Updated News From Kaup
ಬಂಟಕಲ್ಲು ಶ್ರೀಬಬ್ಬುಸ್ವಾಮಿ ನೂತನ ದೈವಸ್ಥಾನದ ಪುನರ್ ಪ್ರತಿಷ್ಠೆ-ಬ್ರಹ್ಮಕಲಶೋತ್ಸವ-ನೇಮೋತ್ಸವದ ಆಮಂತ್ರಣ ಬಿಡುಗಡೆ
Posted On: 28-03-2025 05:28PM
ಶಿರ್ವ : ಐತಿಹಾಸಿಕ ಹಿನ್ನೆಲೆ ಇರುವ ಬಂಟಕಲ್ಲು ಪೊದಮಲೆ ಪೆರಿಯಕಲದ ಪರಿಸರದಲ್ಲಿ ದೈವಸ್ಥಾನ ನಿರ್ಮಾಣ ಮಾಡುವಂತೆ ಪೂರ್ವಿಕರಿಗೆ ದೈವಗಳು ನೀಡಿದ ಪ್ರೇರಣೆಯಂತೆ ಬಂಟಕಲ್ಲು ಶ್ರೀದುರ್ಗಾಪರಮೆಶ್ವರೀ ದೇವಿ, ಬಂಟೇಶ್ವರನ ಸಾನಿಧ್ಯದ ಪಶ್ಚಿಮ ಭಾಗದಲ್ಲಿ ಶ್ರೀಬಬ್ಬುಸ್ವಾಮಿ ದೈವಸ್ಥಾನವನ್ನು ಶತಮಾನಗಳ ಹಿಂದೆಯೇ ಪ್ರತಿಷ್ಠಾಪಿಸಲಾಗಿತ್ತು. ಜೀರ್ಣಾವಸ್ಥೆಯಲ್ಲಿದ್ದ ಈ ಸಾನಿಧ್ಯದ ಬಗ್ಗೆ ಆಗಮಶಾಸ್ತ್ರ ತಂತ್ರಿಗಳಿಂದ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಗ್ರಾಮದ ಅಭಿವೃದ್ಧಿ ಹಾಗೂ ಭಕ್ತರ ಶ್ರೇಯೋಭಿವೃದ್ಧಿಗಾಗಿ ಸಾನಿಧ್ಯದ ಜೀರ್ಣೋದ್ದಾರಕ್ಕೆ, ಗ್ರಾಮಸ್ಥರು ಮತ್ತು ಹತ್ತು ಸಮಸ್ತರು ಸೇರಿಕೊಂಡು ಸಮಾಲೋಚನೆ ನಡೆಸಿ ಜೀರ್ಣೋದ್ಧಾರ ಸಮಿತಿಯನ್ನು ರಚಿಸಲಾಗಿ ವಾಸ್ತುತಜ್ಞರ ಮಾರ್ಗದರ್ಶನದಲ್ಲಿ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಳಿಸಲಾಗಿದೆ.
ಮುದರಂಗಡಿ : ಸ್ತ್ರೀಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಾಗಾರ
Posted On: 28-03-2025 04:41PM
ಮುದರಂಗಡಿ : ಜನನಿ ಮಹಾಸಂಘ ಮತ್ತು ಕಥೊಲಿಕ್ ಸ್ತ್ರೀ ಸಂಘಟನೆ ಮುದರಂಗಡಿ ವತಿಯಿಂದ ಸ್ಥಳೀಯ ಸ್ತ್ರೀಯರಿಗಾಗಿ ಸ್ತ್ರೀಯರ ಋತುಬಂಧ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಮಾಹಿತಿ ಕಾರ್ಯಗಾರವು ಸಂತ ಫ್ರಾನ್ಸಿಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಉಡುಪಿ: ಪಂಚ ರಂಗಕರ್ಮಿಗಳಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ ಪ್ರದಾನ
Posted On: 28-03-2025 03:30PM
ಉಡುಪಿ : ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ವತಿಯಿಂದ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ಆರನೇ ವರ್ಷದ 'ಮಲಬಾರ್ ವಿಶ್ವರಂಗ ಪುರಸ್ಕಾರ'ವನ್ನು ಐವರು ಹಿರಿಯ ರಂಗಕರ್ಮಿಗಳಿಗೆ ಬುಧವಾರ ಪ್ರದಾನ ಮಾಡಲಾಯಿತು.
ಪಡುಬಿದ್ರಿಯ ಏಳು ಮಾಗಣೆಯ ಪಂಚ ಸಾನಿಧ್ಯದಲ್ಲಿ ದೈವರಾಜ ಶ್ರೀ ಕೋಡ್ದಬ್ಬು ವರ್ಷಾವಧಿ ನೇಮೋತ್ಸವ
Posted On: 28-03-2025 03:16PM
ಪಡುಬಿದ್ರಿ : ಅತ್ಯಂತ ಪುರಾತನ ಪ್ರಾಚೀನ ಮತ್ತು ದೈವಿ ಶಕ್ತಿಯ ಬಹುದೊಡ್ಡ ಶಕ್ತಿ ಕೇಂದ್ರವಾದ ಪಡುಬಿದ್ರಿಯ ಏಳು ಮಾಗಣೆಯ ಪಂಚ ಕ್ಷೇತ್ರಗಳಾದ ಬೊಗ್ಗರಿಲಚ್ಚಿಲ್ ಇಲ್ಲಿ ಮಾರ್ಚ್ 27& ಮತ್ತು 28, ಪದ್ರದಬೆಟ್ಟುವಿನಲ್ಲಿ 28 ಮತ್ತು 29, ಸಂತೆಕಟ್ಟೆಯಲ್ಲಿ 29 ಮತ್ತು 30, ಕೊಂಕನಡ್ಪುವಿನಲ್ಲಿ ಮಾರ್ಚ್ 31 ಮತ್ತು ಎಪ್ರಿಲ್ 1 ಹಾಗೂ ಅಬ್ಬೇಡಿಯಲ್ಲಿ ಎಪ್ರಿಲ್ 1 ಮತ್ತು 2 ರಂದು ಶ್ರೀ ಕೋಡ್ದಬ್ಬು ದೈವದ ನೇಮೋತ್ಸವವು ಜರಗಲಿದೆ.
ಇನ್ನಂಜೆ ಮಹಿಳಾ ಮಂಡಳಿ ವತಿಯಿಂದ ಮಹಿಳಾ ದಿನಾಚರಣೆ
Posted On: 28-03-2025 03:06PM
ಕಾಪು : ಇನ್ನಂಜೆ ಮಹಿಳಾ ಮಂಡಳಿ ವತಿಯಿಂದ ಎಸ್ ವಿಎಚ್ ಶಾಲೆಯ ದಾಸ ಭವನದಲ್ಲಿ ನಡೆದ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಮಹಿಳಾ ಮಂಡಳಿಯ ಗೌರವ ಅಧ್ಯಕ್ಷರಾದ ಪುಷ್ಪ ರವೀಂದ್ರ ಶೆಟ್ಟಿಯವರು ಉದ್ಘಾಟಿಸಿದರು.
e ಮಣ್ಣು ಚಿತ್ರಕ್ಕೆ 2020ನೇ ಸಾಲಿನ ಕರ್ನಾಟಕ ರಾಜ್ಯ ಪ್ರಶಸ್ತಿ
Posted On: 28-03-2025 02:23PM
ಕಾಪು : ಶಿವಧ್ವಜ್ ಶೆಟ್ಟಿ ಕಥೆ -ಚಿತ್ರಕಥೆ- ನಿರ್ದೇಶನದ, ಈಶ್ವರಿದಾಸ್ ಶೆಟ್ಟಿ, ರಾಜೇಶ್ವರಿ ರೈ.ಪಿ ನಿರ್ಮಾಣದ e ಮಣ್ಣು ಲೋಕಲ್ ಟು ಗ್ಲೋಬಲ್ ಚಿತ್ರವು 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶೇಷ ಸಾಮಾಜಿಕ ಜಾಗೃತಿ ಚಿತ್ರ ಮತ್ತು ಉತ್ತಮ ಸಾಹಿತ್ಯಕ್ಕೆ ಪ್ರಶಸ್ತಿ ಪಡೆದುಕೊಂಡಿದೆ.
ಎಸ್.ಸಿ, ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಕೌಶಲ ತರಬೇತಿ :ಅರ್ಜಿ ಆಹ್ವಾನ
Posted On: 28-03-2025 02:10PM
ಕಾರ್ಕಳ : ಕಾರ್ಕಳದ ಕಾಬೆಟ್ಟುವಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿರುವ ಕೆ.ಜಿ.ಟಿ.ಟಿ.ಐ ವಿಸ್ತರಣಾ ಕೇಂದ್ರದಲ್ಲಿ ವಿವಿಧ ಅಲ್ಪಾವಧಿ ಕೌಶಲ ತರಬೇತಿಗಳಿಗೆ ಎಸ್.ಸಿ., ಎಸ್.ಟಿ. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾ.30 : ಆಚಾರ್ಯ ಮಧ್ವರ ಜನ್ಮಭೂಮಿ ಶ್ರೀಕ್ಷೇತ್ರ ಪಾಜಕದಿಂದ ಭಕ್ತಿ ರಥಯಾತ್ರೆ ಪ್ರಾರಂಭ
Posted On: 28-03-2025 01:53PM
ಕಾಪು : ಅಯೋಧ್ಯೆಯಲ್ಲಿ ಶ್ರೀರಾಮ ಭಕ್ತರಿಂದ ನಿರ್ಮಿಸಲ್ಪಟ್ಟ ನೂತನ ಮಂದಿರದಲ್ಲಿ ಶ್ರೀರಾಮಚಂದ್ರ ದೇವರನ್ನು ಪ್ರತಿಷ್ಠಾಪಿಸಿದ ನಂತರ, ನಮ್ಮಲ್ಲಿ ನಿರಂತರ ರಾಮದೇವರ ಪ್ರಜ್ಞೆ ಜಾಗೃತಿಯಲ್ಲಿರಬೇಕೆಂಬ ಸದುದ್ದೇಶದಿಂದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಸಮಿತಿಯವರ ಯೋಚನೆಯಂತೆ ಅದರ ಟ್ರಸ್ಟಿಗಳೂ ಆಗಿರುವ ಉಡುಪಿ ಶ್ರೀಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಪ್ರತಿಯೊಬ್ಬರ ಮನೆಯಲ್ಲೂ ನಿರಂತರ ಶ್ರೀರಾಮ ಜಪ ನಡೆಯಬೇಕೆಂಬ ದೃಷ್ಠಿಯಿಂದ ರಾಮತಾರಕ ಮಂತ್ರದ ಮಹತ್ವವನ್ನು ತಿಳಿಸಲು ಹಾಗೂ ಭಕ್ತಿ ಸಿದ್ಧಾಂತವನ್ನು ಪ್ರಸಾರ ಮಾಡಲು "ಭಕ್ತಿ ರಥಯಾತ್ರೆ"ಯನ್ನು ಆಚಾರ್ಯ ಮಧ್ವರ ಅವತಾರ ಭೂಮಿ ಶ್ರೀಕ್ಷೇತ್ರ ಪಾಜಕದಿಂದ ಮಾ.30, ರವಿವಾರ ಪ್ರಾರಂಭಿಸುವುದಾಗಿ ಸಂಕಲ್ಪಿಸಿದ್ದಾರೆ ಎಂದು ಪಾಜಕ ಭಕ್ತಿ ರಥಯಾತ್ರೆ ಸಮಿತಿಯ ಸದಸ್ಯರಾದ ಪಡುಬೆಳ್ಳೆ ಮಧ್ವರಾಜ ಭಟ್ ಗುರುವಾರ ಕಾಪು ಪ್ರೆಸ್ ಕ್ಲಬ್ನಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಟೊ ರಿಕ್ಷಾ ಚಾಲಕರ, ಮಾಲಕರ ಸಂಘ ಬಂಟಕಲ್ಲು : 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
Posted On: 28-03-2025 01:48PM
ಬಂಟಕಲ್ಲು : ಆಟೊ ರಿಕ್ಷಾ ಚಾಲಕರ, ಮಾಲಕರ ಸಂಘ ಬಂಟಕಲ್ಲು : 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಸತತ 5ನೇ ಬಾರಿಗೆ ಅಧ್ಯಕ್ಷರಾಗಿ ಮಂಜುನಾಥ್ ಪೂಜಾರಿ ಆಯ್ಕೆಯಾದರು.
ಕಾಪು ಶ್ರೀ ಹಳೇ ಮಾರಿಯಮ್ಮ ದೇವಳ : ಸಮಗ್ರ ಜೀರ್ಣೋದ್ಧಾರ ಮಹಾ ಸಂಕಲ್ಪ - ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ
Posted On: 26-03-2025 04:13PM
ಕಾಪು : ಕಾಪು ಶ್ರೀ ಹಳೇ ಮಾರಿಯಮ್ಮ ದೇವಳದ ಸಮಗ್ರ ಜೀರ್ಣೋದ್ಧಾರ ಮಹಾಸಂಕಲ್ಪ- ಮೂಲನಿಧಿ ಸಮರ್ಪಣಾ ಮಹಾ ಅಭಿಯಾನ ಕಾರ್ಯಕ್ರಮಕ್ಕೆ ಮಂಗಳವಾರ ದೇಗುಲದ ವಠಾರದಲ್ಲಿ ಚಾಲನೆ ನೀಡಲಾಯಿತು. ಸನ್ನಿಧಾನದ ಜೀರ್ಣೋದ್ಧಾರ ಮತ್ತು ಸುತ್ತುಪೌಳಿ ಪುನರ್ ನಿರ್ಮಾಣ ಉದ್ದೇಶದೊಂದಿಗೆ ಶ್ರೀ ಕಾಶೀ ಮಠಾಧಿಶರಾದ ಶ್ರೀ ಸಂಯ್ಯಮೀಂದ್ರತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ 2023ರಲ್ಲಿ ಮುಷ್ಟಿಕಾಣಿಕೆ ಸಮರ್ಪಣೆ ಮೂಲಕ ಚಾಲನೆ ನೀಡಲಾಗಿತ್ತು. ಈಗ ಕಾಪು ಪೇಟೆಯ ಹತ್ತು ಸಮಸ್ತರು ಮತ್ತು ಮಾರಿಯಮ್ಮ ದೇವರ ಸಮಸ್ತ ಭಕ್ತರ ಅಪೇಕ್ಷೆಯಂತೆ ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಪೂರ್ವಭಾವಿಯಾಗಿ ಸಮಸ್ತ ಭಕ್ತರಿಗೆ ಕಾಣಿಕೆ ಡಬ್ಬಿ ವಿತರಣೆ, ಜೀರ್ಣೋದ್ದಾರ ಲಾಂಛನ ಅನಾವರಣ ಕಾರ್ಯಕ್ರಮ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
