ಕೆ ಸಾಯಿ ಆರ್ಕೇಡ್ ಸಭಾಂಗಣ, 3ನೇ ಮಹಡಿ ಮಾರ್ಕೇಟ್ ರಸ್ತೆ, ಪಡುಬಿದ್ರಿ ಇಲ್ಲಿ ಜರಗಲಿದೆ.

ಉಡುಪಿ ಜಿಲ್ಲೆಯಲ್ಲಿ ಸರಕಾರಿ ಅಧಿಕಾರಿಗಳ ಭ್ರಷ್ಟಚಾರ, ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಧರಣಿ ; ಜಿಲ್ಲಾಧಿಕಾರಿಗಳಿಂದ ತನಿಖೆಯ ಭರವಸೆ

Posted On: 21-06-2022 03:36PM

ಉಡುಪಿ : ಜಿಲ್ಲೆಯಲ್ಲಿ ಸರಕಾರಿ ಅಧಿಕಾರಿಗಳ ಭ್ರಷ್ಟಚಾರ ಹಾಗೂ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಉಡುಪಿ ಜಿಲ್ಲೆಯ ಅರ್ ಟಿ ಐ ಸಂಘಟನೆ ಹಾಗೂ ದಲಿತ ಸಂಘರ್ಷ ಸಮಿತಿ ಸಂಘಟನೆ, ಅರ್ ಪಿ ಐ ಪಕ್ಷ , ಕುಂದಾಪುರ ಕನತಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಉಡುಪಿ‌ ಜಿಲ್ಲಾಡಳಿತ ಕಚೇರಿ ಎದುರುಗಡೆ ದಿನ ಪೂರ್ತಿ ಪ್ರತಿಭಟನೆಯನ್ನು ನಡೆಸಿದರು. ಜಿಲ್ಲೆಯಲ್ಲಿ ವಿವಿಧ ಇಲಾಖೆಯಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದು, ಈ ಬಗ್ಗೆ ಹಲವು ದೂರುಗಳನ್ನು ವಿವಿಧ ಸಂಘಟನೆಗಳು ದೂರು ನೀಡಿದರು, ಯಾವುದೇ ಪ್ರಯೋಜನ ಆಗದ ಹಿನ್ನೆಲೆಯಲ್ಲಿ ಸಂಘಟನೆಗಳು ಪ್ರತಿಭಟನೆಗಿಳಿದಿದ್ದರು.

ಜೀವಬೆದರಿಕೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಶ್ರಮಿಸಿದ ಕಾಪು ಠಾಣಾಧಿಕಾರಿ ಮತ್ತು ವೃತ್ತ ನಿರೀಕ್ಷಕರನ್ನು ಅಭಿನಂದಿಸಿದ ಕಾಪು ಬಿಜೆಪಿ ಯುವಮೋರ್ಚಾ

Posted On: 21-06-2022 03:09PM

ಕಾಪು : ಇತ್ತೀಚೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವಬೆದರಿಕೆ ಒಡ್ಡಿದ ಆರೋಪಿಯನ್ನು ಬಂಧಿಸುವಂತೆ ಬಿಜೆಪಿ ಯುವಮೋರ್ಚಾ ಕಾಪು ಮಂಡಲದಿಂದ ಕಾಪು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

ರೈಲ್ವೆ ಮಾರ್ಗದ ವಿದ್ಯುತ್ತೀಕರಣದಿಂದ ವಾರ್ಷಿಕ 300 ಕೋಟಿ ರೂ. ಉಳಿತಾಯ : ಶೋಭಾ ಕರಂದ್ಲಾಜೆ

Posted On: 21-06-2022 02:55PM

ಉಡುಪಿ : ಕೊಂಕಣ ರೈಲ್ವೆಯು ಕರಾವಳಿಯ ಜೀವನಾಡಿಯಾಗಿದ್ದು, ಕರಾವಳಿಯನ್ನು ಉತ್ತರ ಭಾರತದೊಂದಿಗೆ ಜೋಡಿಸುವ ಮಾರ್ಗವಾಗಿದೆ. ಪರಿಸರದ ಹಲವು ಅಡೆತಡೆಗಳನ್ನು ಎದುರಿಸಿ ಆರಂಭಗೊಂಡ ಈ ರೈಲ್ವೆ ಮಾರ್ಗವನ್ನು ಪ್ರಸ್ತುತ ವಿದ್ಯುತ್ತೀಕರಣಗೊಳಿಸಿರುವುದರಿಂದ ವಾರ್ಷಿಕವಾಗಿ 300 ಕೋಟಿ ರೂ. ಉಳಿತಾಯವಾಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಇಂದು, ಕೊಂಕಣ ರೈಲ್ವೆಯ ವಿದ್ಯುತ್ತೀಕರಣ ಯೋಜನೆ ಉದ್ಘಾಟಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವರ್ಚುವಲ್ ಕಾರ್ಯಕ್ರಮವನ್ನು, ಉಡುಪಿ ರೈಲ್ವೆ ನಿಲ್ದಾಣದಲ್ಲಿ ವೀಕ್ಷಿಸಿ ಮಾತನಾಡಿದರು.

ಸಂತ ಮೇರಿ ಮಹಾವಿದ್ಯಾಲಯ, ಶಿರ್ವದಲ್ಲಿ ವಿಶ್ವ ಯೋಗ ದಿನಾಚರಣೆ

Posted On: 21-06-2022 02:32PM

ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ "ವಿಶ್ವ ಯೋಗ ದಿನಾಚರಣೆ ಯನ್ನು" ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಆಯುಷ್ ಮಂತ್ರಾಲಯ ನೀಡಿದ ಯೋಗ ವಿಡಿಯೋ ಪ್ರಾಯೋಗಿಕ ಪ್ರದರ್ಶನವನ್ನು ಅನುಸರಿಸಿ ಆಚರಿಸಲಾಯಿತು.

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಅಧ್ಯಕ್ಷರಾಗಿ ಅನಿಲ್ ಲೋಬೊ ಆಯ್ಕೆ

Posted On: 21-06-2022 10:40AM

ಉದ್ಯಾವರ : ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ತನ್ನದೇ ಅದ ಛಾಪನ್ನು ಮೂಡಿಸಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ 2022-23ರ ಸಾಲಿನ ನೂತನ ಅಧ್ಯಕ್ಷರಾಗಿ ಅನಿಲ್ ಲೋಬೊ ಆಯ್ಕೆಯಾಗಿದ್ದಾರೆ.